Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ನ ಎರಡನೇ ಮಾಡಿಯಿಂದ ಯುವತಿಯೊಬ್ಬಳು ಬಿದ್ದು ಮೃತಪಟ್ಟಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ಕುರಿತಂತೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಅಪಾರ್ಟ್ಮೆಂಟ್​ ಒಂದರ 2 ನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಆರ್​ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ತಿಳಿದು ಬಂದಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ? ಅಥವಾ ಯಾವ ಕಾರಣಕ್ಕೆ ಯುವತಿ ಅಪಾರ್ಟ್ಮೆಂಟ್ ಮೇಲಿಂದ ಜಿಗಿದಿದ್ದಾಳೆ ಏನುವುದು ತಿಳಿದುಬಂದಿಲ್ಲ. ಹಾಗಾಗಿ ಎಲ್ಲ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆಯಾಗಿದ್ದು, ಬೆಂಗಳೂರಿನ ವಿವೇಕ ನಗರದಲ್ಲಿ ಈ ಒಂದು ಘಟನೆ ನಡೆದಿದೆ.ಬಾಡಿಗೆ ಮನೆಯಲ್ಲಿ ಮೇಘನಾ ಶೆಟ್ಟಿ (27) ಎನ್ನುವ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮೇಘನಾ ಶೆಟ್ಟಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರು ಎಂದು ತಿಳಿದುಬಂದಿದೆ.ಮೃತ ಮೇಘನಾ ಪೋಷಕರಿಂದ ಇದು ಕೊಲೆ ಎಂದು ಆರೋಪಿಸುತ್ತಿದ್ದಾರೆ. ಎರಡು ವರ್ಷದ ಹಿಂದೆ ತೀರ್ಥಹಳ್ಳಿಯ ಸುದೀಪ್-ಶೆಟ್ಟಿ ಜೊತೆ ಮೇಘನಾ ವಿವಾಹವಾಗಿತ್ತು. ಮೇಘನಾ ಶೆಟ್ಟಿ ಪತಿ ಸುದೀಪ್ ಸಹ ಇಂಜಿನಿಯರ್ ಆಗಿದ್ದಾರೆ. ಇತ್ತೀಚೆಗೆ ಪದೇಪದೇ ಹಣಕ್ಕಾಗಿ ಪತಿ ಕುಟುಂಬದಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ದಂಪತಿಯ ನಡುವೆ ಗಲಾಟೆ ನಡೆದಿತ್ತು. ಆದರೆ ಇಂದು ಬೆಳಿಗ್ಗೆ ಕಿಟಕಿಗೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೇಘನಾ ಶವ ಪತ್ತೆಯಾಗಿದೆ.ಮೇಘನಾ ಪೋಷಕರಿಂದ ಪತಿ ಸುದೀಪ್ ಶೆಟ್ಟಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ವಿವೇಕನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಚೆಕ್ ಇನ್ ಮತ್ತು ಚೆಕ್ ಔಟ್ ಆಗೋಕೆ ಪರದಾಟ ನಡೆಸಿದ್ದಾರೆ. ಹೌದು ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಏರ್ಪೋರ್ಟ್ ನಲ್ಲಿ ಚೆಕ್ ಇನ್ ಮತ್ತು ಚೆಕ್ ಔಟ್ ಆಗಲು ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಈ ಒಂದು ಸಮಸ್ಯೆ ಕಾಣಿಸಿಕೊಂಡಿದೆ. ಸಮಸ್ಯೆ ಸರ್ವರ್ ಹಿನ್ನೆಲೆಯಲ್ಲಿ ಸರತಿ ಸಾಲಿನಲ್ಲಿ ಪ್ರಯಾಣಿಕರು ನಿಂತಿದ್ದಾರೆ. ಕೆಲ ವಿಮಾನಗಳು ಸ್ಕೇಡ್ಯೂಲ್ ಮಾಡಿಕೊಂಡ ಏರ್ಲೈನ್ಸ್ ಸಿಬ್ಬಂದಿ, ಚೆಕ್ ಇನ್ ಸಮಸ್ಯೆ ಹಿನ್ನೆಲೆಯಲ್ಲಿ ವಿಮಾನಗಳ ಟೈಪ್ ಆಫ್ ನಲ್ಲೂ ವಿಳಂಬವಾಗಿದೆ. ಬೆಳಗ್ಗೆ 11 ಗಂಟೆಯಿಂದ ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವಸ್ ಸಮಸ್ಯೆ ಉಂಟಾಗಿದೆ ಎಂದು ಪ್ರಯಾಣಿಕರು ಒಬ್ಬರು ಕಿಡಿ ಕಾರಿದ್ದಾರೆ.

Read More

ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ಅವರಿಗೆ ನನ್ನನ್ನು ಕಂಡರೆ ಭಯ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದರು. ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ದೆವ್ವ ಆಗಿದ್ದರೆ ಮಾತ್ರ ಭಯ ಪಡಬೇಕು ಅವರೇನು ದೆವ್ವ ಅಲ್ಲ ಅಲ್ವಾ, ಅವರು ಅಂದ್ರೆ ನಾನು ಯಾಕೆ ಭಯ ಪಡಬೇಕು? ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯನವರದಲ್ಲಿ ಬೆಳೆದಿದ್ದೀನಾ? ಸಿಎಂ ಸಿದ್ದರಾಮಯ್ಯ ನೆರಳಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವಂತ ದುಡಿಮೆಯ ರಾಜಕೀಯಕ್ಕೆ ಬಂದಿದ್ದೇನೆ. ಸಿದ್ದರಾಮಯ್ಯ ಅವರೆ ದೇವೇಗೌಡರ ನೆರಳಲ್ಲಿ ಬಂದಿರುವಂತಹವರು. ಅವರು ನಮ್ಮ ಪಕ್ಷದ ಕಾರ್ಯಕರ್ತ. ನನಗೆ ಯಾವ ಬಂಧನದ ಭೀತಿನೂ ಇಲ್ಲ ಎಂದು ತಿಳಿಸಿದರು. ಜೆಡಿಎಸ್ ವೀಕ್ ಆಗುತ್ತೋ ಸ್ಟ್ರಾಂಗ್ ಆಗುತ್ತೋ ಭಗವಂತ ತೀರ್ಮಾನ ತೆಗೆದುಕೊಳ್ಳುತ್ತಾನೆ. ಮೊದಲು ತಾವು ಸಮಸ್ಯೆಯಲ್ಲಿದ್ದೀರಲ್ಲ ಅದನ್ನು ಸರಿಪಡಿಸಿಕೊಳ್ಳಿ. ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಯಾವ ಪಕ್ಷಕ್ಕೂ ಹೆದರಲ್ಲ. ಹೆದರುವುದು ದೇವರಿಗೆ ಮತ್ತು ಜನರಿಗೆ ಮಾತ್ರಸಿದ್ದರಾಮಯ್ಯನಂತವರು ಲಕ್ಷ ಜನ…

Read More

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಈ ವೇಳೆ ಅವರಿಗೆ ಬೆನ್ನಿನಲ್ಲಿ ನೋವು ಕಾಣಿಸಿಕೊಂಡಿದ್ದು ಬೆನ್ನಿನ ಹಿಂಭಾಗದಲ್ಲಿ ಊತ ಉಂಟಾಗಿದೆ ಹಾಗಾಗಿ ಇಂದು ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರ ಆರೋಗ್ಯ ತಪಾಸಣೆ ಮಾಡಿದರು. ಹೌದು ಜೈಲಿನಲ್ಲಿ ಇಂದು ಸಹ ದರ್ಶನ್ಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಜೈಲು ವೈದ್ಯ ಡಾ.ರಾಜಶೇಖರ್ ಅವರಿಂದ ಆರೋಗ್ಯ ತಪಾಸಣೆ ನಡೆಸಲಾಗಿದೆ. ಬೆನ್ನಿನ ಭಾಗದಲ್ಲಿ ಊತ ಕಡಿಮೆಯಾಗದೆ ನೋವು ಹೆಚ್ಚಳವಾಗಿದೆ. ದರ್ಶನ್ ಗೆ ಸ್ಕ್ಯಾನ್ ಮಾಡಿಸುವಂತೆ ವೈದ್ಯರು ಒತ್ತಾಯಿಸಿದ್ದಾರೆ. ಸ್ಕ್ಯಾನಿಂಗ್ ಬೇಡ ಸರ್ ಅಂತ ನಟ ದರ್ಶನ್ ಹಠ ಮಾಡುತ್ತಿದ್ದಾರೆ. ಕೋರ್ಟ್ ಏನು ಹೇಳುತ್ತೆ ನೋಡಿ ಡಿಸೈಡ್ ಮಾಡುತ್ತೇನೆ ಎಂದು ದರ್ಶನ್ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕೂಡ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಈ ವೇಳೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯವನ್ನು…

Read More

ರಾಯಚೂರು : ಮುಡಾ ಹಗರಣದಲ್ಲಿ ವಿಪಕ್ಷ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿ ಎಂದು ಅಗ್ರಹಿಸುತ್ತಿವೆ ಅಲ್ಲದೆ ಇತ್ತೀಚಿಗೆ ಕಾಂಗ್ರೆಸ್ ನಾಯಕರು ಆರ್ ಅಶೋಕ್ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ್ದರು. ಇದಕ್ಕೆ ಅಶೋಕ್ ನಾನು ರಾಜೀನಾಮೆ ಕೊಡುತ್ತೇನೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುತ್ತಾರಾ?ಎಂದು ಸವಾಲು ಹಾಕಿದ್ದರು. ಅಶೋಕ್ ಹೇಳಿಕೆಗೆ ಇದೀಗ ಬೇಕಾದ್ರೆ ಅವರು ಕೊಡಲಿ ಏನು ತಪ್ಪೇ ಮಾಡಿದ ನಾನು ರಾಜೀನಾಮೆ ಯಾಕೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸದರು. ಇಂದು ಅವರು, ಮಾನ್ವಿಯಲ್ಲಿ ನಡೆದ ಸ್ವಾಭಿಮಾನಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ರಾಜೀನಾಮೆ ಕೇಳುವ ಆರ್‌ ಅಶೋಕ್‌ ಮೊದಲು ರಾಜೀನಾಮೆ ಕೊಡಬೇಕು. ಅವರು ಮೊದಲು ಕೊಡಲಿ. ಅವರಿಗೆ ರಾಜೀನಾಮೆ ಕೊಡಬೇಕು ಅನ್ನಿಸಿದ್ರೆ ಕೊಟ್ಟುಬಿಡಲಿ. ಆದರೆ ತಪ್ಪು ಮಾಡದ ನಾನ್ಯಾಕೆ ರಾಜೀನಾಮೆ ಕೊಡಬೇಕು, ಕಾನೂನು ಹೋರಾಟ ಮಾಡುತ್ತೇನೆ ಸತ್ಯಕ್ಕೆ ಜಯವಿದೆ ಎಂದರು. ಜಿ.ಟಿ. ದೇವೆಗೌಡ ಜೆಡಿಎಸ್ ಪಕ್ಷದ ಹಿರಿಯ ಮುಖಂಡರು. ದಸರಾ ಹಬ್ಬದ ಉದ್ಘಾಟನೆ ಕಾರ್ಯಕ್ರಮದಲ್ಲಿ…

