Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ತನ್ನ ಕುಡಿತದ ಚಟಕ್ಕೆ ಹಣ್ಣಕ್ಕಾಗಿ ಪ್ರತಿದಿನ ಹೆಂಡತಿಯ ಜೊತೆಗೆ ಗಲಾಟೆ ಮಾಡುತ್ತಿದ್ದ ಪ್ರತಿಯೊಬ್ಬ ಪತ್ನಿಯ ಕುತ್ತಿಗೆಯನ್ನು ಸೀರೆಯಿಂದ ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ. ಕುತ್ತಿಗೆಗೆ ಸೀರೆ ಬಿಗಿದ ಸ್ಥಿತಿಯಲ್ಲಿ ನೇತ್ರಾವತಿ (34) ಎಂಬ ಮಹಿಳೆ ಸಾವಿಗೀಡಾಗಿದ್ದಾರೆ. ಪತ್ನಿಯನ್ನು ಹತ್ಯೆಗೈದ ಆರೋಪದಡಿ ಪತಿ ವೆಂಕಟೇಶ ಎಂಬಾತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಾಗಡಿಯ ಗೇರುಪುರ ಮೂಲದ ದಂಪತಿ ನಾಲ್ಕು ವರ್ಷಗಳಿಂದ ರಂಗನಾಥಪುರದಲ್ಲಿ ವಾಸವಿದ್ದರು. ಇವರಿಗೆ 9 ವರ್ಷದ ಗಂಡು ಮಗನಿದ್ದಾನೆ. ವೆಂಕಟೇಶ್ ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ನೇತ್ರಾವತಿ ಗಾರ್ಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದನು. ನಿತ್ಯ ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ ವೆಂಕಟೇಶನಿಗೆ ಸಂಬಂಧಿಕರು ಬುದ್ದಿವಾದ ಹೇಳಿದ್ದರು. ಆದರೂ ಸಹ ಖರ್ಚಿಗೆ ಹಣಕ್ಕಾಗಿ ಪತ್ನಿಯ ಬಳಿಯಿದ್ದ ಒಡವೆಗಳನ್ನು ನೀಡುವಂತೆ ಪೀಡಿಸುತ್ತಿದ್ದನು. ಇದೇ ಕಾರಣಕ್ಕಾಗಿ ಎರಡು ದಿನಗಳ ಹಿಂದೆಯೂ ಗಲಾಟೆಯಾಗಿತ್ತು. ಶನಿವಾರ ರಾತ್ರಿ ಕುಡಿದು ಬಂದು ಗಲಾಟೆ ಮಾಡಿದ್ದ ವೆಂಕಟೇಶ್,…
ಬಳ್ಳಾರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.ಇದೀಗ ಬಳ್ಳಾರಿ ನಗರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 50 ಲಕ್ಷ ನಗದು ಜಪ್ತಿ ಮಾಡಿಕೊಂಡಿರುವ ಘಟನೆ ಬಳ್ಳಾರಿ ನಗರದ ಭೂಸಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಬಳ್ಳಾರಿ ನಗರಫಾ ಬ್ರೂಸ್ ಪೇಟೆ ಬ್ರೂಸ್ ಠಾಣಾ ವ್ಯಾಪ್ತಿ ಬಳಿ ಕಾರಿನಲ್ಲಿ ಸೂಕ್ತ ದಾಖಲೆಯಿಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದರು. ಈ ವೇಳೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರಿಂದ ಕಾರಿನ ತಪಾಸಣೆ ನಡೆಸಲಾಯಿತು. ಈ ವೇಳೆ ನಗದು ಸುಮಾರು 5.50 ಕೋಟಿ ನಗದು ಪತ್ತೆಯಾಗಿದೆ. ಇವಳೆ ಹಣ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ .
ಬೆಂಗಳೂರು : ಮೇಕೆದಾಟು ಯೋಜನೆಗೆ ಸಂಬಂಧಿಸಿ ದಂತೆ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು ಇದೀಗ ಡಿಸೆಂಟ್ ಡಿಕೆ ಶಿವಕುಮಾರ್ ಹೇಳಿಕೆಗೆ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದು, ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರಕಾರ ಎಂದು ತಿರುಗೇಟು ನೀಡಿದ್ದಾರೆ. https://kannadanewsnow.com/kannada/vd-savarkar-was-the-first-to-propose-partition-of-the-country-priyank-kharge/ ಟ್ವೀಟ್ ನಲ್ಲಿ ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ ಅವರು, ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ DK ಶಿವಕುಮಾರ ರವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ! ಕುಮಾರಸ್ವಾಮಿ ಏನೂ ಮಾಡಿಯೇ…
ಕಲಬುರ್ಗಿ : ಕಾಂಗ್ರೆಸ್ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಟೀಕೆಸಿರುವ ವಿಚಾರವಾಗಿ ಕಲಬುರ್ಗಿಯಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದು, ಇವರು ಚುನಾವಣೆಯಲ್ಲಿ ಮತ ಗಳಿಸಲು ಮುಸ್ಲಿಂ ಲೀಗ್ ಬೇಕಾ? ಉದಿಯವರಿಗೆ ಇತಿಹಾಸ ಫೋಟೋ ತೆರೆದ ನೋಡಲಿ ದೇಶದ ವಿಭಜನೆಗೆ ಮೊದಲು ಪ್ರಸ್ತಾವನೆ ಇಟ್ಟವರೆ ವಿಡಿ ಸಾವರ್ಕರ್ ಎಂದು ತಿರುಗೇಟು ನೀಡಿದರು. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಒಮ್ಮೆ ಇತಿಹಾಸದ ಪುಟ ತೆಗೆದ ನೋಡಲಿ. ಮೊದಲು ದೇಶ ವಿಭಜನೆಗೆ ಪ್ರಸ್ತಾವನೆ ಇಟ್ಟವರೆ ವಿಡಿ ಸಾವರ್ಕರ್. ಮೋದಿ ಸರ್ಕಾರದಿಂದ ಕನ್ನಡಿಗರು ಯಾವ ನಿರೀಕ್ಷೆಯನ್ನು ಇಟ್ಟುಕೊಳ್ಳಬಾರದು ಎಂದು ಕಲ್ಬುರ್ಗಿಯಲ್ಲಿ ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮೋದಿ ಟೀಕೆ ವಿಚಾರವಾಗಿ ಪ್ರಧಾನಿ ಮೋದಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಮೋದಿಗೆ ಬಿಜೆಪಿ ಐಟಿ ಸೆಲ್ ಮಾಹಿತಿ ಕೊಡುತ್ತದೆ. ಅದರ ಬದಲು ಸ್ವಲ್ಪ ಪುಸ್ತಕ ಓದಿದರೆ ಗೊತ್ತಾಗುತ್ತದೆ.…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾಗಿ ಡಬಲ್ ಮರ್ಡರ್ ನಡೆದಿದ್ದು, ಹಾಡು ಹಗಲೇ ಮಹಿಳೆಯರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರದ ತಾವರಗೇರ ಕ್ರಾಸ್ ಬಳಿ ಮಹಿಳೆಯರಿಬ್ಬರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈಯಲಾಗಿದೆ. ಕಲ್ಬುರ್ಗಿಯ ಜನತೆ ಘಟನೆ ಯಿಂದ ಬೆಚ್ಚಿಬಿದ್ದಿದೆ. ಹೌದು ಕಲಬುರ್ಗಿಯ ತಾವರಗೆರಾ ಕ್ರಾಸ್ ಬಳಿ ಹಾಡು ಹಗಲೇ ಡಬಲ್ ಮರ್ಡರ್ ಆಗಿರುವ ಘಟನೆ ನಡೆದಿದೆ. ಕಲ್ಲು ಎತ್ತಿ ಹಾಕಿ ಇಬ್ಬರು ಮಹಿಳೆಯರ ಬರ್ಬರ ಕೊಲೆಯಾಗಿದೆ.ಕೂಲಿ ಕೆಲಸಕ್ಕೆ ಎಂದು ಹೋಗಿದ್ದ ಮಹಿಳೆಯರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಶರಣಮ್ಮ (51) ಚಂದಮ್ಮ (53) ಬರ್ಬರವಾಗಿ ಕೊಲೆಯಾಗಿರುವ ಮಹಿಳೆಯರು ಎಂದು ಹೇಳಲಾಗುತ್ತಿದೆ.ಘಟನೆ ಕುರಿತಂತೆ ಕಲ್ಬುರ್ಗಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಕೊಲೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೆಂಗಳೂರ ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜನ್ನೂರಿನಲ್ಲಿ ಮನಸಿಕ ಖಿನ್ನತೆಗೆ ಒಳಗಾಗಿದ್ದ ರೌಡಿಶೀಟರ್ ಅರುಣ್ ಅಲಿಯಾಸ್ ಚಿನ್ನಿ (28) ಆತ್ಮಹತ್ಯೆ ಮಾಡಿಕೊಂಡಿರುವ ಈ ಘಟನೆ ನಡೆದಿದೆ.2019ರಲ್ಲಿ ಲೋಕನಾಥ ಕೊಲೆ ಕೇಸ್ನಲ್ಲಿ ಅರುಣ್ ಜೈಲು ಸೇರಿದ ಎಂದು ಹೇಳಲಾಗುತ್ತಿದೆ ಈ ವೇಳೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಎನ್ನಲಾಗಿದೆ. ಇತ್ತೀಚಿಗೆ ರೌಡಿಶೀಟರ್ ಅರುಣ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ರೌಡಿಶೀಟರ್ ಅರುಣ್ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಕನ್ನಡಿಗರ ಕ್ಷಮೆಯಾಚಿಸಬೇಕು. ಈಗ ಯಾಕೆ ಚುನಾವಣಾ ಆಯೋಗದ ಅನುಮತಿಗಾಗಿ ಕಳುಹಿಸಬೇಕಿತ್ತು? ಈಗಾಗಲೇ ರಾಜ್ಯ ಸರ್ಕಾರ ಏನು ಮಾಡಬೇಕು ಅದನ್ನೆಲ್ಲ ಮಾಡಿದ್ದೇವೆ. ಪ್ರತಿ ರೈತರಿಗೆ 2000 ಕೊಟ್ಟಿದ್ದೀವಿ. ಕುಡಿಯುವ ನೀರಿಗೆ 2000 ಕೋಟಿ ಅನುದಾನ ಮೀಸಲಿಟ್ಟಿದ್ದೇವೆ ಎಂದು ಕಲ್ಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದರು. ಬರ ಪರಿಹಾರ ಕುರಿತಂತೆ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿರುವ ಕುರಿತಂತೆ ಸಚಿವ ಪ್ರಿಯಾಂಕರ್ ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಮಿತ್ ಶಾ ರೀತಿ ವಿತ್ತ ಸಚಿವೆ ನಿರ್ಮಲ ಕೂಡ ಸುಳ್ಳು ಹೇಳುತ್ತಿದ್ದಾರೆ. ನಿರ್ಮಲ ಸೀತಾರಾಮನ್ ಕರ್ನಾಟಕದ ಜನರ ದಾರಿಯನ್ನು ತಪ್ಪಿಸುತ್ತಿದ್ದಾರೆ. ಬರ ಪರಿಹಾರ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ ಎನ್ನುತ್ತಿದ್ದಾರೆ ಹಾಗಾದರೆ ಸಿಎಂ ಕಂದಾಯ ಸಚಿವರು ಅಮಿತ್ ಶಾ ಬೇಟಿಯಾಗಿದ್ದು ಯಾಕೆ? ಎಂದು ಪ್ರಶ್ನಿಸಿದರು. ರಾಜ್ಯಕ್ಕೆ ಬರ ಪರಿಹಾರ ನೀಡಿ ಅಂತ ಅವರನ್ನು ಭೇಟಿಯಾಗಿದ್ದಲ್ವಾ? ಅಮಿತ್ ಶಾ ಪತ್ರ ಜೈಶಾ ಬಳಿ ಐಪಿಎಲ್ ಟಿಕೆಟ್ ಕೇಳೋಕೆ ಭೇಟಿಯಾಗಿದ್ವ?…
ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ರ್ಯಾಕ್ಟರ್ಗೆ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹೌದು ಈ ಒಂದು ಘಟನೆ ಬೆಳಗಾವಿ ತಾಲೂಕಿನ ಸುವರ್ಣ ವಿಧಾನಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕ್ಯಾಂಟರ್ ವಾಹನ ಮತ್ತು ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ (41) ಎಂಬ ರೈತ ಮೃತಪಟ್ಟಿದ್ದಾರೆ. ಬೆಳಗಾವಿ ಮಾರ್ಕೆಟ್ಗೆ ಕೊತ್ತುಂಬರಿ ಸೊಪ್ಪು ಸಾಗಿಸಲು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ರಭಸವಾಗಿ ಟ್ರ್ಯಾಕ್ಟರ್ಗೆ ಗುದ್ದಿದೆ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯ ವಿಚಾರವಾಗಿ ಅಸಮಾಧಾನ ಬಿಜೆಪಿ ಪಕ್ಷ ಅಷ್ಟೆ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಾಗಿಲ್ಲ. ಏಕೆಂದರೆ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಶಾಸಕ ವಿಧಾನದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರು ಲೋಕಸಭೆ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಶಿವಾನಂದ್ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಗೆ ಟಿಕೆಟ್ ನೀಡಿದೆ. ಹೀಗಾಗಿ ಅವರು ಇದೀಗ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದ ಅವರು ನಾನು ಮುಂದೆ ದೇಶದ ಪ್ರಧಾನಿಯಾದರು ಆಗಬಹುದು ಎಂದು ಹೇಳಿಕೆಯನ್ನು ನೀಡಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟಿಲ್ ಅವರು ಹಣವನ್ನ ಪ್ರಚಾರದ ವೇಳೆ ಒಂದು ಅವಕಾಶ ಕೊಡಿ ನಿಮ್ಮ ಮನೆಯ ಜೀತದಾಳಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದು, ಮನೆ ಯಜಮಾನಿಗೆ ಸರ್ಕಾರ 2 ಸಾವಿರ ರೂಪಾಯಿ ಹಣ ನೀಡುತ್ತಿದೆ. ಪುರುಷರಿಗೆ ಕೊಟ್ಟರೆ ಸಂಜೆ ಯಾವ ಅಂಗಡಿಗೆ ಹೋಗುತ್ತೆ ಗೊತ್ತಿದೆ ಎಂದು ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ…
ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಮಾಜಿ ಜೀವ ಕೆಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಇದೀಗ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದು ಶಿವಮೊಗ್ಗದಲ್ಲಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮತ್ತೆ ಕೆಎಸ್ ಈಶ್ವರಪ್ಪ ಗರ್ಜಿಸಿದ್ದು, ಶನೇಶ್ವರ ಹಾಗೂ ಗಣೇಶನ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ ಈ ಬಾರಿ ಚುನಾವಣೆಯಲ್ಲಿ ನಿಂತೆ ನಿಲ್ಲುತ್ತೇನೆ ಎಂದು ಗುಡುಗಿದರು. https://kannadanewsnow.com/kannada/dk-shivakumar-thanks-nirmala-sitharaman-for-acknowledging-injustice-done-to-the-state/ ಶಿವಮೊಗ್ಗದಲ್ಲಿ ಸಮಾರಂಭ ಒಂದರಲ್ಲಿ ಮಾತನಾಡಿದ ಅವರು, ಏಪ್ರಿಲ್ 19 ರಿಂದ ರಾವಣನ ಸಂಹಾರಕ್ಕೆ ಸಜ್ಜಾಗಿ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ಈಶ್ವರಪ್ಪ ಘರ್ಜಿಸಿದ್ದಾರೆ. ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಪುತ್ರರ ದರ್ಬಾರ್ ಆಗಿದೆ.ಯಡಿಯೂರಪ್ಪ ಎಲ್ಲರಿಗೂ ಮೋಸ ಮಾಡಿದ್ದಾರೆ. ಚುನಾವಣೆಗೆ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಮೋಸ ಮಾಡಿದ್ದಾರೆ. ನಾವೇನು ಅವರಿಗೆ ಮೋಸ ಮಾಡಿದ್ವಿ? ಏಪ್ರಿಲ್ 12 ರಂದು ನಾಮಿನೇಷನ್ ಹಾಕಿ ಹಾಕುತ್ತೇನೆ. ಶನೇಶ್ವರ, ಗಣೇಶನ ಮೇಲಾಣೆಗೂ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ…