Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗ ಡಗಳ ಅಭಿವೃದ್ಧಿ ನಿಗಮದ 187 ಕೋಟಿ ರು. ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ.ಈ ಒಂದು ಹಗರಣದಲ್ಲಿ ಸಚಿವರ ಹೆಸರು ಬರಬಾರದೆಂದು ನಾಗೇಂದ್ರ ಅವರ ಆಪ್ತರು ನನಗೆ ಧಮ್ಕಿ ಹಾಕಿದ್ದಾರೆಂದು ಆರೋಪಿ ಸತ್ಯ ನಾರಾಯಣ ವರ್ಮಾ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾನೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಅವ್ಯವಹಾರ ಆಗಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ತನ್ನ ಹೈದರಾಬಾದ್ ಮನೆಗೇ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ ಹೆಸರು ಹೊರಬರದಂತೆ ನೋಡಿಕೊಳ್ಳಬೇಕೆಂದು ಬೆದರಿಸಿದ್ದರು ಎಂದು ಆರೋಪಿ ಸತ್ಯ ನಾರಾಯಣ ವರ್ಮಾ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾನೆ. ನಾನು ಬಂಧನಕ್ಕೆ ಒಳಗಾಗುವ ಮುನ್ನ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತರು ಹೈದರಾಬಾದ್ನ ನನ್ನ ಮನೆಗೆ ಬಂದಿದ್ದರು. ಹಗರಣದಲ್ಲಿ…
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು ಸಿಐಡಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ. ತಮ್ಮ ಮನೆಗೆ ಸಹಾಯ ಕೋರಿ ತಾಯಿ ಜತೆ ಬಂದಿದ್ದಾಗ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪನವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ CID ಪೊಲೀಸರು, ನ್ಯಾಯಾಲಯಕ್ಕೆ ಯಡಿಯೂರಪ್ಪನವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಮುಂದಾಗಿದ್ದಾರೆ. ದೂರು ನೀಡಿದ ಸಂತ್ರಸ್ತೆ ಇದೀಗ ಸಾವನ್ನಪ್ಪಿದ್ದು ಆಕೆಯ ಸಹೋದರ ಈಗ ಬಿಎಸ್ ಯಡಿಯೂರಪ್ಪ ವಿರುದ್ಧ ಕಾನೂನು ಹೋರಾಟ ಮಾಡುತ್ತಿದ್ದು, ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ಹೊರ ರಾಜ್ಯದಿಂದ ರಾಜಧಾನಿ ಬೆಂಗಳೂರಿಗೆ ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ರೈಲ್ವೆ ಹೊರ ಗುತ್ತಿಗೆ ನೌಕರನೊಬ್ಬನನ್ನು ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರೈಲ್ವೆ ಹೊರಗುತ್ತಿಗೆ ನೌಕರ ದೀಪಸ್ ದಾಸ್ ಎಂದ್ ಹೇಳಲಾಗುತ್ತಿದ್ದು, ಆರೋಪಿಯಿಂದ 32 ಲಕ್ಷ ರು ಮೌಲ್ಯದ 32.8 ಕೆಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.ಬೆಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಡ್ ರೋಲರ್ ಆಗಿದ್ದ. ಆ ರೈಲಿನ ಸಿಬ್ಬಂದಿ ಬೋಗಿಯ ಬೆಡ್ ಶೀಟ್ಗಳಡಿ ಗಾಂಜಾ ತುಂಬಿದ್ದ ಕಿಟ್ ಬ್ಯಾಗನ್ನು ಇಟ್ಟುಕೊಂಡು ತ್ರಿಪುರಾ ದಿಂದ ಬೆಂಗಳೂರಿಗೆ ತಂದಿದ್ದ. ತ್ರಿಪುರಾದ ಆಗರ್ತಲಾದಿಂದ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್ಗೆ ಬಂದ ರೈಲ್ವೆನಲ್ಲಿ ಗಾಂಜಾ ಸಾಗಿಸುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿಬಂಧಿತನಾಗಿದ್ದಾನೆ ಎಂದು ರೈಲ್ವೆ ಎಸ್ಪಿ ಡಾ.ಎಸ್.ಕೆ.ಸೌಮ್ಯಲತಾ ತಿಳಿಸಿದ್ದಾರೆ. ಕಳೆದೊಂದು ವರ್ಷದಿಂದ ಗುತ್ತಿಗೆ ಆಧಾರದಡಿ ಡಿ ರೈಲ್ವೆ ಇಲಾಖೆಯಲ್ಲಿ ಕೆಲಸಮಾಡುತ್ತಿದ್ದ. ತ್ರಿಪುರಾದಲ್ಲಿ ಆತನಿಗೆ ಸುಮನ್ ಗಾಂಜಾ ಕೊಟ್ಟಿದ್ದು, ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾ ಣದಲ್ಲಿ ಬಿಸ್ವಜಿತ್ಗೆ ಗಾಂಜಾವನ್ನು ಆತ ತಲುಪಿಸಬೇಕಿತ್ತು. ಈ…
ನವದೆಹಲಿ : ಮಾಜಿ ಉಪ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ , ಬಿಜೆಪಿಯ ಹಿರಿಯ ನಾಯಕರಾಗಿರುವ ಎಲ್ ಕೆ ಅಡ್ವಾಣಿ ಅವರು ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಉಪ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ ಎಲ್ ಕೆ ಅಡ್ವಾಣಿ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರಿಗೆ ವಯೋ ಸಹಜ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂದು ಗೊತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಅಶ್ಲೀಲ ವಿಡಿಯೋ ಹಂಚಿದ್ದು ಯಾರು ಅಂತ ನಮಗೆ ಮಾಹಿತಿ ಇದೆ. ಸಾರ್ವಜನಿಕವಾಗಿ ಅನೇಕ ವಿಚಾರಗಳನ್ನು ಹಂಚಿಕೊಳ್ಳಲು ಆಗುವುದಿಲ್ಲ. ತನಿಖೆ ಮುಗಿದ ಬಳಿಕ ಸಾರ್ವಜನಿಕರಿಗೆ ಮಾಹಿತಿ ಗೊತ್ತಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದರು.
ಮೈಸೂರು : ಬಡವರಿಗಾಗಿ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲು ಗ್ಯಾರಂಟಿಗಳೆ ಕಾರಣ. ಗ್ಯಾರಂಟಿ ಯೋಜನೆಗಳಿಂದಲೇ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾರಣವಾಯಿತು. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಗಲಿಲ್ಲ. ಆದರೂ ರಾಜ್ಯದಲ್ಲಿ ನಾವು 9 ಸ್ಥಾನವನ್ನು ಗೆದ್ದಿದ್ದೇವೆ ಎಂದರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನನ್ನ ತಂದೆಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ. ವರುಣ ಕ್ಷೇತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ಬಿಟ್ಟು ಕೊಟ್ಟಿದ್ದೆ.ಹೀಗಾಗಿ ಪಕ್ಷದ ವರಿಷ್ಠರು ಹಿರಿಯರು ನನ್ನನ್ನು ಎಂಎಲ್ಸಿ ಮಾಡಿದ್ದಾರೆ.ಪಕ್ಷವು ಏನೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ.ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಮೈಸೂರಿನಲ್ಲಿ ಎಂಎಲ್ಸಿ ಡಾಕ್ಟರ್ ಯತೆಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ : ದರ್ಶನ್ ನೀಡಿದ್ದ 30 ಲಕ್ಷ ಹಣವನ್ನು ಆರೋಪಿಗಳಿಗೆ ಹಂಚಿದ್ದ ಪ್ರದೋಶ್!
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವಗಳನ್ನು ಪಡೆಯುತ್ತಿದೆ. ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಆರೋಪಿಗಳಿಗೆ ನಟ ದರ್ಶನ್ ನೀಡಿದ 30 ಲಕ್ಷ ರೂಪಾಯಿಗಳನ್ನು ಪ್ರಕರಣದ ಎ 14 ಆರೋಪಿ ಪ್ರದೋಶ್ ಹಣ ಹಂಚಿದ್ದಾನೆ ಎಂದು ತಿಳಿದುಬಂದಿದೆ. ಹೌದು ರೇಣುಕಾ ಸ್ವಾಮಿ ಕೊಲೆಯ ನಂತರ ಆತನ ಶವವನ್ನು ಸಾಗಿಸಲು ನಟ ದರ್ಶನ್ ಅವರು 30 ಲಕ್ಷ ನೀಡಿದ್ದರು ಎಂದು ಈಗಾಗಲೇ ಪ್ರದೋಷ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಇದೀಗ ಒಂದು ಹೇಳಿಕೆಗೆ ಸಂಬಂಧಪಟ್ಟಂತೆ ಪ್ರದೋಷ ಕೊಲೆ ಮಾಡಿದ ನಂತರ ಆರೋಪಿಗಳನ್ನು ತನ್ನ ನಿವಾಸಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲದೆ ಈತ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಕೂಡ ಆಗಿದ್ದ ಎನ್ನಲಾಗಿದೆ. ಪ್ರದೋಷ್ ಮನೆಯಲ್ಲಿರೋ ಸಿಸಿಟಿವಿಯನ್ನು ಇದೀಗ ಪೊಲೀಸರು ಡಿವಿಆರ್ ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯಕ್ಕೂ ಮೊದಲು ಆರೋಪಿಗಳು ಎಲ್ಲೆಲ್ಲಿ ಹೋಗಿದ್ದರು? ಹಾಗೂ ಮರ್ಡರ್ ಮಾಡಿದ ಬಳಿಕ ಯಾವ ಕಡೆ…
ಬೆಂಗಳೂರು : ರಾಜಕಾರಣಿ, ವಿಐಪಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಅವರನ್ನು ಹನಿ ಟ್ರ್ಯಾಪ್ ಮೂಲಕ ಬಲೆಗೆ ಬೀಳಿಸಿ ಕೊಂಡು ನಂತರ ಅವರಿಂದ ಕೋಟ್ಯಾಂತರ ರೂಪಾಯಿ ಹಣದ ಬೇಡಿಕೆ ಇಟ್ಟು ಬ್ಲ್ಯಾಕ್ ಮೆಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಂದು ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹೌದು ಹನಿ ಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಇದೀಗ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ.ಕೋಟ್ಯಾಂತರ ರೂಪಾಯಿಗೆ ಬೇಡಿಕೆ ಇಟ್ಟು ಆರೋಪಿಗಳು ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ದೂರು ದಾಖಲಿಸಿದ್ದರು. ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದರು.ಅಲ್ಲದೆ ವಿಶ್ವವಿದ್ಯಾಲಯ ಒಂದರ ಉಪಕುಲಪತಿಗೂ ಕೂಡ ಬ್ಲಾಕ್ ಮೇಲ್ ಮಾಡಿದ್ದರು. ಬಂಧಿತ ಆರೋಪಿಗಳ ಗ್ಯಾಂಗ್ನಲ್ಲಿ ಓರ್ವ ಯುವತಿ ಸಹ ಭಾಗಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಪ್ರಭಾವಿಗಳ ಸಂಪರ್ಕ ಮಾಡಿ ಆರೋಪಿಗಳು ಅವರನ್ನು ಫಾಲೋ ಮಾಡುತ್ತಿದ್ದರು.ಬಳಿಕ ವಿಐಪಿಗಳನ್ನು…
ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಳವಾಗುತ್ತಿದ್ದಂತೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಇದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ನಂದಿನಿ ಹಾಲಿನ ದರ ಏರಿಕೆ ಮಾಡಿರುವ ಎರಡು ರೂಪಾಯಿ ನೇರವಾಗಿ ರೈತರಿಗೆ ತಲುಪುತ್ತದೆ ಎಂದು ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರ ಏರಿಕೆ ಆಗಿರುವ 2 ರೂಪಾಯಿ ರೈತರಿಗೆ ತಲುಪುತ್ತದೆ. ರೈತರಿಗೆ ಹಣ ತಲುಪುವುದಿಲ್ಲ ಅನ್ನುವುದನ್ನು ಯಾರು ಹೇಳಿದರು? ಕೆಎಂಎಸ್ ಉಳಿದರೆ ರೈತರು ಉಳಿದಂತೆ. ರೈತರು ಸಾಲದಿಂದ ಹಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಬಿಜೆಪಿಯವರ ರೈತ ವಿರೋಧಿ ಧೋರಣೆ ಎದ್ದು ಕಾಣುತ್ತದೆ ಎಂದು ತಿಳಿಸಿದರು. ನಮ್ಮಲ್ಲಿ ಹಾಲಿನ ದರ ಎಷ್ಟಿದೆ, ಮಹಾರಾಷ್ಟ್ರದಲ್ಲಿ ಎಷ್ಟಿದೆ, ಬೇರೆ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ಎನ್ನುವುದನ್ನು ಬಿಜೆಪಿ ಅವರು ಮೊದಲು ತಿಳಿದುಕೊಳ್ಳಲಿ ಆಮೇಲೆ ಬೆಲೆ ಏರಿಕೆ ಕುರಿತು ಮಾತನಾಡಲಿ ಎಂದು ತಿರುಗೇಟು ನೀಡಿದರು. ಇನ್ನೂ ಇದೆ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ದರ ಹೆಚ್ಚಳ ಮಾಡಿರುವುದು ರೈತರು…
ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2. ರೂ.ಗಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ ಎಂದರು. ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದರು.ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು. ಕುರಿಗಾಹಿಗಳು ಕುರಿತ ಬಜೆಟ್ ಘೋಷಣೆಗಳಿಗೆ ಸರ್ಕಾರಿ ಆದೇಶ ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ, ಆಸ್ಪತ್ರೆಗಳಲ್ಲಿ ಔಷಧಿ, ಚಿಕಿತ್ಸೆ ದೊರೆಯಬೇಕು.…














