Subscribe to Updates
Get the latest creative news from FooBar about art, design and business.
Author: kannadanewsnow05
ಹೈದ್ರಾಬಾದ್ : ಹೈದರಾಬಾದ್ ನ ಸಂಧ್ಯಾ ಥೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಗೆ 14 ದಿನಗಳ ಕಾಲ ನ್ಯಾಯಬಂಧನ ವಿಧಿಸಿ ನಾಂಪಲ್ಲಿ ಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದರು ಈ ಸಂಬಂಧ ನಟ ಅಲ್ಲು ಅರ್ಜುನ್, ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ತುರ್ತು ವಿಚಾರಣೆ ನಡೆಸುವಂತೆ ಅಲ್ಲು ಅರ್ಜುನ್ ಮನವಿ ಮಾಡಿದ್ದರು ವಿಚಾರಣೆ ನಡೆಸಿದ ಬಳಿಕ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಡಿಸೆಂಬರ್ 4 ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರು ಅರೆಸ್ಟ್ ಆಗಿದ್ದರು…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗದ ಸೇಂಟ್ ಜಾನ್ ವುಡ್ ಮತ್ತು ಆಸ್ಟಿನ್ ಟೌನ್ ಉಪಕೇಂದ್ರಗಳಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 17.12.2024 (ಮಂಗಳವಾರ) ಮತ್ತು 18.12.2024 (ಬುಧವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸೇಂಟ್ ಜಾನ್ ವುಡ್ ಅಪಾರ್ಟಮೆಂಟ್ & ಆಸ್ಪತ್ರೆ, ತಾವರೆಕೆರೆ, ಅಕ್ಸೆಂಚರ್, ಒರೆಕಲ್, ಕ್ರೈಸ್ಟ್ ಕಾಲೇಜು, ಬಿಟಿಎಮ್ ಲೇಔಟ್, ಮೆಜೆಸ್ಟಿಕ್ ಅಪಾರ್ಟಮೆಂಟ್, ಎಕ್ಷಾ ಆಕ್ಸಿಸ್ ಭವನ, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್, ಬಿಜಿ ರೋಡ್, ವಿಕ್ಟೋರಿಯಾ ಲೇಔಟ್, ಪಾಮ್ ಗ್ರೂವ್ ರೋಡ್, ಬಾಲಾಜಿ ಥೀಯೆಟರ್, ಅಗ್ರಂ ವಿವೆಕಾನಗರ, ಸಣ್ಣೆನಹಳ್ಳಿ, ವೋನ್ನರ್ ಪೇಟೆ, ಆಂಜನೇಯ ಟೆಂಪಲ್ ಸ್ಟ್ರೀಟ್, ಕೆಎಸ್ ಆರ್ ಪಿ ಕ್ವಾಟ್ರಸ್, ಲಿಂಡನ್, ಯಲಗುಂಟೆ ಪಾಳ್ಯಮ್, ಏರ್ ಫೋರ್ಸ್, ಲೈಫ್ ಸ್ಟೈಲ್, ಕ್ಯಾಂಬಲ್ ರೋಡ್ ಜಂಕ್ಷನ್, ರಿಚ್ಮಂಡ್ ರೋಡ್, ರುದ್ರಪ್ಪ ಗಾರ್ಡನ್, ಎಮ್ ಜಿ ಗಾರ್ಡನ್, ಆಸ್ಟಿನ್ ಟೌನ್, ನೀಲಸಂದ್ರ, ಬಜಾರ್ ಸ್ಟ್ರೀಟ್,…
ಬೆಂಗಳೂರು : ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆಯ ಗೊಂದಲವನ್ನು ಕಾಂಗ್ರೆಸ್ ಸರ್ಕಾರ ಬಗೆಹರಿಸಬೇಕು. ರೈತರಿಗೆ ಹಾಗೂ ಹಿಂದೂಗಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಲ್ಲಿ ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಕುರಿತು ಅವರು ಮಾತನಾಡಿದರು. ವಕ್ಫ್ ಮಂಡಳಿಯ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭೂಮಿ, ದೇವಸ್ಥಾನ, ಸ್ಮಶಾನವನ್ನು ಕಬಳಿಕೆ ಮಾಡುತ್ತಿದೆ. ಹಿಂದೂ-ಮುಸ್ಲಿಂ ಸಂಬಂಧದಲ್ಲಿ ಒಡಕು ತರಲಾಗುತ್ತಿದೆ. ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್ ಅನುರಿಸುತ್ತಿದೆ. ಈ ನಡೆಯನ್ನು ಬಿಟ್ಟು, ರೈತರ ಪಹಣಿಯಲ್ಲಿ ಉಲ್ಲೇಖಿಸಿರುವ ವಕ್ಫ್ ಹೆಸರನ್ನು ತೆಗೆದುಹಾಕಬೇಕು. ಹಿಂದೆ ಮಾಡಿದ ಅಧಿಸೂಚನೆಯನ್ನು ಹಿಂಪಡೆಯಬೇಕು. ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ಕಾನೂನು ತಿದ್ದುಪಡಿಗೆ ಎಲ್ಲರೂ ಬೆಂಬಲ ಸೂಚಿಸಿ ಹಿಂದೂಗಳು ಹಾಗೂ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರ ಯಾರದ್ದೇ ಆದರೂ ಜಿಗಣೆಯಂತೆ ರೈತರ ರಕ್ತ ಹೀರುತ್ತಾರೆ ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದರು. ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಇದೇ ರೀತಿಯಾಗಿದೆ. ರಾಜ್ಯದಲ್ಲಿ ಲವ್ ಜಿಹಾದ್ನಂತೆಯೇ ʼಲ್ಯಾಂಡ್…
ಬೆಳಗಾವಿ: ದೇವದಾಸಿಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸರಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನ ಪರಿಷತ್ ಕಲಾಪದಲ್ಲಿ ಹೇಮಲತಾ ನಾಯಕ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇವದಾಸಿ ಮಹಿಳೆಯರು ಗೌರವಯುತ ಜೀವನ ನಡೆಸುವ ವಾತಾವರಣ ಸೃಷ್ಟಿ ಮಾಡಲಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡಲೆಂದೇ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯನ್ನು ಅವರಿಗೂ ತಲುಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಎಲ್ಲಾ ಅರ್ಹ ಫಲಾನುಭವಿಗಳಿಗೆ ಮಾಸಾಶನ ನೀಡಲಾಗುತ್ತಿದ್ದು, ಮಾಜಿ ದೇವದಾಸಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಪ್ರಸ್ತುತ 2,653 ದೇವದಾಸಿಯರಲ್ಲಿ 2550 ಮಹಿಳೆಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ ಎಂದರು.45 ವರ್ಷ ಮೇಲ್ಪಟ್ಟ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ…
