Author: kannadanewsnow05

ಬೆಂಗಳೂರು : ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ಚಾಮರಾಜಪೇಟೆಯ ಪಶು ಆಸ್ಪತ್ರೆಯ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ನೀಡಲಾಗಿದ್ದ ಸರ್ಕಾರಿ ಆದೇಶಕ್ಕೆ ಇದೀಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ. ಕಳೆದ ಫೆ.28 ರಂದು ರಾಜ್ಯ ಸರ್ಕಾರ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಶು ಸಂಗೋಪನೆ ಇಲಾಖೆಗೆ ಒಳಪಟ್ಟ ಪಶುಚಿಕಿತ್ಸಾಲಯಕ್ಕೆ ಸೇರಿದ 2 ಎಕರೆ ಜಾಗವನ್ನು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಗೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಚಾಮರಾಜಪೇಟೆ ನಿವಾಸಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನು ವಿಚಾರಣೆ ಮಾಡಿದ ನ್ಯಾಯಾಲಯವು ಚಾಮರಾಜಪೇಟೆ ಪಶು ಆಸ್ಪತ್ರೆಯನ್ನು ವಕ್ಫ್ ಬೋರ್ಡ್‌ಗೆ ನೀಡಲಾದ ಸರ್ಕಾರಿ ಆದೇಶಕ್ಕೆ ತಡೆಯನ್ನು ನೀಡಿದೆ. ಜೊತೆಗೆ, ಚಾಮರಾಜಪೇಟೆಯ ಪಶು ಆಸ್ಪತ್ರೆ ಸ್ಥಳಾಂತರ ಮಾಡುವುದನ್ನು ಕೂಡ ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳುಯಂತೆ ಹೈಕೊರ್ಟ್ ಸೂಚನೆ ನೀಡಿದೆ. ಇನ್ನು ಹೈಕೋರ್ಟ್‌ನಲ್ಲಿ ಆಸ್ಪತ್ರೆ ಭೂಮಿ ಹಸ್ತಾಂತರ ಮತ್ತು ಆಸ್ಪತ್ರೆ ಸ್ಥಳಾಂತದರ ಬಗ್ಗೆ ವಿಚಾರಣೆ ನಡೆಸಿದ ನಂತರ ಪಶು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹೊರಡಿಸಿದ್ದ…

Read More

ಬೆಂಗಳೂರು : ಒಂದು ಕಡೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚುತ್ತಿದ್ದು ಮತ್ತೊಂದೆಡೆ ರಾಜ್ಯದಲ್ಲಿ ಅತಿಯಾದ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇಂದು ರಾಜ್ಯದ 25 ಜಿಲ್ಲೆಗಳಲ್ಲಿ 40 ಕ್ಕೂ ಹೆಚ್ಚು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಜನತೆಗೆ ಈ ವರ್ಷದ ಮಳೆಗಾಲ ಆರಂಭಕ್ಕೂ ಮುನ್ನವೇ ನೆತ್ತರನ್ನು ಸುಡುವ ಬೇಸಿಗೆ ಆರಂಭವಾಗಿದೆ. ನಮ್ಮ ರಾಜ್ಯದ 29 ಜಿಲ್ಲೆಗಳ ಪೈಕಿ 25 ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಹಾಗೂ ಗುಡ್ಡಗಾಡು ಪ್ರದೇಶವಾದ ಕೊಡಗು ಜಿಲ್ಲೆಯಲ್ಲಿ ಮಾತ್ರ 40 ಡಿಗ್ರಿ ಸೆಲ್ಸಿಯಸ್‌ನಿಂದ ಕಡಿಮೆ ಉಷ್ಣಾಂಶವಿದೆ. ನಿನ್ನೆ ಕಲಬುರ್ಗಿ ಜಿಲ್ಲೆಯ ಕಾಳಗಿ ಹೋಬಳಿಯಲ್ಲಿ ಅತ್ಯಧಿಕ 46.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇಂದು ಕೂಡ ರಾಯಚೂರಿನಲ್ಲಿ 46 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು 46…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ್ ಅವರ ಪರವಾಗಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಯಾಚನೆ ಮಾಡಿದರು ಅಲ್ಲದೆ ಇವಂದು ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಯುವಕರಿಗೆ ಪ್ರಧಾನಿ ಮೋದಿ ಅವರು ತಿರುಪತಿ ಟೋಪಿ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಹಮ್ಮಿಕೊಂಡಂತಹ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಯುವಕರಿಗೆ ಪ್ರಧಾನಮಂತ್ರಿ ಮೋದಿ ತಿರುಪತಿ ಟೋಪಿ ಹಾಕಿದ್ದಾರೆ ಎಂದು ಸಿಎಂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು ಮೋದಿ ಸರ್ಕಾರ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ತಿಳಿಸಿದರು. ರಾಜ್ಯದ ಬಿಜೆಪಿ ಸಂಸದರು ಲೋಕಸಭೆಯಲ್ಲಿ ಬಾಯಿ ಬಿಡಲಿಲ್ಲ. ಬಿ ವೈ ರಾಘವೇಂದ್ರ ಸಹ ಲೋಕಸಭೆಯಲ್ಲಿ ರಾಜ್ಯದ ಬಗ್ಗೆ ಮಾತನಾಡಿಲ್ಲ. ತೆರಿಗೆಯಲ್ಲೂ ಕೂಡ ಕೇಂದ್ರ ಸರ್ಕಾರದಿಂದ ನಮಗೆ ಅನ್ಯಾಯವಾಗಿದೆ.ಭದ್ರಾ ಯೋಜನೆಗೆ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಕೂಡ ಬಂದಿಲ್ಲ ಎಂದರು. ಪರಿಹಾರ ಬಿಡುಗಡೆ ಮಾಡದಿದ್ದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು. ಕೇಂದ್ರ…

Read More

ಬೆಳಗಾವಿ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಿಡಿ ಕಾರಿದ್ದು, ದೇವೇಗೌಡರ ಕುಟುಂಬ ಸದಸ್ಯರು ಹಾಸನದಲ್ಲಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಿಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ. ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅಧಿಕವಾಗಿವೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಎಲ್ಲ ಸೂತ್ರದಾರರು ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ತಿದ್ದಾರೆ ಎಂದು ಕಿಡಿ ಕಾರಿದರು. ದೇವೇಗೌಡರ ಮಗ, ಮೊಮ್ಮಗನಿಂದ ಒಂದಲ್ಲ, ಎರಡು ಸಾವಿರ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಒಂದು ಕಡೆ ಪ್ರಧಾನಿ ಮೋದಿ ನಾರಿಶಕ್ತಿ, ಬೇಟಿ…

Read More

ದಾವಣಗೆರೆ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಇಡೀ ದೇಶದಲ್ಲಿ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೊಬ್ಬರ ವಿಡಿಯೋ ಕೂಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದಕ್ಕೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದು ಸಿಎಂ ಗೆ ಗಂಡಸ್ತನ ಇದ್ದರೆ ರಾಮನಗರ ಎಂಎಲ್ಸಿ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಎಂಎಲ್ಎ ಅವರಿಂದಾಗಿ ಇಷ್ಟೆಲ್ಲಾ ಆದರೂ ಯಾಕೆ ಕ್ರಮ ಕೈಗೊಂಡಿಲ್ಲ? ಸಿದ್ದರಾಮಯ್ಯನಿಗೆ ಗಂಡಸ್ಥನ ಇದ್ದರೆ, ಮೊದಲು ಆಕ್ಷನ್ ತೆಗೆದುಕೊಳ್ಳಲಿ. ಇಷ್ಟೆಲ್ಲಾ ಆದರೂ ಆಕ್ಷನ್ ತಗೊಳ್ಳೋದಿಲ್ಲ, ಯಾಕ್ ಹೇಳ್ರೀ? ಅವ್ರು ಮುಸ್ಲಿಮರಲ್ವಾ ಅದಕ್ಕೆ ಎಂದರು. ಪ್ರಕರಣ ತನಿಖೆ ನಡೆಸುವಂತೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೂ, ಕಾಂಗ್ರೆಸ್ ಸರ್ಕಾರ ಮಾತ್ರ ತನಿಖೆಗೆ ವಿಳಂಬ ಮಾಡುತ್ತಿದೆ. ಈ ಬಗ್ಗೆ ಜನರಿಗೆ ಸಿದ್ದರಾಮಯ್ಯ ಸರ್ಕಾರ ಉತ್ತರ ಕೊಡಬೇಕು. ಯಾರ ಜೊತೆಗೆ ನೀವು…

Read More

ಬೆಳಗಾವಿ : ಮೋದಿ ಸತ್ತರೆ ಮುಂದೆ ಯಾರು ಪ್ರಧಾನಿ ಆಗೋದೇ ಇಲ್ವಾ? ಎಂದು ಕಾಂಗ್ರೆಸ್ ಶಾಸಕ ರಾಜುಕಾಗೆ ಹೇಳಿಕೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಕಾಂಗ್ರೆಸ್ಸಿಗರು,ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಕಾಂಗ್ರೆಸ್ ಪಕ್ಷದ ಹೀನ ಸಂಸ್ಕೃತಿಯ ದ್ಯೋತಕವಾಗಿದೆ ಎಂದು ಆಕ್ರೋಶ ಹೊರಹಾಕಿದರು. ಮೋದಿಯವರ ಸಾವು ಕಾಂಗ್ರೆಸ್ ಏಕೆ ಬಯಸುತ್ತದೆ? ಆರ್ಟಿಕಲ್ 370 ರದ್ದುಗೊಳಿಸಿ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ? ಐದು ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ? ಅಥವಾ ದೇಶವನ್ನು ಮುಖ್ಯ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ನಿಯಂತ್ರಿಸಿದಕ್ಕ? ಎಂದು ಪ್ರಶ್ನಿಸಿದರು.

Read More

ಬೆಂಗಳೂರು : ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಿಗಳಿಗೆ ಸಹಾಯ ಆರೋಪದ ಹಿನ್ನೆಲೆಯಲ್ಲಿ ಡಿ ವೈ ಎಸ್ ಪಿ ಶ್ರೀಧರ್ ಕೆಗೆ ಇದೀಗ ಹೈಕೋರ್ಟ್ ರಿಲೀಫ್ ನೀಡಿದ್ದು, ಘೋಷಿತ ಆರೋಪಿ ಆದೇಶವನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸದೆ ತಲೆ ಮರೆಸಿಕೊಂಡ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಲಾಗಿತ್ತು. ವಾರೆಂಟ ಪ್ರಶ್ನೆಸಿ ಶ್ರೀಧರ್ ಕೆ ಪೂಜಾರ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಆರೋಪಿ ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಭರವಸೆ ನೀಡಿದ್ದಾರೆ. ಮೇ 8 ರಂದು ಬೆಳಿಗ್ಗೆ 9:00ಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಬೆಳಿಗ್ಗೆ 9:00 ರಿಂದ ಸಂಜೆ ಆರರವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತರ 2,00,000 ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸರ ತನಿಖೆಗೆ ಆರೋಪಿ ಶ್ರೀಧರ ಕೆ ಪೂಜಾರ್ ಸಹಕರಿಸಬೇಕು.ಜಾಮೀನು ಅರ್ಜಿ ಸಲ್ಲಿಸಿದರೆ ಪೊಲೀಸರು ಆಕ್ಷೇಪಿಸಬಾರದು ಹೈಕೋರ್ಟ್ ಪೀಠ ಆದೇಶಿಸಿದೆ.

Read More

ಹಾಸನ : ಅಶ್ಲೀಲ ವಿಡಿಯೋ ಪ್ರಕಾಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣರನ್ನು ದೈಹಿಕ ಹಗು ಮಾನಸಿಕವಾಗಿ ವೀಕ್ ಮಾಡಬೇಕೆಂದು ಷಡ್ಯಂತರ ಮಾಡುತ್ತಿದ್ದಾರೆ ಎಂದು ಎಚ್ ಡಿ ರೇವಣ್ಣರ ಇನ್ನೊಬ್ಬ ಪುತ್ರ ಶಿವರಾಜ್ ರೇವಣ್ಣ ಆರೋಪಿಸಿದರು. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಏನು ಬೇಕಾದರೂ ಮಾಡುತ್ತಾರೆ. ಎಚ್ ಡಿ ರೇವಣ್ಣ ವಿರುದ್ಧ 1000 ಕೆಎಸ್ ಬೇಕಾದರೂ ದಾಖಲಾಗಲಿ ಏನು ಸಾಬೀತಾಗಬೇಕು ಅದು ಸಾಬೀತಾಗಲಿದೆ ಎಂದು ಅವರು ತಿಳಿಸಿದರು. ಎಚ್ ಡಿ ರೇವಣ್ಣ ಏನೆಂದು ನಮ್ಮ ಜಿಲ್ಲೆಯ ಜನರಿಗೆ ಗೊತ್ತಿದೆ. ಪ್ರಜ್ವಲ್ ವಿದೇಶದಿಂದ ಬರುವುದರ ಕುರಿತು ನನಗೆ ಯಾವುದೇ ರೀತಿಯಾದಂತಹ ಮಾಹಿತಿ ಇಲ್ಲ ಎಚ್ ಡಿ ರೇವಣ್ಣರನ್ನು ವೀಕ್ ಮಾಡಬೇಕೆಂದು ಷಡ್ಯಂತ್ರ ಮಾಡುತ್ತಿದ್ದಾರೆ.ಹಾಸನ ಜಿಲ್ಲಾ ರಾಜಕಾರಣದಲ್ಲಿ ಎಚ್ ಡಿ ರೇವಣ್ಣಗೆ ಪ್ರತಿ ಸ್ಪರ್ಧಿ ಇಲ್ಲ ಎಂದು ಸೂರಜ್ ರೇವಣ್ಣ ತಿಳಿಸಿದರು. ಸಂಸದ ಪ್ರಜ್ವಲ್ ಯಾವಾಗ ಬರುತ್ತಾರೋ ನನಗೆ ಗೊತ್ತಿಲ್ಲ. ಕಾರ್ಯಕರ್ತರು ಗೊಂದಲದಲ್ಲಿ ಇಲ್ಲ.…

Read More

ರಾಯಚೂರು : ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಆಗಿರುವ ವಿನಯ್ ಕುಮಾರಸ್ವಾಮಿ ಅವರು ಎಚ್ ಡಿ ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂದು ಗಂಭೀರವಾದಂತಹ ಆರೋಪ ಮಾಡಿದರು. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಮಾರ್ ಸೊರಕೆ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂದು ರಾಯಚೂರಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಆರೋಪ ಮಾಡಿದರು. ಹಾಸನ, ಮಂಡ್ಯ ಹಾಗೂ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಕಷ್ಟವಾಗಿದೆ. ಅಲ್ಲದೆ ದೇವೇಗೌಡರ ಅಳಿಯ ಡಾ. ಮಂಜುನಾಥ್ ಕೂಡ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ಮುಕ್ತವಾಗುತ್ತದೆ. ಆಗ ಕುಮಾರಸ್ವಾಮಿ ಜೆಡಿಎಸ್ ಗೆ ಕೊನೆ ಮೊಳೆ ಹೊಡಿತಾರೆ. ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುವ ಲಕ್ಷಣ ಕಾಣುತ್ತಿದೆ ಎಂದು ವಿನಯ್ ಕುಮಾರ್ ಸೊರಕೆ ತಿಳಿಸಿದರು.

Read More

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರ ಕುಟುಂಬ 420 ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್ ದೇವೇಗೌಡರ ಆಸ್ತಿ ಈಗ ಪೆನ್ ಡ್ರೈವ್ ಆಗಿದೆ ಇನ್ನು ಮುಂದೆ ತೆನೆ ಹೊತ್ತ ಮಹಿಳೆ ಪೆನ್ ಡ್ರೈ ಬರಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಮ್ಮನ್ನು 420 ಎಂದು ಕರೆದಿದ್ದಾರೆ.ನಾನು ಅವರ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್​ಡ್ರೈವ್​ ಎಂದು ವ್ಯಂಗ್ಯವಾಡಿದರು. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬದ ಆಸ್ತಿ ಪೆನ್​​ಡ್ರೈವ್ ಆಗಿದೆ. ಇನ್ನು ತೆನೆ ಹೊತ್ತ ಮಹಿಳೆ ಪೆನ್​ಡ್ರೈವ್ ಹೊರಬೇಕಾಗುತ್ತದೆ. ಇದು ಪೆನ್​​ಡ್ರೈವ್ ಕುಟುಂಬ.ಪೆನ್​ಡ್ರೈವ್​​ ಬಿಡುಗಡೆ ಮಾಡಿದ್ದು ಅವರದೇ ಮೈತ್ರಿ ಪಾರ್ಟರ್ನರ್​. ಅವರ ಬಗ್ಗೆ ಮಾತನಾಡುವುದಕ್ಕೆ ಕುಮಾರಸ್ವಾಮಿಗೆ ಧೈರ್ಯ ಇಲ್ಲ. ಹಾಗಾಗಿ…

Read More