Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ ಮಧ್ಯ ಮಂಡ್ಯದ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಎಚ್ ಡಿ ರೇವಣ್ಣ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು ರೇವಣ್ಣ ನಡವಳಿಕೆ ಸರಿ ಇಲ್ಲ ಇಂಗ್ಲೆಂಡ್ನಲ್ಲಿಯೂ ಕೂಡ ಇಂಥದ್ದೇ ಪ್ರಕರಣದಲ್ಲಿ ತಗಲಾಕೊಂಡಿದ್ದರು ಎಂದು ಗಂಭೀರವಾದಂತಹ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರೇವಣ್ಣ ಇಂಗ್ಲೆಂಡ್ನಲ್ಲಿಯೂ ತಗಲು ಹಾಕಿಕೊಂಡಿದ್ದರು ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಗಂಭೀರವಾದ ಆರೋಪ ಮಾಡಿದರು. ನಾನು ರೇವಣ್ಣ ಇಂಗ್ಲೆಂಡ್ ಹೋಗಿದ್ದೇವು. 30 ವರ್ಷದ ಹಿಂದಿನ ಘಟನೆ ಇದೀಗ ರಿವಿಲ್ ಮಾಡಲು ಹೋಗುವುದಿಲ್ಲ ಎಂದರು. ನಾನು ರೇವಣ್ಣ ಅವರ ಮನೆಯವರು ಹಾಗೂ ನನ್ನ ಮನೆಯವರು ಸೇರಿದಂತೆ ಇನ್ನಿಬ್ಬರು ಹೋಗಿದ್ದೆವು.ನಮ್ಮ ಜೊತೆ ತಿಮ್ಮೇಗೌಡ ಎನ್ನುವವರು ಕೂಡ ಬಂದಿದ್ದರು. ಬೇಕಾದರೆ ಅವರನ್ನ ಕೇಳಿ ಇದಕ್ಕೆ ಸಾಕ್ಷಿ ಇದಾರೆ ಬೇಕಾದರೆ ಅವರನ್ನು ಕೇಳಿ ಎಂದು ಗಂಭೀರ ಆರೋಪ ಮಾಡಿದರು. 30 ವರ್ಷದ…
ಹಾಸನ : ಲೈಂಗಿಕ ಕಿರುಕುಳ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ವಿಚಾರವಾಗಿ ಈಗಾಗಲೇ ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದ ಕೂಡಲೇ ಇದೀಗ ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಸಂಸದರ ನಿವಾಸಕ್ಕೆ ಪೊಲೀಸರು ಬೀಗ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಹಾಸನದ ಆರ್ಸಿ ರಸ್ತೆಯಲ್ಲಿರುವ ಪ್ರಜ್ವಲ್ ಸರ್ಕಾರಿ ನಿವಾಸಕ್ಕೆ ಇದೀಗ ಬೀಗ ಜಡಿಯಲಾಗಿದೆ. ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆದಿರುವ ಬಗ್ಗೆ ಸಂತ್ರಸ್ತೇ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದರು. ಇದೀಗ ಸಂಸದರ ನಿವಾಸದ ಆವರಣ ಪ್ರವೇಶ ನಿರ್ಭಂಧಿಸಿ ಬೀಗ ಹಾಕಲಾಗಿದೆ ಎಂದು ಹೇಳಲಾಗುತ್ತಿದ್ದು SIT ತನಿಖೆ ಹಿನ್ನೆಲೆ ಇದೀಗ ಬೀಗ ಹಾಕಲಾಗಿದೆ. ಅಲ್ಲದೆ ಇದೇ ಒಂದು ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ವಿರುದ್ಧ ಈಗಾಗಲೇ ಎರಡು ದಾಖಲಾಗಿದ್ದು, ಇಂದು ಎಸ್ಐಟಿ ಸಂತ್ರಸ್ತೆಯರನ್ನು ಕರೆದುಕೊಂಡು ಅವರ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಿದ್ದಾರೆ. ಹೀಗಾಗಿ ಹಾಸನದ ಹೊಳೆನರಸೀಪುರದಲ್ಲಿರುವ ಹೆಚ್ಡಿ ರೇವಣ್ಣ ಅವರ ಮನೆ ಹಾಗೂ ಪ್ರಜ್ವಲ್ ರೇವಣ್ಣರ…
