Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಾಳೆ ಅಯೋಧ್ಯೆಯಲ್ಲಿ ರಾಮಲೆಲ್ಲ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿದ್ದು ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಜೆ ಘೋಷಿಸುವಂತೆ ಎಲ್ಲರೂ ಮನವಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ.ದೆಹಲಿ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ಆದ್ದರಿಂದ ನಾಳೆ ರಾಜ್ಯಾದ್ಯಂತ ರಜೆ ಘೋಷಿಸುವಂತೆ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಶ್ರೀ ರಾಮನ ಬ್ಯಾನರ್ ಗಳನ್ನು ಹಾಕಿದರೆ ನಮ್ಮ ಕಾರ್ಯಕರ್ತರನ್ನು ಪೊಲೀಸರು ಬೆದರಿಸುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ? ನಿನ್ನೆ ಎಷ್ಟೇ ಹಾವೇರಿಯಲ್ಲಿ ಪ್ರತಿಭಟನೆಯನ್ನು ಮಾಡಿದ್ದೇವೆ.ಆಗಲೇ ಹಾವೇರಿಯಲ್ಲಿ ಮತ್ತೊಂದು ಘಟನೆ ನಡೆದಿದೆ ಸರ್ಕಾರದ ವಿರುದ್ಧ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಮೇಷ ರಾಶಿ ಅಧಿಕ ಕೆಲಸಗಳ ಬಗ್ಗೆ ಗಮನ ಹರಿಸುವುದು ಉತ್ತಮ. ಸುತ್ತಲ ವಾತಾವರಣವು ಸಂತಸದಾಯಕವಾಗಿರುತ್ತದೆ. ಬದುಕಿನ ಧನ್ಯತೆಗೆ ಅಚಲವಾದ ನಂಬಿಕೆಯೇ ಮುಖ್ಯವೆಂದು ಅನಿಸುವುದು.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564…
ಧಾರವಾಡ : ನಾಳೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಸಂಭ್ರಮದ ಮನೆ ಮಾಡಿದ್ದು, ಇದರ ಅಂಗವಾಗಿ ಧಾರವಾಡದಲ್ಲಿ ಶ್ರೀರಾಮ ಸೇನೆ ಹಿಂದುಸ್ತಾನ್ ಸಂಘಟನೆ ಶೋಭಾಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ. ಶ್ರೀರಾಮ ಸೇನೆ ಹಿಂದುಸ್ತಾನ್ ಸಂಘಟನೆಯಿಂದ ನಾಳೆ ಮದ್ಯಾಹ್ನ 1 ಗಂಟೆಗೆ ಶೋಭಾಯಾತ್ರೆ ಆಯೋಜಿಸಿತ್ತು. ಯಾತ್ರೆಗೆ ಅನುಮತಿ ನೀಡಲು ಪೊಲೀಸರು ಈ ವೇಳೆ ನಿರಾಕರಿಸಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸರು ಸಂಘಟನೆ ಕೋರಿದ ಅನುಮತಿ ಮನವಿಯನ್ನು ತಿರಸ್ಕರಿಸಿದ್ದರು ಎಂದು ತಿಳಿದಿಬಂದಿದೆ. ಆದರೆ ಇದೀಗ ಶೋಭಯಾತ್ರೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಶ್ರೀರಾಮ ಸೇನೆ ಹಿಂದುಸ್ತಾನ್ ಸಂಘಟನೆಯಿಂದ ಶೋಭಾಯಾತ್ರೆ ಆಯೋಜಿಸಿತ್ತು. ನಾಳೆ ಮಧ್ಯಾಹ್ನ 1ಗಂಟೆಗೆ ಈ ಒಂದು ಸಂಘಟನೆಯಿಂದ ಬೃಹತ್ ಶೋಭಾಯಾತ್ರೆ ಆಯೋಜನೆ ಮಾಡಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.
