Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆಯಾದ ಬೆನ್ನಲ್ಲೇ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳಿಗೂ ದೇಶದ ಈ ಅತ್ಯುನ್ನತ ಗೌರವ ಸಿಗಬೇಕೆಂಬ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಪ್ರಸ್ತಾಪಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಕೊಡಲಿ ಬಿಡಿ ಪಾಪ, ಕೊಡಬೇಡಿ ಅಂದವರು ಯಾರು?’ ಎಂದ ಅವರು ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗದ ಕುರಿತು ಬೇಸರ ವ್ಯಕ್ತಪಡಿಸಿದರು. ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ನಾವು ಪತ್ರಬರೆದಿದ್ದೆವು ಎಂದು ಹೇಳಿದರು. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೂ ಕೇಂದ್ರಕ್ಕೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಪತ್ರ ಬರೆದಿದ್ದರು. ಅದೇ ರೀತಿಯಾಗಿ ಇಂದು ಕೂಡ ಸಿಎಂ ಸಿದ್ದರಾಮಯ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ ಎಂದು ಮತ್ತೊಮ್ಮೆ ಅಗ್ರಹಿಸಿದ್ದಾರೆ.
ಹುಬ್ಬಳ್ಳಿ : ಸ್ನೇಹಿತನ ಹೆಂಡತಿಗೆ ವ್ಯಕ್ತಿಯೊಬ್ಬ ಮೊಬೈಲ್ ಅಲ್ಲಿ ಕರೆ ಮಾಡೋದು ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂಬ ಕಾರಣಕ್ಕೆ ಅಜರ್ ಎನ್ನುವ ವ್ಯಕ್ತಿ ಆತನ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸುಟ್ಟು ಕೊಂದಿರುವ ಘಟನೆ ನಡೆದಿದೆ. ಮಾರುತಿನಗರದ ವಿಜಯ ಬಸವ (24) ಎಂಬಾತನ ಶವ ಎರಡು ದಿನದ ಹಿಂದೆ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈತ ಖಾಸಗಿ ಮೊಬೈಲ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಮಂಟೂರ ರಸ್ತೆಯ ಆರೋಪಿ ಅಜರ್ ಎಂಬಾತ ಕೊಲೆ ಮಾಡಿದ್ದ ವಿಜಯ ಮತ್ತು ಅಜರ್ ಅತ್ಮೀಯ ಸ್ನೇಹಿತರು, ಅಜರ್ನ ಪತ್ನಿಗೆ ವಿಜಯ ಮೇಸೆಜ್ ಹಾಗೂ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಈ ಬಗ್ಗೆ ಅಜರ್ನಿಗೆ ಪತ್ನಿ ತಿಳಿಸಿದ್ದಾಳೆ. ಅಜರ್ ಒಂದೆರಡು ಬಾರಿ ವಿಜಯಗೆ ಬುದ್ಧಿವಾದ ಹೇಳಿದ್ದಾನೆ. ಆದರೂ ಆತ ಕೇಳಿರಲಿಲ್ಲ. ತನ್ನ ಚಾಳಿಯನ್ನು ಮುಂದುವರಿಸಿದ್ದನಂತೆ. ಹೀಗಾಗಿ. ಈತನಿಗೆ ಪಾಠ ಕಲಿಸಬೇಕೆಂದು ಪಾಳುಬಿದ್ದ ಜಾಗೆಯಲ್ಲಿ ಕರೆಸಿದ್ದಾನೆ. ಆತನೊಂದಿಗೆ ಕುಡಿದಿದ್ದಾನೆ. ಈ ವೇಳೆ ಮತ್ತೊಮ್ಮೆ ಬುದ್ದಿವಾದ ಹೇಳಿದ್ದಾನೆ. ಆಗ…
ಬೆಂಗಳೂರು: ಹಿಂದು ಪದದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ 2022ರ ನ.6ರಂದು ಬೆಳಗಾವಿಯಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಮಾತನಾಡಿದ್ದರು. ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆ. ಹಿಂದುತ್ವ ಎಂಬುದು ಪರ್ಷಿಯನ್ ಪದವಾಗಿದ್ದು, ಅದಕ್ಕೂ ಭಾರತಕ್ಕೂ ಏನು ಸಂಬಂಧ? ನಾವು ಹಿಂದುಗಳೆಂದು ಬೀಗುವ ಯುವಕರು ಗೂಗಲ್, ವಿಕಿಪೀಡಿಯಾದಲ್ಲಿ ಹಿಂದು ಎಂಬ ಪದದ ಅರ್ಥ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಆ ಪದದ ನೈಜ ಅರ್ಥ ಗೊತ್ತಾದಾಗ, ಅವರಿಗೆ ಹಿಂದುತ್ವ ನಮ್ಮದಲ್ಲ ಎಂದು ತಿಳಿಯುತ್ತದೆ. ಆಗ ಅದನ್ನು ಪೂಜನೀಯ ಭಾವದಿಂದ ನೋಡುವುದನ್ನು ಬಿಡುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಾಗಿ 3-4 ದಿನಗಳ ನಂತರ ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…
ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು.ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ. ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜ್, ನಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವಂಕಟೇಶ್, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉಚ್ಚ ನ್ಯಾಯಾಲಯದ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಅವರಿಬ್ಬರೂ ವರಸೆಯಲ್ಲಿ ಅಣ್ಣ-ತಂಗಿ ಆಗಬೇಕು ಆದರೆ ಅವರಿಬ್ಬರೂ ಪ್ರೇಮಿಗಳು ಇವರ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಯುವಕ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು ಎಂದು ಹೇಳಲಾಗುತ್ತಿದೆ.ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು. ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ. ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು…
ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ಭೀಷ್ಮ ಮತ್ತು ಉಕ್ಕಿನ ಮನುಷ್ಯ ಮಾಜಿ ಪ್ರಧಾನಿ ಆಗಿರುವಂತಹ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿ ನೀಡುರುವುದು ಸಂತೋಷದ ವಿಷಯವಾಗಿದೆ ಎಂದು ಶಾಸಕ SR ವಿಶ್ವನಾಥ್ ಸಂತೋಷ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾರ್ಯಕರ್ತರ ಕಾರ್ಯಕ್ರಮಕ್ಕೆ ನಡೆಯುವ ಸಂದರ್ಭದಲ್ಲಿ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವ ವಿಷಯ ತಿಳಿದು ತುಂಬಾ ಸಂತೋಷವಾಯಿತು. ಸಭೆಯ ಬಳಿಕ ಕಾರ್ಯಕರ್ತರು ಸಂಭ್ರಮೋತ್ಸವ ನಡೆಸಿದ್ದಾರೆ. 90ರ ದಶಕದಲ್ಲಿ ರಾಮಜನ್ಮ ಭೂಮಿ ಹೋರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅವರ ಜೊತೆಗೆ ನಾನು ಹೋರಾಟ ಮಾಡಿದ್ದೇನೆ. ಭಾರತೀಯ ಜನತಾ ಪಾರ್ಟಿಗೆ ಒಂದು ನೇತೃತ್ವವನ್ನು ಕೊಟ್ಟು ಕೇಂದ್ರದಲ್ಲಿ ಭಾರತೀಯ ಜನತಾ ಪಾರ್ಟಿ ಬರುವುದಕ್ಕೆ ಪ್ರಮುಖವಾದಂತ ಕಾರಣಿಕರ್ತರಿವರು ಎಂದು ತಿಳಿಸಿದರು. ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ಸಲುವಾಗಿ LK ಅಡ್ವಾನಿಯವರು 500 ವರ್ಷಗಳ ನಮ್ಮ ಸತತ ಹೋರಾಟ ನಡೆಸಿದ್ದಾರೆ.ಅಂತ ಹೇಳಿ ಇದನ್ನ…
ಬೆಂಗಳೂರು : ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ಸರ್ಕಾರ ಅತ್ಯುನ್ನತ ಗೌರವ ಯುತವಾದ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ತಮಟ್ವಿಡರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ವಿಷಯವಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿ ಈಗಿನ ಎಲ್ಲಾ ರಾಜಕಾರಣಿಗಳಿಗೂ ಎಲಿಕೆ ಅಡ್ವಾಣಿ ಮಾದರಿಯಾಗಿದ್ದಾರೆ ಎಂದು ತಿಳಿಸಿದರು. ಎಲ್ಲಾ ರಾಜಕಾರಣಿಗಳಿಗೂ ಮಾದರಿಯಾಗಿರುವ ರಾಜಕಾರಣಿ ಎಲ್ ಕೆ ಅಡ್ವಾಣಿ. ಅವರ ಮೇಲೆ ಒಂದು ಆಪಾದನೆ ಬಂದಾಗ ಆಪಾದನೆ ಮುಕ್ತ ಆಗೋವರೆಗೂ ಕೂಡ ಲೋಕಸಭೆಗೆ ಹೋಗಲ್ಲ ಎನ್ನುವ ಮಹಾಪುರುಷ LK ಅಡ್ವಾನಿಯವರು.ನಮ್ಮೆಲ್ಲರಿಗೂ ಕೂಡ ಅವರು ಹಿರಿಯರು ಮಾರ್ಗದರ್ಶಕರು ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಸಿಕ್ಕಿದೆ ಅಂತ ಕೇಳಿದ್ದಕ್ಕೆ ನಮ್ಮ ಎರಡು ಕಿವಿಗಳು ಪವಿತ್ರ ಆಗಿದ್ದು, ತುಂಬಾ ಸಂತೋಷವಾಗಿ ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದರು. ಅಡ್ವಾಣಿ ಅವರು ದೇಶದ ಅನೇಕ ಹುದ್ದೆಗಳನ್ನು ಪಡೆದಂತಹ ಸಂದರ್ಭದಲ್ಲಿ ಅಭಿವೃದ್ಧಿ ಮಾಡಿದ್ದು ಹೌದು.…
