Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲುವಾಸ ಅನುಭವಿಸುತ್ತಿರುವ ಎಂಎಲ್ಸಿ ಸೂರಜ್ ರೆಮಣೆಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮ ದೌರ್ಜನ್ಯಕ್ಕೆ ಸಂಬಂಧಿಸಿ ದಂತೆ ಈಗ 2ನೇ ದೂರು ದಾಖಲಾಗಿದೆ. ಅವರ ಆಪ್ತನೇ ತನ್ನ ಮೇಲೆ ಮೂರು ವರ್ಷದಿಂದ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಸಲಿಂಗಕಾಮ ಪ್ರಕರಣದಲ್ಲಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಂಎಲ್ಸಿ ಡಾ.ಸೂರಜ್ ರೇವಣ್ಣ ಪರವಾಗಿ ಜೂ.21 ರಂದು ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾರ್ ಈಗ ಉಲ್ಟಾ ಹೊಡೆದಿದ್ದಾರೆ. ಸೂರಜ್ರಿಂದ ತನ್ನ ಮೇಲೂ 3 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ದೂರುದಾರನ ವಿರುದ್ಧ ದೂರು ನೀಡಲು ನನಗೆ ಒತ್ತಡ ವಿತ್ತು. ಸೂರಜ್ ಒತ್ತಡಕ್ಕೆ ಮಣಿದು ಅಂದು ದೂರು ನೀಡಿದ್ದೆ. ನನಗೆ ಬೆದರಿಕೆ ಹಾಕಿ ದೂರು ಕೊಡಿಸಿದ್ದರು. 3 ವರ್ಷಗಳ ಹಿಂದೆ ಗನ್ನಿಕಡ ತೋಟದ ಮನೆಯಲ್ಲಿ…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ರಾಹುಲ್ ಗಾಂಧಿಯವರಿಗೆ ಅಭಿನಂದಿಸಿದ್ದಾರೆ. ಟ್ವೀಟ್ ನಲ್ಲಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು. ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಿದರಾಹುಲ್ ಗಾಂಧಿಯವರು ಸಾಧನೆಯ ಮೂಲಕ ಈ ಪದವಿಯನ್ನು ಗಳಿಸಿದ್ದಾರೆ. ಸೈದ್ಧಾಂತಿಕ ಬದ್ಧತೆ, ದೂರದರ್ಶಿತ್ವ ಮತ್ತು ಜನಪರ ಕಾಳಜಿಯ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಡಳಿತ ಪಕ್ಷಕ್ಕೆ ಸಿಂಹ ಸ್ವಪ್ನರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. https://twitter.com/siddaramaiah/status/1805651630773485714?t=VWc9puT90BE5SGmX4QXrNg&s=19
ಬೆಂಗಳೂರು : ಜ್ಯುವೆಲರಿ ಶಾಪ್ ಗೆ ನುಗ್ಗಿದ ಕಳ್ಳರು ಮಾಲೀಕರಿಗೆ ಗನ್ ತೋರಿಸಿ ಕೇವಲ 30 ಸೆಕೆಂಡುಗಳಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ನಡೆದಿದೆ. ಹೌದು ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್ ನಲ್ಲಿ ಜುವೆಲ್ಲರಿ ಶಾಪ್ ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ. ಒಬ್ಬ ಕಳ್ಳ ಗನ್ ಹಿಡಿದು ಮಾಲೀಕರಿಗೆ ಬೆದರಿಕೆ ಹಾಕುತ್ತಿದ್ದ, ಮತ್ತೊಬ್ಬ ಚಿನ್ನಭಾರಣವನ್ನು ಚೀಲಕ್ಕೆ ತುಂಬಿಕೊಳ್ಳುತ್ತಿದ್ದ. ಇನ್ನೊಬ್ಬ ಕಳ್ಳ ಹೊರಗೆ ಬೈಕ್ ನಲ್ಲಿ ಕಾಯುತ್ತಿದ್ದ. ಹಾಗಾಗಿ ಇದು ಮೊದಲೇ ಪ್ಲಾನ್ ಮಾಡಿ ದರೋಡೆ ಮಾಡಿದಂತಿದೆ. ಕೆಲವೇ ಸೆಕೆಂಡಿನಲ್ಲಿ ಚಿನ್ನಾಭರಣಗಳನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. 750 ಗ್ರಾಂ ಗಿಂತ ಹೆಚ್ಚು ಚಿನ್ನ ಕದ್ದು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಒಂದು ಕಳ್ಳರ ಕೃತ್ಯ ಸಿಸಿ…
ಉತ್ತರಕನ್ನಡ : ತನ್ನ ಮದುವೆಯಾಗಿಲ್ಲ ಎಂದು ಮಾನಸಿಕವಾಗಿ ಮನನೊಂದಿದ್ದ ಯುವಕನೊಬ್ಬ ತಾನು ಮಲಗುವ ಕೋಣೆಯಲ್ಲಿ ನೇಣು ತೆಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಸ್ತೂರಬಾ ನಗರದಲ್ಲಿ ನಡೆದಿದೆ. ಕಸ್ತೂರಬಾನಗರದ ಇಬ್ರಾಹಿಂ ಬಾಷಾಸಾಬ ಮಲ್ಲಕ್ಕನವರ(25) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಹೇಳಲಾಗುತ್ತಿದ್ದು, ಈತ ಮಹಿಳೆಯೊಬ್ಬಳನ್ನು ಪ್ರೀತಿಸುತ್ತಿದ್ದ ಆದರೆ ಆಕೆಗೆ ತನ್ನ ಗಂಡನಿಂದ ವಿಚ್ಛೇದನ ದೊರೆಯಲು ವಿಳಂಬವಾಗಿದ್ದರಿಂದ, ಮಹಿಳೆ ಜೊತೆ ತನ್ನ ವಿವಾಹ ಆಗುವುದಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ತಕ್ಷಣ ಕುಟುಂಬಸ್ಥರು ಆತನನ್ನು ಚಿಕಿತ್ಸೆಗೆ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಈ ಕುರಿತಂತೆ ತಾಯಿ ಸಾಹೀರಬಾನು ಬಾಷಾಸಾಬ ಮಲ್ಲಕ್ಕನವರ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬೆಂಗಳೂರು : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಆಹಾರ ನಿಗಮದಲ್ಲಿ ಸಚಿವ ಕೆಹೆಚ್. ಮುನಿಯಪ್ಪ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು. ಸಭೆಯಲ್ಲಿ ಇಲಾಖೆಯಲ್ಲಿ ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ,ರಾಗಿ, ಜೋಳ, ಇವು ಗುಣಮಟ್ಟದಿಂರಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಇಲಾಖೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು. ಹೊಸ ಪಡಿತರ ಚೀಟಿ ಕೋರಿ ಕಳೆದ ಐದು ವರ್ಷಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಎಪಿಎಲ್, ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಿ ವಿಲೇವಾರಿ ಮಾಡಬೇಕು. ಇಲಾಖೆಯಲ್ಲಿ ಪಡಿತರ ದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ, ರಾಗಿ, ಜೋಳ ಇತ್ಯಾದಿ ಧಾನ್ಯಗಳ ಗುಣಮಟ್ಟ ಇರುವಂತೆ ಎಚ್ಚರವಿರಬೇಕು.ಗೌಡನ್ ಗಳಲ್ಲಿ ಸುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಗಳನ್ನು ಸರಬರಾಜು ಮಾಡಬೇಕು ಈ ಸಂದರ್ಭದಲ್ಲಿ ಸರ್ಕಾರದ…
ಕಲಬುರ್ಗಿ : ಮನ್ ರೇಗ ಕೆಲಸ ಆಕ್ಷನ್ ಪ್ಲಾನ್ ನೀಡಲು 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ಇಒ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕ ಪಂಚಾಯತ್ ನಲ್ಲಿ ನಡೆದಿದೆ. ಹೌದು ತಾಲೂಕು ಪಂಚಾಯತಿ ಇಒ ಮಹಾಂತೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, 20 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಗಿಬಿದ್ದಿದ್ದಾನೆ. 20 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಒ, ಮನ್ ರೇಗ ಕೆಲಸ ಆಕ್ಷನ್ ಪ್ಲಾನ್ ನೀಡಲು ತಾಲೂಕಿನ ಬಳ್ಳಿ ಗ್ರಾಮದ ನಬಿ ಲಾಲನಿಂದ ಲಂಚ ಸ್ವೀಕರಿಸುತ್ತಿದ್ದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾನೆ. ಲೋಕಾಯುಕ್ತ ಎಸ್ ಪಿ ಜಾನ್ ಆಂಟನಿ ನೇತ್ರತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.
ಬೆಂಗಳೂರು : ನಿಗಮ-ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ತಿಂಗಳೊಳಗೆ ಪಟ್ಟಿ ಸಿದ್ದಪಡಿಸಿ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟೂವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದರು. ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡ ಬೇಕು ಎಂಬ ಒತ್ತಾಯದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಂಪುಟ ಪುನಾರಚನೆ ಬಗ್ಗೆ ನಾನು ಏನೂ ಹೇಳಲು ಹೋಗುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಎಲ್ಲವು ಹೈಕಮಾಂಡ್ಗೆ ಬಿಟ್ಟದ್ದು ಎಂದರು.
ಬೆಂಗಳೂರು: ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯುತ್ಸವದ ಅಂಗವಾಗಿ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಮತ್ತು ಸಾಧನೆಯನ್ನು ಕುರಿತ ಅಂಶಗಳನ್ನು ಒಳಗೊಂಡ ಭಾಷಣ, ಪ್ರಬಂಧ ಸ್ಪರ್ಧೆ ಸೇರಿ ದಂತೆ ಇನ್ನಿತರ ಚಟುವಟಿಕೆಗಳನ್ನು ಆಯೋಜಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಹಿಂದೆ ನಡೆಸಲು ಉದ್ದೇಶಿಸಿದ್ದ ಚರ್ಚಾ ಸ್ಪರ್ಧೆಯ ಬದಲಾಗಿ ಭಾಷಣ ಮತ್ತು ಪ್ರಬಂಧಸ್ಪರ್ಧೆ ಹಾಗೂ ಜಿಲ್ಲಾಧಿಕಾರಿ, ಜಿಲ್ಲಾಡಳಿತ ತೀರ್ಮಾನಿಸುವ ಇನ್ನಿತರ ಚಟುವಟಿಕೆ ನಡೆಸುವಂತೆ ಪರಿಷ್ಕೃತ ಸುತ್ತೋಲೆ ಹೊರಡಿಸಲಾಗಿದೆ. ಈ ಕಾರ್ಯಕ್ರಮಗಳಿಗಾಗಿ ಈಗಾಗಲೇ ಪ್ರತಿ ತಾಲ್ಲೂಕು ಬಿಇಒಗಳಿಗೆ ತಲಾ ಒಂದು ಲಕ್ಷ ರು. ಅನುದಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿದೆ. ಆದ್ದ ರಿಂದ ಬಿಇಒಗಳು ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿನ ದೈನಂದಿನ ಪಾಠ – ಪ್ರವಚನಗಳಿಗೆ ತೊಂದರೆ ಆಗದಂತೆ ಕೆಂಪೇಗೌಡರ ಕುರಿತು ಭಾಷಣ, ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲು ಇಲಾಖೆ ಆಯುಕ್ತ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧೀಕರಣಕ್ಕೆ (KAT) ಸದಸ್ಯರನ್ನು ನೇಮಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ಕುರಿತಂತೆ ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಜರಾಗಿ, ಸರ್ಕಾರಿ ನೌಕರರ ಸೇವಾ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯಗಳನ್ನು ಕೆಎಟಿ ವಿಚಾರಣೆ ನಡೆಸಲಿದೆ. ಬೆಂಗಳೂರಿನಲ್ಲಿ ಕೆಎಟಿಯ ಪ್ರಧಾನ ಪೀಠವಿದ್ದರೆ, ಕಲಬುರಗಿ ಹಾಗೂ ಬೆಳಗಾವಿಯಲ್ಲಿ ಪ್ರಾದೇಶಿಕ ಪೀಠಗಳಿವೆ. ಕೆಎಟಿಯಲ್ಲಿ ಅಧ್ಯಕ್ಷರಲ್ಲದೇ ಒಟ್ಟು 9 ಮಂದಿ ಸದಸ್ಯರ ಹುದ್ದೆಗಳಿವೆ. ಅದರಲ್ಲಿ ಅಧ್ಯಕ್ಷ,ಇತರೆ 4ನ್ಯಾಯಾಂಗ ಸದಸ್ಯರ ಹುದ್ದೆಗಳಿ ವೆ. ಪ್ರಧಾನ ಪೀಠದಲ್ಲಿ ಅಧ್ಯಕ್ಷರು ಸೇರಿ ಇಬ್ಬರು ನ್ಯಾಯಾಂಗ ಸದಸ್ಯರಿದ್ದಾರೆ. 3 ಕೋರ್ಟ್ ಹಾಲ್ಗಳಿವೆ. ಪ್ರಾದೇಶಿಕ ಪೀಠದಲ್ಲಿ ತಲಾ1 ಕೋರ್ಟ್ ಹಾಲ್ಗಳಿವೆ ಎಂದು ಅವರು ನ್ಯಾಯಾಧಿಶರಿಗೆ ವಿವರಿಸಿದರು. ಈ ಕುರಿತಂತೆ ವಕೀಲ ನರಸಿಂಹರಾಜು ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರತಿವಾದಿಗಳಾದ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ…
ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಮತ್ತೊಂದು FiR ದಾಖಲಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಮತ್ತೊಂದು FIR ದಾಖಲಾಗಿದೆ. ಹೊಳೆನರಸೀಪುರ ಮೂಲದ ಯುವಕನಿಂದ ಈ ಒಂದು ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. 3 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವಕ ದೂರನ್ನು ಸಲ್ಲಿಸಿದ್ದಾನೆ. ಸಂತ್ರಸ್ತನ ದೂರನ್ನು ಆಧರಿಸಿ ಇದೀಗ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 377, 342, 506 ಅಡಿ ಪ್ರಕರಣ ದಾಖಲಾಗಿದೆ. ಹೌದು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಸಂತ್ರಸ್ತನಿಂದ ದೂರು ಸಲ್ಲಿಕೆಯಾಗಿದೆ. 4 ವರ್ಷಗಳ ಹಿಂದೆ ಕೋವಿಡ್ ಸಮಯದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ನಾಲ್ಕು ದಿನಗಳ ಹಿಂದೆ ಸೂರಜ್ ಪರವಾಗಿ ದೂರು ಕೊಟ್ಟಿದ್ದ ಯುವಕ ಇಂದು ಅದೇ ಯುವಕನಿಂದ ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ…














