Author: kannadanewsnow05

ಕಲಬುರ್ಗಿ : ಕೋವಿಡ್ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಕೋವಿಡ್ ಕಾಲದಲ್ಲಿ ಹಗರಣ ನಡೆದಿತ್ತು. ಆ ಪ್ರಕರಣ ಸಂಬಂಧ ಈಗ ಎಫ್ಐಆರ್ ದಾಖಲಾಗಿದೆ. ಎಸ್ಐಟಿ ರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಿರ್ಧರಿಸುತ್ತಾರೆ. ಈ ಒಂದು ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಇದ್ದರೂ ಕೂಡ ನಾವು ಯಾರನ್ನು ಬಿಡುವುದಿಲ್ಲ.ತನಿಖೆ ಮಾಡಲು ಪೊಲೀಸರಿಗೆ ಸಂಪೂರ್ಣವಾಗಿ ಸ್ವಾತಂತ್ರ್ಯ ನೀಡಿದ್ದೇವೆ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ತನಿಖೆ ಮಾಡುತ್ತಿದ್ದ ವೇಳೆ ನಾನು ಹೆಸರು ಹೇಳಿದರೆ ತಪ್ಪಾಗುತ್ತದೆ. ಅವ್ಯವಹಾರ ಆಗಿದೆ ಎಂದು ನ್ಯಾ. ಕುನ್ಹಾ ವರದಿಯಲ್ಲಿ ಉಲ್ಲೇಖ ಆಗಿದೆ ಅದರ ಆಧಾರದ ಮೇಲೆ ಎಫ್ಐಆರ್ ದಾಖಲಾಗುತ್ತದೆ. ಇದಕ್ಕೆ ಬಿಜೆಪಿಯವರು ಯಾಕೆ ಭಯ ಪಡಬೇಕು? ಯಾರನ್ನು ಭಯ ಬೀಳಿಸುವುದಕ್ಕೆ ನಾವು ತನಿಖೆ ಮಾಡಿಸುತ್ತಿಲ್ಲ. ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಬೀದಿಯಲ್ಲಿ ಹೆಣವಾಗಿದ್ದಾರೆ ಯಾರ ವಿರುದ್ಧವೂ ಸೇಡಿನ ರಾಜಕಾರಣ ಮಾಡುತ್ತಿಲ್ಲ. ರಾಜ್ಯದ ಜನರಿಗೆ ಮಾತು ಕೊಟ್ಟಂತೆ ನಾವು ತನಿಖೆ ಮಾಡಿಸುತ್ತೇವೆ ಎಂದು ಹೇಳಿಕೆ…

Read More

ಹೈದ್ರಾಬಾದ್ : ಹೈದರಾಬಾದ್ ಪುಷ್ಪ 2 ಸಿನಿಮಾ ವೀಕ್ಷಣೆಯ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಇಂದು ಜೈಲಿನಿಂದ ಬಿಡುಗಡೆಯಾಗಿ ತಮ್ಮ ನಿವಾಸಕ್ಕೆ ತೆರಳಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಮೃತ ರೇವತಿ ಅವರ ಕುಟುಂಬಕ್ಕೆ ನನ್ನಿಂದ ಆಗುವ ಸಹಾಯ ಮಾಡುತ್ತೇನೆ.ಈ ಒಂದು ಘಟನೆ ನಡೆಯಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ 2 ಸಿನಿಮಾ ವೀಕ್ಷಣೆ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ರೇವತಿ ಎನ್ನುವ ಮಹಿಳೆ ಸಾವನ್ನಪ್ಪಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಯ ಬಳಿಕ ಅರೆಸ್ಟ್ ಮಾಡಿದ್ದರು. ಬಳಿಕ ನಾಂಪಲ್ಲಿ ಕೋರ್ಟಿಗೆ ಹಾಜರು ಪಡಿಸಿದ ನಂತರ ವಿಚಾರಣೆಯ ನಂತರ ಕೋರ್ಟ್ 14 ದಿನ ನ್ಯಾಯಾಂಗ ಬಂದನ ವಿಧಿಸಿ ಆದೇಶ ಹೊರಡಿಸಿತ್ತು. ಈ ವೇಳೆ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟಿಗೆ ನನ್ನ ವಿರುದ್ಧ ದಾಖಲಾದ ಎಫ್ ಐ ಆರ್…

