Author: kannadanewsnow05

ದಾವಣಗೆರೆ : ರಾಮ ನವಮಿಯ ವೇಳೆ 2 ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು ಈ ವೇಳೆ ಇಬ್ಬರು ವ್ಯಕ್ತಿಗಳಿಗೆ ಚಾಕು ಇರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ನೆಲ್ಲೂರು ಕ್ಯಾಂಪ್ ಬಳಿ ಈ ಘಟನೆ ನಡೆದಿದೆ. https://kannadanewsnow.com/kannada/if-i-had-contested-darshan-would-have-definitely-campaigned-for-me-sumalatha-ambareesh/ ರಾಮ ನವಮಿ ಆಚರಣೆಯ ವೇಳೆ ಘರ್ಷಣೆಯಲ್ಲಿ ಇಬ್ಬರಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಇದೆ 17ರಂದು ರಾಮನವಮಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಘರ್ಷಣೆ ಹನುಮಂತ ಹಾಗೂ ಗೋಪಾಲ್ ಎಂಬವರಿಗೆ ಚಾಕು ಇರಿಯಲಾಗಿದೆ. ಇದೇ ಘಟನೆಯಲ್ಲಿ ಅನ್ಯಕೋಮಿನ ಓರ್ವ ಯುವಕನಿಗೂ ಕೂಡ ಗಾಯವಾಗಿದೆ. https://kannadanewsnow.com/kannada/congress-creates-jihadi-karnataka-blood-of-hindus-has-no-value-opposition-leader-r-ashoka/ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆ ಸಂಭಂದ ಚೆನ್ನಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರಲ್ಲೂ ಕೂಡ ರಾಮನವಮಿ ಆಚರಣೆ ವೇಳೆ ಘರ್ಷಣೆ ಉಂಟಾಗಿತ್ತು. ಮುಂಜಾಗ್ರತ ಕ್ರಮವಾಗಿ ನಲ್ಲೂರು ಕ್ಯಾಂಪ್ ನಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ

Read More

ಮಂಡ್ಯ : ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಇತ್ತೀಚಿಗೆ ನಟ ದರ್ಶನ್ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದು, ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಬೇಡ ಎಂದು ಹೇಳಲ್ಲ. ನಾನು ಸ್ಪರ್ಧೆ ಮಾಡಿದರೆ ದರ್ಶನ ನನ್ನ ಪ್ರಚಾರ ಮಾಡುತ್ತಿದ್ದರು ಎಂದು ಉಡುಪಿಯಲ್ಲಿ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಹೇಳಿಕೆಯನ್ನು ನೀಡಿದರು. ರಾಜಕೀಯವಾಗಿ ಬೇರೆಯವರ ಬಗ್ಗೆ ನಾವು ನಿತ್ಯ ಚರ್ಚೆಯನ್ನು ಮಾಡುವುದಿಲ್ಲ. ನಿತ್ಯ ಕರೆ ಮಾಡಿ ಯಾರ ಪರ ಪ್ರಚಾರ ಮಾಡುತ್ತೀಯಾ ಅಂತ ಕೇಳಲ್ಲ. ಯಾರ ಪರ ಪ್ರಚಾರ ಮಾಡಬೇಕು ಅನ್ನೋದು ಅವರವರ ಇಚ್ಛೆ. ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎನ್ನಲು ನಾನು ಯಾರು? ಎಂದು ಸಂಸದೆ ಸುಮಲತಾ ತಿಳಿಸಿದರು. ವಿಧಾನಸಭೆ ಚುನಾವಣೆ ವೇಳೆ ಮದ್ದೂರಿನಲ್ಲಿ ಪ್ರಚಾರ ಮಾಡಿದ್ದರು. ಆಗ ಮದ್ದೂರಿನಲ್ಲಿ ಕಾಂಗ್ರೆಸ್ ಪರ ದರ್ಶನ್ ಪ್ರಚಾರ ಮಾಡಿದ್ದರು. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ದರ್ಶನ ಪ್ರಚಾರ ಮಾಡಿದ್ದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ…

