Author: kannadanewsnow05

ಬೆಂಗಳೂರು : ಕೆಂದ ಸರ್ಕಾರ ಹಿಟ್ ಆ್ಯಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ಮಾಡಬಾರದು ಎಂಬದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಡರೇಷನ್‌ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಬುಧವಾರ ದಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಈ ಮುಷ್ಕರದಿಂದಾಗಿ ಸುಮಾರು ಎರಡು ಲಕ್ಷ ಲಾರಿಗಳಸೇರಿ ಆಫ್ ಸಂಚಾರ ಸ್ಥಬ್ದವಾಗಲಿದೆ ಎನ್ನಲಾಗುತ್ತಿದೆ. ಆದರೆ, ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಲಾರಿ ಮುಷ್ಕರ ಯಶಸ್ವಿಯಾಗುವ ಬಗ್ಗೆ ಅನುಮಾನ ಮೂಡಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತ ನಡೆಸಿ ಪರಾರಿಯಾದ ಪ್ರಕರಣದಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಹಾಗೂ 7 ಲಕ್ಷ ರು. ದಂಡ ವಿಧಿಸುವ ಕುರಿತು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ಮುಂದಾಗಿತ್ತು. ಅದನ್ನು ವಿರೋಧಿಸಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಲಾರಿ ಮಾಲೀಕರು ಮತ್ತು ಚಾಲಕರು ಮುಷ್ಕರ ನಡೆಸಿದ್ದರು. ಕೊನೆಗೆ ಕೇಂದ್ರ ಕಠಿಣ ನಿಯಮ ಜಾರಿಯಿಂದ…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾಪ್ರಾಧಿಕಾರ (ಕೆಇಎ) ಜ.23ರಂದು ನಡೆಸಲಿರುವ ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ವಸ್ತ್ರ ಸಂಹಿತೆ ನಿಯಮಾವಳಿ ಪ್ರಕಟಿಸಿದ್ದು, ಸರಳ ಉಡುಪು ಧರಿಸಿ ಬರಲು ಸೂಚಿಸಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರ ತುಪಡಿಸಿ ಇನ್ಯಾವುದೇ ಆಭರಣಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿಸಿದೆ. ಇತ್ತೀಚಿನ ನಿಗಮ ಮಂಡಳಿ ಪರೀಕ್ಷೆಗಳ ವೇಳೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವ ಮುನ್ನ ಮಂಗಳಸೂತ್ರ ಮತ್ತು ಕಾಲುಂಗುರವನ್ನು ತೆಗೆಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಇದು ಬಹುಸಂಖ್ಯಾತ ಹಿಂದೂ ಸಂಸ್ಕೃತಿಗೆ ಅಗೌರವ ತೋರಲಾಗಿದೆ ಎಂದು ಸಾರ್ವಜನಿಕರು ಹಾಗೂ ರಾಜಕೀಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆ ನಂತರ ಇದೀಗ ಪಿಎಸ್‌ಐ ಪರೀಕ್ಷೆಗೂ ಮಂಗಳ ಸೂತ್ರ ಮತ್ತು ಕಾಲುಂಗುರ ಧರಿಸಿ ಬರಲು ಅವಕಾಶ ನೀಡಲಾಗಿದೆ. ಆದರೆ, ತಪಾಸಣೆ ದೃಷ್ಟಿಯಿಂದ ಪರೀಕ್ಷಾ ಸಮಯಕ್ಕೆ ಎರಡು ಗಂಟೆ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಹಾಲ್ ಟಿಕೆಸ್ ‌ ಸೇರಿದಂತೆ ಸೂಚಿತ ದಾಖಲೆಗಳೊಂದಿಗೆ ಹಾಜರಿರಬೇಕು ಎಂದು ಸೂಚಿಸಿದೆ. ವಸ್ತ್ರಸಂಹಿತೆ ಏನು: ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ…

