Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರಗಿ : ಜಾತಿ ನಿಂದನೆ ಕೆಸ್ ಹಾಕಿದ್ದಕ್ಕೆ ಹೆದರಿ ಯುವಕನೊಬ್ಬ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಲಾಡ ಮುಗುಳಿ ಗ್ರಾಮದಲ್ಲಿ ನಿಖಿಲ್ ಪೂಜಾರಿ (23) ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮಗಳು ಎಂಬಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ನಿಖಿಲ್ ನೀಣಿಗೆ ಶರಣಾಗಿರುವ ಘಟನೆ ನಡೆದಿದೆ. ನಾಲ್ಕು ದಿನದ ಹಿಂದೆ ಗ್ರಾಮದಲ್ಲಿ ಜಾತ್ರೆಯ ವೇಳೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯದವರು ನಡುವೆ ಗಲಾಟೆ ಆಗಿತ್ತು. ಗಲಾಟೆ ಆದ ಬಳಿಕ ಗ್ರಾಮದ ಹಿರಿಯರು ಎರಡು ಸಮುದಾಯಗಳ ನಡುವೆ ರಾಜಿ ಮಾಡಿಸಿದ್ದರು. ಆದರೆ ನಿಖಿಲ್ ವಿರುದ್ಧ ಅನ್ಯ ಸಮುದಾಯದವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇದರಿಂದ ಹೆದರಿದ ನಿಖಿಲ್ ಜಾತಿ ನಿಂದನೆ ಕೆಸ್ ನಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ನ್ಯಾಯಕ್ಕಾಗಿ…
ಕಲಬುರಗಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಲುಕ್ ಔಟ್ ನೋಟಿಸ್ ನೀಡಲಾಗಿದೆ.ಹಾಗಾಗಿ ವಿದೇಶದಲ್ಲಿರುವ ಅವರನ್ನು ಶೀಘ್ರದಲ್ಲಿ ವಾಪಸ್ ಕರೆಸಲಾಗುತ್ತದೆ ಎಂದು ಕಲಬುರ್ಗಿಯಲ್ಲಿ ಗೃಹ ಇಲಾಖೆಯ ಸಚಿವ ಪರಮೇಶ್ವರ ತಿಳಿಸಿದರು. ಕಲ್ಬುರ್ಗಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣ ಸಬಂದ ಎಲ್ಲಾ ಕಡೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದೇವೆ. ವಿಮಾನ ನಿಲ್ದಾಣ, ಬಂದರು ಸೇರಿ ಎಲ್ಲೆಡೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ.ಕೇಂದ್ರ ಸರ್ಕಾರ ರಾಜ ತಾಂತ್ರಿಕ ಪಾಸ್ಪೋರ್ಟ್ ನೀಡಿದೆ. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಪತ್ರ ಬರೆದಿದ್ದೇವೆ ಪ್ರಜ್ವಲ್ ರೇನು ಶೀಘ್ರದಲ್ಲೇ ವಾಪಸ್ ಕಳಿಸುತ್ತೇವೆ ಎಂದರು. ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಸಿಎಂ ಸಿದ್ದರಾಮಯ್ಯ ಯಾಕೆ ಅವರನ್ನು ಕಳುಹಿಸುತ್ತಾರೆ? ಪ್ರಧಾನಿ ರಾಜ್ಯದ ಕಾನೂನು ಸುವ್ಯವಸ್ಥೆ ಕೆಟ್ಟಿದೆ ಅಂತಾರೆ ಅವರಿಗೆ ತಪ್ಪು ಮಾಹಿತಿ ಇರಬಹುದು ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಚೆನ್ನಾಗಿದೆ. ನೇಹಾ ಅತ್ತೆ ಆರೋಪಿಯನ್ನು ಒಂದು ಗಂಟೆಯಲ್ಲಿ ಹಿಡಿದರು ರಾಮೇಶ್ವರಂ ಕೆಎಸ್ ನಾನೇ…
