Author: kannadanewsnow05

ಬೆಳಗಾವಿ : ಮೋದಿ ಸತ್ತರೆ ಮುಂದೆ ಯಾರು ಪ್ರಧಾನಿ ಆಗೋದೇ ಇಲ್ವಾ? ಎಂದು ಕಾಂಗ್ರೆಸ್ ಶಾಸಕ ರಾಜುಕಾಗೆ ಹೇಳಿಕೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಕಾಂಗ್ರೆಸ್ಸಿಗರು,ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಕಾಂಗ್ರೆಸ್ ಪಕ್ಷದ ಹೀನ ಸಂಸ್ಕೃತಿಯ ದ್ಯೋತಕವಾಗಿದೆ ಎಂದು ಆಕ್ರೋಶ ಹೊರಹಾಕಿದರು. ಮೋದಿಯವರ ಸಾವು ಕಾಂಗ್ರೆಸ್ ಏಕೆ ಬಯಸುತ್ತದೆ? ಆರ್ಟಿಕಲ್ 370 ರದ್ದುಗೊಳಿಸಿ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ? ಐದು ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ? ಅಥವಾ ದೇಶವನ್ನು ಮುಖ್ಯ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ನಿಯಂತ್ರಿಸಿದಕ್ಕ? ಎಂದು ಪ್ರಶ್ನಿಸಿದರು.

Read More

ಬೆಂಗಳೂರು : ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಿಗಳಿಗೆ ಸಹಾಯ ಆರೋಪದ ಹಿನ್ನೆಲೆಯಲ್ಲಿ ಡಿ ವೈ ಎಸ್ ಪಿ ಶ್ರೀಧರ್ ಕೆಗೆ ಇದೀಗ ಹೈಕೋರ್ಟ್ ರಿಲೀಫ್ ನೀಡಿದ್ದು, ಘೋಷಿತ ಆರೋಪಿ ಆದೇಶವನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸದೆ ತಲೆ ಮರೆಸಿಕೊಂಡ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಲಾಗಿತ್ತು. ವಾರೆಂಟ ಪ್ರಶ್ನೆಸಿ ಶ್ರೀಧರ್ ಕೆ ಪೂಜಾರ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಆರೋಪಿ ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಭರವಸೆ ನೀಡಿದ್ದಾರೆ. ಮೇ 8 ರಂದು ಬೆಳಿಗ್ಗೆ 9:00ಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಬೆಳಿಗ್ಗೆ 9:00 ರಿಂದ ಸಂಜೆ ಆರರವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತರ 2,00,000 ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸರ ತನಿಖೆಗೆ ಆರೋಪಿ ಶ್ರೀಧರ ಕೆ ಪೂಜಾರ್ ಸಹಕರಿಸಬೇಕು.ಜಾಮೀನು ಅರ್ಜಿ ಸಲ್ಲಿಸಿದರೆ ಪೊಲೀಸರು ಆಕ್ಷೇಪಿಸಬಾರದು ಹೈಕೋರ್ಟ್ ಪೀಠ ಆದೇಶಿಸಿದೆ.

