Author: kannadanewsnow05

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹೃದಯಾಘಾತದಿಂದ ಸಾವನಪ್ಪಿದ್ದು, ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಈ ಹಿನ್ನೆಲೆಯಲ್ಲಿ ಇದೀಗ ಅವರ ಪಾರ್ಥಿವ ಶರೀರ ಚನ್ನಪಟ್ಟಣದಿಂದ ತೆರಳಿ ಮದ್ದೂರಿಗೆ ಆಗಮಿಸಲಿದ್ದು, ಈಗಾಗಲೇ ಸೋಮನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಮಧ್ಯ ಅಂತ್ಯಕ್ರಿಯ ಸ್ಥಳದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಅಂತ್ಯಕ್ರಿಯ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅಳಿಯ ಹಾಗೂ ಪುತ್ರ ಭೇಟಿ ನೀಡಿದ್ದಾರೆ. ಅಳಿಯ ಅಮರ್ತ್ಯ ಹಾಗೂ ಆಕಾಶ್ ಕೆಂಪೇಗೌಡ ಭೇಟಿ ನೀಡಿದ್ದಾರೆ. ಮದ್ದೂರಿನ ಸೋಮನಹಳ್ಳಿಯಲ್ಲಿ ಇರುವಂತಹ ಸ್ಥಳಕ್ಕೆ ಇಬ್ಬರು ಆಗಮಿಸಿದ್ದಾರೆ. ಅಂತ್ಯಕ್ರಿಯೆ ಸಕಲ ಸಿದ್ಧತೆಗಳನ್ನು ಎಲ್ಲವನ್ನೂ ಕೂಡ ಪರಿಶೀಲನೆ ಮಾಡಿದ್ದಾರೆ.

Read More

ಉತ್ತರಕನ್ನಡ : ನಿನ್ನೆ ಮುರುಡೇಶ್ವರ ಬೀಚ್ನಲ್ಲಿ ಪ್ರವಾಸಕ್ಕೆ ಎಂದು ಬಂದಿದ್ದ 7 ಜನ ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದರು.ಈ ವೇಳೆ ಕೂಡಲೇ ಬೀಚ್ ಬಳಿ ಇದ್ದ ಲೈಫ್ ಗಾಡ್ಸ್ ಸಿಬ್ಬಂದಿಗಳು ಮೂವರನ್ನು ರಕ್ಷಿಸಿದ್ದು ಓರ್ವ ವಿದ್ಯಾರ್ಥಿನಿ ಸಾವನಪ್ಪಿದ್ದಳು. ನಿನ್ನೆಯಿಂದ ಉಳಿದ ಮೂವರು ವಿದ್ಯಾರ್ಥಿನಿಯರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿತ್ತು, ಇದೀಗ ಉಳಿದ ಮೂವರ ವಿದ್ಯಾರ್ಥಿನಿಯರ ಶವ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಹೌದು ಬೋಟ್ ಮೂಲಕ ಕೊಚ್ಚಿ ಹೋಗಿದ್ದ ಉಳಿದ ಮೂವರ ವಿದ್ಯಾರ್ಥಿನಿಯರ ಶವಗಳನ್ನು ಕರಾವಳಿ ಕಾವಲು ಪಡೆ ಹೊರತೆಗೆದಿದೆ. ನೆನ್ನೆ ವಿದ್ಯಾರ್ಥಿನಿ ಶ್ರಾವಂತಿಯ ಶವ ಮಾತ್ರ ಪತ್ತೆಯಾಗಿತ್ತು.ಇದೀಗ ದೀಕ್ಷಾ (15) ಲಾವಣ್ಯ (15) ಮತ್ತು ವಂದನ (15)ಮೃತ ದೇಹಗಳನ್ನು ಇದೀಗ ಕರಾವಳಿ ಕಾವಲು ಪಡೆ ಹೊರ ತೆಗೆದಿದೆ. ನಿನ್ನೆ ಮುರುಡೇಶ್ವರ ಬೀಚ್ ನಲ್ಲಿ 7 ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಮೂರು ವಿದ್ಯಾರ್ಥಿಯರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ್ದರು.ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಡೇಶ್ವರ ಬೀಚ್ನಲ್ಲಿ ಈ ಒಂದು ಘಟನೆ ನಡೆದಿತ್ತು.…

Read More

ರಾಯಚೂರು : ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಎನ್ನದೆ ಎಲ್ಲರ ಮೇಲು ನಾಯಿಗಳು ದಾಳಿ ಮಾಡುತ್ತಿವೆ. ಇದೀಗ ರಾಯಚೂರಿನಲ್ಲಿ ಬೀದಿ ನಾಯಿಗಳು ದಾಳಿ ಮಾಡಿದಾಗ ಅವುಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಯುವತಿ ಒಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿದೆ. ರಾಯಚೂರಿನ ಬಡ್ಡಿಪೇಟೆಯಲ್ಲಿ ಈ ಒಂದು ಘಟನೆ ನಡೆದಿದ್ದು ಕೋಮಾ ಸ್ಥಿತಿ ತಲುಪಿದೆ ಯುವತಿಯನ್ನು ಮಹಾದೇವಿ (20) ಎಂದು ತಿಳಿದುಬಂದಿದೆ.ಇಂದು ದೇವಾಲಯಕ್ಕೆ ಹೋಗುವ ವೇಳೆ ನಾಯಿಗಳು ದಾಳಿ ಮಾಡಿವೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಳ್ಳಾರಿಯಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರೆಫರ್ ಮಾಡಿದ್ದಾರೆ. ಆದರೆ ತೀವ್ರ ಬಡತನವಿರುವ ಕಾರಣ ಪುನಃ ರಾಯಚೂರು ಜಿಲ್ಲಾಸ್ಪತ್ರೆಗೆ ಕರೆತರಲಾಯಿತು ಎಂದು ಪಾಲಕರು ತಿಳಿಸಿದ್ದಾರೆ. ತನ್ನದಲ್ಲದ ತಪ್ಪಿಗೆ ಬೀದಿ ನಾಯಿಗಳ ದಾಳಿಗೆ ಚಿಂತಾಜನಕ ಸ್ಥಿತಿಗೆ ತಲುಪಿದ್ದು,…

Read More

ಮಡಿಕೇರಿ : ಸಾಮಾನ್ಯವಾಗಿ ವಾಹನ ಇರಲಿ ಬೈಕ್ ಇರಲಿ ಮೊಬೈಲ್ ಬಳಸುವುದು ಅಪಘಾತಕ್ಕೆ ಎಡೆ ಮಾಡಿಕೊಡುತ್ತದೆ ಎಂದು ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಲೇ ಇರುತ್ತಾರೆ ಆದರೆ ಇದೀಗ ಕೊಡಗಿನಲ್ಲಿ ಪ್ರಯಾಣಿಕರನ್ನು ಹೊತ್ತಂತಹ ಕೆಎಸ್ಆರ್ಟಿಸಿ ಚಾಲಕ ಒಬ್ಬ ಬಸ್ ಚಾಲನೆ ಮಾಡುತ್ತಲೇ ಮೊಬೈಲ್ ಬಳಸಿರುವ ವಿಡಿಯೋ ವೈರಲ್ ಆಗಿದ್ದು, ಸದ್ಯ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಆದಂತ ಚಾಲಕನನ್ನು ವೇಣುಗೋಪಾಲ್ ಎಂದು ತಿಳಿದುಬಂದಿದೆ. ಈತ ಪುತ್ತೂರು ಡಿಪೋ ಬಸ್​ ಚಾಲಕ ಮೊಬೈಲ್​ ಬಳಸುತ್ತಾ ಚಾಲನೆ ಮಾಡಿದ್ದಾರೆ. ಚಾಲಕ ವೇಣುಗೋಪಾಲ್ ಬಸ್​ ಚಾಲನೆ ಮಾಡುತ್ತ ಮೊಬೈಲ್‌ ಬಳಕೆ ಮಾಡುತ್ತಿರುವ ವಿಡಿಯೋವನ್ನು ಪ್ರಯಾಣಿಕರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬಸ್​​​ ಮಡಿಕೇರಿಯಿಂದ ಬಿರುನಾಣಿಗೆ ಹೋಗುತ್ತಿತ್ತು. ಚಾಲಕ ಮೊಬೈಲ್​ ಬಳಕೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮೊಬೈಲ್ ಬಳಕೆ ಮಾಡುತ್ತಿರುವುದನ್ನು ನಿರ್ವಾಹಕ ರೂಪೇಶ್ ವಿಡಿಯೋ ಮಾಡಿದ್ದಾನೆ. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ವೇಣುಗೋಪಾಲ್ ಡಿಪೋ ಬಳಿ ಕೋವಿ ತಂದು ಗಾಳಿಯಲ್ಲಿ…

Read More

ಮಂಡ್ಯ : ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ಹುಟ್ಟೂರು ಸೋಮನಹಳ್ಳಿಗೆ ಕೊಂಡೊಯ್ಯಲಾಗುತ್ತಿದ್ದು, ಜನ ಸಾಗರದ ನಡುವೆ ಈಗ ಎಸ್ ಎಂ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದತ್ತ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರ ಕೊಂಡೋಯ್ಯಲಾಗುತ್ತಿದೆ. ಈಗಾಗಲೇ ಬೆಂಗಳೂರಿನಿಂದ ಹೊರಟು ರಾಮನಗರ, ಚನ್ನಪಟ್ಟಣದಲ್ಲಿ ಜನರು ಅಂತಿಮ ದರ್ಶನ ಪಡೆದರು. ಕೆಲವೇ ಕ್ಷಣಗಳಲ್ಲಿ ಮದ್ದೂರಿಗೆ ಪಾರ್ಥಿವ ಶರೀರ ಆಗಮನವಾಗಲಿದೆ. ದಾರಿ ಉದ್ದಕ್ಕೂ ಎಸ್ಎಮ್ ಕೃಷ್ಣ ಅವರ ಅವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿ ಕಂಬನಿ ಮಿಡಿದರು. ಮಧ್ಯಾಹ್ನದ ಹೊತ್ತಿಗೆ ಸ್ವಗ್ರಾಮ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಪಾರ್ಥಿವ ಶರೀರ ತಲುಪುತ್ತದೆ. ಬಳಿಕ ಒಕ್ಕಲಿಗ ಸಂಪ್ರದಾಯದಂತೆ ಎಲ್ಲ ವಿಧಿ ವಿಧಾನಗಳ ಪ್ರಕಾರ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಈ ಒಂದು ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ…

