Author: kannadanewsnow05

ಬೆಂಗಳೂರು : ಕಳೆದ ವರ್ಷ ದೇಶದಲ್ಲಿ ಕೆಂಪು ರಾಣಿಯಂದೇ ಸದ್ದು ಮಾಡಿದ್ದ ಟೊಮ್ಯಾಟೋ ದರ ಗ್ರಾಹಕರ ಜೇಬನ್ನು ಸುಟ್ಟಿತ್ತು. ನಂತರ ಇರುಳು ಕೂಡ ಗ್ರಾಹಕರ ಕಣ್ಣಲ್ಲಿ ನೀರು ಬರಿಸುವ ದರ ಮುಟ್ಟಿತ್ತು. ಇದಾದ ಬಳಿಕ ಇದೀಗ ಬೆಳ್ಳುಳ್ಳಿ ದರ ಕೂಡ ಏರಿಕೆಯಾಗಿದ್ದು ಚಿಲ್ಲರೆ ಮಾರುಕಟ್ಟೆಗಳಲ್ಲಿ ಕೆಜಿಗೆ 450 ರೂಪಾಯಿಗೆ ಏರಿಕೆಯಾಗಿದೆ. ಸಗಟು ಬೆಳ್ಳುಳ್ಳಿ ದರ ಇಳಿಕೆ ಕಾಣುತ್ತಿದ್ದರೂ ಚಿಲ್ಲರೆ ಮಾರುಕಟ್ಟೆಯಲ್ಲಿ ದುಬಾರಿ ದರವೇ ಮುಂದುವರಿದಿದೆ. ಇಲ್ಲಿನ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ * 320-350 ರಿಂದ * 280-300 ಕ್ಕೆ ತಗ್ಗಿದ್ದು, ಇನ್ನೆರಡು ವಾರಗಳಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲೂ ಗ್ರಾಹಕರು ದರ ಇಳಿಕೆಯನ್ನು ಕಾಣಲಿದ್ದಾರೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಫಾರಮ್  400 ವರೆಗೆ ಹಾಗೂ ಜವಾರಿ  450 ವರೆಗೆ ಬೆಲೆಯಿದೆ. ಯಶವಂತಪುರ ಹಾಗೂ ದಾಸನಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸೇರಿ ಬೆಂಗಳೂರಿಗೆ ಬುಧವಾರ ಮಧ್ಯಪ್ರದೇಶದಿಂದ ಸುಮಾರು 2100 ಚೀಲ ಬೆಳ್ಳುಳ್ಳಿ ಬಂದಿದೆ.…