Read More

ಹಾಸನ : ಅಶ್ಲೀಲ ವಿಡಿಯೋ ಪ್ರಕಾಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣರನ್ನು ದೈಹಿಕ ಹಗು ಮಾನಸಿಕವಾಗಿ ವೀಕ್ ಮಾಡಬೇಕೆಂದು ಷಡ್ಯಂತರ ಮಾಡುತ್ತಿದ್ದಾರೆ ಎಂದು ಎಚ್ ಡಿ ರೇವಣ್ಣರ ಇನ್ನೊಬ್ಬ ಪುತ್ರ ಶಿವರಾಜ್ ರೇವಣ್ಣ ಆರೋಪಿಸಿದರು. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಏನು ಬೇಕಾದರೂ ಮಾಡುತ್ತಾರೆ. ಎಚ್ ಡಿ ರೇವಣ್ಣ ವಿರುದ್ಧ 1000 ಕೆಎಸ್ ಬೇಕಾದರೂ ದಾಖಲಾಗಲಿ ಏನು ಸಾಬೀತಾಗಬೇಕು ಅದು ಸಾಬೀತಾಗಲಿದೆ ಎಂದು ಅವರು ತಿಳಿಸಿದರು. ಎಚ್ ಡಿ ರೇವಣ್ಣ ಏನೆಂದು ನಮ್ಮ ಜಿಲ್ಲೆಯ ಜನರಿಗೆ ಗೊತ್ತಿದೆ. ಪ್ರಜ್ವಲ್ ವಿದೇಶದಿಂದ ಬರುವುದರ ಕುರಿತು ನನಗೆ ಯಾವುದೇ ರೀತಿಯಾದಂತಹ ಮಾಹಿತಿ ಇಲ್ಲ ಎಚ್ ಡಿ ರೇವಣ್ಣರನ್ನು ವೀಕ್ ಮಾಡಬೇಕೆಂದು ಷಡ್ಯಂತ್ರ ಮಾಡುತ್ತಿದ್ದಾರೆ.ಹಾಸನ ಜಿಲ್ಲಾ ರಾಜಕಾರಣದಲ್ಲಿ ಎಚ್ ಡಿ ರೇವಣ್ಣಗೆ ಪ್ರತಿ ಸ್ಪರ್ಧಿ ಇಲ್ಲ ಎಂದು ಸೂರಜ್ ರೇವಣ್ಣ ತಿಳಿಸಿದರು. ಸಂಸದ ಪ್ರಜ್ವಲ್ ಯಾವಾಗ ಬರುತ್ತಾರೋ ನನಗೆ ಗೊತ್ತಿಲ್ಲ. ಕಾರ್ಯಕರ್ತರು ಗೊಂದಲದಲ್ಲಿ ಇಲ್ಲ.…

Read More

ರಾಯಚೂರು : ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಆಗಿರುವ ವಿನಯ್ ಕುಮಾರಸ್ವಾಮಿ ಅವರು ಎಚ್ ಡಿ ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂದು ಗಂಭೀರವಾದಂತಹ ಆರೋಪ ಮಾಡಿದರು. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಮಾರ್ ಸೊರಕೆ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂದು ರಾಯಚೂರಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಆರೋಪ ಮಾಡಿದರು. ಹಾಸನ, ಮಂಡ್ಯ ಹಾಗೂ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಕಷ್ಟವಾಗಿದೆ. ಅಲ್ಲದೆ ದೇವೇಗೌಡರ ಅಳಿಯ ಡಾ. ಮಂಜುನಾಥ್ ಕೂಡ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ಮುಕ್ತವಾಗುತ್ತದೆ. ಆಗ ಕುಮಾರಸ್ವಾಮಿ ಜೆಡಿಎಸ್ ಗೆ ಕೊನೆ ಮೊಳೆ ಹೊಡಿತಾರೆ. ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುವ ಲಕ್ಷಣ ಕಾಣುತ್ತಿದೆ ಎಂದು ವಿನಯ್ ಕುಮಾರ್ ಸೊರಕೆ ತಿಳಿಸಿದರು.

Read More

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರ ಕುಟುಂಬ 420 ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್ ದೇವೇಗೌಡರ ಆಸ್ತಿ ಈಗ ಪೆನ್ ಡ್ರೈವ್ ಆಗಿದೆ ಇನ್ನು ಮುಂದೆ ತೆನೆ ಹೊತ್ತ ಮಹಿಳೆ ಪೆನ್ ಡ್ರೈ ಬರಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಮ್ಮನ್ನು 420 ಎಂದು ಕರೆದಿದ್ದಾರೆ.ನಾನು ಅವರ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್​ಡ್ರೈವ್​ ಎಂದು ವ್ಯಂಗ್ಯವಾಡಿದರು. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬದ ಆಸ್ತಿ ಪೆನ್​​ಡ್ರೈವ್ ಆಗಿದೆ. ಇನ್ನು ತೆನೆ ಹೊತ್ತ ಮಹಿಳೆ ಪೆನ್​ಡ್ರೈವ್ ಹೊರಬೇಕಾಗುತ್ತದೆ. ಇದು ಪೆನ್​​ಡ್ರೈವ್ ಕುಟುಂಬ.ಪೆನ್​ಡ್ರೈವ್​​ ಬಿಡುಗಡೆ ಮಾಡಿದ್ದು ಅವರದೇ ಮೈತ್ರಿ ಪಾರ್ಟರ್ನರ್​. ಅವರ ಬಗ್ಗೆ ಮಾತನಾಡುವುದಕ್ಕೆ ಕುಮಾರಸ್ವಾಮಿಗೆ ಧೈರ್ಯ ಇಲ್ಲ. ಹಾಗಾಗಿ…

