Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಹೆಂಡತಿಗೆ ತವರಿನಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪ್ರತಿದಿನ ಗಂಡ ಕಿರುಕುಳ ನೀಡುತ್ತಿದ್ದ, ಅಲ್ಲದೆ ಆಸ್ತಿಗಾಗಿ ಪತ್ನಿಯ ಮೇಲೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ (30) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ.ಕೊಲೆ ಮಾಡಿದ ಪತಿಯನ್ನು ರಮೇಶ್ ಎಂದು ಹೇಳಲಾಗುತ್ತಿದೆ.ಕೆಲವು ವರ್ಷಗಳ ಹಿಂದೆ ಅಶ್ವಿನಿಯನ್ನು ಮದಿವೆ ಮಾಡಿಕೊಂಡಿದ್ದ ರಮೇಶ್, ವರದಕ್ಷಿಣೆ ಹಾಗೂ ಆಸ್ತಿ ವಿಚಾರಕ್ಕೆ ಹೆಂಡತಿ ಮತ್ತು ಅವರ ಮನೆಯವರೊಂದಿಗೆ ಜಗಳ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಆದರೆ, ಇಂದು ಜಮೀನ ಬಳಿ ಇರುವಾಗಲೇ ಇಬ್ಬರ ನಡುವೆಯೂ ಜಗಳ ಆರಂಭವಾಗಿದೆ. ತೆಂಗಿನ ತೋಟದಲ್ಲಿ ಗಂಡ ಹೆಂಡತಿ ಮಧ್ಯೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಈ ವೇಳೆ ರಮೇಶ್ ಅಶ್ವಿನಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ.ಪತ್ನಿ ಎನ್ನುವುದನ್ನೂ ನೋಡದೆ ಎದೆ, ಕತ್ತು, ತಲೆ ಸೇರಿದಂತೆ ಹಲವು ಭಾಗಗಳಲ್ಲಿ ರಮೇಶ್ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ನಂತರ ಹೆಂಡತಿ ಸಾವನ್ನಪ್ಪಿರುವುದನ್ನು ಖಚಿತಪಡಿಸಿಕೊಂಡು ಅಲ್ಲಿಂದ…
ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ವಿಶ್ವನನ್ನು ಇದೀಗ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಅಲ್ಲದೆ ಇಂದು ಮೃತ ಅಂಜಲಿ ಮನೆಯಲ್ಲಿ ವಿಶ್ವ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರೈಲಿನಿಂದ ಬಿದ್ದು ಗಾಯಗೊಂಡಿದ್ದ ಹಂತಕ ವಿಶ್ವನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರ್ಕಾರ ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಿದ ನಂತರ ನಿನ್ನೆ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮಿಸಿತ್ತು ಇಂದು ಕಿಂ ಶಾಸ್ತ್ರಿ ಗೆ ಭೇಟಿ ನೀಡಿ, ಆರೋಪಿ ವಿಶ್ವನ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ನಂತರ ಆತನನ್ನು ವಶಕ್ಕೆ ಪಡೆಯದ ಸಿಐಡಿ ಅಧಿಕಾರಿಗಳು ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಅಲ್ಲಿ ಆರೋಪಿ ವಿಶ್ವನ ತಾಯಿ ಶೋಭಾ ಅವರನ್ನು ಕರೆಸಿದ್ದು ಅವರನ್ನು ಕೂಡ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಗಾಗಿ ಹಂತಕ ಅಭಿಮಾನನ್ನು ಕರೆದುಕೊಂಡು ಹೋಬಳಿಯ ವೀರಾಪುರ ಓಣಿಯಲಿರುವ ಮೃತ ಜಲಿ ಮನೆಗೆ ಕರೆದುಕೊಂಡು ಹೋಗಿ…
ಮೈಸೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದು, ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೇ ಗೊತ್ತಾಗಿದ್ದರೆ ನಾನು ಅವತ್ತೆ ಅದನ್ನು ನಿಲ್ಲಿಸುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು. ಅದಕ್ಕೆ ಬರುತ್ತಿಲ್ಲ. ಪ್ರಜ್ವಲ್ ಗೆ ಹೇಳ್ತಿದ್ದಿನಿ, ಈ ವಿಚಾರದಲ್ಲಿ ವಕೀಲರ ಸಲಹೆ ಬೇಡ. ನೈತಿಕ ಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ’ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದರು. ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್ಗೂ ಸಂಬಂಧ ಇಲ್ಲ. ಪೆನ್ ಡ್ರೈವ್ ಪ್ರಕರಣದಿಂದ ದೇವೇಗೌಡರ ಫ್ಯಾಮಿಲಿ ಗೆ ಸ್ವಲ್ಪ ಡ್ಯಾಮೆಜ್ ಆಗಿರೋದು ಸತ್ಯ. ಪ್ರಜ್ವಲ್ ಎಚ್.ಡಿ. ರೇವಣ್ಣನ ಸಂಪರ್ಕದಲ್ಲೂ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ನಾನು ಈಗ ಏನಾದರೂ ವಿದೇಶಕ್ಕೆ ಹೋದರೆ, ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತಾ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ…
ಬೆಳಗಾವಿ : ಇತ್ತೀಚೆಗೆ ಕರ್ನಾಟಕ ಗೋವಾ ಗಡಿಯಲ್ಲಿ ಓಡಾಡುವ ರೈಲಿನಲ್ಲಿ ಚಾಕೊಲೇಟ್ ಗ್ಯಾಂಗ್ ಆ್ಯಕ್ಟೀವ್ ಆಗಿತ್ತು. ಇದೀಗ ಜ್ಯೂಸ್ ಗ್ಯಾಂಗ್ ಆಕ್ಟಿವ್ ಆಗಿದ್ದು, ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿಯೇ ಜ್ಯೂಸ್ ಹಾಗೂ ಬಾಳೆ ಹಣ್ಣು ಕೊಟ್ಟು ನಗನಾಣ್ಯ ದೋಚಿ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ ನಡೆದಿದೆ. ಹೌದು ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಲ್ಲಿ ಜ್ಯೂಸ್ ಹಾಗೂ ಬಾಳೆಹಣ್ಣು ಮಾರಾಟ ಮಾಡುವ ಸೋಗಿನಲ್ಲಿ ಬಂದು ಪ್ರಯಾಣಿಕರಿಗೆ ಜ್ಯೂಸ್ ಬಾಳೆಹಣ್ಣು ಮಾರಾಟ ಮಾಡಿದ್ದಾರೆ. ಈ ವೇಳೆ ಜ್ಯೂಸ್ ಹಾಗೂ ಬಾಳೇನಲ್ಲಿ ಮೂರ್ಛೆ ಬರುವಂತಹ ಪದಾರ್ಥ ಮಿಶ್ರಣ ಮಾಡಿದ್ದಾರೆ. ಈ ವೇಳೆ ಸಂಜೀವ್ ಖೋತ (40) ಹಾಗೂ ಮತ್ತೋರ್ವ ಪ್ರಯಾಣಿಕರಿಂದ ಗ್ಯಾಂಗ್ ಸುಲಿಗೆ ಮಾಡಿದೆ. ತಕ್ಷಣ ಜ್ಯೂಸ್ ಗ್ಯಾಂಗ್ ಪ್ರಯಾಣಿಕರ ಬಳಿ ಇದ್ದಂತ ಬಂಗಾರದ ಚೈನ್, ಬ್ಯಾಗ್, ಪರ್ಸ್ ಕದ್ದು ಪರಾರಿ ಆಗಿದ್ದಾರೆ. ಸದ್ಯ ಹದಿನಾಲ್ಕು ಗಂಟೆಯಿಂದ ಸಂಪೂರ್ಣ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಸಂಜೀವ್ ಖೋತಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮತ್ತೋರ್ವನಿಗೆ ಖಾಸಗಿ…
ಮೈಸೂರು : ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ದಂತೆ ಮೈಸೂರಿನಲ್ಲಿ HD ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಕಾರು ಚಾಲಕ ಕಾರ್ತಿಕ್ ಹತ್ತಿರ ಪೆನ್ ಡ್ರೈವ್ ಪಡೆದುಕೊಂಡು ವಿಡಿಯೋಗಳನ್ನ ಡಿಕೆ ಶಿವಕುಮಾರ್ ಟ್ರಾನ್ಸ್ಫರ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ಅರ್ಧ ನಿಮಿಷದಲ್ಲಿ ಎಲ್ಲವೂ ತೀರ್ಮಾನ ಆಗಿದೆ. ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರವಾದ ಆರೋಪ ಮಾಡಿದ್ದಾರೆ. ನಾನು ಪ್ರಜ್ವಲ್ ಪರ ಇಲ್ಲ ಆರೋಪ ಸಾಬೀದಾದರೆ ಶಿಕ್ಷೆ ಕೊಡಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತ ಅಲ್ಲ ಅಧಿಕಾರ ದುರುಪಯೋಗ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಪೆನ್ ಡ್ರೈವ್ ಹರಿಬಿಟ್ಟ ಕಾರಣಿಕರ್ತರು ಯಾರಿದ್ದಾರೆ? ರೇವಣ ಮನೆಯಲ್ಲಿ ಕೆಲಸಕ್ಕೆ ಇದ್ದ ಕಾರ್ತಿಕ್ ಅವನು ಪೆನ್ ಡ್ರೈವ್ ಮೂಲ. ಅವನು ಎಲ್ಲಿಗೆ ಹೋದ? ಹಾಸನ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಹಿಡಿದುಕೊಂಡು ಹಳೇ ನರಸೀಪುರದಲ್ಲಿ ವ್ಯಕ್ತಿ…
ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಶಾಸಕರನ್ನು ಬಂಧಿಸುವ ದುಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ ವಿಚಾರವಾಗಿ ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನಿಯ. ಪೂಂಜಾ ಭಾಷಣ ನೋಡಿದ್ದೇನೆ. ಅವರ ಜೊತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ ಅದು ಸರಿಯಲ್ಲ ಎಂದು ಪೂಂಜಾರಿಗು ಗೊತ್ತಾಗಿದೆ. ಪದೇ ಪದೇ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗುವುದಿಲ್ಲ. ಶಾಸಕರನ್ನು ಅರೆಸ್ಟ್…
ಹುಬ್ಬಳ್ಳಿ : ರೈಲಿನಿಂದ ಜಿಗಿದು ಗಾಯಗೊಂಡು ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜಲಿ ಅಂಬಿಗೇರ ಕೊಲೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಇದೀಗ CID ಅಧಿಕಾರಿಗಳ ಮುಂದೆ ಕೊಲೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾನೆ. ಹೌದು ಪ್ರಕರಣವನ್ನು CID ಗೆ ವಹಿಸಲಾಗುವುದು ಎಂದು ಎರಡು ದಿನಗಳ ಹಿಂದೆ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದರು. ಇದೀಗ ಸಿಐಡಿ ಅಧಿಕಾರಗಳ ಮುಂದೆ ಕೊಲೆಯ ಕುರಿತು ಹೇಳಿರುವ ಗಿರೀಶ್, ಮೈಸೂರಿಗೆ ಬರಲು ಯುವತಿ ಅಂಜಲಿ ಒಪ್ಪದಿದ್ದಕ್ಕೆ ಕೊಲೆಯ ಹಿಂದಿನ ದಿನ ಯುವತಿಗೆ ಒಂದು ಸಾವಿರ ಕಳುಹಿಸಿದ್ದ. ಫೋನ್ ಪೇ ಮೂಲಕ ಆರೋಪಿ ವಿಶ್ವ 1000 ರೂಪಾಯಿ ಕಳುಹಿಸಿದ್ದ. 1000 ಹಣ ಪಡೆದು ಅಂಜಲಿ ನಂಬರ್ ಬ್ಲಾಕ್ ಮಾಡಿದ್ದಳು.ಈ ಒಂದು ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಸಿಐಡಿ ಅಧಿಕಾರಿಗಳ ಬಳಿ ಆರೋಪಿ ವಿಶ್ವ ಕೊಲೆಯ ರಹಸ್ಯ ಬಾಯಿ ಬಿಟ್ಟಿದ್ದಾನೆ. ಕಿಮ್ಸ್ ಆಸ್ಪತ್ರೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಗಿರೀಶ್ ನನ್ನ ವಿಚಾರಣೆ ನಡೆಸಿದ್ದಾರೆ.
ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದೆಂದು ತಿಳಿಸಿದ್ದರು. ಅದರಂತೆ ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಆರೋಪಿ ಗಿರೀಶ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ನಿನ್ನೆ ಸಿಐಡಿ ಅಧಿಕಾರಿಗಳ ತಂಡ ಹುಬ್ಬಳ್ಳಿಗೆ ಬಂದಿತ್ತು. ಇಂದು ಸಿಐಡಿ ಅಧಿಕಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿರುವ ಆರೋಪಿ ಗಿರೀಶ್ ನನ್ನು ವಿಚಾರಣೆ ನಡೆಸಿ, ಇದೀಗ ಆರೋಪಿ ಗಿರೀಶ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ಕಿಮ್ಸ್ ಆಸ್ಪತ್ರೆಯಿಂದ ಕರೆದೋಯ್ದಿದ್ದಾರೆ.ಹಂತಕ ಗಿರೀಶ್ ನನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸಿಐಡಿ ಅಧಿಕಾರಗಳ ಮುಂದೆ ಕೊಲೆಯ ಕುರಿತು ಹೇಳಿರುವ ಗಿರೀಶ್, ಮೈಸೂರಿಗೆ ಬರಲು ಯುವತಿ ಅಂಜಲಿ ಒಪ್ಪದಿದ್ದಕ್ಕೆ ಕೊಲೆಯ ಹಿಂದಿನ ದಿನ ಯುವತಿಗೆ ಒಂದು ಸಾವಿರ ಕಳುಹಿಸಿದ್ದ. ಫೋನ್ ಪೇ ಮೂಲಕ ಆರೋಪಿ ವಿಶ್ವ 1000 ರೂಪಾಯಿ ಕಳುಹಿಸಿದ್ದ. 1000 ಹಣ ಪಡೆದು ಅಂಜಲಿ ನಂಬರ್ ಬ್ಲಾಕ್ ಮಾಡಿದ್ದಳು.…
ಬೆಂಗಳೂರು : ಇಂದು ರಾಜ್ಯದಲ್ಲಿ ಅನೇಕ ದುರ್ಘಟನೆಗಳು ಸಂಭವಿಸಿದ್ದು ಮಕ್ಕಳು ಮಹಿಳೆಯರು ಸೇರಿದಂತೆ 8 ಜನರು ಸಾವನಪ್ಪಿರುವ ಘಟನೆಗಳು ರಾಜ್ಯದ ವಿವಿಧಡೆ ನಡೆದಿವೆ. ಬೆಂಗಳೂರು ಬೆಳಗಾವಿ ವಿಜಯಪುರ ಚಿಕ್ಕಮಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದುರಂತ ಸಂಭವಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಬಾಯ್ಲರ್ ಸ್ಫೋಟದಿಂದ ಇಬ್ಬರು ಮಹಿಳೆಯರ ಸಾವು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸಾವನಪ್ಪಿದು, ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಇನ್ನಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಹಾಗೂ ಶೋಭಾ ತೇಲಿ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಲಾಸ್ಟ್ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ…
ಮೈಸೂರು : ರಾಜ್ಯದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಮುಖ್ಯಮಂತ್ರಿ ಇದ್ದರೆ ಅದು ಎಚ್ ಡಿ ಕುಮಾರಸ್ವಾಮಿ ಎಂದು ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಭೆಯಲ್ಲಿ ಮಾಜಿ ಸಚಿವ HD ರೇವಣ್ಣ ಹೇಳಿಕೆ ನೀಡಿದರು. ಇಂದು ಮೈಸೂರಿನಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಸಭೆ ನಡೆಯುತ್ತಿದ್ದು ಈ ಒಂದು ಸಭೆಯಲ್ಲಿ ಮಾತನಾಡಿದ ಅವರು, ಹೆಚ್ ಡಿ ಕುಮಾರಸ್ವಾಮಿ ಬಿಟ್ಟರೆ ಅಶ್ವಥ್ ನಾರಾಯಣ್, ಜಿಟಿ ದೇವೇಗೌಡ ಕೆಲಸ ಮಾಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಮೊದಲು ಹಲವಡೆ ಕಾಲೇಜುಗಳೆ ಇರಲಿಲ್ಲ. ಹಲವು ತಾಲೂಕುಗಳಲ್ಲಿ ಪಿಯು ಹಾಗೂ ಡಿಗ್ರಿ ಕಾಲೇಜುಗಳು ಇರಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 1,600 ಕಾಲೇಜುಗಳನ್ನು ತೆರೆದರು. ಡಿಗ್ರಿ ಪಿಯುಸಿ ಹೈಸ್ಕೂಲ್ ಗಳನ್ನು ತೆರೆದು ಶಿಕ್ಷಣ ಕ್ರಾಂತಿ ಮಾಡಿದರು. 2006- 2008ರಲ್ಲಿ 4,600 ಅಧ್ಯಾಪಕರನ್ನು ನೇಮಕ ಮಾಡಿದರು.ಜೆಡಿಎಸ್ ಬಿಜೆಪಿ ಅಧಿಕಾರದಲ್ಲಿದ್ದಾಗ ಶಿಕ್ಷಣದಲ್ಲಿ ಬದಲಾವಣೆ ಆಗಿತ್ತು. ನಮ್ಮ ಬಳಿಯೇ ಕೆಲವರು ತಿಂದು ತೇಗಿ ನಮಗೆ ಅನ್ಯಾಯ ಮಾಡಿದ್ದಾರೆ. ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಯಾರ ಬಗ್ಗೆಯೂ ಈಗ ಮಾತಾಡಲ್ಲ.…