Read More

ಮಂಡ್ಯ : ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ, ದಸರಾ ಆನೆಗಳು ಆಗಮಿಸಿವೆ. ಮಹೇಂದ್ರ ದಸರಾ ಅಂಬಾರಿಯನ್ನು ಹೊರಲಿದ್ದಾನೆ. ಈ ವೇಳೆ ಲಕ್ಷ್ಮಿ ಆನೆಯು ಕುದುರೆ ನೋಡಿ ಬೆಚ್ಚಿ ಬಿದ್ದಿದೆ. ಕೂಡಲೇ ಜನರು ದಿಕ್ಕಾಪಾಲಾಗಿ ಓಡಿದ್ದು ಭಾರಿ ಅನಾಹುತ ಒಂದು ತಪ್ಪಿದೆ. ಹೌದು ಇಂದು ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಪ್ರಮುಖ ಆಕರ್ಷಣೆ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ಇರಲಿದ್ದು, ಕಳೆದ ವರ್ಷದಂತೆ ಈ ವರ್ಷವೂ ಮಹೇಂದ್ರ 400 ಕೆಜಿ ತೂಕದ ಮರದ ಅಂಬಾರಿ ಸೇರಿ ಒಟ್ಟು 650 ಕೆಜಿ ತೂಕದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯನ್ನು ಸಾಗಲಿದೆ. ಈ ಒಂದು ಜಂಬೂಸವಾರಿಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿದ್ದು, ಮಹೇಂದ್ರ ಹಿರಣ್ಯ ಮತ್ತು ಲಕ್ಷ್ಮಿ ಹೆಸರಿನ ಆನೆಗಳು, ನಿನ್ನೆ ಸಂಜೆನೆ ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿವೆ.ಇಂದು ಲಕ್ಷ್ಮಿ ಆಣೆಯು, ಶ್ರೀರಂಗಪಟ್ಟಣ ರಂಗನಾಥ ಮೈದಾನದ ಬಳಿ ಬನ್ನಿಮಂಟಪದ ಬಳಿ ನಿಂತಿರುವ ಕುದುರೆಯನ್ನು ನೋಡಿ ಲಕ್ಷ್ಮಿ ಆನೆ ಕೆಲ ಕಾಲ ರಂಪಾಟ ನಡೆಸಿತ್ತು. ಅದರಿಂದ…

Read More

ಮುಂಬೈ : ತಮ್ಮದೇ ಪಿಸ್ತೂಲ್​​ನಿಂದ ಬಾಲಿವುಡ್ ನಟ ಗೋವಿಂದ್ ಗುಂಡು ಹಾರಿಸಿಕೊಂಡಿದ್ದರಿಂದ, ಆಕಸ್ಮಿಕವಾಗಿ ಫೈರ್​ ಆಗಿದ್ದರಿಂದ ಅವರ ಕಾಲಿಗೆ ತೀವ್ರ ಗಾಯ ಆಗಿತ್ತು. ನಂತರ ಅವರನ್ನು ಮುಂಬೈನ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೌದು ಕಳೆದ ಅಕ್ಟೊಬರ್ 1 ರಂದು ನಸುಕಿನ ಜಾವ ತಮ್ಮದೇ ಪಿಸ್ತುಲ್ ನಿಂದ ಗುಂಡು ಹಾರಿಸಿಕೊಂಡಿದ್ದರು. ಘಟನೆ ನಡೆದ ಬಳಿಕ ತಕ್ಷಣ ಅವರನ್ನು ಮುಂಬೈನ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಂಡ ನಂತರ ಗುಣಮುಖರಾಗಿ ನಟಗೋವಿಂದ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಡಿಎನ್ ಎ ಪರೀಕ್ಷೆ ಮಾಡಿಸಲು ನ್ಯಾಯಾಧೀಶರ ಅನುಮತಿ ಕೇಳಲು ಎಸ್‌ಐಟಿ ಅಧಿಕಾರಿಗಳು ಬಂದಿದ್ದರು. ಈ ವೇಳೆ ನ್ಯಾಯಲಯ ಡಿಎನ್ ಎ ಪರೀಕ್ಷೆ ನಡೆಸಲು ಅನುಮತಿ ನೀಡಿತು. ನ್ಯಾಯಾಧೀಶರ ಸಮ್ಮುಖದಲ್ಲಿಯೇ ಮುನಿರತ್ನ ರಕ್ತದ ಮಾದರಿ ಸಂಗ್ರಹ ಮಾಡಲು ಮುಂದಾದರು. ಹೌದು ಎಸ್‌ ಐಟಿ ಅಧಿಕಾರಿಗಳು ವೈದ್ಯರೊಂದಿಗೆ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಮುನಿರತ್ನವ ಅವರು, ತಮ್ಮ ವಕೀಲರು ಬರಬೇಕು, ಅವರ ಮುಂದೆಯೇ ಸ್ಯಾಂಪಲ್ಸ್ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮನವಿಯನ್ನ ಪುರಸ್ಕರಿಸಿ, ವಕೀಲರು ಬಂದ ಮೇಲೆ ಸ್ಯಾಂಪಲ್ಸ್ ತೆಗೆದುಕೊಳ್ಳಲು ಎಸ್‌ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಳಿಕ ಶಾಸಕ ಮುನಿರತ್ನ ಅವರ ವಕೀಲರು ಕೋರ್ಟಿಗೆ ಆಗಮಿಸಿದ್ದಾರೆ.ಈ ವೇಳೆ ನ್ಯಾಯಾಧೀಶರು ಮುನಿರತ್ನ ಅವರ ರಕ್ತದ ಮಾದರಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಹಾಗಾಗಿ ನ್ಯಾಯಾಧೀಶರ ಮುಂದೆ ಶಾಸಕ ಮುನಿರತ್ನ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ…

Read More

ಚಿತ್ರದುರ್ಗ : ಮುಡಾ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ 14 ಸೈಟ್ ಗಳ ಬೆಲೆ ರೂ.62 ಕೋಟಿ ರೂಪಾಯಿ ಕೊಡಿ ಎಂದು ಹೇಳಿಕೆ ನೀಡಿದ್ದರು.ಈ ಹೇಳಿಕೆಯನ್ನು ಅವರ ಹಿಂಬಾಲಕರಿಂದ ಕೇಳಿ ಹೇಳಿದ್ದರಿಂದ ಹಾಗಾಗಿ ಅವರ ಹಿಂಬಾಲಕರೇ ಅವರಿಗೆ ಖೆಡ್ಡಾ ತೋಡಿದ್ದಾರೆ.ಎಂದು ಚಿತ್ರದುರ್ಗದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಸೈಟ್ ಬೆಲೆ 80 ರಿಂದ 90 ಲಕ್ಷ ಎಂದೇ ಭಾವಿಸಿದ್ದೆವು. ಸಿಎಂ ಹಿಂದೆ ಇದ್ದ ವ್ಯಕ್ತಿ ಹೇಳಿದ್ದು ಕೇಳಿ 62 ಕೋಟಿ ಎಂದಿದ್ದರು ಸಿಎಂ ಸಿದ್ದರಾಮಯ್ಯ ಹಿಂಬಾಲಕರೇ ಅವರಿಗೆ ಖೆಡ್ಡಾ ತೋಡಿದ್ದಾರೆ ಎಂದು ಚಿತ್ರದುರ್ಗದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ದಸರಾ ಆಚರಣೆಯಲ್ಲಿ ಚಾಮುಂಡೇಶ್ವರಿಗೆ ಅಪಮಾನ ಮಾಡಿದ್ದಾರೆ.ಸರ್ಕಾರ ಪತನ ರಾಜೀನಾಮೆ ಬಗ್ಗೆ ಭಾಷಣ ಮಾಡಿದ್ದಾರೆ. ದಸರಾ ಉದ್ಘಾಟಿಸಿದ್ದು ಸಾಹಿತಿಯೋ ಯಾರೋ ನನಗೆ ಗೊತ್ತಿಲ್ಲ. ದಸರಾ ಉದ್ಘಾಟಕರು ಕೇಂದ್ರವನ್ನು ಟೀಕಿಸಿ ಭಾಷಣ ಮಾಡಿದ್ದಾರೆ. ಚಾಮುಂಡಿ…

Read More