Read More

ಬಳ್ಳಾರಿ : ಕಳೆದ ತಿಂಗಳಲ್ಲಿ ಬಳ್ಳಾರಿಯಲಿ ಬಾಣಂತಿಯರ ಸೌರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಪರಿಶೀಲನಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಾಣಂತಿಯರ ಸಾವಿಗೆ ಐವಿ ದ್ರಾವಣ ಅಷ್ಟೇ ಅಲ್ಲ ಶಸ್ತ್ರಚಿಕಿತ್ಸೆಯ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ಜಿಲ್ಲಾಸ್ಪತ್ರೆಗೆ ನಾಗಲಕ್ಷ್ಮಿ ಚೌಧರಿ ಅವರು ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್​​, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು. ಶಸ್ತ್ರಚಿಕಿತ್ಸೆಯ ಬಳಿಕ ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಸಾಧ್ಯತೆ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಶಸ್ತ್ರಚಿಕಿತ್ಸೆ ಕೊಠಡಿ ಹಾಗೂ ಲ್ಯಾಬ್ ಗಳನ್ನು ಎಲ್ಲವನ್ನು ಪರಿಶೀಲನೆ…

Read More

ಆಯುಷ್ ಸಚಿವಾಲಯದ(Ministry of Ayush)ಅಡಿಯಲ್ಲಿ “ದೇಶ್ ಕಾ ಪ್ರಕೃತಿ ಪರೀಕ್ಷಣ್ ” ಎಂಬ ಅಭಿಯಾನವನ್ನು ರೂಪಿಸಿದ್ದು,ಇದರಿಂದ ಪ್ರತಿಯೊಬ್ಬ ವ್ಯಕ್ತಿಗೂ ಆಯುರ್ವೇದ ಆಧಾರಿತ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಪ್ರೇರಣೆಯಾಗಲಿದೆ.ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ಮತ್ತು ಆಯುಷ್ ರಾಜ್ಯ ಸಚಿವರಾದ (Union minister of state, IC) ಶ್ರೀ ಪ್ರತಾಪ್ ರಾವ್ ಜಾಧವ್ ರವರ ಮಾರ್ಗದರ್ಶನದೊಂದಿಗೆ ಈ ರಾಷ್ಟ್ರೀಯ ಅಭಿಯಾನವನ್ನು ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ ( NCISM) ನಿರ್ವಹಿಸುತ್ತಿದೆ. ಪ್ರಕೃತಿ ಎಂದರೇನು? ಪ್ರಕೃತಿ: ಶರೀರ ಸ್ವಭಾವಂ || (ಅಷ್ಟಾಂಗ ಹೃದಯ) ಪ್ರಕೃತಿ ಮಿತಿ ಸ್ವಭಾವಂ || (ಚರಕ). ಪ್ರಕೃತಿ ಎಂದರೆ ಶರೀರದ ಸ್ವಭಾವ.ಹೀಗಾಗಿ ಮನುಷ್ಯನ ಸ್ವಭಾವ,ಸ್ವರೂಪ ಮತ್ತು ಗುಣಗಳು ಒಬ್ಬರಿಗಿಂತ ಒಬ್ಬರಲ್ಲಿ ವಿಭಿನ್ನವಾಗಿರುತ್ತದೆ.ಆಯುರ್ವೇದದಲ್ಲಿ ವಾತ, ಪಿತ್ತ ಮತ್ತು ಕಫ ಎಂಬ ತ್ರಿದೋಷಗಳನ್ನು ತಿಳಿಸಿದ್ದು ಹುಟ್ಟಿನಿಂದ ಮರಣದವರೆಗೆ ಪ್ರಾಕೃತಾವಸ್ಥೆಯಲ್ಲಿನ ಮತ್ತು ಬದಲಾಯಿಸಲಾಗದ ದೋಷಗಳ (unchangeable dosic dominance)ಪ್ರಾಧಾನ್ಯತೆಯೇ ಪ್ರಕೃತಿ. ಪ್ರಕೃತಿಯ ರಚನೆ ಮತ್ತು ನಿರ್ಣಯ. ಪ್ರಕೃತಿಯು ಗರ್ಭಧಾರಣೆಯ…

Read More

ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಲಕರಣೆಗಳ ಖರೀದಿಯಲ್ಲಿ ಸುಮಾರು 167 ಕೋಟಿ ರು. ಅವ್ಯವಹಾರ ನಡೆದಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದು ಈ ಅಕ್ರಮ ಸಂಬಂಧ ದಾಖಲಾದ ಮೊದಲ ಎಫ್‌ಐಆರ್ ಆಗಿದೆ ಎನ್ನಲಾಗಿದೆ. ಹೌದು ಸದ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ವಕ್ಫ್‌, ಪಂಚಮಸಾಲಿ ಮೀಸಲಾತಿ ವಿಚಾರಗಳು ಆಡಳಿತ-ವಿರೋಧ ಪಕ್ಷಗಳ ನಡುವೆ ಗದ್ದಲ ಗಲಾಟೆ ಕೋಲಾಹಲದ ನಡುವೆ ಕೋವಿಡ್ ಸಂದರ್ಭದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಇದೀಗ ಮುನ್ನೆಲೆಗೆ ಬಂದಿದೆ. ಈ ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಮೊದಲ fir ದಾಖಲಾಗಿದೆ. ಕೋವಿಡ್-19 ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮುಖಾಂತರ ಕೋವಿಡ್ ನಿವಾರಣೆಗಾಗಿ ಅತ್ಯವಶ್ಯವಿದ್ದ ಎನ್ 95 ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಾಮಗ್ರಿಗಳ ಖರೀದಿ ವೇಳೆ ಸರ್ಕಾರ ನೇಮಿಸಿದ್ದ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಹಾಗೂ ಇತರರು ಸೇರಿ ಕೊಂಡು ಕೆಟಿಟಿಪಿ ಕಾನೂನು…

Read More

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸುಖಧರೆ ಎಂಬ ಗ್ರಾಮದಲ್ಲಿ ಕಬ್ಬಡ್ಡಿ ಆಟಗಾರ  ಪ್ರೀತಮ್ ಶೆಟ್ಟಿ (24) ಕಬ್ಬಡ್ಡಿ ಆಡುತ್ತಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಸುಖಧರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪ್ರೀತಮ್ ಶೆಟ್ಟಿ ತಡರಾತ್ರಿ ಸಾವನ್ನಪ್ಪಿದ್ದಾರೆ. ಪ್ರೀತಂ ಶೆಟ್ಟಿ ಉಡುಪಿ ಜಿಲ್ಲೆಯ ಹೆಬ್ರಿ ಮೂಲದ ನಿವಾಸಿ ಎಂದು ತಿಳಿದುಬಂದಿದೆ. ನಿನ್ನೆ ಕಬಡ್ಡಿ ಪಂದ್ಯದಲ್ಲಿ ಭಾಗಿಯಾಗಿದ್ದ ಪ್ರೀತಂ ಶೆಟ್ಟಿ, ಬಳಿಕ  ಕಬ್ಬಡ್ಡಿ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ನಿನ್ನೆ ಹನುಮ ಜಯಂತಿ ಹಿನ್ನೆಲೆಯಲ್ಲಿ ನಿನ್ನೆ ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಕಬಡ್ಡಿ ಪಂದ್ಯಾವಳಿಯಲ್ಲಿ ಭಗೀಯದ ಮುಗಿದ ಬಳಿಕ ಪ್ರೀತಂ ಶೆಟ್ಟಿ ಕಬ್ಬಡ್ಡಿ ಆಡುತ್ತಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಾಗಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ನಾಗಮಂಗಲದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಹೌದು ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಳಿಮಾವು ಠಾಣೆಯ ಹೆಡ್ ಕಾನ್ಸ್ಟೇಬಲ್ ಅಲ್ಲಿ ತಿಪ್ಪಣ್ಣ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಹಾಗೂ ಮಾವನ ಕಿರುಕುಳದ ಬಗ್ಗೆ ಡೆತ್ ನೋಟ್ ಅಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದರು.ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು, ಕಲಹ ಉಂಟಾಗಿದೆ. ಅಲ್ಲದೆ ಪತ್ನಿಯ ಅಪ್ಪ…