ಮಂಡ್ಯ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಪ್ರಜ್ವಲ್ ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್ ಬಿಡುಗಡೆ ಹೇಳಿಕೆ ಕೊಟ್ಟಾಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿ ಏನು ಕತ್ತೆ ಕಾಯುತಿದ್ರ? ಎಂದು ಮಾಜಿ ಸಂಸದ ಶಿವರಾಮೇಗೌಡ ಆಕ್ರೋಶ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಮುಂದೆ ರಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಪ್ರತಿಕ್ರಿಯೆ ನೀಡಿದರು. ಪ್ರಜ್ವಲ್ ಇಷ್ಟೆಲ್ಲ ಮಾಡುತ್ತಿದ್ದಾರೆ ಅವರ ಅಪ್ಪ ಅಮ್ಮ ಕತ್ತೆ ಕಾಯ್ತಿದ್ರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ಕಡೆ ಅಪ್ಪ ಮತ್ತೊಂದು ಕಡೆ ಮಗ ದೊಡ್ಡಗೌಡರನ್ನ ಚಿಂತೆ ಮಾಡುವ ಪರಿಸ್ಥಿತಿಗೆ ತಂದಿದ್ದಾರೆ. ಅವರು ಮಾಡಿರುವ ಪಾಪ ಅವರೇ ಅನುಭವಿಸುತ್ತಿದ್ದಾರೆ.ದೇವರಾಜ ಗೌಡ ಪೆನ್ ಡ್ರೈವ್ ಬಿಡುವ ಹೇಳಿಕೆಯನ್ನು ಕೊಟ್ಟಿದ್ದರು ಅವಾಗ ದೇವೇಗೌಡರು ಕುಮಾರಸ್ವಾಮಿ ಕತ್ತೆ ಕಾಯುತಿದ್ರ? ಎಂದು ಕಿಡಿ ಕಾರಿದರು. ಪೆನ್ ಡ್ರೈವ್…
ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು HD ರೇವಣ್ಣ ಹಾಗೂ ಪ್ರಜ್ವಲ್ ನಿವಾಸದಲ್ಲಿ ಸಂತ್ರಸ್ತೆಯರ ಸಮ್ಮುಖದಲ್ಲಿ ಎಸ್ಐಟಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಪ್ರಜ್ವಲ್ ಹಾಗೂ ಎಚ್ ಡಿ ರೇವಣ್ಣ ವಿರುದ್ಧ 2 ಕೆಸ್ ದಾಖಲಾಗಿದೆ. ಇಂದು ಸಂತ್ರಸ್ಯರ ಜೊತೆಗೆ ಸ್ಥಳ ಮಹಜರು ಸಾಧ್ಯತೆ ಇದೆ ಎನ್ನಲಾಗಿದೆ. ರೇವಣ್ಣ ವಿರುದ್ಧ ಎರಡು ಕೆ ಎಸ್ ದಾಖಲಾಗಿದೆ. ಪ್ರಜ್ವಲ್ ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪ ಹಾಗೂ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅಪಹರಣ ಕೇಸ್ ದಾಖಲಾಗಿದೆ. ಪ್ರಕರಣದ ಕುರಿತಂತೆ ಈಗಾಗಲೇ ಜಡ್ಜ್ ಮುಂದೆ ಸಂತ್ರಸ್ತರು ಹೇಳಿಕೆಯನ್ನು ನೀಡಿದ್ದಾರೆ.ಸೆಕ್ಷನ್ 164 ರ ಅಡಿ ಈಗಾಗಲೇ ಹೇಳಿಕೆಯನ್ನು ದಾಖಲು ಮಾಡಿದ್ದಾರೆ. ಹೇಳಿಕೆ ದಾಖಲಾಗಿರುವ ಹಿನ್ನೆಲೆಯಲ್ಲಿ ಇಂದು ಸ್ಥಳ ಮಹಜರು ನಡೆಯಲಿದೆ. ಲೈಂಗಿಕ ಕಿರುಕುಳ ಆರೋಪದಲ್ಲಿ ಎಚ್ ಡಿ ರೇವಣ್ಣ ನಿವಾಸದಲ್ಲಿ ಹಾಗೂ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ಮನೆಯಲ್ಲಿ ಸ್ಥಳ ಮಹಜರು ನಡೆಸಲಿದೆ.ಹಾಸನದ ಸಂಸದರ…
