Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ಮುಳಬಾಗಿಲು ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ ಎದುರಾಗಿದ್ದು, 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರಕ್ಕೆ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದ ಅಂದಿನ ಶಾಸಕ ಜಿ.ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ತಿಳಿದುಬಂದಿದೆ. ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಕ್ಷೇತ್ರವನ್ನು ಕಸಿದುಕೊಳ್ಳುವ ಮೂಲಕ ಮಂಜುನಾಥ್ ಪರಿಶಿಷ್ಟ ಜಾತಿಗಳ ವರ್ಗಕ್ಕೆ ವಂಚಿಸಿದ್ದಾರೆ. ಇದು ಸಂವಿಧಾನಕ್ಕೆ ಎಸಗಿದ ಮೋಸ. ಹೀಗಾಗಿ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹೈಕೋರ್ಟ್ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ’ ಎಂದು ತಿಳಿಸಿದೆ. ಅಂತೆಯೇ, ‘ಮಂಜುನಾಥ್ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ. ಜಾತಿ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ಕೈಗೊಂಡಿದ್ದ ನಿರ್ಣಯವನ್ನು ಪ್ರಶ್ನಿಸಿ ಸದ್ಯ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಕಾಂಗ್ರೆಸ್ ಪಕ್ಷದ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ…
ಬೆಂಗಳೂರು: ಒಳ ಮೀಸಲಾತಿ ಜಾರಿಗೊಳಿಸಲು ಇಚ್ಛೆ ಇರದ ರಾಜ್ಯದ ಕಾಂಗ್ರೆಸ್ ಸರ್ಕಾರ ನಾಟಕ ಮಾಡುತ್ತಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಟೀಕಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಮೀಸಲಾತಿಯ ಅನ್ಯಾಯ ಸರಿಪಡಿಸಲಾಗುವುದು ಎಂದು ಚುನಾವಣೆ ಸಮಯದಲ್ಲಿ ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದ ನಂತರ ವರಸೆ ಬದಲಾಯಿಸಿದರು. ಅಧಿಕಾರಕ್ಕೆ ಬಂದ ಎಂಟು ತಿಂಗಳ ಬಳಿಕ, ಲೋಕಸಭಾ ಚುನಾವಣೆಯಲ್ಲಿ ಸಮುದಾಯಗಳ ದಾರಿ ತಪ್ಪಿಸಲು 341ನೇ ವಿಧಿ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ದೂರಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ 2012ರಲ್ಲಿ ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು. ನಂತರ 2020ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ತಿದ್ದುಪಡಿ ಅಗತ್ಯವೇ ಇಲ್ಲ. ಒಳ ಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಹೆಚ್ಚುವರಿ ಸೇರಿಸಲು ಅಥವಾ ಇರುವ ಜಾತಿಗಳನ್ನು ತೆಗೆಯಲು ಅವಕಾಶ ಇಲ್ಲ ಎಂದು ನ್ಯಾಯಮೂರ್ತಿ ಅರುಣ್ಕುಮಾರ್ ಮಿಶ್ರಾ ತೀರ್ಪಿನಲ್ಲಿ ಹೇಳಿದ್ದರು. ಹಾಗಿದ್ದರೂ, ರಾಜ್ಯ ಸರ್ಕಾರ…
ಬೆಂಗಳೂರೂ : ಬೆಂಗಳೂರು ಮಹಾನಗರದಲ್ಲಿನ ಅನಧಿ ಕೃತ ಪ್ಲೆಕ್ಸ್ ಬ್ಯಾನರ್ ಮತ್ತು ಬಂಟಿಂಗ್ ತೆರವು ವಿಚಾರದಲ್ಲಿ ತಪ್ಪಿತಸ್ಥ ಅಧಿ ಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಬಿಬಿಎಂಪಿಯನ್ನು ಹೈಕೋರ್ಟ್ ಗುರು ವಾರ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವುದೂ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯವೇ ಕ್ರಮ ಜರುಗಿಸುತ್ತದೆ ಎಂದು ಎಚ್ಚರಿಕೆ ನೀಡಿದೆ. ಆಕ್ರಮ ಬ್ಯಾನರ್, ಹೋರ್ಡಿಂಗ್ ತೆರವುಗೊಳಿಸುವಂತೆ ಕೋರಿ ಮಾಯೇಗೌಡ ಸೇರಿದಂತೆ ಹಲವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಿಜೆ ಪಿ.ಬಿ.ವರ್ಲೆ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಆಗ ಅರ್ಜಿದಾರರ ಪರ ವಕೀಲಜಿ.ಆರ್.ಮೋಹನ್,ಬೆಂಗಳೂರು ಮಹಾನಗರದ ಎಲ್ಲಾ ಪ್ರದೇಶಗಳಲ್ಲಿ ಅಕ್ರಮ ಪ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್ ರಾರಾಜಿಸುತ್ತಿವೆ. ಆದರೆ, ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಪಾಲಿಕೆ ಅವುಗಳನ್ನು ತೆರವುಗೊಳಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಗಮನಸೆಳೆದರು. ನ್ಯಾಯಾಲಯ ಹಲವು ಬಾರಿ ನಿರ್ದೇಶನ ನೀಡಿದ್ದರೂ ಅಕ್ರಮ…
ಬೆಂಗಳೂರು : ಇತ್ತೀಚಿಗೆ ಮೈಸೂರು ಮಂಡ್ಯದಲ್ಲಿ 900ಕ್ಕೂ ಹೆಚ್ಚು ಬ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶವೇ ಬೆಚ್ಚಿ ಬೆಳಿಸುವಂತಹ ಘಟನೆ ರಾಜ್ಯದಲ್ಲಿ ನಡೆದಿತ್ತು.ಭ್ರೂಣ ಹತ್ಯೆ ಇದೀಗ ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸುವುದಾಗಿ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಭ್ರೂಣ ಹತ್ಯೆ ತಡೆಗೆ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ಜತೆ ಸಭೆ ನಡೆಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ತಡೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ರಾಜ್ಯಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲೂ ಜಿಲ್ಲಾಧಿ ಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ, ಎಂದರು. ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ ಕಾಯಿದೆಯಡಿ ಕಾರ್ಯನಿರ್ವಹಿಸಿ ಹೆಚ್ಚು ನಿಗಾ ವಹಿಸಲಿವೆ. ಅಲ್ಲದೆ, ಆರೋಗ್ಯ…
