Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಚಿಕ್ಕಮಗಳೂರು ಭಾಗದಲ್ಲಿ ನಕ್ಸಲ ಚಟುವಟಿಕೆ ಹಿನ್ನೆಲೆಯಲ್ಲಿ ಇಂದು ಪೊಲೀಸರು ಹಾಗೂ ನಕ್ಸಲ್ ವಿಕ್ರಂ ಗೌಡ ಮಧ್ಯ ಗುಂಡಿನ ಚಿಕಮಕಿ ನಡೆದಿದ್ದು ಇದರಲ್ಲಿ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಲಾಗಿದೆ ಆದರೆ ಅವರ ಜೊತೆಗಿದ್ದ ಮೂವರು ಪರಾರಿ ಯಾಗಿದ್ದು ಇದೀಗ ಗುಂಡಗಾರು ಲತಾ ಜಯಣ್ಣ ಸೇರಿದಂತೆ ಮೂವರ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಮುಂಡಗಾರು ಲತಾ, ಜಯಣ್ಣ ಸೇರಿ ಮೂವರ ವಿರುದ್ಧ ಕೇಸ್ ದಾಖಲಾಗಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಇದೀಗ ಮೂವರ ವಿರುದ್ಧ FIR ದಾಖಲಾಗಿದೆ. UAPA 1967 ಅಡಿ 329 (4) 351(2) 61(2) 147 BNS 25 B ಶಾಸ್ತ್ರಸ್ತ್ರ ಕಾಯಿದೆ 110, 13, 16,18, 20 38ರ ಅಡಿ ಪ್ರಕರಣ ದಾಖಲಾಗಿದೆ. ನಕ್ಸಲರು ಪ್ರಯಾರಿಯಾದ ಸ್ಥಳದಲ್ಲಿ ಶಾಸ್ತ್ರಸ್ತ್ರ, ಮೂರು ಎಸ್ ಬಿ ಎಂ ಎಲ್ ಬಂದೂಕು ಹಾಗೂ ಮದ್ದು ಗುಂಡುಗಳು ಪತ್ತೆಯಾಗಿದ್ದವು. ಮುಂಡಗಾರು ಲತಾ ಮತ್ತು ತಂಡ ಸುಬ್ಬೆಗೌಡ ಮನೆಗೆ ಭೇಟಿ ನೀಡಿತ್ತು.…
ಬೆಂಗಳೂರು : ಮಹಾರಾಷ್ಟ್ರದ ಚುನಾವಣೆ ಹಿನ್ನೆಲೆಯಲ್ಲಿ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿನ್ನೆ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಭಾರತದ ರಾಜಕೀಯದಲ್ಲಿ ಅತ್ಯಂತ ಅಪಾಯಕಾರಿ ಏನಾದರೂ ಇದ್ದರೆ ಅದು ಬಿಜೆಪಿ ಮತ್ತು ಆರ್ಎಸ್ಎಸ್ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗಾಗಲೇ ದೇಶದ ಜನತೆ ಕಾಂಗ್ರೆಸ್ ಘಟಸರ್ಪದ ಹಲ್ಲನ್ನು ಕಿತ್ತೇಸಿದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಟ್ವೀಟ್ ನಲ್ಲಿ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಾನ್ಯ @kharge ಅವರೇ,ನಿಮ್ಮ ಹಿರಿತನದ ಬಗ್ಗೆ ಗೌರವ ಇದ್ದೇ ಇದೆ, ಆದರೆ ನಿಮ್ಮ ಬಾಯಿಂದ ಹೊರಡುವ ನಂಜುಕಾರುವ ದ್ವೇಷದ ಮಾತುಗಳನ್ನು ಒಪ್ಪಲಾರೆವು. ಕೋಟಿ,ಕೋಟಿ ಜನರ ಹೋರಾಟ, ತ್ಯಾಗ- ಬಲಿದಾನದ ಫಲವಾಗಿ ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತಗೊಳಿಸಿಕೊಂಡ ಸ್ವಾತಂತ್ರ್ಯವನ್ನು ನೆಹರೂ ಕುಟುಂಬ ತನ್ನ ಮುಷ್ಟಿಯಲ್ಲಿ ಹಿಡಿದಿಟ್ಟುಕೊಂಡು ಪ್ರಜಾಪ್ರಭುತ್ವದೊಂದಿಗೆ ಚೆಲ್ಲಾಟವಾಡಿ, ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕಲು ‘ತುರ್ತು ಪರಿಸ್ಥಿತಿ ಎಂಬ ವಿಷಕಾರಿ ಅಣ್ವಸ್ತ್ರ’ವನ್ನು ದೇಶದ ಮೇಲೆ ಬಳಸಿದ್ದು ನಿಮ್ಮ @INCIndia ಎಂಬುದನ್ನು ಇಷ್ಟು ಬೇಗ…
ಶಿವಮೊಗ್ಗ : ಕೇಂದ್ರಿಯ ಮೃಗಾಲಯ ಪ್ರಾಧಿಕಾರ ನವದೆಹಲಿರವರಿಂದ ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ ಮೃಗಾಲಯಗಳ ನಡುವೆ ಹೆಚ್ಚುವರಿಯಾಗಿರುವ ಪ್ರಾಣಿಗಳನ್ನು ನ.11 ರಿಂದ ನ.16ರ ವರೆಗೆ ವಿನಿಮಯ ಕಾರ್ಯಕ್ರಮ ನಡೆಸಲಾಗಿದೆ. ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಿಂದ ಮಾರ್ಶ್ ಕ್ರೋಕಡೈಲ್, ಸ್ಟ್ರೀಪಿಡ್ ಹೈನಾ, ಇಂಡಿಯನ್ ಗೋಲ್ಡನ್ ಜಾಕಲ್, ಏ಼ಷೀಯನ್ ಪ್ಲಾಮ್ ಸಿವೀಟ್ ಪ್ರಾಣಿಗಳು ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ಗೆ ಕಳುಹಿಸಲಾಗಿದೆ.ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ನಿಂದ ಘಾರಿಯಾಲ, ಲೇಸ್ಸರ್ ರೀಹಾ, ಸ್ಟ್ರೀಪಿಡ್ ಹೈನಾ, ಇಂಡಿಯನ್ ಕ್ರೈಸ್ಟೇಡ್ ಪೋರ್ಕಪೈನ್, ಸನ್ ಕೌನ್ಸರ್ ಪ್ರಾಣಿಗಳನ್ನು ತ್ಯಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ತರಲಾಗಿದೆ. ಹುಲಿ-ಸಿಂಹಧಾಮ ತ್ಯಾವರೆಕೊಪ್ಪ ಮೃಗಾಲಯಕ್ಕೆ ಘಾರಿಯಾಲ ಸೇರ್ಪಡೆಗೊಂಡಿದ್ದು ಹಾಗೂ ಪ್ರಥಮ ಬಾರಿ ಮೃಗಾಲಯಕ್ಕೆ ತೀವ್ರವಾಗಿ ಅಳಿವಿನಂಚಿನಲ್ಲಿರುವ ಜಾತಿ ಸಂರಕ್ಷಣೆಯ ಬಗ್ಗೆ ಪ್ರಕೃತಿ ಶಿಕ್ಷಣ ನೀಡಲು ಈ ಪ್ರಭೇದದಿಂದ ಸಹಾಯಕವಾಗಲಿದೆ. ಪ್ರಥಮ ಬಾರಿ ಮೃಗಾಲಯಕ್ಕೆ ಸೌತ್ ಆಫ್ರೀಕನ್ಕ್ಕೆ ಸಂಬಂಧಿಸಿದ ಪಕ್ಷಿಗಳ ಪ್ರಭೇದವಾದ ಲೇಸ್ಸರ್ ರೀಹಾ ಮತ್ತು ಸನ್ ಕೌನ್ಸರ್ ಸೇರ್ಪಡೆಯಾಗಿರುತ್ತವೆ. ಭಾರತೀಯ ಕ್ರೆಸ್ಟೆಡ್ ಮುಳ್ಳುಹಂದಿ ಬಹುದಿನಗಳ ನಂತರ ಹುಲಿ-ಸಿಂಹಧಾಮ ತ್ಯಾವರೆಕೊಪ್ಪ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಇಂದು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ಲೋಕಾಯುಕ್ತ ವಿಚಾರಣೆಗೆ ಹಾಜರಾದರು. ನಿನ್ನೆ ಲೋಕಾಯುಕ್ತ ಎಸ್ ಪಿ ಟಿಜೆ ಉದೇಶ್ ರವರು ವಿಚಾರಣೆಗೆ ಹಾಜರಾಗುವಂತೆ ನಟೇಶ್ ಗೆ ನೋಟಿಸ್ ಜಾರಿ ಮಾಡಿದ್ದರು. ಹಾಗಾಗಿ ಇಂದು ನಟೇಶ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಮೈಸೂರಿನಲ್ಲಿ ವಿಚಾರಣೆಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು ಲೋಕಾಯುಕ್ತ ನೋಟಿಸ್ ನೀಡಿದರಿಂದ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾದಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬದರಿ ನಿವೇಶನ ನೀಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಟೇಶ್ ವಿಚಾರಣೆಗಾಗಿ ಲೋಕಾಯುಕ್ತ ಮುಖ್ಯ ಕಾರ್ಯದರ್ಶಿಗಳ ಅನುಮತಿಯನ್ನು ಕೋರಿದ್ದರು. ಕಳೆದ ಎರಡು ದಿನಗಳ ಹಿಂದೆ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟೇಶ್ ಇಂದು ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.
ಬೆಂಗಳೂರು : ಈಗಾಗಲೇ ಕಳೆದ ನವೆಂಬರ್ 13 ರಂದು ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆದಿದ್ದು, 23 ರಂದು ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿಪಿ ಯೋಗೇಶ್ವರ್ ಅವರ ವಿರುದ್ಧ ಸಹಿ ನಕಲು ಮಾಡಿದ್ದರ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. ಹೌದು ಸಿಪಿ ಯೋಗೇಶ್ವರ್ ಅವರ ಮೊದಲನೇ ಪತ್ನಿಯ ಪುತ್ರ ಶ್ರವಣ್ ಅವರ ಸಹಿ ನಕಲು ಮಾಡಿದ ಆರೋಪದಡಿ ಸಿಪಿ ಯೋಗೇಶ್ವರ್ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಪ್ರಕರಣದ ವಿಚಾರಣೆ ನಾಳೆ ನಡೆಯಲಿದೆ. ದೂರು ನೀಡಲು ಕಾರಣ ಏನೆಂದರೆ ಬೆಂಗಳೂರಿನಲ್ಲಿ ಸಿಪಿ ಯೋಗೇಶ್ವರ್ ಮೊದಲನೇ ಪತ್ನಿ ಹಾಗೂ ಪತ್ರ ಶ್ರವಣ್ ಬೆಂಗಳೂರಿನಲ್ಲಿ ಮನೆ ಖರೀದಿಸಿದ್ದರು. ಈ ಮನೆಯನ್ನು ಸಿಪಿ ಯೋಗೇಶ್ವರ್ ಅವರ ಮೊದಲನೇ ಪತ್ನಿ ಹಾಗೂ ಪುತ್ರ ಶ್ರವಣ್, ನಿಶಾಗೆ ಹುಡುಗರೆಯಾಗಿ ನೀಡಿದ್ದಾರೆ. ಆದರೆ ಸಿಪಿ ಯೋಗೇಶ್ವರ್ ಅವರು ಪುತ್ರ ಶ್ರವಣ್ ಅವರ ಸಹಿ ನಕಲು ಮಾಡಿ ಇದರಲ್ಲಿ…
ಚಿತ್ರದುರ್ಗ : ಪತಿಯ ಸಾವಿನಿಂದ ಮನನೊಂದ ಪತ್ನಿ ಹಾಗೂ ಪುತ್ರಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ತಾಯಿ ಗೀತಾ (45) ಮಗಳು ಲಾವಣ್ಯ (17) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಂದು ವಾರದ ಬಳಿಕ ಬೆಳಕಿಗೆ ಬಂದಿದೆ. ವಾರದ ಹಿಂದೆಯೇ ತಾಯಿ ಮಗಳು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇಂದು ಕೊಳೆತ ಸ್ಥಿತಿಯಲ್ಲಿ ತಾಯಿ ಮತ್ತು ಮಗಳ ಶವಗಳು ಪತ್ತೆಯಾಗಿವೆ. ಪತಿ ಸಾವಿನಿಂದ ಖಿನ್ನತೆಗೆ ಒಳಗಾಗಿ ಗೀತಾ ಹಾಗೂ ಪುತ್ರಿ ಲಾವಣ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆರು ತಿಂಗಳ ಹಿಂದೆ ಗೀತಾಪತಿ ಬಸವರಾಜ್ ಹೃದಯಘಾತದಿಂದ ಸಾವನ್ನಪ್ಪಿದ್ದರು. ಪತಿ ಬಸವರಾಜ್ ಸಾವಿನಿಂದ, ಗೀತಾ ಹಾಗೂ ಮಗಳು ಲಾವಣ್ಯ ತೀವ್ರವಾಗಿ ಮನನೊಂದಿದ್ದರು ಹಾಗಾಗಿ ಒಂದು ವಾರದ ಹಿಂದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನೆ ಕುರಿತಂತೆ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದ ಆಡಳಿತ ವರ್ಗದಲ್ಲಿ ಸಂಚಲನ ಸೃಷ್ಟಿಸಿರುವ ಕೆಐಎಡಿಬಿ ಹಗರಣ ಆರೋಪ ಕುರಿತಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖಾ ಪ್ರಕ್ರಿಯೆಯನ್ನು ಆರಂಭಿಸಿದೆ. ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಭೂ ಪರಿಹಾರ ವಿತರಣೆ ಕುರಿತಂತೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಸಲ್ಲಿಸಿರುವ ದೂರಿನ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಐಎಡಿಬಿ ಕಾರ್ಯನಿರ್ವಹಣಾಧಿಕಾರಿಗಳಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ. ಏನಿದು ಆರೋಪ? ದೇವನಹಳ್ಳಿ ಸುತ್ತಮುತ್ತ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ಹಣ ವಿತರಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ‘ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು, ಮುಖ್ಯಮಂತ್ರಿ, ಕೈಗಾರಿಕಾ ಸಚಿವರಿಗೆ ದೂರು ನೀಡಿದ್ದರು. ಕೆಐಎಡಿಬಿ ಭೂಸ್ವಾಧೀನಾಧಿಕಾರಿಯಾಗಿರುವ ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ಅವರ ವಿರುದ್ದ ಗುರುತರ ಆರೋಪ ಮಾಡಿ ಈ ದೂರು ಸಲ್ಲಿಕೆಯಾಗಿದೆ. ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಒಡೆತನದ ಭೂಮಿ ಎಂದು ಪರಿಗಣಿಸಿ ಅಕ್ರಮವಾಗಿ ಪರಿಹಾರದ ಹಣ ಪಾವತಿಸಲಾಗಿದೆ ಎಂದು, ನಿವೇಶನ ಹಂಚಿಕೆಯಲ್ಲೂ ಅಕ್ರಮ ನಡೆದಿದೆ…
ರಾಯಚೂರು : ರಾಯಚೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಕೂಲಿ ಕಾರ್ಮಿಕರನ್ನು ಹೊತ್ತುಯುತ್ತಿದ್ದ ಗೂಡ್ಸ್ ಆಟೋ ಒಂದು ಚಾಲಕನ ನಿಯಂತ್ರಣ ತಪ್ಪಿ ಕಾಲುವೆ ಬಿದ್ದ ಪರಿಣಾಮ ಹಲವರಿಗೆ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ NRBC ಕಾಲುವೆ ಬಳಿ ನಡೆದಿದೆ. ಹೌದು ಕೂಲಿ ಕಾರ್ಮಿಕರ ಸಮೇತ ಕಾಲುವಿಗೆ ಬಿದ್ದು ದುರಂತ ಸಂಭವಿಸಿದೆ. ನಿನ್ನೆ ಸಂಜೆ ದೇವದುರ್ಗದ ಎನ್ ಆರ್ ಬಿ ಸಿ ಕಾಲುವೆಯಲ್ಲಿ ಈ ಒಂದು ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಆಟೋ ಕಾಲುವೆಗೆ ಬಿದ್ದಿದೆ. ಕಾಲುವೆಯೊಳಗೆ ಚಾಲಕ ಸೇರಿ 10 ಕೂಲಿ ಕಾರ್ಮಿಕರು ಸಿಲುಕಿ ಒದ್ದಾಟ ನಡೆಸಿದ್ದಾರೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಇದ್ದವರ ರಕ್ಷಣೆಗೆ ಧಾವಿಸಿದ್ದಾರೆ. ಹಗ್ಗ ಕಟ್ಟಿ ಗೂಡ್ಸ್ ಆಟೋವನ್ನು ಮೇಲೆ ಎತ್ತಿದ್ದಾರೆ. ಗೂಡ್ಸ್ ಆಟೋಗಳಲ್ಲಿ ಪ್ರಯಾಣಿಕರನ್ನು ಕರೆದೋಯುತ್ತಿದ್ದ ಚಾಲಕರ ವಿರುದ್ಧ ಇದೀಗ ಸ್ಥಳೀಯರು ಕಿಡಿಕಾರಿದ್ದು, ಗೂಡ್ಸ್ ಆಟೋ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಹಿತಿ ನೀಡಿದ್ದು, 20 ವರ್ಷಗಳಿಂದ ಪೊಲೀಸರ ಹುಡುಕಾಟದಲ್ಲಿದ್ದ ಗೌಡ, ಪೊಲೀಸರ ಮೇಲೆ ಗುಂಡು ಹಾರಿಸಿದಾಗ ಪೊಲೀಸರು ಕೂಡ ಪ್ರತಿ ದಾಳಿ ನಡೆಸಿ ಗ್ರೇಡೆಡ್ ನಕ್ಸಲನ್ನು ಎನ್ಕೌಂಟರ್ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 20 ವರ್ಷಗಳಿಂದ ನಕ್ಸಲ್ ವಿಕ್ರಂ ಗೌಡನನ್ನು ಹಿಡಿಯಲು ಆಗಿರಲಿಲ್ಲ. ಖಚಿತ ಮಾಹಿತಿಯ ಮೇರೆಗೆ ವಿಕ್ರಂ ಗೌಡನನ್ನು ಹಿಡಿಯಲು ಹೋಗಿದ್ದರು. ಈ ವೇಳೆ ವಿಕ್ರಂ ಗೌಡ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಕೂಡಲೇ ಪೊಲೀಸರು ಪ್ರತ್ಯುತ್ತರ ನೀಡಿ ಎನ್ಕೌಂಟರ್ ಮಾಡಿದ್ದಾರೆ ಎಂದು ಮಾಹಿತಿ ಬಂದಿದೆ. ಸಂಪೂರ್ಣ ಮಾಹಿತಿ ಲಭಿಸಿದ ಮೇಲೆ ತಿಳಿಸುವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ನಿನ್ನೆ ಸಂಜೆ ವಿಕ್ರಂ ಗೌಡ ಎನ್ಕೌಂಟರ್ ಆಗಿದೆ. ಆತನ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಆತನ ಚಲನವಲನಗಳ ಮೇಲೆ…
ಬೆಂಗಳೂರು : ಶಬರಿಮಲೆಯ ಅಯ್ಯಪ್ಪ ಸ್ವಾಮಿ ದರ್ಶನ ಪಡೆದುಕೊಂಡು ಹಿಂತಿರುಗುವಾಗ ಕರ್ನಾಟಕದ ಯಾತ್ರಿಕರು ಇದ್ದಂತಹ ಮಿನಿ ಬಸ್ ಒಂದು ಕೇರಳದ ವಯನಾಡ್ ಎಂಬಲ್ಲಿ ಬಸ್ ಪಲ್ಟಿಯಾಗಿದೆ.ಈ ಒಂದು ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ. ಶಬರಿಮಲೆಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ಕರ್ನಾಟಕದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು. ಸಹ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಕೂಡಲೇ ರಕ್ಷಣಾ ಕಾರ್ಯಗಳನ್ನು ನಡೆಸಿದರು. ಬಸ್ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಂದಾಜಿಸಲಾಗಿದೆ.ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.














