Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಪ್ರಯತ್ನ ವಿಫಲ ಆಗಬಹುದು ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ. ಎಲ್ಲರ ದುಃಖ ದೂರ ಮಾಡುವಂತೆ ದೇವಿಯ ಬಳಿ ಪ್ರಾರ್ಥಿಸಿದ್ದೇನೆ. ಈ ಜಾಗವನ್ನು ಅಭಿವೃದ್ಧಿ ಮಾಡಬೇಕೆಂದು ದಿಟ್ಟ ಪಣ ತೊಟ್ಟಿದ್ದೇವೆ. ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಲಿದ್ದೇವೆ.ಇಲ್ಲಿ 200 ರೂಂಗಗಳನ್ನು ಕಟ್ಟಿಕೊಡುವ ವಾಗ್ದಾನ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಇದು ಭಾಗ್ಯ ಇದು ಭಾಗ್ಯ ಎಂದು ಪುರಂದರ ದಾಸರ ಹೇಳಿಕೆಯನ್ನು ಪ್ರಸ್ತಾಪಿಸಿ ನಾವು ಇಲ್ಲಿಗೆ ಬಂದಿದ್ದೆ ಭಾಗ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಭಕ್ತನಿಗೂ ದೇವರಿಗೂ ವ್ಯವಹಾರ ನಡೆಯುವ ಸ್ಥಳ ಅದು ದೇವಸ್ಥಾನ ಮಾತ್ರ. ನನಗೆ ಕಾನೂನು ಸಚಿವ ಎಚ್ ಕೆ ಪಾಟೀಲ್ ಕರೆ ಮಾಡಿ ಕರೆದರು.ಪ್ರಾಧಿಕಾರ ಮಾಡಬೇಕು ಅಂತ ಯಾರು ಕೇಳಿರಲಿಲ್ಲ. ಇದಕ್ಕೆ ಒಂದು ಸ್ವರೂಪ ಕೊಡಬೇಕು…
ಬೆಳಗಾವಿ : ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು, ನಾನು ರಾಜೀನಾಮೆ ನೀಡುತ್ತೇನೆ ಹೊಸ ಸಿಎಂ ಬರುತ್ತಾರೆ ಎಂದು ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ಮುಗಿದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದರು ನಾನು ರಾಜೀನಾಮೆ ಕೊಟ್ನಾ? ಅವರ ತಂದೆ ಯಡಿಯೂರಪ್ಪ ಪೋಕ್ಸೋ ಪ್ರಕರಣದಲ್ಲಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ನನಗೆ ರಾಜೀನಾಮೆ ಕೇಳೋಕೆ ಬಿವೈ ವಿಜಯೇಂದ್ರ ಗೆ ಯಾವ ನೈತಿಕತೆ ಇದೆ ಎಂದು ಕಿಡಿ ಕಾರಿದರು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನ್ಯಾಯಯುತ ತೆರಿಗೆ ಪಾಲು ವಿತರಣೆ ಪಾಲಿಸುತ್ತಿಲ್ಲ. ಈ ಬಗ್ಗೆ ರಾಜ್ಯಕ್ಕೆ ಅನ್ಯಾಯ ಆದರೂ ಬಿಜೆಪಿ ಸಂಸದರು…
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಸಿಎಂ ಸಿದ್ದರಾಮಯ್ಯ ಭಯೋತ್ಪಾದಕ ಎಂದು ಕರೆದಿದ್ದರು. ಈ ಒಂದು ಹೇಳಿಕೆಗೆ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹೋಗುವ ಕನಸು ಬಿದ್ದಿದೆ. ಹಾಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರು ಚಿಕಿತ್ಸೆ ಪಡೆಯುವುದು ಉತ್ತಮ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹತಾಶರಾಗಿರುವುದು ಸ್ಪಷ್ಟವಾಗಿ ಅರ್ಥವಾಗಿದೆ. ರಾಜಕಾರಣದಲ್ಲಿ ಅಧಿಕಾರ ಬರುತ್ತದೆ, ಹೋಗುತ್ತದೆ ಆದರೆ ಯಾವುದೇ ಕಾರಣಕ್ಕೂ ಹತಾಶರಾಗಬಾರದು. ಕೋರ್ಟ್ ಅವರನ್ನು ಸಿಕ್ಕಾಪಟ್ಟೆ ಜಾಡಿಸಿದೆ. ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಹೋಗುವ ಕನಸು ಬೀಳುತ್ತಿದೆ.ಅಧಿಕಾರ ಹೋಗುವ ಹತಾಶೆಯಿಂದ ಸಿಎಂ ಸಿದ್ದರಾಮಯ್ಯ ಈ ರೀತಿ ಮಾತನಾಡುತ್ತಿದ್ದಾರೆ. ಅತ್ಯಂತ ಅಪ್ರಭುದ್ಧ ಹೇಳಿಕೆ ಕೊಡುತ್ತಿದ್ದಾರೆ. ನಾವು ಅವರನ್ನು ಟೀಕೆ ಮಾಡುತ್ತೇವೆ ಅವರು ನಮ್ಮನ್ನು ಟೀಕಿಸುತ್ತಾರೆ. ಅಧಿಕಾರ ಹೋಗುವ ಸ್ಥಿತಿ ಬಂದಿರುವುದರಿಂದ ಅವರು ಸ್ಥಿಮಿತ ಕಳೆದುಕೊಂಡಿದ್ದಾರೆ. ಮಾನಸಿಕ ಸೀಮಿತಕ್ಕೆ ಚಿಕಿತ್ಸೆ ತೆಗೆದುಕೊಳ್ಳುವುದು ಒಳ್ಳೆಯದು. ಬಜರಂಗದಳ ಯಾವಾಗಲೂ ಪಾಕಿಸ್ತಾನ ಜಿಂದಾಬಾದ್ ಎಂದಿಲ್ಲ.…
ರಾಯಚೂರು : ಬಟ್ಟೆ ತೊಳೆಯುವಾಗ ತಾಯಿ ಮಗಳು ಇಬ್ಬರು ಕಾಲುವೆಯಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತಾಯಿ ಸುಜಾತ (27) ಮಗಳು ಶ್ರಾವಣಿ (10) ಕೊಚ್ಚಿ ಹೋದವರು ಎಂದು ತಿಳಿದು ಬಂದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ತಾಯಿ ಹಾಗೂ ಮಗಳು ಕೊಚ್ಚಿ ಹೋಗಿದ್ದಾರೆ. ತಾಯಿಯ ಶವ ಪತ್ತೆಯಾಗಿದ್ದು, ಪುತ್ರಿಯ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಧಾರವಾಡದ ಶಿವಾಜಿ ವೃತ್ತದಲ್ಲಿ ಶಾಸಕ ಅರವಿಂದ್ ಬೆಲ್ಲ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಪೊಲೀಸರು ಶಾಸಕ ಅರವಿಂದ್ ಬೆಲ್ಲದ ಸೇರಿದಂತೆ 50 ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹುಬ್ಬಳ್ಳಿಗೆ ಹೋಗುವಾಗ ಸಿಎಂ ಸಿದ್ದರಾಮಯ್ಯಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ನಿರ್ಧರಿಸಿತ್ತು. ಶ್ರೀ ಸಿದ್ದರಾಮಯ್ಯ ತೇಳುವ ರಸ್ತೆ ಬದಿಯಲ್ಲಿ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ನಿರ್ಧರಿಸಿತ್ತು. ಈ ವೇಳೆ ಕಾರ್ಯಕರ್ತರ ಬಳಿ ಇದ್ದ ಕಪ್ಪುಬಟ್ಟೆಯನ್ನು ಪೊಲೀಸರು ಕಸಿದುಕೊಂಡಿದ್ದಾರೆ. ಶಾಸಕ ಬೆಲ್ಲದ, ಅಮೃತ ದೇಸಾಯಿ ಸೇರಿದಂತೆ 50 ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಸರ್ಕಾರ ಹಳೆ ಹುಬ್ಬಳ್ಳಿ ಗಲಭೆಯ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿಗೆ ಪ್ರದರ್ಶಿಸಲು…
ಶಿವಮೊಗ್ಗ : ಸಿಗಂದೂರಿಗೆ ಪ್ರವಾಸಕ್ಕೆ ಎಂದು ತೆರಳುತ್ತಿದ್ದ ಯುವಕರ ತಂಡ ಒಂದು ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಭತ್ತಕ್ಕೆ ಪಲ್ಟಿಯಾಗಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೂ ಹಲವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಎಂಬಲ್ಲಿ ನಡೆದಿದೆ. ಹೌದು ಕೆರೆಕೋಡಿ ಬಳಿ ಕಾರು ಪಲ್ಟಿಯಾಗಿ ಓರ್ವ ಯುವಕ ದುರ್ಮರಣ ಹೊಂದಿದ್ದಾನೆ. ಬೆಂಗಳೂರು