Read More

ಹಾಸನ : ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಚೊಂಬು ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವಿರೋಧ ಪಕ್ಷದ ನಾಯಕ ಆರ್ ಅಶೋಕಗೆ ಕೇಳಿ 15 ಲಕ್ಷ ಹಣ ಪ್ರತಿಯೊಬ್ಬ ನಾಗರೀಕನ ಅಕೌಂಟಿಗೆ ಹಾಕುತ್ತೇವೆ ಎಂದಿದ್ದರು ಹಾಕಿದ್ದೀರಾ ಎಂದು ಪ್ರಶ್ನಿಸಿದರು. ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತಿವಿ ಅಂದ್ರಲ್ಲ ಹಾಕಿದ್ರಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದಿದ್ದರು ಮಾಡಿದ್ರ? ಅಲ್ಲದೆ ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಹೇಳಿದರು ಅದೆಲ್ಲವನ್ನು ಮಾಡಿದ್ರಾ? ಅಗತ್ಯ ವಸ್ತುಗಳ ಬೆಲೆ ಇಳಿಸುತ್ತೇವೆ ಅಂದ್ರು ಇಳಿಸಿದ್ದಾರಾ? ಬಿಜೆಪಿಯವರು ಅಚ್ಚೆದಿನ್ ಬರುತ್ತೆ ಅಂತ ಹೇಳಿದರು ಬಂತಾ? ಅದಕ್ಕೆ ಕಾಲಿ ಚೆಂಬು ಅಂತಿರೋದು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಸರ್ಕಾರ ವಜಾ ಮಾಡಬೇಕೆಂದು ಡಾಕ್ಟರ್ ಅಶ್ವತ್ ನಾರಾಯಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಯಾರು ಹೇಳುತ್ತಾರೆ ಮೊದಲು ಅವರನ್ನು ವಜಾ ಮಾಡಿ. ನಮಗೆ ಜನ…

Read More

ರಾಮನಗರ : ಎಲ್ಲಿ ಕಲ್ಲು ಗಣಿಗಾರಿಕೆ ನಡೆಸುತ್ತೇನೆಂದು ದಾಖಲೆ ಕೊಡಲಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ವಿಚಾರವಾಗಿ ಉತ್ತರಿಸಿದ ಡಿಕೆ ಸುರೇಶ್ ಎಚ್ ಡಿ ಕುಮಾರಸ್ವಾಮಿ ಎಲ್ಲಿ ಕಲ್ಲು ಗಣಿಗಾರಿಕೆ ನಡೆಸಿದ್ದಾರೆಂದು ದಾಖಲೆ ನೀಡುತ್ತೇನೆ ಎಂದು ಅವರು ತಿಳಿಸಿದರು. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದುರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು ಕನಕಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎಲ್ಲೆಲ್ಲಿ ಕಲ್ಲು ಸಾಗಿಸಿದ್ದಾರೆ, ಇಳಕಲ್ನಲ್ಲಿ ಎಲ್ಲೆಲ್ಲಿ ಕಲ್ಲು ಸಾಗಿಸಿದ್ದಾರೆಂದು ಎಲ್ಲಾ ದಾಖಲೆ ಕೊಡುತ್ತೇನೆ, ನಮ್ಮ ವಿರುದ್ಧ ಇಪ್ಪತ್ತು ಕೇಸ್ ಹಾಕಿದ್ದರು ನೆನಪಿದೆ ಅಲ್ಲವಾ? ಎಚ್ ಡಿ ಕುಮಾರಸ್ವಾಮಿ ಬಾಯಿಗೆ ಬಂದ ಹಾಗೆ ಮಾತನಾಡುವುದಲ್ಲ. ಎಚ್ಡಿಕೆ ಬಂದು ಏಕೆ ಕಲ್ಲುಗಣಿಗಾರಿಕೆ ನಡೆಸಿದರು ಎಂದು ಹೇಳುತ್ತೇನೆ ಎಚ್ ಡಿ ಕುಮಾರಸ್ವಾಮಿ ಬೆಳೆಯುವುದಲ್ಲ ಆಲೂಗಡ್ಡೆನಾ? ಎಂದು ಕಿಡಿ ಕಾರಿದರು. ಕನಕಪುರಕ್ಕೆ ನೀವು ಬರಬೇಡಿ ಎಂದು ಡಿಕೆ ಕೇಳಿಕೊಂಡಿದ್ದರೆಂದು ಹೇಳಿಕೆ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಡಿಕೆ ಸುರೇಶ್ ಅಂತಹ ನೀಚ ರಾಜಕಾರಣ…

Read More

ಬೆಂಗಳೂರು : ಬೆಂಗಳೂರು ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು ಅದರಂತೆ ಅಪರಾಧ ಚಟುವಟಿಕೆಗಳು ಕೂಡ ಹೆಚ್ಚಾಗುತ್ತಿವೆ. ಮಾದಕ ವಸ್ತು ಮಾರಾಟ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು ವಿದೇಶಿ ಡ್ರಗ್ ಪೆಡ್ಲರನ್ನು ಬಂಧಿಸಿದ್ದು ಆತನಿಂದ ನಾಲ್ಕು ಕೋಟಿ ಮೌಲ್ಯದ ಮಾದಕ ವಸ್ತು ಮಾಡಿಕೊಂಡಿದ್ದಾರೆ. ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ನೈಜಿರಿಯಾ ಮೂಲದ ಅಕ್ರಮ ವಾಸಿ ಹೆನ್ರಿ ಚುಕ್ವುಮೆಕಾ ಎಂಬಾತ ಬಂಧಿತ ಆರೋಪಿ. ಇತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ ಪಿಎಸ್ಐ ಕೇಶವಮೂರ್ತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಪ್ರತಿಷ್ಟಿತ ಕಾಲೇಜ್​ ಹಾಗೂ ಐಟಿಬಿಟಿ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್​ ಮಾರುತ್ತಿದ್ದ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ನುಡಿದಂತೆ ರಾಜ್ಯದ ಬಡಜನರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಲಾಗಿತ್ತು ಆದರೆ ಬಿಎಸ್ ಯಡಿಯೂರಪ್ಪ ರಾಜಕೀಯ ಅಕ್ಕಿ ನೀಡದಂತೆ ಪ್ರಧಾನಿ ಮೋದಿಗೆ ದೂರ್ ನೀಡಿದರು ಉಳಿಗಾಲವಿಲ್ಲ ಎಂದು ದೂರು ನೀಡಿದರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ 21 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಶಿವಮೊಗ್ಗದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿಕೆ ನೀಡಿದ್ದು ನರೇಂದ್ರ ಮೋದಿ ಕಾಂಗ್ರೆಸ್ನ ಗ್ಯಾರಂಟಿ ಪದವನ್ನೇ ಕದ್ದುಬಿಟ್ಟಿದ್ದಾರೆ ಎಂದು ಕಿಡಿ ಕಾರಿದರು. ಕರ್ನಾಟಕದ ಬಡ ಜನರಿಗೆ ಕೊಡಲು ಮೋದಿ ಅಕ್ಕಿಯನ್ನೇ ಕೊಡಲಿಲ್ಲ.FCI ನಲ್ಲಿ ಅಕ್ಕಿ ಕೊಳೆಯುತ್ತಿದ್ದರು, ಮೋದಿ ರಾಜ್ಯಕ್ಕೆ ಅಕ್ಕಿ ನೀಡುತ್ತಿಲ್ಲ. ರಾಜ್ಯಕ್ಕೆ ಅಕಿ ಪೂರೈಸಿದಂತೆ ಮೋದಿಗೆ ಬಿಎಸ್ ಯಡಿಯೂರಪ್ಪ ದೂರು ನೀಡಿದ್ದರು ಎಂದು ತಿಳಿಸಿದರು. ರಾಜಕ್ಕೆ ಅಕ್ಕಿ ಪೂರೈಸಿದರೆ ಬಿಜೆಪಿಗೆ ಉಳಿಗಾಲ ಇಲ್ಲವೆಂದು ಬಿಎಸ್ ಯಡಿಯೂರಪ್ಪ ದೂರು ನೀಡಿದರು. ಹಾಗಾಗಿ 5 ಕೆ.ಜಿ ಅಕ್ಕಿಯ ಬದಲು ಬಡವರಿಗೆ ಹಣ…

Read More

ಬೆಂಗಳೂರು : ಗ್ಯಾರಂಟಿ ಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆಗೆ ರಾಜ್ಯ ಮಹಿಳಾ ಆಯೋಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಿತ್ತು. ಇದೀಗ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು ರಾಜ್ಯ ಮಹಿಳಾ ಆಯೋಗ ನೀಡಿದ ನೋಟಿಸ್ ಗೆ ಇದೀಗ ಹೈಕೋರ್ಟ್ ನೀಡಿದೆ ಎಂದು ತಿಳಿದುಬಂದಿದೆ. ದೂರುಗಳು ಇಲ್ಲದಿದ್ದರೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ .ಸೇ, 7ಗೆ ವಿರುದ್ಧವಾಗಿ ಮಹಿಳಾ ಆಯೋಗದ ಅಧ್ಯಕ್ಷೆ ನೋಟಿಸ್ ನೀಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ  ಪರ ವಕೀಲ ಎವಿ ನಿಶಾಂತ್ ವಾದ ಮಂಡಿಸಿದರು. ಕಾರಣ ಕೇಳಿ ಕುಮಾರಸ್ವಾಮಿಗೆ ನೋಟಿಸ್ ನೀಡಿಲ್ಲ ಸಮನ್ಸ್ ನೀಡಿಲ್ಲ ಸ್ಪಷ್ಟೀಕರಣ ನೀಡಿ ಇಲ್ಲವಾದರೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ನ್ಯಾ ಎಂ ನಾಗ ಪ್ರಸನ್ನ ಅವರಿದ್ದ ಹೈಕೋರ್ಟ್…

Read More

ಹುಬ್ಬಳ್ಳಿ : ನಿನ್ನೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಪ್ರಸಾದ್ ಅಬ್ಬಯ್ಯ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಹೆಣದ ಮೇಲೆ ರಾಜಕಾರಣ ಮಾಡುವುದು ಸರಿಯಲ್ಲ. ಆರೋಪಿ ಫಯಾಜ್ ನಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಪ್ರಸಾದ್ ಅಬ್ಬಯ್ಯ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನೇಹಾ ಹಂತಕ ಫಯಾಜ್ಗೆ ಗಲ್ಲು ಶಿಕ್ಷೆ ಆಗಬೇಕೆಂದು ಬಯಸುತ್ತೇನೆ. ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿಕೆ ನೀಡಿದ್ದು,ಈ ಘಟನೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎನ್ನುವುದರ ಬಗ್ಗೆ ಮಾತನಾಡುವುದಿಲ್ಲ ಹೆಣದ ಮೇಲೆ ಯಾರು ಕೂಡ ರಾಜಕಾರಣವನ್ನ ಮಾಡಬಾರದು ಎಂದರು. ಪೊಲೀಸ್ ಇಲಾಖೆ ಮಾಹಿತಿಯಂತೆ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ನೇಹಾ ಹಂತಕನಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ನಾನು ಒತ್ತಾಯಿಸುತ್ತೇನೆ.ಇಂತಹ ಪ್ರಕರಣದಲ್ಲಿ ಯಾವುದೇ ಜಾತಿ ಧರ್ಮವನ್ನು ನೋಡಬಾರದು ಆರೋಪಿಗಳಿಗೆ ಕಠಿಣ ಶಿಕ್ಷೆ ಆದರೆ ಮಾತ್ರ ನ್ಯಾಯ ಕೊಡಿಸಿದಂತೆ ಆಗುತ್ತದೆ ಎಂದು…

Read More

ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ವಿರಿತಾಗಿ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಹಲವು ಯುವಕರು ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಮೈಸೂರಿನ ರೋಹಿತ್ ಎಂದು ಹೇಳಲಾಗುತ್ತಿದ್ದು, ರೋಹಿತ್ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ನಡೆಸಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಯುವಕ ರೋಹಿತ್ ದೂರು ನೀಡಿದ್ದಾನೆ. ಪಾಕಿಸ್ತಾನದ ಪರ ಹಾಗೂ ಅಲ್ಲಾಹೂ ಪರ ಘೋಷಣೆ ಕೂಗುವಂತೆ ಒತ್ತಾಯ ಮಾಡಿದ್ದಾರೆ. ಮೋದಿ ಪರ ಹಾಡು ಬರೆದಿದ್ದೀಯಾ ನಿನ್ನ ಸಾಯಿಸುತ್ತೇವೆ ಅಂತ ಬೆದರಿಕೆ ಹಾಕಿ ರೋಹಿತನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ ಮುಸ್ಲಿಂ ಯುವಕರು ಪರಾರಿಯಾಗಿದ್ದಾರೆ. ನಂತರ ಹಲ್ಲೆಗೊಳಗಾದ ಯುವಕ ರೋಹಿತ್ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ವಿಡಿಯೋ ಮೂಲಕ…

Read More

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹಿರೇಮಠಳನ್ನು ಫಯಾಜ್ ಎನ್ನುವ ಆರೋಪಿ ಭೀಕರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಇದು ವೈಯಕ್ತಿಕ ವಿಚಾರಕ್ಕೆ ಆಗಿರುವ ಕೊಲೆಯಾಗಿದ್ದು ರಾಜ್ಯದಲ್ಲಿ ಕಾನೂನು ಸವ್ಯವಸ್ಥೆ ಬಹಳ ಚೆನ್ನಾಗಿದೆ ಎಂದು ತಿಳಿಸಿದರು. https://kannadanewsnow.com/kannada/bjp-releases-chargesheet-against-congress-says-abandoned-projects-failed/ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್​ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್​ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. https://kannadanewsnow.com/kannada/%e0%b2%a8%e0%b2%bf%e0%b2%ae%e0%b3%8d%e0%b2%ae-%e0%b2%af%e0%b3%8b%e0%b2%97%e0%b3%8d%e0%b2%af%e0%b2%a4%e0%b3%86%e0%b2%97%e0%b3%86-11-%e0%b2%a4%e0%b2%bf%e0%b2%82%e0%b2%97%e0%b2%b3%e0%b2%bf%e0%b2%a8/ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು…

Read More