Read More

ಮಡಿಕೇರಿ : ಬೆಂಗಳೂರು ಮೂಲದ ಐಟಿ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿ ಮಡಿಕೇರಿಯ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೂರು ದಿನಗಳ ಹಿಂದೆ ಸಂದೇಶ ಎನ್ನುವ ವ್ಯಕ್ತಿ ಮಡಿಕೇರಿಗೆ ಆಗಮಿಸಿದ್ದ ಎನ್ನಲಾಗಿದೆ. ಬೆಂಗಳೂರಿನಲ್ಲಿ ಸಂದೇಶ ಐಟಿ ಕೆಲಸವನ್ನು ಮಾಡುತ್ತಿದ್ದ ಮಡಿಕೇರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿಗೆ ರೈತರ ಮುತ್ತಿಗೆ ಕಾನೂನು ಬಾಹಿರವಾಗಿ ರೈತನ ಮನೆ ಹರಾಜು ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರದ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘದ ರೈತರಿಂದ ಪ್ರತಿಭಟನೆ ರೈತ ದೊರೆಸ್ವಾಮಿ ಮನೆ ಹರಾಜು ಹಾಕಿರುವ ಆರೋಪ ಕೇಳಿ ಬಂದಿದೆ. ರೈತ ದೊರೆಸ್ವಾಮಿ ಬ್ಯಾಂಕ್ನಿಂದ 15 ಲಕ್ಷ ಸಾಲವನ್ನು ಪಡೆದಿದ್ದರು ಎಂದು ಹೇಳಲಾಗುತ್ತಿದ್ದು, ಬಡ್ಡಿ ಸಮೇತ 18 ಲಕ್ಷ 98 ಸಾವಿರ ರೂಪಾಯಿಯನ್ನು ದೊರೆಸ್ವಾಮಿ ತೀರಿಸಿದ್ದರು. ಆದರೂ ಕೂಡ ಮನೆ ಹರಾಜು ಹಾಕಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.ಅದರಿಂದ ವಿಜಯನಗರದ ಬ್ಯಾಂಕಿನ ಪ್ರಧಾನ ಕಚೇರಿಗೆ ರೈತ ಸಂಘಟನೆ ಮುತ್ತಿಗೆ ಹಾಕಿವೆ.

Read More

ಬೆಂಗಳೂರು : ಬಿಗ್ ಬಾಸ್ ವಿನ್ನರ್ ಶಶಿಕುಮಾರ್ ಸಿನಿಮಾ ಶೂಟಿಂಗ್ ವೇಳೆ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಗಾಯಗೊಂಡಿರುವ ಘಟನೆ ಒಂದು ತಿಂಗಳ ಹಿಂದೆ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಮೆಹಬೂಬ ಸಿನಿಮಾ ಶೂಟಿಂಗ್ ವೇಳೆ ನಡೆದ ಘಟನೆಯಾಗಿದ್ದು, ಕಟ್ಟಡದ ಮೇಲಿಂದ ಬಿಗ್ ಬಾಸ್ ವಿನ್ನರ್ ಬಿದ್ದಿರುವ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಕಳೆದ ತಿಂಗಳು ಸಿನಿಮಾ ಶೂಟಿಂಗ್ ವೇಳೆ ಶಶಿಕುಮಾರ್ ಬಿದ್ದಿದ್ದರು. ಈ ವೇಳೆ ಗಾಯಗೊಂಡ ಶಶಿಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು ಇದೀಗ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಶಶಿಕುಮಾರ್ ಅವರು ಇದೀಗ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಮಾಜಿ ಸಚಿವ ಎಚ್ ಆಂಜನೇಯ ಕಿಡಿಕಾರಿದ್ದು ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ? ಅನಂತ ಕುಮಾರ್ ಹೆಗಡೆ ಒಬ್ಬ ಹುಚ್ಚ, ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ? ಅವನ ಬಗ್ಗೆ ಮಾತಾಡಲ್ಲ. ಅವನ ಬಗ್ಗೆ ಮಾತಾಡಿ ದೊಡ್ಡವನನ್ನಾಗಿಸಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಅನಂತ ಕುಮಾ‌ರ್ ಒಬ್ಬ ಮನುಷ್ಯನಾ ?. ಅವನು ಬೆಳೆದ ಹಿನ್ನೆಲೆ ಸಂಸ್ಕೃತಿ ಅದೇ ರೀತಿ ಇರಬೇಕು. ಹೀಗಾಗಿ ಅವನು ಆ ರೀತಿ ವರ್ತನೆ ಮಾಡುತ್ತಾನೆ. ನಾವು ಆ ರೀತಿ ಅಲ್ಲ ನಾನು ಸಹ ಏಕವಚನ ಬಳಸಬಾರದು. ಆದರೆ ಅವನಿಗೆ ಯಾವ ಭಾಷೆ…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವದ ವೇಳೆ ಭಾರೀ ಅನಾಹುತವೊಂದು ತಪ್ಪಿದ್ದು, ಘಾಟಿ ಸುಬ್ರಹ್ಮಣ್ಯ ರಥೋತ್ಸವ ಸಂದರ್ಭದಲ್ಲಿ ರಥ ಎಳೆಯುವಾಗ ಚಕ್ರದ ಅಡಿಯಲ್ಲಿ ಮಹಿಳೆಯೊಬ್ಬಳು ಸಿಲುಕಿದ್ದಳು. ತಕ್ಷಣ ಪೊಲೀಸರು ಹಾಗೂ ಸಿಬ್ಬಂದಿಗಳು ಮಹಿಳೆಯನ್ನು ಚಕ್ರದಿಂದ ಎಳೆದುಕೊಂಡಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಘಟನೆ ಸಂಭಬಿಸಿದ್ದು ಘಾಟಿ ಸುಬ್ರಮಣ್ಯ ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿ ಚಕ್ರದ ಬಳಿ ಮಹಿಳೆಯೊಬ್ಬಳು ಸಿಲುಕಿದ್ದಳು. ಕೂಡಲೇ ಎಚ್ಚೆತ್ತು ಪೊಲೀಸ್ ಹಾಗೂ ಸಿಬ್ಬಂದಿ ಮಹಿಳೆಯನ್ನು ಪಕ್ಕಕ್ಕೆ ಎಳಿದುಕೊಂಡರು ಪಕ್ಕಕ್ಕೆ ಏಳದಿದ್ದರಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾಗಿದ್ದಾಳೆ. ಈ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದ್ದು, ಸರ್ಪ ದೋಷ ಪರಿಹಾರ ಸೇರಿದಂತೆ ವಿವಿಧ ರೀತಿಯ ನಾಗಾರಾಧನೆಗೆ ಇದು ಪ್ರಸಿದ್ದವಾಗಿದೆ.ಇತಿಹಾಸ ಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ಸಂಭ್ರಮದಿಂದ ಜರುಗಿದ್ದು, ಪುಷ್ಪ ಶುದ್ದ ಷಷ್ಟಿ ಹಿನ್ನಲೆ ಬ್ರಹ್ಮರಥೋತ್ಸವಕ್ಕೆ ಭಕ್ತ ಸಾಗರ ಹರಿದು ಬಂದಿತ್ತು. 12 ಗಂಟೆಗೆ…

Read More

ಚಾಮರಾಜನಗರ : ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಸಚಿವ ಕೆ. ವೆಂಕಟೇಶ್ ಅವರು, ಸಂಸದ ಅನಂತ್ ಕುಮಾರ್ ಹೆಗಡೆಗೆ ಸಂಸ್ಕಾರನೇ ಇಲ್ಲ.ಆ ಮನುಷ್ಯನಿಗೆ ಸಂಸ್ಕಾರ ಅಂದರೆ ಏನು ಅಂತಾನೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಭಟ್ಕಳದಲ್ಲೂ ಮಸೀದಿ ನಿರುನಾಮ ಮಾಡುತ್ತೇವೆ ಅಂದಿದ್ದಾರೆ.ಇದಕ್ಕೆ ಏನು ಬಂದೋಬಸ್ತ್ ಮಾಡಬೇಕು ಮಾಡುತ್ತದೆ.ನಮ್ಮ ಸರ್ಕಾರ ಏನೆಲ್ಲ ಕ್ರಮ ಕೈಗೊಳ್ಳಬೇಕು ಯಾವ ರೀತಿ ಬಂದೋಬಸ್ ಮಾಡಬೇಕು ಎಲ್ಲವನ್ನು ಮಾಡುತ್ತದೆ.ಬೇರೆ ಸಮಾಜದ ದೇಗುಲ ದ್ವಂಸ ಮಾಡಲು ಬಿಡೋಕ್ಕಾಗುತ್ತಾ? ಎಂದು ಚಾಮರಾಜನಗರದಲ್ಲಿ ಸಚಿವ ಕೆ ವೆಂಕಟೇಶ್ ಪ್ರತಿಕ್ರಿಯೆ ನೀಡಿದರು. ಇನ್ನು ಲೋಕಸಭೆ ಚುನಾವಣೆಗೆ ಮೈಸೂರು ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಅವರು ಸ್ಪರ್ಧೆ ಮಾಡುವ ವಿಚಾರವಾಗಿ ಉತ್ತರಿಸಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯತೀಂದ್ರ ಸ್ಪರ್ಧೆ ಮಾಡುವುದಿಲ್ಲ ಮೈಸೂರಿಂದ ಯತೀಂದ್ರ ಕಣಕ್ಕೆ ಇಳಿಯುವುದಿಲ್ಲ. ನಾನಂತೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಇದು ನನ್ನ ಕೊನೆ ಚುನಾವಣೆ ನನಗೂ ಕೂಡ ವಯಸ್ಸಾಗಿದೆ ಅಸೆಂಬ್ಲಿ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಚಾಮರಾಜನಗರದಲ್ಲಿ…

Read More

ಹಾಸನ : ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹಾಗೂ ಜೆಡಿಎಸ್ ಪಕ್ಷದ ನಾಯಕ ಎಚ್ಡಿ ರೇವಣ್ಣ ಕುಟುಂಬದ ಮಧ್ಯ ಸಂಘರ್ಷ ತೀವ್ರ ತಾರಕಕ್ಕೆ ಏರಿದು ಇದೀಗ ವಕೀಲ ಎಚ್ ಡಿ ರೇವಣ್ಣ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಿದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ರೇವಣ್ಣ ಅವರು ಮತಗಟ್ಟೆಯಲ್ಲಿ ನಿಂತು ಕಳ್ಳ ಮತ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಅವರು ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಮತಗಟ್ಟೆಯಲ್ಲಿ ನಿಂತು ಎಚ್ ಡಿ ರೇವಣ್ಣ ಕಳ್ಳ ಮತ ಹಾಕಿಸಿದ್ದರು.ಹೈಕೋರ್ಟ್ ನಲ್ಲಿ ರೇವಣ್ಣ ಅಪರಾಧಿ ಎಂದು ಆದೇಶ ಬಂತು.ಎಚ್ ಡಿ ರೇವಣ್ಣ ವರದಿ ಎಂದು ತೀರ್ಪು ಬಂದಿದೆ. ರೇವಣ್ಣ ರಾಜಪಾಲರಿಂದ ಪ್ರಮಾಣವಚನ ಸ್ವೀಕರಿಸಿದರು ಎಂದು ತಿಳಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 40 ರಿಂದ 50 ನಿಮಿಷಗಳ ಕಾಲ ಮತಗಟ್ಟೆಯಲ್ಲಿ ನಿಂತಿದ್ದರು. ಸಿಸಿಟಿವಿಯಲ್ಲಿ ಕಳ್ಳ ಮತ ಹಾಕಿಸಿರುವ ವಿಡಿಯೋ ಇದೆ. ಮತಗಟ್ಟೆ ಸಂಖ್ಯೆ 244ರಲ್ಲಿ ರೇವಣ್ಣ ಕಳ್ಳ ಮತ ಹಾಕಿಸಿದ್ರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಇದು ನಡೆದಿತ್ತು.…