ಕೊಪ್ಪಳ :ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರು ದೀಪ ಆರುವಾಗ ಉರಿಯುವ ರೀತಿ ಹಾರಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಪರ ಪ್ರಚಾರದ ಬಳಿಕ ಮಾತನಾಡಿದರು. ಪಟ್ಟಣದ ಎಪಿಎಂಸಿಯಿಂದ ಪಟ್ಟಣ ಪಂಚಾಯಿತಿವರೆಗೆ ರೋಡ್ಶೋ ಮಾಡಿದ್ದು, ರೋಡ್ಶೋನಲ್ಲಿ ಶಾಸಕ ಜನಾರ್ದನರೆಡ್ಡಿ, ಎಂಎಲ್ಸಿ ಹೇಮಲತಾ ಭಾಗಿ ಆಗಿದ್ದರು. ರೋಡ್ಶೋ ಬಳಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಿಜೆಪಿಗೆ ವೋಟ್ ಹಾಕುವ ಮೂಲಕ ಕನ್ನಡ & ಸಂಸ್ಕೃತಿ ಸಚಿವ ತಂಗಡಗಿಗೆ ಕಪಾಳಕ್ಕೆ ಹೊಡೆದಂತಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ದೀಪ ಆರುವಾಗ ಉರಿಯುವ ರೀತಿ ಕಾಂಗ್ರೆಸ್ನವರು ಹಾರಾಡುತ್ತಿದ್ದಾರೆ. ಜೂನ್ 4ರ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಆಟ ನಡೆಯುವುದಿಲ್ಲ. ಬಿಜೆಪಿಯಲ್ಲಿ ಟಿಕೆಟ್ ಸಿಕ್ಕಿಲ್ಲ ಅಂತಾ ಕೆಲವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರಿಗೂ ತಕ್ಕ ಉತ್ತರ ನೀಡಬೇಕಾಗಿದೆ ಎಂದು ಕಿಡಿಕಾರಿದ್ದಾರೆ.
ದಾವಣಗೆರೆ : AICC ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕ ಗಾಂಧಿ ಅವರು ಇಂದುದಾವಣಗೆರೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಪರ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಇಂದು ಮಧ್ಯಾಹ್ನ ಸಮಾವೇಶ ನಡೆಯಲಿದೆ. ಈ ಒಂದು ಬೃಹತ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ,ರಣದಿಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಇನ್ನೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕುರುಬ ಸಮಾಜದ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ಜಿಟಿ ವಿನಯ್ ಕುಮಾರ್ ಅವರು ಕ್ಷೇತ್ರದಲ್ಲಿ ಆ ಕಣಕ್ಕಿಳಿಯಲಿದ್ದಾರೆ ಹೀಗಾಗಿ ಶಂ ಸಿದ್ದರಾಮಯ್ಯನವರು ಕುರುಬ ಸಮಾಜದ ಪ್ರಮುಖರ ಸಭೆಯಲ್ಲಿ…
ಬೆಂಗಳೂರು : ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಮಹಿಳೆಯೊಬ್ಬಳು ಕಳ್ಳತನ ಮಾಡಿ ಲಕ್ಷಾಂತರ ರೂಪಾಯಿ ಚಿನ್ನ ವಜ್ರ ಹಾಗೂ ನಗದನ್ನು ದೋಚಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.ಈ ಸಂಬಂಧ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಚಾಮರಾಜನಗರ ಮೂಲದ ಮಂಜುಳಾ (38) ಎಂದು ಹೇಳಲಾಗುತ್ತಿದೆ. ಹೀಗೆ ಸುಮಾರು 363 ಗ್ರಾಂ ಚಿನ್ನ ವಜ್ರದ ವಸ್ತುಗಳು 176 ಬೆಳ್ಳಿ ವಸ್ತುಗಳು ಒಂದು ಲಕ್ಷ ನಗದು ಸೇರಿದಂತೆ ಒಟ್ಟು 35 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಳು. ಇದೀಗ ಪೊಲೀಸರು ಆರೋಪಿ ಮಂಜುಳಾ ರನ್ನು ಬಂಧಿಸಿ ಚಿನ್ನಾಭರಣ ವಜ್ರ ಬೆಳ್ಳಿ ಹಾಗೂ ನಗದನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಜೆಪಿ ನಗರ 1 ನೇ ಹಂತದ ಅಪಾರ್ಟ್ಮೆಂಟ್ ನಲ್ಲಿ ವಾಸಿಸುತ್ತಿದ್ದ ರೇಖಾ ಕಿರಣ್ ಎನ್ನುವರ ಮನೆಯಲ್ಲಿ ಈ ಘಟನೆ ನಡೆದಿತ್ತು, ಇದೀಗ ಜೆಪಿ ನಗರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿ ಕೊಂಡು ತನಿಖೆ ನಡೆಸಿ ಇದೀಗ ಆರೋಪಿ ಮಂಜುಳಾಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ರೇಖಾ…
ಬೆಂಗಳೂರು : ಹಳೆ ದ್ವೇಷದ ಹಿನ್ನೆಲೆಯಲ್ಲಿ ಆಟೋ ಚಾಲಕನೊಂದಿಗೆ ಗಲಾಟೆ ಮಾಡಿದ ರೌಡಿ ಒಬ್ಬ ಮಾರಕಾಸ್ತ್ರಗಳಿಂದ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಸಂಜಯ್ ನಗರದ ನಾಗಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಆಟೋ ಚಾಲಕನನ್ನು ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ (41) ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ 11:00ಗೆ ನಾಗಶೆಟ್ಟಿಹಳ್ಳಿ ಬಸ್ ನಿಲ್ದಾಣದಲ್ಲಿ ಆಟೋ ಚಾಲಕ ಮೂರ್ತಿ ಹಾಗೂ ಸಚಿನ್ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದಿತ್ತು. ಇವಳೆ ಸಚಿನ್ ಫೋನ್ ಮಾಡಿ ಶರಣಪ್ಪನನ್ನು ಸ್ಥಳಕ್ಕೆ ಕರೆಸಿದನು. ಈ ಹಿಂದೆ ಶರಣಪ್ಪ ಹಾಗೂ ಮೂರ್ತಿಗೂ ಜಗಳವಾಗಿತ್ತು. ಇವರೆಲ್ಲರೂ ಒಂದೇ ಏರಿಯಾದವರು ಎಂದು ಹೇಳಲಾಗುತ್ತಿದೆ. ಶರಣಪ್ಪ ಹಾಗೂ ಆಟೋ ಚಾಲಕ ಮೂರ್ತಿಗೂ ಹಳೆ ದ್ವೇಷ ಇತ್ತು. ಇದೇ ಸಮಯಕ್ಕೆ ಕಾಯುತ್ತಿದ್ದ ಶರಣಪ್ಪ ಜಗಳ ಮಾಡುತ್ತಾ ಡ್ಯಾಗರ್ನಿಂದ ಏಕಾಏಕಿ ಮೂರ್ತಿ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಸಚಿನ್ ಹಾಗೂ ಶರಣಪ್ಪ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಕುಡಿದಂತೆ ಸಂಜಯ್ ನಗರ ಠಾಣೆ ಪೊಲೀಸರು…