ಬೆಂಗಳೂರೂ : ಅಯೋಧ್ಯೆಯಲ್ಲಿ ನಾಳೆ ಶ್ರೀ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆ ನಡೆದಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು BJP ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಹೇಳಿದ್ದಾರೆ.…
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸ್ವಪಕ್ಷದ ವಿರುದ್ಧವೇ ಜೆಡಿಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದರು. ಇದರಿಂದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದಂತಹ ಹೆಚ್ಡಿ ದೇವೇಗೌಡ ಅವರು ಇತ್ತೀಚಿಗೆ ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದರು. ನಂತರ ಸೇಮ್ ಇಬ್ರಾಹಿಂ ಅವರು ಪಕ್ಷದ ಚಿನ್ಹೆ ಹಾಗು ಲೆಟರ್ ಹೆಡ್ ಬಳಸುತ್ತಿದ್ದರು. ಇದೀಗ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಜೆಡಿಎಸ್ ಹೆಸರಲ್ಲಿ ಸುದ್ದಿಗೋಷ್ಠಿ ನಡೆಸುವಂತಿಲ್ಲ. ಪದಾಧಿಕಾರಿಗಳನ್ನು ನೇಮಕ ಮಾಡುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಇಬ್ರಾಹಿಂ ಅವರು ಜೆಡಿಎಸ್ನಿಂದ ಉಚ್ಛಾಟನೆಯಾದರೂ ಪಕ್ಷದ ಚಿಹ್ನೆ, ಹೆಸರು ಬಳಸುತ್ತಿದ್ದಾರೆ. ಅದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಬ್ರಾಹಿಂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾಗ ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ, ಬಲವರ್ಧನೆಗೆ ಯಾವುದೇ ಕಾರ್ಯಕ್ರಮ…
ಬೆಂಗಳೂರು: ರೇಡಿಯೊ ಡಯೋಗ್ನಾಸಿಸ್ ವೈದ್ಯಕೀಯ ಸ್ನಾತಕೋತ್ತರ ಪದವಿಯ ಸೀಟ್ ಅನ್ನು ಬ್ಲಾಕ್ ಮಾಡುವ ಮೂಲಕ ಕಾನೂನು ಬಾಹಿರವಾಗಿ ಸೀಟು ಹಂಚಿಕೆ ಮಾಡಿದ ಆರೋಪದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ₹ 5 ಲಕ್ಷ ದಂಡ ವಿಧಿಸಿದೆ. ಈ ಸಂಬಂಧ ಸೀಟು ವಂಚಿತರಾದ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಡಾ.ಸಿ.ಕೆ.ರಜನಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಅರ್ಜಿದಾರರಿಗೆ ರೇಡಿಯೊ ಡಯೋಗ್ನಾಸಿಸ್ ಸೀಟನ್ನು ಮರು ಹಂಚಿಕೆ ಮಾಡಬೇಕು’ ಎಂದೂ ನಿರ್ದೇಶಿಸಿದೆ.ದಂಡದ ಮೊತ್ತದಲ್ಲಿ ₹ 2.5 ಲಕ್ಷ ಮೊತ್ತವನ್ನು ಡಾ.ಸಿ.ಕೆ.ರಜನಿ ಅವರಿಗೆ ಪಾವತಿಸಬೇಕು. ಉಳಿದ ₹ 2.5 ಲಕ್ಷ ಮೊತ್ತವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಹೆಸರಿನಲ್ಲಿ ಠೇವಣಿ ಇರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ. ವೈದ್ಯಕೀಯ ಸ್ನಾತಕೋತ್ತರ ವಿಭಾಗದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರಕ್ಕೆ ಅರ್ಜಿದಾರರು ಪಾವತಿಸಿರುವ ಶುಲ್ಕವನ್ನು ಕಲಬುರಗಿಯ ಎಂ.ಆರ್.ವೈದ್ಯಕೀಯ ಕಾಲೇಜಿನ ರೇಡಿಯೊ ಡಯೋಗ್ನಾಸಿಸ್…