ಬೆಂಗಳೂರು: ಬೆಂಗಳೂರಿನ ಹಲವೆಡೆ ಮಧ್ಯವರ್ತಿಗಳ ಹಾವಳಿ,ತೆರಿಗೆ ವಂಚನೆ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ರಾಜ ಧಾನಿಯ ಹಲವೆಡೆ ಗುರುವಾರ ಉಪ ನೋಂದಣಾಧಿಕಾರಿಗಳ (ಸಬ್ ರಿಜಿಸ್ಟ್ರಾರ್) ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು. ಹಲಸೂರು, ಇಂದಿರಾನಗರ ಹಾಗೂ ಹೆಬ್ಬಾಳದ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಐಟಿ ಅಧಿ ಕಾರಿಗಳು, ಮೂರು ತಾಸಿಗೂ ಹೆಚ್ಚು ಕಾಲ ದಾಖಲೆ ಪತ್ರಗಳನ್ನು ಪರಿಶೀಲಿಸಿ, ಮಾಹಿತಿ ಸಂಗ್ರಹಿಸಿದರು. ನಿವೇಶನ, ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಪಟ್ಟ ಕಡತಗಳು, ಆಸ್ತಿ ಮಾರಾಟದ ಕ್ರಯಪತ್ರಗಳು, ಜಿಪಿಎ ಪತ್ರ, ನೋಂದಣಿ ಮತ್ತು ಮುದ್ರಾಂಕ ಶುಲ್ಕದ ರಸೀದಿ ಸೇರಿದಂತೆ ಮಹತ್ವದ ದಾಖಲೆಪತ್ರಗಳನ್ನು ಪರಿಶೀಲಿಸಿದರು. ಅಲ್ಲದೆ, ಕಚೇರಿ ಸಿಬ್ಬಂದಿಯ ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಕಲೆಹಾಕಿದರು. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸೇವೆ ಒದಗಿಸಲು ಅಧಿಕಾರಿಗಳು ದಲ್ಲಾಳಿಗಳ ಮೂಲಕ ಲಂಚಕ್ಕೆ ಬೇಡಿಕೆ ಇಡುತ್ತಾರೆ ಎಂದು ಸಾರ್ವಜನಿಕರಿಂದ ದೂರು ಸಲ್ಲಿಕೆಯಾಗಿದ್ದವು. ಜತೆಗೆ, ತೆರಿಗೆ ವಂಚನೆ ಮತ್ತು ಭೂ…
ಬೆಂಗಳೂರು : ಚಾಲಕರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದ ಚಾಲಕರು ಸೇರಿ ಸಾರಿಗೆ ವಲಯದಲ್ಲಿ ಕೆಲಸ ಮಾಡುತ್ತಿರುವವರಿಗಾಗಿ ಹೊಸ ದಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆಗಾಗಿ ‘ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಭದ್ರತಾ, ಕಲ್ಯಾಣ ಸುಂಕ ವಿಧೇಯಕ 2024’ನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ HK ಪಾಟೀಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಎಚ್.ಕೆ.ಪಾಟೀಲ್, ರಾಜ್ಯ ದ ಸಾರಿಗೆ ವಲಯದಲ್ಲಿ ಕೆಲಸ ಮಾಡುತ್ತಿ ರುವ ಚಾಲಕರು ಸೇರಿ ಇನ್ನಿತರ ಕಾರ್ಮಿಕರ ಅಭಿವೃದ್ಧಿಗಾಗಿ ‘ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಅಭಿವೃದ್ಧಿ ಮಂಡಳಿ’ ಸ್ಥಾಪನೆಗೆ ನಿರ್ಧರಿಸಲಾಗಿದೆ. ಅದಕ್ಕಾಗಿ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಭದ್ರತಾ ಮತ್ತು ಕಲ್ಯಾಣ ಸುಂಕ ವಿಧೇಯಕ 2024 ರೂಪಿಸಲಾಗುತ್ತಿದ್ದು, ಅದನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗು ವುದು. ಬಳಿಕ ಮಂಡಳಿ ಸ್ಥಾಪನೆ…
ಬೆಂಗಳೂರು : ರಾಜ್ಯದಲ್ಲಿ ಐಎಎಸ್, ಐಪಿಎಸ್, ಐಎಫ್ಎಸ್, ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವ ಕೋಚಿಂಗ್ ಕೇಂದ್ರಗಳ ನೋಂದಣಿ ಕಡ್ಡಾಯವಾಗಿದ್ದು, ಈವರೆಗೆ ನೋಂದಣಿಯಾಗದ ಕೇಂದ್ರಗಳು ಮುಂದಿನ 15 ದಿನಗಳಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಈ ಕುರಿತಂತೆ ಸುತ್ತೋಲೆಯನ್ನ ಹೊರಡಿಸಿದೆ. ಈ ಸಂಬಂಧ ಇಲಾಖಾ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಸರ್ಕಾರವು ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳ ನೋಂದಣಿಯನ್ನು ಕಡ್ಡಾಯಗೊಳಿಸಿ ಆದೇಶಿಸಿರುವುದರಿಂದ ಸಂಬಂಧಿಸಿದ ಸಂಸ್ಥೆಗಳು 25 ಸಾವಿರ ರು. ಶುಲ್ಕ ಪಾವತಿಸಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ಇಲ್ಲಿ ನೋಂದಣಿ ಮಾಡಿಕೊಳ್ಳಬೇಕು. ತಪ್ಪಿದರೆ ಕಾನೂನಾತ್ಮಕವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಪ್ರತಿ ಕೇಂದ್ರವು ನೋಂದಣಿ ಸಂಖ್ಯೆ, ಪಾನ್ ಹಾಗೂ ಜಿಎಸ್ಟಿ ನಂಬರ್ ಹೊಂದಿರಬೇಕು. ವಿಶಾಲವಾದ ತರಬೇತಿ ಕೊಠಡಿಗಳು, ಸುಸಜ್ಜಿತ ಗ್ರಂಥಾಲಯ, ಅರ್ಹ ವಿದ್ಯಾರ್ಹತೆ ಹೊಂದಿದ ಬೋಧಕರು, ಪುರುಷ, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಹೊಂದಿರಬೇಕು. ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಿರಬೇಕು. ಕಟ್ಟಡ ಕರಾರು, ಭದ್ರತಾ ಸಿಬ್ಬಂದಿ,…
ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಕ್ವಾರಂಟೈನ್ ಆದಾಗ ಬಿಬಿಎಂಪಿ ಅಧಿಕಾರಿ ಒಬ್ಬರು ನನ್ನನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದ್ದಾರೆಂದು ಆರೋಪಿಸಿದ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಇದೀಗ ಸಂಕಷ್ಟ ಎದುರಾಗಿದ್ದು ಬಿಬಿಎಂಪಿ ಅಧಿಕಾರಿ ಡ್ರೋನ್ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದಮ್ಮೆ ಹೂಡಿದ್ದಾರೆ ಎಂದು ಹೇಳಲಾಗುತ್ತಿದೆ . ಮಾಹಿತಿ ಪ್ರಕಾರ, ಬಿಬಿಎಂಪಿ ಅಧಿಕಾರಿ ಪ್ರಯಾಗ್ ರಾಜ್ ವಿರುದ್ಧ ಡ್ರೋನ್ ಪ್ರತಾಪ್ ಹಲ್ಲೆ ನಡೆಸಿದ್ದಾರೆಂದು ಈ ಹಿಂದೆ ಹೇಳಿಕೆ ಕೊಟ್ಟಿದ್ದರು. ಆದ್ದರಿಂದ ಪ್ರಯಾಗ್ ಅವರು 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರಕ್ಕೆ ವಾದ ಪ್ರತಿವಾದ ನಡೆದಿದ್ದು, ಇಂದು ಕೋರ್ಟ್ನಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎಂದು ವಕೀಲರು ತಿಳಿಸಿದ್ದಾರೆ.ಇತ್ತೀಚೆಗೆ ಡ್ರೋನ್ ಪ್ರತಾಪ್, ಬಿಗ್ಬಾಸ್ ಮನೆಯಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕ್ವಾರಂಟೈನ್ ಕಹಾನಿ ಬಗ್ಗೆ ಹೇಳಿಕೊಂಡಿದ್ದರು. ಈ ವೇಳೆ ಬಿಬಿಎಂಪಿ ನೋಡಲ್ ಅಧಿಕಾರಿ…
