Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣವನ್ನು ಒಪ್ಪಿಸಿದರು ಕೂಡ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹಾವೇರಿ ಜಿಲ್ಲೆಯ ರಾಣಿ ಬೆನ್ನೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ತನಿಖಾದಳ ತನಿಖೆ ಮಾಡಿದರು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು ಪ್ರಜ್ವಲ್ಗೆ ಒಂದೇ ದಿನದಲ್ಲಿ ವೀಸಾ ಹೇಗೆ ಸಿಕ್ಕಿತು ಎಂಬ ವಿನಯ್ ಕುಲಕರ್ಣಿ ಹೇಳಿಕೆಗೆ ಪ್ರತಿಕ್ರಿಸಿದ ಅವರು ತಿರುಗೇಟು ನೀಡಿದ್ದಾರೆ. ವೀಸಾ ಹೇಗೆ ಸಿಕ್ಕಿತು ಅಂತ ಕೇಳಿದರೆ ಹೇಗೆ ಒಂದೇ ದಿನದಲ್ಲಿ ಸಿಗುತ್ತೆ. ಅವರು ವೀಸಾಗೆ ಅಪ್ಲೈ ಮಾಡಿದ್ದು ಸಿಕ್ಕಿದ್ದು ಇವರು ನೋಡಿದ್ದಾರಾ? ಪ್ರಜ್ವಲ್ ಯಾವಾಗ ವೀಸಾಗಿ ಅರ್ಜಿ ಹಾಕಿದ್ದಾರೆಂದು ಇವರಿಗೆ ಗೊತ್ತಾ? ವೀಸಾ ಕೊಡೋದು ಕೇಂದ್ರ ಸರ್ಕಾರವಲ್ಲ ಜರ್ಮನಿ ಸರ್ಕಾರ. ಕಾಮನ್ ಸೆನ್ಸ್ ಇರಬೇಕು ಅಷ್ಟು ಗೊತ್ತಿಲ್ಲವೇ ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಕೊಪ್ಪಳ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ಜೊತೆ ಸಿದ್ದರಾಮಯ್ಯ ಸಂಧಾನ ಮಾಡಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ನನ್ನ ಜೊತೆ ಸಂಧಾನ ಮಾಡಿಕೊಂಡಿದ್ದರು ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. KRPP ಪಕ್ಷ 10 ಸ್ಥಾನ ಗೆಲ್ಲುತ್ತೆ ಅಂತ ಕಾಂಗ್ರೆಸ್ನವರು ಅಂದುಕೊಂಡಿದ್ದರು.ಹೀಗಾಗಿ ಚುನಾವಣೆಗೆ ಮುನ್ನ ನನ್ನ ಜೊತೆ ಸಂಧಾನ ಮಾಡಿಕೊಂಡಿದ್ದರು. ಮುಂದೆ ನಮ್ಮ ಸರ್ಕಾರ ರಚನೆಗೆ ರೆಡ್ಡಿ ಬೇಕಾಗಬಹುದು ಅಂತ ಅಂದುಕೊಂಡಿದ್ದರು. ಹಾಗಾಗಿ ಇಬ್ಬರಿಗೂ ಬೇಕಾಗಿದ್ದ ಓರ್ವ ಕಾಮನ್ ಫ್ರೆಂಡ್ ನನ್ನು ಕಳುಹಿಸಿದ್ದರು. ನಾನು ಜನಾರ್ದನ ರೆಡ್ಡಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದೇನೆ ಹಳೆಯದಲ್ಲವನ್ನು ಮರೆತು ಬಿಡೋಣ ರೆಡ್ಡಿ ವಿರುದ್ಧ ಮಾತನಾಡಲ್ಲ ಗಂಗಾವತಿಯಲ್ಲಿ ಪ್ರಚಾರ ಮಾಡಲ್ಲ ಎಂದು ಸಿದ್ದರಾಮಯ್ಯ ಹೇಳಿ ಕಳುಹಿಸಿದ್ದರು. ಹೀಗಾಗಿ ಸಿದ್ದರಾಮಯ್ಯ ಗಂಗಾವತಿ ಬಳ್ಳಾರಿಗೆ ಪ್ರಚಾರಕ್ಕೆ ಬಂದಿರಲಿಲ್ಲ. ಇಕ್ಬಾಲ್ ಅನ್ಸಾರಿ ಮೆಚ್ಚಿಸಲು ನನ್ನ ಬಗ್ಗೆ ಎರಡು ಮಾತು ಆಡಿದ್ದಾರೆ.ಆದರೆ ನನಗೆ ಸಿದ್ದರಾಮಯ್ಯ ಮೇಲೆ ಯಾವುದೇ ರೀತಿಯಾದ ಸಿಟ್ಟಿಲ್ಲ. ದೇವರ ಮೇಲೆ ಪ್ರಮಾಣ ಮಾಡಲ್ಲ.…
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪರವಾಗಿ ಅರುಣ್ ಎಸ್ಐಟಿಗೆ ಮನವಿ ಮಾಡಿಕೊಂಡಿದ್ದು 7 ದಿನಗಳ ಕಾಲ ಕಾಲಾವಕಾಶ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ ಅರುಣ್ ಅವರು ಎಸ್ಐಟಿಗೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೊಳೆನರಸೀಪುರದ ಮನೆ ಬಾಗಿಲಿಗೆ ನಿನ್ನೆ ರಾತ್ರಿ ಎಸ್ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್ ವಿದೇಶದಲ್ಲಿರುವುದರಿಂದ ಕಾಲಾವಕಾಶವನ್ನು ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್ ಐ ಟಿ ಗೆ ಕಾಲಾವಕಾಶ ಕೇಳಿದ್ದೇನೆ. ಏಳು ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದರು. ಅಲ್ಲದೆ ಪ್ರಕರಣದ ನಂತರ ಮೊದಲ ಬಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, ವಕೀಲರ ಮೂಲಕ ಏಳು ದಿನ ಕಾಲಾವಕಾಶವನ್ನು ಕೇಳಿದ್ದಾರೆ. ಕಾಲಾವಕಾಶ ಕೇಳಿದ ಬಗ್ಗೆ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಪೋಸ್ಟ್ ಮಾಡಿದ್ದಾರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಬೆಂಗಳೂರಿನಲ್ಲಿ…
ಯಾದಗಿರಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇಂದ್ರ ಸಚಿವ ಅಮಿತ್ ಷಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಬಳಿಕ ಇದೀಗ ರಾಜಗೌಡ ಸುಳ್ಳು ಹೇಳಲು ಕಲಿಸಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯ ಮಾಜಿ ಶಾಸಕ ರಾಜುಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ರಾಜುಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ನಾನು ಚೆನ್ನಾಗಿದ್ದೇವೆ ಎಂದು ರಾಜುಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಆದರೆ ನಾನು ರಾಜುಗೌಡ ಚೆನ್ನಾಗಿರುವುದು ನೂರಕ್ಕೆ ನೂರರಷ್ಟು ಸುಳ್ಳು ಎಂದು ತಿಳಿಸಿದರು. ನನ್ನ ಯಾವುದೇ ಬೆಂಬಲ ನಿನಗಿಲ್ಲ. ನೀನು ಬಿಜೆಪಿ ಅಭ್ಯರ್ಥಿ ನಿನ್ನ ಸೋಲಿಸುವುದೇ ನಮ್ಮ ಗುರಿ. ರಾಜೇಗೌಡ ಸುಳ್ಳು ಹೇಳುವ ವ್ಯಕ್ತಿ ಬಿಜೆಪಿಯವರು ಸುಳ್ಳು ಹೇಳುವ ಫ್ಯಾಕ್ಟರಿ. ಪ್ರಧಾನಿ ಮೋದಿ, ಅಮಿತ್ ಶಾ ಜೆಪಿ ನಡ್ದ ಬಳಿಕ ರಾಜುಗೌಡ ಸುಳ್ಳು ಹೇಳುವುದನ್ನು ಕಲಿಯುತ್ತಿದ್ದಾನೆ ಎಂದು ರಾಜುಗೌಡ ಬ್ರದರ್ ಸಿಎಂ ಸಿದ್ದರಾಮಯ್ಯ ವಾಗ್ದಾಳಿ…
ಕಲಬುರಗಿ : ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಾಗುತ್ತಲೇ ಇದೆ. ರಣಬಿಸಿಲಿಗೆ ಜನತೆ ಪೂರ್ತಿಯಾಗಿ ತತ್ತರಿಸಿದ್ದು, ಇದೀಗ ಕಲಬುರಗಿ ಜಿಲ್ಲೆಯ ಕಾಳಗಿ ಹೋಬಳಿಯಲ್ಲಿ 46 ಡಿಗ್ರಿ ಸೇಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲ್ಬುರ್ಗಿ ಜಿಲ್ಲೆಯ ಕಾಳಗಿ ಹೋಬಳಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ಸೆಖೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ…
ಯಾದಗಿರಿ : ಬರಿ ನರೇಂದ್ರ ಮೋದಿಗೆ ಯಾಕೆ ಬೈತೀರಾ ಅಂತ ಕೆಲವರು ಹೇಳುತ್ತಾರೆ ಮೋದಿ ನನ್ನದೇ ಗ್ಯಾರಂಟಿ ಅಂತಾನೆ ಅದಕ್ಕೆ ಮೋದಿಗೆ ತಾನೇ ಹೇಳಬೇಕು. ಹಾಗಾಗಿ ನರೇಂದ್ರ ಮೋದಿ ಅಂತ ಕೆಟ್ಟ ವ್ಯಕ್ತಿಗೆ ವೋಟ್ ಹಾಕಬೇಡಿ ಎಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ಲಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ AICC ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ನನ್ನದು 56 ಇಂಚಿನ ಎದೆ ಇದೆ ಅಂತ ಹೇಳಿಕೊಂಡು ಓಡಾಡುತ್ತಿದ್ದಾರೆ. ನಿಜಾಮರ ಕಾಲದಲ್ಲೇ ಮಂಗಳಸೂತ್ರ ತೆಗೆದುಕೊಳ್ಳಲು ಆಗಿಲ್ಲ.ಪ್ರಧಾನಿ ಮೋದಿ ಕೇವಲ ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಗಾಂಧೀಜಿ ಡಾ. ಅಂಬೇಡ್ಕರ್ ನಿವಾಸದಲ್ಲಿ ಜಾಸ್ತಿ ಜನ ಮಕ್ಕಳಿದ್ದರು ಎಂದರು. ನಾವು ಅಧಿಕಾರದಲ್ಲಿದ್ದಾಗ ಮಂಗಳಸೂತ್ರ ಕಿತ್ತುಕೊಳ್ಳೋಕೆ ಬಂದ್ರ? 55 ವರ್ಷಗಳ ಕಾಲ ನಾವು ಅಧಿಕಾರದಲ್ಲಿದ್ದಾಗ ಯಾರಾದರೂ ಬಂದ್ರ? ಕಾಂಗ್ರೆಸ್ ಬಂದರೆ ಆಸ್ತಿ ಕೀತ್ತುಕೊಳ್ಳುತ್ತಾರೆ ಅಂತ ಸುಳ್ಳು ಹೇಳುತ್ತಾರೆ.ನಾವು ಅಧಿಕಾರಕ್ಕೆ ಬಂದರೆ ಐದು ನ್ಯಾಯ 25 ಗ್ಯಾರಂಟಿಗಳನ್ನು ಕೊಡುತ್ತೇವೆ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ…
ಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರಣಿ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ತಿಂಗಳಾನುಗಟ್ಟಲೆ ಓಡಾಡಿದರು ವೀಸಾ ಸಿಗುವುದಿಲ್ಲ ಆದರೆ ಪ್ರಜ್ವಲ್ ರೇವಣ್ಣ ಅವರಿಗೆ ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು ಎಂದು ಪ್ರಶ್ನಿಸಿದರು. ಹಾವೇರಿಯಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಜರ್ಮನಿಗೆ ಹೋಗಲು ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು? ಜನರು ತಿಂಗಳುಗಟ್ಟಲೆ ಓಡಾಡಿದರೂ ವೀಸಾ ಸಿಗುವುದಿಲ್ಲ. ಆದರೆ ಪ್ರಜ್ವಲ್ ರೇವಣ್ಣಗೆ ಹೇಗೆ ಒಂದೇ ದಿನದಲ್ಲಿ ವೀಸಾ ಸಿಕ್ಕಿತು? ಈ ವಿಚಾರವನ್ನು ಚುನಾವಣೆಯಲ್ಲಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಹೇಳಿಕೆ ನೀಡಿದರು. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕಾರ ಕಾಂಗ್ರೆಸ್ ಜೆಡಿಎಸ್ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಯಾರ ಮೇಲೆ ಯಾರು ಬೇಕಾದರೂ ಆರೋಪ ಮಾಡಬಹುದು. ಆ ಕೃತ್ಯ ಆಗಿದ್ದು ನಿಜ ಅಲ್ವಾ? ಆ ಹೆಣ್ಣು ಮಕ್ಕಳ ಪರಿಸ್ಥಿತಿ…
ಯಾದಗಿರಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್. ಡಿ ಕುಮಾರಸ್ವಾಮಿ ಇದರ ಹಿಂದೆ ಮಹಾನಾಯಕನ ಕೈವಾಡ ಇದೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು ರಾಜಕೀಯ ಮಾಡುವುದಾಗಿದ್ರೆ ಏನು ಬೇಕಾದರೂ ಮಾಡುತ್ತಿದ್ದಿವಿ ಎಂದು ತಿಳಿಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜೇಗೌಡ ಯಾರ್ಯಾರನ್ನು ಭೇಟಿಯಾಗಿದ್ದಾರೆ ಎಂದು ಗೊತ್ತಿದೆ.ಮುಂಚಿತವಾಗಿಯೇ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು.ರಾಜಕೀಯ ಮಾಡೋದಾದರೆ ಏನು ಬೇಕಾದರೂ ಮಾಡುತ್ತಿದ್ವಿ. ನಾನು ಏನು ಮಾಡಬೇಕು ಅನ್ನೋದು ನನಗೂ ಗೊತ್ತಿದೆ. ಎಚ್ ಡಿ ಕುಮಾರಸ್ವಾಮಿ ಮಹಾನಾಯಕ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು. ಕುಮಾರಸ್ವಾಮಿಯವರು ನಾರಿ ಶಕ್ತಿ ಬಗ್ಗೆ ತಂದೆ ತಾಯಿ ಬಗ್ಗೆ ಬಹಳ ಗೌರವಿದೆ. ಹೆಣ್ಣುಮಕ್ಕಳಿಗೆ ಗೌರವ ಇದೆ ಅಂತ ಹೇಳುತ್ತಾರಲ್ಲ. ಹಾಗಾದರೆ ಮೊದಲು ಹೋಗಿ ಆ ತಾಯಂದಿರಿಗೆ ಧೈರ್ಯ ಹೇಳುವ ಹಾಗೂ ಸಾಂತ್ವನ ತುಂಬುವಂತ…
ಬಾಗಲಕೋಟೆ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಚಿವ ಶಿವಾನಂದ್ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಾಗಿದೆ. ಹೌದು ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಏಪ್ರಿಲ್ 29ರಂದು ನವನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ಕಾರ್ಮಿಕ ನಿರೀಕ್ಷಕ ರಮೇಶ್ ಭೀಮಪ್ಪ ಸಿಂದಗಿ ಅವರ ದೂರಿನ ಅನ್ವಯ ಇದೀಗ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದರ ಗೆಸ್ಟ್ ಹೌಸ್ ನಲ್ಲಿ ಪ್ರಜ್ವಲ್ ರೇವಣ್ಣ ಅವರು ಚಿತ್ರೀಕರಣ ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು ಈ ಹಿನ್ನೆಲೆಯಲ್ಲಿ SIT ತಂಡ ಈ ಒಂದು ಗೆಸ್ಟ್ ಹೌಸ್ ಅನ್ನು ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಳೆದ 5 ವರ್ಷಗಳ ಹಿಂದೆ ಈ ಒಂದು ಗೆಸ್ಟ್ ಹೌಸ್ ಉದ್ಘಾಟನೆಯಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಎಂಪಿ ಗೆಸ್ಟ್ ಹೌಸಿನಲ್ಲಿ ಚಿತ್ರೀಕರಣ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದೂ, SIT ತಂಡ ವಿಡಿಯೋ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.ವಾರದಲ್ಲಿ ನಾಲ್ಕು ದಿನ ಸರಕಾರಿ ಗೆಸ್ಟ್ ಹೌಸ್ ನಲ್ಲಿ ಪ್ರಜ್ವಲ್ ರೇವಣ್ಣ ಇರುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಜನರು ಪ್ರಜ್ವಲ್ ರೇವಣ್ಣ ಅವರನ್ನು ಭೇಟಿಯಾಗಲು ಗೆಸ್ಟ್ ಹೌಸ್ ಗೆ ಆಗಮಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಳೆದ 28 ರಂದು ಅಶ್ಲೀಲ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಅಂದು ಕೂಡ ಪ್ರಜ್ವಲ್ ರೇವಣ್ಣ ಅವರು ಅದೇ ಗೆಸ್ಟ್ ಹೌಸಿನಲ್ಲಿ ಇದ್ದರು…