Read More

ಕೊಪ್ಪಳ : ಇಡೀ ಜಗತ್ತು ಎಷ್ಟೇ ಅಭಿವೃದ್ಧಿ ಹೊಂದಿದರು, ಎಷ್ಟೇ ಮುಂದುವರೆದರು ನಮ್ಮ ದೇಶದ ಇನ್ನೂ ಕೆಲವು ರಾಜ್ಯದ ಹಲವು ಹಳ್ಳಿಗಾಡು ಪ್ರದೇಶಗಳಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿದೆ. ರಾಜ್ಯದಲ್ಲಿ ಇನ್ನೂ ಅಸ್ಪೃಶ್ಯತಾ ಆಚರಣೆ ಜಾರಿಯಲ್ಲಿರುವುದು ಬೇಸರದ ಸಂಗತಿಯಾಗಿದೆ. ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ ಬೆಳಕಿಗೆ ಬಂದಿದ್ದು, ತಾಲೂಕಿನ ಹಾಲವರ್ತಿಯಲ್ಲಿ ದಲಿತರಿಗೆ ಹೊಟೇಲ್ ಮತ್ತು ಕ್ಷೌರದ ಅಂಗಡಿಗಳಲ್ಲಿ ಪ್ರವೇಶ ನಿರಾಕರಣೆಯಂತಹ ಘಟನೆ ಮರುಕಳಿಸಿವೆ. ಇದರ ವಿರುದ್ದ ಬುಧವಾರ ಅಲ್ಲಿನ ದಲಿತ ಯುವಕರೇ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಹೊಟೇಲ್‌ಗಳಲ್ಲಿ ಪ್ರವೇಶವಿಲ್ಲ, ದಲಿತರಿಗಾಗಿಯೇ ಪ್ರತ್ಯೇಕ ಪ್ಲೇಟ್, ತಟ್ಟೆ ಹಾಗೂ ಅವರು ಎಲ್ಲರ ಜೊತೆ ಕುಳಿತು ತಿನ್ನು ವಂತಿಲ್ಲ. ಕ್ಷೌರದ ಅಂಗಡಿಯಲ್ಲಿ ದಲಿತರಿಗೆ ಕ್ಷೌರ ಮಾಡುತ್ತಿಲ್ಲ. ಇದರಿಂದ ರೊಚ್ಚಿಗೆದ್ದ ವಿದ್ಯಾವಂತ ದಲಿತ ಯುವಕರು ಅಸ್ಪೃಶ್ಯತೆ ವಿರುದ್ಧ ಸಿಡಿದೆದ್ದು, ಪ್ರತಿಭಟಿಸಿ, ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ್ದಾರೆ. ನಮಗೆ ಗ್ರಾಮದ ಹೊಟೇಲ್‌ಗಳಲ್ಲಿ, ಕ್ಷೌರದ ಅಂಗಡಿಗಳಲ್ಲಿ ಪ್ರವೇಶ ಕೇಳಿದ್ದಕ್ಕೆ ಬಂದ್ ಮಾಡಿಕೊಂಡು ತೆರಳಿದ್ದಾರೆ. ಇದು ಅಮಾನವೀಯವಾಗಿದ್ದು, ನಮಗೂ ಸಾಮಾ ಜಿಕ…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವ ರೀತಿ ಪ್ರವಾಸ ಮಾಡಿದ್ದರು ಆ ಮಾದರಿಯಲ್ಲೇ ಫೆ.23ರಿಂದ ಅಥವಾ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಲೋಕಸಭಾ ಚುನಾವಣೆ ಪ್ರಚಾರಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಪ್ರತ್ಯೇಕವಾಗಿ ವಿವಿಧ ಜಿಲ್ಲೆ ಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಹಿತಿ ಪ್ರಕಾರ ಸಿದ್ದರಾಮಯ್ಯ 16, ಶಿವಕುಮಾರ್ 15 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಇವರಿಗೆ ಸಂಪುಟದ ಸಚಿವರುಗಳೂ ಸೇರಿ ಪಕ್ಷದ ಪ್ರಮುಖರು ಸಾಥ್ ನೀಡಲಿದ್ದಾರೆ.ಲೋಕಸಭಾ ಚುನಾವಣೆಯಲ್ಲೂ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ವಿಧಾನಸಭೆ ಚುನಾವಣೆ ವೇಳೆ ಹೆಣೆದ ತಂತ್ರವನ್ನೇ ಪ್ರಯೋಗಿಸುತ್ತಿದ್ದು, ಮೊದಲು ಇಬ್ಬರೂ ನಾಯಕರು ಪ್ರತ್ಯೇಕ ಪ್ರವಾಸ ನಡೆಸಿ ನಂತರ ಸಾಧ್ಯವಾದಷ್ಟೂ ಜಿಲ್ಲೆಗಳಲ್ಲಿ ಒಟ್ಟಾಗಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೊಳಿಸಿರುವ ಗ್ಯಾರಂಟೆಗಳ ಯಶಸ್ವಿ ಜಾರಿಹಾಗೂ ಕೇಂದ್ರದಿಂದ…

Read More

ಬೆಂಗಳೂರು : ಬಿಜೆಪಿ ಶಾಸಕ ಕೆ ಗೋಪಾಲರಿಗೆ ಕೊಲೆ ಬೆದರಿಕೆ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜ್ನನ್ನು ಪೊಲೀಸರುಪಡಿಸಿಕೊಂಡಿದ್ದರು. ನಂತರ ಜಾಮೀನು ಪಡೆದು ಹೊರ ಬಂದಾಗ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಪಕ್ಷ ನಾಯಕ ಆರ್ ಅಶೋಕ್ ಅವರು ನನ್ನನ್ನು ಮೇಯರ್ ಮಾಡಲು ಒಂದು ಕೋಟಿ ರೂಪಾಯಿ ಪಡೆದಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2010ರಲ್ಲಿ ನನ್ನನ್ನು ಬಿಬಿಎಂಪಿ ಮೇಯರ್‌ ಮಾಡುವುದಾಗಿ ಹಾಲಿ ವಿರೋಧ ಪಕ್ಷದ ನಾಯಕರಾಗಿರುವ ಆರ್.ಅಶೋಕ್‌ ಅವರು ಒಂದು ಕೋಟಿ ರು. ಪಡೆದಿದ್ದರು. ಆ ಹಣವನ್ನು ವಾಪಸ್ ಪಡೆದಿದ್ದಕ್ಕೆ ನನ್ನ ಮೇಲೆ ಅವರಿಗೆ ಸಿಟ್ಟಿದೆ ಎಂದು ಬಿಬಿಎಂಪಿ ಮಾಜಿ ಸದಸ್ಯ ಎಸ್.ಪದ್ಮರಾಜ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ, ಮಾಜಿ ಸಚಿವ ಗೋಪಾಲಯ್ಯರವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಶೋಕ್‌ ಹಾಗೂ ಗೋಪಾಲಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ನಾನು ಯಾರಿಗೂ ಕೊಲೆ ಬೆದರಿಕೆ ಹಾಕಿಲ್ಲ. ಎಲ್ಲವನ್ನೂ ಧರ್ಮಸ್ಥಳದ…