ಬೆಳಗಾವಿ : ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳ ಪತ್ತೆಗೆ ನಡೆಸುವ ಸರ್ವೇಯಲ್ಲಿ ಸಕಾರಾತ್ಮಕ ವರದಿ ಬಂದರೆ ಸಚಿವರು ಸ್ಪರ್ಧೆ ಮಾಡಬೇಕಾಗುತ್ತದೆ. ಅಷ್ಟೆ ಅಲ್ಲ, ಗೆಲ್ಲುವ ಪ್ರಮಾಣಿಕ ಪ್ರಯತ್ನವನ್ನು ಮಾಡಬೇಕಾಗುತ್ತದೆ. ಒಂದು ವೇಳೆ ಸಚಿವ ಸ್ಥಾನ ಉಳಿಸಿಕೊಳ್ಳಲು ಚುನಾವಣೆಯನ್ನು ಲಘುವಾಗಿ ತೆಗೆದುಕೊಂಡಿದ್ದು ಕಂಡುಬಂದರೆ ಅಂತಹ ಸಚಿವರು ತಲೆದಂಡವನ್ನು ಎದುರಿಸಬೇಕಾಗುತ್ತದೆ. ಹೀಗಂತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಎಚ್ಚರಿಕೆ ನೀಡಿದ್ದಾರೆ. ಆದರೆ ಇದಕ್ಕೆ ತದ್ಭವಿರುದ್ಧವಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ನನಗೆ ಸ್ಪರ್ಧೆ ಮಾಡುವಂತೆ ಹೈಕಮಾಂಡ್ನ ಯಾವ ನಾಯಕರೂ ಸೂಚಿಸಿಲ್ಲ. ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧಿಸುವುದು ಕಡ್ಡಾಯವಲ್ಲ.ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ನನಗೇನೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಯತ್ನ ಮಾಡಬೇಕು. ಲೋಕಸಭೆ ಚುನಾವಣೆ ಸಂಬಂಧ ಈಗಾಗಲೇ ದೆಹಲಿ ಹಾಗೂ ಬೆಂಗಳೂರಲ್ಲಿ ಸಭೆ ಆಗಿದೆ ಎಂದ ಅವರು, ಬೆಳಗಾವಿ ಕ್ಷೇತ್ರದಿಂದ 10 ಹಾಗೂ ಚಿಕ್ಕೋಡಿ…
ಚಿತ್ರದುರ್ಗ : ಜಿಪಿಎ ಪಡೆದು ಮುರುಘಾ ಮಠದ ಹಣ, ಆಸ್ತಿ ದುರ್ಬಳಕೆ ಆರೋಪ ಹಿನ್ನೆಲೆ ಮುರುಘಾಮಠದ ಆಡಳಿತಾಧಿಕಾರಿ ಆಗಿದ್ದ ಮಾಜಿ ಶಾಸಕ ಎಸ್ಕೆ ಬಸವರಾಜನ್ ವಿರುದ್ಧದ ಕೇಸ್ನ ಸಾಕ್ಷ್ಯ ವಿಚಾರಣೆ ಮಾಡಲಾಗಿದ್ದು, ಪ್ರಕರಣದಲ್ಕಿ 12 ನೇ ಸಾಕ್ಷಿಯಾಗಿ ಮುರುಘಾಶ್ರೀ ಅವರ ಹೇಳಿಕೆಯನ್ನು ದಾಖಲಿಸಲಾಗಿದೆ. ಹೊಳಲಕೆರೆಯ ಕುಡಿನೀರುಕಟ್ಟೆ ಬಳಿ 2007ರಲ್ಲಿ ಮಠದ ಹಣದಿಂದ ಜಮೀನು ಖರೀದಿಸಿ ತನ್ನ ಹೆಸರಿಗೆ ಕ್ರಯಪತ್ರ ಮಾಡಿಕೊಂಡಿದ್ದಾರೆ. ಮಠದ ಹಣದಿಂದ ಎಸ್.ಕೆ.ಬಸವರಾಜನ್ ಹೆಸರಿಗೆ ಆಸ್ತಿ ಖರೀದಿಸಿದ್ದಾರೆ. ಆಸ್ತಿ ಖರೀದಿಸುವಾಗ ತಮಗೆ ತಿಳಿಸಿರಲಿಲ್ಲವೆಂದು ಮುರುಘಾಶ್ರೀ ಹೇಳಿಕೆ ನೀಡಿದ್ದಾರೆ. ಆಸ್ತಿ ಮಾರಲು ಜಿಲ್ಲಾ ನ್ಯಾಯಾಲಯದ ಅನುಮತಿ ಪಡೆಯದ ವಿಚಾರವಾಗಿ ಹೇಳಿಕೆ ನೀಡಿದ್ದು, ಅನುಮತಿ ಪಡೆದಿರಬಹುದು, ಇಲ್ಲದಿರಬಹುದು ಎಂದು ಮುರುಘಾಶ್ರೀ ಉತ್ತರ ನೀಡಿದ್ದಾರೆ. ಹರಿಹರದ 11 ಎಕರೆ 1 ಕೋಟಿ 10 ಲಕ್ಷಕ್ಕೆ ಮಾರಿದ್ದು ನಿಜ. ಕೋರ್ಟ್ ಅನುಮತಿ ಪಡೆಯದೇ ಮಾರಿದ್ದಾಗಿ ದಾವೆ ಹಾಕಿದ್ದಾರೆ. ಇತ್ತೀಚಿಗೆ ಹೈಕೋರ್ಟ್ ಆದೇಶದಂತೆ ಮಠದ ವ್ಯವಹಾರ ನೋಡಿಕೊಳ್ಳುತ್ತಿಲ್ಲ ಎಂದಿದ್ದಾರೆ. ಮಠಕ್ಕೆ ಮೋಸ ಗೊತ್ತಾದಾಗ ಕ್ರಮ ಕೈಗೊಳ್ಳಲು ಕೋರಿದ್ದೆ.…
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 15,841.48 ಕೋಟಿ ರೂಪಾಯಿ ಸಾಲ ನೀಡುವ ಮೂಲಕ ಬರಗಾಲದಿಂದ ಸಂಕಷ್ಟದಲ್ಲಿದ್ದ ರೈತ ಸಮುದಾಯಕ್ಕೆ ಸರಕಾರ ಆಸರೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 21 ಡಿಸಿಸಿ ಬ್ಯಾಂಕ್ ಹಾಗೂ 6,040 ಕೃಷಿ ಪತ್ತಿನ ಸಹಕಾರ ಸಂಘಗಳಿಂದ ₹24,600 ಕೋಟಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿತ್ತು. ಅದರಲ್ಲಿ ಜನವರಿವರೆಗೆ 19.97 ಲಕ್ಷ ರೈತರಿಗೆ ₹15,841.48 ಕೋಟಿ ಸಾಲ ನೀಡಲಾಗಿದೆ. ಕಳೆದ ಅವಧಿಗಿಂತ ಹೆಚ್ಚುವರಿಯಾಗಿ ₹776.48 ಕೋಟಿ ಸಾಲ ನೀಡಲಾಗಿದೆ. ಪ್ರಸಕ್ತ ಸಾಲಿನ ಉಳಿದ ಗುರಿಯನ್ನು ಶೀಘ್ರದಲ್ಲಿ ಮುಟ್ಟಲಾಗುವುದು. ಅದಕ್ಕೆ ಬೇಕಾದ ಎಲ್ಲ ಕ್ರಮವನ್ನೂ ಸರ್ಕಾರ ಕೈಗೊಳ್ಳುತ್ತಿದೆ ಎಂದಿದ್ದಾರೆ. ಶೂನ್ಯ ಬಡ್ಡಿ ದರದಲ್ಲಿ ಈವರೆಗೆ 19,97,607 ರೈತರಿಗೆ 15,841.48 ಕೋಟಿ ರೂ. ಕೃಷಿ ಸಾಲ ವಿತರಣೆಯಾಗಿದೆ. ಪ್ರಸಕ್ತ ಆರ್ಥಿಕ ಸಾಲಿನ ಅಂತ್ಯದೊಳಗೆ 24,600 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ.…
ಬೆಂಗಳೂರು : PSI ಹಾಗೂ CTI ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಬ್ ಇನ್ಸ್ಪೆಕ್ಟರ್ ಬಾಲೆಯ್ಯ ಅವರನ್ನು ಸಿಸಿಬಿ ವಿಚಾರಣೆ ಒಳಪಡಿಸಿದಾಗ ಸ್ಪೋಟಕ ಹೇಳಿಕೆ ನೀಡಿದ್ದು ನಾನು ನಡೆಸಿದ್ದು ಸ್ಟಿಂಗ್ ಆಪರೇಷನ್ ಇದು ಒಂದು ಟಾಸ್ಕ್ ಆಗಿತ್ತು, ಆದರೆ ಈ ಒಂದು ಪ್ರಕರಣದಲ್ಲಿ ಯಾವುದೇ ಅಕ್ರಮ ಎಸೆದಿಲ್ಲ ಎಂದು ತಿಳಿಸಿದ್ದಾರೆ. ಶುಕ್ರವಾರ ಸಬ್ ಇನ್ಸ್ಪೆಕ್ಟರ್ ಲಿಂಗಯ್ಯನನ್ನು ವಶಕ್ಕೆ ಪಡೆದಿದ್ದ ಚಂದ್ರಾಲೇಔಟ್ ಪೊಲೀಸರು ಪ್ರಕರಣದ ತನಿಖೆಗೆ ಸಿಸಿಬಿಗೆ ಒಪ್ಪಿಸಿದ್ದರು. ಸಿಸಿಬಿ ಪೆÇಲೀಸರಿಂದ ಲಿಂಗಯ್ಯ ಮಾಡಿರುವ ಚಾಟಿಂಗ್ ಕುರಿತಾಗಿ ತೀವ್ರ ವಿಚಾರಣೆ ನಡೆಸಿದ್ದಾರೆ. ಯಾರಿಗೆಲ್ಲ ಚಾಟಿಂಗ್ ಮಾಡಿದ್ದೀರಾ? ಚಾಟಿಂಗ್ ನಿಮ್ಮದೇನಾ? ಹಣದ ಬಗ್ಗೆಯೂ ಚರ್ಚೆ ಮಾಡಿದ್ದು, ಯಾರಿಂದಲಾದರೂ ಹಣ ಪಡೆದಿದ್ದೀರಾ ಎಂದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಸಿಸಿಬಿ (CCB) ಅಧಿಕಾರಿಗಳ ಬಳಿ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾರೆ. ಇದು ಪ್ರಕರಣದಲ್ಲಿ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ನಾನು ಮಾಡಿದ್ದು ಸ್ಟಿಂಗ್ ಆಪರೇಷನ್, ಇದೊಂದು ಟಾಸ್ಕ್ ಆಗಿತ್ತು. ನಾನು ನನ್ನ ಕೆಲಸ ಮಾಡಿದ್ದೇನೆ ಅಷ್ಟೇ,…