Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಜೊತೆ ಮೊಬೈಲ್ ನಲ್ಲಿ ಮಹಿಳೆಯರ ಕುರಿತು ಅಶ್ಲೀಲವಾಗಿ ಪದ ಬಳಕೆ ಮಾಡಿದ್ದು, ಸಮಾಜಕ್ಕೆ ಧಕ್ಕೆ ತರುವಂತದ್ದು ಹಾಗಾಗಿ ಬಿಜೆಪಿ ಕೂಡಲೇ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು ಎಂದು ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಆಗ್ರಹಿಸಿದರು. ಶಾಸಕ ಮುನಿರತ್ನ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಮುನಿರತ್ನ ಪದಬಳಕೆ ಸಮಾಜಕ್ಕೆ ಅಚ್ಚರಿ ತರುವಂತಹದ್ದು, ಮುನಿರತ್ನ ವಿರುದ್ಧ ಹನಿ ಟ್ರಾಪ್ ಆರೋಪ ಕೇಳಿ ಬರುತ್ತಿದೆ.ಪ್ರಜ್ವಲ್ ಪ್ರಕರಣದಂತೆ ಮುನಿರತ್ನ ಕೆಸ್ ಅಚ್ಚರಿಯಾಗಿದೆ.ಅದಕ್ಕಾಗಿ ಆದಷ್ಟು ಬೇಗ ತನಿಖೆ ಆಗಬೇಕು ಎಂದು ಶರತ್ ಬಚ್ಚೇಗೌಡ ಆಗ್ರಹಿಸಿದರು. ತನಿಖೆ ಮಾಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಸಹ ಆಶ್ವಾಸನೆ ಕೊಟ್ಟಿದ್ದಾರೆ.ಎಸ್ ಐ ಟಿ ತನಿಖೆಗೆ ಕೊಡಬೇಕಾ ಅಥವಾ ಸಿಐಡಿ ಗೆ ಕೊಡಬೇಕಾ ಎಂದು ತಂಡ ರಸಿಸಿ ತೀರ್ಮಾನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಕರಣದ ಕುರಿತಂತೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಮುನಿರತ್ನರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಈ ಒಂದು ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಡ್ಸ್ ಇರುವವರನ್ನು ಮುನಿರತ್ನ ಬಯಲಾಜಿಕಲ್ ವಾರ್ ರೀತಿ ಬಳಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಯಾಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದು, ತನಿಖೆಗೆ ಒಂದು ವಿಶೇಷ ತಂಡ ರಚನೆಯಾಗಬೇಕು. ಯಾರ್ಯಾರನ್ನು ಯಾವ ಯಾವ ಸಂದರ್ಭದಲ್ಲಿ ಬಳಸಿಕೊಂಡಿದ್ದಾರೆ, ಯಾವ ಯಾವ ರೀತಿ ಬಳಸಿಕೊಂಡಿದ್ದಾರೆ ಎಂಬುವುದರ ಕುರಿತು ಸಮಗ್ರ ತನಿಖೆ ಆಗಬೇಕು. ಎಸ್ಐಟಿ ಅಥವಾ ಬೇರೆ ತನಿಖಾ ಮಾಡಬೇಕು ಎಂದು ಒತ್ತಾಯಿಸಿದ್ದೇವೆ ತನಿಖೆಯಿಂದ ಬಿಜೆಪಿ ನಾಯಕರ ಬಣ್ಣ ಬಯಲಾಗಬೇಕು ಸಿಟಿ ರವಿ ಆರ್ ಅಶೋಕ್ ಎಚ್ ಡಿ ಕುಮಾರಸ್ವಾಮಿ ಇವರ ಬೆನ್ನಿಗೆ ನಿಂತಿದ್ದಾರೆ ಎಂದು ಮಾಜಿ ಸಂಸದ…
ಬೆಂಗಳೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧದ ಮುಡಾ ನಿವೇಶನ ಹಗರಣದ ಸದ್ದು ಮುಂದುವರಿದಿರುವ ಬೆನ್ನಲ್ಲೇ ಮತ್ತೊಂದು ಕಡೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಹೌದು ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದಂತಹ ಕೃಷ್ಣಭೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಬಿಡಿಎ ಭೂಮಿಯ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದು, ಪ್ರಕರಣ ಸಂಬಂಧ ಸುಮಾರು 9 ವರ್ಷಗಳ ಹಿಂದೆಯೇ ಎಫ್ಐಆರ್ ದಾಖಲಾಗಿದ್ದರೂ ಲೋಕಾಯುಕ್ತ ತನಿಖೆ ವಿಳಂಬವಾಗಿರುವ ಬಗ್ಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಠದಹಳ್ಳಿಯ ಗಂಗೇನಹಳ್ಳಿ ಬಡಾವಣೆಯಲ್ಲಿಬಿಡಿಎ ಜಮೀನು ಡಿನೋಟಿಫೈ ಕುರಿತಂತೆ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ವಿರುದ್ಧದ ಗಂಭೀರ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದರು. ಲೋಕಾಯುಕ್ತರು ಶೀಘ್ರ ತನಿಖೆಯನ್ನು ಪೂರೈಸಿ ವರದಿ ನೀಡಬೇಕು ಹಾಗೂ ತಪ್ಪಿತಸ್ಥರಿಗೆ…
ಚಿತ್ರದುರ್ಗ : ತಮ್ಮ ಜಮೀನಲ್ಲಿ ಈರುಳ್ಳಿ ಬೆಳೆ ನೋಡಿಕೊಂಡು ಬರಲು ತೆರಳಿದ್ದ ದಂಪತಿಗಳ ಇಬ್ಬರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಬೊಮ್ಮಕ್ಕನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಈ ಕೊಲೆಯ ಹಿಂದೆ ಅಳಿಯನ ಕೈವಾಡ ಇದೆ ಎಂದು ಇದೀಗ ಶಂಕೆ ವ್ಯಕ್ತವಾಗುತ್ತಿದೆ. ಹೌದು ಜಮೀನಿನಲ್ಲಿ ಸಾವಿಗೀಡಾದ ಮೃತರನ್ನು ಹನುಮಂತಪ್ಪ (46) ಮತ್ತು ಅವರ ಪತ್ನಿ ತಿಪ್ಪಮ್ಮ (42) ಎಂದು ಗುರುತಿಸಲಾಗಿದೆ. ಪೋಷಕರ ಬರ್ಬರ ಹತ್ಯೆ ಬೆನ್ನಲ್ಲೇ ತುರುವನೂರು ಠಾಣೆಯಲ್ಲಿ ಪುತ್ರಿ ಹರ್ಷಿತಾ ದೂರು ದಾಖಲಿಸಿದ್ದು, ಪತಿ ಮಂಜುನಾಥ್ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಎಸಗಿದ್ದಾರೆ. ವರ್ಷದ ಹಿಂದೆ ಮಂಜುನಾಥ್ ಜತೆ ಹರ್ಷಿತಾ ಮದುವೆ ಆಗಿತ್ತು. ವಿವಾಹ ಆದಾಗಿನಿಂದಲೂ ತನ್ನ ಮೇಲೆ ದೌರ್ಜನ್ಯ ನಡೆಯುತ್ತಿತ್ತು. ಮಂಜುನಾಥ್ ಮತ್ತು ಕುಟುಂಬಸ್ಥರು ಆಗಾಗ್ಗೆ ನಮ್ಮ ವಿರುದ್ಧ ಗಲಾಟೆ ಮಾಡುತ್ತಿದ್ದರು ಎಂದು ಆಕೆ ದೂರಿದ್ದಾರೆ. ಪತಿ ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಹಿನ್ನೆಲೆ ಒಂದು ತಿಂಗಳ ಹಿಂದಷ್ಟೇ ತಾಯಿ ತಿಪ್ಪಮ್ಮ…
ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿಯೊಂದು ಮೆಟ್ರೋ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಔಟರ್ ರಿಂಗ್ ರೋಡ್ ನಲ್ಲಿ ಸಂಭವಿಸಿದೆ. 16 ಚಕ್ರದ ಲಾರಿಯ ಅಪಘಾತವಾಗಿದೆ.ನಿಯಂತ್ರಣ ತಪ್ಪಿ ಮೆಟ್ರೋ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ನಾಗವಾರ ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸದ್ಯ ಜೆಸಿಬಿ ಮೂಲಕ ಪೊಲೀಸರು ಲಾರಿ ಅನ್ನು ತೆರವು ಮಾಡಿಸಿದ್ದಾರೆ. ನಾಗವರ ಹೆಬ್ಬಾಳ ಮಾರ್ಗದ ಕೆಲವು ಕಾಲ ಕಿಲೋಮಿಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಳ್ಳಾರಿ : ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ನನ್ನು ತಾಯಿ ಮೀನಾ ತೂಗುದೀಪ, ಅಕ್ಕ ದಿವ್ಯಾ ಹಾಗೂ ಭಾವ ಸೇರಿ ಕುಟುಂಬ ಸದಸ್ಯರು ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಗನ ಸ್ಥಿತಿ ಕಂಡು ತಾಯಿ ಕಣ್ಣಿರು ಹಾಕಿದ್ದು, ದರ್ಶನ್ ಸಮಾಧಾನಮಾಡಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ನಿನ್ನೆ ದರ್ಶನ ಅವರನ್ನು ಭೇಟಿ ಮಾಡಲು ತಾಯಿ ಮೀನಾ ತೂಗುದೀಪ ಅಕ್ಕ, ಭಾವ, ಹಾಗೂ ಸೋದರ ಅಳಿಯ ಜೈಲಿಗೆ ಬಂದಿದ್ದರು. ಈ ವೇಳೆ ತಾಯಿ ಮೀನಾ ತೂಗುದೀಪ್ ಅವರು ದರ್ಶನ್ಗೆ ಆತ್ಮಸ್ಥೈರ್ಯ ತುಂಬಿದ್ದಾರೆ ಎನ್ನಲಾಗಿದೆ. ಪುತ್ರ ದರ್ಶನ್ ಗೆ ಆತ್ಮಸ್ಥೈರ್ಯ ತುಂಬಿರುವ ಮೀನಾ ತೂಗುದೀಪ್ ಕೆಟ್ಟಗಳಿಗೆ ನಡೆದಿರಬಹುದು. ನಿನ್ನ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ. ರಾಜರಾಜೇಶ್ವರಿ ದೇವಿಯ ಕೃಪೆಯಿಂದ ಬೇಲ್ ಸಿಗುತ್ತೆ. ತಾಯಿಯ ಮಾತಿನಿಂದ ಆರೋಪಿ ದರ್ಶನ್ ಧೈರ್ಯ ತೆಗೆದುಕೊಂಡಿದ್ದಾರೆ. ತಾಯಿ ಭೇಟಿಯ ಬಳಿಕ ಆರೋಪಿ ದರ್ಶನ ಲವಲವಿಕೆಯಿಂದ…
ಮಂಗಳೂರು : ಗುತ್ತಿಗೆದಾರರೊಬ್ಬರು ಕೆರೆ ಅಭಿವೃದ್ಧಿಗಾಗಿ ಕಾಮಗಾರಿ ನೆರವೇರಿಸಿದ್ದರು. ಈ ಒಂದು ಕಾಮಗಾರಿಯ ಬಿಲ್ ಪಾವತಿಗಾಗಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುತ್ತಿರುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ರೆಡ್ ಹ್ಯಾಂಡಾಗಿ ಹಿಡಿದಿರುವ ಘಟನೆ ಮಂಗಳೂರಿನಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ನಡೆದಿದೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು, ಕೆರೆ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಕೆಲಸ ನಿರ್ವಹಿಸಿದ್ದರು. ಕಾಮಗಾರಿಯ 9,77,154 ರೂ ಮೊತ್ತದ ಬಿಲ್ ಮಂಜೂರಾತಿಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರ ಬಳಿ ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರು ತೆರಳಿದ್ದರು. ಈ ವೇಳೆ ಬಿಲ್ ಪಾಸ್ ಮಾಡಲು ತನಗೆ 37 ಸಾವಿರ ರೂ. ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿಗೆ 15 ಸಾವಿರ ರೂ. ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಅಲ್ಲದೆ ಜೂನಿಯರ್ ಇಂಜಿನಿಯರ್ ನಾಗರಾಜು ಮುಂಚಿತವಾಗಿ 7000 ರೂ. ಲಂಚ ಪಡೆದಿದ್ದರು.ಉಳಿದ ಲಂಚದ ಮೊತ್ತವಾಗಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ…
ದಾವಣಗೆರೆ : ನಿನ್ನೆ ದಾವಣಗೆರೆ ನಗರದಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಸಿದ್ದ 18 ಆರೋಪಿಗಳನ್ನು ಇಂದು ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಬಳಿಕ ಜಡ್ಜ್ ಎಲ್ಲಾ 18 ಆರೋಪಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಹೌದು ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಬಸವ ನಗರ ಠಾಣೆಯಲ್ಲಿ ಈ ಕುರಿತು ಎರಡು ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿತ 18 ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಎಂಸಿಸಿಎ ಬ್ಲಾಕ್ ನಲ್ಲಿರುವ ಜಡ್ಜ್ ಪ್ರಶಾಂತ ನಿವಾಸದಲ್ಲಿ ಇದೀಗ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದಾರೆ. ಸದ್ಯ 18 ಆರೋಪಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ನಿನ್ನೆ ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಮತ್ತೊಬ್ಬ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ, ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಸಂತ್ರಸ್ತೆ ಮಹಿಳೆಯ ದೂರಿನಲ್ಲಿ ಏನಿದೆ? ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸಿದ್ದೆ. ಒಮ್ಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ…
ರಾಮನಗರ : ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಾಗೆ ಜಾಮೀನು ಮಂಜೂರು ಮಾಡಿತ್ತು. ಇಂದು ಈ ಒಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಯಾದ ತಕ್ಷಣ ಅತ್ಯಾಚಾರ ಪ್ರಕರಣದಲ್ಲಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯ ಪೊಲೀಸರು ಮುನಿರತ್ನ ಅವರನ್ನು ಮತ್ತೆ ಅರೆಸ್ಟ್ ಮಾಡಿದ್ದಾರೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಮನಗರ ಠಾಣೆಯ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿ ಇದೀಗ ಕಗ್ಗಲಿಪುರ ಠಾಣೆಗೆ ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ. ಈಗಾಗಲೇ ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನಗೆ ಬೆಂಗಳೂರಿನ 84ನೇ ಸಿಸಿಎಚ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇದರ ಬೆನ್ನಲ್ಲೇ 40 ವರ್ಷದ ಮಹಿಳೆ, ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ ಬಳಿಕ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣದಿಂದ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.