Read More

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಡೀ ರಾಜ್ಯವೇ ತಲೆತಗ್ಗಿಸುವಂತಹ ಘಟನೆ ನಡೆದಿದ್ದು. ಕೊಡಗಿನಲ್ಲೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಇನ್ನೂ ಜಗತ್ತು ಅಂದರೆ ಏನು ಎಂದು ತಿಳಿಯದ 2 ವರ್ಷದ ಪುಟಾಣಿ ಮಗುವಿನ ಮೇಲೆ ಕಾಮುಕನೊಬ್ಬ ದೌರ್ಜನ್ಯ ನಡೆಸಿದ್ದಾನೆ. ಕೇವಲ ಎರಡು ವರ್ಷದ ಮಗುವಿನ ಮೇಲೆ 45 ವರ್ಷದ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿದ್ದಾಪುರದಿಂದ ಸುಮಾರು 20 ಕಿ.ಮೀ ದೂರದ ಎಸ್ಟೇಟ್‌ನಲ್ಲಿ ಬುಧವಾರ ಸಂಜೆ ಕೃತ್ಯ ನಡೆದಿದೆ. ಮಣಿ ಎಂಬ ಕಾರ್ಮಿಕ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಾಮುಕನ ಪೈಶಾಚಿಕ ಕೃತ್ಯದಿಂದ ಅಸಸಗೊಂಡು ಗಂಭೀರವಾಗಿ ಗಾಯಗೊಂಡಿರುವ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದು ಜಾರ್ಖಂಡ್ ಮೂಲದ ಸಂಸಾರ. ಮನೆಯಲ್ಲಿ ಮಗು ಆಡುತ್ತಿತ್ತು. ಮಗುವಿನ ತಂದೆ ಬೇರೇನೋ ಕೆಲಸಕ್ಕೆ ಹೊರಗೆ ಹೋಗಿದ್ದರು. ಆಗ ಅಲ್ಲಿಗೆ ಬಂದ ಕಾಮುಕ ಮಗುವಿನ ಮೇಲೆ ರಕ್ಕಸನಂತೆ ಎರಗಿದ್ದಾನೆ. ಮಗು ಒಂದೇ ಸಮನೆ ಬೊಬ್ಬೆ ಹೊಡೆದಾಗ ತಂದೆ ಓಡಿ ಬಂದಿದ್ದು,…