Read More

ತುಮಕೂರು : ಸೋಡಿಯಂ ಬಳಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್‌ ಖ್ಯಾತಿಯ ಡ್ರೋನ್‌ ಪ್ರತಾ ಪ್‌ನನ್ನು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಗುರುವಾರ ಬಂಧಿಸಿದ್ದರು. ಬಳಿಕ ನ್ಯಾಯಾಲಯದ ಹಾಜರುಪಡಿಸಿ, ವಿಚಾರಣೆ ನಡೆಸಿದ ಬಳಿಕ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿತು. ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಜಿಲ್ಲೆಯ ಮಧುಗಿರಿ ತಾಲೂಕು ಜನಕಲೋಟಿ ಗ್ರಾಮದ ಬಳಿ ನೀರಿಗೆ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್‌, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ವಿಚಾರವಾಗಿ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮತ್ತಷ್ಟು ಸ್ಪೋಟಕವಾದ ಮಾಹಿತಿಯನ್ನು ಪ್ರತಾಪ್ ಬಿಚ್ಚಿಟ್ಟಿದ್ದಾರೆ. ಇದಕ್ಕೂ ಮೊದಲು 2 ಬಾರಿ ಸ್ಪೋಟ! ವಿಚಾರಣೆ ವೇಳೆ ಡ್ರೋನ್​ ಪ್ರತಾಪ್​ ಹಲವು ಸಂಗತಿಗಳನ್ನು ಬಾಯಿಬಿಟ್ಟಿದ್ದಾರೆ. ​ಡ್ರೋನ್ ಪ್ರತಾಪ್ ವಿರುದ್ಧ ನೀರಿಗೆ ಸೋಡಿಯಂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮುನ್ನ ಪ್ರತಾಪ್‌ ಈ ರೀತಿಯ ಹಲವು ಪ್ರಯೋಗಗಳನ್ನು ಮಾಡಿದ್ದರು ಎನ್ನಲಾಗಿದೆ. ಎರಡು ಬಾರಿ ಪ್ರಯೋಗ ಮಾಡಿ, ಯೂg ಟ್ಯೂಬ್…

Read More

ಕಲಬುರ್ಗಿ : ಸಿಗರೇಟ್ ಪ್ಯಾಕೆಟ್ ಕಳ್ಳತನ ಮಾಡಿದ ಆರೋಪದಲ್ಲಿ ಖಾಸಗಿ ಬ್ಲಡ್ ಬ್ಯಾಂಕ್ ಮಾಲೀಕನೊಬ್ಬ ತನ್ನ ಬಳಿ ಕೆಲಸಕ್ಕಿದ್ದ  ಯುವಕನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಎಂ.ಬಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಈ ಒಂದು ಕೊಲೆ ನಡೆದಿದ್ದು, ಪ್ರಗತಿ ಕಾಲೋನಿಯ ಶಶಿಕಾಂತ್ ನಾಟಿಕಾರ್ (25) ಎಂದು ತಿಳಿದುಬಂದಿದೆ. ಮೃತ ಶಶಿಕಾಂತ್, ಚಂದ್ರಶೇಖರ ಪಾಟೀಲ್ ಬಳಿ ಕೆಲಸ ಮಾಡುತ್ತಿದ್ದ ಬ್ಲಡ್ ಬ್ಯಾಂಕ್ ನಲ್ಲಿ 1.40 ಲಕ್ಷ ರೂ. ಮೌಲ್ಯದ ಸಿಗರೇಟ್ ಬಾಕ್ಸ್ ಕಳವಾಗಿತ್ತು. ತನ್ನ ಬಳಿ ಕೆಲಸಕ್ಕಿದ್ದ ಶಶಿಕಾಂತ್, ಆಕಾಶ್ ಸಿಗರೇಟ್ ಬಾಕ್ಸ್ ಕದ್ದಿದ್ದಾರೆ ಎಂದು ಆರೋಪಿಸಿ ಮಾಲಕ ಚಂದ್ರಶೇಖರ್ ಅಷ್ಟೂ ಹಣವನ್ನು ಕೊಡುವಂತೆ ಅವರನ್ನು ಕೂಡಿ ಹಾಕಿ ತನ್ನ ಸಹಚರರಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಶಶಿಕಾಂತ್ ಪೋಷಕರಿಗೆ ಕರೆಸಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹಲ್ಲೆಗೆ ಒಳಗಾದಂತಹ ಶಶಿಕಾಂತ್ ಕೂಡಲೇ ಕುಸಿದು ಬಿದ್ದಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ…

Read More

ಮಂಡ್ಯ :- ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಷ್ (30) ಎಂಬುವವರು ಹೆಬ್ಬೆರಳು ಏತ ನೀರಾವರಿ ಬಳಿ ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನೇಷ್ ಶಿಂಷಾ ಏತ ನೀರಾವರಿ ಯೋಜನೆಯ ಬಾಪೂಜಿ ಕನ್ಸ್ಟ್ರಕ್ಷನ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್ ಮಂಡ್ಯ

Read More