Author: kannadanewsnow05

ಬೆಳಗಾವಿ : ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು. ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದ ವೇಳೆ ಅವರು ಸದನಕ್ಕೆ ಮಾಹಿತಿ ನೀಡಿದರು. 20,000 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬಹುದು. ಇದರೊಂದಿಗೆ ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಅನುದಾನವನ್ನು ಸಹ ನೀಡಬೇಕು. ಸ್ವೀಕೃತವಾದ ಎಲ್ಲ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದರು. ಗೋಕರ್ಣ ಪಟ್ಟಣ ಪಂಚಾಯಿತಿ ರಚನೆಗೆ ಮನವಿ ಕುಮುಟ ಕ್ಷೇತ್ರದ ಶಾಸಕ…

Read More

ಬೆಳಗಾವಿ : ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿಸೆಂಬರ್ 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಆಗಿರುವ ವಿಧಾನಸಭೆ ಸದಸ್ಯರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಹೇಳಿದರು. ಸುವರ್ಣಸೌಧದ ಪಶ್ಚಿಮದ್ವಾರದ ಬಳಿ ಸಮಿತಿಯ ಸದಸ್ಯರೊಂದಿಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಈ ಮಾಹಿತಿ ನೀಡಿದರು.ಸಮಿತಿಯು ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಗದಗ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಮಾಡಿ ಅನೇಕ ಲೋಪದೋಷಗಳನ್ನು ಪರಿಶೀಲಿಸಿದೆ. ಒಂದೇ ಮನೆಯ ಮಕ್ಕಳಂತೆ ಎಲ್ಲ ಪಕ್ಷದವರು ಒಗ್ಗೂಡಿ ಈ ವರದಿಯನ್ನು ಸಿದ್ಧಪಡಿಸಿದ್ದೇವೆ. ರಾಜ್ಯದ ಹಿತದೃಷ್ಟಿಯಿಂದ ಮತ್ತು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಹಾಗೂ ಅವರ ಭವಿಷ್ಯತ್ತನ್ನು ರೂಪಿಸುವುದಕ್ಕೆ ಸರ್ಕಾರದ…

Read More

ಬೆಳಗಾವಿ : ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಶುಕ್ರವಾರದ ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು. ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು. ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ…

Read More

ಬೆಳಗಾವಿ : ಕಳೆದ ವರ್ಷ ರಾಜ್ಯ ಬರಕ್ಕೆ ತುತ್ತಾಗಿದ್ದರೆ, ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬೆಳೆಹಾನಿಯಾಗಿದೆ. ಬರ ಪರಿಹಾರವಾಗಿ ರಾಜ್ಯ ಸರ್ಕಾರ ಕಳೆದ ವರ್ಷ ರೂ.4200 ಕೋಟಿ ಹಣವನ್ನು ರೈತರಿಗೆ ಪರಿಹಾರದ ರೂಪದಲ್ಲಿ ನೀಡಿದರೆ, ಮಳೆಹಾನಿಗೆ ಈ ವರ್ಷ ರೂ.297 ಕೋಟಿ ಹಣವನ್ನು ಪರಿಹಾರವಾಗಿ ರೈತರಿಗೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಶುಕ್ರವಾರ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಉಂಟಾದ ಮಳೆಹಾನಿ ಹಾಗೂ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸದನಕ್ಕೆ ಉತ್ತರ ನೀಡಿದ ಅವರು, “ಕಳೆದ ವರ್ಷದ ಬರ ಗಾಲದಲ್ಲಿ ರಾಜ್ಯ ಸರ್ಕಾರ 45 ಲಕ್ಷ ರೈತರಿಗೆ ರೂ.4200 ಕೋಟಿ ಹಣ ಪರಿಹಾರ ನೀಡಿದೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆ ಮಳೆ 115 ಮಿ.ಮೀ. ಆದರೆ, ವಾಸ್ತವದಲ್ಲಿ 151 ಮಿ.ಮೀ ಮಳೆಯಾಗಿದೆ. ಮುಂಗಾರಿನಲ್ಲಿ ವಾಡಿಕೆ 852 ಮಿ.ಮೀ. ಆದರೆ, 928 ಮಿ.ಮೀ…

Read More

ಬೆಳಗಾವಿ, ಡಿಸೆಂಬರ್ 13 : ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದೇ ಡಿಸೆಂಬರ್ 23, 24, 25 ರಂದು ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದ್ದು, ಪೂರ್ವಭಾವಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿರುವುದಾಗಿ ತಿಳಿಸಿದರು. ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ.…

Read More

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ. ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…

Read More

ಮೈಸೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಈ ಒಂದು ವಿಚಾರವಾಗಿ ಬಹುಭಾಷಾ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ, ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಇಲ್ಲಿ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ ಹೊರಟು ಕಳ್ಳನನ್ನ ಮಕ್ಕಳ ಬಗ್ಗೆ ಮಾತನಾಡಲು ಬಂದಿಲ್ಲ. ರಾಜಕೀಯೆತರ ಪ್ರಶ್ನೆ ಕೇಳಬೇಡಿ ಎಂದು ಪ್ರಕಾಶ್ ರೈ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಮಾತನಾಡುತ್ತೇನೆ ಎಂದು ತಿಳಿಸಿದರು.

Read More

ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅವರ ನಿವಾಸದ ಬಳಿ ಬಂಧಿಸಿ ಠಾಣೆಗೆ ಕರೆದೊಯ್ದರು. ಬಳಿಕ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಾಂಪಲ್ಲಿ ಕೋರ್ಟಿಗೆ ವಿಚಾರಣೆಗೆ ಹಾಜರುಪಡಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್ ಅಲ್ಲು ಅರ್ಜುನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ವಿರುದ್ಧ IPC ಸೆಕ್ಷನ್ 105, 118(1), ಮತ್ತು BNS 3(5) ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಗಳು ಸಾಮಾನ್ಯವಾಗಿ ತೊಂದರೆಗಳನ್ನು ಉಂಟುಮಾಡುವ, ಅಜಾಗರೂಕತೆ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಹಾನಿ ಮಾಡಿದ ಪ್ರಕರಣಗಳಿಗೆ ಸಂಬಂಧಿಸುತ್ತವೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಟ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ ಅಲ್ಲದೆ ಈ ಒಂದು ಪ್ರಕರಣದ ಎಲ್ಲಾ ಇವಳು ಆರೋಪಿಗಳಿಗೂ ಕೂಡ ಹೈಕೋರ್ಟ್ ಜಾಮೀನು ನೀಡಿ ಆದೇಶದ ಬೆನ್ನಲ್ಲೇ ನಟ ದರ್ಶನ್ ಅವರ ಮನೆಯ ಬಳಿ ಅಭಿಮಾನಿಗಳು ಆಗಮಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಹೌದು ಬೆಂಗಳೂರಿನ ಆರ್ ಆರ್ ನಗರದ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದು, ದರ್ಶನ್ ಮನೆಯ ಬಳಿ ಆಗಮಿಸಿ ಸಂಭ್ರಮ ಆಚರಿಸುತ್ತಿದ್ದಾರೆ. ದರ್ಶನ್ ಮನೆಯ ಬೋರ್ಡ್ ಗೆ ಹಾರ ಹಾಕಿ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರ ನಿವಾಸದ ಬಳಿ ಅಭಿಮಾನಿಗಳು ಬಂದಿದ್ದಾರೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ನಟ ದರ್ಶನ್ ಅವರಿಗೆ ಬೇಲ್ ಸಿಕ್ಕರು ಸಂಕಷ್ಟ ತಪ್ಪಿಲ್ಲ. ಏಕೆಂದರೆ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಇಂದು ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹೈಕೋರ್ಟ್ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಆದರೆ ರಾಜ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಈ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಚಿಂತನೆ ಮಾಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Read More