Read More

ಬೆಂಗಳೂರು : ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಟಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಇತರೆ ಕಾರಣಗಳಿಂದ 2022-23ನೆ ಸಾಲಿನಲ್ಲಿ ಒಟ್ಟು 8805 ಶಿಶುಗಳು ಸಾವನ್ನಪ್ಪಿವೆ.ಅಲ್ಲದೆ ಅದೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯೊಂದರಲ್ಲೇ 614 ಶಿಶುಗಳು ಮೃತಪಟ್ಟಿವೆ ಎಂದು ವೈದ್ಯರು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನು ಶಿಶುಗಳ ಸಾವಿನ ಪ್ರಮಾಣ‌ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಇನ್ನು ಶಿಶುಗಳ ಸಾವಿಗೆ ತಾಯಂದಿರ ಆರೈಕೆಯಲ್ಲಿನ ವ್ಯತ್ಯಾಸವೂ ಒಂದು ಕಾರಣವಾಗಿದೆ. ಹಾಗೆ ಮಾತೃ ಪೂರ್ಣ ಯೋಜನೆ, ಮಾತೃವಂದನಾ, ಪೌಷ್ಟಿಕ ಆಹಾರ ವಿತರಣೆ ಇತರೆ ಯೋಜನೆಗಳು ಜಿಲ್ಲೆಯಲ್ಲಿ ವಿಫಲವಾಗಿವೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಹೆರಿಗೆ ವ್ಯವಸ್ಥೆ ಇಲ್ಲ ಎಂಬ ಆರೋಪವಿದೆ. ಕೇವಲ ಬಳ್ಳಾರಿ ಜಿಲ್ಲೆ ಅಷ್ಟೆ ಅಲ್ಲದೆ ಬೆಂಗಳೂರು ನಗರ ಜಿಲ್ಲೆಯಲ್ಲಿ 1371, ಮೈಸೂರು ಜಿಲ್ಲೆಯಲ್ಲಿ 669, ರಾಯಚೂರ ಜಿಲ್ಲೆಯಲ್ಲಿ 633, ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ ಎಂದು ಮಾಹಿತಿ ತಿಳಿದುಬಂದಿದೆ.ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು…

Read More

ಬೆಂಗಳೂರು : ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಫೆ.6 ರಂದು ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕೈ ನಾಯಕರಿಗೆ ಕರ್ನಾಟಕ ಹೈಕೋರ್ಟ್ 10,000 ದಂಡ ವಿಧಿಸಿತ್ತು. ಅಲ್ಲದೆ ಮಾರ್ಚ್ 6 ರಂದು ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚಿಸಿತ್ತು. 2022ರ ಏಪ್ರಿಲ್ ನಲ್ಲಿ ರಸ್ತೆ ತಡೆದು ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆದಿತ್ತು.ಕಾಂಗ್ರೆಸ್ ನಾಯಕರು. ವಿಧಾನಸೌಧದ ಚಲೋ ಕೈಗೊಂಡಿದ್ದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್​ ಸೇರಿದಂತೆ ಕಾಂಗ್ರೆಸ್​ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್​ ಪ್ರತಿಭಟನೆ…

Read More

ಬೆಂಗಳೂರು : ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಸಂಜೆ 5 ರಿಂದ ಮತದಾನ ನಡೆಯುವ 16ರ ಮಧ್ಯರಾತ್ರಿ 12ರ ವರೆಗೆ ಮತ್ತು ಮತ ಎಣಿಕೆ ದಿನವಾದ ಫೆಬ್ರವರಿ 20ರಂದು ಬೆಳಿಗ್ಗೆ ಆರರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಗರದ ಪೊಲೀಸ್ ಕಮಿಷನರಿ ವ್ಯಾಪ್ತಿಯಲ್ಲಿ ಮಧ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಈ ಕ್ರಮ ಮೇಲ್ನೋಟಕ್ಕೆ ಸಮರ್ಪಕವಾಗಿಲ್ಲ ಎಂದು ನಿನ್ನೆ ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಸದ್ಯ ಇದೇ ವಿಚಾರ ಸಂಬಂಧ ಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ‌ದಲ್ಲಿ ಮಾರ್ಪಾಡು ಮಾಡಲಾಗಿದೆ. ಫೆ.16ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಹಾಗೂ ಫೆ.20ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ನ್ಯಾ.ಎಸ್.ಆರ್.ಕೃಷ್ಣ ಕುಮಾರ್‌ರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಇದೇ 1ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘಟನೆಯ ಕಾರ್ಯದರ್ಶಿ ವೀರೇಂದ್ರ ಎನ್.ಕಾಮತ್…

