Author: kannadanewsnow05

ಕಲಬುರಗಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿ ಈ ಒಂದು ಪ್ರಕರಣ ಇಟ್ಟುಕೊಂಡು ಒಕ್ಕಲಿಗ ನಾಯಕರು ಆಗಲು ಯತ್ನಿಸುತ್ತಿದ್ದಾರೆ ಆದರೆ ಇದರಿಂದ ಒಕ್ಕಲಿಗ ನಾಯಕರಾಗಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಟಾಂಗ ನೀಡಿದರು. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದು ತಂದು ಮಾತನಾಡುತ್ತಿದ್ದಾರೆ. ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. ಈ ವಿಚಾರವನ್ನು ಇಟ್ಟುಕೊಂಡು ಒಕ್ಕಲಿಗ ನಾಯಕತ್ವ ಪಡೆಯಲು ಯತ್ನಿಸಲಾಗುತ್ತಿದೆ ಇಂತಹ ವಿಷಯ ಇಟ್ಟುಕೊಂಡು ಒಕ್ಕಲಿಗ ನಾಯಕ ಆಗುವುದಕ್ಕೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಗೆ ಟಾಂಗ್ ನೀಡಿದರು.

Read More

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇಂದು ಹಾಸನದ ಹೊಳೆನರಸೀಪುರದಲ್ಲಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮನೆಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಈಗ ಸ್ಥಳೀಯ ಪೊಲೀಸ್ರು ಅವರ ಮನೆಗೆ ಭೇಟಿ ನೀಡಿದ್ದಾರೆ. ಸಂತ್ರಸ್ಥರು ನೀಡಿದ ದೂರಿನ ಮೇರೆಗೆ ಇಂದು ಅವರ ಸಮ್ಮುಖದಲ್ಲಿಯೇ ಹೊಳೆನರಸೀಪುರದಲ್ಲಿರುವ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಲ್ಲಿದ್ದಾರೆ. ಹೀಗಾಗಿ ಸ್ಥಳೀಯ ಪಿಎಸ್ಐ ಅಜಯ್ ನೇತೃತ್ವದ ಪೊಲೀಸ್ ತಂಡ ಇದೀಗ ಅವರ ಮನೆಗೆ ಭೇಟಿ ನೀಡಿ ಭವಾನಿ ರೇವಣ್ಣ ಅವರ ಜೊತೆಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಸದರ ನಿವಾಸದ ಕೊಠಡಿಯಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಮಹಿಳಾ ಸಂತ್ರಸ್ಥೆ ಒಬ್ಬಳು ದೂರು ನೀಡಿದ್ದಾಳೆ. ಹೀಗಾಗಿ ಎಸ್ಐಟಿ ಅಧಿಕಾರಿಗಳು ಇಂದು ಹಾಸನ ಜಿಲ್ಲೆಯ ಆರ್ ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಕೂಡ ಇಂದು ದೂರು ನೀಡಿದ ಸಂತ್ರಾಸ್ತೆಯ ಮಹಿಳೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಿದೆ ಆದರೆ ಅದಕ್ಕೂ ಮುನ್ನ…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಕಷ್ಟ ಎದುರಿಸುತ್ತಿದ್ದು ಇದೀಗ ಎಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣಗು ಸಂಕಷ್ಟ ಎದುರಾಗಿದ್ದು ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ  ನೋಟಿಸ್ ನೀಡಿದೆ. ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾದ ಮಹಿಳೆಯ ಮಗ ಎಚ್ ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಅವರ ಸಂಬಂಧಿ ಆದಂತಹ ಸತೀಶ್ ಬಾಬು ಅವರ ವಿರುದ್ಧ ದೂರು ದಾಖಲಿಸಿದ್ದ ಎನ್ನಲಾಗಿದೆ. ಈ ಒಂದು ದೂರನು ಆದರೆ ಸೇನೆ ಎಸ್ಐಟಿ ಸುಮಾರು 40 ಕಡೆ ಪರಿಶೀಲನೆ ನಡೆಸಿದರು ಹೀಗಾಗಿ ನೆನ್ನೆ ಸ್ಥಳೀಯ ಪೊಲೀಸರ ಮೂಲಕ ನೀಡಿದ್ದು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ ಹೀಗಾಗಿ ಪ್ರತಿ ಹಾಗೂ ಮಗನ ನಂತರ ಇದೀಗ ಭವಾನಿ ರೇವಣ್ಣಗೂ ಕೂಡ ಪ್ರಕರಣದಲ್ಲಿ…