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿಧನವು ಇಡೀ ಕರುನಾಡಿನ ಜನತೆಗೆ ತುಂಬಲಾರದಂತಹ ನಷ್ಟವಾಗಿದೆ. ಇದೀಗ ಅವರ ಪಾರ್ಥಿವ ಶರೀರವು ಬೆಂಗಳೂರಿನ ಸದಾಶಿವನಗರ್ ದಿಂದ ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತೆರಳುತ್ತಿದ್ದು, ಇಂದು ಅಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಲಿದೆ. ಇನ್ನು ಎಸ್ಎಂ ಕೃಷ್ಣ ಅವರ ಅಗಲಿಕೆಗೆ ನಟಿ ರಮ್ಯಾ ಅವರು ಭಾವುಕ ಪೋಸ್ಟ್ ಮಾಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕಿಕೊಂಡಿದ್ದು,ʻʻಒಬ್ಬ Statesman ಎಲ್ಲಾ ಅರ್ಥಗಳಲ್ಲಿ ರಾಜಕಾರಣಿ ಎಂದಿಗೂ ಅಲ್ಲ. ಅವರು ಯಾರನ್ನೂ, ತಮ್ಮ ಪ್ರತಿಸ್ಪರ್ಧಿಗಳನ್ನು ಸಹ ದ್ವೇಷಿಸಿ ಮಾತನಾಡಲಿಲ್ಲ. ಭವಿಷ್ಯದ ದೃಷ್ಟಿಯುಳ್ಳವ, ದಯಾಮಯಿ ಅನುಕಂಪದಿಂದ ಕೂಡಿರುವ, ಸುಂದರವಾಗಿ ಮಾತನಾಡುವ, ವಿದ್ಯಾವಂತ, ಹಾಸ್ಯಭರಿತ ವ್ಯಕ್ತಿತ್ವದವರು ನೀವು… ನಿಮ್ಮಂತೆ ಮತ್ತೊಬ್ಬರು ಇರಲು ಆಗುವುದಿಲ್ಲ.. ಎಲ್ಲದಕ್ಕಾಗಿ ಧನ್ಯವಾದಗಳು… ಎಂದು ಬರೆದುಕೊಂಡಿದ್ದಾರೆ. ಕೊನೆಯಲ್ಲಿ ನೀವು ಈಗ ನಿಮ್ಮ ಬೆಸ್ಟ್‌ಫ್ರೆಂಡ್‌ ಜೊತೆಗೆ ಇದ್ದೀರಾ ಎಂದು ಬರೆದು ಹಾರ್ಟ್‌ ಎಮೊಜಿ ಹಾಕಿದ್ದಾರೆ. ಎಸ್ಎಮ್ ಕೃಷ್ಣ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಟಿ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು, ಇಬ್ಬರು ಬಾಲಕಿಯರು ಆಟವಾಡುತ್ತಲೆ ಕಾಲು ಜಾರಿ ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅಮ್ಮಡಿ ಬಳಿಯ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ. ಹೌದು ಮಧ್ಯಪ್ರದೇಶದ ನಜೀರಾಬಾದ್‌ನ ಸುನಿತಾ ಬಾಯಿ ಮತ್ತು ಅರ್ಜುನ್‌ ಸಿಂಗ್ ಅವರ ಮಕ್ಕಳಾದ ಸೀಮಾ(6) ಮತ್ತು ರಾಧಿಕಾ(2) ಮೃತಪಟ್ಟ ಮಕ್ಕಳು ಎಂದು ತಿಳಿದುಬಂದಿದೆ. ಮಧ್ಯಪ್ರದೇಶದಿಂದ ಬಂದು ಕೊಪ್ಪದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸೀಮಾ ದಂಪತಿ ತೋಟದ ಮನೆಯಲ್ಲಿದ್ದರು. ನಿನ್ನೆ ಮಕ್ಕಳನ್ನು ಮನೆಯಲ್ಲೇ ಬಿಟ್ಟು ತಾಯಿ ಸೀಮಾ ತೋಟದ ಕೆಲಸಕ್ಕೆ ತೆರಳಿದ್ದರು. ಸಂಜೆ 7 ಗಂಟೆ ವೇಳೆ ಮನೆಗೆ ಹಿಂದಿರುಗಿದಾಗ ಮಕ್ಕಳು ಕಾಣೆಯಾಗಿದ್ದರು. ಬಳಿಕ ಇತರ ಕಾರ್ಮಿಕರ ಜೊತೆಗೂಡಿ ಹುಡುಕಾಡಿದಾಗ 8 ಗಂಟೆ ವೇಳೆ ಬಾವಿಯಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಿನ್ನೆ ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದರು. ಅವರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನುಳಿದ ಮೂವರ ಮೃತದೆಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇದೀಗ ಮೃತ ವಿದ್ಯಾರ್ಥಿನಿಯರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಿಸಿದೆ. ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಬ್ಬಂದಿ ವಜಾ ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣ ಸಂಬಂಧ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು ಅಮಾನತು ಗೊಳಿಸಲಾಗಿದೆ. ಅಥಿತಿ…

