Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಜಯನಗರದಲ್ಲಿ ಐಷಾರಾಮಿ ಕಾರಿನಲ್ಲಿ ಪತ್ತೆಯಾಗಿದ್ದು 1.40 ರೂಪಾಯಿ ಎಂದು ಇದೀಗ ಚುನಾವಣಾ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದ್ದು ಸತತ ಎರಡು ಗಂಟೆಗಳ ಕಾಲ ಎರಡು ಮಿಷನ್ ಗಳಲ್ಲಿ ಹಣವನ್ನು ಎಣಿಸಿದ್ದು ಇದೀಗ ಎಣಿಕೆ ಕಾರ್ಯ ಮುಕ್ತವಾಗಿದ್ದು ಚುನಾವಣಾ ಅಧಿಕಾರಿಗಳು ಐಷಾರಾಮಿ ಕಾರಿನಲ್ಲಿ ಒಂದು ಕೋಟಿ ನಲವತ್ತು ಲಕ್ಷ ಹಣ ಪತ್ತೆಯಾಗಿದೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. https://kannadanewsnow.com/kannada/bjp-and-aimim-are-working-hand-in-hand-congress-leader-digvijaya-singh/ ಈ ಕುರಿತು ಚುನಾವಣೆ ಅಧಿಕಾರಿ ಮನೀಶ್ ಮೌದ್ಗಿಲ್ ಮಾಹಿತಿ ನೀಡಿದ್ದು ಎರಡು ಕಾರಿನಲ್ಲಿ ಹಣ ಇರಬಹುದು ಎಂಬ ಮಾಹಿತಿ ಬಂದಿತು ನಾನು ತಕ್ಷಣ ನಿಕಿತಾ ಅವರಿಗೆ ಕರೆ ಮಾಡಿದೆ. ಚುನಾವಣಾ ಅಧಿಕಾರಿ ನಿಕಿತಾ ಅವರು ಕಾರಿನಲ್ಲಿದ್ದ ಎರಡು ಬ್ಯಾಗ್ ಗಳನ್ನು ಗಳಿಸಿಕೊಂಡಿದ್ದರು ಒಂದು ಕಾರ್ ಅಲ್ಲಿಂದ ಪರಾರಿಯಾಗಿ ಹೋಗಿದ್ದು ಅದರಲ್ಲಿ ಇವರು ತಪ್ಪಿಸಿಕೊಂಡು ಹೋಗಿದ್ದಾರೆ ಒಂದು ಮರ್ಸಿಡಿಸ್ ಬೆಂಜ್ ಇನ್ನೊಂದು ವೋಕ್ಸ್ ವ್ಯಾಗನ್ ಕಾರ್ಲೆಂದು ಇನ್ನೊಂದು ಕಾರಿನಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮನೀಶ್ ಮೌದ್ಗಿಲ್ ಮಾಹಿತಿ ನೀಡಿದರು.…
ಹುಬ್ಬಳ್ಳಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, NIA ಕಠಿಣ ಪರಿಶ್ರಮದಿಂದ ಉಗ್ರರ ಬಂಧನವಾಗಿದೆ. ಆದರೆ ಕಾಂಗ್ರೆಸ್ ಜನರ ಜೀವ ಹಾಗೂ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು. https://kannadanewsnow.com/kannada/bengaluru-gokavaram-gang-arrested-for-stealing-mobile-phones-in-bmtc-bus-posing-as-passengers/ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ.ಗುಪ್ತಚರ ಇಲಾಖೆ ಶ್ರಮಪಟ್ಟು ಮಾಹಿತಿ ಸಂಗ್ರಹಿಸಿ ಎನ್ಐಎಗೆ ಮಾಹಿತಿ ನೀಡಿದೆ. ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾದಾಗ ದಾರಿ ತಪ್ಪಿಸುವ ಕೆಲಸ ನಡೆದಿತ್ತು. ಸಿಲಿಂಡರ್ ಫೋಟೋ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂದು ಡಿಸಿಎಂ ಹಾಗೂ ಗೃಹ ಸಚಿವರು ತನಿಖೆಯ ದಾರಿ ತಪ್ಪಿಸುವ ಕೆಲಸ ಮಾಡಿದ್ದರು ಎಂದು ಆರೋಪಿಸಿದರು. ಸರ್ಕಾರದ ವರ್ತನೆಯಿಂದ ಇಂತಹ ಘಟನೆಗಳಿಗೆ ಕುಮ್ಮಕ್ಕು ಸಿಗುತ್ತಿದೆ. ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಎನ್ ಐ ಎ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.ನಕಲಿ ದಾಖಲೆ ಸೃಷ್ಟಿಸಿ…
ಬೆಂಗಳೂರು : ಅವರು ಮೂಲತಃ ಆಂಧ್ರಪ್ರದೇಶದ ಗೋಕವರಂ ಗ್ರಾಮದವರು, ಅವರ ವೃತ್ತಿ ಕಳ್ಳತನ ಮಾಡೋದು, ಹೀಗಾಗಿ ಅವರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ಸಹಪ್ರಾಣಿಕರ ಮೊಬೈಲ್ ಗಳನ್ನು ಯಾಮರಿಸಿ ಗೊತ್ತಿಲ್ಲದೆ ಎಗರಿಸುತ್ತಿದ್ದರು.ಇದೀಗ 6ಜನರನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/breaking-foreign-handler-al-hind-link-revealed-in-rameswaram-cafe-blast/ ಬಂಧಿತರನ್ನು ರವಿತೇಜ, ವೆಂಕಟೇಶ್, ಬಾಲರಾಜ್, ಪೆದ್ದರಾಜ್, ರಮೇಶ್ ಹಾಗೂ ಸಾಯಿಕುಮಾರ್ ಎನ್ನಲಾಗಿದ್ದು, ಆರೋಪಿಗಳಿಂದ 30 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 107 ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದೆ.ಇನ್ನೊಂದು ಆಶ್ಚರ್ಯ ಸಂಗತಿ ಏನೆಂದರೆ ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿರುವ ಆರು ಮಂದಿ ಆರೋಪಿಗಳ ಪೈಕಿ ರವಿತೇಜ ಮತ್ತು ಪೆದ್ದರಾಜು ಒಡಹುಟ್ಟಿದ ಅಣ್ಣತಂಮ್ಮಂದಿರು. ಮತ್ತೊಬ್ಬ ಆರೋಪಿ ವೆಂಕಟೇಶ್, ರವಿತೇಜನ ಬಾವಮೈದುನ(ಪತ್ನಿಯ ತಮ್ಮ). ಈ ಮೂವರು ಹಾಗೂ ಉಳಿದ ಮೂವರು ಆರೋಪಿಗಳು ಗೋಕವರಂ ಹಳ್ಳಿ ನಿವಾಸಿಗಳೇ ಆಗಿದ್ದಾರೆ. https://kannadanewsnow.com/kannada/hassan-three-persons-were-seriously-injured-in-a-wild-elephant-attack-on-plantation-workers-in-hassan/ ಆರೋಪಿಗಳು ಬಿಎಂಟಿಸಿ ಬಸ್ಗಳಲ್ಲಿ ಕದ್ದ ಮೊಬೈಲ್ ಫೋನ್ಗಳನ್ನು ತಾವು ತಂಗಿದ್ದ ರೂಮ್ಗಳಲ್ಲಿ ಸಂಗ್ರಹಿಸುತ್ತಿದ್ದರು. ಒಮ್ಮೆಗೆ ನೂರು-ಇನ್ನೂರು ಮೊಬೈಲ್ ಸಂಗ್ರಹವಾದ ಬಳಿಕ ಆಂಧ್ರಪ್ರದೇಶಕ್ಕೆ…
ಹಾಸನ : ದಕ್ಷಿಣ ಕರ್ನಾಟಕ ಭಾಗದಲ್ಲಿ ಆಗಾಗ ಮನುಷ್ಯರ ಮೇಲೆ ಕಾಡಾನೆ ದಾಳಿಗಳು ಸಂಭವಿಸುತ್ತದೆ ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿ ಹಾಗೂ ಹುಲಿಮಕ್ಕಿ ಎಂಬಲ್ಲಿ ಕಾಡಾನೆ ದಾಳಿ ಮಾಡಿದ್ದರಿಂದ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿ, ಹುಲಿಮಕ್ಕಿ ಗ್ರಾಮದಲ್ಲಿ ಕಾಫಿ ತೋಟದಲ್ಲಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದೆ.ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹರೇಹಳ್ಳಿ ಹಾಗೂ ಹುಲೇಮಕಿ ಎಂಬ ಗ್ರಾಮದಲ್ಲಿ ಕಾಡಾನೆ ದಾಳಿ ಮಾಡಿದೆ. ದಾಳಿಯಿಂದ ಮಹಿಳೆ ಸೇರಿ ಮೂವರಿಗೆ ಗಂಭೀರವಾದಂತಹ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ. ಎರಡು ಕಾಡಾನೆಗಳಿಂದ ಪುಂಡಾಟ ನಡೆದಿದ್ದು, ಹಮೀದ್ ಎಂಬುವರ ತೋಟದಲ್ಲಿ ಸುಮಾರು 15 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ಕಾರ್ಮಿಕರ ಮೇಲೆ ದಾಳಿ ಮಾಡಿದೆ. ಮಹಿಳೆ ಸೇರಿ ಇಬ್ಬರನ್ನು ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿದೆ ಎಂದು ಹೇಳಲಾಗುತ್ತಿದ್ದು ಪಕ್ಕದ…
ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆಯನ್ನು ಕಟ್ಟುನೀಟ್ಟಾಗಿ ಪಾಲಿಸುತ್ತಿದ್ದರು ಕೂಡ ಅಲ್ಲಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದದ್ದು ಚುನಾವಣಾ ಅಧಿಕಾರಿಗಳು ಅಂತಹ ಕ್ರಮಗಳನ್ನು ತಡೆಗಟ್ಟಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಬೆಂಗಳೂರಿನ ಜಯನಗರದಲ್ಲಿ ಕಾರಿನೊಳಗಡೆ ಕೋಟ್ಯಾಂತರ ರೂಪಾಯಿ ಪತ್ತೆಯಾಗಿದ್ದು ಹಣ ಪತ್ತೆಯಾದ ತಕ್ಷಣ ಅಲ್ಲಿಂದ ಐವರು ಸ್ಥಳದಿಂದ ಪರಾರಿ ಯಾಗಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಜಯನಗರದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಮೂರ್ ಬ್ಯಾಗ್ ಗಾಲಲ್ಲಿ ಕೋಟ್ಯಾಂತರ ಹಣ ಪತ್ತೆಯಾಗಿದೆ. ಜಯನಗರದ ಒಂದು ಮರ್ಸಿಡಿಸ್ ಹಾಗು ಒಂದು ಕಾರಿನಲ್ಲಿ ಈ ಒಂದು ದೊಡ್ಡ ಮೊತ್ತದ ಹಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆ ಹಣವನ್ನು ಅಧಿಕಾರಿಗಳು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಠಾಣೆಗೆ ಹಣ ಎಣಿಸುವ ಮಷೀನ್ ತಂದ ಐಟಿ ಸಿಬ್ಬಂದಿ. ಇದೀಗ ಹಣ ಇರುವಂತಹ ಎರಡು ಕಾರುಗಳನ್ನು ಫ್ಲೈಯಿಂಗ್ ಸ್ಕ್ವಾಡ್ ವಶಪಡಿಸಿಕೊಂಡಿದೆ ಎನ್ನಲಾಗಿದೆ. ಬೆಂಗಳೂರಿನ ಜಯನಗರದಲ್ಲಿ ಈ ದೊಡ್ಡ ಮೊತ್ತ ಹಣ ಜಪ್ತಿ ಮಾಡಲಾಗಿದ್ದು ಹಣವನ್ನು ಜಯನಗರ ಠಾಣೆಗೆ ಅಧಿಕಾರಿಗಳು…
ಕೋಲಾರ : ಇದೆ ಏಪ್ರಿಲ್ 17ರಂದು ಕೋಲಾರ ಜಿಲ್ಲೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. 17ರಂದು ಮಧ್ಯಾಹ್ನ 3 ಗಂಟೆಗೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣಗೆ ರಾಹುಲ್ ಗಾಂಧಿ ಬರಲಿದ್ದಾರೆ. ರಾಹುಲ್ ಗಾಂಧಿ ಅವರು ಭಾಗಿಯಾಗುವ ಸಮಾವೇಶದಲ್ಲಿ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ತಿಳಿಸಿದರು. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಭಾಗಿಯಾಗುವ ಸಮಾವೇಶದಲ್ಲಿ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.ಆದರೆ ಈ ಸಂದರ್ಭದಲ್ಲಿ ಯಾವುದೇ ರೋಡ್ ಶೋ ಇರುವುದಿಲ್ಲ.ವೇದಿಕೆ ಕಾರ್ಯಕ್ರಮ ಮಾತ್ರ ಇರುತ್ತದೆ. ಈ ಒಂದು ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ನಗರ ಅಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ರಾಜ್ಯದಲ್ಲಿ ಒಕ್ಕಲಿಗ ದಂಗಲ್ ಕುರಿತು ಬೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು ಕುರುಬರು ದಲಿತರು…
ಮೈಸೂರು : ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭ್ರಷ್ಟರನ್ನು ಜೈಲಿಗೆ ಕಳುಹಿಸುವುದೇ ನನ್ನ ಕರ್ತವ್ಯ ಎಂದು ಹೇಳಿಕೆ ನೀಡಿದ್ದಾರೆ ಈ ಒಂದು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಚುನಾವಣಾ ಬಾಂಡ್ ಗಳ ಮೂಲಕ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿದ ಬಿಜೆಪಿ ಯಾಕೆ ತೆರಿಗೆ ಕಟ್ಟಿಲ್ಲ ಎಂದು ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. https://kannadanewsnow.com/kannada/do-you-know-without-these-organs-in-the-human-body-we-can-live-for-a-hundred-years/ ಇಂದು ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲಿ ಸಮೀಪ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸಾಕ್ಷ್ಯ ಇಲ್ಲದಿದ್ದರೂ ಜೈಲಿಗೆ ತಳ್ಳಿದ್ದಾರೆ. ಅದೇ ಐ.ಟಿ. ಇ.ಡಿ.ಯಂತಹ ಸಂಸ್ಥೆಗಳು ಬಿಜೆಪಿ ನಾಯಕರನ್ನು ಯಾಕೆ ಪ್ರಶ್ನಿಸುವುದಿಲ್ಲ ಎಂದು ಕೇಳಿದರು. https://kannadanewsnow.com/kannada/three-killed-in-lightning-strikes-in-vijayapura/ ಬಿಜೆಪಿ ರಾಜ್ಯದಲ್ಲಿ ಎಂದು ಪೂರ್ಣ ಜನಾಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಅವರಿಗೆ ಮುಂಬಾಗಿಲ ರಾಜಕಾರಣ ಗೊತ್ತಿಲ್ಲ. ಆಪರೇಷನ್ ಕಮಲ ಹೆಸರು ಬಂದಿದ್ದೇ ಯಡಿಯೂರಪ್ಪ ಅವರಿಂದ’…
ವಿಜಯಪುರ : ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ವರುಣ ಕೃಪೆ ತೋರಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದೂ, ಇನ್ನೊಂದು ಕಡೆ ವಿಜಯಪುರ ಜಿಲ್ಲೆಯಲ್ಲಿ ಸಿಡಿಲಾರ್ಭಟಕ್ಕೆ ಮೂವರು ವ್ಯಕ್ತಿಗಳು ಬಲಿಯಾಗಿರುವ ಘಟನೆ ಕೂಡ ನಡೆದಿದೆ. ಹೌದು ಇಂದು ಸುರಿದ ಭಾರಿ ಮಳೆಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲಿಗೆ ಭಾರತಿ ಕೆಂಗನಾಳ(40) ಎಂಬ ಮಹಿಳೆ ಬಲಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಭಾರತಿ ಕೆಂಗನಾಳ ಮೃತಪಟ್ಟಿದ್ದು, ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ಜರುಗಿದೆ. ಅಲ್ಲದೆ ನಿನ್ನೆ ಕೂಡ ಇಬ್ಬರು ಸಿಡಿಲಿನ ಹೊಡೆತಕ್ಕೆ ಬಲಿಯಾಗಿದ್ದು, ಇಂಡಿ ಪಟ್ಟಣದ ಹೊರವಲಯದಲ್ಲಿ ಸಿಡಿಲು ಬಡಿದು ಭೀಮಪ್ಪ ಅವರಾಧಿ 15 ವರ್ಷದ ಬಾಲಕ ಬಲಿಯಾಗಿದ್ದ. ಇನ್ನೂ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ 45 ವರ್ಷದ ಸೋಮು ಪಟ್ಟಣಶೆಟ್ಟಿ ಸಾವನ್ನಪ್ಪಿದ್ದರು. ಇಂದು ಸಹ ಮಹಿಳೆ ಸಿಡಿಲಿಗೆ ಬಲಿಯಾಗಿದ್ದು, ಸಿಡಿಲಾರ್ಭಟ ಮುಂದುವರೆದಿದೆ ಎಂದು ತಿಳಿದುಬಂದಿದೆ. ಇತ್ತ ಕೊಪ್ಪಳ ಜಿಲ್ಲೆಯಲ್ಲೂ ಕೂಡ…
ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ಗಂಟೆಗಳ ಕಾಲ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/fir-against-annamalai-for-allegedly-campaigning-after-10-pm/ ಅದೇ ರೀತಿಯಾಗಿ ದಾವಣಗೆರೆ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದೂ, 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಾಗಲಕೋಟೆ,ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ. https://kannadanewsnow.com/kannada/ambedkar-cant-come-pm-modi-hits-back-at-constitution-in-danger/ ಮುಂದಿನ 3 ಗಂಟೆಗಳ ಕಾಲ ಗಾಳಿ ಬೀಸಲಿದ್ದು ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದೂ, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಗಂಟೆಗೆ 30 ರಿಂದ…
ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಬೆಂಗಳೂರಿನ ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಸ್ಟರ್ಮೈಂಡ್ ಸೇರಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಅವರ ಅಡಗುತಾಣದಲ್ಲಿ ಪತ್ತೆಹಚ್ಚಿದ ನಂತರ ಬಂಧಿಸಿದೆ, ಇಬ್ಬರಿಗಾಗಿ ಒಂದು ತಿಂಗಳ ನಂತರ ಇದೀಗ ಬಂಧಿಸಿದೆ.ಈ ಕುರಿತಂತೆ NIA ಇದೀಗ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬೆಂಗಳೂರಿನ ಐಟಿ ಸಿಟಿಯಲ್ಲಿ ಸ್ಫೋಟ ಸಂಭವಿಸಿದಾಗಿನಿಂದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೆಬ್ ಪರಾರಿಯಾಗಿದ್ದರು. ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರು ಕುಳಿತುಕೊಳ್ಳುವ ಪ್ರದೇಶದ ಬಳಿ ಕೆಫೆಯ ಆಸನ ಪ್ರದೇಶದಲ್ಲಿ ಸ್ಫೋಟ ಸಂಭವಿಸಿತ್ತು. ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಹಾಕಿದ ವ್ಯಕ್ತಿ ಎಂದು ಎನ್ಐಎ ಗುರುತಿಸಿದೆ, ಆದರೆ ಅಬ್ದುಲ್ ಮಥೀನ್ ತಾಹಾ ಪಿತೂರಿಯ ಹಿಂದಿನ ಮಾಸ್ಟರ್ಮೈಂಡ್ ಮತ್ತು ಸ್ಫೋಟವನ್ನು ಯೋಜಿಸಿ ಕಾರ್ಯಗತಗೊಳಿಸಿದ್ದನು, ಇದರಿಂದಾಗಿ ಕೆಫೆಯಲ್ಲಿದ್ದ ಹಲವಾರು ಗ್ರಾಹಕರು ಮತ್ತು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು. ಅಬ್ದುಲ್ ಮಥೀನ್ ಅವರು ತಪ್ಪಿಸಿಕೊಳ್ಳುವ ಯೋಜನೆಗಳಲ್ಲಿ ಕೆಲಸ…