Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ತನಿಖೆಯ ಮೇಲೆ ನನಗೆ ನಂಬಿಕೆ ಇಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಡಿಸೆಂಬರ್ 19 ರಂದು ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಪ್ರಕರಣ ಸಂಬಂಧ ಈವರೆಗೂ ಕೆಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿಲ್ಲ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.ಅಲ್ಲದೆ, ದೂರುದಾರ ಸ್ನೇಹಮಯಿ ಕೃಷ್ಣ ವಿನಾಕಾರಣ ಅಡ್ವೋಕೇಟ್ ಜನರಲ್ ವಿರುದ್ದ ವೈಯಕ್ತಿಕ ಆರೋಪ ಮಾಡುತ್ತಿದ್ದಾರೆ. ಇದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ಸ್ನೇಹಮಯಿ ಕೃಷ್ಣ ಪರ ವಕೀಲ ವಾದ ಮಂಡಿಸಿ, ಮುಡಾ ಹಗರಣದ ಆರೋಪಿ ಸಿಎಂ ಆಗಿದ್ದಾರೆ. ಅವರೇ ರಾಜ್ಯದ ಮುಖ್ಯಸ್ಥರಾಗಿದ್ದು, ರಾಜ್ಯ ಸರ್ಕಾರದ ಹಿಡಿತದಲ್ಲಿಲ್ಲದ ಸಿಬಿಐ ಅಥವಾ ಬೇರೆ ಸ್ವತಂತ್ರ ಸಂಸ್ಥೆಗೆ ತನಿಖೆ ವಹಿಸಲು‌ ಕೋರಿದರು. ಅಲ್ಲದೆ, ಪ್ರಕರಣದ ಎಲ್ಲ ಮಾಹಿತಿ ನ್ಯಾಯಪೀಠಕ್ಕೆ…

Read More

ಮಂಡ್ಯ : ಮಾಜಿ ಸಿಎಂ ಹಾಗೂ ಮಾಜಿ ವಿದೇಶಾಂಗ ಸಚಿವ SM ಕೃಷ್ಣ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.ಇದೀಗ ಕೋಡಿಶ್ರೀಗಳು ಸಹ SM ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಎಸ್.ಎಂ.ಕೃಷ್ಣ ದೂರ ದೃಷ್ಟಿಯೇ ಕಾರಣ. ವರನಟ ಡಾ. ರಾಜಕುಮಾರ್ ಅಪಹರಣ ಆದಾಗ ಎಸ್.ಎಂ.ಕೃಷ್ಣ ನನ್ನನ್ನ ಮನೆಗೆ ಕರೆಸಿದ್ದರು. ಆ ವೇಳೆ ಎಸ್.ಎಂ.ಕೃಷ್ಣ ದಂಪತಿ ಚಿಂತಾಕ್ರಾಂತರಾಗಿದ್ದರು. 107 ದಿನಗಳ ಬಳಿಕ ರಾಜ್ ಕುಮಾರ್ ಬಿಡುಗಡೆ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದೆ. ಆದ್ದರಿಂದ ಕೃಷ್ಣರೊಂದಿಗೆ ನಿಕಟ ಹಾಗೂ ಪ್ರೀತಿ ಸಂಪರ್ಕವಿತ್ತು ಎಂದು ಶ್ರೀಗಳು ಅವರ ಜತೆಗಿನ ನೆನಪನ್ನು ಮೆಲುಕು ಹಾಕಿದ್ದಾರೆ. ನಾನು ಬೆಂಗಳೂರಿನಲ್ಲಿ ಓದುವಾಗ ಕಾನೂನು‌ ಕಾಲೇಜಿನಲ್ಲಿ ಎಸ್.ಎಂ.ಕೃಷ್ಣ ಅವರು ಪ್ರಾಧ್ಯಪಕಾರಾಗಿ ಕೆಲಸ ಮಾಡ್ತಿದ್ದರು. ಅದಾದ ಬಳಿಕ ಮೂರು ಬಾರಿ ಮಠಕ್ಕೆ ಭೇಟಿ ನೀಡಿದ್ರು.…

