Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಎಸ್ ಎಸ್ ಎಲ್ ಸಿ ಫೇಲ್ ಆಗಿ ಮನೆಯಲ್ಲಿ ಇದ್ದಂತಹ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನ YMRAC ಸರ್ಕಲ್ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು 17 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಮಂಜುನಾಥ್ ಅಪ್ಪ ಅಮ್ಮನ ಕಳೆದುಕೊಂಡು ಅಬ್ಬಿಗೆರೆಯಲ್ಲಿ ಚಿಕ್ಕಪ್ಪನ ಆಶ್ರಯದಲ್ಲಿದ್ದ.ಈ ವರ್ಷವಷ್ಟೇ SSLC ಪರೀಕ್ಷೆ ಬರೆದು ಫೇಲ್ ಆಗಿದ್ದ. ಆದರೆ ಮೊನ್ನೆ ರಾತ್ರಿ ಮನೆಯಿಂದ ಹೊರ ಹೋಗಿದ್ದ ಮಂಜುನಾಥ್ ನನ್ನ ಭೀಕರವಾಗಿ ಕೊಲೆ ಮಾಡಲಾಗಿದ್ದು, ಹತ್ಯೆ ಮಾಡಿದ ಪಾಪಿಗಳು ಎಸ್ಕೇಪ್ ಆಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮಂಜುನಾಥ್ ಡ್ರಿಂಕ್ಸ್ ಮಾಡಿದ್ದು ಅಲ್ಲದೆ ಗಾಂಜಾ ಸೇವನೆ ಕೂಡ ಮಾಡಿ ಬೀದಿಯಲ್ಲಿ ನಿಂತಿದ್ದ. ಈ ವೇಳೆ ಪೋಷಕರು ಹೋಗಿ ಮಂಜುನಾಥ್ ನನ್ನ ಮನೆಗೆ ಕರ್ಕೊಂಡ ಬಂದಿದ್ರು. ಆದರೆ ಮತ್ತೆ ಮಂಜುನಾಥ್ ಮಧ್ಯರಾತ್ರಿ ಎದ್ದು ಹೊರಗಡೆ ಹೋಗಿದ್ದವನು ವಾಪಾಸ್ ಬಂದಿಲ್ಲ. ಇದರಿಂದ ಸಹಜವಾಗಿ ಮನೆಯವರು ಗಾಬರಿಗೆ ಒಳಗಾಗಿದ್ದಾರೆ.ಈ ವೇಳೆ ಪೋಷಕರು…
ಬೀದರ್ : ಕೊಟ್ಟ ಸಾಲವನ್ನು ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯೊಬ್ಬ ಬಾಲ್ಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಯಾಕತನಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೀದರ್ ತಾಲ್ಲೂಕಿನ ಯಾಕತನಪುರ ಗ್ರಾಮದ ಬಳಿ ಈ ದುಷ್ಕೃತ್ಯ ನಡೆದಿದೆ. ಮೊಹಮ್ಮದ್ ಸಿರಾಜ್ ತಲೆಗೆ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ಮೊಹಮ್ಮದ್ ಸಿರಾಜ್ ನ ಬಾಲ್ಯ ಸ್ನೇಹಿತ ಯಾಸಿನಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಪ್ರಕರಣದ ಆರೋಪಿಯಾಗಿರುವ ಯಾಸಿನ್ ನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮನ್ನಾಖೆಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ರಾಮನಗರ : ಕಳೆದ ಕೆಲವು ತಿಂಗಳುಗಳ ಹಿಂದೆ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳು ಭಾರಿ ಸದ್ದು ಮಾಡಿದ್ದವು. ಇದೀಗ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹುಲಿಬಲೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಶಿಕ್ಷಕರ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ. ಹೌದು ಕನಕಪುರ ತಾಲೂಕಿನ ಹುಲಿಬಲೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಯನ್ನು ಶಾಲೆಯ ಐವರು ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು ಶನಿವಾರ ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛಗೊಳಿಸಿದ್ದಾರೆ ಎಂದು ಪೋಷಕರು ದೂರಿದ್ದಾರೆ.ಕೊಳವೆ ಆಕಾರದ ಸಿಮೆಂಟ್ ಟ್ಯಾಂಕ್ಗೆ ಏಣಿ ಸಹಾಯದಿಂದ ಮಕ್ಕಳನ್ನು ಒಳಗಡೆ ಇಳಿಸಿ ಸ್ವಚ್ಛಗೊಳಿಸುವಂತೆ ಮುಖ್ಯ ಶಿಕ್ಷಕರು ಸೂಚಿಸಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಶಾಲೆಗೆ ಧಾವಿಸಿದ ಪೋಷಕರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀರಿನ ತೊಟ್ಟಿ ಸ್ವಚ್ಛಗೊಳಿಸಲು ಶಾಲೆಯ ಸಿಬ್ಬಂದಿಗೆ ಸೂಚಿಸಲಾಗಿತ್ತು. ಅವರು ತಮ್ಮ ಜತೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿರುವುದು ಗೊತ್ತಿಲ್ಲ ಎಂದು ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ ಅವರು ಪೋಷಕರನ್ನು ಸಮಾಧಾನಪಡಿಸಲು ಯತ್ನಿಸಿದರು.ಇದರಿಂದ ಸಮಾಧಾನಗೊಳ್ಳದ ಪೋಷಕರು, ಮುಖ್ಯ…
