Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಒಂದು ನಡೆದಿದ್ದು ಬೈಕ್ ಸ್ಕಿಡ್ ಆಗಿ ಬಿದ್ದಂತಹ ಯುವಕನ ಮೇಲೆ ಕಾರೊಂದು ಬಂದು ಯುವಕನ ಮೇಲೆ ಹರಿದಿದೆ. ಕೂಡಲೇ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ತಿಗಳರಪಾಳ್ಯದ ಮುಖ್ಯರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಹೌದು ಬೈಕ್ ಸ್ಕಿಡ್ ಆಗಿ ಬಿದ್ದ ಯುವಕನ ಮೇಲೆ ಕಾರು ಹರಿದಪರಿಣಾಮ ಶಶಿಕುಮಾರ್ (20) ಎನ್ನುವ ಯುವಕ ಸ್ಥಳದಲ್ಲಿ ಸಾವನಪ್ಪಿದ್ದಾನೆ. ತಿಗಳರಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ರಾತ್ರಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಶಶಿಕುಮಾರ್, ಈ ವೇಳೆ ಬೈಕ್ ಸ್ಕಿಡ್ ಆಗಿದೆ.ಕೂಡಲೇ ಕಾರೊಂದು ಆತನ ಮೇಲೆ ಹರಿದಿದೆ. ಇದು ಪೂರ್ವ ನಿಯೋಜಿತ ಕೊಲೆ ಆಗಿರಬಹುದೆ ಎಂಬ ಅನುಮಾನ ಮೂಡುತ್ತಿದೆ.
ಮೈಸೂರು : ಎಲೆಕ್ಟ್ರಿಕ್ ಕ್ಲಿಯರೆನ್ಸ್ ಗಾಗಿ ಮರಗಳನ್ನು ಕತ್ತರಿಸಿದ ಮೆಸ್ಕಾಂ ನಡೆಗೆ ಈಶ್ವರ ವನ ಟ್ರಸ್ಟ್ ಆಕ್ರೋಶಗೊಂಡಿದ್ದು, ಈ ಕುರಿತಂತೆ ಅರಣ್ಯ ಇಲಾಖೆಗೆ ಮೆಸ್ಕಾಂ ವಿರುದ್ಧ ಈಶ್ವರ ವನ ಟ್ರಸ್ಟ್ ದೂರು ನೀಡಿದೆ. ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಶ್ವರ ವನ ಟ್ರಸ್ಟ್ ದೂರು ನೀಡಿದೆ. ಎರಡು ಎಕರೆ ಪ್ರದೇಶದಲ್ಲಿ ಈಶ್ವರವನ ಟ್ರಸ್ಟ್ ಮರಗಳನ್ನು ಬೆಳೆಸಿತ್ತು. ಅಳಿವಿನಂಚಿನಲ್ಲಿ ಇರುವಂತಹ ಗಿಡಗಳನ್ನು ನೆಟ್ಟು ಟ್ರಸ್ಟ್ ಅವುಗಳನ್ನು ಪೋಷಣೆ ಮಾಡಿತ್ತು. ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ಈಶ್ವರನ ಟ್ರಸ್ಟ್ ಬೆಳೆಸಿತ್ತು. ಪ್ರಾಣಿ ಪಕ್ಷಿಗಳಿಗೆ ಆಹಾರವಾಗಿರುವ ಹಣ್ಣಿನ ಗಿಡಗಳನ್ನು ಇದೀಗ ನಾಶ ಮಾಡಲಾಗಿದೆ. ಎಲೆಕ್ಟ್ರಿಕ್ ಲೈನ್ ಕ್ಲಿಯರೆನ್ಸ್ ಹೆಸರಿನಲ್ಲಿ ಮರಗಳ ಮಾರಣಹೋಮ ನಡೆದಿದೆ. ಮೆಸ್ಕಾಂ ಸಿಬ್ಬಂದಿ ಅಕ್ರಮವಾಗಿ ಪ್ರವೇಶಿಸಿ ಮರಗಳನ್ನು ಕಡಿದಿದ್ದಾರೆ. ಇದೀಗ ಮೆಸ್ಕಾಂ ಸಿಬ್ಬಂದಿ ವಿರುದ್ಧ ಪರಿಸರ ಪ್ರಿಯರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಮೆಸ್ಕಾಂ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದೆ.
ಹಾವೇರಿ : ಇಂದು ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆ ಇಂದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಲ್ಲಿ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ ಆದರೆ ಶಿಗ್ಗಾವಿ ಕ್ಷೇತ್ರದ ದಂಡಿನಪೇಟೆಯ ಜನರು ಮಾತ್ರ ಮತದಾನದಿಂದ ದೂರ ಉಳಿದಿದ್ದಾರೆ. ಹೌದು ಶಿಗ್ಗಾವಿಯ ದಂಡಿನಪೇಟೆಯಲ್ಲಿ ಚುನಾವಣಾ ಬಹಿಷ್ಕಾರ ಮಾಡಲಾಗಿದೆ. ಕಾರಣ ಏನೆಂದರೆ ಇಲ್ಲಿನ ಸುಮಾರು 45 ಮನೆಗಳಿಗೆ ಹಕ್ಕುಪತ್ರ ನೀಡದಿದ್ದಕ್ಕೆ ಜನರು ರೊಚ್ಚಿಗೆ ಎದ್ದಿದ್ದಾರೆ. ಉಳುವವನೇ ಭೂ ಒಡೆಯ ಕಾಯ್ದೆಯ ಅಡಿ ಜಮೀನು ಹಂಚಿಕೆ ಮಾಡಬೇಕಾಗಿತ್ತು.ಬೇರೆಯವರ ಹೆಸರಿನಲ್ಲಿ ದಲಿತರ ಜಮೀನು ಆರ್ ಟಿ ಸಿ ಮಾಡಲಾಗಿತ್ತು.6 ವರ್ಷಗಳ ಹಿಂದೆ ಇದ್ದಂತಹ 4 ಎಕರೆ ಜಮೀನು ಇದೀಗ ವಕ್ಫ್ ಹೆಸರಿಗೆ ಬದಲಾಗಿದೆ ಈ ಜಾಗದಲ್ಲಿ 60 ವರ್ಷಗಳಿಂದ ಜನರು ವಾಸ ಮಾಡುತ್ತಿದ್ದಾರೆ. ಇದೀಗ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಮನೆಗಳ ಮುಂದೆ ಬಹಿಷ್ಕಾರದ ಪೋಸ್ಟರ್ ಹಾಕಿ ಜನಪ್ರತಿನಿಧಿಗಳ ವಿರುದ್ಧ ಗರಂ ಆಗಿದ್ದಾರೆ.ಇದೆ ವೇಳೆ…
ಹುಬ್ಬಳ್ಳಿ : ಹುಬ್ಬಳ್ಳಿಯ ಕಾಲೇಜು ಕ್ವಾರ್ಟರ್ಸ್ ಒಂದರಲ್ಲಿ ಪ್ರಾಧ್ಯಾಪಕರು ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ ಪ್ರಾಧ್ಯಾಪಕ ಪ್ರವೀಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಪ್ರವೀಣ್ ಕುಮಾರ್ ಅವರು ಮೂಲತಃ ದಾವಣಗೆರೆ ಜಿಲ್ಲೆಯವರು ಎಂದು ತಿಳಿದುಬಂದಿದೆ. ಪ್ರವೀಣ್ ಕುಮಾರ್ ಕಾಲೇಜಿನ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ಕು ವರ್ಷದಿಂದ ಕೆಮೆಸ್ಟ್ರಿ ಪ್ರಾಧ್ಯಾಪಕರಾಗಿ ಪ್ರವೀಣ್ ಕುಮಾರ್ ಕೆಲಸ ಮಾಡುತ್ತಿದ್ದರು. ಕಳೆದ 10 ದಿನಗಳ ಹಿಂದೆ ಅಷ್ಟೇ ಪ್ರವೀಣ್ ಕುಮಾರ್ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಹುಬ್ಬಳ್ಳಿಯ ವಿದ್ಯಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ನಾಳೆ ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ನಡೆಯಲಿದೆ. ಹಾಗಾಗಿ ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ನಾಳೆ ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಲಿದೆ ಇದರ ಮಧ್ಯ ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ವಿರುದ್ಧ ಬಿಜೆಪಿಯು ಮುಖ್ಯ ಚುನಾವಣಾ ಆಯುಕ್ತರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದೆ. ಹೌದು ಬಿಜೆಪಿ ಚುನಾವಣಾ ಏಜೆಂಟ್ ಆಗಿರುವ ಎಸ್ ಕೆ ಅಕ್ಕಿಯಿಂದ ದೂರು ಸಲ್ಲಿಕೆಯಾಗಿದೆ. ನನ್ನ ವಿರುದ್ಧ ಯಾವುದೇ ಕೇಸ್ ಗಳು ಇಲ್ಲ ಎಂದು ಯಾಸೀರ್ ಪಠಾಣ್ ಹೇಳಿದ್ದರು. ಪಠಾಣ್ ಆಫೀಡಿವೇಟ್ ನಲ್ಲಿ ಕೇಸ್ ಗಳೇ ಇಲ್ಲ ಎಂದು ಘೋಷಿಸಿಕೊಂಡಿದ್ದಾರೆ. ತಮ್ಮ ವಿರುದ್ಧ ಯಾವುದೇ ಕೇಸುಗಳು ಇಲ್ಲ ಎಂದು ಪಠಾಣ್ ಘೋಷಿಸಿದ್ದಾರೆ. 2023ರ ಚುನಾವಣೆಯ ವೇಳೆ ಪಠಾಣ್ ವಿರುದ್ಧ ಹಲವು ಕೇಸ್ ಗಳಿದ್ದವು. ಆದರೆ ಈಗ ಸಲ್ಲಿಸಿದ ಅಫಿಡೆವಿಟ್ ನಲ್ಲಿ ಕೇಸ್ ಗಳು ಇಲ್ಲ ಎಂದು ಉಲ್ಲೇಖಿಸಿದ್ದಾರೆ. ಈ ಬಗ್ಗೆ ವಿಸ್ತೃತ ತನಿಖೆಯಾಗಲಿ ಎಂದು ಚುನಾವಣಾ ಆಯುಕ್ತರಿಗೆ…
ಬೆಂಗಳೂರು : ದಂಪತಿಗಳ ನಡುವೆ ಮನಸ್ತಾಪ ಉಂಟಾಗಿ ಅಕಸ್ಮಾತ್ ಗಂಡ ಹೆಂಡತಿ ಏನಾದರೂ, ವಿಚ್ಛೇದನ ಪಡೆದುಕೊಂಡರೆ ಅವರ ಹೆಣ್ಣು ಮಕ್ಕಳ ಶಿಕ್ಷಣ, ಆರೈಕೆ ಸಂಪೂರ್ಣವಾಗಿ ಹಾಗೂ ಕಾನೂನು ಬದ್ಧವಾಗಿ ತಂದೆಯ ಜವಾಬ್ದಾರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು. ಬಿ.ಸಿ ಹನುಮಂತರಾಜು ಎನ್ನುವವರು ಜೀವನಾಂಶ ಕೋರಿ ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.ಅರ್ಜಿದಾರರು ಲಾರಿ ಮತ್ತು ಕ್ರಷರ್ ಉದ್ಯಮ ನಡೆಸುತ್ತಿದ್ದು, ಮಾಸಿಕ ಒಂದು ಲಕ್ಷ ಹಣ ಸಂಪಾದನೆ ಮಾಡುತ್ತಾರೆ. ಮಾತ್ರವಲ್ಲದೆ ಅವರು ಒಂದು ಎಕರೆ ಅಡಿಕೆ ತೋಟ ಹೊಂದಿದ್ದು ಅದರಿಂದ ಮಾಸಿಕ 8 ಸಾವಿರ ರೂ. ಗಳಿಕೆ ಇದೆ. ಹೀಗಿರುವಾಗ ವಿಚಾರಣಾ ನ್ಯಾಯಾಲಯವು ಇಬ್ಬರು ಪುತ್ರಿಯರಿಗೆ ಮಾಸಿಕ ತಲಾ 6 ಸಾವಿರ ರೂ. ಪಾವತಿಸುವಂತೆ ಆದೇಶಿಸಿರುವುದಲ್ಲಿ ಯಾವುದೇ ದೋಷವಿಲ್ಲ. ಜೊತೆಗೆ ಹೆಣ್ಣು ಮಗುವಿನ ಆರೈಕೆ ತಂದೆಯಾದವನ ಕಾನೂನುಬದ್ಧ ಜವಾಬ್ದಾರಿ ಹಾಗೂ ಪತ್ನಿಯಿಂದ…
ಚಿಕ್ಕಮಗಳೂರು : ಚಿಕ್ಕ ಮಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು, ಸರ್ಕಾರಿ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಸಿನ ಮುಂಭಾಗದ ಚಕ್ರಕ್ಕೆ ಸಿಲುಕಿ ವೃದ್ಧೆ ಒಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಕೆಎಸ್ಆರ್ಟಿಸಿ ಬಸ್ ನ ಮುಂಭಾಗದ ಚಕ್ರಕ್ಕೆ ಸಿಲುಕಿ ವೃದ್ಧೆ ಸಾವನ್ನಪ್ಪಿದ್ದಾರೆ.ಚಿಕ್ಕಮಗಳೂರಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಈ ಒಂದು ದುರಂತ ಸಂಭವಿಸಿದೆ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದ ಪುಟ್ಟಮ್ಮ (80) ಎನ್ನುವ ವೃದ್ದೆ ಸಾವನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆ ಪುಟ್ಟಮ್ಮರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದರೆ. ಚಿಕಿತ್ಸೆ ಪಡೆಯಲು ಪುಟ್ಟಮ್ಮ ಚಿಕ್ಕಮಗಳೂರಿನ ಆಸ್ಪತ್ರೆಗೆ ಬಂದಿದ್ದರು. ವಾಪಾಸ್ ಗ್ರಾಮಕ್ಕೆ ತೆರಳಲು ಸರ್ಕಾರಿ ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಈ ಒಂದು ದುರಂತ ಸಂಭವಿಸಿದೆ.ಘಟನೆ ಕುರಿತಂತೆ ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಹಳಿಯಾಳ ಸಕ್ಕರೆ ಕಾರ್ಖಾನೆಯಿಂದ ಕಬ್ಬು ದರ ನಗದಿ ವಿಚಾರವಾಗಿ ಆರ್ ವಿ ದೇಶಪಾಂಡೆ ರೈತ ಮುಖಂಡರ ಮಧ್ಯೆ ಜಟಾಪಟಿ ಮುಂದುವರೆದಿದೆ. ಸಕ್ಕರೆ ಕಾರ್ಖಾನೆ ಅಬ್ಬರ ಆರ್ ವಿ ದೇಶಪಾಂಡೆ ಬ್ಯಾಟಿಂಗ್ ಮಾಡಿದ್ದರು. ಅಲ್ಲದೇ ಹೋರಾಟಗಾರರು ಮೊದಲು ತಮ್ಮ ಮುಖ ನೋಡಿಕೊಳ್ಳಲಿ ಅಂತ ಹೇಳಿಕೆಯನ್ನು ನೀಡಿದ್ದರು. ಇದೀಗ ರೈತ ಮುಖಂಡರು ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುವುದಕ್ಕೆ ನಾವು ಹೋರಾಡುತ್ತಿದ್ದೇವೆ ಎಂದು ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಶಂಕರ್ ತಿಳಿಸಿದರು. ಇದೆ ವೇಳೆ ಹಿರಿಯ ರೈತ ಮುಖಂಡ ನಾಗೇಂದ್ರ ಜಿಯೋಜಿ ಮಾತನಾಡಿ ಒಳ್ಳೆಯ ದರ ಸಿಗಲು ಹೋರಾಟ ಮಾಡುವುದು ನಮ್ಮ ಹಕ್ಕಾಗಿದೆ ಎಂದರು. ರೈತರು ಕಾರ್ಖಾನೆಯವರ ಹೋರಾಟದಲ್ಲಿ ನೀವೇಕೆ ಮಧ್ಯ ಬರುತ್ತಿರಿ? ಕಾರ್ಖಾನೆ ನನಗೆ ಸಂಬಂಧ ಇಲ್ಲ ಎನ್ನುವ ನೀವು ಮಾತನಾಡುವುದೇಕೆ? ನೀವು ಒಬ್ಬ ಶಾಸಕರಾಗಿ ರೈತರ ಪರವಾಗಿ ಮಾತನಾಡಬೇಕಿತ್ತು. ಟೀಕೆ ಮುಂದುವರೆದರೆ ಉಗ್ರ ಹೋರಾಟ…
ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಾಳೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶವಿದೆ. ಹಾಗಾಗಿ ಇವಂದು ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯು, ರಾಜ್ಯ ನಾಯಕರಿಗೂ ಇದೊಂದು ಪ್ರತಿಷ್ಠೆಯ ಚುನಾವಣೆಯಾಗಿದ್ದು, ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಗೆಲ್ಲಲು ಮೂರು ರಾಜಕೀಯ ಪಕ್ಷಗಳು ಹರಸಾಹಸ ಪಡುತ್ತಿವೆ. ಈಗಾಗಲೇ ಎಲ್ಲಾ ಪಕ್ಷಗಳ ನಾಯಕರು ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮೂರೂ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸ್ಪರ್ಧಿಸುತ್ತಿದ್ದಾರೆ. ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಕೆಶಿಗೆ ಪ್ರತಿಷ್ಠೆಯ…
ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾರ್ಪೊರೇಷನ್ ಬಳಿ ಈ ಒಂದು ಘಟನೆ ನಡೆದಿದೆ.ಟೂಲ್ಸ್ ನಿಂದ ಬಸ್ಸಿನ ಗಾಜು ಪುಡಿಪುಡಿ ಮಾಡಿ ಚಾಲಕನನ್ನು ಕೆಳಗಿಳಿಸಿ ಹಲ್ಲೆ ನಡೆಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿ ಮುಜಾಹಿದ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮುಜಾಹಿದ್ ಬೈಕ್ನಲ್ಲಿ ಹೋಗುತ್ತಿದ್ದ. ಈ ವೇಳೆ ಬಿಎಂಟಿಸಿ ಬಸ್ ಹಾಗೂ ಡಿವೈಡರ್ ಮಧ್ಯೆ ಯುವಕ ದ್ವಿಚಕ್ರ ವಾಹನವನ್ನು ನುಗ್ಗಿಸಿದ್ದಾನೆ.ಬಳಿಕ ಸೈಡ್ ಕೊಡುವಂತೆ ಬಿಎಂಟಿಸಿ ಬಸ್ ಚಾಲಕ ರಾಜೇಶ್ ಗೆ ಯುವಕ ಆವಾಜ್ ಹಾಕಿದ್ದಾನೆ. ಕಾರ್ಪೊರೇಷನ್ ಸಿಗ್ನಲ್ ನಲ್ಲಿ ಬಿಎಂಟಿಸಿ ಬಸ್ ನಿಲ್ಲಿಸುತ್ತಿದ್ದಂತೆ ಹಲ್ಲೆ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್ ನಲ್ಲಿದ್ದ ಟೂಲ್ಸ್ ನಿಂದ ಚಾಲಕನ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ.ಕೂಡಲೇ ಆರೋಪಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ್ದಾರೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.…