ಜಿಲ್ಲೆಯ ನೆಲಮಂಗಲ ಮೂಲದ ಚಂದನ್ (26) ಎಂಬ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸಿಗಂದೂರಿಗೆ ಪ್ರವಾಸಕ್ಕೆ ಯುವಕರ ತಂಡವನ್ನು ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಯಲ್ಲಿ ಕಾರು ಪಲ್ಟಿಯಾಗಿದೆ. ಈ ಒಂದು ಅಪಘಾತದಲ್ಲಿ ನೆಲಮಂಗಲ ಮೂಲದ ಚಂದನ್ ಎಂಬ ಯುವಕ ಸಾವನ್ನಪ್ಪಿದ್ದಾನೆ. ಇವರ ಜೊತೆಗೆ ಕಾರಿನಲ್ಲಿದ್ದ ಆತನ ಗೆಳೆಯರಾದ ನಂದನ್, ಕೋದಂಡ, ಭರತ್ ಹಾಗೂ ಯೋಗೇಶ್ ಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಮುಡಾ ಹಗರಣದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಇದೆ ವೇಳೆ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಅರ್ಚನೆ ಮಾಡಿಸಿದರು. ಹೌದು ಇಂದು ಸಿಎಂ ಸಿದ್ದರಾಮಯ್ಯ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಎಲ್ಲಮ್ಮನ ಗುಡಿಯಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಅರ್ಚನೆ ಮಾಡಿಸಿದರು. ಪಾರ್ವತಿ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಬಳಿಕ ಆರತಿ ಮುಗಿಯುವವರೆಗೂ ಗರ್ಭಗುಡಿಯಲ್ಲಿಯ ನಿಂತು ಸಿಎಂ ಸಿದ್ದರಾಮಯ್ಯ ಎಲ್ಲಮ್ಮ ದೇವಿಯ ದರ್ಶನ ಪಡೆದರು.ಈ ವೇಳೆ ಆರತಿ ತಟ್ಟೆಗೆ 500 ರೂಪಾಯಿ ದಕ್ಷಿಣೆ ಹಾಕಿದರು. ಅಲ್ಲದೆ ಹಣೆಗೆ ತಾವೇ ಕುಂಕುಮ ಹಚ್ಚಿಕೊಂಡರು. ಈ ಸಂದರ್ಭದಲ್ಲಿ ಸಿಎಂ ತಲೆಯ ಮೇಲೆ ಅರ್ಚಕರು ನಾಗಮುದ್ರಿಕೆ ಇಟ್ಟು ಆಶೀರ್ವದಿಸಿದರು. ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗರ್ಭಗುಡಿಯಲ್ಲಿಯೇ ಸಾಷ್ಟಾಂಗ ನಮಸ್ಕಾರ ಹಾಕಿದರು. ಬಳಿಕ ಎಲ್ಲಮ್ಮ ದೇವಿ ಸನ್ನಿಧಾನದಲ್ಲಿ ಶಾಸಕ ವಿಶ್ವಾಸ ವೈದ್ಯ…
ಮೈಸೂರು : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಅಭ್ಯರ್ಥಿಯ ಕುರಿತಂತೆ ಗೊಂದಲ ಮೂಡಿದ್ದು, ಇನ್ನೂ ಕೂಡ ಯಾವುದೇ ಅಭ್ಯರ್ಥಿ ಘೋಷಣೆ ಮಾಡಿಲ್ಲ ಆದರೆ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನೇ ಸ್ಪರ್ಧಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾವು ವ್ಯಕ್ತಿ ಮೇಲೆ ಚುನಾವಣೆ ಮಾಡಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲು ಹೊರಟಿದ್ದೇವೆ. ಚನ್ನಪಟ್ಟಣದಿಂದ ನಾನೇ ಸ್ಪರ್ಧಿಸುತ್ತೇನೆ. MP ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. MLA ಚುನಾವಣೆಯಲ್ಲಿಯೂ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡುತ್ತಿದ್ದೇವೆ. ಜನ ಓಟ್ ಹಾಕಿ ಗೆಲ್ಲಿಸುತ್ತಾರೆಂಬ ನಂಬಿಕೆ ನನಗಿದೆ ಎಂದರು.
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮೈಸೂರಿನಲ್ಲಿ ಒಂದು ತಿಂಗಳ ಪರ್ಯಂತ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ಅದರಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಇದೀಗ ಈ ಒಂದು ಫಲ ಪುಷ್ಪ ಪ್ರದರ್ಶನದಲ್ಲಿ ಉಚಿತ ಪ್ರವೇಶ ಇದ್ದರೂ ಕೂಡ ಸಿಬ್ಬಂದಿಗಳು ಪ್ರವಾಸಿಗರಿಂದ ಅಕ್ರಮ ಹಣವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಮೈಸೂರು ಫಲ ಪುಷ್ಪ ಪ್ರದರ್ಶನದಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಿಬ್ಬಂದಿಗಳು ಟಿಕೆಟ್ ನೀಡಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕಳೆದ ಹತ್ತು ದಿನಗಳಿಗೆ ಮಾತ್ರ ಟಿಕೆಟ್ ಪಡೆದು ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ಅದಾದ ಬಳಿಕ ಉಚಿತ ಪ್ರವೇಶ ಇದ್ದರೂ ಕೂಡ ಅಕ್ರಮವಾಗಿ ಸಿಬ್ಬಂದಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಇಂದು ಸಹ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಪ್ರದರ್ಶನಕ್ಕೆ ಆಗಮಿಸಿದ್ದಾರೆ.ಪ್ರವಾಸಿಗರಿಗೆ ಸಿಬ್ಬಂದಿಗಳು ಟಿಕೆಟ್ ನೀಡಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಈ ಕುರಿತು ಪ್ರಶ್ನೆ ಮಾಡಿದವರ…
ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಭೆಯನ್ನು ಕೇಸ್ ಅನ್ನು ರಾಜ್ಯ ಸರ್ಕಾರ ಹಿಂಪಡೆದ ವಿಚಾರವಾಗಿ, ಪ್ರಹ್ಲಾದ ಜೋಶಿ ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಪ್ರಹ್ಲಾದ ಜೋಶಿ ಭಯೋತ್ಪಾದಕರಲ್ಲ ಜೋಶಿ ದೇಶಭಕ್ತರು. ಸಿಎಂ ಸಿದ್ದರಾಮಯ್ಯನವರೇ ಭಯೋತ್ಪಾದಕರು ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ವಿವಾದಾತ್ಮಕ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದವರ ಮೇಲೆ ದಾಖಲಾದ ಕೇಸ್ ಹಿಂಪಡೆದಿದ್ದೀರಿ. ಸಿದ್ದರಾಮಯ್ಯನವರೇ ಭಯೋತ್ಪಾದಕರು ರಾಜ್ಯದಲ್ಲಿ ನೀವು ರಾಜಕತೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದೀರಿ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಹೇಶ್ ತೆಂಗಿನಕಾಯಿ ಕಿಡಿ ಕಾರಿದರು.. ರಾಜಕತೆ ಸೃಷ್ಟಿ ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಆಕ್ರೋಶ ಹೊರ ಹಾಕಿದರು.