Read More

ಬೆಂಗಳೂರು : ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟಿನ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಡಿಸೆಂಬರ್ 12ರಂದು ಮಧ್ಯಾಹ್ನ 3:30ಕ್ಕೆ ಮಂದೂಡಿ ಆದೇಶ ಹೊರಡಿಸಿದ್ದರು. ಇಂದು ವಿಚಾರಣೆ ಆರಂಭವಾದ ವೇಳೆ, ಬಿ ಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು, ಆರೋಪಿತ ಘಟನೆ ನಡೆದಿರುವುದು ಫೆಬ್ರವರಿ 2 ಬೆಳಗ್ಗೆ 11 ರಿಂದ 11:30 ವರೆಗೆ ಬಿಎಸ್ ಯಡಿಯೂರಪ್ಪ ಅವರ ಮನೆಯಲ್ಲಿ ಈ ಒಂದು ಘಟನೆ ನಡೆದಿರುವುದು ಆರೋಪವಿದೆ. 20 ಮತ್ತು 25 ಜನರ ಸಮ್ಮುಖದಲ್ಲಿ ಹೇಗೆ ನಡೆಯುವುದು ಸಾಧ್ಯವೇ? ಒಂದುವರೆ ತಿಂಗಳ ಬಳಿಕ ದೂರು ದಾಖಲಿಸಲಾಗಿದೆ. ಈ ಮಧ್ಯೆ ಹಲವು ಬಾರಿ ದೂರುದಾರರು ಬಿಎಸ್ ಯಡಿಯೂರಪ್ಪ ಅವರ ಮನೆಗೆ ಬಂದಿದ್ದಾರೆ. ದೂರುದಾರ ಮಹಿಳೆ ನಟೋರಿಯಸ್ ಆಗಿದ್ದು, ಮಹಿಳೆ…

Read More

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಒಂದು ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಎನ್ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ನಿಧಾನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಅಲ್ಲದೇ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಎಸ್ಎಮ್ ಕೃಷ್ಣ ಕಠಿಣ ಸವಾಲುಗಳನ್ನು ಸಹ ಜಾಣ್ಮೆಯಿಂದ ಬಗೆಹರಿಸಿದರು. ಕುಟುಂಬ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ. ನಾನು ಎರಡು ತಿಂಗಳ ಹಿಂದೆ ಎಸ್ಎಂ ಕೃಷ್ಣ ಅವರನ್ನು ಭೇಟಿಯಾಗಿದ್ದೆ. ನಾಳೆ ಎಸ್ಎಂ ಕೃಷ್ಣ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತೇನೆ. ಎಸ್ಎಂ ಕೃಷ್ಣ ಪುತ್ಥಳಿ ನಿರ್ಮಾಣದ ಬಗ್ಗೆ ಚರ್ಚೆ ಮಾಡಿ ತೀರ್ಮಾನಿಸಲಾಗುತ್ತದೆ. ಎಂದು…

Read More

ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಂಬಂಧ ಬೆಳಗಾವಿಯ ಸುವರ್ಣಸೌಧದ ಎದುರುಗಡೆ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಈ ಒಂದು ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ತಾಳಿದ್ದು ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೌದು ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯೋದಕ್ಕೆ ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ಸಾಧ್ಯವಾಗಲಿಲ್ಲ.ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ಮೇಲೆ ಎಡಿಜಿಪಿ ಹಿತೇಂದ್ರರಿಂದಲೇ ಲಾಠಿಚಾರ್ಜ್ ನಡೆಸಲಾಯಿತು. ಲಾಠಿ ಏಟು ತಿಂದರು. ತಮ್ಮ ಹಠವನ್ನು ಬಿಡದಂತ ಅನೇಕರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಮುಂದಾದರು. ಪೊಲೀಸರ ಲಾಠಿ ಏಟಿನಿಂದಾಗಿ 50ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇವಳೇ ಶಾಸಕ ಯತ್ನಾಳ್ ಹಾಗೂ ಬಸವ ಜಯ ಮೃತ್ಯುಂಜಯ ಶ್ರೀಗಳನ್ನು ಕೂಡ ಪೊಲೀಸರು…

Read More

ಬೆಳಗಾವಿ : ಜಿಲ್ಲೆಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದಂತ ಸಂದರ್ಭದಲ್ಲಿಯೇ ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಒಂದು ಲಾಟರಿ ಚಾರ್ಜ್ ನಲ್ಲಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹೌದು ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯೋದಕ್ಕೆ ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ಮೇಲೆ ಎಡಿಜಿಪಿ ಹಿತೇಂದ್ರರಿಂದಲೇ ಲಾಠಿಚಾರ್ಜ್ ನಡೆಸಲಾಯಿತು. ಲಾಠಿ ಏಟು ತಿಂದರು ತಮ್ಮ ಹಠವನ್ನು ಬಿಡದಂತ ಅನೇಕರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಮುಂದಾದರು. ಪೊಲೀಸರ ಲಾಠಿ ಏಟಿನಿಂದಾಗಿ 50ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ.

