Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವಂತಹ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದಂತಹ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು. ವಿಧಾನಸಭೆಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಕುರಿತಂತೆ ಕಾಂಗ್ರೆಸ್ನ ಎಸ್. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ 12ರಿಂದ 15 ಲಕ್ಷ ಭಕ್ತರು ಬರುತ್ತಾರೆ. ಅಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಮುಖವಾಗಿ ವಾಹನ ನಿಲುಗಡೆಗೆ ಸ್ಥಳಾವಕಾಶ, ದಾಸೋಹ ಭವನ ನಿರ್ಮಾಣ, ರಸ್ತೆ ಅಗಲೀಕರಣಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ವಾರ್ಷಿಕ ಲಕ್ಷಾಂತರ ಭಕ್ತರು ಬರುವ ಮೈಸೂರಿನ ಚಾಮುಂಡೇಶ್ವರಿ, ಸವದತ್ತಿ ಯಲ್ಲಮ್ಮ ಸೇರಿದಂತೆ ಇನ್ನಿತರ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. https://kannadanewsnow.com/kannada/breaking-two-killed-as-bike-collides-with-mini-tempo-in-tumkur/ https://kannadanewsnow.com/kannada/breaking-man-slits-wifes-throat-with-machete-in-kolar/
ತುಮಕೂರು : ನಿಂತಿದ್ದ ಮಿಣಿ ಟೆಂಪೋಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನ ಹಳ್ಳಿ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ.ಪ್ರಭುಗೌಡ (28) ಹಾಗೂ ಆನಂದ್ (30) ಮೃತ ದುರ್ದೈವಿಗಳಾಗಿದ್ದಾರೆ ಕಳ್ಳಂ ಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಚ್ಚಿನಿಂದ ಪತ್ನಿಯ ಕುತ್ತಿಗೆ ಹತ್ಯೆಗೈದ ಪತಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಮಚ್ಚಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಮಚ್ಚಿನಿಂದ ಕೊಚ್ಚಿ ಪತ್ನಿ ಪವಿತ್ರ (36)ಳನ್ನು ಪತಿ ಲೋಕೇಶ್ ಮಚ್ಚಿನಿಂದ ಕುತ್ತಿಗೆ ಕೊಯ್ದು ಪತ್ನಿಯ ಕೊಲೆಮಾಡಿದ್ದೂ, ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದ ಭೀಕರ ಹತ್ಯೆಯಾಗಿದೆ. ಉರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಮಚ್ಚಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಮಚ್ಚಿನಿಂದ ಕೊಚ್ಚಿ ಪತ್ನಿ ಪವಿತ್ರ (36)ಳನ್ನು ಪತಿ ಲೋಕೇಶ್ ಮಚ್ಚಿನಿಂದ ಕುತ್ತಿಗೆ ಕೊಯ್ದು ಪತ್ನಿಯ ಕೊಲೆಮಾಡಿದ್ದೂ, ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದ ಭೀಕರ ಹತ್ಯೆಯಾಗಿದೆ. ಉರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-%e0%b2%95%e0%b3%8a%e0%b2%aa%e0%b3%8d%e0%b2%aa%e0%b2%b3%e0%b2%a6%e0%b2%b2%e0%b3%8d%e0%b2%b2%e0%b3%8a%e0%b2%82%e0%b2%a6%e0%b3%81-%e0%b2%85%e0%b2%b8%e0%b3%8d%e0%b2%aa%e0%b3%83%e0%b2%b6/