ಕಲಬುರ್ಗಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿ ವಿಚಾರಣೆಗೆ A1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಒಂದು ವೇಳೆ ಅವರು ವಿಚಾರಣೆಗೆ ಹಾಜರಾಗದೆ ಹೋದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಕಲ್ಬುರ್ಗಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಎಚ್ ಡಿ ರೇವಣ್ಣ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.ವಿಚಾರಣೆಗೆ ಹಾಜರಾಗದಿದ್ದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಪ್ರಜ್ವಲ್ ಪ್ರಕರಣ ಸಂಬಂಧ ನೀಡಿದ್ದೇವೆ. ವಿಮಾನ ನಿಲ್ದಾಣ ಬಂದರು ಸೇರಿ ಎಲ್ಲೆಡೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ. ಇದರಲ್ಲಿ ಯಾರನ್ನು ರಕ್ಷಣೆ ಮಾಡುವುದಿಲ್ಲ. ಶೀಘ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು. ಎಲ್ಲಾ ಏರ್ಪೋರ್ಟ್ ಗಳಿಗೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ. ಪ್ರಕರಣ ಕುರಿದಂತೆ ಎಸ್ ಐ ಟಿ ರಚಿಸಿದ್ದೇವೆ ಆದರೆ ಎಸ್ ಐ ಟಿ ನೋಟಿಸ್…
ಹುಬ್ಬಳ್ಳಿ : ಈ ಬಾರಿ ಲೋಕಸಭೆ ಚುನಾವಣೆಯ ಬಳಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಉತ್ತರ ಕರ್ನಾಟಕ ದವಾರು ಒಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ವಿಜಯಪುರ ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಅಮಿತ್ ಶಾ ಅವರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಲು ಡಿಕೆಶಿ ತಂಡ ಪ್ರಯತ್ನಿಸುತ್ತಿದೆ. ಆ ಪ್ರಯತ್ನದ ನಡುವೆಯೇ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಡಿಕೆಶಿ ಹಾಗೂ ಅವರ ತಂಡ ಪ್ರಯತ್ನಿಸಲಿದೆ.ಅದರ ಫಲವಾಗಿ ಸರ್ಕಾರವೇ ಪತನವಾಗಿ ಮರು ಚುನಾವಣೆಯಾಗುತ್ತದೆ.ಆನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು. ಮುಂದೆ ನಮ್ಮದೇ ಸರ್ಕಾರ ಬಂದಾಗ ಉತ್ತರ ಕರ್ನಾಟಕದರೇ ಸಿಎಂ ಆಗುತ್ತಾರೆ. ಅಷ್ಟೇ ಅಲ್ಲ, ಯಾರು ಏನೇ ಲಾಗ ಹೊಡೆದರೂ ಇಡೀ ದೇಶದಲ್ಲಿ ಮುಸ್ಲಿಂ ಮೀಸಲಾತಿ ರದ್ದಾಗುತ್ತದೆ. ಹಾಗೆಂದು ಅಮಿತ್ ಶಾ…
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಜನರು ಬಿಸಿಲಿನ ಶಾಕಕ್ಕೆ ತತ್ತರಿಸಿ ಹೋಗಿದ್ದಾರೆ.ಹಾಗಾಗಿ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ಬಿಸಿ ಗಾಳಿಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರ್ಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು ಜಿಲ್ಲೆಯ ಕಾಳಗಿ ತಾಲೂಕು ಹಾಗೂ ಸುತ್ತಲಿನ ಪರಿಸರದಲ್ಲಿ ಗರಿಷ್ಠ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ 4 ದಿನದಿಂದ ಉಷ್ಣ ಅಲೆಗಳು ರಾಚುತ್ತಿವೆ. ಇದರಿಂದಾಗಿ ಜನಜೀವನ ಜಿಲ್ಲಾದ್ಯಂತ ತತ್ತರಿಸಿಹೋಗಿದೆ. ಜನ ರಣ ಬಿಸಿಲಿಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೂ ಹೊರಗಡೆ ಹೋಗದೆ…
ಕೊಪ್ಪಳ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆ ಆರ್ ಪಿ ಪಿ ಪಕ್ಷ ಸ್ಥಾಪನೆ ಮಾಡಿ, ಇದೀಗ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಗೊಂಡಿರುವ ಜನಾರ್ಧನ ರೆಡ್ಡಿ ಅವರು ಅಚ್ಚರಿಯ ಹೇಳಿಕೆ ಒಂದನ್ನು ನೀಡಿದ್ದು, ನಾನು ಗಂಗಾವತಿಯ ಕ್ಷೇತ್ರದ ಶಾಸಕನಾಗಲು ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಶಾಸಕ ಜನಾರ್ದನ ರೆಡ್ಡಿ ಅಚ್ಚರಿಯ ಹೇಳಿಕೆಯನ್ನು ನೀಡಿದರು. ನಗರದ ಕನಕಗಿರಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಚುನವಾಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಕ್ಬಾಲ್ ಅನ್ಸಾರಿ ಅವರು ಸೋಲಿನ ಹತಾಶೆಯಿಂದ ಕಾಂಗ್ರೆಸ್ ಮುಖಂಡರಾದ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಅವರನ್ನು ರೆಡ್ಡಿ ಬುಕ್ ಮಾಡಿಕೊಂಡಿದ್ದಾರೆ ಎಂದು ಭಾಷಣದಲ್ಲಿ ಮಾತನಾಡುತ್ತಿದ್ದಾರೆ. ಆದರೆ ಅವರಿಗೆ ಅಸಲಿ ವಿಷಯ ಗೊತ್ತಿಲ್ಲ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನನಗೆ ಬೆಂಬಲಿಸಿದ್ದಾರೆ.ಆ ಕಾರಣದಿಂದಲೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅನ್ಸಾರಿ ಆಯೋಜಿಸಿದ್ದ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿಲ್ಲ. ಇದು ಎಲ್ಲರಿಗೂ ಗೊತ್ತಿದ್ದ ವಿಷಯ.…
ಕೊಪ್ಪಳ : ಪ್ರಜ್ವಲ್ ರೇವಣ್ಣ ಕಾರು ಚಾಲಕ ಕಾರ್ತಿಕ್ ಅನ್ನು ಮಲೇಶಿಯಾ ಗೆ ಕಳುಹಿಸಿದ್ದು ಆಡಿಶನ್ ಡಿಕೆ ಶಿವಕುಮಾರ್ ಎಂದು ಪರೋಕ್ಷವಾಗಿ ಹೆಚ್ಡಿ ಕುಮಾರಸ್ವಾಮಿ ಆರೋಪ ಮಾಡಿದರು ಇವರ ಹೇಳಿಕೆಗೆ ಕಿಡಿ ಕಾರಿದ ಡಿಕೆ ಶಿವಕುಮಾರ್ ನನಗೇನೂ ತಲೆಕೆಟ್ಟಿದೆಯಾ? ರೋಡ್ನಲ್ಲಿ ನಿಂತು ಫೈಟ್ ಮಾಡೋವ್ನು ನಾನು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೌದಾ ನಮ್ ಬ್ರದರ್ ಹೇಳಿದ್ರಾ, ಅಚ್ಚ ಅಚ್ಚ ನಮ್ಮ ಎಲ್ಲಾ ಇನ್ಫಾರ್ಮಶನ್ ಗೊತ್ತಿರಬೇಕಲ್ಲವಾ? ಸೆಂಟ್ರಲ್ ನಿಂದ ತಗೊಳ್ಳಿ, ಯಾರ್ಯಾರು ಕಳಿಸಿದ್ದಾರೆ ಅಂತ ಎಂದು ಕೊಪ್ಪಳದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ನನಗೇನು ತಲೆ ಕೆಟ್ಟಿದ್ಯಾ, ರೋಡಲ್ಲಿ ಫೈಟ್ ಮಾಡ್ತೀನಿ ಹಿಂದಕ್ಕೆ ಯಾರನ್ನು ಕಳಿಸಿ ಎತ್ತಿ ತೋಟದಲ್ಲಿಟ್ಟು ನನಗೆ ಅವಶ್ಯಕತೆ ಇಲ್ಲ ಅವರಿಗೆ ಅವಶ್ಯಕತೆ ಇದೆ. ನಮ್ಮ ಬ್ರದರ್ ಹಾಗೆ ಹೇಳಿದ್ದಾರಾ ಹಾಗಾದ್ರೆ ಅವರಿಗೆ ಎಲ್ಲಾ ಮಾಹಿತಿ ಗೊತ್ತಿರಬೇಕಲ್ಲ ಅವರು ತೋಟದ ಮನೆಯಲ್ಲಿ ಏನೇನೋ ಮಾಡಬಹುದು ಎಂದು ತಿರುಗೇಟು…
ಬೆಂಗಳೂರು : ಆತ ಒಬ್ಬ ಪಾಗಲ್ ಪ್ರೇಮಿ ಆಗಿದ್ದ ವಿವಾಹಿತೆಯನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ. ಆದರೆ ವಿವಾಹಿತೆ ಮದುವೆ ಆಗುವುದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ಕಪಿತಗೊಂಡ ಪಾಗಲ್ ಪ್ರೇಮಿ ವಿವಾಹಿತೆ ಮನೆಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಹೌದು ವಿವಾಹಿತೆಯನ್ನು ಮದುವೆಯಾಗುವಂತೆ ಅರ್ಬಾಜ್ ಎನ್ನುವ ಪಾಗಲ್ ಪ್ರೇಮಿ ಪೀಡಿಸುತ್ತಿದ್ದ. ಆದರೆ ವಿವಾಹಿತೆ ಮದುವೆಯಾಗಲ್ಲ ಎಂದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ್ದಾನೆ.ಈ ಒಂದು ಘಟನೆ ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿರುವ ಸಾರಾಯಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮನೆಗೆ ಪಾಗಲ್ ಪ್ರೇಮಿ ಅರ್ಬಾಜ್ ಎನ್ನುವ ವ್ಯಕ್ತಿ ಬೆಂಕಿ ಇಟ್ಟಿದ್ದಾನೆ. ಅರ್ಬಜ್ ಮಹಿಳೆಯ ದೂರದ ಸಂಬಂಧಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅರ್ಬಾಸ್ ಮದುವೆಯಾಗು ಎಂದು ಮಹಿಳೆಯ ಹಿಂದೆ ಬಿದ್ದಿದ್ದಾನೆ. ಈ ಬಗ್ಗೆ ಎರಡು ಕುಟುಂಬದ ಹಿರಿಯರು ಆತನಿಗೆ ಬುದ್ಧಿ ಹೇಳಿದ್ದರು.ಹಿರಿಯರ ಬುದ್ಧಿಮಾತಿಗೂ ಅರ್ಬಾಜ್ ಬಗ್ಗದೇ ಈ ಒಂದು ದುಷ್ಕೃತ್ಯ ಎಸಗಿದ್ದಾನೆ. ಮುಂಜಾನೆ 4:00…
ಬೆಂಗಳೂರು : ಹಾಸ್ಟೆಲ್ ಕೊಠಡಿ ಒಂದರಲ್ಲಿ PHD ವಿದ್ಯಾರ್ಥಿ ಒಬ್ಬ ಅನುಮಾನವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದೆ.ತಿಂಡಿ ತಿಂದು ಮಲಗಿದಾತ ಏಕಾಏಕಿ ಸಾವನ್ನಪ್ಪಿದ್ದಾನೆ. ಹೇಗೆ ಸಾವಿಗೀಡಾಗಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರ ಮೂಲದ ರಂಗನಾಥ್ ನಾಯಕ್ (27) ಎಂದು ಹೇಳಲಾಗುತ್ತಿದ್ದು, ಕಳೆದ ಕೆಲ ತಿಂಗಳ ಹಿಂದೆ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ. ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ. ಅದಾದ ಬಳಿಕ ಆಯುರ್ವೇದಿಕ್ ಚಿಕಿತ್ಸೆ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಪಿಹೆಚ್ ಡಿ ವ್ಯಾಸಂಗ ಮಾಡುತ್ತಿದ್ದ ರಂಗನಾಥ್ ನಿನ್ನೆ ಬೆಳಗ್ಗೆ ಕ್ಯಾಂಟೀನ್ಗೆ ಹೋಗಿ ತಿಂಡಿ ತಿಂದು ರೂಮಿಗೆ ಹೋಗಿ ಲಾಕ್ ಹಾಕಿಕೊಂಡಿದ್ದ. ಮಧ್ಯಾಹ್ನ ರೂಮೇಟ್ ಹೋಗಿ ಬಾಗಿಲು ಬಡಿದಾಗ ತೆಗೆದಿರಲಿಲ್ಲ. ಅನುಮಾನ ಬಂದು ಬಾಗಿಲು ಬಡಿದು ನೋಡಿದಾಗ ಆತ ಸಾವನ್ನಪ್ಪಿರುವುದು ಗೊತ್ತಾಗಿದೆ. ಮಾಹಿತಿ ನೀಡಿದ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು…
ಶಿವಮೊಗ್ಗ : ತಮ್ಮ ಮಗನಿಗೆ ಲೋಕಸಭೆ ಟಿಕೆಟ್ ಕೊಡಲಿಲ್ಲವೆಂದು ಅಸಮಾಧಾನ ಗೊಂಡು ಸ್ವತಂತ್ರ ಅಭ್ಯರ್ಥಿಯಾಗಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ನೂತನ ಚುನಾವಣಾ ಕಚೇರಿ ಎದುರುಗಡೆ ಕಿಡಿಗೇಡಿಗಳಿಂದ ವಾಮಾಚಾರ ಮಾಡಿರುವ ಘಟನೆ ನಡೆದಿದೆ. ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಕೆ ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಕೆ ಎಸ್ ಈಶ್ವರಪ್ಪ ಚುನಾವಣಾ ಕಚೇರಿ ಎದುರು ನಿಂಬೆಹಣ್ಣು ಕುಂಕುಮ ಹಾಕಿ ವಾಮಾಚಾರ ನಡೆಸಿದ್ದಾರೆ. ಇತ್ತೀಚಿಗೆ ನೂತನ ಚುನಾವಣೆ ಕಚೇರಿಯನ್ನು ತೆರೆದಿದ್ದರು. ಇವತ್ತು ಕಚೇರಿಯ ಮುಂಭಾಗದಲ್ಲಿ ಕಿಡಿಗೇಡಿಗಳು, ಕಚೇರಿ ಎದುರು ನಿಂಬೆಹಣ್ಣು ಕುಂಕುಮ ಹಾಕಿ ವಾಮಾಚಾರ ನಡೆಸಿದ್ದಾರೆ ಎಂದು ಹೇಳಲಾಗೂತ್ತಿದೆ. ತಮ್ಮ ಮಗನಿಗೆ ಲೋಕಸಭೆ ಟಿಕೆಟ್ ಕೈತಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಕಾರಣ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಅವರ ಪತ್ರರಾದ ಬಿ ವೈ ವಿಜಯೇಂದ್ರ ಹಾಗೂ ಬಿ ವೈ ರಾಘವೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ಕಿಡಿ…