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ವಿರುದ್ಧ ಈಗಾಗಲೇ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಎಚ್ ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ HD ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ. ಹೀಗಾಗಿ ಸದ್ಯ ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿದ್ದು ರೇವಣ್ಣ ವಕೀಲರ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಎಚ್ ಡಿ ರೇವಣ್ಣ ಕೊರಳಿಗೆ ಇದೀಗ ಅಪಹರಣ ಕೆಸ್ ಬಿಗಿಯಾಗಿದ್ದು, ಎಚ್ ಡಿ ರೇವಣ್ಣ ವಿರುದ್ಧ ಅಪಹರಣ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಭವಿಷ್ಯ ಕುರಿತು ನಿರ್ಧಾರವಾಗಲಿದೆ.ಬೆಳಿಗ್ಗೆ 11:00 ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದ್ದು ಕೆ ಆರ್ ನಗರದಲ್ಲಿ ಅಪರಣ…

Read More

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಕೀಲರ ಒಂದು ಸಲಹೆ ಮೇರೆಗೆ ಮೇ ಹತ್ತರ ಒಳಗೆ ವಾಪಸ್ ಆಗಿ ಎಸ್ಐಟಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಮೇಲೆ ಆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುವ ಮುಂಚೆಯೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ವಿದೇಶದಲ್ಲಿ ಇದ್ದುಕೊಂಡೆ ದೆಹಲಿ ಹಾಗೂ ಬೆಂಗಳೂರಿನ ನುರಿತ ವಕೀಲರನ್ನು ಸಂಪರ್ಕಿಸಿ ಯಾವ ರೀತಿ ಕಾನೂನು ಹೋರಾಟ ಮಾಡಬೇಕೆಂಬುದರ ಕುರಿತು ಅಲ್ಲಿಂದಲೇ ವಕೀಲರಿಂದ ಸಲಹೆಯನ್ನು ಪಡೆದುಕೊಂಡಿದ್ದರು. ಅಲ್ಲದೆ ಮೇ 15ರಂದು ವಿದೇಶದಿಂದ ವಾಪಸ್ ಆಗಲು ಟಿಕೆಟ್ ಬುಕ್ ಮಾಡಲಾಗಿತ್ತು. ಆದರೆ ಇದೀಗ ನುರಿತ ವಕೀಲರ ಸಲಹೆ ಮೇರೆಗೆ ಮೇ ಹತ್ತರ ಒಳಗಾಗಿ ವಿದೇಶದಿಂದ ವಾಪಸ್ ಆಗಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ ತನಿಖೆಯನ್ನು ಸುರುಪುಗೊಳಿಸುತ್ತಿದ್ದಂತೆ ಹಾಸನದ ಆರ್‌ಸಿ ರಸ್ತೆಯಲ್ಲಿರುವ ಪ್ರಜ್ವಲ್ ರೇವಣ್ಣರ…

Read More

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ನಕಲಿ ಪೋಸ್ಟ್ ಹಾಕಿದ ಆರೋಪ ದಲ್ಲಿ ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗಿಳಿಯಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸದ್ಯಕ್ಕೆ ಅವರನ್ನು ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶಿಸಿದೆ. ಸಿದ್ದರಾಮಯ್ಯ ವಿರುದ್ಧ ನಕಲಿ ಪೋಸ್ಟ್ ಮಾಡಿದ್ದಾರೆಂದು ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗೆಳೆಯರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪಟ್ಟಣ ಸಂಬಂಧ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಪ್ರಕರಣದ ಹಿನ್ನೆಲೇ? ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗಿಳಿಯಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್…

Read More

ಬೆಂಗಳೂರು : ಬೆಂಗಳೂರು ರೇಸ್​ ಕೋರ್ಸ್ನಲ್ಲಿ ಅನಧಿಕೃತವಾಗಿ ಕುದುರೆ ಬೆಟ್ಟಿಂಗ್ ಆಯೋಜಿಸಿ ಬೆಟ್ಟಿಂಗ್‌ದಾರರಿಂದ ಕೋಟ್ಯಂತರ ಹಣ ಸಂಗ್ರಹಿಸಿದ ಆರೋಪದ ಮೇಲೆ‌ 26 ಮಂದಿ ಬುಕ್ಕಿಗಳು ಮತ್ತವರ ಕಂಪನಿಗಳ ವಿರುದ್ಧ ದಾಖಲಾಗಿರುವ ಎಫ್​ಐಆರ್​ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಅನಧಿಕೃತವಾಗಿ ಬೆಟ್ಟಿಂಗ್‌ ಆಯೋಜಿಸಿ ಕೋಟ್ಯಂತರ ರು. ಅವ್ಯವಹಾರ ನಡೆಸಿರುವ ಬಗ್ಗೆ ತನಿಖೆ ಸಂದರ್ಭದಲ್ಲಿ ಬಹಿರಂಗವಾಗಿದೆ. ಇದು ಅತ್ಯಂತ ಗಂಭೀರ ಸ್ವರೂಪದ ಪ್ರಕರಣವಾಗಿದೆ. ಜಿಎಸ್​ಟಿ ಮತ್ತು ಟಿಡಿಎಸ್​ ಮೊತ್ತ ಪಾವತಿಗೆ ಸಂಗ್ರಹಿಸಿರುವ ಕೊಟ್ಯಂತರ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಆದ್ದರಿಂದ ಎಫ್‌ಐಆರ್‌ ರದ್ದುಪಡಿಸಲಾಗದು ಎಂದು ಪೀಠ ಆದೇಶದಲ್ಲಿ ಹೇಳಿದೆ. ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸೂರ್ಯ ಅಂಡ್​ ಕೋ ಸೇರಿದಂತೆ ಬೆಂಗಳೂರು ಟರ್ಫ್ ಕ್ಲಬ್‌ ಆವರಣದಲ್ಲಿ ಅಕ್ರಮ ಬೆಟ್ಟಿಂಗ್​ ನಡೆಸುತ್ತಿದ್ದರು ಎನ್ನಲಾದ 26 ವಿವಿಧ ಎಂಟರ್ ಪ್ರೈಸಸ್ ಕಂಪೆನಿಗಳು, ಅವುಗಳ ಮಾಲೀಕರು (ಬುಕ್ಕಿಗಳು) ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ…

Read More

ಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ ಮಧ್ಯ ಮಂಡ್ಯದ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಎಚ್ ಡಿ ರೇವಣ್ಣ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು ರೇವಣ್ಣ ನಡವಳಿಕೆ ಸರಿ ಇಲ್ಲ ಇಂಗ್ಲೆಂಡ್ನಲ್ಲಿಯೂ ಕೂಡ ಇಂಥದ್ದೇ ಪ್ರಕರಣದಲ್ಲಿ ತಗಲಾಕೊಂಡಿದ್ದರು ಎಂದು ಗಂಭೀರವಾದಂತಹ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರೇವಣ್ಣ ಇಂಗ್ಲೆಂಡ್ನಲ್ಲಿಯೂ ತಗಲು ಹಾಕಿಕೊಂಡಿದ್ದರು ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಗಂಭೀರವಾದ ಆರೋಪ ಮಾಡಿದರು. ನಾನು ರೇವಣ್ಣ ಇಂಗ್ಲೆಂಡ್ ಹೋಗಿದ್ದೇವು. 30 ವರ್ಷದ ಹಿಂದಿನ ಘಟನೆ ಇದೀಗ ರಿವಿಲ್ ಮಾಡಲು ಹೋಗುವುದಿಲ್ಲ ಎಂದರು. ನಾನು ರೇವಣ್ಣ ಅವರ ಮನೆಯವರು ಹಾಗೂ ನನ್ನ ಮನೆಯವರು ಸೇರಿದಂತೆ ಇನ್ನಿಬ್ಬರು ಹೋಗಿದ್ದೆವು.ನಮ್ಮ ಜೊತೆ ತಿಮ್ಮೇಗೌಡ ಎನ್ನುವವರು ಕೂಡ ಬಂದಿದ್ದರು. ಬೇಕಾದರೆ ಅವರನ್ನ ಕೇಳಿ ಇದಕ್ಕೆ ಸಾಕ್ಷಿ ಇದಾರೆ ಬೇಕಾದರೆ ಅವರನ್ನು ಕೇಳಿ ಎಂದು ಗಂಭೀರ ಆರೋಪ ಮಾಡಿದರು. 30 ವರ್ಷದ…

Read More

ಹಾಸನ : ಲೈಂಗಿಕ ಕಿರುಕುಳ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ವಿಚಾರವಾಗಿ ಈಗಾಗಲೇ ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದ ಕೂಡಲೇ ಇದೀಗ ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಸಂಸದರ ನಿವಾಸಕ್ಕೆ ಪೊಲೀಸರು ಬೀಗ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಹಾಸನದ ಆರ್ಸಿ ರಸ್ತೆಯಲ್ಲಿರುವ ಪ್ರಜ್ವಲ್ ಸರ್ಕಾರಿ ನಿವಾಸಕ್ಕೆ ಇದೀಗ ಬೀಗ ಜಡಿಯಲಾಗಿದೆ. ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆದಿರುವ ಬಗ್ಗೆ ಸಂತ್ರಸ್ತೇ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದರು. ಇದೀಗ ಸಂಸದರ ನಿವಾಸದ ಆವರಣ ಪ್ರವೇಶ ನಿರ್ಭಂಧಿಸಿ ಬೀಗ ಹಾಕಲಾಗಿದೆ ಎಂದು ಹೇಳಲಾಗುತ್ತಿದ್ದು SIT ತನಿಖೆ ಹಿನ್ನೆಲೆ ಇದೀಗ ಬೀಗ ಹಾಕಲಾಗಿದೆ. ಅಲ್ಲದೆ ಇದೇ ಒಂದು ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ವಿರುದ್ಧ ಈಗಾಗಲೇ ಎರಡು ದಾಖಲಾಗಿದ್ದು, ಇಂದು ಎಸ್ಐಟಿ ಸಂತ್ರಸ್ತೆಯರನ್ನು ಕರೆದುಕೊಂಡು ಅವರ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಿದ್ದಾರೆ. ಹೀಗಾಗಿ ಹಾಸನದ ಹೊಳೆನರಸೀಪುರದಲ್ಲಿರುವ ಹೆಚ್‍ಡಿ ರೇವಣ್ಣ ಅವರ ಮನೆ ಹಾಗೂ ಪ್ರಜ್ವಲ್ ರೇವಣ್ಣರ…

Read More

ಮಂಡ್ಯ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಪ್ರಜ್ವಲ್ ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್ ಬಿಡುಗಡೆ ಹೇಳಿಕೆ ಕೊಟ್ಟಾಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿ ಏನು ಕತ್ತೆ ಕಾಯುತಿದ್ರ? ಎಂದು ಮಾಜಿ ಸಂಸದ ಶಿವರಾಮೇಗೌಡ ಆಕ್ರೋಶ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಮುಂದೆ ರಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಪ್ರತಿಕ್ರಿಯೆ ನೀಡಿದರು. ಪ್ರಜ್ವಲ್ ಇಷ್ಟೆಲ್ಲ ಮಾಡುತ್ತಿದ್ದಾರೆ ಅವರ ಅಪ್ಪ ಅಮ್ಮ ಕತ್ತೆ ಕಾಯ್ತಿದ್ರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ಕಡೆ ಅಪ್ಪ ಮತ್ತೊಂದು ಕಡೆ ಮಗ ದೊಡ್ಡಗೌಡರನ್ನ ಚಿಂತೆ ಮಾಡುವ ಪರಿಸ್ಥಿತಿಗೆ ತಂದಿದ್ದಾರೆ. ಅವರು ಮಾಡಿರುವ ಪಾಪ ಅವರೇ ಅನುಭವಿಸುತ್ತಿದ್ದಾರೆ.ದೇವರಾಜ ಗೌಡ ಪೆನ್ ಡ್ರೈವ್ ಬಿಡುವ ಹೇಳಿಕೆಯನ್ನು ಕೊಟ್ಟಿದ್ದರು ಅವಾಗ ದೇವೇಗೌಡರು ಕುಮಾರಸ್ವಾಮಿ ಕತ್ತೆ ಕಾಯುತಿದ್ರ? ಎಂದು ಕಿಡಿ ಕಾರಿದರು. ಪೆನ್ ಡ್ರೈವ್…

Read More