ಉಡುಪಿ : ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆದ್ದರೆ ಮುಂದಿನ ಐದು ವರ್ಷಗಳ ವರೆಗೆ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ ಎಂಬ ಯತಿಂದ್ರ ಹೇಳಿಕೆಗೆ ಕೇಂದ್ರ ಸಚಿವೆ ಶುಭಕಾರ್ಯ ಪ್ರತಿಕ್ರಿಯೆ ನೀಡಿದ್ದು ಲೋಕಸಭಾ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ನಲ್ಲಿ ಇನ್ನೂ ದೊಡ್ಡ ಮಟ್ಟದ ಬಿರುಕು ಉಂಟಾಗುತ್ತದೆ ಎಂದು ತಿಳಿಸಿದರು. ಉಡುಪಿಯಲ್ಲಿ ಈ ವಿಷಯದ ಕುರಿತಾಗಿ ಮಾತನಾಡಿದ ಅವರು, ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿಕೆಗೆ ಯತೀಂದ್ರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಆರಂಭವಾದ ಮೊದಲ ದಿನದಿಂದಲೇ ಈ ವಿಷಯವಾಗಿ ಗೊಂದಲ ಇದೆ ಸಿಎಂ, ಡಿಸಿಎಂ, ಮಂತ್ರಿ ಹಾಗೂ ಶಾಸಕರ ನಡುವೆ ಗೊಂದಲವಿದೆ ಎಂದು ತಿಳಿಸಿದರು. ಈಗ ಕಾಂಗ್ರೆಸ್ ನಾಯಕರು ಗುಂಪಾಗಿ ರೆಸಾರ್ಟ್ ರಾಜಕೀಯ ಮಾಡಲು ಯೋಚನೆ ಮಾಡುತ್ತಿದ್ದಾರೆ.ಕಾಂಗ್ರೆಸ್ ನಲ್ಲಿ ಅಧಿಕಾರಕ್ಕಾಗಿ ಹೊಡೆದಾಟ ನಡೆಯುತ್ತಿದೆ.ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ನ ಬಿರುಕು ದೊಡ್ಡದಾಗುತ್ತದೆಯಾವ ಹಂತಕ್ಕೆ ತಲುಪುತ್ತೆ ಎಂದು ಜನರು ಊಹೆ ಕೂಡ…
ಬೆಂಗಳೂರು :ಹಾನಗಲ್ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಜನವರಿ 20ರಂದು ಹಾವೇರಿಯಲ್ಲಿ ಪ್ರತಿಭಟನೆಗೆ ನಿರ್ಧರಿಸಿದೆ ಅಂದು ಮಧ್ಯಾಹ್ನದ ಎಸ್ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದೆ.ಅಂದು ಮಧ್ಯಾಹ್ನ ಎಸ್ಪಿ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದ್ದು, ಬಸವರಾಜ್ ಬೊಮ್ಮಾಯಿ ಆರ್ ಅಶೋಕ್ ಪ್ರತಿಭಟನೆಯ ನೇತೃತ್ವವನ್ನು ವಹಿಸಲಿದ್ದಾರೆ. ಈ ಕುಡಿದಂತೆ ಬೆಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯಲ್ಲಿ ರಾಜಕಾರಣ ಮಧ್ಯ ಪ್ರವೇಶ ಮಾಡುತ್ತಿದೆ. ಪೋಕ್ಸೋ ಕಾಯ್ದೆ ಉಲ್ಲಂಘನೆ ಮಾಡಿದ್ದಲ್ಲದೆ ಸಂತ್ರಸ್ತೆಗೆ ಆಮಿಷ ಕೂಡ ಒಡ್ಡಲಾಗಿದೆ.ಸ್ಥಳೀಯ ಪೊಲೀಸರು ಮತ್ತು ಹಾಕುವಂತಹ ಎಲ್ಲಾ ಸಾಕ್ಷಿಗಳಿವೆ ಎಸ್ಐಟಿ ತನಿಖೆಗೆ ಸಿಎಂ ನಿರಾಕರಿಸಿ ಪ್ರೋತ್ಸಾಹ ಮಾಡಿದಂತೆ ಮಾಡಿದ್ದಾರೆ.ಹಾಗಾಗಿ ಜ.20 ರಂದು ಹಾವೇರಿ ಎಸ್ ಪಿ ಕಚೇರಿ ಮುಂದೆ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ…