Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಸರ್ಕಾರ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಯೋಜನೆ ಜಾರಿ ಮಾಡಿದೆ ಅದರಂತೆ ಇದೀಗ 100 ಬಸ್ಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡುತ್ತಿದ್ದು ಅವುಗಳಿಗೆ ಅಶ್ವಮೇಧ ಕ್ಲಾಸಿಕ್ ಎಂದು ಹೆಸರಿಡಲಾಗಿದೆ ಇದರಲ್ಲೂ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಇರಲಿದೆ ಎಂದು ಹೇಳಲಾಗುತ್ತಿದೆ. ಕೆಎಸ್ಆರ್ಟಿಸಿಯ ನೂರು ಹೊಸ ಬಸ್ ಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.ಈ ಮೂಲಕ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕೆಂಗೇರಿಯ ಕೆಎಸ್ಆರ್ಟಿಸಿ ವರ್ಕ್ ಶಾಪ್ ಗೆ ಹೊಸ ಬಸ್ಗಳು ಈಗಾಗಲೇ ಬಂದಿಳಿದಿವೆ. ಕೆಎಸ್ಆರ್ಟಿಸಿಗೆ ಇನ್ನು ಹೊಸ ಸಾವಿರ ಬಸ್ಸಗಳು ಬರಲಿವೆ ಎಂದು ಹೇಳಲಾಗುತ್ತಿದೆ. ಹೊಸ ಬಸ್ ಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅವರ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಈ ಒಂದು ಬಸ್ಗಳಿಗೆ ಚಾಲನೆ…
ಶಿವಮೊಗ್ಗ : ಕರಾವಳಿ ಭಾಗದ ಶಿಕ್ಷಕರಿಗೆ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದು, ಕಲ್ಲೂರಿನಲ್ಲಿ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಈ ಕುರಿತು ಹೇಳಿಕೆ ನೀಡಿದ್ದು ಕರಾವಳಿ ಭಾಗದ ಕೆಲವು ಶಾಲೆಗಳ ಶಿಕ್ಷಕರು ದಾರಿತಪ್ಪುತ್ತಿದ್ದಾರೆ.ದಾರಿ ತಪ್ಪಿದ ಶಿಕ್ಷಕರನ್ನು ಸರಿದಾರಿಗೆ ತರುವ ಕೆಲಸ ಮಾಡುತ್ತಿದ್ದೇವೆ ಶಿಕ್ಷಕರು ಮಕ್ಕಳಿಗೆ ಪಾಠ ಹೇಳಿಕೊಡಬೇಕೆ ಹೊರತು ಆಟವಾಡಬಾರದು ಎಂದು ತಿಳಿಸಿದರು. ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ 50 ರೂಪಾಯಿ ವಸುಲಿ ವಿಚಾರವಾಗಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಶುಲ್ಕ ವಸೂಲಿ ಶುಲ್ಕ ಆರಂಭವಾಗಿದೆ ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.ಈ ಮೊದಲು ಪರೀಕ್ಷಾ ಶುಲ್ಕ 60 ರೂಪಾಯಿ ನಿಗದಿಯಾಗಿತ್ತು ನಾವು ಹತ್ತು ರೂಪಾಯಿಯನ್ನು ಕಡಿಮೆ ಮಾಡಿದ್ದೇವೆ ಎಂದು ಅವರು ತಿಳಿಸಿದರು. ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯಲ್ಲಿ ಮುಸ್ಲಿಂರಿಗೆ ತುಷ್ಟೀಕರಣ ಆರೋಪ ಕೇಳಿಬಂದಿದ್ದು, ಫೆಬ್ರವರಿ 26 ರಿಂದ ಮಾರ್ಚ್…
ಬೆಂಗಳೂರು : ಬಿಬಿಎಂಪಿಯಲ್ಲಿ ಕಾರ್ಯ ನಿರ್ವಹಿಸುತ್ತಿ ರುವ ಮಾರ್ಷಲ್ಗಳ ಗುತ್ತಿಗೆ ಅವಧಿಯ ನವೀಕರಣಕ್ಕೆ ಅನುಮೋದನೆ ನೀಡಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಳ ಪ್ರಸ್ತಾವನೆಯನ್ನು ನಿರಾಕರಿಸಿದೆ. ಬಿಬಿಎಂಪಿಯ ವಾರ್ಡ್ಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ 261 ವಾರ್ಡ್ ಮಾರ್ಷಲ್, ಭೂಭರ್ತಿ ಘಟಕದ ಭದ್ರತೆಗೆ 24, ಸಂಸ್ಕರಣಾ ಘಟಕಗಳಿಗೆ 49, ಕೆರೆಗಳಿಗೆ 44. ಮಾರುಕಟ್ಟೆಗೆ 35, ಕಂಟ್ರೋಲ್ ರೂಂಗೆ 32 ಹಾಗೂ ಕಾವಲು ಪಡೆಗೆ 40 ಸೇರಿದಂತೆ ಒಟ್ಟು 517 ಮಂದಿಯನ್ನು ನೇಮಕ ಮಾಡಿಕೊಂಡಿದೆ. ಮಾರ್ಷಲ್ ಗಳ ವೇತನ ಹಾಗೂ ಸಮವಸ್ತ್ರ, ಇಂಧನ ವೆಚ್ಚ ಹಾಗೂ ಮೊಬೈಲ್ ಭತ್ಯೆ ಸೇರಿದಂತೆ 19.65 w . 33 . ವೆಚ್ಚಮಾಡಲಾಗುತ್ತಿದೆ. ಇದೀಗ ಮಾರ್ಷಲ್ ಗಳ ಹೊರ ಗುತ್ತಿಗೆ ಅವಧಿಯನ್ನು ಒಂದು ವರ್ಷಕ್ಕೆ ನವೀಕರಣಕ್ಕೆ ಅನುನೋದನೆ ನೀಡಿದೆ. ಮಾರ್ಷಲ್ಗಳ ಮಾಸಿಕ ವೇತನವನ್ನು 23,400 ರು.ನಿಂದ 25 ಸಾವಿರಕ್ಕೆ ಹೆಚ್ಚಿಸು ವಂತೆ ಬಿಬಿಎಂಪಿಯು ಸಲ್ಲಿಸಿದ್ದ ಪ್ರಸ್ತಾವನೆ ಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಜತೆಗೆ ಮಾರ್ಷಲ್ಗಳಿಗೆ ನೀಡುವ ಗೌರವ ಧನ ಭರಿಸುವಂತೆ ಮನವಿ…
ಅಹಮದಾಬಾದ್: ಇಬ್ಬರು ಯುವತಿಯರನ್ನು ಅಕ್ರಮವಾಗಿ ತನ್ನ ಆಶ್ರಮದಲ್ಲಿ ಇಟ್ಟುಕೊಂಡಿರುವ ಆರೋಪ ಎದುರಿಸುತ್ತಿದ್ದ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಗೆ ಗುಜರಾತ್ ಹೈಕೋರ್ಟ್ ಕ್ಲೀನ್ಚಿಟ್ ನೀಡಿದೆ ಎಂದು ತಿಳಿಬಂದಿದೆ. ಅಲ್ಲದೆ ಇಬ್ಬರು ಯುವತಿಯರನ್ನು ಆತನ ವಶದಿಂದ ಕರೆತಂದು ಕೋರ್ಟ್ ಮುಂದೆ ಹಾಜರುಪಡಿಸುವಂತೆ ಯುವತಿಯರ ತಂದೆಯ ವಾದವನ್ನು ತಿರಸ್ಕರಿಸಿದೆ.ಆ ಮೂಲಕ ಯುವತಿಯರನ್ನು ಅಕ್ರಮ ವಶದಲ್ಲಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿತ್ಯಾನಂದಗೆ ಗುಜರಾತ್ ಹೈಕೋರ್ಟ್ ಕ್ಲೀನ್ ಚಿಟ್ ನೀಡುವ ಮೂಲಕ ನಿರಾಳವಾಗುವಂತೆ ಮಾಡಿದೆ. ಏನಿದು ಪ್ರಕರಣ?: ‘ನನ್ನ ಇಬ್ಬರು ಹೆಣ್ಣು ಮಕ್ಕಳನ್ನು ನಿತ್ಯಾನಂದನ ಅಹಮದಾ ಬಾದ್ ಆಶ್ರಮದಲ್ಲಿ ಅಕ್ರಮವಾಗಿ ಬಂಧಿಸಿಡಲಾಗಿದೆ. ನಿತ್ಯಾನಂದ ದೇಶದಿಂದ ಪರಾರಿಯಾದ ಬಳಿಕ ಅವರನ್ನೂ ಅಪಹರಿಸಿ ಕರೆದೊಯ್ಯಲಾಗಿದೆ’ ಎಂದು 2019ರಲ್ಲಿ ಜನಾರ್ಧನ ಶರ್ಮಾ ಎಂಬುವವರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆ ಹೆಣ್ಣುಮಕ್ಕಳೊಂದಿಗೆ ವಿಡಿಯೋ ಕಾಲ್ನಲ್ಲಿ ಕೋರ್ಟ್ ಸಂವಹನ ನಡೆಸಿತ್ತು. ಆಗ ಅವರು ‘ನಾವು ನಮ್ಮಿಷ್ಟದಂತೆ ಆಧ್ಯಾತ್ಮಿಕವಾಗಿ ಸಂತೋಷವಾಗಿ ಜೀವಿಸುತ್ತಿದ್ದೇವೆ. ಯಾರೂ ನಮ್ಮನ್ನು ಬಂಧಿಸಿಲ್ಲ’ ಎಂದಿದ್ದರು. ಹೀಗಾಗಿ ಇಬ್ಬರೂ ಯುವತಿಯರು…
ಶ್ರೀಕೃಷ್ಣನ ಕೈಯಲ್ಲಿರುವ ಚಕ್ರವನ್ನು ‘ಸುದರ್ಶನ ಚಕ್ರ’ ಎಂದು ಕರೆಯಲಾಗುತ್ತದೆ. ಈ ಮಂತ್ರವನ್ನು ಪಠಿಸಿದರೆ ಅಸಂಖ್ಯಾತ ಪ್ರಯೋಜನಗಳನ್ನು ಪಡೆಯುತ್ತಾರೆ ಮತ್ತು ಯಾವುದೇ ದುಷ್ಟ ಶಕ್ತಿಯಿಂದ ತನ್ನನ್ನು ರಕ್ಷಿಸಿಕೊಳ್ಳುವ ಶಕ್ತಿಯನ್ನು ಪಡೆಯುತ್ತಾರೆ. ಅಂತಹ ಪವಾಡಗಳಿಂದ ಕೂಡಿದ ಸುದರ್ಶನ ಮಂತ್ರ ಇಲ್ಲಿದೆ . ಶ್ರೀ ಸುದರ್ಶನ ಚಕ್ರ ರಕ್ಷಾ ಮಂತ್ರ: ಓಂ ನಮೋ ಸುದರ್ಶನ ಚಕ್ರಾಯ ಸ್ಮರಣ ಮಾತ್ರೇಣ ಪ್ರಗಡಾಯ ಪ್ರಗಡಾಯ ದ್ವಂ ಸ್ವರೂಪಂ ಮಮ ದರ್ಶಯ ದರ್ಶಯ ಮಮ ಸರ್ವತ್ರ ರಕ್ಷಾಯ ರಕ್ಷಾಯ ಸ್ವಾಹಾ ॥ ಅತ್ಯಂತ ಶಕ್ತಿಶಾಲಿ ಎಂದು ಪರಿಗಣಿಸಲ್ಪಟ್ಟಿರುವ ಈ ಮಂತ್ರವನ್ನು ಮೊದಲು ಸೂರ್ಯಗ್ರಹಣ ಅಥವಾ ಚಂದ್ರಗ್ರಹಣದಂದು ದೀಪವನ್ನು ಬೆಳಗಿಸುವ ಮೂಲಕ 1008 ಬಾರಿ ಜಪಿಸಲಾಗುತ್ತದೆ.ಅದರ ನಂತರ ಅಗತ್ಯವಿದ್ದಾಗ 3 ಬಾರಿ ಜಪ ಮಾಡಿದರೆ ಯಾವುದೇ ಅಪಾಯದಿಂದ ಪಾರಾಗಬಹುದು. ಇದು ಯಾವುದೇ ದುಷ್ಟ ಶಕ್ತಿಯಿಂದ ಗುರಾಣಿಯಂತೆ ರಕ್ಷಿಸುತ್ತದೆ.ಇದು ಅತ್ಯಂತ ಶಕ್ತಿಯುತವಾದ ಮಂತ್ರವಾಗಿರುವುದರಿಂದ, ನಿಮಗೆ ಅನಿಸಿದಾಗಲೆಲ್ಲಾ ಇದನ್ನು ಜಪಿಸಬಾರದು. ಈ ಮಂತ್ರವನ್ನು ಪ್ರಾರ್ಥಿಸುವ ಮೊದಲು ಒಬ್ಬರು ದೈಹಿಕವಾಗಿ ಮತ್ತು ಮಾನಸಿಕವಾಗಿ ತುಂಬಾ ಸ್ವಚ್ಛವಾಗಿರಬೇಕು. ಹಾಗೆಯೇ ಮನೆಯೂ ಸ್ವಚ್ಛವಾಗಿರಬೇಕು. ಶ್ರೀ ಸಿಗಂಧೂರು…
