Author: kannadanewsnow05

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪುರುಷನಿಗೆ ಹೋಲಿಸಿದರೆ ಸ್ತ್ರೀ ತುಂಬಾ ಕಷ್ಟ ಪಡುತ್ತಾಳೆ ಎಲ್ಲರೊಂದಿಗೆ ಹೊಂದಿಕೊಂಡು ಹೋಗಬೇಕಾಗುತ್ತೆ ತಾಯಿಯಾಗಿ ಬರುತ್ತಾಳೆ ಅಕ್ಕ ತಂಗಿ ಆಗಿ ಬರುತ್ತಾಳೆ ದುರ್ಗೆಯ ಶಕ್ತಿ ಹೆಣ್ಣಿನಲ್ಲಿ ಇರುತ್ತೆ ಅಂತ ಹೇಳಲಾಗುತ್ತದೆ ಇಂತಹ ಹೆಣ್ಣಿನ ಮನಸ್ಸನ್ನು ಉದ್ದೇಶಪೂರ್ವಕವಾಗಿ ನೋಯಿಸಿ ಕಷ್ಟಕೊಟ್ಟಾಗ ಅವಳು ನೊಂದಾಗ ಅದು ಶಾಪವಾಗಿ ಪರಿಣಮಿಸುತ್ತದೆ ಪ್ರೀತಿಸಿ ಕೈಕೊಡುವುದು ಮದುವೆಯಾದ ಮೇಲೆ ದೌರ್ಜನ್ಯ ಕಷ್ಟಪಡುವುದು ಅಪಮಾನಿಸುವುದು ಮೋಸ ಮಾಡುವುದು ಇದೆಲ್ಲ ಘೋರ ಶಾಪವಾಗಿ ಪರಿಣಮಿಸುತ್ತದೆ ಪುರಾಣದಲ್ಲಿ ಶ್ರೀಕೃಷ್ಣನೇ ಗಾಂಧಾರಿಯ ಶಾಪಕ್ಕೆ ಒಳಗಾಗಬೇಕಾಯಿತು ಕೊನೆಗಾಲದಲ್ಲಿ ತನ್ನ ಮಕ್ಕಳಿಂದ ಒಂಟಿ ಮಾಡಿದ್ದಕ್ಕಾಗಿ ಆ ಶಾಪ ತಟ್ಟಿತು ದೊಡ್ಡ ದೊಡ್ಡ ಋಷಿಮುನಿ ಸನ್ಯಾಸಿಗಳೇ ಸ್ತ್ರೀ ಶಾಪಕ್ಕೆ ಒಳಗಾಗಬೇಕಾಯಿತು ಹೆಣ್ಣು ಮದುವೆ ಆಗುವಾಗ ಮನೆಯನ್ನು ಬಿಟ್ಟು ಗಂಡನ ಮನೆಗೆ ಬಂದು ಅಲ್ಲಿ ಒಗ್ಗಿಕೊಳ್ಳಬೇಕಾಗುತ್ತೆ ಹೀಗೆ ಬಂದ ಹೆಣ್ಣಿಗೆ ಕಷ್ಟ ಕೊಡುವುದು ಅವಮಾನಿಸುವುದು ಮಾಡಿದರೆ ಆ ದೇವರು ಕೂಡ ಶಾಪ…

Read More

ಬೆಂಗಳೂರು : ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ನಿನ್ನೆ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು, ತಮ್ಮ ಕಚೇರಿಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ.ಈ ವೇಳೆ ಅಧಿಕಾರಿಗಳ ಮುಂದೆ ಎಚ್ ಡಿ ರೇವಣ್ಣ ಅವರು ಕಿಡ್ನ್ಯಾಪ್ ಗೂ ನನಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ತಡರಾತ್ರಿಯಾವರೆಗೂ ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು, ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್​ನಲ್ಲಿ ಇರಿಸದೇ ಎಸ್​ಐಟಿ ತನ್ನ ಕಛೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್​ನಲ್ಲಿ ಇರಿಸದೇ ಎಸ್​ಐಟಿ ತನ್ನ ಕಛೇರಿಯಲ್ಲಿ ವ್ಯವಸ್ಥೆ ಮಾಡಿದ್ದು, ಹೀಗಾಗಿ ರಾತ್ರಿ ರೇವಣ್ಣರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲ್ಲ. ಇಂದು ಕೆಲ ಪ್ರಶ್ನೆಗಳನ್ನು ಮಾಡಲಿರುವ ಎಸ್​ಐಟಿ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ತೀರ್ಮಾನಿಸಿದ್ದಾರೆ.

Read More

ಕಲಬುರ್ಗಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಐಟಿಬಿಟಿ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ವಿಶ್ವಗುರುವಿಗೆ ಎಲ್ಲಾ ಗೊತ್ತಿರುತ್ತೆ ಅಂತಾರೆ ಇದೇಕೆ ಗೊತ್ತಿರಲ್ಲ? ಹುಬ್ಬಳ್ಳಿ ನೇಹಾ ಹತ್ಯೆ ಕೇಸ್ ಬಗ್ಗೆ ಇದ್ದ ಕಾಳಜಿ ಪ್ರಜ್ವಲ್ ಕೇಸ್ ನಲ್ಲಿ ಯಾಕೆ ಇಲ್ಲ? ಎಂದು ಕಲ್ಬುರ್ಗಿಯಲ್ಲಿ ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪೆನ್ ಡ್ರೈವ್ ಮಾಡಿದ್ದು ಯಾರು, ಬಿಡುಗಡೆ ಮಾಡಿದ್ಯಾರು ಎಲ್ಲಾ ಗೊತ್ತಿದೆ ಎಂದು ಕಲಬುರ್ಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದರು.ಮೈತ್ರಿ ಅಭ್ಯರ್ಥಿ ಬಿಡುಗಡೆ ಮಾಡಿದ್ದು ಅಂತ ಚಾಲಕ ಹೇಳುತ್ತಾನೆ.ಎಲ್ಲಾ ವಿಷಯ ಗೊತ್ತಿದ್ದರೂ ಬಿಜೆಪಿಗರು ಪ್ರಜ್ವಲ್ ಗೆ ಟಿಕೆಟ್ ಕೊಟ್ಟರು. ಸರ್ಕಾರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಲು ಹೇಳಿದೆ. ಆದರೆ ಇದುವರೆಗೂ ಕೇಂದ್ರ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಪ್ರಶ್ನಿಸಿದರು. ಎಸ್ಐಟಿ ರಚನೆ ಮಾಡಿ ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪ ವಿಚಾರ ಕುಮಾರಸ್ವಾಮಿ ಆರೋಪಕ್ಕೆ ಸಚಿವ ಪ್ರಿಯಾಂಕ ಖರ್ಗೆ…

Read More

ಕಲಬುರ್ಗಿ : ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಬಂಧನದ ಕುರಿತಾಗಿ ಕಲ್ಬುರ್ಗಿಯಲ್ಲಿ ಎಐಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿ, ಇಂತಹ ಪ್ರಕರಣದಲ್ಲಿ ಯಾರನ್ನು ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ. ಕಾನೂನು ಕಠಿಣವಿದೆ ಎಂದು ತಿಳಿಸಿದರು. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಇಂತಹ ಕೆಲಸbಮಾಡುತ್ತಾರೆ ಅವರಿಗೆ ಬುದ್ಧಿ ಬರಬೇಕು.ಅನ್ಯಾಯಕ್ಕೆ ಒಳಗಾದ ಕುಟುಂಬಗಳಿಗೆ ನ್ಯಾಯ ಸಿಗಬೇಕು.ಕಾನೂನಿನಿಂದ ಯಾರಿಗೂ ಬಿಡುಗಡೆ ಇಲ್ಲ ಕಾನೂನು ಕಠಿಣ ಇದೆ ಎಂದು ಅವರು ತಿಳಿಸಿದರು. ಇದು ಹತ್ತಾರು ವರ್ಷಗಳಿಂದ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಪ್ರಕರಣವನ್ನು ಯಾರು ರಾಜಕೀಯವಾಗಿ ಬಳಸಿಕೊಳ್ಳಬಾರದು. ಅದೇ ರೀತಿಯಾಗಿ ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಪ್ರಶ್ನಿಸಿದಾಗ ಉತ್ತರಿಸಿದ ಅವರು, ಪ್ರಜ್ವಲ್ ಬಗ್ಗೆ ನಾನು ಮಾತನಾಡಲಾರೆ ಎಂದು ಕಲಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Read More

ಬೆಂಗಳೂರು : ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರನ್ನು sit ಅಧಿಕಾರಿಗಳು ನಿನ್ನೆ ಬಂಧಿಸಿದ್ದು ಇದರ ಬೆನ್ನಲ್ಲೇ ಅಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಶಲ ರೇವಣ್ಣ ಅವರು ನಾಳೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ತಂದೆ ಬಂಧನದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಈ ಒಂದು ನಿರ್ಧಾರಕ್ಕೆ ಬಂದಿದ್ದು, ನಾಳೆ ಮಧ್ಯಾಹ್ನದ ಒಳಗೆ ಎಸ್ಐಟಿ ಮುಂದೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧರಿಸಿದ್ದಾರೆ. ಎಸ್ ಐ ಟಿ ಮುಂದೆ ಹಾಜರಾಗಿ ವಿಚಾರಣೆಯನ್ನು ಎದುರಿಸಲು ಪ್ರಜ್ವಲ ರೇವಣ್ಣ ನಿರ್ಧರಿಸಿದ್ದಾರೆ. ಸದ್ಯ ದುಬೈನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಪಾರ್ಟ್ಮೆಂಟ್ ಒಂದರಲ್ಲಿ ವಾಸ್ತವ ಹೂಡಿದ್ದಾರೆ. ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದುಬಂದಿದೆ.ರಾತ್ರಿ ಬೆಂಗಳೂರಿಗೆ ಬಂದು ನಾಳೆ ಎಸ್ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ತಂದೆ ಬಂಧನ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಲು ನಿರ್ಧರಿಸಿದ್ದಾರೆ…

Read More

ಬೆಂಗಳೂರು : ಬಿಸಿಲಿನ ಶಾಖದಿಂದ ಹಾಗೂ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣನ ಆಗಮನದಿಂದ ಜನರು ನಿರಾಳವಾಗಿದ್ದಾರೆ. ಕಳೆದ ಹಲವು ದಿನಗಳಿಂದ ಬೆಂಗಳೂರು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು ರೈತರಲ್ಲೂ ಕೂಡ ಸಂತಸ ಮೂಡಿಸಿದೆ ಇದೀಗ ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿ ರಾಜದ ಹಲವಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಸೋಮವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿದ್ದು, ತಂಪಾದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ಅದರಲ್ಲೂ ಮೇ 7 ಮತ್ತು 8ರಂದು ಮಳೆ ಪ್ರಮಾಣ ಹೆಚ್ಚಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆದರೂ, ಮುಂದಿನ ಮೂರು ದಿನಗಳ ಕಾಲ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಷಿಯಸ್‌ ಹಾಗೂ ಕನಿಷ್ಠ 24-25 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು,…

Read More

ದಾವಣಗೆರೆ : ಮಹಿಳೆಯರ ಮೇಲೆ ಅತ್ಯಾಚಾರ ದೌರ್ಜನ್ಯ ನಡೆದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅತ್ಯಾಚಾರಿಗಳ ಪರ ನಿಲ್ಲುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಗಂಭೀರವಾದಂತಹ ಆರೋಪ ಮಾಡಿದರು. ನಿನ್ನೆ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿಯವರು ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಸಂಸದನ ಜೊತೆಗೆ ವೇದಿಕೆಯಲ್ಲಿ ಪ್ರಧಾನಿ ಮೋದಿ ಕಾಣಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಸಂಸದನ ಕುಕೃತ್ಯದ ವಿಚಾರ ಬಹಿರಂಗ ಆಗುತ್ತಿದ್ದಂತೆಯೇ ಆತ ವಿದೇಶಕ್ಕೆ ಓಡಿ ಹೋದರೂ ಪ್ರಧಾನಿ, ಗೃಹ ಮಂತ್ರಿಗೆ ಗೊತ್ತೇ ಆಗುವುದಿಲ್ಲ. ಪ್ರಧಾನಿ ಮೋದಿ, ಗೃಹ ಮಂತ್ರಿಗೆ ದೇಶದ ಪ್ರತಿಯೊಬ್ಬ ನಾಯಕರು, ಮುಖಂಡರ ಚಲನವಲನಗಳ ಇಂಚಿಂಚೂ ಮಾಹಿತಿ ಇರುತ್ತದೆ. ಅಂಥದ್ದರಲ್ಲಿ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಂಸದ ವಿದೇಶಕ್ಕೆ ಹೋದ ಬಗ್ಗೆ ಮಾಹಿತಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು.

Read More

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ವಿದೇಶದಿಂದ ಮಂಗಳೂರು ಏರ್ಪೋರ್ಟ್ಗೆ ಆಗಮಿಸುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಮಹಿಳೆ ಕಿಡ್ನಾಪ್ ಕೇಸ್ ಅಲ್ಲಿ ಹನಿನ್ನೆ ಅವರ ತಂದೆ ಹಾಗೂ ಜೆಡಿಎಸ್ ಶಾಸಕರಾದಂತಹ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಇದೀಗ ಲೈಂಗಿಕ ದೋರ್ಷಣೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಏರ್ಪೋರ್ಟ್ಗೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣಗೆ ಉದಾರಣೆಗೆ ಹಾಜರಾಗುವಂತೆ ಲುಕ್ ಔಟ್ ನೋಟಿಸ್ ನೀಡಿದ್ದು, ವಿದೇಶದಲ್ಲಿರುವ ಕಾರಣ ಪ್ರಜ್ವಲ್ ವಿಚಾರಣೆಗೆ ಹಾಜರಾಗುವುದಕ್ಕೆ ಸಾಧ್ಯವಾಗಿಲ್ಲ ಹಾಗಾಗಿ ನಿನ್ನೆ ಎಸ್ ಐ ಟಿ ಅಧಿಕಾರಿಗಳು ರೆಡ್ ಕಾರ್ನರ್ ನೋಟಿಸ್ ಜರಿ ಮಾಡಿತ್ತು ಹಾಗಾಗಿ ಇಂದು ಪ್ರಜ್ವಲ್ ರೇವಣ್ಣ ಅವರು ವಿದೇಶದಿಂದ ವಾಪಸ್ಸಾಗಿ ಮಂಗಳೂರಿನ ಏರ್ಪೋರ್ಟಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ದೇಶದಿಂದ ದೇಶಕ್ಕೆ ಸಂಚರಿಸುತ್ತಿದ್ದಾರೆ…

Read More

ಬೆಂಗಳೂರು : ಮಹಿಳೆಯನ್ನು ಆಭರಣ ಮಾಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ನಿನ್ನೆ SIT ಅಧಿಕಾರಿಗಳು ಬಂಧಿಸಿದ್ದಾರೆ. ಎಸ್ ಐ ಟಿ ಅಧಿಕಾರಿಗಳು ಇಂದು ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಂಗಳೂರಿನ ಕೋರಮಂಗಲದ ನ್ಯಾಯಾಧೀಶರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ನ್ಯಾಯಾಧಿಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ರೇವಣ್ಣ ಅವರನ್ನು SIT ಕಸ್ಟಡಿಗೆ ನೀಡುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದ್ದು, ಹಾಗಾಗಿ HD ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರುವುದು ಫಿಕ್ಸ್ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಪರ ವಕೀಲರು ನಾಳೆ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇರಲಿದ್ದು, ಇತ್ತ SIT ಕೂಡ ಆಕ್ಷೇಪಣೆ ಸಲ್ಲಿಸಿ ರೇವಣ್ಣ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಕೇಳಲಿದೆ ಎಂದು ತಿಳಿದುಬಂದಿದೆ. ಇಂದು ಬಹುತೇಕ ಶಾಸಕ ಎಚ್ ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರುವುದು ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಮಹಿಳೆ ಅಪಹರಣ ಪ್ರಕರಣಕ್ಕೆ…

Read More

ಬೆಂಗಳೂರು : ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ಅವರನ್ನು, ಎಸ್ಐಟಿ ಅಧಿಕಾರಿಗಳು ತಡರಾತ್ರಿ ಅವರಿಗೂ ವಿಚಾರಣೆ ನಡೆಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡು ಇಂದು ಮ್ಯಾಜಿಸ್ಟ್ರೇಟ್ ಎದುರು ಸೈಟ್ ಅಧಿಕಾರಿಗಳು ಎಸ್ ಡಿ ರೇವಣ್ಣ ಅವರನ್ನು ಹಾಜರುಪಡಿಸಲಿದೆ ಎಂದು ತಿಳಿದು ಬಂದಿದೆ. ಹೌದು ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣನನ್ನು SIT ಬಂಧಿಸಿದ್ದು,ತಡವರಾತ್ರಿಯವರೆಗೂ SIT ಅಧಿಕಾರಿಗಳು ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಚ್. ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕಾರ್ಲಟನ್ ಭವನದಲ್ಲಿರುವ SIT ಕಚೇರಿಯಲ್ಲಿ ರೇವಣ್ಣ ಅವರ ವಿಚಾರಣೆ ನಡೆದಿದೆ. ಇದೀಗ SITಮ್ಯಾಜಿಸ್ಟ್ರೆಟ್ ಎದುರು ಇಂದು ಹಾಜರುಪಡಿಸಲು ಎಲ್ಲ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡಿದೆ. ಸಂಜೆಯೊಳಗೆ ನ್ಯಾಯಾಧೀಶರ ಮುಂದೆ HD ರೇವಣ್ಣ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Read More