Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಲು ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುತ್ತದೆ. ಈ ವಿಷಯದ ಕುರಿತಾಗಿ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆ ರಾಮನ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಯಾವ ಅಡೆತಡೆ ಇಲ್ಲದೆ ಕಾರ್ಯಕ್ರಮ ನಡೆಯುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಮೋದಿ ಎರಡು ದಿನ ಮೊದಲೇ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಎಲ್ಲರೂ ಬರುವುದು ಬೇಡ ಅಂತ ನಮಗೆ ಪ್ರಮುಖರ ಸೂಚನೆ ಇದೆ. 15 ದಿನದ ನಂತರ ಎಲ್ಲಾ ಸ್ನೇಹಿತರ ಜೊತೆಗೆ ನಾನು ಅಯೋಧ್ಯೆಗೆ ಹೋಗಿ ಬರುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ…
ಬೆಂಗಳೂರು : ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡ ರೀತಿ ಘಟನೆ ಆಗುತ್ತದೆ ಎಂಬ ಕಾಂಗ್ರೆಸ್ ಎಮ್ ಎಲ್ ಸಿ ಬಿ ಕೆ ಹರಿಪ್ರಸಾದ್ ಅವರ ಹೇಳಿಕೆಗೆ ಇದೀಗ ಸರ್ಕಾರವೇ ಅಸ್ತ್ರ ಉಪಯೋಗಿಸಿದ್ದು ಎಂಎಲ್ಸಿ ಹರಿಪ್ರಸಾದರನ್ನು ಇದೀಗ ಪೊಲೀಸರು ವಿಚಾರಣೆಗೆ ಕರೆದಿದ್ದರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ಹರಿಪ್ರಸಾದ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಹೇಳಿಕೆಯನ್ನು ಆಧರಿಸಿ ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ಪೊಲೀಸರಿಗೆ ವಿವಿಐಪಿ ಟ್ರೀಟ್ಮೆಂಟ್ ಬೇಡ ಬೇಕಿದ್ದರೆ ಅರೆಸ್ಟ್ ಮಾಡಿ ಎಂದು ಎಂಎಲ್ಸಿ ಹರಿಪ್ರಸಾದ್ ಕಿಡಿ ಕಾರಿದ್ದಾರೆ. ಸರ್ಕಾರದ ನಡಿಗೆ ಎಂ ಎಲ್ ಸಿ ಬಿ ಕೆ ಹರಿಪ್ರಸಾದ್ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು ಇದು ಕಾಂಗ್ರೆಸ್ ಸರ್ಕಾರ ಅಥವಾ ಆರ್ ಎಸ್ ಎಸ್ ಸರ್ಕಾರವ ಎಂದು ಆಕ್ರೋಶ ಹೊರಹಾಕಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್ ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ.ನನ್ನ ಜೊತೆಗೆ ವಿಜಯೇಂದ್ರರನ್ನು ಒಬ್ಬರು ಪರೀಕ್ಷೆಗೆ…
ಬೆಂಗಳೂರು : ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. ಟೆಂಟ್ನಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು ಎಂದು ಸಚಿವ ಕೆನ್ ರಾಜಣ್ಣ ಹೇಳಿದ್ದರು. ಇವರ ಈ ಹೇಳಿಕೆಗೆ ವ್ಯಾಪಕ ವಿರೋಧ ಮತ್ತು ಟೀಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಇದೀಗ ಕೆಎನ್ ರಾಜಣ್ಣ ತಮ್ಮ ಹೇಳಿಕೆಯನ್ನು ಸಮರ್ಥಸಿಕೊಂಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ ತಪ್ಪಾ? ಎಲ್ಲವೂ ನಮ್ಮ ನಂಬಿಕೆಗೆ ಬಿಡುವಂತಹದ್ದು. ಬಾಬ್ರಿ ಮಸೀದಿ ತೆರವು ಆದ ಮೇಲೆ ನಾನು ಹೋಗಿ ನೋಡಿದ್ದೇನೆ. ಅಯೋಧ್ಯೆಗೆ ಹೋದಾಗ ಇದ್ದ ಅಲ್ಲಿನ ಚಿತ್ರಣ ಹೇಳಿದ್ದೇನೆ ಅಷ್ಟೇ. ಏನು ಗೊಂಬೆಗಳನ್ನು ದೇವರು ಅಂತಾ ಪೂಜೆ ಮಾಡೋದೆ ಇಲ್ವಾ. ದಸರಾದಲ್ಲಿ ಬೊಂಬೆಗಳನ್ನು ಇಟ್ಟು ಪೂಜೆ ಮಾಡಲ್ವಾ? ಹಳ್ಳಿಗಳಲ್ಲಿ ಸಗಣಿ ಹುಂಡೆ ಮಾಡಿ ಗರಿಕೆ ಇಟ್ಟು ಪೂಜೆ ಮಾಡುತ್ತಾರೆ. ಅದನ್ನು ನಾವು ದೇವರು ಅಂದುಕೊಳ್ಳುತ್ತೇವೆ ಎಂದರು ಎಂದು ಹೇಳಿದರು. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಪೂರ್ಣ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಯತೀಂದ್ರ…
ಬೆಂಗಳೂರು : ಬೆಂಗಳೂರಿನ ಪಿಣ್ಯ ಫ್ಲೈ ಓವರ್ ನಲ್ಲಿ ಮತ್ತೆ ಸಂಚಾರ ಆರಂಭವಾಗಿದ್ದು, ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಪೀಣ್ಯ ಫ್ಲೈ ಓವರ್ ಕಳೆದ ಮೂರು ದಿನಗಳಿಂದ ಬಂದ್ ಆಗಿತ್ತು.ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಲೋಡ್ ಟೆಸ್ಟಿಂಗ್ ನಡೆಸಿತ್ತು.ಆದ್ದರಿಂದ ಲೋಡ ಟೆಸ್ಟಿಂಗ್ ಮುಕ್ತಾಯ ಹಿನ್ನೆಲೆ ಸಂಚಾರಕ್ಕೆ ಇದೀಗ ಅನುವು ಮಾಡಿಕೊಡಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಮತ್ತೆ ವಾಹನಗಳ ಸಂಚಾರ ಆರಂಭವಾಗಲಿದೆ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಹೈವೇಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಹಿನ್ನೆಲೆ ಲೋಡ್ ಟೆಸ್ಟಿಂಗ್ ನಡೆಸಲಿರುವ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ನಾಗಸಂದ್ರದ ಪಾರ್ಲೆ ಜಿ ಫ್ಯಾಕ್ಟರಿವರೆಗೂ 5 ಕಿಮೀ ಉದ್ದವಿರು ಪೀಣ್ಯ ಮೇಲ್ಸೇತುವೆಯ ವಯಾಡಕ್ಟ್ನ ಸಮಗ್ರತೆ ಹಾಗೂ ಲೋಡ್ ಟೆಸ್ಟಿಂಗ್ ಪರಿಶೀಲನೆ ಸಂಚಾರಕ್ಕೆ ನಿರ್ಬಂಧ ಹೇರಲು ಮುಖ್ಯ ಕಾರಣವಾಗಿದೆ. ಈ ಹಿಂದೆ ದುರಸ್ಥಿ ಸಂಬಂಧ ಐಐಎಸ್ಸಿ ತನಿಖೆ ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಫ್ಲೈಓವರ್ ನಲ್ಲಿ ಲೋಪ ಇರುವ ಸಂಬಂಧ ರಿಪೋರ್ಟ್ ನೀಡಿದ್ದು. ಈ ಕಾರಣ…
ಚಿತ್ರದುರ್ಗ : ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದ ವೇಳೆ ಟ್ಯಾಂಕರ್ ಲಾರಿ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ಮದಕರಿಪುರ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಬೆಂಗಳೂರು ಮೂಲದ ನಿರ್ಮಲ (55) ಹಾಗೂ ವಿನುತ (40)ಮಹಿಳೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಫಣಿರಾಜ್, ರಶ್ಮಿ, ಹಾಗೂ ಯಶಸ್ ಎನ್ನುವರಿಗೆ ಗಂಭಿರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಕಾರಲ್ಲಿ ಹೊಸಪೇಟೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಮೈಸೂರಿನ ಅರುಣ್ ಯೋಗಿರಾಜ್ ಅವರ ಕೈಯಲ್ಲಿ ಮೂಡಿಬಂದಂತಹ ರಾಮಲಲ್ಲ ಮೂರ್ತಿಯನ್ನು ಈಗಾಗಲೇ ಅಯೋಧ್ಯ ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ.ಅದೇ ರೀತಿಯಾಗಿ ಈ ಒಂದು ಕಾರ್ಯಕ್ರಮಕ್ಕೆ ಗಣ್ಯರಿಗೆ ಆಹ್ವಾನ ನೀಡಿದ್ದು, ಆ ಆಹ್ವಾನ ಪತ್ರಿಕೆಯಲ್ಲಿರುವ ಲೋಗೋ ಕಲಬುರ್ಗಿ ಕಲಾವಿದ ತಯಾರಿಸಿದ್ದು ಎಂದು ತಿಳಿದು ಬಂದಿದ್ದು ಇದೀಗ ಕರ್ನಾಟಕಕ್ಕೆ ಮತ್ತೊಂದು ಗರಿ ಸಿಕ್ಕಿದಂತಾಗಿದೆ. ಆಹ್ವಾನ ಪತ್ರಿಕೆಯ ಮೇಲೆ ಪ್ರಕಾಶಿಸುವ ಸೂರ್ಯನ ಮಧ್ಯೆ ಕಂಗೊಳಿಸುವ ಶ್ರೀರಾಮನ ಭಾವಚಿತ್ರವಿದೆ. ಕೆಳಭಾಗದಲ್ಲಿ ಕುಳಿತಿರುವ ಹನುಮಂತನ ಚಿತ್ರವಿದೆ. ಈ ರೀತಿಯಾದ ಲೋಗೋವನ್ನು ಕಲಬುರಗಿಯ ಕಲಾವಿದ ರಮೇಶ್ ತಿಪ್ಪನೂರ್ ಅವರು ಡಿಸೈನ್ ಮಾಡಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಲೋಗೋ ತಯಾರಿಸಲು ಕರೆ ಕೊಟ್ಟಿತ್ತು. ದೇಶದ ವಿವಿಧ ಕಲಾವಿದರು ಲೋಗೋ ತಾಯಾರಿಸಿ ಟ್ರಸ್ಟ್ಗೆ ಕಳುಹುಸಿದ್ದರು. ಇನ್ನು ಕಲಾವಿದ ರಮೇಶ್ ತಿಪ್ಪನೂರ್ ಅವರು ತಾವು ತಯಾರಿಸಿದ ಲೋಗೋವನ್ನು ವಿಹೆಚ್ಪಿ ಮುಖಂಡ ಗೋಪಾಲ್ ಜಿ ಅವರ ಮೂಲಕ ಟ್ರಸ್ಟ್ಗೆ ಕಳುಹಿಸಿದ್ದಾರೆ. ಟ್ರಸ್ಟ್ ದೇಶದ ವಿವಿಧಡೆಯಿಂದ ಬಂದ ಲೋಗೋ ಪರಿಶೀಲಿಸಿ, ಕೊನೆಗೆ ಕಲಬುರಗಿಯಲ್ಲಿ…
ಹಾಸನ : ಪತಿ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರಿಂದ ಹಾಸನ ಸಕಲೇಶಪುರದ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಕಾನ್ಸ್ಟೇಬಲ್ ಸೋಮಶೇಖರ್ ಎನ್ನುವವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮೃತ ಸೋಮಶೇಖರ್ 112 ಪೊಲೀಸ್ ವಾಹನದ ಚಾಲಕನಾಗಿ l ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : 22ರಂದು ಅಯೋಧ್ಯ ಶ್ರೀ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರತಿಷ್ಠಾಪನ ಕಾರ್ಯಕ್ರಮ ನೆಡೆವೆಯು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇವತ್ತು ಒಂದೇ ದಿನ ಮೂರು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮೋದಿ ಕಲಬುರ್ಗಿಗೆ ಆಗಮಿಸಲಿದ್ದು ಅಲ್ಲಿಂದ ನಂತರ ಸೋಲಾಪುರಕ್ಕೆ ತೆರಳಲಿದ್ದಾರೆ ಅಲ್ಲಿಂದ ಮತ್ತೆ ಕಲಬುರ್ಗಿಗೆ ಬಂದು ಇಲ್ಲಿಂದ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ. ಈಗಾಗಲೇ ಕಲಬುರ್ಗಿಯ ವಿಮಾನ ನಿಲ್ದಾಣದಲ್ಲಿ ಈ ಭಾಗದ ಸಂಸದರು ಸಚಿವರು ಶಾಸಕರು ಹಾಗೂ ಮಾಜಿ ಶಾಸಕರು ಸೇರಿದಂತೆ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಆಗಮಿಸಿದ್ದಾರೆ. ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಪ್ರಧಾನಿ ಮೋದಿ ಅವರನ್ನು ಕಲಬುರ್ಗಿ ನಗರಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಲಬುರಗಿ ಏರ್ಪೋರ್ಟ್ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಡ್ರೋಣ್ ಕ್ಯಾಮರಾ ಬಳಕೆಯನ್ನು ಜಿಲ್ಲಾಡಳಿತವು ನಿಷೇಧಿಸಿದೆ. CRPC ಸೆಕ್ಷನ್ 144 ಅಡಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದ್ದು, ಇಂದು…
ಬೆಂಗಳೂರು : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 20 ಜನರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ.ಕಟ್ಟಡದ ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ಗಾಯಾಳುಗಳಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನೇಸ್ ಶಾಲಾ ಕಟ್ಟಡದ ಎರಡನೇ ಅಂತಸ್ತಿನ ನಿರ್ಮಾಣ ವೇಳೆ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾರಿಸಿದ್ದು ಕಟ್ಟಡ ತೆರವಿಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಮೈಸೂರು : ಅಯೋಧ್ಯೆಯಲ್ಲಿ ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣವಾಗಿದ್ದು ಇದೇ 28 ಎರಡರಂದು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಕಾರ್ಯಕ್ರಮಕ್ಕೆ ಮೈಸೂರು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಅವನ ನೀಡಲಾಗಿದ್ದು ಇದೇ 21ರಂದು ಅವರು ಅಯೋಧ್ಯೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ರಾಮಲಲ್ಲಾ ಪ್ರಾಣ ಪ್ರತಿಷ್ಠದಲ್ಲಿ ಭಾಗಿಯಾಗುತ್ತಿರುವುದು ನನ್ನ ಸೌಭಾಗ್ಯ. 500 ವರ್ಷಗಳ ನಂತರ ರಾಮಮಂದಿರ ನಿರ್ಮಾಣವಾಗಿದೆ. ಇದು ತುಂಬಾ ಖುಷಿಯ ವಿಚಾರ. ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್ ಅವರು ನಮ್ಮ ಮೈಸೂರಿನವರು. ಅವರಿಗೆ ಅಭಿನಂದನೆ ತಿಳಿಸುವೆ. ರಾಮಲಲ್ಲಾ ಮೂರ್ತಿ ಕೆತ್ತಿರುವುದು ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ ಎಂದರು. ಅರುಣ್ ಯೋಗಿರಾಜ್ ಅವರು ಈ ಹಿಂದೆ ಶಂಕರಾಚಾರ್ಯರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ವಿಗ್ರಹ ಕೆತ್ತನೆ ಮಾಡಿದ್ದರು. ಇದೀಗ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದಾರೆ. ಅಯೋಧ್ಯೆ ಈ ಹಿಂದೆಯೂ ಪವಿತ್ರ…