Read More

ಬೆಂಗಳೂರು : ಇಂದು ನಾಡು ಕಂಡ ಅತ್ಯಂತ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವರಾದಂತಹ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 92 ವಯಸ್ಸಿನ ಎಸ್ಎಂ ಕೃಷ್ಣ ಅವರು ತಮ್ಮ ರಾಜಕೀಯ ಜೀವನದಲ್ಲಿ ರಾಜ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅದರಲ್ಲೂ ಬಹಳ ಪ್ರಮುಖವಾದಂತಹ ಯೋಜನೆಯಾದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಇವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿಗೊಳಿಸಲಾಯಿತು. ರಾಜ್ಯದ ಹಿಂದುಳಿದ ಪ್ರದೇಶವಾದ ರಾಯಚೂರಿನಲ್ಲಿ 2001ರಲ್ಲಿ ಈ ಒಂದು ಯೋಜನೆಗೆ ಚಾಲನೆ ನೀಡಲಾಯಿತು. ಹೌದು ರಾಜ್ಯದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದರು. ಈ ಮೂಲಕ ಮೊದಲ ಬಾರಿಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾದಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ ನೀಡಿದರು.ಸಿಎಂ ಎಸ್.ಎಂ ಕೃಷ್ಣ ಅವರಿಗೆ ಅಂದಿನ ಶಿಕ್ಷಣ ಸಚಿವ ಹೆಚ್.ವಿಶ್ವನಾಥ್, ರಾಯಚೂರು ಸಂಸದ ವೆಂಕಟೇಶ ನಾಯಕ ಅವರು ಸಾಥ್ ನೀಡಿದ್ದರು. 2001ರಲ್ಲಿ ಆಗಿನ ಸಿಎಂ ಆಗಿದ್ದ ಎಸ್‌ಎಂ ಕೃಷ್ಣ ಅವರು…

Read More

ಬೀದರ್ : ಮನೆಯಲ್ಲಿ ನೀರಿನ ಮೋಟಾರ್ ಆನ್ ಮಾಡುವ ವೇಳೆ ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಎಂಬ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.. ಮೃತ ಯುವಕನನ್ನು ನಾರಾಯಣಪುರ ಗ್ರಾಮದ ಕಲ್ಲಪ್ಪ ಬಸವರಾಜ ಮೇತ್ರೆ (30) ಎಂದು ತಿಳಿದುಬಂದಿದೆ. ಕಲ್ಲಪ್ಪ ಮನೆಯಲ್ಲಿನ ನೀರಿನ ಮೋಟರ್ ಆನ್ ಮಾಡಲು ತೆರಳಿದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ತಮ್ಮ ಸದಾಶಿವನಗರದಲ್ಲಿ ಸಾವನ್ನಪ್ಪಿದ್ದಾರೆ. ಇವಳೇ ಬೆಳಗಾವಿಯ ಅಧಿವೇಶನದ ಕಲಾಪದಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಸಂತಾಪಟ್ಟಿಸಿ ವಿಧಾನಸೌಧದಲ್ಲಿ ಎಸ್ಎಂ ಕೃಷ್ಣ ಅವರ ಥಳಿ ನಿರ್ಮಾಣ ಆಗಬೇಕು ಎಂದು ತಿಳಿಸಿದರು. ಸಂತಾಪ ಸೂಚನೆಯ ನಿರ್ಣಯದ ಮೇಲೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಎಸ್.ಎಮ್ ಕೃಷ್ಣ ಪುತ್ತಳಿ ಆಗಬೇಕು ಎಂದು ವಿಧಾನಸಭೆ ಕಲಾಪದಲ್ಲಿ ಸಚಿವ ಎಚ್ ಕೆ ಪಾಟೀಲ್ ಪ್ರಸ್ತಾಪಿಸಿದ್ದಾರೆ. ಕೃಷ್ಣ ನೀರಾವರಿ ಯೋಜನೆ ಪ್ರದೇಶದಲ್ಲಿ ಸ್ಮಾರಕ ಆಗಬೇಕು. ಆಲಮಟ್ಟಿ ಕೃಷ್ಣ ನೀರಾವರಿ ಯೋಜನೆ ಪ್ರದೇಶದಲ್ಲಿ ಪುತ್ಥಳಿ ನಿರ್ಮಾಣ ಆಗಬೇಕು. ಎಸ್ಎಮ್ ಕೃಷ್ಣ ಅವರ ನೆನಪು ನಮಗೆ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ ಕೆ ಪಾಟೀಲ್ ಮನವಿ ಮಾಡಿದರು.

Read More

ಚಾಮರಾಜನಗರ : ಕೊಳ್ಳೇಗಾಲದ ಮಾಜಿ ಶಾಸಕರು ಹಾಗೂ ಉಗ್ರಾಣ ನಿಗಮದ ಅಧ್ಯಕ್ಷರು ಆಗಿದಂತಹ ಎಸ್ ಜಯಣ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಅವರು ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆ ಇತ್ತು ಎಂದು ಸಹ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು ಈ ವೇಳೆ ಆಸ್ಪತ್ರೆಗೆ ಕರೆದುಕೊಂಡು ಹೋಗೋ ಮಾರ್ಗ ಮಧ್ಯದಲ್ಲಿ ಅವರು ನಿಧನರಾಗಿದ್ದಾರೆ. ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬಹಳ ಆಪ್ತರಾಗಿದ್ದರು ಎನ್ನಲಾಗಿದೆ.

Read More