ಬೆಂಗಳೂರು : ಕಳೆದ ನವೆಂಬರ್ನಲ್ಲಿ ಅತ್ಯಂತ ಭೀಕರವಾಗಿ ಕೊಲೆಗೆ ಈಡಾಗಿದ್ದ ಹಿರಿಯ ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ(43) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸುಬ್ರಮಣ್ಯಪುರ ಠಾಣೆ ಪೊಲೀಸರು, ಆರೋಪಿ ಕಿರಣ್ ವಿರುದ್ದ ನ್ಯಾಯಾಲಯಕ್ಕೆ ಸುಮಾರು 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ತನಿಖಾಧಿಕಾರಿ ತಲಘಟ್ಟಪುರ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ಅವರು ಆರೋಪಿ ಕಿರಣ್ ನೀಡಿದ್ದ ಸ್ವ ಇಚ್ಛಾ ಹೇಳಿಕೆ, 70 ಮಂದಿ ಸಾಕ್ಷಿದಾರರ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ, ಡಿಜಿಟಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯ ಒಳಗೊಂಡಂತೆ ಸುಮಾರು 600 ಪುಟಗಳ ದೋಷಾರೋಪ ಪಟ್ಟಿಯನ್ನು 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣ ಹಿನ್ನೆಲೆ: ಆರೋಪಿ ಕಿರಣ್ ಭೂವಿಜ್ಞಾನ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನ ಕೆಲಸಕ್ಕೆ ಸೇರಿದ್ದ. ಹಿರಿಯ ಭೂ ವಿಜ್ಞಾನಿ ಪ್ರತಿಮಾ ಅವರಿಗೆ ಕಾರು ಚಾಲಕನಾಗಿದ್ದ. ಈತನ ವರ್ತನೆ ಸರಿ ಇಲ್ಲದ ಕಾರಣ ಪ್ರತಿಮಾ ಅವರು ಕೆಲಸದಿಂದ ತೆಗೆದಿದ್ದರು. ಹೀಗಾಗಿ ಕಿರಣ್, 2023ರ ನವೆಂಬರ್ 4ರ ರಾತ್ರಿ…
ಹಂಪಿ : ಮೂರು ದಿನಗಳ ಹಂಪಿ ಉತ್ಸವಕ್ಕೆ ಭಾನುವಾರ ತೆರೆ ಬಿತ್ತು. ವಿಜಯನಗರದ ಗತ ವೈಭವ ಸಾರುವ ಹಂಪಿ ಉತ್ಸವಕ್ಕೆ ಮೂರು ದಿನಗಳಲ್ಲಿ ಬರೋಬ್ಬರಿ ಹತ್ತು ಲಕ್ಷ ಜನ ಹರಿದು ಬಂದಿದ್ದು, ವಿಜಯನಗರ ಜಿಲ್ಲಾಡಳಿತದ ಆಶಯದಂತೆ ಉತ್ಸವ ಭರ್ಜರಿ ಯಶಸ್ಸು ಕಂಡಿದೆ. ಜನೋತ್ಸವ, ವಿಜೃಂಭಣೆಯ ಸಾಂಸ್ಕೃತಿಕ ವೈಭವದೊಂದಿಗೆ ಹಂಪಿ ಉತ್ಸವ ಭಾನುವಾರ ಸಂಜೆ ಸಂಪನ್ನಗೊಂಡಿತು. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಕೇರಳ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯ ಪ್ರದೇಶ ಸೇರಿ ವಿವಿಧ ರಾಜ್ಯಗಳಿಂದ ಪ್ರವಾಸಿಗರು ಆಗಮಿಸಿ, ಹಂಪಿ ಉತ್ಸವಕ್ಕೆ ಕಳೆ ತುಂಬಿದರು. ವಿದೇಶಿ ಪ್ರವಾಸಿಗರೂ ಆಗಮಿಸಿ, ಉತ್ಸವದ ವೈಭವವನ್ನು ಕಣ್ಣುಂಬಿಕೊಂಡರು. ಮೊದಲ ದಿನ 2 ಲಕ್ಷ, ಎರಡನೆ ದಿನ ಮೂರು ಲಕ್ಷ ಜನ ಆಗಮಿಸಿದ್ದರೆ, ಮೂರನೇ ದಿನ ಐದು ಲಕ್ಷ ಜನ ಸೇರಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಹಂಪಿಗೆ ಬರುವ ಎರಡು ಮಾರ್ಗಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.ಜಾನಪದ ವಾಹಿನಿ ವೈಭವ: ಹಂಪಿ ಉತ್ಸವದ ಕೊನೇ ದಿನ…
ಬೆಂಗಳೂರು : ಪ್ರತ್ಯೇಕ ರಾಷ್ಟ್ರ ಹೇಳಿಕೆ ಖಂಡಿಸಿ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟಿಸುತ್ತಿದೆ. ಈ ನಡುವೆ ಕಾರ್ಯಕರ್ತರು ಡಿ.ಕೆ.ಸುರೇಶ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಅದರಂತೆ ಬೆಂಗಳೂರಿನ ಸದಾಶಿವನಗರದ ಡಿಕೆ ಸುರೇಶ್ ನಿವಾಸದ ಬಳಿ ಕೆಲ ಕಾಲ ಹೈಡ್ರಾಮಾ ನಡೆಯಿತು. ಡಿ.ಕೆ.ಸುರೇಶ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಯಿತು. ಇದೇ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಅದೇ ರೀತಿಯಾಗಿ ವಿಜಯಪುರದಲ್ಲಿಯೂ ಕೂಡ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮೂಲಕ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದುಕೊಂಡರು. ಸುಮಾರು ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಈ ವೇಳೆ ಸಂಸದ ಡಿಕೆ ಸುರೇಶ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಡಿಕೆ ಸುರೇಶ್ ಹೇಳಿದ್ದೇನು? ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್ ಅನ್ನು ಟೀಕಿಸುವ ಬರದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಹೇಳಿಕೆಯನ್ನು…
ಬೆಳಗಾವಿ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ. ಮತ್ತೆ ಇಂತಹದ್ದೇ ಘಟನೆ ಮರುಕಳಿಸಿದೆ. ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ ಹನುಮಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಕ್ಕೆ ಅವಕಾಶ ಇಲ್ಲ ಎಂದು ಎಸ್ಪಿ ಭೀಮಾಶಂಕರ ಗುಳೇದ ಈ ಕುರಿತು ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ ಕೆ ಹುಬ್ಬಳ್ಳಿ ಪಟ್ಟದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಗೂ ಅಧಿಕಾರಿಗಳ ತೀರ್ಮಾನದಂತೆ ನಾವು ನಡೆಯುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದೆ ಗಲಾಟೆಗೆ ಕಾರಣವಾಗಿದೆ ಸಾಮಾಜಿಕ ಜಾಲತಾಣ ಮೇಲೆ ನಿಗಾ ಇಟ್ಟಿದ್ದೇವೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ ನಮ್ಮ ಗ್ರಾಮದಲ್ಲಿ ಎಲ್ಲರೂ ಒಂದೇ ಎಂದು ಗ್ರಾಮಸ್ಥರು ಹೇಳಿದ್ದಾರೆ. ಹೊರಗಿನ ಜನರು ಬರುವುದು ಬೇಡ ಅಂತ ಗ್ರಾಮಸ್ಥರು ಆಗ್ರಹಿಸಿದ್ದಾರೆ ಎಂದು ಎಂ ಕೆ ಹುಬ್ಬಳ್ಳಿಯಲ್ಲಿ ಎಸ್ಪಿ ಭೀಮಾಶಂಕರ್ ಗುಳೇದ್…
ಬೆಂಗಳೂರು : ಸಿಟಿ ಟ್ಯಾಕ್ಸಿ ಸೇವೆಯಲ್ಲಿ ಹಗಲು ದರೋಡೆ ನಡೆಯುತ್ತಿದೆ, ಮನಸೋ ಇಚ್ಚೆ ದರ ವಿಧಿಲಾಗುತ್ತಿದೆ ಅನ್ನೋ ಬಗ್ಗೆ ವ್ಯಾಪಕ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್ಸ್ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಸಾಗಾಣಿಕ ದರಗಳನ್ನು ಏಕರೂಪಗೊಳಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. 2021ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರ ವಾಹನಗಳ ಮೌಲ್ಯ ಆಧರಿಸಿ ದರ ನಿಗದಿ ಮಾಡಿತ್ತು. ಸಿಟಿ ಟ್ಯಾಕ್ಸಿ ಸೇವೆಯನ್ನು ಎಬಿಸಿಡಿ ಎಂದು ವರ್ಗೀಕರಿಸಿ 2021ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ದರ ನಿಗದಿ ಮಾಡಿತ್ತು. ಆದ್ರೆ ಫೆಬ್ರವರಿಯಿಂದಲೇ ಅಧಿಸೂಚನೆ ಹೊರಡಿಸಲಾಗಿದೆ. ಸಾರಿಗೆ ಸಚಿವರ ಸೂಚನೆ ಮೇರೆಗೆ ಏಕರೂಪ ಪ್ರಯಾಣ ದರ ನಿಗದಿಪಡಿಸಿ ಸರ್ಕಾರ ಆದೇಶ 1) 10 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 100 ರೂ. ನಿಗದಿ 2) 4 ಕಿಮೀ ನಂತರ ಪ್ರತಿ…