Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರಗಿ : 2 ವರ್ಷದ ಮಗುವನ್ನು ಕೊಲೆ ಮಾಡಿ ತಾಯಿ ನೇಣಿಗೆ ಶರಣಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಎರಡು ವರ್ಷದ ಮಗುವನ್ನು ಕೊಂದು ತಾಯಿಯೊಬ್ಬಳು ತಾನು ಕೂಡ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ವರ್ಷಿತ(2) ಎನ್ನುವ ಮಗುವನ್ನು ತಾಯಿ ಶಿವಲೀಲಾ (23) ಕೊಂದು ನಂತರ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಗಂಡ ಹಾಗೂ ಅತ್ತೆ ಕಿರುಕುಳದಿಂದ ಶಿವಲೀಲಾ ಇತ್ತೀಚಿಗೆ ತವರು ಮನೆ ಸೇರಿದ್ದಳು ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಶಿವಲೀಲಾ ಗಂಡನ ಮನೆಗೆ ಬಂದಿದ್ದಳು. ಆತ್ಮಹತ್ಯೆ ಕುರಿತು ಪೊಲೀಸರು ಇದೀಗ ತನಿಖೆಯನ್ನು ಕೈಗೊಂಡಿದ್ದು, ಘಟನೆ ಕುರಿತಂತೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : 5 ದಿನಗಳ ಹಿಂದಷ್ಟೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮೀಷನ್ ಆರೋಪ ಮಾಡಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇದೀಗ ಯು ಟರ್ನ್ ಹೊಡೆದಿದ್ದು, ಸರ್ಕಾರ ಬಿಲ್ ಪಾವತಿಯಲ್ಲಿ ಭ್ರಷ್ಟಾಚಾರ ನಡೆಸಿದ ಯಾವುದೇ ಮಾಹಿತಿ ನನಗಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಸಣ್ಣ ಗುತ್ತಿಗೆದಾರರಿಗೆ ಬಾಕಿ ಅನುದಾನ ಬಿಡುಗಡೆ ಮಾಡಿ ನಮಗೆ ಸ್ಪಂದಿಸಿದೆ.ಸರ್ಕಾರ ಬಿಲ್ ಪಾವತಿಯಲ್ಲಿ ಭ್ರಷ್ಟಾಚಾರ ನಡೆಸಿದ ಯಾವುದೇ ಮಾಹಿತಿ ನನಗಿಲ್ಲ ಎನ್ನುವ ಮೂಲಕ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಯೂಟರ್ನ್ ಹೊಡೆದಿದ್ದಾರೆ. ಈ ಸರ್ಕಾರ 40% ಕಮೀಷನ್ ಕೇಳುತ್ತಿದೆ ಎಂಬರ್ಥದಲ್ಲಿ ನಾನು ಹೇಳಿಲ್ಲ. ಭ್ರಷ್ಟಾಚಾರದ ಪರ್ಸೆಂಟೇಜ್ ಕಡಿಮೆಯಾಗಿದೆ. ಪ್ಯಾಕೇಜ್ ರೀತಿ ಟೆಂಡರ್ ಕರೆದರೆ ಹೆಚ್ಚಿನ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಪ್ರತಿ ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಎಂದಷ್ಟೇ ಒತ್ತಾಯಿಸಿದ್ದೇವೆ ಎಂದು ಹೇಳಿದರು. ಗುತ್ತಿಗೆದಾರರಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಯಾಗುವ ಮಟ್ಟಿನ ಸ್ಪಂದನೆ ಸಿಕ್ಕಿರಲಿಲ್ಲ.…
ಮಂಡ್ಯ : ವಿಚಾರಣೆ ನೆಪದಲ್ಲಿ ಮಹಿಳೆಯನ್ನು ಠಾಣೆಗೆ ಕರೆತಂದು ಮಹಿಳೆಯ ಮೇಲೆ ಪೊಲೀಸ್ ಸಿಬ್ಬಂದಿ ಥಳಿಸಿರುವ ಆರೋಪ ಕೇಳಿ ಬಂದಿದೆ. ಮಂಡ್ಯ ಪೂರ್ವ ಠಾಣೆ ಪಿಎಸ್ಐ ವಿರುದ್ಧ ಇದೀಗ ಗಂಭೀರ ಆರೋಪ ಕೇಳಿ ಬಂದಿದೆ. ಮಂಡ್ಯ ಪೂರ್ವ ಠಾಣೆಯ ಪಿ ಎಸ್ ಐ ಅಯ್ಯನಗೌಡ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಮಂಡ್ಯ ನಗರದ ರೂಪಾದೇವಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ರೂಪ ಎಂಬುವರ ಹಸು ಅಡ್ಡ ಬಂದು ಲೇಡಿ ಕಾನ್ಸ್ಟೇಬಲ್ ಸ್ಕೂಟಿ ಇಂದ ಬಿದ್ದು ಗಾಯಗೊಂಡಿದ್ದರು. ಪರಿಹಾರ ನೀಡುವಂತೆ ಮಹಿಳಾ ಪೇದೆ ರೂಪಾದೇವಿಗೆ ಒತ್ತಡ ಹೇರಿದ್ದಾರೆ. ಹಣ ನೀಡಿದ್ದಕ್ಕೆ ವಿಚಾರಣೆ ನೆಪದಲ್ಲಿ ರೂಪ ದೇವಿಯನ್ನು ಠಾಣೆಗೆ ಕರೆಸಿ ಥಳಿಸಿದ್ದಾರೆ. ಪೊಲೀಸರ ಥಳಿತದಿಂದ ಮಹಿಳೆಗೆ ಗಂಭೀರವಾದಂತಹ ಗಾಯಗಳಾಗಿವೆ. ಸದ್ಯ ಮಹಿಳೆಯನ್ನು ಮಂಡ್ಯ ಮೀನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಆಫ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಗಿರಬಹುದು ಅಥವಾ ಆನ್ಲೈನ್ ಮನಿ ಗೇಮಿಂಗ್ ನಿಂದ ಕೋಟ್ಯಾಂತರ ರೂಪಾಯಿಗಳ ಬೆಟ್ಟಿಂಗ್ ದಂಧೆ ನಡಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಶೀಘ್ರದಲ್ಲಿ ಪ್ರತ್ಯೇಕ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಕಾಂಗ್ರೆಸ್ನ ರವಿಕುಮಾರ್ ಗಣಿಗ ಅವರು ಕ್ರಿಕೆಟ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೊಳಿಸುವಂತೆ ಗೃಹ ಸಚಿವರಲ್ಲಿ ಕೋರಿದರು. ಅದಕ್ಕೆ ಪಕ್ಷಾತೀತವಾಗಿ ಎಲ್ಲ ಶಾಸಕರು ಧ್ವನಿಗೂಡಿಸಿ, ಕ್ರಿಕೆಟ್ ಬೆಟ್ಟಿಂಗ್ ಜತೆಗೆ ಆನ್ಲೈನ್ ಮನಿ ಗೇಮಿಂಗ್ಗಳಿಗೂ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಪರಮೇಶ್ವರ್, ಕ್ರಿಕೆಟ್ ಬೆಟ್ಟಿಂಗ್ ದಂಧೆಯು ರಾಜ್ಯಾದ್ಯಂತ ನಡೆಯುತ್ತಿದೆ. ಇದರಲ್ಲಿ ಸಾವಿರಾರು ಕೋಟಿ ರು. ಹಣದ ವ್ಯವಹಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾನೂನು ಕ್ರಮವನ್ನು ಬಿಗಿಗೊಳಿಸಲಾಗುವುದು ಎಂದು ತಿಳಿಸಿದರು. ಜತೆಗೆ ಆನ್ಲೈನ್ ಮನಿ ಗೇಮಿಂಗ್ಗಳಿಂದಲೂ ಯುವಕರು ಹಾಳಾಗುತ್ತಿದ್ದು, ಅವುಗಳಿಗೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ. ಒಟ್ಟಾರೆ ಬೆಟ್ಟಿಂಗ್ ಮತ್ತು…
ಉತ್ತರಪ್ರದೇಶ : ಖ್ಯಾತ ಗಾಯಕಿ ಮತ್ತು ನಟಿ ವಿಜಯ ಲಕ್ಷ್ಮಿ ಅಲಿಯಾಸ್ ಮಲ್ಲಿಕಾ ರಜಪೂತ್ ಅವರು ಫೆ.13ರಂದು ತಮ್ಮ ಸ್ವಗೃಹದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆದರೆ ಈ ಸಾವು ಆತ್ಮಹತ್ಯೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಕಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಅವರ ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸ್ಪಷ್ಟನೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮನೆಯ ಸದಸ್ಯರು ಮಲಗಿದ್ದ ಕಾರಣ ಯಾವಾಗ ಈ ಘಟನೆ ನಡೆದಿದೆ ಎಂಬುದು ಗೊತ್ತಾಗಲಿಲ್ಲ ಎಂದು ಮಲ್ಲಿಕಾ ಅವರ ತಾಯಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಶ್ರೀರಾಮ್ ಪಾಂಡೆ ಹೇಳಿದ್ದಾರೆ. ಸಾಕಷ್ಟು ಸಿನಿಮಾಗಳಿಗೆ ಹಾಡಿದ್ದ 35 ವರ್ಷದ ಗಾಯಕಿ ಕಮ್ ನಟಿ ಮಲ್ಲಿಕಾ ರಜಪೂರ್ ಅವರ ಮೃತದೇಹ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾಕುಂಡ್ ಪ್ರದೇಶದ ತನ್ನ ಮನೆಯ ಕೋಣೆಯಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಸಾವು ಅನುಮಾನಾಸ್ಪದವಾಗಿದೆ ಎಂದು ಪೊಲೀಸರು…
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ಜನವರಿ 22ರಂದು ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಯಿತು. ಇದೀಗ ಶ್ರೀರಾಮ ಮಂದಿರ ನೋಡಲು ಬೆಂಗಳೂರಿನಿಂದ ಅಯೋಧ್ಯೆಗೆ ಮೊದಲ ವಿಶೇಷ ರೈಲು ಹೊರಟಿದೆ. ಬೆಂಗಳೂರಿನಿಂದ ಅಯೋಧ್ಯೆಗೆ ಮೊದಲ ವಿಶೇಷ ರೈಲು ಹೊರಟಿದ್ದು, ಅಯೋಧ್ಯ ಶ್ರೀರಾಮದರ್ಶನ ಅಭಿಯಾನದಲ್ಲಿ ವಿಶೇಷ ರೈಲಿನಲ್ಲಿ ಬಿಜೆಪಿ ಕಾರ್ಯಕರ್ತರು ತೆರಳಿದ್ದಾರೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ವಿಶೇಷ ರೈಲಿಗೆ ಚಾಲನೆ ನೀಡಲಾಯಿತು. ಸಂಸದ ಪಿಸಿ ಮೋಹನರಿಂದ ಮೊದಲ ರೈಲಿಗೆ ಚಾಲನೆ ನೀಡಲಾಯಿತು.ಮೂರು ಲೋಕಸಭಾ ಕ್ಷೇತ್ರಗಳ 1450 ಕಾರ್ಯಕರ್ತರು ಪ್ರವಾಸ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಮುಂಜಾನೆ 3.40 ಅಯೋಧ್ಯ ಪ್ರವಾಸಕ್ಕೆ ವಿಶೇಷ ರೈಲಿಗೆ ಚಾಲನೆ ನೀಡಲಾಗಿದೆ. ಫೆಬ್ರವರಿ 16ರ ಮಧ್ಯಾನ ಆಯೋಧ್ಯೆಯನ್ನು ಕಾರ್ಯಕರ್ತರು ತಲುಪಲಿದ್ದಾರೆ. ಬಳಿಕ ದರ್ಶನ ಮುಗಿಸಿ 17ರ ಬೆಳಿಗ್ಗೆ 5 ಗಂಟೆಗೆ ಅಲ್ಲಿಂದ ರೈಲು ಮತ್ತೆ ರೈಲು ಮರಳಲಿದೆ. ಫೆಬ್ರವರಿ 20ರ ಬೆಳಿಗ್ಗೆ ವಿಶೇಷ ರೈಲು ಬೆಂಗಳೂರು ತಲುಪುತ್ತದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಕುಂದು ಕೊರತೆಗಳನ್ನು ನಿವಾರಿಸಿ ಎಂದು ನಿನ್ನೆ ಆಶಾಕಾರ್ಯಕರ್ತರು ಬೆಂಗಳೂರಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ ರೂ. 5,000 ಸಾವಿರದ ಬದಲು ರೂ.7,000 ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ತೆರಳಿದ ದಿನೇಶ್ ಗುಂಡೂರಾವ್ ಅಲ್ಲಿ ಹಲವಾರು ಅಹವಾಲುಗಳನ್ನು ಸ್ವೀಕರಿಸಿ ನಮ್ಮ ಸರ್ಕಾರ ಯಾವತ್ತಿಗೂ ನಿಮ್ಮ ಪರವಾಗಿದೆ. ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳ ನಿವಾರಣೆಯ ನಿಟ್ಟಿನಲ್ಲಿ ಸರ್ಕಾರ ಮತ್ತು ಇಲಾಖೆಯು ಮುಕ್ತ ಮನಸ್ಸಿನಲ್ಲಿದ್ದು, ತ್ವರಿತ ಪ್ರತಿಸ್ಪಂದನೆಗೆ ಸದಾ ಸಿದ್ಧವಾಗಿದೆ ದಯವಿಟ್ಟು ಪ್ರತಿಭಟನೆಯನ್ನು ಕೈಬಿಡಿ ಎಂದು ಮನವಿ ಮಾಡಿದರು. ಆಶಾ ಕಾರ್ಯಕರ್ತರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ ರೂ. 5,000 ಜೊತೆಗೆ ರೂ.2,000 ಸೇರಿಸಿ ಒಟ್ಟು ರೂ.7,000 ಖಾತ್ರಿಪಡಿಸುವುದಾಗಿ ಘೋಷಿಸಿದರು. ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನ ಪರಗಣಿಸಿ ಪ್ರೋತ್ಸಾಹಧನವನ್ನ ಪಾರದರ್ಶಕವಾಗಿ ನೀಡಲಾಗುವುದು ಎಂದು ಸಚಿವ…
ಬೆಂಗಳೂರು : ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಫೆ.14ರಂದು ಸಂಜೆ 5ರಿಂದ ಮತದಾನ ನಡೆಯುವ ಫೆ.16ರ ಮಧ್ಯರಾತ್ರಿ 12ರವರೆಗೆ ಮದ್ಯ ಮಾರಾಟ ನಿಷೇಧಿ ಸಲು ಅಧಿಕಾರ ಕಲ್ಪಿಸಿರುವ ಕಾನೂನಿನ ಬಗ್ಗೆ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಫೆ.14ರಂದು ಸಂಜೆ 5ರಿಂದ ಮತದಾನ ನಡೆಯುವ ಫೆ.16ರ ಮಧ್ಯರಾತ್ರಿ 12ರವರೆಗೆ ಮತ್ತು ಮತ ಎಣಿಕೆ ದಿನವಾದ ಫೆ.20ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಫೆ.1ರಂದು ಆದೇಶ ಹೊರಡಿಸಿದ್ದರು. ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ಗಳ ಸಂಘದ ಕಾರ್ಯದರ್ಶಿ ವೀರೇಂದ್ರ ಎನ್.ಕಾಮತ್ ಸೇರಿ ಒಟ್ಟು ನಾಲ್ವರು ಹೈಕೋರ್ಟ್ಗೆ ತಕರಾರು ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರ ಪೀಠ, ಈ ರೀತಿಯ ಆದೇಶ ಸೂಕ್ತವಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಈ…
ಬೆಂಗಳೂರು : ಬಿಜೆಪಿ ಆಡಳಿತದಲ್ಲಿ ನಡೆದಿದೆ ಎನ್ನಲಾದ ಬಿಬಿಎಂಪಿ ಕಾಮಗಾರಿಯಲ್ಲಿ 40% ಕಮಿಷನ್ ಹಾಗೂ ಕಳೆದ 4 ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಏಕ ವ್ಯಕ್ತಿ ಸಮಿತಿಗೆ ವರದಿ ಸಲ್ಲಿಸಲು ಹೈಕೋರ್ಟ್ ಮತ್ತೆ ಆರು ವಾರಗಳ ಗಡುವು ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರ ನ್ಯಾ.ನಾಗಮೋಹನ್ ದಾಸ್ ಅವರ ಏಕವ್ಯಕ್ತಿ ಸಮಿತಿ ರಚಿಸಿ 2023ರ ಆ. 5ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮೆರ್ಸಸ್ ನಿಕ್ಷೇಪ್ ಇನ್ಸಾ ಪ್ರಾಜೆಕ್ಟ್ಸ್ ಸೇರಿ ಹಲವು ಗುತ್ತಿಗೆ ಕಂಪನಿಗಳು ಮತ್ತು ಗುತ್ತಿಗೆದಾರರು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗ ಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಎಲ್ಲ ಪಾಲುದಾರರು ವಾದ ಮತ್ತು ಎಲ್ಲ ದಾಖಲೆಗ ಳನ್ನು ಪರಿಗಣಿಸಿದ ನಂತರ ಸಮಿತಿ 45 ದಿನಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ ವರದಿಯನ್ನು ಹೈಕೋಟ್ ್ರಗೆ ಮುಚ್ಚಿದ…
ಬೆಂಗಳೂರು : ಫೆ.17 ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವಗುರು ಬಸವಣ್ಣ- ಸಾಂಸ್ಕೃತಿಕ ನಾಯಕ’ ಎಂಬ ಘೋಷವಾಕ್ಯ ಹೆಸರಿಸಿ ಅನಾವರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ನಿನ್ನೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ.ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮರೆಯಲು ಆಗುವುದಿಲ್ಲ. ಈ 4 ಜನರ ಹೆಸರನ್ನು ದೇಶ ಮರೆಯುವುದಕ್ಕೆ ಆಗುವುದಿಲ್ಲ. ಇವರೆಲ್ಲ ಸಮಾಜದಲ್ಲಿರುವ ಅಂಕು ಡೊಂಕು ತಿದ್ದಿದವರು. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು. ಅನುಭವ ಮಂಟಪದ ಮೂಲಕ ಸಂಸದೀಯ ವ್ಯವಸ್ಥೆ ತಂದಿದ್ದಾರೆ.ನಾವೀಗ ಸಂಸತ್ತು ಅಂತ ಯಾವುದನ್ನು ಹೇಳುತ್ತೇವೆಯೋ, ಆಗಲೇ ಜನರ ಧ್ವನಿ ಎತ್ತಲು ಬಸವಣ್ಣ ಅನುಭವ ಮಂಟಪವನ್ನು ಮಾಡಿದ್ದರು.…