Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಡಿಸಿಪಿ ಕಚೇರಿಯ ಬಳಿಯೇ ರೌಡಿಶೀಟರ್ ಒಬ್ಬ ಅಪಾಯಕಾರಿ ವ್ಹಿಲಿಂಗ್ ಮಾಡಿದ್ದು ಅಲ್ಲದೆ ಲಾಂಗ್ ಮಚ್ಚುಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಸಿದ್ದಿಕಿ ಅಲಿಯಾಸ್ ಬರ್ನಲ್ ನನ್ನು ಇದೀಗ ಬೆಂಗಳೂರಿನ ಶಿವಾಜಿನಗರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಿವಾಜಿನಗರ ತಾಳಿ ಪೊಲೀಸರಿಂದ ರೌಡಿಶೀಟರ್ ಸಿದ್ದುಕಿ ಬಂಧನವಾಗಿದೆ ವೀಲಿಂಗ್ ನಡೆಸಿ ಲಾಂಗ್ ಪ್ರದರ್ಶನ ಮಾಡುತ್ತಿದ್ದ ಆರೋಪದ ಅಡಿ ಇದೀಗ ಆತನನ್ನು ಅರೆಸ್ಟ್ ಮಾಡಲಾಗಿದೆ ಸಾರ್ವಜನಿಕರಲ್ಲಿ ರೌಡಿಶೀಟರ್ ಸಿದ್ದಿಕೆ ಆತಂಕ ಸೃಷ್ಟಿ ಮಾಡುತ್ತಿದ್ದ ಆರೋಪಿಸಿದ್ದಕ್ಕೆ ವಿರುದ್ಧ ವಿವಿಧಡೆ 17 ಪ್ರಕರಣಗಳು ದಾಖಲಾಗಿದ್ದವು ಪೂರ್ವ ವಿಭಾಗ ಡಿಸಿಪಿ ಕಚೇರಿಯ ಬಳಿಯೇ ಆಸಾಮಿ ವೀಲಿಂಗ್ ಮಾಡಿದ್ದ ಎನ್ನಲಾಗಿದೆ ಹಾಗಾಗಿ ಇದೀಗ ಆತನನ್ನು ಶಿವಾಜಿನಗರ ಠಾಣೆಪಡಿಸಲು ಅರೆಸ್ಟ್ ಮಾಡಿದ್ದಾರೆ.

Read More

ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದಕ್ಕೆ ವೀರಶೈವ ಸಮಾಜದ ಮತಗಳು ದೂರವಾಗಿದ್ದು ಅಲ್ಲದೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಇದೆ ಕಾರಣವಾಯಿತು ಎಂದು ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. ಚಿಕ್ಕಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಪಿ ರೇಣುಕಾಚಾರ್ಯ, ವೀರಶೈವ ಲಿಂಗಾಯತರ ಅಗ್ರಗಣ್ಯ ನಾಯಕ ಬಿಎಸ್ ಯಡಿಯೂರಪ್ಪ. ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಇದೇ ಪ್ರಮುಖ ಕಾರಣ. ಯಡಿಯೂರಪ್ಪ ಕೆಳಗಿಳಿಸಿದ್ದು, ನೂರಕ್ಕೆ ನೂರು ಸೋಲಿಗೆ ಕಾರಣವಾಯ್ತು. ಟಿಕೆಟ್ ಕೊಡುವ ಗೊಂದಲ, ಹಿರಿಯರ ಕಡೆಗಣನೆ ಹಾಗೂ ವೀರಶೈವ ಮತಗಳು ದೂರವಾಗಿದ್ದು ಕೂಡ ಸೋಲಿಗೆ ಕಾರಣವಾಗಿದೆ ಎಂದು ಚಿಕ್ಕಮಂಗಳೂರಿನಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದರು. ನಿನ್ನೆ ಅಮಿತ್ ಶಾ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು.ಬಿವೈ ವಿಜಯೇಂದ್ರ, ಅಮಿತ್ ಶಾ ಒಂದೇ ಕಾರಿನಲ್ಲಿ ಬಂದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವೇದಿಕೆಯ ಮೇಲೆ ಇದ್ದರು. ಯಾರ್ಯಾರು ಏನೇನು ಕೊಟ್ಟರು ಎಂಬ ಬಗ್ಗೆ ಮಾಹಿತಿ…

Read More

ಯಾದಗಿರಿ : ತರಕಾರಿ ಹಣ ಹಾಗೂ ಸಂಬಳ ನೀಡುವ ವಿಚಾರವಾಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಅಡುಗೆ ಸಿಬ್ಬಂದಿ ನಡುವೆ ಮುನಿಸು ಉಂಟಾಗಿದ್ದರಿಂದ ಇದೀಗ ಸರ್ಕಾರಿ ಶಾಲೆಯಲ್ಲಿ ಕಳೆದ ಐದು ದಿನಗಳಿಂದ ಬಿಸಿ ಊಟ ಸ್ಥಗಿತವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸಿಬ್ಬಂದಿ ತಿಕ್ಕಾಟಕ್ಕೆ ಬಿಸಿಊಟ ಸ್ಥಗಿತವಾಗಿದೆ. ತರಕಾರಿ ಹಣ ಹಾಗೂ ಸಂಬಳ ನೀಡುವ ವಿಚಾರದಲ್ಲಿ ಮುನಿಸು ಮಾಡಿಕೊಂಡಿದ್ದು, ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಹಾಗೂ ಅಡುಗೆ ಸಿಬ್ಬಂದಿಯ ಮಧ್ಯೆ ವೈಮನಸು ಉಂಟಾಗಿದೆ. ಹೀಗಾಗಿ ಶಾಲೆಯ 350ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇದೀಗ ಇವರ ಒಂದು ಮುನಿಸಿನಿಂದ ಬಿಸಿಊಟ ಸ್ಥಗಿತವಾಗಿದೆ. ಕಳೆದ ಐದು ದಿನಗಳಿಂದ ಬಿಸಿ ಊಟ ಇಲ್ಲದೆ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಬಿಸಿ ಊಟ ಸ್ಥಗಿತಗೊಂಡರು, ಮುಖ್ಯ ಶಿಕ್ಷಕಿ ಯಾವುದೇ ಕ್ರಮ ಕೈಗೊಂಡಿಲ್ಲ. ಶಿಕ್ಷಕಿಯ ಈ ನಡೆಯಿಂದ ಗ್ರಾಮಸ್ಥರು ಮುಖ್ಯ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮುಖ್ಯ…

Read More

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಕ್ಕೆ ಎಂದು ಬಂದಿದ್ದ ವಿದೇಶಿ ಮಹಿಳೆ ಹಾಗು ದೇಶಿಯ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದ್ದು, ವರದಿಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ಹೋಗುವ ರಸ್ತೆ ಮಧ್ಯದಲ್ಲಿನ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ಈ ಘಟನೆ ನಡೆದಿದೆ. ಗಿಟಾರ್ ಬಾರಿಸುತ್ತಾ ಕುಳಿತಿದ್ದ ಇಬ್ಬರು ವಿದೇಶಿ ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಹಲ್ಲೆಯಾಗಿದೆ. ವಾಯುವಿಹಾರಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ವಿದೇಶಿಯರಿದ್ದ ಗುಂಪಿನ ಮೇಲೆ ದಾಳಿ ಮಾಡಿರುವ ಕೆಲ ಸ್ಥಳೀಯ ಯುವಕರು, ಗುಂಪಿನಲ್ಲಿದ್ದ ಪುರುಷರನ್ನು ಕಾಲುವೆಗೆ ದೂಡಿ, ಒಬ್ಬ ವಿದೇಶಿ ಮತ್ತು ಒಬ್ಬ ಸ್ಥಳೀಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯಲ್ಲಿ ಕಾಲುವೆಗೆ ಬಿದ್ದಿದ್ದ ಒಬ್ಬ ಸ್ವದೇಶಿ ಯುವಕ ನಾಪತ್ತೆಯಾಗಿದ್ದು, ಇನ್ನುಳಿದವರಿಗೆ ಗಾಯಗಳಾಗಿವೆ. ಅಮೆರಿಕ ಮೂಲದ ಡೇನಿಯಲ್, ಇಸ್ರೇಲ್​ನ ಸೀಮಾ,…

Read More

ದಕ್ಷಿಣಕನ್ನಡ : ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯುತ್ ಗುತ್ತಿಗೆದಾರರೊಬ್ಬರು, ತೀವ್ರ ನೋವು ಅನುಭವಿಸುತ್ತಿದ್ದರು ನೋವು ತಾಳದೆ ತಮ್ಮ ಮನೆಯ ಸಮೀಪ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರನ್ನು ಕಾರ್ಕಳ ಏಳ್ನಾಡುಗುತ್ತು ಸತ್ಯಪ್ರಕಾಶ್ ಹೆಗ್ಡೆ (49) ಎನ್ನಲಾಗಿದ್ದು, ಇವರು ಗುರುವಾರ ರಾತ್ರಿ ಸ್ವರಾಜ್ಯ ಮೈದಾನ ಬಳಿಯ ತಮ್ಮ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡುಬಿದಿರೆಯಲ್ಲಿ ಅನ್ನಪೂರ್ಣೇಶ್ವರಿ ಎಲೆಕ್ಟ್ರಿಕಲ್ಸ್ ಆಯಂಡ್‌ ಟ್ರಾನ್ಸ್‌ಪೋರ್ಟ್‌ ಅಂಗಡಿ ಹೊಂದಿದ್ದು, ಎರಡು ದಶಕಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.ಇದೇ ಚಿಂತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Read More

ಹಾಸನ : ಹಾಸನದಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ಪತ್ನಿ ಒಬ್ಬಳು ತನ್ನ ಪ್ರಿಯಕರನ ಜೊತೆ ಓಡಿ ಹೋಗಿದ್ದಾಳೆ. ಪತ್ನಿಯ ಈ ನಡೆಯಿಂದ ಮನನೊಂದ ಆಕೆಯ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಎಂದು ಗುರುತಿಸಲಾಗಿದೆ.ರವಿಯ ಪತ್ನಿ ಕೆಲ ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಹೊನ್ನವಳ್ಳಿ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ರವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸರು ಸ್ಪಂದಿಸದ ಕಾರಣ ಎಸ್ಪಿಗೆ ದೂರು ನೀಡಿದ್ದರು.ಆದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮನನೊಂದ ರವಿ ಶನಿವಾರ ಮಾಕವಳ್ಳಿ ಬಳಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ರವಿ ಅವರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು ಘಟನೆ ಕುರಿತು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಾಳೆ ನಮ್ಮ ಮೆಟ್ರೋ ಪ್ರಯಾಣದ ನೇರಳೆ ಮಾರ್ಗದ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ವ್ಯತ್ಯಯ ಉಂಟಾಗಲಿದ್ದು, ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು BMRCL ತಿಳಿಸಿದೆ. ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸ‌ರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳು ಮುಚ್ಚಲಾಗಿರುತ್ತದೆ ಎಂದು ಮಾಹಿತಿ ನೀಡಿದೆ. ಅಲೆ ನಮ್ಮ ಮೆಟ್ರೋ ನಿಗಮವು ನೇರಳ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಬೆಳಿಗೆ 07:00 ರಿಂದ 10:00 ಗಂಟೆಯವರೆಗೆ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ಯಾಣಗಳ ನಡುವಿನ ಮೆಟ್ರೋ ಸೇವೆಗಳನ್ನು…

Read More

ಬೆಳಗಾವಿ : ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ ಬಜೆಟ್ ಮಂಡನೆ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಯಾವುದೇ ದಿಕ್ಕು ದೆಸೆ ಇಲ್ಲದ ಬಜೆಟ್ ಇದಾಗಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯವಾಗುವ ಸ್ಥಿತಿ ತಲುಪುತ್ತಿದೆ. ಕಾಂಗ್ರೆಸ್ಸಿಗೆ ಕೇವಲ ಮುಸ್ಲಿಮರು ಮಾತ್ರ ಕಣ್ಣಿಗೆ ಕಾಣುತ್ತಿದ್ದಾರೆ. ಮೊಹಮ್ಮದ್ ಅಲಿ ಜಿನ್ನಾ ಏನಾದ್ರೂ ಬದುಕಿದ್ದರೆ, ಸಿಎಂ ಸಿದ್ದರಾಮಯ್ಯ ಅವರನ್ನು ಕರೆದು ಸನ್ಮಾನ ಮಾಡುತ್ತಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ, ಕೃಷಿ, ಗ್ರಾಮೀಣ ಹಾಗು ಶಿಕ್ಷಣ ಕ್ಷೇತ್ರಕ್ಕೆ ಸೀಮಿತವಾದಂತಹ ಬಜೆಟ್ ಇದಾಗಿದೆ. ಈ ರೀತಿಯ ಬಜೆಟ್ ಮಂಡಿಸಿ ಕೇಂದ್ರದತ್ತ ಬೊಟ್ಟು ಮಾಡಿದ್ದಾರೆ. ಕಾಂಗ್ರೆಸ್ಸಿಗೆ ಕೇವಲ ಮುಸ್ಲಿಮರು ಮಾತ್ರ ಕಣ್ಣಿಗೆ ಕಾಣುತ್ತಿದ್ದಾರೆ. ಮೊಹಮ್ಮದ್ ಅಲಿ ಜಿನ್ನಾ ಏನಾದ್ರೂ ಬದುಕಿದ್ದರೆ, ಸಿಎಂ ಸಿದ್ದರಾಮಯ್ಯ ಅವರನ್ನು ಕರೆದು ಸನ್ಮಾನ ಮಾಡುತ್ತಿದ್ದರು. ಪಾಕಿಸ್ತಾನ ರಚನೆ ಆಗಬೇಕು ಅಂತಾನು ಜಿನ್ನಾ ಕೇಳುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.…

Read More

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ದಾಖಲೆಯ 16ನೇ ಬಜೆಟ್ ಮಂಡಿಸಿದರು. ಸುಧೀರ್ಘ 3 ಗಂಟೆಗಳ ವರೆಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದರು. ಬಳಿಕ ವಿಧಾನಸೌಧದಲ್ಲಿ ಬಜೆಟ್ ಕುರಿತು ಸುದ್ದಿಗೋಷ್ಠಿ ನಡೆಸಿದರು. ಸುದಿಗೋಷ್ಠಿಯಲ್ಲಿ ನಾವು ಆಡಳಿತಕ್ಕೆ ಬಂದ ಮೇಲೆ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಮುಂದಿನ ವರ್ಷವೂ ಕೂಡ ಗ್ಯಾರಂಟಿಗಳು ಮುಂದುವರಿಯುತ್ತವೆ ಎಂದು ತಿಳಿಸಿದರು. ರಾಜ್ಯ ಬಜೆಟ್ ನಂತರ ವಿಧಾನಸೌಧದಲ್ಲಿ‌‌ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26 ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಲಾಗಿದ್ದು, ಕರ್ನಾಟಕ ಸರ್ಕಾರ ಕಳೆದ ಸಾಲಿನಲ್ಲಿ 3,71,121 ಕೋಟಿ ಬಜೆಟ್ ಮಂಡಿಸಿತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ಮೊದಲ ಬಾರಿಗೆ ನಮ್ಮ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು. ಕಳೆದ ಬಾರಿಗಿಂತ ಈ ಬಾರಿ 38,166 ಕೋಟಿ ರೂ.ಗಳು ಹೆಚ್ಚಾಗಿದೆ. ಬಜೆಟ್ ನ ಬೆಳವಣಿಗಯ ದರ…

Read More

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 26 ನೇ ಸಾಲಿನ ದಾಖಲೆಯ 16ನೇ ರಾಜ್ಯ ಬಜೆಟ್ ಮಂಡನೆ ಮಾಡಿದರು. ಈ ಒಂದು ಬಜೆಟ್ ಕುರಿತು ಬಿಜೆಪಿಯವರು ಇದೊಂದು ಹಲಾಲ್ ಬಜೆಟ್ ಎಂದು ಟೀಕಿಸಿದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರ ಮನಸ್ಸಿನ ಕೊಳಕು ಭಾವನೆ ಹೊರ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಒಂದು ಧರ್ಮವನ್ನು, ಜಾತಿಯನ್ನು ನೋಡಲು ಆಗಲ್ಲ. ಜಾತ್ಯಾತೀತವಾದಕ್ಕೆ ಅವರು ವಿರೋಧಿಗಳಾಗಿದ್ದಾರೆ. ಸಂವಿಧಾನ ವಿಚಾರಕ್ಕೆ ಅವರು ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಸಂಕುಚಿತ ಮನೋಭಾವನೆ ಇರುವವರು. ನಾವು ಧರ್ಮದ ಆಧಾರದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿಲ್ಲ. ಅವರಿಗೆ ಮುಸ್ಲಿಂರನ್ನು ವಿರೋಧಿಸುವುದೇ ರಾಜಕೀಯ ನಿಲುವು ಆಗಿದೆ. ಸರ್ವರಿಗೆ ಸಮಪಾಲು ಎಲ್ಲರಿಗೂ ಸಿಕ್ಕಿಲ್ಲ. ಆ ದಿಕ್ಕಿನಲ್ಲಿ ನಾವು ನಡೆಯುತ್ತಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳು ಎಸ್ ಸಿಎಸ್​ಪಿ ಟಿಎಸ್​ಪಿ ಕಾಯ್ದೆ ಮಾಡಿರುವುದು ತೋರಿಸಲಿ. ಕೇಂದ್ರಕ್ಕೆ ಕೇಳುವ ಧೈರ್ಯ ಬಿಜೆಪಿಯವರಿಗೆ ಇಲ್ಲ. ಅವರಿಗೆ…

Read More