Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇಂದ್ರ ಸಚಿವ ಅಮಿತ್ ಷಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಬಳಿಕ ಇದೀಗ ರಾಜಗೌಡ ಸುಳ್ಳು ಹೇಳಲು ಕಲಿಸಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯ ಮಾಜಿ ಶಾಸಕ ರಾಜುಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ರಾಜುಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ನಾನು ಚೆನ್ನಾಗಿದ್ದೇವೆ ಎಂದು ರಾಜುಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಆದರೆ ನಾನು ರಾಜುಗೌಡ ಚೆನ್ನಾಗಿರುವುದು ನೂರಕ್ಕೆ ನೂರರಷ್ಟು ಸುಳ್ಳು ಎಂದು ತಿಳಿಸಿದರು. ನನ್ನ ಯಾವುದೇ ಬೆಂಬಲ ನಿನಗಿಲ್ಲ. ನೀನು ಬಿಜೆಪಿ ಅಭ್ಯರ್ಥಿ ನಿನ್ನ ಸೋಲಿಸುವುದೇ ನಮ್ಮ ಗುರಿ. ರಾಜೇಗೌಡ ಸುಳ್ಳು ಹೇಳುವ ವ್ಯಕ್ತಿ ಬಿಜೆಪಿಯವರು ಸುಳ್ಳು ಹೇಳುವ ಫ್ಯಾಕ್ಟರಿ. ಪ್ರಧಾನಿ ಮೋದಿ, ಅಮಿತ್ ಶಾ ಜೆಪಿ ನಡ್ದ ಬಳಿಕ ರಾಜುಗೌಡ ಸುಳ್ಳು ಹೇಳುವುದನ್ನು ಕಲಿಯುತ್ತಿದ್ದಾನೆ ಎಂದು ರಾಜುಗೌಡ ಬ್ರದರ್ ಸಿಎಂ ಸಿದ್ದರಾಮಯ್ಯ ವಾಗ್ದಾಳಿ…
ಕಲಬುರಗಿ : ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಾಗುತ್ತಲೇ ಇದೆ. ರಣಬಿಸಿಲಿಗೆ ಜನತೆ ಪೂರ್ತಿಯಾಗಿ ತತ್ತರಿಸಿದ್ದು, ಇದೀಗ ಕಲಬುರಗಿ ಜಿಲ್ಲೆಯ ಕಾಳಗಿ ಹೋಬಳಿಯಲ್ಲಿ 46 ಡಿಗ್ರಿ ಸೇಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲ್ಬುರ್ಗಿ ಜಿಲ್ಲೆಯ ಕಾಳಗಿ ಹೋಬಳಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ಸೆಖೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ…
ಯಾದಗಿರಿ : ಬರಿ ನರೇಂದ್ರ ಮೋದಿಗೆ ಯಾಕೆ ಬೈತೀರಾ ಅಂತ ಕೆಲವರು ಹೇಳುತ್ತಾರೆ ಮೋದಿ ನನ್ನದೇ ಗ್ಯಾರಂಟಿ ಅಂತಾನೆ ಅದಕ್ಕೆ ಮೋದಿಗೆ ತಾನೇ ಹೇಳಬೇಕು. ಹಾಗಾಗಿ ನರೇಂದ್ರ ಮೋದಿ ಅಂತ ಕೆಟ್ಟ ವ್ಯಕ್ತಿಗೆ ವೋಟ್ ಹಾಕಬೇಡಿ ಎಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ಲಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ AICC ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ನನ್ನದು 56 ಇಂಚಿನ ಎದೆ ಇದೆ ಅಂತ ಹೇಳಿಕೊಂಡು ಓಡಾಡುತ್ತಿದ್ದಾರೆ. ನಿಜಾಮರ ಕಾಲದಲ್ಲೇ ಮಂಗಳಸೂತ್ರ ತೆಗೆದುಕೊಳ್ಳಲು ಆಗಿಲ್ಲ.ಪ್ರಧಾನಿ ಮೋದಿ ಕೇವಲ ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಗಾಂಧೀಜಿ ಡಾ. ಅಂಬೇಡ್ಕರ್ ನಿವಾಸದಲ್ಲಿ ಜಾಸ್ತಿ ಜನ ಮಕ್ಕಳಿದ್ದರು ಎಂದರು. ನಾವು ಅಧಿಕಾರದಲ್ಲಿದ್ದಾಗ ಮಂಗಳಸೂತ್ರ ಕಿತ್ತುಕೊಳ್ಳೋಕೆ ಬಂದ್ರ? 55 ವರ್ಷಗಳ ಕಾಲ ನಾವು ಅಧಿಕಾರದಲ್ಲಿದ್ದಾಗ ಯಾರಾದರೂ ಬಂದ್ರ? ಕಾಂಗ್ರೆಸ್ ಬಂದರೆ ಆಸ್ತಿ ಕೀತ್ತುಕೊಳ್ಳುತ್ತಾರೆ ಅಂತ ಸುಳ್ಳು ಹೇಳುತ್ತಾರೆ.ನಾವು ಅಧಿಕಾರಕ್ಕೆ ಬಂದರೆ ಐದು ನ್ಯಾಯ 25 ಗ್ಯಾರಂಟಿಗಳನ್ನು ಕೊಡುತ್ತೇವೆ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ…
ಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರಣಿ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ತಿಂಗಳಾನುಗಟ್ಟಲೆ ಓಡಾಡಿದರು ವೀಸಾ ಸಿಗುವುದಿಲ್ಲ ಆದರೆ ಪ್ರಜ್ವಲ್ ರೇವಣ್ಣ ಅವರಿಗೆ ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು ಎಂದು ಪ್ರಶ್ನಿಸಿದರು. ಹಾವೇರಿಯಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಜರ್ಮನಿಗೆ ಹೋಗಲು ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು? ಜನರು ತಿಂಗಳುಗಟ್ಟಲೆ ಓಡಾಡಿದರೂ ವೀಸಾ ಸಿಗುವುದಿಲ್ಲ. ಆದರೆ ಪ್ರಜ್ವಲ್ ರೇವಣ್ಣಗೆ ಹೇಗೆ ಒಂದೇ ದಿನದಲ್ಲಿ ವೀಸಾ ಸಿಕ್ಕಿತು? ಈ ವಿಚಾರವನ್ನು ಚುನಾವಣೆಯಲ್ಲಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಹೇಳಿಕೆ ನೀಡಿದರು. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕಾರ ಕಾಂಗ್ರೆಸ್ ಜೆಡಿಎಸ್ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಯಾರ ಮೇಲೆ ಯಾರು ಬೇಕಾದರೂ ಆರೋಪ ಮಾಡಬಹುದು. ಆ ಕೃತ್ಯ ಆಗಿದ್ದು ನಿಜ ಅಲ್ವಾ? ಆ ಹೆಣ್ಣು ಮಕ್ಕಳ ಪರಿಸ್ಥಿತಿ…
ಯಾದಗಿರಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್. ಡಿ ಕುಮಾರಸ್ವಾಮಿ ಇದರ ಹಿಂದೆ ಮಹಾನಾಯಕನ ಕೈವಾಡ ಇದೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು ರಾಜಕೀಯ ಮಾಡುವುದಾಗಿದ್ರೆ ಏನು ಬೇಕಾದರೂ ಮಾಡುತ್ತಿದ್ದಿವಿ ಎಂದು ತಿಳಿಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜೇಗೌಡ ಯಾರ್ಯಾರನ್ನು ಭೇಟಿಯಾಗಿದ್ದಾರೆ ಎಂದು ಗೊತ್ತಿದೆ.ಮುಂಚಿತವಾಗಿಯೇ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು.ರಾಜಕೀಯ ಮಾಡೋದಾದರೆ ಏನು ಬೇಕಾದರೂ ಮಾಡುತ್ತಿದ್ವಿ. ನಾನು ಏನು ಮಾಡಬೇಕು ಅನ್ನೋದು ನನಗೂ ಗೊತ್ತಿದೆ. ಎಚ್ ಡಿ ಕುಮಾರಸ್ವಾಮಿ ಮಹಾನಾಯಕ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು. ಕುಮಾರಸ್ವಾಮಿಯವರು ನಾರಿ ಶಕ್ತಿ ಬಗ್ಗೆ ತಂದೆ ತಾಯಿ ಬಗ್ಗೆ ಬಹಳ ಗೌರವಿದೆ. ಹೆಣ್ಣುಮಕ್ಕಳಿಗೆ ಗೌರವ ಇದೆ ಅಂತ ಹೇಳುತ್ತಾರಲ್ಲ. ಹಾಗಾದರೆ ಮೊದಲು ಹೋಗಿ ಆ ತಾಯಂದಿರಿಗೆ ಧೈರ್ಯ ಹೇಳುವ ಹಾಗೂ ಸಾಂತ್ವನ ತುಂಬುವಂತ…
ಬಾಗಲಕೋಟೆ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಚಿವ ಶಿವಾನಂದ್ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಾಗಿದೆ. ಹೌದು ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಏಪ್ರಿಲ್ 29ರಂದು ನವನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ಕಾರ್ಮಿಕ ನಿರೀಕ್ಷಕ ರಮೇಶ್ ಭೀಮಪ್ಪ ಸಿಂದಗಿ ಅವರ ದೂರಿನ ಅನ್ವಯ ಇದೀಗ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದರ ಗೆಸ್ಟ್ ಹೌಸ್ ನಲ್ಲಿ ಪ್ರಜ್ವಲ್ ರೇವಣ್ಣ ಅವರು ಚಿತ್ರೀಕರಣ ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು ಈ ಹಿನ್ನೆಲೆಯಲ್ಲಿ SIT ತಂಡ ಈ ಒಂದು ಗೆಸ್ಟ್ ಹೌಸ್ ಅನ್ನು ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಳೆದ 5 ವರ್ಷಗಳ ಹಿಂದೆ ಈ ಒಂದು ಗೆಸ್ಟ್ ಹೌಸ್ ಉದ್ಘಾಟನೆಯಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಎಂಪಿ ಗೆಸ್ಟ್ ಹೌಸಿನಲ್ಲಿ ಚಿತ್ರೀಕರಣ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದೂ, SIT ತಂಡ ವಿಡಿಯೋ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.ವಾರದಲ್ಲಿ ನಾಲ್ಕು ದಿನ ಸರಕಾರಿ ಗೆಸ್ಟ್ ಹೌಸ್ ನಲ್ಲಿ ಪ್ರಜ್ವಲ್ ರೇವಣ್ಣ ಇರುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಜನರು ಪ್ರಜ್ವಲ್ ರೇವಣ್ಣ ಅವರನ್ನು ಭೇಟಿಯಾಗಲು ಗೆಸ್ಟ್ ಹೌಸ್ ಗೆ ಆಗಮಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಳೆದ 28 ರಂದು ಅಶ್ಲೀಲ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಅಂದು ಕೂಡ ಪ್ರಜ್ವಲ್ ರೇವಣ್ಣ ಅವರು ಅದೇ ಗೆಸ್ಟ್ ಹೌಸಿನಲ್ಲಿ ಇದ್ದರು…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಬಿಟ್ಟು ಕೆಳಗೆ ಇಳಿರಿ ಕೇವಲ 24 ಗಂಟೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬಿಡಿ ಅಧಿಕಾರದಿಂದ ಇಳೀರಿ ನೀವು 24 ಗಂಟೆಯಲ್ಲಿ ಅವರನ್ನ ನಾವು ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ಅಧಿಕಾರದಿಂದ ಬಿಟ್ಟು ಇಳೀರಿ. ನಿಮ್ಮ ಯೋಗ್ಯತೆಗೆ ಅವರನ್ನ ಬಿಟ್ಟು ಕಳುಹಿಸಿದ್ದೀರಿ. ಪ್ರಜ್ವಲ್ ನಮ್ಮ ಎಂಪಿ ಅಲ್ಲ. ಅವರು ಕೈ ಬೆಂಬಲಿತ ಎಂಪಿ ನಮ್ಮ ಎಂಪಿ ಆಗಲು ಇನ್ನೂ ಒಂದು ತಿಂಗಳು ನಾಲ್ಕು ದಿನ ಬಾಕಿ ಇದೆ. ನಮ್ಮ ಎಂಪಿಯಾಗಿ ಆಯ್ಕೆಯಾದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಆರ್ ಅಶೋಕ್ ತಿಳಿಸಿದರು.
ಯಾದಗಿರಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ. ವೀಸಾ ಪಾಸ್ ಪೋರ್ಟ್ ಕೊಡೋರು ಬಿಜೆಪಿಯವರೇ ತಾನೆ. ಅಮಿತ್ ಶಾ ಗೆ ಗೊತ್ತಿದ್ದರೂ ಪ್ರಜ್ವಲ್ ಗೆ ಟಿಕೆಟ್ ಯಾಕೆ ಕೊಟ್ಟರು? ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದವನಿಗೆ ಟಿಕೆಟ್ ಹಾಕಿ ಕೊಡಬೇಕು? ಹಾಗಾಗಿ ಪ್ರಕರಣ ಕುರಿತಂತೆ ಎಸ್ಐಟಿಯಿಂದ ಪಾರದರ್ಶಕವಾಗಿ ತನಿಖೆ ನಡೆಯುತ್ತದೆ ಎಂದು ತಿಳಿಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಅವರು, ಕಾರ್ತಿಕ್ ಪ್ರಜ್ವಲ್ ರೇವಣ್ಣ ಡ್ರೈವರ್ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ ಡ್ರೈವ್ ಕೊಟ್ಟಿದ್ದು. ಎಚ್ ಡಿ ಕುಮಾರಸ್ವಾಮಿ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಾರೆ. ಕೇಂದ್ರ ಸಚಿವ ಅಮಿತ್ ಶಾ ಗೆ ಗೊತ್ತಿದ್ದರೂ ಯಾಕೆ ಪ್ರಜ್ವಲ್ ಗೆ ಟಿಕೆಟ್ ಕೊಟ್ಟರು? ಎಸ್ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ ಎಂದು…
ಬೆಂಗಳೂರು : ಅಶ್ಲೀಲ ವಿಡಿಯೋ ಬಿಡುಗಡೆಯಲ್ಲಿ ಮಹಾ ನಾಯಕನ ಕೈವಾಡ ಇದೆ ಎಂದು ನೇರ ಹೆಸರು ಹೇಳದೆ ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಗುಡುಗಿದ್ದರು. ಇದೀಗ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕುಮಾರಸ್ವಾಮಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದೂ, ವಿಡಿಯೋ ಬಿಡುಗಡೆ ಹಿಂದೆ ಮೈತ್ರಿ ನಾಯಕರು ಹಾಗೂ ಹೆಚ್ಡಿ ಕುಮಾರಸ್ವಾಮಿ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಬಳಿ ವಿಡಿಯೋ ಇದ್ದಿದ್ದರೆ ಮುಂಚೆಯೇ ಬಿಡುಗಡೆ ಮಾಡುತ್ತಿದ್ದರು. ಇದರ ಹಿಂದೆ ಹಾಸನ ನಾಯಕರ ಕೈವಾಡ ಇದೆ. ಕುಮಾರಸ್ವಾಮಿ ಕೈವಾಡ ಕೂಡ ಇದೆ ಎಂದು ಅವರು ಆರೋಪಿಸಿದರು. ಹೆಣ್ಣು ಮಕ್ಕಳಿಗೆ ಅನ್ಯಾಯ ಆಗಿರುವ ಬಗ್ಗೆ ಗಮನ ಹರಿಸಬೇಕಿದೆ. ಈ ಕೇಸ್ ಬಗ್ಗೆ ಹಾಸನ ಜಿಲ್ಲೆಯಲ್ಲಿ ಮೊದಲೇ ಗುಸುಗುಸು ಇತ್ತು. ಹಾಗೆಂದು ವೀಡಿಯೋ ನೋಡಿದವರು ಯಾರೂ ಇರಲಿಲ್ಲ. ನ್ಯಾಯಾಲಯದ ತಡೆಯಾಜ್ಞೆ ತಂದಾಗ ಅದು ಖಚಿತ ಆಗಿದೆ. ಪೆನ್ಡ್ರೈವ್ ಬಿಡುಗಡೆಯಾದಾಗ ಬಹಿರಂಗವಾಗಿ ಚರ್ಚೆ ಆಗಿದೆ. ಈ ವಿಡಿಯೋ ಹಿಂದೆ ಹಾಸನ…