Author: kannadanewsnow05

ಬೆಂಗಳೂರು : ಬೆಂಗಳೂರಿನ ಯಲಹಂಕ ನ್ಯೂ ಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ನೀರಿನ ತೊಟ್ಟಿಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ನೀರಿನ ತೊಟ್ಟಿಯಲ್ಲಿ ಕವಿತಾ (40) ಮಗು ಪವನ್ (8) ಶವ ಪತ್ತೆಯಾಗಿದೆ. ತಾಯಿ ಹಾಗೂ ಮಗು ಸಾವನ್ನಪ್ಪಿರುವ ಕುರಿತಂತೆ ನಿಖರವಾದ ಮಾಹಿತಿ ಇಲ್ಲದ ಕಾರಣ ಘಟನೆ ಕುರಿತಂತೆ ಯಲಹಂಕ ನ್ಯೂಟೌನ್ ಪೊಲೀಸ್ರಿಂದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು ಘಟನೆ ಕುರಿತಂತೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಪಂಚಮಸಾಲಿ 2ಎ ಮೀಸಲಾತಿ ಸಂಬಂಧಿಸಿದಂತೆ ಸಾಕಷ್ಟು ಹೋರಾಟಗಳನ್ನು ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲೇ ಪಂಚಮಸಾಲಿ ಸಮುದಾಯದ ಹಲವು ಶಾಸಕರಿದ್ದಾರೆ.ನಿಮಗೆ ಧಮ್ ಇದ್ರೆ ಸಿಎಂ ಸಿದ್ದರಾಮಯ್ಯ ಕಡೆಯಿಂದ ಪಂಚಮಸಾಲಿಗೆ ತ್ರಯ ಮೀಸಲಾತಿ ಘೋಷಿಸಿ ಎಂದು ಬಾಗಲಕೋಟೆಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದರು. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಕೋಟ್ಯಾಂತರ ಹಣ ಖರ್ಚು ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟವನ್ನು ಮಾಡಿದ್ದೆವು. ಕೊನೆಗೆ 2ಡಿ ಮೀಸಲಾತಿಗೆ ತಂದು ನಿಲ್ಲಿಸುವುದಕ್ಕೆ ಯಶಸ್ವಿಯಾಗಿದ್ದೇವೆ ಎಂದರು. ಕಾಂಗ್ರೆಸ್ ನಲ್ಲಿ ಪಂಚಮಸಾಲಿ ಸಮುದಾಯದ ಕೆಲವು ಶಾಸಕರಿದ್ದಾರೆ ನಿಮಗೆ ದಮ್ಮಿದ್ರೆ ಕೊಡಿಸರಪ್ಪ ಮೀಸಲಾತಿ ನಿಮ್ಮದೇ ಸರ್ಕಾರ ಇದೆ ತಾನೇ? ನಿಮಗೆ ದಮ್ಮಿದ್ರೆ ಸಿದ್ದರಾಮಯ್ಯ ಕಡೆಯಿಂದ ಮೀಸಲಾತಿಯನ್ನು ಘೋಷಿಸಿ.ಸಿದ್ದರಾಮಯ್ಯ ಕನಿಷ್ಠ ಪಂಚಮಸಾಲಿ ಸಮುದಾಯದ ಸಭೆ ಸಹ ಕರೆಯಲಿಲ್ಲ. ಅಧಿವೇಶನದ ವೇಳೆ ಸಭೆಗೆ ಕರೆದರೆ ಸಚಿವ ಶಿವಾನಂದ್ ಪಾಟೀಲ್ ಬರಲಿಲ್ಲ ಬೆಳಗಾವಿಯಲ್ಲಿಯೇ ಇದ್ದರೂ ಕೂಡ ಸಚಿವ…

Read More

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ ಗುತ್ತೇದಾರ್ ಅವರು ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜೀತ ಅಭ್ಯರ್ಥಿಯಾದ ಮಾಲಿಕಯ್ಯ ಗುತ್ತೇದಾರ್ ಅವರು ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಐಟಿ ಬಿಟಿ ಸಚಿವರಾದಂತಹ ಪ್ರಿಯಾಂಕರಿಗೆ ಅವರು ಕಲಬುರ್ಗಿಯಿಂದ ಬೆಂಗಳೂರಿಗೆ ಇಂದು ಪ್ರಯಾಣ ಬೆಳೆಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ. ವೈ ಪಾಟೀಲ್ ವಿರುದ್ಧ ಬಿಜೆಪಿಯಿಂದ…

Read More

ಉಡುಪಿ : ಅಲೆಗಳ ಆರ್ಭಟದ ಸುಳಿಗೆ ಮೂವರು ಪ್ರವಾಸಿಗರು ಸಿಲುಕಿದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಈ ಪೈಕಿ ಓರ್ವ ಮೃತನಾಗಿದ್ದರೆ, ಮತ್ತಿಬ್ಬರು ಚೇತರಿಸಿಕೊಂಡಿದ್ದಾರೆ ಗಿರೀಶ್(26) ಎಂಬ ಪ್ರವಾಸಿಗ ಕೊನೆಯುಸಿರೆಳೆದಿದ್ದು, ಇನ್ನುಳಿದ ಅನಂತ ಗೌಡ(42), ಸಂತೋಷ್ (27) ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್​ಗೆ ಬಂದಿತ್ತು. ಈ ಪೈಕಿ ಅನಂತ ಗೌಡ, ಸಂತೋಷ್ ಹಾಗೂ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು. ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದರು. ಈ ವೇಳೆ ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್​ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿ, ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು.

Read More

ಬೆಂಗಳೂರು : ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿ 2500-3000 ಕೋಟಿ ಹಣ ಸೋನಿಯಾಗಾಂಧಿಗೆ ಕೊಟ್ಟಿದೆ.ರಾಜ್ಯವನ್ನು ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಕೊಟ್ಟಿದೆ.ರಾಜ್ಯದ ಜನರಿಗೆ ಮೋಸ ಮಾಡುವ ಸರ್ಕಾರ ಬೇಕಾ? ಸತ್ಯ ನೋಡಿದ್ದೇನೆಂದು ಕಾಂಗ್ರೆಸ್ನವರು ಹೇಳಲಿ ಎಂದು ಸವಾಲು ಹಾಕಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಎಲ್ಲಿದ್ದರೂ? ಅವರನ್ನು ರಾಜಕೀಯಕ್ಕೆ ತಂದಿದ್ದು ಯಾರು? ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಜನರಿಂದ ಲೂಟಿ ಮಾಡಿದೆ ಲೋಕಸಭಾ ಚುನಾವಣೆ ಮುಗಿದ ತಕ್ಷಣ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಭವಿಷ್ಯ ನುಡಿದರು. ಲೋಕಸಭೆ ಚುನಾವಣೆಯ ಮುಗಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಪತನವಾಗಲಿದೆ. ನಾನು ಬೇಜವಾಬ್ದಾರಿಯಿಂದ ಮಾತನಾಡುತ್ತಿಲ್ಲ. ಪ್ರಧಾನ ಮಂತ್ರಿ ಮೋದಿಗೆ ಎದುರು ನಿಲ್ಲುವ ಒಬ್ಬ ಮುಖಂಡ ಇದ್ದಾನಾ?ಮಮತಾ ಬ್ಯಾನರ್ಜಿ, ಸ್ಟಾಲಿನ್, ಡಿಕೆ ಶಿವಕುಮಾರ್ ಎದುರು ನಿಲ್ಲುತ್ತಾರಾ?

Read More

ಬೆಂಗಳೂರು : ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮಕ್ಕಳ ತಜ್ಞವೈದ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಬೆಂಗಳೂರು ನಾರ್ತ್ ಆಸ್ಪತ್ರೆಯಲ್ಲಿ ಅನಂತ ಪ್ರಸಾದ್ ಎನ್ನುವ ವೈದ್ಯರು ಮಕ್ಕಳ ತಜ್ಞರಾಗಿದ್ದರು ಎನ್ನಲಾಗುತ್ತಿದೆ. ಕಳೆದ ಮೂರು ತಿಂಗಳ ಹಿಂದೆ ಮಕ್ಕಳ ತಜ್ಞ ಅನಂತ್ ಪ್ರಸಾದ್ ಅವರು ವಿವಾಹವಾಗಿದ್ದರು. ಎಂದು ಹೇಳಲಾಗುತ್ತಿದ್ದು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಡಗಿನಲ್ಲಿ ಹುಲಿ ದಾಳಿ : ಕಾರ್ಮಿಕ ಸಾವು ಜಿಲ್ಲೆಯ ಪೊನ್ನಂ ಪೇಟೆ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ಕೂಲಿ ಕಾರ್ಮಿಕನೊಬ್ಬ ಸಾವನಪ್ಪಿದ್ದಾನೆ, ಕೆರೆ ಬಳಿ ದನ ಮೇಯಿಸುತ್ತಿದ್ದ ಅಸ್ಸಾಂ ಮೂಲದ ರಹಮಾನ್ (50) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.

Read More

ಬೆಂಗಳೂರು : ಬೆಂಗಳೂರಿನ ಸಾರಕ್ಕಿ ಬಳಿ ಇರುವ ಪಾರ್ಕ್ ನಲ್ಲಿ ಜೋಡಿ ಕೊಲೆಯಾಗಿದ್ದು ಕೊಲೆಯಾದವರನ್ನು ಸುರೇಶ ಹಾಗೂ ಅನುಷಾ ಎಂದು ಹೇಳಲಾಗುತ್ತಿದೆ. ಸಂಜೆ 4:15ರ ಸುಮಾರಿಗೆ ಕಲ್ಲು ಎತ್ತಿ ಹಾಕಿ ಜೋಡಿ ಕೊಲೆ ಮಾಡಲಾಗಿದೆ. ಕೊಲೆಯಾದ ಸುರೇಶ್ (46) ಅನುಷಾ (25) ಇಬ್ಬರು ಪರಿಚಿತರು ಎಂದು ಹೇಳಲಾಗುತ್ತಿದೆ. ಸುರೇಶಗೆ ಮದುವೆಯಾಗಿದ್ದರು ಕೂಡ ಅನುಷಾ ಸಂಬಂಧ ಹೊಂದಿದ್ದಳು. ಗುರುಗುಂಟೆಪಾಳ್ಯದ ನಿವಾಸಿ ಸುರೇಶ್ ಹಾಗೂ ಶಾಕಾಂಬರಿ ನಗರದ ನಿವಾಸಿ ಅನುಷ ಎಂದು ಹೇಳಲಾಗುತ್ತಿದೆ. ಆದರೆ ಅನುಷಾಗೆ ಸಂಬಂಧವನ್ನು ಮುಂದುವರಿಸಲು ಇಷ್ಟ ಇರಲಿಲ್ಲ ಇಂದು ಭೇಟಿಯಾಗಿ ಸಂಬಂಧ ಕಡಿತ ಮಾಡುವ ನಿರ್ಧಾರವನ್ನು ಮಾಡಿದ್ದರು. ಆದರೆ ಅನುಷಾ ತನ್ನ ಕೈ ತಪ್ಪಿ ಹೋಗ್ತಾಳೆ ಎಂದು ಸುರೇಶ್ ಕೋಪಗೊಂಡಿದ್ದ. ಕೋಪಗೊಂದು ಆರೋಪಿ ಸುರೇಶ್ ಅನುಷಾಗೆ ಚಾಕುವಿನಿಂದ ಹಿಡಿದಿದ್ದಾನೆ ಅನುಷಾ ತಾಯಿ ಗೀತಾ ಅಡ್ಡಿಪಡಿಸಿದರೂ ಕೂಡ ಸುರೇಶ್ ಚಾಕು ಇರಿದಿದ್ದಾನೆ. ಈ ವೇಳೆ ಸಿಮೆಂಟ್ ಇಟ್ಟಿಗೆಯನ್ನು ಸುರೇಶ್ ತಲೆ ಮೇಲೆ ಗೀತಾ ಎತ್ತಿ ಹಾಕಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ ಹಾಗೂ…

Read More

ಹುಬ್ಬಳ್ಳಿ : ಇಂದು ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ.ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ ಹಾಡು ಹಗಲೇ ಕಾಲೇಜಿನಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಚಾಕುವಿನಿಂದ ಇರಿದು ನೇಹಾ ಹಿರೇಮಠ ಎನ್ನುವ ಯುವತಿಯನ್ನು ಕೊಲೆ ಮಾಡಲಾಗಿದೆ.ಪಾಲಿಕೆಯ ಸದಸ್ಯರಾಗಿರುವ ನಿರಂಜನ ಹಿರೇಮಠ ಪುತ್ರಿ ನೇಹಾ ಎಂದು ಹೇಳಲಾಗುತ್ತಿದ್ದು ಹಾಡು ಹಗಲೇ ಕಾಲೇಜಿನಲ್ಲಿ ಘೋರ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು  ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿಕೆಯ ನೀಡಿದರು.

Read More

ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಅವಳಿ ಜವಳಿ ಮಕ್ಕಳ ಅನುಮಾನಾಸ್ಪದ ಸಾವಿಗೇ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತಾಯಿ ಮಕ್ಕಳಿಗೆ ವಿಷವುಣಿಸಿ ಕೊಂದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಾಳೆ. ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು ಎಂದು ಹೇಳಲಾಗಿತ್ತು.ಬೀದಿ ಬದಿ ಮಾರಾಟಕ್ಕಿದ್ದ ಐಸ್‌ಕ್ರೀಂ ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು ಮೃತಪಟ್ಟಿದ್ದು ತಾಯಿ ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು. ಆದರೆ ಪೊಲೀಸರ ವಿಚಾರಣೆಯ ವೇಳೆ ತಾಯಿ ಪೂಜಾ ನಾನೇ ವಿಷಯವುಣಿಸಿ ಕೊಂದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ತಾಯಿ ಪೂಜಾ ಇದೀಗ ತಪ್ಪು ಒಪ್ಪಿಕೊಂಡಿದ್ದು, ಆಸ್ಪತ್ರೆಯಲ್ಲಿ ಬೆಳಗ್ಗೆ ಒಂದುವರೆ ವರ್ಷದ ತ್ರಿಶೂಲ್ ಹಾಗೂ ತ್ರಿಶಾ ಸಾವನ್ನಪ್ಪಿದ್ದರು.ಐಸ್ ಕ್ರೀಮ್ ತಿಂದ ಬಳಿಕ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಪೊಲೀಸರ ವಿಚಾರಣೆ ವೇಳೆ ಪೂಜಾ ಮಕ್ಕಳಿಗೆ ವಿಷ ಉಣಿಸಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾಳೆ. ತನ್ನ ಮೂರು ಮಕ್ಕಳಿಗೆ ಊಟದಲ್ಲಿ ವಿಷ ಬೆರೆಸಿ ತಾನು ಸೇವಿಸಿದ್ದಳು.…

Read More

ಬೆಂಗಳೂರು : ಅತ್ತಿಗೆಯ ಕಿರುಕುಳಕ್ಕೆ ಬೇಸತ್ತ ಮೈದುನ ಹಬ್ಬ ಕೊಠಡಿಯಲ್ಲಿ ವೆಲ್ ಬಳಸಿ ನೀನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿಣ ಕುಂಟೆಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಾಗರಾಜು (35) ಎಂದು ಹೇಳಲಾಗುತ್ತಿದ್ದು ಇದೀಗ ಅಮೃತ ನಾಗರಾಜು ಅತ್ತಿಗೆ ಭಾಗ್ಯಮ್ಮ ವಿರುದ್ಧ ನಾಗರಾಜು ತಂದೆ-ತಾಯಿ ನೆಲಮಂಗಲ ಟೌನ್ ಪೊಲೀಸ್‌ ಠಾಣೆಗೆ ಕಿರುಕುಳದ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಹರಿಶಿಣ ಕುಂಟೆಯಲ್ಲಿ ಮನೆ ಕಟ್ಟಿಸುವವಾಗ ಮೇಸ್ತ್ರಿ ಆಗಿ ಬಂದಿದ್ದ ದಿಲೀಪ್ ಎನ್ನುವ ವ್ಯಕ್ತಿಯ ಜೊತೆ ಅತ್ತಿಗೆ ಸಲುಗೆ ಇದುದ್ದನ್ನು ಮೈದುನ ಪ್ರಶಿಸಿದ್ದಾನೆ.ಈ ವಿಷಯವಾಗಿ ಮನೆ ಬಿಟ್ಟು ಹೋಗುವಂತೆ ದಂಡ ಪಿಂಡ ಎಂದು ಭಾಗ್ಯಮ್ಮ ಹೀಯಾಳಿಸಿದ್ದಳು. ಇದರಿಂದ ಮನನೊಂದ ನಾಗರಾಜು, ವೇಲ್ ಬಳಸಿ ರೂಂನ ಪ್ಯಾನ್​ಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೆ ಕಾರಣರಾದ ಭಾಗ್ಯಮ್ಮ ಹಾಗೂ ದಿಲೀಪ್ ಮೇಲೆ ದೂರು ದಾಖಲು ಮಾಡಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು…

Read More