ಬೆಂಗಳೂರು : ಕಳೆದ ವರ್ಷ ದೇಶದಲ್ಲಿ ಕೆಂಪು ರಾಣಿಯಂದೇ ಸದ್ದು ಮಾಡಿದ್ದ ಟೊಮ್ಯಾಟೋ ದರ ಗ್ರಾಹಕರ ಜೇಬನ್ನು ಸುಟ್ಟಿತ್ತು. ನಂತರ ಇರುಳು ಕೂಡ ಗ್ರಾಹಕರ ಕಣ್ಣಲ್ಲಿ ನೀರು ಬರಿಸುವ ದರ ಮುಟ್ಟಿತ್ತು. ಇದಾದ ಬಳಿಕ ಇದೀಗ ಬೆಳ್ಳುಳ್ಳಿ ದರ ಕೂಡ ಏರಿಕೆಯಾಗಿದ್ದು ಚಿಲ್ಲರೆ ಮಾರುಕಟ್ಟೆಗಳಲ್ಲಿ ಕೆಜಿಗೆ 450 ರೂಪಾಯಿಗೆ ಏರಿಕೆಯಾಗಿದೆ. ಸಗಟು ಬೆಳ್ಳುಳ್ಳಿ ದರ ಇಳಿಕೆ ಕಾಣುತ್ತಿದ್ದರೂ ಚಿಲ್ಲರೆ ಮಾರುಕಟ್ಟೆಯಲ್ಲಿ ದುಬಾರಿ ದರವೇ ಮುಂದುವರಿದಿದೆ. ಇಲ್ಲಿನ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ * 320-350 ರಿಂದ * 280-300 ಕ್ಕೆ ತಗ್ಗಿದ್ದು, ಇನ್ನೆರಡು ವಾರಗಳಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲೂ ಗ್ರಾಹಕರು ದರ ಇಳಿಕೆಯನ್ನು ಕಾಣಲಿದ್ದಾರೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಫಾರಮ್ 400 ವರೆಗೆ ಹಾಗೂ ಜವಾರಿ 450 ವರೆಗೆ ಬೆಲೆಯಿದೆ. ಯಶವಂತಪುರ ಹಾಗೂ ದಾಸನಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸೇರಿ ಬೆಂಗಳೂರಿಗೆ ಬುಧವಾರ ಮಧ್ಯಪ್ರದೇಶದಿಂದ ಸುಮಾರು 2100 ಚೀಲ ಬೆಳ್ಳುಳ್ಳಿ ಬಂದಿದೆ.…
ಕೊಪ್ಪಳ : ಇಡೀ ಜಗತ್ತು ಎಷ್ಟೇ ಅಭಿವೃದ್ಧಿ ಹೊಂದಿದರು, ಎಷ್ಟೇ ಮುಂದುವರೆದರು ನಮ್ಮ ದೇಶದ ಇನ್ನೂ ಕೆಲವು ರಾಜ್ಯದ ಹಲವು ಹಳ್ಳಿಗಾಡು ಪ್ರದೇಶಗಳಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿದೆ. ರಾಜ್ಯದಲ್ಲಿ ಇನ್ನೂ ಅಸ್ಪೃಶ್ಯತಾ ಆಚರಣೆ ಜಾರಿಯಲ್ಲಿರುವುದು ಬೇಸರದ ಸಂಗತಿಯಾಗಿದೆ. ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ ಬೆಳಕಿಗೆ ಬಂದಿದ್ದು, ತಾಲೂಕಿನ ಹಾಲವರ್ತಿಯಲ್ಲಿ ದಲಿತರಿಗೆ ಹೊಟೇಲ್ ಮತ್ತು ಕ್ಷೌರದ ಅಂಗಡಿಗಳಲ್ಲಿ ಪ್ರವೇಶ ನಿರಾಕರಣೆಯಂತಹ ಘಟನೆ ಮರುಕಳಿಸಿವೆ. ಇದರ ವಿರುದ್ದ ಬುಧವಾರ ಅಲ್ಲಿನ ದಲಿತ ಯುವಕರೇ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಹೊಟೇಲ್ಗಳಲ್ಲಿ ಪ್ರವೇಶವಿಲ್ಲ, ದಲಿತರಿಗಾಗಿಯೇ ಪ್ರತ್ಯೇಕ ಪ್ಲೇಟ್, ತಟ್ಟೆ ಹಾಗೂ ಅವರು ಎಲ್ಲರ ಜೊತೆ ಕುಳಿತು ತಿನ್ನು ವಂತಿಲ್ಲ. ಕ್ಷೌರದ ಅಂಗಡಿಯಲ್ಲಿ ದಲಿತರಿಗೆ ಕ್ಷೌರ ಮಾಡುತ್ತಿಲ್ಲ. ಇದರಿಂದ ರೊಚ್ಚಿಗೆದ್ದ ವಿದ್ಯಾವಂತ ದಲಿತ ಯುವಕರು ಅಸ್ಪೃಶ್ಯತೆ ವಿರುದ್ಧ ಸಿಡಿದೆದ್ದು, ಪ್ರತಿಭಟಿಸಿ, ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ್ದಾರೆ. ನಮಗೆ ಗ್ರಾಮದ ಹೊಟೇಲ್ಗಳಲ್ಲಿ, ಕ್ಷೌರದ ಅಂಗಡಿಗಳಲ್ಲಿ ಪ್ರವೇಶ ಕೇಳಿದ್ದಕ್ಕೆ ಬಂದ್ ಮಾಡಿಕೊಂಡು ತೆರಳಿದ್ದಾರೆ. ಇದು ಅಮಾನವೀಯವಾಗಿದ್ದು, ನಮಗೂ ಸಾಮಾ ಜಿಕ…