Read More

ಬೆಂಗಳೂರು : ಸುಮಾರು 11.51 ಕೋಟಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಟಿ ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ಗೆ ಇದೀಗ ಬಿಬಿಎಂಪಿ ಅಧಿಕಾರಿಗಳು ಬೀಗ ಜಡದಿದ್ದಾರೆ ಆದರೆ ಈ ಸಂದರ್ಭದಲ್ಲಿ ರಾಕ್ ಲೈನ್ ವೆಂಕಟೇಶ್ ಅವರ ಪುತ್ರ ಯತೀಶ್ ಅವಾಜ್ ಹಾಕಿರುವ ಘಟನೆ ನಡೆದಿದೆ.. ಬಿಬಿಎಂಪಿ ಎಆರ್‌ಓ ರಮೇಶ್ ಗೆ ಯತೀಶ್ ಹಿಗ್ಗಾ ಮುಗ್ಗ ಅವಾಜ್ ಹಾಕಿದ್ದಾರೆ.ತೆರಿಗೆ ಬಾಕಿ ಉಳಿಸಿಕೊಂಡಿದ್ದ ರಾಕ್ ಲೈನ್ ಮಾಲ್ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಲು ಹೇಳಿದ್ದಾರೆ. ಈ ವೇಳೆ ಯತೀಶ್ ಬಾಗಿಲು ಯಾಕೆ ಹಾಕಬೇಕು ಮಾಲ್ ಏನು ನಿಮ್ಮಪ್ಪಂದ? ಆದೇಶ ಪ್ರತಿ ಎಲ್ಲಿ ಎಂದು ಕಿರಿಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಇದೇ ವಿಷಯವಾಗಿ ಮಾಲ್ ಮ್ಯಾನೇಜರ್ ಪ್ರಕಾಶ್ ಪ್ರತಿಕ್ರಿಯೆ ನೀಡಿದ್ದು ಬೆಳಿಗ್ಗೆ 7:00ಗೆ ಬಂದು ಅಧಿಕಾರಿಗಳು ನಿಂತಿದ್ದಾರೆ ಬೀಗ ಹಾಕಿ ಎಂದು ಆದರೆ ಈ ಕುರಿತು ಕೋರ್ಟ್ನಲ್ಲೇ ಇತ್ಯಾರ್ಥವಾಗಿದ್ದರು ಯಾಕೆ ಬಂದು ಈ ರೀತಿ ಮಾಡಿದರು ಗೊತ್ತಿಲ್ಲ ಬೀಗ…

Read More

ಬೆಂಗಳೂರು : ಬಹಳ ಕಾತುರದಿಂದ ಕಾಯುತ್ತಿದ್ದ ಬೆಂಗಳೂರು ಜನತೆಗೆ ಇದೀಗ ಸಿಹಿಸುದ್ದಿಯೊಂದು ಬಂದಿದ್ದು, ಚೀನಾದಿಂದ ಹಳದಿ ಮೆಟ್ರೋ ಕೊನೆಗೂ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತಲುಪಿದೆ. ಇಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ 6 ರೈಲಿನ ಕೋಚ್‌ಗಳು ಸುರಕ್ಷಿತವಾಗಿ ಹೆಬ್ಬಗೋಡಿ ಡಿಪೋಗೆ ತಲುಪಿರುವುದಾಗಿ ‘ನಮ್ಮ ಮೆಟ್ರೋ’ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ತಿಳಿಸಿದೆ. ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಮಾರ್ಗಕ್ಕಾಗಿ ಚೀನಾದಿಂದ ಈ ರೈಲಿನ ಬೋಗಿಗಳನ್ನು ತರಿಸಲಾಗಿದೆ. ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದ್ದು, ಒಟ್ಟು 45 ದಿನಗಳವರೆಗೆ ಸಿಗ್ನಲಿಂಗ್ ಪರೀಕ್ಷೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಹಳದಿ ಮಾರ್ಗ ಪ್ರಮುಖ ಮೆಟ್ರೋ ಕಾರಿಡಾರ್ ಆಗಿದ್ದು, ದಕ್ಷಿಣ ಬೆಂಗಳೂರನ್ನು ಎಲೆಕ್ಟ್ರಾನಿಕ್ ಸಿಟಿಯೊಂದಿಗೆ ಸಂಪರ್ಕಿಸುತ್ತದೆ. ಟ್ರ‍್ಯಾಕ್‌ನಲ್ಲಿ ಚಲಿಸುವ ಮೊದಲು ಕೆಲವೊಂದು ಪರೀಕ್ಷೆಗಳನ್ನು ನಡೆಸಬೇಕಿದೆ. ಇದಾದ ಬಳಿಕ ಟ್ರ‍್ಯಾಕ್‌ನಲ್ಲಿ 15 ಪರೀಕ್ಷೆಗಳನ್ನು ಮಾಡಬೇಕಿದೆ. ನಂತರ ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ, ರೈಲ್ವೆ ಸುರಕ್ಷತೆಯ ಮುಖ್ಯ ಆಯುಕ್ತರು, ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ಮತ್ತು ರೈಲ್ವೆ…

Read More