Read More

ಕೋಲಾರ : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಘೋರ ದುರಂತ ಒಂದು ಸಂಭವಿಸಿತ್ತು. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ 7 ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದ್ದು, ಓರ್ವ ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ, ಘಟನೆಗೆ ಸಂಬಂಧಿಸಿದಂತೆ ಮುರಾರ್ಜಿ ವಸತಿ ಶಾಲೆಯ ಅತಿಥಿ ಶಿಕ್ಷಕರನ್ನು ಹಾಗೂ ಡಿ ಗ್ರೂಪ್ ಸಿಬ್ಬಂದಿಗಳನ್ನು ವಜಾ ಗೊಳಿಸಲಾಗಿದೆ. ಹೌದು ನಿನ್ನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯ ಶಾಲಾ ವಿದ್ಯಾರ್ಥಿಯರನ್ನು ಶೈಕ್ಷಣಿಕ ಪ್ರವಾಸಕ್ಕೆ ಎಂದು ಮುರುಡೇಶ್ವರಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಇಲ್ಲಿನ ಸಮುದ್ರದಲ್ಲಿ ಆಟ ಆಡುತ್ತಿದ್ದ ಸಂದರ್ಭದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ.ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕರಾಗಿರುವ…

Read More

ಉತ್ತರಕನ್ನಡ : ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧಿಸಿ ಪೊಲೀಸರು ಇದೀಗ ಕ್ರಮ ಕೈಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರಕ್ಕೆ ತೆರಳದಂತೆ ಪ್ರವಾಸಿಗರಿಗೆ ಪೊಲೀಸರು ಇದೀಗ ಸೂಚನೆ ನೀಡಿದ್ದಾರೆ.ಕಡಲ ತೀರಕ್ಕೆ ಹೋಗಿದ್ದ ಪ್ರವಾಸಿಗರನ್ನು ಪೊಲೀಸರು ತಡೆದಿದ್ದಾರೆ.ನಿನ್ನೆ ಸಂಜೆ ಸಮುದ್ರ ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವಳ ಶವ ಪತ್ತೆಯಾಗಿದೆ. ಮೂವರ ಮೃತ ದೇಹಕ್ಕಾಗಿ ಶೋಧ ಕಾರ್ಯ ಇದೀಗ ಮುಂದುವರೆದಿದೆ. ಘಟನೆ ಹಿನ್ನೆಲೆ? ನಿನ್ನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಮುರಾರ್ಜಿ ದೇಸಾಯಿ ಶಾಲೆಯ ಶಾಲಾ ವಿದ್ಯಾರ್ಥಿನಿಯರನ್ನು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಕರೆದೊಯ್ಯಲಾಗಿತ್ತು. ಇಲ್ಲಿನ ಸಮುದ್ರದಲ್ಲಿ ಆಟವಾಡುತ್ತಿದ್ದಂತ ಸಂದರ್ಭದಲ್ಲಿ ಅಲೆಗಳ ಹೊಡೆತದಿಂದ 7 ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದಾರೆ. ಇವರಲ್ಲಿ ಲೈಫ್ ಗಾರ್ಡ್ ಸಿಬ್ಬಂದಿ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೇ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಶ್ರವಂತಿ ಗೋಪಾಲಪ್ಪ(15) ಎಂದು ಗುರುತಿಸಲಾಗಿದೆ. ಉಳಿದ ಮೂವರು ವಿದ್ಯಾರ್ಥಿನಿಯರಾದ ಯಶೋಧಾ, ವೀಕ್ಷಣಾ ಹಾಗೂ ಲಿಪಿಕಾ ಎಂಬುವರನ್ನು ರಕ್ಷಇಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ…

Read More