Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ನವದೆಹಲಿ : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಸಹೋದರ ವಿನೋದ್ ಸೆಹ್ವಾಗ್ ಅರೆಸ್ಟ್ ಆಗಿದ್ದಾರೆ.ಹರಿಯಾಣ ಪೊಲೀಸರು ಇಂದು ಮಣಿಮಾಜ್ರಾ ಠಾಣಾ ವ್ಯಾಪ್ತಿಯಲ್ಲಿ ವಿನೋದ್ ಸೆಹ್ವಾಗ್ ಅವರನ್ನು ಬಂಧಿಸಿದ್ದಾರೆ. ಹೌದು ವಿನೋದ್ ಹರಿಯಾಣದ ಚಂಡೀಗಢ ಬಳಿ ಕೂಲ್ ಡ್ರಿಂಕ್ಸ್ ಫ್ಯಾಕ್ಟರಿ ನಡೆಸುತ್ತಿದ್ದಾರೆ. ವಿನೋದ್ ಮತ್ತು ಆತನ ಪಾಲುದಾರರು ಹಿಮಾಚಲ ಪ್ರದೇಶದಲ್ಲಿರುವ ನೈನಾ ಪ್ಲಾಸ್ಟಿಕ್ ಕಾರ್ಖಾನೆಯಿಂದ ತಂಪು ಪಾನೀಯ ತುಂಬುವ ಪ್ಲಾಸ್ಟಿಕ್ ಬಾಟಲಿಗಳನ್ನು ಖರೀದಿಸಿ 7 ಕೋಟಿ ರೂ ಮೊತ್ತದ ಚೆಕ್ಗಳನ್ನು ನೀಡಿದ್ದರು. ಆದರೆ ಚೆಕ್ ಕ್ಯಾಷ್ ಆಗದೆ ಬೌನ್ಸ್ ಆಗಿದ್ದವು. ಈ ಕುರಿತು ವಿನೋದ್ ಸೆಹ್ವಾಗ್ ವಿರುದ್ಧ ನ್ಯಾಯಾಲಯದಲ್ಲಿ 7 ಕೋಟಿ ರೂ.ಗಳ ಚೆಕ್ ಬೌನ್ಸ್ ಪ್ರಕರಣ ನಡೆಯುತ್ತಿದೆ. ಈ ಪ್ರಕರಣದಲ್ಲಿ ಅವರು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಾಯಿತು. ಆದರೆ ಅವರು ಹಾಜರಾಗದ ಕಾರಣ, ನ್ಯಾಯಾಲಯ ಅವರನ್ನು ತಲೆಮರೆಸಿಕೊಂಡಿರುವ ಆರೋಪಿ ಎಂದು ಘೋಷಿಸಿತು. ನ್ಯಾಯಾಲಯವು ವಿನೋದ್ ಸೆಹ್ವಾಗ್ ಅವರನ್ನು ತಲೆಮರೆಸಿಕೊಂಡಿರುವ ಆರೋಪಿ ಎಂದು ಘೋಷಿಸಿದ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ ಬಳಿಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೌದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮೈಸೂರು ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಹಾಕುತ್ತಾರೆ ಎಂದು ನಿರೀಕ್ಷೆಯಿತ್ತು. ಬಿ ರಿಪೋರ್ಟ್ ಹಾಕುತ್ತಾರೆ ಎಂದು ನಮಗೆ ಮೊದಲೇ ಗೊತ್ತಾಗಿತ್ತು.ವಿಶೇಷ ಕೋರ್ಟಿಗೆ ಈಗ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದೇನೆ. ತಕರಾರು ಅರ್ಜಿಯಲ್ಲಿ ಆರೋಪ ಸಾಬೀತಾಗುವಂತಹ ಅಂಶಗಳಿವೆ ಎಂದರು. ಕೋರ್ಟ್ನಲ್ಲಿ ನನ್ನ ಪರವಾಗಿ ನಾನೆ ವಾದ ಮಂಡಿಸುವೆ. ಕಾನೂನು ಅರಿವು ಇರುವವರು ತಮ್ಮ ಪರವಾಗಿ ತಾವೇ ವಾದ ಮಂಡನೆ ಮಾಡಬಹುದು.ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ…
ಬೆಂಗಳೂರು : ರಾಮಚಂದ್ರಾಪುರ ಮಠದ ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಎದುರಿಸಿದ್ದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಜಿ ವಿರುದ್ಧ ಇದೀಗ 2ನೇ ಅತ್ಯಾಚಾರ ಪ್ರಕರಣ ಕೂಡ ರದ್ದಾಗಿದೆ. ಈ ಕುರಿತು ಕೇಸ್ ರದ್ದುಪಡಿಸಿ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಹೌದು 2ನೇ ಅತ್ಯಾಚಾರ ಪ್ರಕರಣದಲ್ಲೂ ರಾಘವೇಂದ್ರ ಶ್ರೀಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ರಕರಣವನ್ನು ರದ್ದಪಡಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ. 