Subscribe to Updates
Get the latest creative news from FooBar about art, design and business.
Author: kannadanewsnow05
ಮೈಸುರು : ಇದೆ 22ರಂದು ಅಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ಆ ಯೋಜನೆ ಮಾಡಲಾಗಿದ್ದು, ಈ ಒಂದು ಶ್ರೀ ರಾಮನ ಗರ್ಭಗುಡಿಯಲ್ಲಿ ರಾಜ್ಯದ ಮೈಸೂರು ಜಿಲ್ಲೆಯ ಹೆಗ್ಗಡ ದೇವನಕೋಟೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಯಲ್ಲಿ ಮೂಡಿಬಂದ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗುವುದು ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಈ ವಿಷಯವಾಗಿ ಮೈಸೂರಿನಲ್ಲಿ ಅವರ ಪತ್ನಿ ವಿಜೇತ ಅವರು ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ರಾಮನ ಮೂರ್ತಿ ಕೆತ್ತಿದ ಅರುಣ್ ಯೋಗಿರಾಜ್ ಪತ್ನಿ ವಿಜೇತ ಹೇಳಿಕೆ ನೀಡಿದ್ದು, ನನ್ನ ಪತಿ ಕೆತ್ತಿದ ಮೂರ್ತಿಯೇ ಆಯ್ಕೆಯಾಗುತ್ತೆ ಅಂತ ಅನ್ನಿಸಿತ್ತು. ನಮಗೆ ಇದು ಹೆಮ್ಮೆ ವಿಚಾರವಾಗಿದೆ. ರಾಮಲಲ್ಲ ಮೂರ್ತಿ ಬಹಳ ಸುಂದರವಾಗಿ ಮೂಡಿ ಬಂದಿದೆ. ಕೆತ್ತನೆ ಮಾಡುವ ಸಂದರ್ಭದಲ್ಲಿ ಸಾಕಷ್ಟು ರೀತಿಯಲ್ಲಿ ಪತಿ ಅಧ್ಯಯನ ಮಾಡಿದ್ದರು ಎಂದು ಅವರು ತಿಳಿಸಿದರು. ರಾಮನ ಮೂರ್ತಿ ಕೆತ್ತನೆ ಬಹಳ ಕಷ್ಟದ ಕೆಲಸವಾಗಿತ್ತು. ಕಾಲ್ಪನಿಕವಾಗಿದ್ದರಿಂದ ಹೇಗೆ ಮೂಡಿ ಬರುತ್ತೆ ಅಂತ ಗೊತ್ತಿರಲಿಲ್ಲ. ಮೂರ್ತಿ ಕೆತ್ತನೆ…
ಚಿಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ ಎಂದು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧ ಏಕವಚನ ಪದ ಬಳಕೆಗೆ ಅಸಮಾಧಾನ ಹಿರಿಯರಿಗೆ ಮತ್ತು ಆಸ್ಥಾನಕ್ಕೆ ಗೌರವ ಕೊಡಬೇಕು.ಅನಂತ್ ಕುಮಾರ್ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ ಎಂದು ಚಿಕ್ಕಮಗಳೂರಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಏಕವಚನದಲ್ಲಿ ಮಾತನಾಡಿರುವುದನ್ನು ನಾನು ಸಮರ್ಥಿಸುವುದಿಲ್ಲ ದೇಗುಲ ಗಂಸ ಮಾಡಿ ಮಸೀದಿ ನಿರ್ಮಿಸಿದ್ದು ನಿಜ ಎಂದು ಅವರು ಹೇಳಿದರು. ಲೋಕಸಭಾ ಟಿಕೆಟ್ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್, ಟಿಕೆಟ್ ಕುರಿತಂತೆ ಪಕ್ಷ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ. ಯಾರೇ ಅಭ್ಯರ್ಥಿಯಾದ ನಾವು ಅವರಿಗೆ ಬೆಂಬಲ ನೀಡುತ್ತೇವೆ. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗುವುದು ನಿಶ್ಚಿತ. ಅಭಿವೃದ್ಧಿ ಮತ್ತು…
ಬೆಂಗಳೂರು : ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಸೋಮವಾರ ಹೇಳಿದ್ದಿಷ್ಟು, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಶೀಘ್ರ ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟ: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, “ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ” ಎಂದು ತಿಳಿಸಿದರು. ಅನಂತ ಕುಮಾರ್ ಹೆಗಡೆಗೆ ಮಾನಸಿಕ ಸ್ಥಿರತೆ ಇಲ್ಲ:…
ಸಾಲ. ಇದು ಪುರುಷರಿಗೆ ಮಾತ್ರವೇ? ಹೆಂಗಸರಿಗೆ ಇಲ್ಲವಾ ಅಂತ ಕೇಳಬೇಡಿ. ಈ ಪರಿಹಾರವು ನಿರ್ದಿಷ್ಟವಾಗಿ ಪುರುಷರ ಸಾಲದ ಹೊರೆಯನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ. ಸ್ನಾನದ ನಂತರ ಪುರುಷರು ಮಾಡಬೇಕಾದ ಪರಿಹಾರ. ಆದುದರಿಂದ ಸಾಲದ ಹೊರೆಯಲ್ಲಿ ಸಿಲುಕಿರುವ ಪುರುಷರು, ಆದಾಯವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಪುರುಷರು, ಸಂಸಾರ ನಡೆಸಲಾಗದೆ ಆದಾಯವಿಲ್ಲದೆ ಸಂಕಷ್ಟದಲ್ಲಿರುವ ಪುರುಷರು, ಒಳ್ಳೆಯ ಕೆಲಸ ಸಿಗದೆ ಪರದಾಡುವ ಪುರುಷರು ಈ ಪರಿಹಾರವನ್ನು ಎಲ್ಲರೂ ಮಾಡಿದಾಗ ಅವರಿಗೆ ಜೀವನದಲ್ಲಿ ಒಳ್ಳೆಯ ಬದಲಾವಣೆ ಬರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ…
ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ಒಂದು ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ತಂದೆ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಚಿಕ್ಕಪೇಟೆಯ ಅಮಿತ್ (32) ಹಾಗೂ ಅವರ ಮಗು 5 ವರ್ಷದ ಅನ್ವಿತಾ ಎನ್ನುವ ಮಗು ಸಾವನ್ನಪ್ಪಿದ್ದು ಘಟನೆಯಲ್ಲಿ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದಾರೆ.ಡಿವೈಡರ್ಗೆ ಬೈಕು ಡಿಕ್ಕಿ ಹೊಡೆದ ಪರಿಣಾಮವಾಗಿ ತಂದೆ ಮಗು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಕುಸುಮ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನ ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲೀಸಾಲಾಗಿದ್ದು ಅವರ ಸ್ಥಿತಿ ಚಿಂತಾ ಜನಕವಾಗಿದೆ ಎಂದು ತಿಳಿದುಬಂದಿದೆ.ಅಪಘಾತದಿಂದ ಪ್ರಚಾರದಟ್ಟಣೆಯಾಗಿದ್ದು ನೆಲಮಂಗಲ ಸಂಚಾರಿ ಠಾಣೆಹಳ್ಳಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಸಿಲಿಂಡರ್ ಒಂದು ಸ್ಫೋಟಗೊಂಡು ಆರು ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬೆಂಗಳೂರಿನ ಯಲಹಂಕದ LBS ಬಳಿ ನಡೆದಿದೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಚನಕವಾಗಿದೆ ತಕ್ಷಣ ಅವರನ್ನ ಗಾಯಾಳುಗಳಿಗೆ ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಡ್ಯಾಮೇಜ್ ಆಗಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಯಲಹಂಕದ LBS ಲೇಔಟ್ ನಲ್ಲಿ ಈ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳು ಡ್ಯಾಮೇಜ್ ಆಗಿವೆ. ಮನೆಗಳು ಗೋಡೆಗಳು ಬಿರುಕು ಬಿಟ್ಟಿದ್ದು ಅನೇಕ ವಸ್ತುಗಳು ಪುಡಿ ಪುಡಿಯಾಗಿ ಬಿದ್ದಿವೆ.ಘಟನೆ ಕುರಿತಂತೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಘಟನೆ ಜರುಗಿದ್ದು ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದ್ದು ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ನಾಲ್ಕು ಬೈಕ್ ಗಳಿಗೆ ಬೆಂಕಿಗೆ ಅಹುತಿಯಾಗಿರುವ ಘಟನೆ ನಡೆದಿದೆ. ಮೆಟ್ರೋ ನಿಲ್ದಾಣ…
ಉತ್ತರ ಕನ್ನಡ : ಸಿಎಂ ವಿರುದ್ಧ ಅನಂತಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ದಾಳಿ ವಿಚಾರವಾಗಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯಕ್ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದು ಅಧಿಕಾರಕ್ಕೆ ಬರಲು ಸಮಯಕ್ಕೆ ತಕ್ಕಂತೆ ಹಿಂದುತ್ವ ಬಳಸಿಕೊಳ್ಳುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ವಿಷಯವಾಗಿ ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಸಿದ ಅವರು ಕಾಂಗ್ರೆಸ್ ನಾಯಕರುಗಳ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅನಂತ್ ಕುಮಾರ್ ಹೆಗಡೆ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಸಿದ್ದರಾಮಯ್ಯ ಸರ್ಕಾರ ಎದುರಿಸಲು ಬಿಜೆಪಿಯವರಿಗೆ ಆಗುತ್ತಿಲ್ಲ. ಎದುರಿಸಲು ಆಗದಿದ್ದಾಗ ಇಂತಹ ಮಾತುಗಳು ಬರುವುದು ಸಹಜ ಎಂದರು. ಲೋಕಸಭಾ ಚುನಾವಣೆಯ ವೇಳೆ ಇಲ್ಲ ಸಲ್ಲದ ಹೇಳಿಕೆಗಳನ್ನು ಕೊಡುತ್ತಾರೆ. ಮೇಸ್ತ ವಿಷಯ ಇಟ್ಟುಕೊಂಡು ಜಿಲ್ಲೆಯಲ್ಲಿ ದಂಗೆ ಎಬ್ಬಿಸಿದ್ದರು. ಅನೇಕರು ಇಂದಿಗೂ ಕೋರ್ಟ್ ಕಚೇರಿ ಅಂತ ಅಲೆದಾಡುತ್ತಿದ್ದಾರೆ ಅಧಿಕಾರಕ್ಕೆ ಬರಲು ಸಮಯಕ್ಕೆ ತಕ್ಕಂತೆ ಹಿಂದುತ್ವ ಬಳಸಿಕೊಳ್ಳುತ್ತಾರೆ ಚುನಾವಣೆ ಸಮೀಪವಿದ್ದಾಗ ಹಿಂದುತ್ವದ ಬಗ್ಗೆ ಎಲ್ಲಿಲ್ಲದ ಅಭಿಮಾನ ಮೂಡುತ್ತದೆ. ಹಿಂದೂ ಧರ್ಮ ಕಾಪಾಡುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ.…
ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ‘MES’ ಪುಂಡರಿಂದ ಬೆದರಿಕೆ ಬಂದಿದ್ದು, ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಅಲ್ಲಿ ಅವಾಚ್ಯವಾಗಿ ನಿಂದಿಸಿರುವ ವಿಡಿಯೋವನ್ನು ಪೋಸ್ಟ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಜೀವ ಬೆದರಿಕೆ ಬಂದಿದ್ದು, ಅನಿಲ್ ದಡ್ಡಿಮನಿ ಹಾಗೂ ಸಂಪತ್ ಕುಮಾರ್ ಗೆ ಬೆದರಿಕೆ ಬಂದಿದೆ.ಇನ್ಸ್ಟಾಗ್ರಾಮ್ ನಲ್ಲಿ ಎಂ ಇ ಎಸ್ ಪುಂಡರು ಪೋಸ್ಟ್ ಹಾಕುವ ಮೂಲಕ ಬಿದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾಯಲ್ ಬೆಳಗಾವ್ಕರ್ ಎಂಬ ಖಾತೆಯಿಂದ ಬೆದರಿಕೆ ಪೋಸ್ಟ್ ಬಂದಿದೆ ಅವಾಚ್ಯವಾಗಿ ನಿಂದಿಸಿ ಎಂಇಎಸ್ ಪುಂಡರು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ ಕನ್ನಡ ಕಡ್ಡಾಯ ಮಾಡುವಂತೆ ಹೋರಾಡಿದ್ದಕ್ಕೆ ಬೆದರಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
ವಿಜಯನಗರ : ತನಗೇ ಯಾರು ಹುಡುಗಿ ಕೊಡುತ್ತಿಲ್ಲ ಎಂದು ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಗ್ರಾಮದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆಯ ಗ್ರಾಮದ ಬಿ ಮಧುಸೂದನ್ (26) ಸಾವನ್ನಪ್ಪಿರುವ ಯುವಕನಾಗಿದ್ದಾನೆ.ಹುಡುಗನ ತಂದೆಯ ವರ್ತನೆ ಸರಿ ಇಲ್ಲ ಎಂದು ಹೆಣ್ಣು ಕೊಡುವವರು ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಹುಡುಗಿ ಕೊಡಲು ನಿರಾಕರಿಸಿದಕ್ಕೆ ಯುವಕ ಮನನೊಂದಿದ್ದ. ಕನ್ಯೆ ಸಿಗದಿದ್ದಕ್ಕೆ ಬಿ ಮಧುಸೂದನ್ ಕುಡಿತದ ಚಟಕ್ಕೆ ಕೂಡ ಬಿದ್ದಿದ್ದ ಎನ್ನಲಾಗುತ್ತಿದೆ. ನನಗೆ ಮದುವೆನೇ ಆಗಲ್ಲ ಎಂದು ಮಧುಸೂದ ಮನನೊಂದು ವಿಷಯ ಸೇವಿಸಿದ್ದ.ಜನವರಿ 5ರಂದು ಮಧುಸೂದನ್ ವಿಷ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ, ಗುಡೆಕೋಟೆ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇದೆ 22ರಂದು ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕೆ ವಿಶೇಷ ಏನೆಂದರೆ ಕರುನಾಡಿನಲ್ಲಿ ಶ್ರೀರಾಮದೇವರ ಮೂರ್ತಿ ತಯಾರಿಸಲಾಗಿದ್ದು ರಾಮಮಂದಿರದ ಗರ್ಭಗುಡಿಯಲ್ಲಿ ಇದನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಇದಕ್ಕೆ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ‘ರಾಮಲಲ್ಲಾ’ ಮೂರ್ತಿ ಆಯ್ಕೆ ಆಗಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮತೀರ್ಥ್ ಪ್ರಕಟಣೆ ಹೊರಡಿಸುವುದು ಕನ್ನಡಿಗರೆಲ್ಲರ ಪಾಲಿನ ಸಂಕ್ರಾಂತಿ ಸಂಭ್ರಮವನ್ನು ಇಮ್ಮಿಡಿಗೊಳಿಸಿದೆ. ರಾಮಲಲ್ಲಾ ಮೂರ್ತಿ ಅರಳಿರುವುದು ಹೆಚ್.ಡಿ.ಕೋಟೆ ತಾಲೂಕಿನ ಶಿಲೆ ಎನ್ನುವ ಸಂಗತಿ ಮಂದಿರದ ಜತೆ ಕನ್ನಡಿಗರ ಶ್ರದ್ಧೆಯನ್ನು ಗಾಢಗೊಳಿಸಿದೆ.ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಅವರಿಗೆ ಆ ಶ್ರೀರಾಮ ದೇವರ ಅನುಗ್ರಹ ಸದಾ ಇರಲಿ ಹಾಗೂ ಅವರು ಇಂಥ…