ಕಲಬುರಗಿ : ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಆಗುತ್ತಿರುವುದನ್ನು ವಿರೋಧಿಸಿ ಇದೇ ಫೆಬ್ರುವರಿ 7 ರಂದು ದೆಹಲಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಒಂದು ಪ್ರತಿಭಟನೆಯಲ್ಲಿ 136 ಶಾಸಕರು ಸೇರಿದಂತೆ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ತಾರತಮ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕಲ್ಬುರ್ಗಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಕೇಂದ್ರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ. ಫೆಬ್ರವರಿ 7 ರೆಂದು ದೆಹಲಿಗೆ ಹೋಗಿ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸಲಿದೆ. ಎಲ್ಲಾ ಸಚಿವರು ಹಾಗೂ ಶಾಸಕರು ಎಂಪಿಗಳು ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಈ ಬಗ್ಗೆ ಬಿಜೆಪಿಯವರು ಮೊದಲು ಆತ್ಮ ಅವಲೋಕನ ಮಾಡಿಕೊಳ್ಳಲಿ ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ ಕೇಂದ್ರದಿಂದ ಅನುದಾನ ಕೊಡಿಸಲಿ ಕೇಂದ್ರ ಸರ್ಕಾರದ ತಾರತಮ್ಯ…
ಮಂಡ್ಯ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಫೆಬ್ರವರಿ 7 ರಂದು ಸಮಾನ ಮನಸ್ಕರ ವೇದಿಕೆ ಮಂಡ್ಯ ಬಂದ್ ಗೆ ಕರೆ ನೀಡಿವೆ. ಅದರ ಬೆನ್ನಲ್ಲಿ ಅಂದ್ರೆ ಎರಡು ದಿನಗಳ ನಂತರ ಫೆಬ್ರವರಿ 9 ರಂದು ಬಜರಂಗದಳ ಕೂಡ ಬಂದ್ ಗೆ ಕರೆ ನೀಡಿವೆ. ಆದರೆ ಈ ಒಂದು ಬಂದ್ಗೆ ಆಟೋ ಚಾಲಕರು ಹಾಗೂ ವರ್ತಕರು ಬೆಂಬಲಿಸಿರಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಬಂದ್ ಬೆಂಬಲಿಸರದಿರಲು ಆಟೋಚಲಕರು ಹಾಗೂ ವರ್ತಕರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಹಲವು ದಿನಗಳ ಹಿಂದೆ ಕರಗೋಡಿನಲ್ಲಿ ಹನುಮಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಬಾವುಟ ಹಾರಾಟ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ತೀವ್ರ ವಿರೋಧಿಸಿ ಪ್ರತಿಭಟನೆ ಹಾಗೂ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ನಿರಂತರ ಮೇಲೆ ಲಾಠಿಚಾರ್ಜ್ ಕೂಡ ನಡೆದಿತ್ತು. ಅಲ್ಲದೆ ಮನೆಮನೆಯಲ್ಲೂ ಹನುಮದ್ವಜ ಹಾರಾಟ ನಡೆಸಲು ಬಜರಂಗದಳ ಯೋಜನೆ ಹಾಕಿಕೊಂಡಿದ್ದು ಅದರ ಅಂಗವಾಗಿ ಫೆಬ್ರುವರಿ 9 ರಂದು ಬಜರಂಗದಳ…
ಬೆಂಗಳೂರು : ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ರೂಪದಲ್ಲಿ ಆಮಿಷವೊಡ್ಡಲಾಗಿದ್ದು, ಅಂತಹ ಅಕ್ರಮಗಳನ್ನು ತಡೆಯುವಂತೆ ಸರ್ಕಾರಗಳು ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂಬ ಮನವಿಗೆ ಹೈಕೋರ್ಟ್ ಇದೀಗ ಸ್ಪಂದಿಸಿದೆ ಎಂದು ತಿಳಿದುಬಂದಿದೆ. ಚುನಾವಣೆಗೂ ಮುನ್ನ ಮತ್ತು ನಂತರ ಭ್ರಷ್ಟಾಚಾರ ಚಟುವಟಿಕೆ ನಿರ್ಬಂಧಿಸಲು ನೀತಿ ಸಂಹಿತೆಯ ಜೊತೆ ಕಠಿಣವಾದ ಜಾರಿಗೊಳಿಸಬಹುದಾದ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ನಿಖಿಲ್, ಗೌತಮ್ ಗೌಡ,, ಪ್ರಸಾದ್ ಕೆ ಆರ್ ಮತ್ತು ಎ ಮಂಜುನಾಥ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್…