Read More

ಕಲಬುರಗಿ : ಜಾತಿ ನಿಂದನೆ ಕೆಸ್ ಹಾಕಿದ್ದಕ್ಕೆ ಹೆದರಿ ಯುವಕನೊಬ್ಬ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಲಾಡ ಮುಗುಳಿ ಗ್ರಾಮದಲ್ಲಿ ನಿಖಿಲ್ ಪೂಜಾರಿ (23) ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮಗಳು ಎಂಬಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ನಿಖಿಲ್ ನೀಣಿಗೆ ಶರಣಾಗಿರುವ ಘಟನೆ ನಡೆದಿದೆ. ನಾಲ್ಕು ದಿನದ ಹಿಂದೆ ಗ್ರಾಮದಲ್ಲಿ ಜಾತ್ರೆಯ ವೇಳೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯದವರು ನಡುವೆ ಗಲಾಟೆ ಆಗಿತ್ತು. ಗಲಾಟೆ ಆದ ಬಳಿಕ ಗ್ರಾಮದ ಹಿರಿಯರು ಎರಡು ಸಮುದಾಯಗಳ ನಡುವೆ ರಾಜಿ ಮಾಡಿಸಿದ್ದರು. ಆದರೆ ನಿಖಿಲ್ ವಿರುದ್ಧ ಅನ್ಯ ಸಮುದಾಯದವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇದರಿಂದ ಹೆದರಿದ ನಿಖಿಲ್ ಜಾತಿ ನಿಂದನೆ ಕೆಸ್ ನಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ನ್ಯಾಯಕ್ಕಾಗಿ…

Read More

ಕಲಬುರಗಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಲುಕ್ ಔಟ್ ನೋಟಿಸ್ ನೀಡಲಾಗಿದೆ.ಹಾಗಾಗಿ ವಿದೇಶದಲ್ಲಿರುವ ಅವರನ್ನು ಶೀಘ್ರದಲ್ಲಿ ವಾಪಸ್ ಕರೆಸಲಾಗುತ್ತದೆ ಎಂದು ಕಲಬುರ್ಗಿಯಲ್ಲಿ ಗೃಹ ಇಲಾಖೆಯ ಸಚಿವ ಪರಮೇಶ್ವರ ತಿಳಿಸಿದರು. ಕಲ್ಬುರ್ಗಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣ ಸಬಂದ ಎಲ್ಲಾ ಕಡೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದೇವೆ. ವಿಮಾನ ನಿಲ್ದಾಣ, ಬಂದರು ಸೇರಿ ಎಲ್ಲೆಡೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ.ಕೇಂದ್ರ ಸರ್ಕಾರ ರಾಜ ತಾಂತ್ರಿಕ ಪಾಸ್ಪೋರ್ಟ್ ನೀಡಿದೆ. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಪತ್ರ ಬರೆದಿದ್ದೇವೆ ಪ್ರಜ್ವಲ್ ರೇನು ಶೀಘ್ರದಲ್ಲೇ ವಾಪಸ್ ಕಳಿಸುತ್ತೇವೆ ಎಂದರು. ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಸಿಎಂ ಸಿದ್ದರಾಮಯ್ಯ ಯಾಕೆ ಅವರನ್ನು ಕಳುಹಿಸುತ್ತಾರೆ? ಪ್ರಧಾನಿ ರಾಜ್ಯದ ಕಾನೂನು ಸುವ್ಯವಸ್ಥೆ ಕೆಟ್ಟಿದೆ ಅಂತಾರೆ ಅವರಿಗೆ ತಪ್ಪು ಮಾಹಿತಿ ಇರಬಹುದು ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಚೆನ್ನಾಗಿದೆ. ನೇಹಾ ಅತ್ತೆ ಆರೋಪಿಯನ್ನು ಒಂದು ಗಂಟೆಯಲ್ಲಿ ಹಿಡಿದರು ರಾಮೇಶ್ವರಂ ಕೆಎಸ್ ನಾನೇ…