ಬೆಳಗಾವಿ : ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ೨೦೨೪-೨೫ನೇ ಸಾಲಿನ ಆರ್ ಐಡಿಎಫ್ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದ್ದು, ೧೪೪.೭೫ ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹ ಮತ್ತಿತರ ಸೌಕರ್ಯ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಆದರೆ ಬಹುತೇಕ ಸಚಿವರು ಮತ್ತು ಶಾಸಕರಿಂದ ಶೀತಲಗೃಹ ನಿರ್ಮಾಣದ ಕೋರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ೩೫೪.೭೫ ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪುನಃ ಕೋರಿಕೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.…
ಬೆಳಗಾವಿ : ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮ ಉದ್ದಿಮೆಗಳು ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ನಡೆದ ವಿಶೇಷ ಚರ್ಚೆ ಸಂದರ್ಭದಲ್ಲಿ ಉತ್ತರಿಸಿದರು.ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆ , ಹೊಸ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ 432 ನವೋದ್ಯಮ ಉದ್ದಿಮೆಗಳ ಆರಂಭಕ್ಕೆ ನೋಂದಣಿ ಮಾಡಿಕೊಂಡಿದ್ದು ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಕೂಡಾ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ ಎಂದರು. ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಹಲವು ಐತಿಹಾಸಿಕ ಪ್ರಸಿದ್ಧ ದೇವಾಲಯಗಳಿದ್ದು ಇಲ್ಲಿ ಟೆಂಪಲ್ ಟೂರಿಸಮ್ ಅಭಿವೃದ್ಧಿ ಪಡಿಸಬಹುದು ಅಲ್ಲದೆ ಹೆಚ್ಚಿನ ಸಂಖ್ಯೆಯ ಅಣೆಕಟ್ಟುಗಳಿದ್ದು ಅವುಗಳ…
ಬೆಳಗಾವಿ : ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್.ಓ.ಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್.ಓ.ಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು. ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನಗೆ ಅವರು ಉತ್ತರಿಸಿದರು. ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರದಲ್ಲಿ 1976ರಲ್ಲಿ 13.62 ಎಂ.ಎಲ್.ಡಿ, 1996ರಲ್ಲಿ 13.38 ಎಂ.ಎಲ್.ಡಿ ಹಾಗೂ 2009 ರಲ್ಲಿ 57 ಎಂ.ಎಲ್.ಡಿ ಸೇರಿ ಒಟ್ಟು 84 ಎಂ.ಎಲ್.ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 1976 ಮತ್ತು 1996ರಲ್ಲಿ…
ಬೆಳಗಾವಿ : ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸರ್ಕಾರದ ವತಿಯಿಂದ ರೂ.50 ಕೋಟಿ ಷೇರು ಬಂಡವಾಳ ಒದಗಿಸುವ ಯಾವುದೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಸ್ಪಷ್ಟ ಪಡಿಸಿದರು. ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮೇಲಿಂತೆ ಸಚಿವರು ಉತ್ತರಿಸಿದರು.ರಾಜ್ಯ ಸರ್ಕಾರ ಸರ್ಕಾರಿ ಸ್ವಾಮ್ಯದ ದಿ ಮೈಸೂರು ಷುಗರ್ ಕಂಪನಿ ಹೊರತು ಪಡಿಸಿ ಯಾವುದೇ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರದಿಂದ ಷೇರು ಬಂಡವಾಳ ಅಥವಾ ಅನುದಾನ ನೀಡುವ ನೀತಿ ಸರ್ಕಾರದ ಮುಂದೆ ಇರುವುದಿಲ್ಲ. ಮಲಪ್ರಭಾ ಸಕ್ಕರೆ ಕಾರ್ಖಾನೆಯು ಚುನಾಯಿತ ಆಡಳಿತ ಮಂಡಳಿಯನ್ನು ಹೊಂದಿದೆ. ಕಾರ್ಖಾನೆಯ ಕಾರ್ಯನಿರ್ವಹಣೆಗೆ ಅಗತ್ಯವಾದ ಸಂಪನ್ಮೂಲ ಕ್ರೋಢಿಕರಿಸುವುದು ಆಡಳಿತ ಮಂಡಳಿ ಜವಬ್ದಾರಿಯಾಗಿದೆ. ಆರ್ಥಿಕ ಸಂಕಷ್ಟದಿAದ ಹಾಗೂ ಇತರೆ ಆಡಳಿತಾತ್ಮಕ ಕಾರಣಗಳಿಂದ ಸ್ಥಗಿತಗೊಂಡಿರುವ ಸಹಕಾರಿ…
ಬೆಳಗಾವಿ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು. ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೆ 700…
ಬೆಳಗಾವಿ : ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ.ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು. ಗ್ರಾಮ ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ…