ಬೆಂಗಳೂರು : ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವ ರೀತಿ ಪ್ರವಾಸ ಮಾಡಿದ್ದರು ಆ ಮಾದರಿಯಲ್ಲೇ ಫೆ.23ರಿಂದ ಅಥವಾ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಲೋಕಸಭಾ ಚುನಾವಣೆ ಪ್ರಚಾರಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತ್ಯೇಕವಾಗಿ ವಿವಿಧ ಜಿಲ್ಲೆ ಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಹಿತಿ ಪ್ರಕಾರ ಸಿದ್ದರಾಮಯ್ಯ 16, ಶಿವಕುಮಾರ್ 15 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಇವರಿಗೆ ಸಂಪುಟದ ಸಚಿವರುಗಳೂ ಸೇರಿ ಪಕ್ಷದ ಪ್ರಮುಖರು ಸಾಥ್ ನೀಡಲಿದ್ದಾರೆ.ಲೋಕಸಭಾ ಚುನಾವಣೆಯಲ್ಲೂ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ವಿಧಾನಸಭೆ ಚುನಾವಣೆ ವೇಳೆ ಹೆಣೆದ ತಂತ್ರವನ್ನೇ ಪ್ರಯೋಗಿಸುತ್ತಿದ್ದು, ಮೊದಲು ಇಬ್ಬರೂ ನಾಯಕರು ಪ್ರತ್ಯೇಕ ಪ್ರವಾಸ ನಡೆಸಿ ನಂತರ ಸಾಧ್ಯವಾದಷ್ಟೂ ಜಿಲ್ಲೆಗಳಲ್ಲಿ ಒಟ್ಟಾಗಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೊಳಿಸಿರುವ ಗ್ಯಾರಂಟೆಗಳ ಯಶಸ್ವಿ ಜಾರಿಹಾಗೂ ಕೇಂದ್ರದಿಂದ…
ಬೆಂಗಳೂರು : ಬಿಜೆಪಿ ಶಾಸಕ ಕೆ ಗೋಪಾಲರಿಗೆ ಕೊಲೆ ಬೆದರಿಕೆ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜ್ನನ್ನು ಪೊಲೀಸರುಪಡಿಸಿಕೊಂಡಿದ್ದರು. ನಂತರ ಜಾಮೀನು ಪಡೆದು ಹೊರ ಬಂದಾಗ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಪಕ್ಷ ನಾಯಕ ಆರ್ ಅಶೋಕ್ ಅವರು ನನ್ನನ್ನು ಮೇಯರ್ ಮಾಡಲು ಒಂದು ಕೋಟಿ ರೂಪಾಯಿ ಪಡೆದಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2010ರಲ್ಲಿ ನನ್ನನ್ನು ಬಿಬಿಎಂಪಿ ಮೇಯರ್ ಮಾಡುವುದಾಗಿ ಹಾಲಿ ವಿರೋಧ ಪಕ್ಷದ ನಾಯಕರಾಗಿರುವ ಆರ್.ಅಶೋಕ್ ಅವರು ಒಂದು ಕೋಟಿ ರು. ಪಡೆದಿದ್ದರು. ಆ ಹಣವನ್ನು ವಾಪಸ್ ಪಡೆದಿದ್ದಕ್ಕೆ ನನ್ನ ಮೇಲೆ ಅವರಿಗೆ ಸಿಟ್ಟಿದೆ ಎಂದು ಬಿಬಿಎಂಪಿ ಮಾಜಿ ಸದಸ್ಯ ಎಸ್.ಪದ್ಮರಾಜ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ, ಮಾಜಿ ಸಚಿವ ಗೋಪಾಲಯ್ಯರವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಶೋಕ್ ಹಾಗೂ ಗೋಪಾಲಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ನಾನು ಯಾರಿಗೂ ಕೊಲೆ ಬೆದರಿಕೆ ಹಾಕಿಲ್ಲ. ಎಲ್ಲವನ್ನೂ ಧರ್ಮಸ್ಥಳದ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಡೀ ರಾಜ್ಯವೇ ತಲೆತಗ್ಗಿಸುವಂತಹ ಘಟನೆ ನಡೆದಿದ್ದು. ಕೊಡಗಿನಲ್ಲೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಇನ್ನೂ ಜಗತ್ತು ಅಂದರೆ ಏನು ಎಂದು ತಿಳಿಯದ 2 ವರ್ಷದ ಪುಟಾಣಿ ಮಗುವಿನ ಮೇಲೆ ಕಾಮುಕನೊಬ್ಬ ದೌರ್ಜನ್ಯ ನಡೆಸಿದ್ದಾನೆ. ಕೇವಲ ಎರಡು ವರ್ಷದ ಮಗುವಿನ ಮೇಲೆ 45 ವರ್ಷದ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿದ್ದಾಪುರದಿಂದ ಸುಮಾರು 20 ಕಿ.