Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಕಾರ್ಪೊರೇಷನ್ ಕಸದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೋಚಿಂಗ್ ಕ್ಲಾಸ್ ಗೆ ತೆರಳುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹಿಮ್ಸ್ ಆಸ್ಪತ್ರೆಯ ಹಿಂಭಾಗ ಈ ಒಂದು ಅಪಘಾತ ಸಂಭವಿಸಿದೆ. ಯುವಕ ಅಧ್ವೈತ್ ಮತ್ತು ಆತನ ಸ್ನೇಹಿತ ಇಬ್ಬರು ಬೈಕ್ನಲ್ಲಿ ಕೋಚಿಂಗ್ ಕ್ಲಾಸ್ಗೆ ತೆರಳುತ್ತಿದ್ದರು. ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಸದ ಗಾಡಿಗೆ ಬೈಕ್ ಡಿಕ್ಕಿಯಾಗಿ ಅಧ್ವೈತ್ (18) ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ವಿವೇಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡಂತಹ ವಿವೇಕ್ ಎನ್ನುವ ಯುವಕನಿಗೆ ಸದ್ಯ ಹುಬ್ಬಳ್ಳಿಯ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಪುರ : ವಿಜಯಪುರ ಸಿಂದಗಿ ರಸ್ತೆಯಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ಇಂದು ಮಾಲೀಕನೊಬ್ಬ ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ ಕೋಪಗೊಂಡು ಇಬ್ಬರು ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ವಿಜಯಪುರ ಸಿಂದಗಿ ರಸ್ತೆಯಲ್ಲಿರುವಂತಹ ಇಟ್ಟಂಗಿ ಭಟ್ಟಿಯ ಮಾಲೀಕ ಖೇಮು ರಾಠೋಡ್ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ನಿವಾಸಿಗಳಾದಂತಹ ಸದಾಶಿವ ಹಾಗೂ ಉಮೇಶ್ ಮಾದರ್ ಎನ್ನುವ ಕಾರ್ಮಿಕರಿಗೆ ಅಲ್ಲೇ ಇದ್ದಂತಹ ಪ್ಲಾಸ್ಟಿಕ್ ಪೈಪ್ ಗಳಿಂದ ಅಂಗಾಲಿಗೆ ಭೀಕರವಾಗಿ ಹಲ್ಲೆ ನಡೆಸಿದ್ದ. ಸದಾಶಿವ ಹಾಗೂ ಉಮೇಶ್ ನಮ್ಮನ್ನು ಬಿಟ್ಟು ಬಿಡಿ ಎಂದು ಎಷ್ಟೇ ಗೊಗರೆದರೂ ಕೂಡ ಕನಿಕರವಿಲ್ಲದೆ ಖೇಮು ರಾಠೋಡ್ ಹಲ್ಲೆ ನಡೆಸಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ಒಂದು ಘಟನೆಯಲ್ಲಿ…
ಬೆಂಗಳೂರು : ಬೆಂಗಳೂರಿನ ಮಾಪನ ಸೌಧ ಮೇಲೆ ಇಂದು ದಿಢೀರ್ ಆಗಿ ಲೋಕಾಯುಕ್ತ ದಾಳಿ ಮಾಡಿದೆ. ಲಂಚಕ್ಕೆ ಬೇಡಿಕೆ ಹಾಗೂ ಫೈಲ್ ಪೆಂಡಿಂಗ್ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ.ಬಿಎಸ್ ಪಾಟೀಲ್, ಉಪಲೋಕಾಯುಕ್ತ ನ್ಯಾ.ಬಿ ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಉಪ ಲೋಕಾಯುಕ್ತ ಫಾಣಿಂದ್ರ ಸಹ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ವೇಳೆ 6 ಎಸ್ ಪಿ ಸೇರಿದಂತೆ 30ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಮುಂದಿನ 10 ದಿನಕ್ಕೂ ಹಾಜರಾತಿ ಸಹಿ ಮಾಡಿದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮಾಪನಸೌಧದ ರೆಜಿಸ್ಟರ್ ಬುಕ್ ಇಟ್ಕೊಂಡು ತರಾಟೆ ತೆಗೆದುಕೊಂಡಿದ್ದಾರೆ. ಈ ವೇಳೆ ನ್ಯಾ. ವೀರಪ್ಪ ಸಿಬ್ಬಂದಿಗಳ ಫೋನ್ ಪೇ ಚೆಕ್ ಮಾಡಿದ್ದಾರೆ. ಮೊಬೈಲ್ ನಲ್ಲಿ ಹಣ ವರ್ಗಾವಣೆ ಮಾಡಿಕೊಂಡ ಮಾಹಿತಿ ಇದೀಗ ತಿಳಿದು ಬಂದಿದೆ. ಹೀಗಾಗಿ ಅಧಿಕಾರಿಗಳ ಫೋನ್ ಪೇ ಗಳನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ. 50 ಸಾವಿರದಿಂದ ರಿಂದ 1 ಲಕ್ಷ ಹೇಗ್ರಿ ನಿಮ್ಮ ಅಕೌಂಟಿಗೆ ಬಂತು ಎಂದು…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಇಡಿ ಅಧಿಕಾರಿಗಳು 30 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿಕೊಂಡಿದ್ದು ಅಲ್ಲದೆ ಪ್ರಕಟಣೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಹೆಸರುಗಳನ್ನು ಉಲ್ಲೇಖಿಸಿತ್ತು ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜಕೀಯ ದುರುದ್ದೇಶದಿಂದ ಇಡಿ ಇಂದ ಪ್ರಕಟಣೆ ರಿಲೀಸ್ ಮಾಡಿಸಿದೆ ಎಂದು ಗಂಭೀರವಾದ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆಯ ಬಗ್ಗೆ ಇಡಿ ಮಾಧ್ಯಮ ಪ್ರಕಟಣೆ ವಿಚಾರವಾಗಿ ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಉದ್ದೇಶಪೂರ್ವಕವಾಗಿ ತನಿಖೆ ಮಾಡುತ್ತಿದ್ದಾರೆ 50:50 ಅನುಪಾತ ಸೈಟ್ಗಳನ್ನು ಮುಟ್ಟುಗಳು ಹಾಕಿದ್ದೇವೆ ಅಂತಾರೆ ಆದರೆ ಅದಕ್ಕೂ ನನಗೂ ಸಂಬಂಧ ಇಲ್ಲ ಬಿಜೆಪಿ ಇಡೀಯಿಂದ ಮಾಧ್ಯಮ ಪ್ರಕಟಣೆ ರಿಲೀಸ್ ಮಾಡಿಸಿದೆ ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಇದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇನ್ನು ರಾಜ್ಯದ ಹಲವು ಕಡೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಊರು ಬಿಡುತ್ತಿರುವ ವಿಚಾರಕ್ಕೆ…
ವಿಜಯಪುರ : ವಿಜಯಪುರದಲ್ಲಿ ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ ಕಾರ್ಮಿಕರ ಮೇಲೆ ಇಟ್ಟಂಗಿಯ ಭಟ್ಟಿಯ ಮಾಲೀಕನೊಬ್ಬ ಮರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಅಮಾನವೀಯ ಘಟನೆಯಾಗಿದ್ದು, ಈ ಒಂದು ಘಟನೆಯಲ್ಲಿ ತಪ್ಪಿತಸ್ಥ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಕಾರಣಕ್ಕೂ ಹಲ್ಲೆ ಮಾಡಿದಂತಹ ವ್ಯಕ್ತಿಗಳನ್ನು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೆ ವೇಳೆ ತಿಳಿಸಿದರು. ಇನ್ನು ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಎಂಬಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿ, ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ಎಸ್ಪಿ ಜೊತೆ ಮಾತಾಡಿ ಮಾಹಿತಿ ಪಡೆದಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಅಲ್ಲಿದ್ದವರೇ ಸಂಧಾನಕ್ಕೆ ಮುಂದಾಗಿದ್ದರು ಆದರೆ ಪೊಲೀಸರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ಎಂ ಪಾಟೀಲ್ ತಿಳಿಸಿದರು.
ಕೋಲಾರ : ಸದ್ಯ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದ್ಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ ಜೋರಾಗಿ ನಡೆದಿದೆ ಇದರ ಮಧ್ಯ ನಗರ ಅಭಿವೃದ್ಧಿ ಸಚಿವ ಭಾರತಿ ಸುರೇಶ್ ಅವರು, ಸಿಎಂ ಹಾಗೂ ಕೆಪಿಸಿಸಿ ಎರಡು ಸ್ಥಾನಗಳು ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದು ತಿಳಿಸಿದರು. ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಯಾವ ಪವರ್ ಶೇರಿಂಗ್ ಇಲ್ಲ ಕೇರಿಂಗು ಇಲ್ಲ. ಸಿಎಂ ಸ್ಥಾನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡೂ ಬದಲಾಗುವುದಿಲ್ಲ.ಈ ಎರಡು ಹುದ್ದೆಯ ಬದಲಾವಣೆಯಿಂದ ಹೈ ಕಮಾಂಡ್ ನಿಂದ ಮಾತ್ರ ಸಾಧ್ಯ. ಕೈಮೀರಿ ಅಭಿವೃದ್ಧಿ ಮಾಡಲು ನಾವೆಲ್ಲರೂ ಪ್ರಯತ್ನ ಮಾಡುತ್ತಿದ್ದೇವೆ. ಪ್ರತ್ಯೇಕ ಸಭೆ ಮಾಡದಂತೆ ಈಗಾಗಲೇ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ವಿಚಾರಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೋಲಾರದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ಕೋಲಾರದಲ್ಲಿ ನಾಲ್ವರು ಸಚಿವ…
ಬೆಳಗಾವಿ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಬದಲಾಯಿಸಿ ಎಂದು ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ದೂರು ನೀಡುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ಸ್ಪಷ್ಟನೆ ನೀಡಿದ್ದು, ಅದೆಲ್ಲಾ ಸುಳ್ಳು ಎಂದು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರ್ಜೆವಾಲ ವಿರುದ್ಧ ಹಲವು ನಾಯಕರು ದೂರು ನೀಡಿರುವ ವಿಚಾರವಾಗಿ, ಅದೆಲ್ಲ ನಿಮಗೆ ಯಾರು ಹೇಳಿದ್ದು? ನಿಮಗೆ ಸುಳ್ಳು ಹೇಳಿ ನಿಮ್ಮ ಇಮೇಜ್ ಹಾಳು ಮಾಡುತ್ತಿದ್ದಾರೆ. ನಿನ್ನೆ ಫಿರೋಜ್ ಸೇಠ್ ಮನೆಗೆ ಹೋದರೆ ನೀವೆಲ್ಲ ನಿಮ್ಮದೇ ಸ್ಟೋರಿ ಬಿಲ್ಡ್ ಮಾಡಿದ್ದೀರಿ ಎಂದು ತಿಳಿಸಿದರು. ಫಿರೋಜ್ ಸೇಠ್ ನಮ್ಮ ಜೊತೆ ಎರಡು ಸಾರಿ ಎಂಎಲ್ಎ ಆಗಿ ಕೆಲಸ ಮಾಡಿದ್ದಾರೆ, ಒಳ್ಳೆ ಹಿರಿಯ ನಾಯಕರಾಗಿದ್ದಾರೆ. ಸಂಘಟನೆಯ ದೃಷ್ಟಿಯಿಂದ ನಾನು ಮತ್ತು ಜಿಲ್ಲಾಧ್ಯಕ್ಷರು ಹೋಗಿ ಭೇಟಿ ಮಾಡಿ ಚರ್ಚಿಸಿದ್ದೇವೆ. ಅದನ್ನೇ ನೀವು ಬೇರೆ ರೀತಿಯಲ್ಲಿ ಬಿಲ್ಡ್ ಮಾಡಿ ಸ್ಟೋರಿ…
ಬೆಂಗಳೂರು : ಇಂದು ಬೆಳಿಗ್ಗೆ 10.25ಕ್ಕೆ ಬೆಂಗಳೂರಿನ ಜಾಲಹಳ್ಳಿ ಬಳಿ ಇರುವ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿ ಒಬ್ಬರು ಹಳಿಯ ಮಧ್ಯ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಬಿ ಎಂ ಆರ್ ಸಿ ಎಲ್ ಸ್ಪಷ್ಟನೆ ನೀಡಿದೆ. ಪ್ರಕರಣದ ಕುರಿತು ಬಿಎಮ್ಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಇಂದು ಸುಮಾರು 10.25 ಗಂಟೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಾಗ ಸುಮಾರು 49 ವರ್ಷ ವಯಸ್ಸಿನ ಬಿಹಾರದ ಮಾಜಿ ವಾಯುಪಡೆಯ ಶ್ರೀ. ಅನಿಲ್ ಕುಮಾರ್ ಪಾಂಡೆ ಎಂಬ ವ್ಯಕ್ತಿ ಟ್ರ್ಯಾಕ್ ಮೇಲೆ ಹಾರಿದ್ದಾರೆ. ಘಟನೆಯ ನಂತರ ತಕ್ಷಣವೇ ಎಮರ್ಜೆನ್ಸಿ ಟ್ರಿಪ್ ಸಿಸ್ಟಂ ETS ಅನ್ನು BMRCL ಸಿಬ್ಬಂದಿ ಮತ್ತು ತಂಡವು ನಿರ್ವಹಿಸಿ ಹಾಗು ಅವರನ್ನು ರಕ್ಷಿಸಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ. ಸಂಪೂರ್ಣ ಹಸಿರು ಮಾರ್ಗದಲ್ಲಿ ರೈಲು ಸೇವೆಗಳ ಎಂದಿನಂತೆ 10.50 ಗಂಟೆಗೆ ಪುನರಾರಂಭಿಸಲಾಯಿತು. ಈ ಅವಧಿಯಲ್ಲಿ 10.25 ಗಂಟೆಯಿಂದ…
ಹುಬ್ಬಳ್ಳಿ : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು ನೂತನ ಅಧ್ಯಕ್ಷ ಆಯ್ಕೆ ಆಗಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತೀವ್ರ ತಾರಕಕ್ಕೆ ಏರಿದ್ದು, ಇದೀಗ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಿಎಸ್ ಯಡಿಯೂರಪ್ಪ ಹಾಗೂ ಅವರ ಚೇಲಾಗಳು ಎಷ್ಟು ಲೂಟಿ ಮಾಡಿದ್ದಾರೆ ಎನ್ನುವುದರ ಕುರಿತು ಎಲ್ಲಾ ದಾಖಲೆಗಳು ನನ್ನ ಬಳಿ ಇವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾವು ಸಿದ್ಧ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾವು ಚುನಾವಣೆ ಮಾಡೇ ಮಾಡುತ್ತೇವೆ. ಅಭ್ಯರ್ಥಿ ಯಾರೇ ಅಗಲಿ ನಾವು ಚುನಾವಣೆ ಮಾಡುತ್ತೇವೆ. ವಿಜಯೇಂದ್ರನನ್ನು ಬದಲಾವಣೆ ಮಾಡಲು ನಮ್ಮ ಹೋರಾಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ನನ್ನ ವಿರುದ್ಧ…
ವಿಜಯಪುರ : ವಿಜಯಪುರದಲ್ಲಿ ಅಮಾನವೀಯ ಘಟನೆ ನಡೆದಿದ್ದು ಕೂಲಿ ಕಾರ್ಮಿಕರನ್ನು ಮಾಲೀಕನೊಬ್ಬ ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಡೆದಿದೆ. ಇಟ್ಟಂಗಿ ಭಟ್ಟಿ ಮಾಲೀಕ ಈ ಒಂದು ರಾಕ್ಷಸಿಯ ಕೃತ್ಯ ಎಸಗಿದ್ದಾನೆ. ಮಾಲಿಕ ಖೇಮು ರಾಠೋಡ್ ಎಂಬಾತ ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹೌದು ವಿಜಯಪುರ ಸಿಂದಗಿ ರಸ್ತೆಯಲ್ಲಿರುವ ಇಟ್ಟಂಗಿ ಬಟ್ಟೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಸದಾಶಿವ ಹಾಗೂ ಉಮೇಶ್ ಮಾದರ್ ಎನ್ನುವ ಕಾರ್ಮಿಕರ ಮೇಲೆ ಮಾಲೀಕ ಹಲ್ಲೆ ಖೇಮು ನಡೆಸಿದ್ದಾನೆ. ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ಸ್ವಲ್ಪ ತಡವಾಗಿತ್ತು. ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ಬಂದಿಲ್ಲ ಎಂದು ಇಟ್ಟಂಗಿ ಭಟ್ಟಿಯ ಮಾಲೀಕ ಹಲ್ಲೆ ಮಾಡಿದ್ದಾನೆ. ಭಟ್ಟಿಯಲ್ಲಿದ್ದ ಪೈಪ್ ಗಳಿಂದ ಮಾಲೀಕ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ವಿಜಯಪುರ ನಗರದ ಸಿಂದಿಗೆ ರಸ್ತೆಯಲ್ಲಿರುವ ಇಟ್ಟಂಗಿ ಬಟ್ಟೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರ್ಮಿಕರಾದಂತಹ ಸದಾಶಿವ ಹಾಗೂ ಉಮೇಶ್ ನನ್ನು ಕೆಳಗೆ ಕೂಡಿಸಿ ಅಂಗಾಲಿಗೆ ಇಬ್ಬರು ವ್ಯಕ್ತಿಗಳು ಫೈಬರ್ ಪೈಪ್…