Read More

ಉಡುಪಿ : ಗ್ರಾಮ ಪಂಚಾಯತಿ ಸದಸ್ಯನ ಮೇಲೆ 35 ಜನರಿಂದ ಡೆಡ್ಲಿ ಅಟ್ಯಾಕ್ ಆಗಿದ್ದು, ಜಟ್ಕಲ್ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗ್ಯಾಂಗ್ ಅಟ್ಯಾಕ್ ನಡೆದಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಜಡಕಲ್ ನಲ್ಲಿ ಈ ಅಟ್ಯಾಕ್ ನಡೆದಿದೆ ಎನ್ನಲಾಗುತ್ತಿದೆ. ಗ್ರಾ. ಪಂ ಸದಸ್ಯ ಚಂದ್ರಮೋಹನ್ ನಾಯಕ್ ಮೇಲೆ ಈ ಒಂದು ಹಲ್ಲೆ ನಡೆದಿದ್ದು ಬೈಕಿಗೆ ಜೀಪ್ ಟಚ್ ಆಗಿದ್ದಕ್ಕೆ ಬೈಕ್ ಸವಾರ ಬೈದಿದ್ದ ಎನ್ನಲಾಗಿದೆ.ಈ ವೇಳೆ ಗ್ರಾಮ ಪಂಚಾಯತಿ ಸದಸ್ಯ ಚಂದ್ರಮೋಹನ್ ಕ್ಷಮೆ ಕೇಳಿದ್ದ ಆದರೂ ಕೂಡ ಕ್ಷಮೆ ಕೇಳಿದರು ಕೂಡ ಮನೆ ಬಳಿ ಬಂದು ಸುಮಾರು 35 ಜನರಿಂದ ಸದಸ್ಯನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮನೆ ಬಳಿ ಬಂದಾಗ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ 35 ಜನರು ಏಕಾಏಕಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ತಕ್ಷಣ ಗಾಯಾಳನ್ನು ಕುಂದಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗದಗ : ಗದಗದಲ್ಲಿ ಟಂ ಟಂ ಚಾಲಕರು ಸಾರ್ವಜನಿಕವಾಗಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಸೈಬರ್ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಮತ್ತೊಬ್ಬ ಟಂಟಂ ಚಾಲಕ ಇದೆ ವೇಳೆ ಪರಾರಿಯಾಗಿದ್ದಾನೆ. ಸಾರ್ವಜನಿಕವಾಗಿ ಜನನಿಬಿಡ ಬಸ್ ನಿಲ್ದಾಣದ ಬಳಿ ರಸ್ತೆಯ ಮೇಲೆ ನಿಂತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಟಂ ಟಂ ಚಾಲಕರ ಮೇಲೆ ಸಿಇಎನ್ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾದ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. ಸಿಇಎನ್ ಪೊಲೀಸ್ ಠಾಣೆಯ ಎಸ್. ಎಮ್. ಶಿರಗುಪ್ಪಿ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದು, ಹುಲಕೋಟಿ ಗ್ರಾಮದ ಸಾಯಿ ನಗರ‌ ನಿವಾಸಿಗಳಾದ ಟಂ ಟಂ ಚಾಲಕರಾದ ಮಣಿಕಂಠ ತಂದೆ ಕರಿಯಪ್ಪ ಕೊಂಡಿಕೊಪ್ಪ (22), ಹರೀಶ್ ತಂದೆ ಹನಮಂತಪ್ಪ ಹರಕುಣಿ (23) ಎಂಬ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಮರಿಯಪ್ಪ ತಂದೆ ಕರಿಯಪ್ಪ ಕವಡಿಕಿ ಎಂಬ ಟಂ ಟಂ ಚಾಲಕ ಪರಾರಿಯಾಗಿದ್ದಾನೆ. ಬಂಧಿತರಿಂದ 13,440…

Read More