ಮೀ ದೂರದ ಎಸ್ಟೇಟ್ನಲ್ಲಿ ಬುಧವಾರ ಸಂಜೆ ಕೃತ್ಯ ನಡೆದಿದೆ. ಮಣಿ ಎಂಬ ಕಾರ್ಮಿಕ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಾಮುಕನ ಪೈಶಾಚಿಕ ಕೃತ್ಯದಿಂದ ಅಸಸಗೊಂಡು ಗಂಭೀರವಾಗಿ ಗಾಯಗೊಂಡಿರುವ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದು ಜಾರ್ಖಂಡ್ ಮೂಲದ ಸಂಸಾರ. ಮನೆಯಲ್ಲಿ ಮಗು ಆಡುತ್ತಿತ್ತು. ಮಗುವಿನ ತಂದೆ ಬೇರೇನೋ ಕೆಲಸಕ್ಕೆ ಹೊರಗೆ ಹೋಗಿದ್ದರು. ಆಗ ಅಲ್ಲಿಗೆ ಬಂದ ಕಾಮುಕ ಮಗುವಿನ ಮೇಲೆ ರಕ್ಕಸನಂತೆ ಎರಗಿದ್ದಾನೆ. ಮಗು ಒಂದೇ ಸಮನೆ ಬೊಬ್ಬೆ ಹೊಡೆದಾಗ ತಂದೆ ಓಡಿ ಬಂದಿದ್ದು,…
ಬೆಂಗಳೂರು : ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಟಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಇತರೆ ಕಾರಣಗಳಿಂದ 2022-23ನೆ ಸಾಲಿನಲ್ಲಿ ಒಟ್ಟು 8805 ಶಿಶುಗಳು ಸಾವನ್ನಪ್ಪಿವೆ.ಅಲ್ಲದೆ ಅದೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯೊಂದರಲ್ಲೇ 614 ಶಿಶುಗಳು ಮೃತಪಟ್ಟಿವೆ ಎಂದು ವೈದ್ಯರು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನು ಶಿಶುಗಳ ಸಾವಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಇನ್ನು ಶಿಶುಗಳ ಸಾವಿಗೆ ತಾಯಂದಿರ ಆರೈಕೆಯಲ್ಲಿನ ವ್ಯತ್ಯಾಸವೂ ಒಂದು ಕಾರಣವಾಗಿದೆ. ಹಾಗೆ ಮಾತೃ ಪೂರ್ಣ ಯೋಜನೆ, ಮಾತೃವಂದನಾ, ಪೌಷ್ಟಿಕ ಆಹಾರ ವಿತರಣೆ ಇತರೆ ಯೋಜನೆಗಳು ಜಿಲ್ಲೆಯಲ್ಲಿ ವಿಫಲವಾಗಿವೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಹೆರಿಗೆ ವ್ಯವಸ್ಥೆ ಇಲ್ಲ ಎಂಬ ಆರೋಪವಿದೆ. ಕೇವಲ ಬಳ್ಳಾರಿ ಜಿಲ್ಲೆ ಅಷ್ಟೆ ಅಲ್ಲದೆ ಬೆಂಗಳೂರು ನಗರ ಜಿಲ್ಲೆಯಲ್ಲಿ 1371, ಮೈಸೂರು ಜಿಲ್ಲೆಯಲ್ಲಿ 669, ರಾಯಚೂರ ಜಿಲ್ಲೆಯಲ್ಲಿ 633, ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ ಎಂದು ಮಾಹಿತಿ ತಿಳಿದುಬಂದಿದೆ.ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು…
ಬೆಂಗಳೂರು : ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಫೆ.6 ರಂದು ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕೈ ನಾಯಕರಿಗೆ ಕರ್ನಾಟಕ ಹೈಕೋರ್ಟ್ 10,000 ದಂಡ ವಿಧಿಸಿತ್ತು. ಅಲ್ಲದೆ ಮಾರ್ಚ್ 6 ರಂದು ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚಿಸಿತ್ತು. 2022ರ ಏಪ್ರಿಲ್ ನಲ್ಲಿ ರಸ್ತೆ ತಡೆದು ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆದಿತ್ತು.ಕಾಂಗ್ರೆಸ್ ನಾಯಕರು. ವಿಧಾನಸೌಧದ ಚಲೋ ಕೈಗೊಂಡಿದ್ದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್ ಸೇರಿದಂತೆ ಕಾಂಗ್ರೆಸ್ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ…