Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರೂ : ಫೆಬ್ರವರಿ 28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್ ಹಿನ್ನಲೆ ಎಚ್ಚೆತ್ತುಕೊಂಡ BBMP ಪಾಲಿಕೆಯಿಂದ 28 ರೊಳಗಾಗಿ ಕನ್ನಡ ಬೋರ್ಡ್ ಅಳವಡಿಕೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಗಳು, ವ್ಯಾಪಾರಸ್ಥರಿಗೆ ನೋಟಿಸ್ ನೀಡುತ್ತಿದೆ. ಈ ವರೆಗೆ ಒಟ್ಟು 34,262 ಸಾವಿರಕ್ಕೂ ಅಧಿಕ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ನಿಯಮ ಹಿನ್ನೆಲೆ ಬಿಬಿಎಂಪಿ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತಿದೆ. ಅಷ್ಟಕ್ಕೂ ಈ ವರೆಗೆ ಬಿಬಿಎಂಪಿ ಅಧಿಕಾರಿಗಳು ಯಾವ ಯಾವ ವಲಯದಲ್ಲಿ ಕನ್ನಡ ಬೋರ್ಡ್ ಅಳವಡಿಕೆಗೆ ನೋಟಿಸ್ ನೀಡಿದೆ. ಬೊಮ್ಮನಹಳ್ಳಿ – 6762 ಯಲಹಂಕ – 4518, ಬೆಂಗಳೂರು ದಕ್ಷಿಣ – 3747, ಮಹದೇವಪುರ – 4838, ದಾಸರಹಳ್ಳಿ – 1458, ಬೆಂಗಳೂರು ಪಶ್ಚಿಮ – 5650, ಪೂರ್ವ ವಲಯ – 5579 ರಾಜ ರಾಜೇಶ್ವರಿ ವಲಯದಲ್ಲಿ 2010 ನೋಟಿಸ್…
ಹಾವೇರಿ : ಹಾನಗಲ್ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಇಂದು ಹಾವೇರಿಯಲ್ಲಿ ಪ್ರತಿಭಟನೆಗೆ ನಿರ್ಧರಿಸಿದೆ. ಇಂದು ಮಧ್ಯಾಹ್ನ ಬಿಜೆಪಿ ಕಚೇರಿಯಿಂದ ಎಸ್ಪಿ ಕಚೇರಿಯ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಲಿದ್ದು, ನಂತರ ಕಛೇರಿ ಮುಂದೆ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದೆ. ಬಸವರಾಜ್ ಬೊಮ್ಮಾಯಿ ಆರ್ ಅಶೋಕ್ ಪ್ರತಿಭಟನೆಯ ನೇತೃತ್ವವನ್ನು ವಹಿಸಲಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಕಳೆದ ಎರಡು ದಿನಗಳ ಹಿಂದೆ ಸುದ್ದಿಗೋಷ್ಟಿಯಲಿ ಮಾತನಾಡಿ, ಕಾನೂನು ಸುವ್ಯವಸ್ಥೆಯಲ್ಲಿ ರಾಜಕಾರಣ ಮಧ್ಯ ಪ್ರವೇಶ ಮಾಡುತ್ತಿದೆ. ಪೋಕ್ಸೋ ಕಾಯ್ದೆ ಉಲ್ಲಂಘನೆ ಮಾಡಿದ್ದಲ್ಲದೆ ಸಂತ್ರಸ್ತೆಗೆ ಆಮಿಷ ಕೂಡ ಒಡ್ಡಲಾಗಿದೆ.ಸ್ಥಳೀಯ ಪೊಲೀಸರು ಮತ್ತು ಹಾಕುವಂತಹ ಎಲ್ಲಾ ಸಾಕ್ಷಿಗಳಿವೆ ಎಸ್ಐಟಿ ತನಿಖೆಗೆ ಸಿಎಂ ನಿರಾಕರಿಸಿ ಪ್ರೋತ್ಸಾಹ ಮಾಡಿದಂತೆ ಮಾಡಿದ್ದಾರೆ.ಹಾಗಾಗಿ ಜ.20 ರಂದು ಹಾವೇರಿ ಎಸ್ ಪಿ ಕಚೇರಿ ಮುಂದೆ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಹಾನಗಲ್ ಠಾಣೆಯ ಪೊಲೀಸರು ಇದುವರೆಗೂ 10 ಆರೋಪಿಗಳನ್ನು…
ಬೆಂಗಳೂರು: ಪಿ.ಎಸ್.ಐ.ಮತ್ತು ಸಿಟಿಐ ಪರೀಕ್ಷೆ ಪತ್ರಿಕೆ ಲೀಕ್ ಮಾಡಿರುವ ಆರೋಪ ಕೇಳಿ ಬಂದಿದೆ. ಇಂಟೆಲಿಜೆನ್ಸ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಲಿಂಗಯ್ಯ ಎಂಬ ಅಧಿಕಾರಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. 545 ಪಿಎಸ್ಐ ಹುದ್ದೆ ಸಿಟಿಐ(ಕಮರ್ಷಿಯಲ್ ಟ್ಯಾಕ್ಸ್ ಇನ್ಸೆಕ್ಟರ್) ಕೆಪಿಎಸ್ಸಿ ನಡೆಸುತ್ತಿರುವ ಪರೀಕ್ಷೆ ಇದಾಗಿದೆ. ಇತ್ತ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಹಾಗೂ ವಾಟ್ಸ್ಆ್ಯಪ್ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮಾಡಿದ್ದಾರೆ. ಹಣಕ್ಕೆ ಬೇಡಿಕೆ, ಪರೀಕ್ಷೆ ವಿಚಾರವಾಗಿ ಡೀಲ್ ಬಗ್ಗೆ ಲಿಂಗಯ್ಯ ಮಾತಾಡಿದ್ದಾರೆ ಎನ್ನುವ ಆಡಿಯೋ, ವಾಟ್ಸಾಪ್ ಚಾಟ್ ವೈರಲ್ ಹಿನ್ನೆಲೆ ಚಂದ್ರಾಲೇಔಟ್ ಠಾಣೆಯಲ್ಲಿ ಪರೀಕ್ಷಾರ್ಥಿಗಳು ದೂರು ನೀಡಿದ್ದಾರೆ. ಇತ್ತ ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಆರೋಪಿಸಿ ದೂರು ದಾಖಲಿಸುತ್ತಿದ್ದಂತೆ ಎಚ್ಚೆತ್ತ ಸಿಸಿಬಿ ಅಧಿಕಾರಿಗಳು ಪಿಎಸ್ಐ ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಅಫಜಲಪುರ : ಅಫಜಲಪುರ ತಾಲೂಕಿನ ಗ್ರಾಮವೊಂದರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಸಂಬಂಧಿಯೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದರಿಂದ ಗರ್ಭಿಣಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಪಾಲಕರಿಗೆ ಮಾಹಿತಿ ಮೂಲಗಳು ತಿಳಿಸಿವೆ. ನಿಂಬರಗಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆಳಂದ ತಾಲೂಕಿನ ಗ್ರಾಮವೊಂದಕ್ಕೆ ಸೇರಿದ್ದ ಈ ಬಾಲಕಿ, ವಸತಿ ಶಾಲೆಯಲ್ಲಿ ಇದ್ದಾಗ ಹೊಟ್ಟೆ ನೋವು ಎಂದು ತಿಳಿಸಿದಳು. ನಿಂಬರ್ಗಾ ಠಾಣೆಯಲ್ಲಿ FIR ದಾಖಲಾಗಿದೆ. ಆಳಂದ್ ತಾಲೂಕಿನ ಗ್ರಾಮಕ್ಕೆ ಸೇರಿದ್ದ ಬಾಲಕಿ ಎಂದು ಹೇಳಲಾಗುತ್ತಿದ್ದು, ವಸತಿ ಶಾಲೆಯಲ್ಲಿ ಹೊಟ್ಟೆ ನೋವು ಎಂದಾಗ ಶಾಲೆಯ ಸಿಬ್ಬಂದಿ ಪಾಲಕರಿಗೆ ಮಾಹಿತಿ ನೀಡಿದ್ದರು . ಬಳಿಕ ಪೋಷಕರು ಮತ್ತು ಸಿಬ್ಬಂದಿ ಸೇರಿ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಸ್ಕ್ಯಾನಿಂಗ್ನಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ತಿಳಿದ ಪೋಷಕರು ಗಾಬರಿಗೊಂಡರು. ಕಳೆದ ತಿಂಗಳು ಅಂದರೆ ಡಿಸೆಂಬರ್ 16ರಂದು ಬಾಲಕಿಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ…
ಬೆಂಗಳೂರು : ರಾಜ್ಯ ಅಪೆಕ್ಸ್ ಸಹಕಾರಿ ಬ್ಯಾಂಕ್ಗೆ 233 ಕೋಟಿ ರು. ವಂಚನೆ ಮಾಡಿರುವ ಪ್ರಕರಣದ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಮಾಲಿಕತ್ವದ ಸಕ್ಕರೆ ಕಂಪನಿಯ ಅಧಿಕಾರಿಗಳಿಗೆ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ. ಮಾಜಿ ಸಚಿವರ ವಿರುದ್ದ ದಾಖಲಾಗಿದ್ದ ವಂಚನೆ ಪ್ರಕರಣದ ಎಫ್ಐಆರ್ಗೆ ತಕ್ಷಣವೇ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೆ ತನಿಖೆ ಚುರುಕುಗೊಳಿಸಲು ಸಿಐಡಿ ಮುಂದಾಗಿದೆ. ಮೊದಲ ಹಂತದಲ್ಲಿ ಆರೋಪಿಗಳ ವಿಚಾರಣೆಗೆ ಸಿಐಡಿ ನೋಟಿಸ್ ನೀಡಲಿದ್ದು, ಇದಕ್ಕೆ ಆರೋಪಿಗಳ ಪ್ರತಿಕ್ರಿಯೆ ಬಳಿಕ ಕಠಿಣ ಕ್ರಮಕ್ಕೆ ನಿರ್ಧರಿಸಿದೆ ಎನ್ನಲಾಗಿದೆ. ಈ ವಂಚನೆ ಸಂಬಂಧ ಬೆಂಗಳೂರಿನ ವಿವಿ ಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಐಡಿಗೆ ಸರ್ಕಾರ ವಹಿಸಿತ್ತು. ರಾಜ್ಯ ಅಪೇಕ್ಸ್ ಬ್ಯಾಂಕ್ ಅಲ್ಲಿ 2013 ರಿಂದ 2017ರವರೆಗೆ ರಮೇಶ್ ಜಾರಕಿಹೊಳಿ ಸಾಲವನ್ನು ಪಡೆದಿದ್ದರು.ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಂಪನಿ ಸ್ಥಾಪಿಸಲು 233 ಕೋಟಿ ರು. ಸಾಲವನ್ನು ಪಡೆದಿದ್ದರು.…
ಮೈಸೂರು : ಬಾಬ್ರಿ ಮಸೀದಿ ಕೆಡವಿದಾಗ ನಾನು ಅಯೋಧ್ಯೆಯಲ್ಲಿ ಟೆಂಟ್ ನಲ್ಲಿ ಎರಡು ಬೊಂಬೆಗಳನ್ನ ಇಟ್ಟಿದ್ದು ನೋಡ್ದಿದೆ ಜನರೆಲ್ಲಾmರೂ ಇವನೇ ಶ್ರೀ ರಾಮ ಶ್ರೀ ರಾಮ ಎಂದು ಹೇಳುತ್ತಿದ್ದರು ಎಂಬ ಸಚಿವ ಕೆ ಏನ್ ರಾಜಣ್ಣ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು ಡಿಸಿಎಂ ಸ್ಥಾನದ ಆಸೆಗಾಗಿ ಸಚಿವ ರಾಜಣ್ಣ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರದ ಕುರಿತು ಸಚಿವ ಕೆ ಎನ್ ರಾಜಣ್ಣ ಹೇಳಿಕೆಯ ವಿಚಾರವಾಗಿ ಡಿಸಿಎಂ ಸ್ಥಾನದ ಆಸೆಗಾಗಿ ರಾಜಣ್ಣ ಆ ರೀತಿ ಮಾತು ಆಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ರಾಜಣ್ಣ ವಿರುದ್ಧ ವಾಗ್ದಾಳಿ ನಡೆಸಿದರು. ಎಸ್ ಟಿ ಸಮುದಾಯ ರಾಮನನ್ನು ಎದೆಯಗೂಡಲಿ ಇಟ್ಟುಕೊಂಡಿದ್ದಾರೆ.ಕೆ ಎನ್ ರಾಜಣ್ಣ ಅದೇ ಸಮುದಾಯಕ್ಕೆ ಸೇರಿದವರು. ಸಿಎಂ ಸಿದ್ದರಾಮಯ್ಯ ಓಲೈಸಲು ಇಲ್ಲಸಲ್ಲದ ಮಾತು ಆಡುತ್ತಿದ್ದಾರೆ. ಇಂಥವರಿಗೆಲ್ಲ ಜನರೇ ಉತ್ತರ ಕೊಡುತ್ತಾರೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಸಂಸದ ಪ್ರತಾಪ್…
ಶಿಡ್ಲಘಟ್ಟ : ಮುಂದಿನ ಲೋಕಸಭೆ ಚುನಾವಣೆಯಲ್ಲಿ 3ನೇ ಬಾರಿಗೆ ಮೋಧಿ ಅವರು ಪ್ರಧಾನ ಮಂತ್ರಿ ಆಗಲಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಟಿಗಳನ್ನು ನಂಬಬೇಡಿ, ಮೋಧಿ ಸರ್ಕಾರದ ಗ್ಯಾರೆಂಟಿಗಳ ಮೇಲೆ ಭರವಸೆ ಇಡಿ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ತಾಲೂಕಿನ ದೇವರಗುಡಿಪಲ್ಲಿ ಗ್ರಾಮದ ಗಾಯತ್ರಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಅಯೋಧ್ಯೆಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯ ಶುಭವೇಳೆಯಲ್ಲಿ ಪಕ್ಷದ ಕೆಲ ವಿರೋಧಿಗಳ ಶ್ರೀರಾಮನ ಪ್ರಾಣಪ್ರತಿಷ್ಠಾನೆ ವಿಷಯದಲ್ಲಿ ರಾಜಕೀಯ ಮಾಡುತ್ತಾ 140 ಕೋಟಿ ಭಾರತೀಯರ ನಂಬಿಕೆಗೆ ತ್ಯುತಿ ತರುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ಜನವರಿ 22ರಂದು ನಡೆಯಲಿದೆ ಆ ಹಿನ್ನೆಲೆಯಲ್ಲಿ ಪ್ರತಿ ಗ್ರಾಮದಲ್ಲೂ ಮನೆ ಮನೆಗೆ ಮಂತ್ರಾಕ್ಷತೆ ಹಾಗೂ ಶ್ರೀರಾಮಚಂದ್ರನ ಪೊಟೋ ಕ್ಯಾಲೆಂಡರ್ ನೀಡಿ ಮನೆಗಳ ಮುಂದೆ ರಂಗೋಲಿ ಬಿಡಿಸಿ ಉತ್ತರದ ಕಡೆ ದೀಪ ಬೆಳಗಿ ಶ್ರೀ ರಾಮ ಚಂದ್ರನನ್ನು ಮನೆಗಳಿಗೆ ಬರಮಾಡಿಕೊಳ್ಳಬೇಕೆಂದು ಮಾಜಿ ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು : ನೀತಿ ಆಯೋಗದ ಸಿಇಒ ಬಿ ವಿ ಆರ್ ಸುಬ್ರಮಣ್ಯಂ ಲೇಖನ ಉಲ್ಲೇಖಿಸಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಯ್ದಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರಮೋದಿ ಸರ್ಕಾರದ ಗೋಪ್ಯ ಅಜೆಂಡಾವನ್ನು ನೀತಿ ಆಯೋಗದ ಸಿಇಒ ಬಿ ವಿ ಆರ್ ಸುಬ್ರಮಣ್ಯಂ ಅವರು ಹೊರಗೆಡವಿದ್ದಾರೆ. ‘’ಅಲ್-ಜಝೀರಾ’’ ದಲ್ಲಿ ಪ್ರಕಟವಾಗಿರುವ ಲೇಖನ ನಾನು ಕಳೆದ ಹತ್ತು ವರ್ಷಗಳಿಂದ ಹೇಳುತ್ತಾ ಬಂದಿರುವುದನ್ನು ದೃಡೀಕರಿಸಿದೆ. ರಾಜ್ಯಗಳಿಗೆ ಹಂಚಿಕೆಯಾದ ಹಣವನ್ನು ಗಮನಾರ್ಹವಾಗಿ ಕಡಿತಗೊಳಿಸುವ ಏಕೈಕ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಹಣಕಾಸು ಆಯೋಗದೊಂದಿಗೆ ರಹಸ್ಯ ಮಾತುಕತೆಗಳಲ್ಲಿ 2014ರಿಂದ ತೊಡಗಿಸಿಕೊಂಡಿದ್ದರು ಎನ್ನುವುದು ಕಳವಳಕಾರಿ ಬೆಳವಣಿಗೆ. ರಾಜ್ಯಗಳ ತೆರಿಗೆ ಪಾಲಿನ ಹಣವನ್ನು ಪ್ರಸ್ತಾವಿತ 42% ನಿಂದ 32%ಗೆ ಇಳಿಸಲು ಬಿಜೆಪಿ ಸರ್ಕಾರವು ತನ್ನ ಹಿಂದಿನ ಆಡಳಿತಾವಧಿಯಲ್ಲಿ ನಡೆಸಿದ್ದ ಸಂಚು ಕೂಡಾ…
ಹುಬ್ಬಳ್ಳಿ : ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಎಂದು ಯತಿಂದ್ರ ಹೇಳಿ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಸಚಿನ ಪಾರ್ಟಿ ನಾವು ಶಿಸ್ತನ್ನು ಪಾಲಿನ ಮಾಡುತ್ತೇವೆ ಸದ್ಯ ಸಿಎಂ ಬಲಾವಣೆ ಯಾವುದೇ ವಿಷಯ ಪ್ರಸ್ತಾಪ ಇಲ್ಲ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, ಕಾಂಗ್ರೆಸ್ ಶಿಸ್ತಿನ ಪಾರ್ಟಿ ನಾವು ಶಿಸ್ತನ್ನು ಪಾಲನೆ ಮಾಡುತ್ತೇವೆ ಸದ್ಯ ಸಿಎಂ ಬದಲಾವಣೆ ಯಾವುದೇ ವಿಷಯ ಪ್ರಸ್ತಾಪ ಇಲ್ಲ ಈಗ ಆ ವಿಷಯ ಚರ್ಚೆ ಮಾಡುವುದು ಅನವಶ್ಯಕ ಹಾಗೂ ಅನಗತ್ಯ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರು ಕೇಳಿ ಬರುತ್ತಿದೆ. ಇದನ್ನು ಡೈವರ್ಟ್ ಮಾಡಲು ಈ ರೀತಿ ವಿಷಯ ಹೊರಬರುತ್ತಿದೆ ಎಂದು ಹುಬ್ಬಳಿಯಲ್ಲಿ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಬಹಳಷ್ಟು ಜನ ಪಕ್ಷಕ್ಕೆ ಬರುತ್ತಾರೆ. ಮನಸಿದ್ದವರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಇದು…
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಗಳ ಕುರಿತು ನಾವು ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್ನಲ್ಲಿ ಆಗಾಗ್ಗೆ ಮುನ್ನೆಲೆಗೆ ಚರ್ಚೆಗೆ ಬರುವ ‘ಪೂರ್ಣಾವಧಿ ಸಿಎಂ’ ವಿವಾದ ಮತ್ತೆ ಭುಗಿಲೆದ್ದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗಳಿಸಿದರೆ ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮಾಜಿ…