Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ಪ್ರೊಪೆಲ್ ಕಾರ್ಯಕ್ರಮವು ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್ ಇಲಾಖೆ, ಐಟಿ-ಬಿಟಿ- 2023-24ರ ಬಜೆಟ್ ಘೋಷಣೆಯ ಭಾಗವಾಗಿತ್ತು. ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ರೂಪಿಸಿ ರುವ ‘ಪ್ರೊಪೆಲ್ ಪ್ಲಾಟ್ಫಾರ್ಮ್’ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಿ, ನಿರ್ವಹಿಸಲು ಅರ್ಹ ಏಜೆನ್ಸಿಗಳಿಂದ ರಾಜ್ಯ ಸರ್ಕಾರ ಟೆಂಡರ್ ಆಹ್ವಾನಿಸಿದೆ. ಪ್ರೊಪೆಲ್ ಕಾರ್ಯಕ್ರಮವು ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್ ಇಲಾಖೆ, ಐಟಿ-ಬಿಟಿ- 2023-24ರ ಬಜೆಟ್ ಘೋಷಣೆಯ ಭಾಗವಾಗಿತ್ತು. ಈ ಕಾರ್ಯಕ್ರಮದ ಮೂಲಕ, ದೊಡ್ಡ ತಂತ್ರಜ್ಞಾನದ ಬಹುರಾಷ್ಟ್ರೀಯ ಸಂಸ್ಥೆಗಳು, ಜಾಗತಿಕ ಸಾಮರ್ಥ್ಯ ಕೇಂದ್ರಗಳು, ಜಾಗತಿಕ ನಾವೀನ್ಯತೆ ಮೈತ್ರಿ ಪಾಲುದಾರರು ಮತ್ತು ಇತರ ಸಂಸ್ಥೆಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು ಸ್ಟಾರ್ಟ್ ಅಪ್ ಗಳಿಗೆ ಸರ್ಕಾರ ಅವಕಾಶ ನೀಡುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಸ್ಟಾರ್ಟಪ್ಗಳು ತಮ್ಮ ಮೊದಲ ಗ್ರಾಹಕರನ್ನು ಪಡೆಯಲು ಸಹಾಯ ಮಾಡುವ ಪ್ರೊಪೆಲ್ ಅನ್ನು ಅನ್ಲೈನ್ ಪ್ಲಾಟ್ ಫಾರ್ಮ್ ಆಗಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಈ ವೇದಿಕೆಯ ಮೂಲಕ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳು ತಮ್ಮ ವಿನೂತನ ಆಲೋಚನೆಗಳನ್ನು ಜಾರಿ ಮಾಡಲು ಸಹಕಾರಿಯಾಗಲಿದೆ…
ಶಿವಮೊಗ್ಗ: ಪ್ರತಿಷ್ಠಿತ ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಹರಿಗೆಯ ಯುವಕ ಮತ್ತು ಆತನ ಸ್ನೇಹಿತರಿಗೆ 89 ಲಕ್ಷ ರೂ. ಹಣ ವಂಚಿಸಿರುವ ಘಟನೆ ನಡೆದಿದೆ. ಹರಿಗೆಯ ಯುವಕನೊಬ್ಬನಿಗೆ ಬೆಂಗಳೂರಿನಲ್ಲಿರುವ ಸ್ನೇಹಿತರೊಬ್ಬರ ಮೂಲಕ ಒರಿಸ್ಸಾ ಮೂಲದ ಸೂರ್ಯಂಶ್ ಅಲಿಯಾಸ್ ಕಾಲಿರಾತ್ ಎಂಬಾತನ ಪರಿಚಯವಾಗಿತ್ತು. ಆತ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದ ಎನ್ನಲಾಗುತ್ತಿದೆ.ರಾಕೇಶ್ ಶಿವಮೊಗ್ಗದಲ್ಲಿರುವ ತನ್ನ ಸ್ನೇಹಿತರಿಗೆ ಈ ವಿಚಾರ ತಿಳಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹರಿಗೆಯ ಯುವಕ ತನ್ನ ಹಲವು ಸ್ನೇಹಿತರ ರೆಸ್ಯೂಂಗಳನ್ನು ಸೂರ್ಯಂಶ್ಗೆ ಕಳುಹಿಸಿದ್ದ. ಆದರೆ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಕೊಡಿಸಲು ತಲಾ 1.60 ಲಕ್ಷ ರೂ. ಹಣ ನೀಡಬೇಕು. ಇದಕ್ಕೆ ಪ್ರತಿಯಾಗಿ ಪ್ರತಿಷ್ಠಿತ ಕಂಪನಿಯಿಂದ ಲ್ಯಾಪ್ಟಾಪ್ ಒದಗಿಸಲಾಗುತ್ತದೆ ಎಂದು ಸೂರ್ಯಂಶ್ ನಂಬಿಸಿದ್ದ. ಇದರಿಂದ ಹರಿಗೆಯ ಯುವಕ ವಿವಿಧ ಬ್ಯಾಂಕ್ ಖಾತೆಗಳಿಂದ ಸೂರ್ಯಂಶ್ ಸೂಚಿಸಿದ ಬ್ಯಾಂಕ್ ಖಾತೆಗೆ ಒಟ್ಟು 89 ಲಕ್ಷ ರೂ. ಹಣ ಕಳುಹಿಸಿದ್ದ ಎನ್ನಲಾಗಿದೆ. ಈತನಕ ಸೂರ್ಯಂಶ್ ಕಡೆಯಿಂದ ಉದ್ಯೋಗವು ಸಿಕ್ಕಿಲ್ಲ, ಲ್ಯಾಪ್ಟಾಪ್ ಕೂಡ…
ಬೆಂಗಳೂರು : ಹೆಲ್ಮೆಟ್ ಧರಿಸದೆ ಬರುವಾಗ ಫೋಟೋ ತೆಗೆಯಲು ಮುಂದಾದ ಕರ್ತವ್ಯ ನಿರತ ಸಂಚಾರಿ ಹೆಡ್ ಕಾನ್ಸ್ಟೇಬಲ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆರಳು ಕಚ್ಚಿ, ಹಲ್ಲೆಗೈದು ಬೆದರಿಕೆ ಹಾಕಿದ ದ್ವಿ ಚಕ್ರ ವಾಹನ ಸವಾರನನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಲೇಔಟ್ ನ ಸೈಯದ್ ಸಫಿ (28) ಬಂಧಿತ ಆರೋಪಿಯಾಗಿದ್ದು,ಆತನ ವಿರುದ್ಧ ವಿಲ್ಸನ್ ಗಾರ್ಡನ್ ಸಂಚಾರ ಠಾಣೆ ಮುಖ್ಯ ಪೇದೆ ಸಿದ್ರಾಮೇಶ್ವರ ಕೌಜಲಗಿ ನೀಡಿದ ನೀಡಿದ ದೂರಿನ ಮೇರೆಗೆ ವಿಲ್ಸನ್ ಗಾರ್ಡನ್ ನಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನ ಬಂಧಿಸಿದ್ದಾರೆ. ಏನಿದು ಘಟನೆ?: ವಿಲ್ಸನ್ ಗಾರ್ಡನ್ ಸಂಚಾರಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಳಾದ ಸಿದ್ಧರಾಮೇಶ್ವರ ಕೌಜಲಗಿ ಮತ್ತು ಲೋಕೇಶ್ ಅವರು ಸೋಮದಾರ ಡಾ.ಮರೀಗೌಡ ರಸ್ತೆಯ 10ನೇ ಕ್ರಾಸ್ ಜಂಕ್ಷನ್ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುಕಗ ಆರೋಪಿ ಸೈಯದ್ ಸಫಿ ಹೆಲ್ಮೆಟ್ ಧರಿಸದೆ ಅದೇ ಮಾರ್ಗದಲ್ಲಿ ಬಂದಿದ್ದಾನೆ. ಇದನ್ನು ನೋಡಿದ ಹೆಡ್ ಕಾನ್ಸ್ಟೇಬಲ್ ಸಿದ್ದರಾಮೇಶ್ವರ ಮೊಬೈಲಲ್ಲಿ ಫೋಟೋ ಕ್ಲಿಕ್ಕಿಸಿ FTVR ಪ್ರಕರಣ…
ಬೆಂಗಳೂರು: ನಿನ್ನೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕರ್ನಾಟಕ ವಿಧಾನ ಮಂಡಲ ಸಂಸ್ಥೆಯ ಉದ್ಘಾಟನೆ ಕಾರ್ಯಕ್ರಮಕ್ಕೆ ಕೇಟರಿಂಗ್ ಸಂಸ್ಥೆ ಪೂರೈಸಿದ್ದ ಉಪಾಹಾರದಲ್ಲಿ ಹುಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸೋಮವಾರ ಉದ್ಘಾಟನೆ ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ಪತ್ರಕರ್ತರಿಗೆ ಉಪಾಹಾರ ನೀಡಲಾಗಿದೆ. ಈ ವೇಳೆ ಪತ್ರಕರ್ತರಿಗೆ ಬಡಿಸಿದ್ದ ಸಾಂಬಾರಿನಲ್ಲಿ ಹುಳು ಪತ್ತೆಯಾಗಿದೆ. ಕೂಡಲೇ ಅವರು ಅಡುಗೆ ಸಿಬ್ಬಂದಿಯ ಗಮನಕ್ಕೆ ತಂದು ಪ್ರಶ್ನೆ ಮಾಡಿದ್ದಾರೆ. ಆದರೆ, ಸಮರ್ಪಕ ಉತ್ತರ ನೀಡದ ಸಿಬ್ಬಂದಿ,ಸಬೂಬು ಹೇಳಿದ್ದಾರೆ. ಹೀಗಾಗಿ, ಸ್ಪೀಕರ್ಯು.ಟಿ. ಖಾದರ್ ಅವರ ಗಮನಕ್ಕೆ ತರಲಾಯಿತು.ಉಪಾಹಾರ ಪೂರೈಸಿದ್ದ ಕೇಟರಿಂಗ್ ಸಂಸ್ಥೆಯನ್ನು ಸಂಪರ್ಕಿಸಿದ ಸ್ಪೀಕರ್ ಕಚೇರಿಯ ಅಧಿಕಾರಿಗಳು ಸ್ಪಷ್ಟನೆ ಕೇಳಿದ್ದಾರೆ. ನಮ್ಮಲ್ಲಿ ಶುಚಿತ್ವ ಕಾಪಾಡಿಕೊಳ್ಳಲಾಗುತ್ತಿದ್ದು, ಬಹುಶಃ ಕಾರ್ಯಕ್ರಮ ಸ್ಥಳದಲ್ಲಿ ಮರದಿಂದ ಬಿದ್ದಿರಬಹುದು ಎಂದು ಕೇಟರಿಂಗ್ನವರು ಸ್ಪಷ್ಟನೆ ನೀಡಿದ್ದಾರೆ. ಆದರೂ, ಕೂಡ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಯು.ಟಿ. ಖಾದರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಹೇಳಲಾಗುತ್ತಿದೆ. ಅಲ್ಲದೆ ಕಳೆದ…
ಬೆಂಗಳೂರು: ನಿನ್ನೆಯಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷ ಬಿಜೆಪಿಯು ಯಾವ ರೀತಿ ವಿಷಯಗಳನ್ನೆಲ್ಲ ಸಂಗ್ರಹಿಸಿ ಟೀಕೆ ಮಾಡಿ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಬೇಕೆಂದು ಕುರಿತು ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಿಜೆಪಿ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಶೇ.40ರಷ್ಟು ಕಮಿಷನ್ ಆರೋಪ ಮತ್ತು ಶಾಸಕರಿಗೆ ಅನುದಾನ ನೀಡದಿರುವ ಬಗ್ಗೆ ಅಧಿವೇಶನ ದಲ್ಲಿ ಪ್ರಸ್ತಾಪಿಸಿ ಹೋರಾಟ ನಡೆಸಲು ಪ್ರತಿಪಕ್ಷ ಬಿಜೆಪಿ ತೀರ್ಮಾನಿಸಿದೆ. ಸೋಮವಾರ ಬಿಜೆಪಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಈ ಕುರಿತು ವಿವರಣೆ ನೀಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ಸರ್ಕಾರ ನೀಡಿದ್ದ ಶಾಸಕರ ಅನುದಾನವನ್ನು ಸ್ಥಗಿತ ಮಾಡಲಾಗಿದೆ. ಹೊಸತಾಗಿ ಶಾಸಕರಿಗೆ ಅನುದಾನನೀಡುತ್ತಿಲ್ಲ. ಈ ಬಗ್ಗೆ ಸರ್ಕಾರದ ಗಮನಸೆಳೆ ಯಲು ನಿರ್ಧರಿಸಲಾಗಿದೆ ಎಂದರು. ಅಧಿವೇಶನದಲ್ಲಿ ಪ್ರತಿಯೊಬ್ಬಶಾಸಕರು ಭಾಗಿಯಾಗಿ ಚರ್ಚೆಯಲ್ಲಿ ಭಾಗಿಯಾಗ ಬೇಕು. ಸರ್ಕಾರದ ಲೋಪದೋಷಗಳನ್ನು ಜನರ ಮುಂದಿಡುವ…
ನವದೆಹಲಿ : ಕಳೆದ ವರ್ಷ ಮಳೆಬಾರದೇ ಇರುವುದರಿಂದ ರಾಜ್ಯ ತೀವ್ರ ಸಂಕಷ್ಟ ಎದುರಿಸಿದೆ ಅದರಲ್ಲೂ ರೈತರು ಬೆಳೆ ಬೆಳೆಯಕ್ಕೆ ಆಗದೆ ಅತ್ಯಂತ ಸಂಕಷ್ಟವನ್ನು ಎದುರಿಸಿದ್ದರು ಈ ಮಧ್ಯೆ ಕಳೆದ ವರ್ಷ ಕೂಡ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗಿತ್ತು. ಇದೀಗ ಮತ್ತೆ ಸಿ ಡಬ್ಲ್ಯೂ ಆರ್ ಸಿ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದು ಫೆಬ್ರವರಿ ಮಾರ್ಚ್ ನಲ್ಲಿ 2.5 TMC ನಂತೆ ಒಟ್ಟು 5 TMC ನೀರನ್ನು ತಮಿಳುನಾಡಿಗೆ ಹರಿಸುವಂತೆ ಶಿಫಾರಸು ಮಾಡಿದೆ. ಫೆಬ್ರವರಿ ಮತ್ತು ಮಾರ್ಚ ತಿಂಗಳಲ್ಲಿ ತಮಿಳುನಾಡಿಗೆ ತಲಾ 2.5 ಟಿಎಂಸಿ (ಒಟ್ಟೂ 5 ಟಿಎಂಸಿ) ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲುಆರ್ಸಿ) ಕರ್ನಾಟಕಕ್ಕೆ ಶಿಫಾರಸ್ಸು ಮಾಡಿದೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಸೋಮವಾರ ಸಮಿತಿಯ ಸಭೆ ನಡೆಯಿತು. 7.61 ಟಿಎಂಸಿ ಬಾಕಿ ಜೊತೆಗೆ, ಫೆಬ್ರವರಿ ಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕು ಎಂದು ತಮಿಳುನಾಡು ಒತ್ತಾಯಿಸಿತು.…
ರಾಮನಗರ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ಶೀಘ್ರದಲ್ಲಿ ಡಿಕೆಶಿ ಅವರು ಮತ್ತೆ ತಿಹಾರ್ ಜೈಲಿಗೆ ತೆರಳಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದರು. ಇವರ ಈ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನನ್ನು ಜೈಲಿಗೆ ಕಳುಹಿಸಲು ಷಡ್ಯಂತರ ನಡೆಯುತ್ತಿದೆ ನಾನು ಯಾವುದೇ ಸವಾಲುಗಳಿಗೆ ಸಿದ್ಧನಿದ್ದೇನೆ ಎಂದು ತಿಳಿಸಿದರು ನನ್ನನ್ನು ಜೈಲಿಗೆ ಕಳುಹಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ನಮ್ಮ ಜಿಲ್ಲೆಯವರು ಸೇರಿ ಅನೇಕರು ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ದನಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಹೇಳಿದರು. ತಮ್ಮನ್ನು ಜೈಲಿಗೆ ಕಳುಹಿಸುತ್ತೇವೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪದೇಪದೆ ಹೇಳುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ನನ್ನನ್ನು ಜೈಲಿಗೆ ಕಳುಹಿಸುವುದಾಗಿ ನನ್ನ ಜಿಲ್ಲೆಯವರೂ ಸೇರಿ ಅನೇಕರು ಮಾತನಾಡಿದ್ದಾರೆ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಸಿಬಿಐ, ಬೇರೆಯವರ ಮೂಲಕ ಏನೇನೋ ಮಾಡಿಸುತ್ತಿದ್ದಾರೆಂಬುದು ನನಗೂ ಗೊತ್ತಿದೆ. ಸಮಯ ಬಂದಾಗ ಆ ಕುರಿತು ಮಾತನಾಡುತ್ತೇನೆ ಎಂದರು. ಡಿ.ಕೆ. ಸೋದರರನ್ನು ರಾಮನಗರದಲ್ಲಿ ಕಟ್ಟಿಹಾಕಲು ಬದ್ಧವೈರಿಗಳು…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ ಮತ್ತೆ ತಿಹಾರ್ ಜೈಲಿಗೆ ಹೋಗುತ್ತಾರೆ.ಅವರಿಗೂ ಕೂಡ ಸೆಟ್ಲ್ಮೆಂಟ್ ಆಗುತ್ತದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಶಾಸಕ ಪ್ರದೀಪ್ ಈಶ್ವರ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು ಅಧಿಕಾರ ಕಳೆದುಕೊಂಡ ಕೆ ಎಸ್ ಈಶ್ವರಪ್ಪ ಚಪ್ಪಗೆ ಬಾಯಿ ಮುಚ್ಚಿಕೊಂಡು ಮನೆಯಲ್ಲಿ ಇದ್ದರೆ ಸರಿ ಹೋಗುತ್ತೆ ಎಂದು ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಕಳೆದ ಹತ್ತು ವರ್ಷಗಳಲ್ಲಿ 5233 ಐಟಿ ಹಾಗೂ ಇಡಿ ಅಧಿಕಾರಿಗಳ ದಾಳಿ ನಡೆದಿದೆ. ಅದರಲ್ಲಿ ಇಡಿ ಅಧಿಕಾರಿಗಳು ಪ್ರೂವ್ ಮಾಡಿದ್ದು ಕೇವಲ 22. ಅಲ್ಲದೆ ಇದರಲ್ಲಿ 3000ಕ್ಕೂ ಹೆಚ್ಚು ಜನರನ್ನು ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿದ್ದಾರೆ ಎಂದು ತಿಳಿಸಿದರು. ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹಿರಿಯ ರಾಜಕಾರಣಿ. ಅಧಿಕಾರ ಕಳೆದುಕೊಂಡ ಅವರು ಸ್ವಲ್ಪ ತೆಪ್ಪಗೆ ಬಾಯಿ ಮುಚ್ಚಿಕೊಂಡು ಮನೆಯಲ್ಲಿ ಇದ್ದರೆ ಸರಿ ಹೋಗುತ್ತದೆ ಎಂದು ಗೌರವಾನ್ವಿತ…
ಬೆಂಗಳೂರು : ದೆಹಲಿಯಲ್ಲಿ ನಾಳೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ದೆಹಲಿ ಚಲೋ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯದಿಂದ ತೆರಳಿದ್ದ 250 ರೈತರನ್ನು ಮಧ್ಯಪ್ರದೇಶದ ಭೂಪಾಲ್ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯವಾಗಿದೆ ಎಂದು ಬರೆದುಕೊಂಡಿದ್ದಾರೆ. ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ.ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು…
ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನ ಸೋಮವಾರ ಬೆಳಿಗ್ಗೆ 11ಕ್ಕೆ ಆರಂಭವಾಗಿದ್ದು, ರಾಜ್ಯಪಾಲರ ಭಾಷಣ ಮುಗಿಯುತ್ತಿದ್ದಂತೆ ಬಿಜೆಪಿ ಶಾಸಕರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದರೆ, ಕಾಂಗ್ರೆಸ್ ಸಚಿವ ಸಂತೋಷ್ ಜೈ ಭೀಮ್ ಎಂದು ಘೋಷಣೆ ಕೂಗಿದರು. ಇದೆ ವೇಳೆ ಬಿಜೆಪಿ ಸದಸ್ಯರು ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬೆಳಿಗ್ಗೆ 11ಕ್ಕೆ ಸರಿಯಾಗಿ ವಿಧಾನಸಭೆ ಆಗಮಿಸಿದರು. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ ಮತ್ತಿತರರು ರಾಜ್ಯಪಾಲರನ್ನು ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು. ಬಿಜೆಪಿಯ ಹಲವು ಸದಸ್ಯರು ಕೊರಳಿಗೆ ಕೇಸರಿ ಶಾಲು ಧರಿಸಿ ಸದನಕ್ಕೆ ಬಂದಿದ್ದರು. ಉಳಿದವರಿಗೆ ಸದನ ಪ್ರವೇಶಿಸುವ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಿಬ್ಬಂದಿ ಕೇಸರಿ ಶಾಲುಗಳನ್ನು ವಿತರಿಸಿದರು. ಅವುಗಳನ್ನು ಧರಿಸಿ ಬಿಜೆಪಿ…