ಹಾಸನ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ನೆಲೆಸಬೇಕೆಂದು ನಮ್ಮ ಸರ್ಕಾರ ಬಯಸುತ್ತದೆ. ಸರ್ವಜನಾಂಗದ ಶಾಂತಿಯ ತೋಟ ಆಗಬೇಕೆಂದು ನಾವು ಹೇಳಿದ್ದೆವು. ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಉಲ್ಲೇಖ ಮಾಡಿದ್ದೆವು. ವಿಪಕ್ಷದವರು ಕಾನೂನು ವ್ಯವಸ್ಥೆ ಕೆಟ್ಟು ಹೋಗಿದೆ ಎಂದು ಹೇಳುತ್ತಾರೆ.ಪೊಲೀಸರು ಇದ್ದರೂ ಕೊಲೆಗಳಾಗಿವೆ ಎಂದು ಆರೋಪ ಮಾಡಿದ್ದಾರೆ ಎಂದರು. ವಿರೋಧ ಪಕ್ಷಗಳ ಆರೋಪವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಕಳೆದ ಒಂದು ವರ್ಷದಿಂದ ಯಾವುದೇ ಧರ್ಮ ಸಂಘರ್ಷವಾಗಿಲ್ಲ.ಗೌರಿ ಗಣೇಶ ಹಬ್ಬ ಆಚರಣೆಯ ವೇಳೆ ಯಾವುದೇ ಗಲಾಟೆಯಾಗಿಲ್ಲ. ಮಂಗಳೂರು ಹುಬ್ಬಳ್ಳಿ ಶಿವಮೊಗ್ಗ ಕೋಮ ಸಂಘರ್ಷ ನಿಂತಿದೆ. ವಿಪಕ್ಷದವರಿಗೆ ಕಾನೂನು ಸವ್ಯವಸ್ಥೆ ಬಗ್ಗೆ ಅರ್ಥ ಕೇಳಬೇಕಾಗಿದೆ.ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಉತ್ತಮ. ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ತಿಳಿಸಿದರು.…
ಹಾಸನ : ಹಾಸನ ಜಿಲ್ಲೆಯಲ್ಲೂ ಕೆಲವು ಅಹಿತಕರ ಘಟನೆಗಳು ನಡೆದಿವೆ. ಹಾಗಂತ ಯಾವುದೇ ಒತ್ತಡಕ್ಕೆ ಮಾಡಿದಿಲ್ಲ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿದೆ ಎಂದು ಹಾಸನದಲ್ಲಿ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಹಾಸನ ಅಥವಾ ಯಾವುದೇ ಜಿಲ್ಲೆಗೆ ಸಂಬಂಧಿಸಿದರು ಎಲ್ಲರಿಗೂ ಕಾನೂನು ಒಂದೇ. ಯಾವುದೇ ಒತ್ತಡಕ್ಕೆ ಮಣಿಯುವ ಕೆಲಸವಾಗಿಲ್ಲ ಎಂದರು. ರಾಜ್ಯದಲ್ಲಿ ಸೈಬರ್ ಕ್ರೈಂ ಸಂಖ್ಯೆ ಹೆಚ್ಚಾಗಿದೆ. 2016ರಲ್ಲಿ ದೇಶದಲ್ಲಿ ಮೊದಲು ಸೈಬರ್ ಕ್ರೈಂ ಠಾಣೆಯನ್ನು ಆರಂಭಿಸಿದ್ದೆವು. ಕಾನೂನಾತ್ಮಕ ಶಕ್ತಿಯನ್ನು ಸೈಬರ್ ಪೋಲೀಸರಿಗೆ ನಾವು ಕೊಟ್ಟಿದ್ದೇವೆ ಎಂದು ಹಾಸನದಲ್ಲಿ ಗ್ರಾಇ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ವಿಜಯಪುರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ. ದೊಡ್ಡ ದೊಡ್ಡ ಜವಾಬ್ದಾರಿ ಇದ್ದವರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಕ್ರಮಕೈಗೊಳ್ಳುತ್ತಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕೆಂದು ಯತ್ನಾಳ್ ಒತ್ತಾಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡ ವಿ. ಸೋಮಣ್ಣ ಅವರ ದೂರು ಇದೆ ಎಂದು ಅವರು ತಿಳಿಸಿದರು. ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಲೋಕಸಭಾ ಸದಸ್ಯರು ಕೂಡ…
ಕೋಲಾರ : ತಾಲೂಕು ಕಚೇರಿಯಲ್ಲಿ 2 ಸಾವಿರ ಲಂಚ ಸ್ವೀಕರಿಸುವಾಗ FDA ಒಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಮಾಡಿದ್ದು ಲಂಚ ಸ್ವೀಕರಿಸುವಾಗ FDA ಅಧಿಕಾರಿ ತೇಜಸ್ ಭೂಷಣ ಲೋಕಾಯುಕ್ತ ಅಧಿಕಾರಿಗಳ ಬೆಲೆಗೆ ಬಿದ್ದಿದ್ದಾನೆ.2022 ರಲ್ಲಿ ಮಳೆಯಿಂದ ಕೂಸಿದಿದ್ದ ಮನೆಗೆ ಪರಿಹಾರ ನೀಡಲು ಲಂಚ ಕೇಳಿದ್ದ ಎಂದು ಆರೋಪಿಸಲಾಗಿದೆ. ಈ ಕುರಿತು ಗೊಲ್ಲಹಳ್ಳಿಯ ನಾರಾಯಣ ಸ್ವಾಮಿ ಬಳಿ 5 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿಯ ನಿವಾಸಿ ನಾರಾಯಣಸ್ವಾಮಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅರ್ಜಿ ಸಲ್ಲಿಸಿದ್ದರು ಮೊದಲ ಕಂತಿನ 90,000 ಹಣ ಬಿಡುವಡಿಗೆ ತೇಜಸ್ ಭೂಷಣ್ ಲಂಚದ ಬೇಡಿಕೆ ಇಟ್ಟಿದ್ದ. ಇದೀಗ ಲೋಕಾ ಬಲೆಗೆ ಬಿದ್ದಿದ್ದಾನೆ. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸದ್ಯ ತೇಜಸ್…
ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳು ಆರೋಪಿಗಳಾದ ಪದ್ಮನಾಭ ಹಾಗೂ ಪರಶುರಾಮ್ ರನ್ನು ಶಿವಮೊಗ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜುಲೈ 3ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕರಾದಂತಹ ಚಂದ್ರಶೇಖರನ್ ಅವರು ನಿಗಮದಲ್ಲಿ 187 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 3ರ ವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿ ಶಿವಮೊಗ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆ ಕೇಸಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಅವ್ಯವಹಾರ ನಡೆದಿತ್ತು. ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರನ್ ಆತ್ಮಹತ್ಯೆಗೆ ಶರಣಾಗಿದ್ದರು.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅಂಡ್ ಗ್ಯಾಂಗ್ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.ನಾಲ್ವರು ಆರೋಪಿಗಳನ್ನು ಸ್ಥಳಾಂತರಿಸಲು 24ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಲು ಕೋರ್ಟ್ ಆದೇಶಿಸಿದೆ. ನಟಿ ಪವಿತ್ರಾಗೌಡಗೆ ಅಶ್ಲೀಲ ಕಾಮೆಂಟ್ ಮಾಡಿದ್ದಾನೆಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಿತ್ತು.ಕೊಲೆ ಘಟನೆ ಬೆನ್ನಲ್ಲಿಯೇ ನಟ ದರ್ಶನ್ನಿಂದ 30 ಲಕ್ಷ ರೂ. ಹಣವನ್ನು ಪಡೆದು ತಾವೇ ಕೊಲೆ ಮಾಡಿದ್ದೆಂದು ನಾಲ್ವರು ಆರೋಪಿಗಳು ಸರೆಂಡರ್ ಆಗಿದ್ದರು. ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ A8- ರವಿ, A15-ಕಾರ್ತಿಕ್, A16- ಕೇಶವ ಮೂರ್ತಿ A17-ನಿಖಿಲ್ ನಾಯಕ್ ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಕೊಲೆ ಕೇಸಿನಲ್ಲಿ ಮೊದಲು ಕಾರ್ತೀಕ್, ಕೇಶವ್ ಹಾಗೂ ನಿಖಿಲ್ ಮೊದಲು ಪೊಲೀಸರ ಮುಂದೆ…
ಬೆಂಗಳೂರು : ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಭೀಕರವಾಗಿ ಕೊಲೆ ಮಾಡಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೌದು ಚಾಕುವಿನಿಂದ ಇರಿದು ಆಂಧ್ರಪ್ರದೇಶದ ಮೂಲದ ಪ್ರಿಯತಮೆ ಹೇಮಾವತಿ (35) ಎನ್ನುವವಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎನ್ನುವ ವ್ಯಕ್ತಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಾಲ್ಕು ತಿಂಗಳ ಹಿಂದೆ ವೇಣು ಹೇಮಾವತಿಯನ್ನು ಹೊಸಕೋಟೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಇರಿಸಿದ್ದ ಎನ್ನಲಾಗಿದೆ. ಹೇಮಾವತಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದಳು. ಆಗಾಗ ವೇಣು ಹೇಮಾವತಿ ಮನೆಗೆ ಬಂದು ಇದ್ದು ಹೋಗುತ್ತಿದ್ದ. ಆದರೆ ನಿನ್ನೆ ಮನೆಗೆ ಬಂದಿದ್ದ ವೇಣು ಕೊಲೆ ಮಾಡಿ ಮುಂಜಾನೆ ಅಲ್ಲಿಂದ ಪರಾರಿಯಾಗಿದ್ದಾನೆ.ಚಿಂತಾಮಣಿಗೆ ಹೋಗಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಕೂಡ ಯತಿದ್ದಾನೆ ಅಸ್ವಸ್ಥ ವೇಣುನನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