ಕೊಪ್ಪಳ : ತಂಗಡಗಿ ನನ್ನ ಬಳಿ ಹಣ ತೆಗೆದುಕೊಂಡು ಬಂದು ಚುನಾವಣೆಯಲ್ಲಿ ಗೆದ್ದಿದ್ದಾನೆ. ತಂಗಡಗಿಯನ್ನ ಮೊದಲ ಬಾರಿಗೆ ಮಂತ್ರಿ ಮಾಡಿದ್ದು ನಾನು ಎಂದು ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಜನಾರ್ದನ ರೆಡ್ಡಿ ಸಚಿವ ಶಿವರಾಜ್ ತಂಗಡಿ ವಿರುದ್ಧ ಗಂಭೀರ ಆರೋಪ ಮಾಡಿದರು. ಮೋದಿ ಬಗ್ಗೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ವಾಗ್ದಾಳಿ ನಡೆಸಿದ ಜನಾರ್ಧನ್ ರೆಡ್ಡಿ ಬಿಜೆಪಿಗೆ ವೋಟ್ ಹಾಕುವ ಮೂಲಕ ಕಪಾಳಕ್ಕೆ ಹೊಡೆದಂತೆ ಆಗಬೇಕು. ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಿಗಿಗೆ ಕಪಾಳಕ್ಕೆ ಹೊಡೆದಂತೆ ಆಗಬೇಕು ಎಂದು ಜನಾರ್ಧನ್ ರೆಡ್ಡಿ ತಿಳಿಸಿದರು. ತಂಗಡಗಿ ನನ್ನ ಬಳಿ ಹಣ ತೆಗೆದುಕೊಂಡು ಬಂದು ಚುನಾವಣೆಯಲ್ಲಿ ಗೆದ್ದಿದ್ದಾನೆ. ತಂಗಡಗಿಯನ್ನ ಮೊದಲ ಬಾರಿಗೆ ಮಂತ್ರಿ ಮಾಡಿದ್ದು ನಾನು. ಶಿವರಾಜ ತಂಗಡಿಗೆ ಅಧಿಕಾರದ ಮದದಿಂದ ವರ್ತನೆ ಮಾಡುತ್ತಿದ್ದಾರೆ. ಮೋದಿ ಮೋದಿ ಅಂದರೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿದ್ದಾನೆ. ತಮ್ಮ ತಂಗಡಗಿ ನಾನು ಕಾರಟಗಿ ಬಸ್ ನಿಲ್ದಾಣದ ಮುಂದೆ ನಿಂತಿದ್ದೇನೆ. ನಮ್ಮ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ…
ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಬಿವಿಬಿ ಕಾಲೇಜ್ ಆವರಣದಲ್ಲಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಇನ್ನೂ ಜೀವಂತವಾಗಿರುವಾಗಲೇ ಇದೀಗ ಹುಬ್ಬಳ್ಳಿ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಸದ್ದು ಮಾಡುತ್ತಿದೆ. ಹೌದು ಮುಸ್ಲಿಂ ಯುವಕನೊಬ್ಬ ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನಂತೆ ಮುಸ್ಲಿಂ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಸದ್ದಾಂ ಹುಸೇನ್ ಲಿಂಬುವಾಲೆ ಎಂದು ಹೇಳಲಾಗುತ್ತಿದ್ದು, ಅಮರಗೋಳದ ಅಪ್ರಾಪ್ತ ಬಾಲಕಿ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ನವನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. ಕಳೆದ ನಾಲ್ಕು ದಿನಗಳಿಂದ ಬಾಲಕಿಯು ನಿರಂತರವಾಗಿ ವಾಂತಿ ಮಾಡಿಕೊಳ್ಳುತ್ತಿದ್ದಳು. ಇದರಿಂದ ಆತಂಕಗೊಂಡ ಆಕೆ ಪುರುಷಕರು ನಗರದ ಕೆಂಚ ಆಸ್ಪತ್ರೆಗೆ ದಾಖಲಿಸಿದರು ಅಲ್ಲಿ ವೈದಿರು…