Read More

ಕಲಬುರ್ಗಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿ ವಿಚಾರಣೆಗೆ A1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಒಂದು ವೇಳೆ ಅವರು ವಿಚಾರಣೆಗೆ ಹಾಜರಾಗದೆ ಹೋದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಕಲ್ಬುರ್ಗಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಎಚ್ ಡಿ ರೇವಣ್ಣ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.ವಿಚಾರಣೆಗೆ ಹಾಜರಾಗದಿದ್ದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಪ್ರಜ್ವಲ್ ಪ್ರಕರಣ ಸಂಬಂಧ ನೀಡಿದ್ದೇವೆ. ವಿಮಾನ ನಿಲ್ದಾಣ ಬಂದರು ಸೇರಿ ಎಲ್ಲೆಡೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ. ಇದರಲ್ಲಿ ಯಾರನ್ನು ರಕ್ಷಣೆ ಮಾಡುವುದಿಲ್ಲ. ಶೀಘ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು. ಎಲ್ಲಾ ಏರ್ಪೋರ್ಟ್ ಗಳಿಗೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ. ಪ್ರಕರಣ ಕುರಿದಂತೆ ಎಸ್ ಐ ಟಿ ರಚಿಸಿದ್ದೇವೆ ಆದರೆ ಎಸ್ ಐ ಟಿ ನೋಟಿಸ್…

Read More

ಹುಬ್ಬಳ್ಳಿ : ಈ ಬಾರಿ ಲೋಕಸಭೆ ಚುನಾವಣೆಯ ಬಳಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಉತ್ತರ ಕರ್ನಾಟಕ ದವಾರು ಒಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ವಿಜಯಪುರ ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಅಮಿತ್ ಶಾ ಅವರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಲು ಡಿಕೆಶಿ ತಂಡ ಪ್ರಯತ್ನಿಸುತ್ತಿದೆ. ಆ ಪ್ರಯತ್ನದ ನಡುವೆಯೇ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಡಿಕೆಶಿ ಹಾಗೂ ಅವರ ತಂಡ ಪ್ರಯತ್ನಿಸಲಿದೆ.ಅದರ ಫಲವಾಗಿ ಸರ್ಕಾರವೇ ಪತನವಾಗಿ ಮರು ಚುನಾವಣೆಯಾಗುತ್ತದೆ.ಆನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು. ಮುಂದೆ ನಮ್ಮದೇ ಸರ್ಕಾರ ಬಂದಾಗ ಉತ್ತರ ಕರ್ನಾಟಕದರೇ ಸಿಎಂ ಆಗುತ್ತಾರೆ. ಅಷ್ಟೇ ಅಲ್ಲ, ಯಾರು ಏನೇ ಲಾಗ ಹೊಡೆದರೂ ಇಡೀ ದೇಶದಲ್ಲಿ ಮುಸ್ಲಿಂ ಮೀಸಲಾತಿ ರದ್ದಾಗುತ್ತದೆ. ಹಾಗೆಂದು ಅಮಿತ್ ಶಾ…

Read More

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಜನರು ಬಿಸಿಲಿನ ಶಾಕಕ್ಕೆ ತತ್ತರಿಸಿ ಹೋಗಿದ್ದಾರೆ.ಹಾಗಾಗಿ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ಬಿಸಿ ಗಾಳಿಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರ್ಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು ಜಿಲ್ಲೆಯ ಕಾಳಗಿ ತಾಲೂಕು ಹಾಗೂ ಸುತ್ತಲಿನ ಪರಿಸರದಲ್ಲಿ ಗರಿಷ್ಠ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ 4 ದಿನದಿಂದ ಉಷ್ಣ ಅಲೆಗಳು ರಾಚುತ್ತಿವೆ. ಇದರಿಂದಾಗಿ ಜನಜೀವನ ಜಿಲ್ಲಾದ್ಯಂತ ತತ್ತರಿಸಿಹೋಗಿದೆ. ಜನ ರಣ ಬಿಸಿಲಿಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೂ ಹೊರಗಡೆ ಹೋಗದೆ…

Read More