2015 ರಲ್ಲಿ ಮಹಿಳೆಯೊಬ್ಬರು ಪ್ರಕರಣವನ್ನು ದಾಖಲಿಸಿದ್ದರು. ಸಿಐಡಿ ಪೊಲೀಸರು ಶ್ರೀಗಳ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು. ವೈಯಕ್ತಿಕ ವೈವಾಹಿಕ ಸಮಸ್ಯೆಯಿಂದ ಮಹಿಳೆ ಕೇಸ್ ದಾಖಲಿಸಿದ್ದಾರೆ ಎಂದು ವಾದ ಮಂಡಿಸಲಾಯಿತು. ದುರುದೇಶದಿಂದ ಅತ್ಯಾಚಾರದ ದೂರು ನೀಡಿದ್ದಾರೆ ಎಂದು ವಾದಿಸಲಾಗಿತ್ತು. ರಾಘವೇಶ್ವರ ಶ್ರೀಗಳ ಪರವಾಗಿ ವಕೀಲ ಪಿಎನ್ ಮನಮೋಹನ್ ವಾದಿಸಿದ್ದರು.ಇದೀಗ ಕೇಸ್ ರದ್ದುಪಡಿಸಿ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಸ್ವಾಮೀಜಿ ವಿರುದ್ಧ ಆರೋಪವೇನು? 2014ರ ಆ.17ರಂದು ಗಾಯಕಿ ತನ್ನ…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಏಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೇದಿರೇನಹಳ್ಳಿಯಲ್ಲಿ ನಡೆದಿದೆ. ಹೌದು ಚಿಂತಾಮಣಿ ತಾಲೂಕಿನ ಮುಂತಕೇದಿರೇನಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮುಂತಕೇದಿರೇನಹಳ್ಳಿಯ ಶ್ರೀಕಾಂತ್ (25) ಲೋಕೇಶ್ (28) ಮತ್ತು ರಮೇಶ್ (24) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…
ಹುಬ್ಬಳ್ಳಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 202-26ನೇ ಸಾಲಿನ ದಾಖಲೆಯ 16ನೇ ಬಜೆಟ್ ಮಂಡಿಸಿದರು. ಈ ಒಂದು ಬಜೆಟ್ ಮಂಡನೆ ವಿಷಯದ ಕುರಿತು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಇನ್ನು ಮೂರು ವರ್ಷ ಸಿಎಂ ಆಗಿರುತ್ತಾರೆ ಎಂಬುದು ನಮ್ಮ ಭಾವನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5 ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿಯುತ್ತಾರೆ ಎಂದು ಹೇಳಿಲ್ಲ. ಕೆಲವರು ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಇನ್ನು ಮೂರು ವರ್ಷ ಇರುತ್ತಾರೆ ಎಂಬುದು ನಮ್ಮ ಭಾವನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ನಟಿ ರನ್ಯಾರಾವ್ ದುಬೈ ನಿಂದ ಬೆಂಗಳೂರಿಗೆ 14 ಕೆಜಿ ಚಿನ್ನ ಅಕ್ರಮವಾಗಿ ಸಾಗಿಸಿದ್ದರು. ಇದೀಗ ಮತ್ತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ 3 ಕೆಜಿ 995 ಗ್ರಾಂ ಚಿನ್ನ ಸಾಗಿಸಿದ್ದು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು 3 ಕೋಟಿ 44 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 995 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆm ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ದುಬೈ ನಿಂದ ಪ್ರಯಾಣಿಕನೊಬ್ಬ ಬೆಂಗಳೂರಿಗೆ ಆಗಮಿಸಿದ್ದ ಶರ್ಟ್ ನ ಒಳಭಾಗದಲ್ಲಿ ಚಿನ್ನ ಅಡವಿಟ್ಟುಕೊಂಡು ಪ್ರಯಾಣಿಕ ಬಂದಿದ್ದ. ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : 2015ರಲ್ಲಿ ಮಾಜಿ ಸಚಿವ ಆನಂದ ಸಿಂಗ್ ವಿರುದ್ಧ ದಾಖಲಾಗಿದ್ದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣ ಸಂಬಂಧ, ಇದೀಗ ಮಾಜಿ ಸಚಿವ ಆನಂದ್ ಸಿಂಗ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಾಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದಿರು ಸಾಗಣೆ ಪ್ರಕರಣದಲ್ಲಿ ಆನಂದ್ ಸಿಂಗ್ ಅವರನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶಿಸಿದೆ. ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದ್ದು, ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಆನಂದ್ ಸಿಂಗ್ ಹಾಗು ಗೋವಾ ಸಚಿವ ರೋಹನ್ ಕೌಂಟೇಗು ಬಿಗ್ ರಿಲೀಫ್ ಸಿಕ್ಕಿದೆ. ಅಕ್ರಮ ಅದಿರು ಸಾಗಣೆ ಪ್ರಕರಣದ ಆರೋಪಿಯಾಗಿದ್ದ ರೋಹನ್ ಕೌಂಟೆ ಅವರಿಗೂ ಕೂಡ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಹಿನ್ನೆಲೆ? 16,976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ಆರೋಪ, ಜೈಸಿಂಗ್ಪುರದ ಬಳಿ SVK ಫ್ಲಾಟ್ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದಡಿ ಆನಂದ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಕ್ರಮ ಗಣಿಗಾರಿಕೆ…
ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇದೀಗ ರದ್ದುಗೊಳಿಸಿ ಚೆಲುವರಾಜು ಸಲ್ಲಿಸಿದ್ದ ಅರ್ಜಿ ರದ್ದುಪಡಿಸಲು ಹೈ ಕೋರ್ಟ್ ನಿರಾಕರಿಸಿದೆ. ಪ್ರಕರಣ ಹಿನ್ನೆಲೆ? ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಕಳೆದ ಸೆಪ್ಟೆಂಬರ್ 24 2024 ರಂದು ಅರೆಸ್ಟ್ ಮಾಡಲಾಗಿತ್ತು. ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣ ನೀಡುವಂತೆ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಪ್ರಮುಖ ಆರೋಪಿ ಶಾಸಕ ಮುನಿರತ್ನ ಆಗಿದ್ದಾರೆ. ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3…
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದರು. 2025-26ನೇ ಸಾಲಿನ ಬಜೆಟ್ ಮಂಡನೆ ಕುರಿತು ಇಂದು ಬೆಂಗಳೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.ಸಾಲ ಹೆಚ್ಚಾಗಿದೆ ಎಂದು ವಿಪಕ್ಷ ನಾಯಕರು ಹೇಳಿಕೆಗೆ ಆರ್. ಅಶೋಕ್ ಹಣಕಾಸಿನ ಜವಾಬ್ದಾರಿ & ಬಜೆಟ್ ನಿರ್ವಹಣಾ ಕಾಯ್ದೆಯ ಬಗ್ಗೆ ಓದಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 4,09,549 ಕೋಟಿ ರೂಪಾಯಿ ಬಜೆಟ್ ಮಂಡಿಸಿದ್ದೇನೆ. ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ಹೆಚ್ಚಾಗಿದೆ. 38,166 ಕೋಟಿ ರೂಪಾಯಿ ಹೆಚ್ಚಾಗಿದೆ. ಇದೊಂದು ಪೂರ್ಣಪ್ರಮಾಣದ ಬಜೆಟ್ ಆಗಿದೆ. ಕಳೆದ ಬಾರಿಗಿಂತ ಈ ಬಾರಿ ಬೆಳವಣಿಗೆ ಇದರ ಶೇಕಡ 10.3ರಷ್ಟು ಹೆಚ್ಚಾಗಿದೆ ಈ ಬಾರಿ 2,92, 476 ಕೋಟಿ ರಾಜಸ್ವ ಸಂಗ್ರಹವಾಗಿದೆ. ರಾಜಸ್ವ 3,11,738 ಕೋಟಿ ರೂಪಾಯಿ ಆಗಿದೆ. ಸಾಲ ಹೆಚ್ಚಾಗಿದೆ ಎಂದು ವಿಪಕ್ಷ ನಾಯಕರು ಹೇಳುತ್ತಾರೆ. ಜೆಎಸ್ಡಿಪಿ ಶೇಕಡ 25ರೊಳಗೆ ಸಾಲದ ಪ್ರಮಾಣ ಇರಬೇಕು ಆರ್ಥಿಕವಾಗಿ ಶೇ. 25 ರಷ್ಟು…













