Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ವಿರಿತಾಗಿ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಹಲವು ಯುವಕರು ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಮೈಸೂರಿನ ರೋಹಿತ್ ಎಂದು ಹೇಳಲಾಗುತ್ತಿದ್ದು, ರೋಹಿತ್ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ನಡೆಸಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಯುವಕ ರೋಹಿತ್ ದೂರು ನೀಡಿದ್ದಾನೆ. ಪಾಕಿಸ್ತಾನದ ಪರ ಹಾಗೂ ಅಲ್ಲಾಹೂ ಪರ ಘೋಷಣೆ ಕೂಗುವಂತೆ ಒತ್ತಾಯ ಮಾಡಿದ್ದಾರೆ. ಮೋದಿ ಪರ ಹಾಡು ಬರೆದಿದ್ದೀಯಾ ನಿನ್ನ ಸಾಯಿಸುತ್ತೇವೆ ಅಂತ ಬೆದರಿಕೆ ಹಾಕಿ ರೋಹಿತನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ ಮುಸ್ಲಿಂ ಯುವಕರು ಪರಾರಿಯಾಗಿದ್ದಾರೆ. ನಂತರ ಹಲ್ಲೆಗೊಳಗಾದ ಯುವಕ ರೋಹಿತ್ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ವಿಡಿಯೋ ಮೂಲಕ…
ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹಿರೇಮಠಳನ್ನು ಫಯಾಜ್ ಎನ್ನುವ ಆರೋಪಿ ಭೀಕರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಇದು ವೈಯಕ್ತಿಕ ವಿಚಾರಕ್ಕೆ ಆಗಿರುವ ಕೊಲೆಯಾಗಿದ್ದು ರಾಜ್ಯದಲ್ಲಿ ಕಾನೂನು ಸವ್ಯವಸ್ಥೆ ಬಹಳ ಚೆನ್ನಾಗಿದೆ ಎಂದು ತಿಳಿಸಿದರು. https://kannadanewsnow.com/kannada/bjp-releases-chargesheet-against-congress-says-abandoned-projects-failed/ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. https://kannadanewsnow.com/kannada/%e0%b2%a8%e0%b2%bf%e0%b2%ae%e0%b3%8d%e0%b2%ae-%e0%b2%af%e0%b3%8b%e0%b2%97%e0%b3%8d%e0%b2%af%e0%b2%a4%e0%b3%86%e0%b2%97%e0%b3%86-11-%e0%b2%a4%e0%b2%bf%e0%b2%82%e0%b2%97%e0%b2%b3%e0%b2%bf%e0%b2%a8/ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು…
ಬೆಂಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್ ಚಂಬು ಜಾಹೀರಾತು ಪತ್ರಿಕಾ ಜಾಹಿರಾತು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಬಿಜೆಪಿ ತಿರಿಗೇಟು ನೀಡಿದ್ದು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಟ್ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಕೈ ಬಿಟ್ಟ ಯೋಜನೆಗಳು ಕೈಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಅಡಿ ಬರಹದೊಂದಿಗೆ ಇದೀಗ ಚಾರ್ಟ್ ಬಿಡುಗಡೆ ಮಾಡಿದೆ. ಹೀಗೆಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಈ ವೇಳೆ ಶಾಸಕರಾದ ಗರುಡಾಚಾರ್, ರವಿ ಸುಬ್ರಮಣ್ಯ ಮುನಿರಾಜು ಉಪಸ್ಥಿತರಿದ್ದರು. ಇದೆ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಆರ್.ಅಶೋಕ್ ಕಾಂಗ್ರೆಸ್ ಎಷ್ಟು ಜನರಿಗೆ ಚೊಂಬು ಕೊಟ್ಟಿದೆ ಎಂದು ಮೋದಿ ಹೇಳಿದ್ದಾರೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿ ಕೊಡಲಿಲ್ಲ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಈ ಕುರಿತಂತೆ ಕಾಂಗ್ರೆಸ್ ವಾಗ್ದಾಳಿ ನಡೆಸಿದರು. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಕೊಡಲಿಲ್ಲ. ಅದು ಚೋಬ? ಬರಕ್ಕೆ 5000…
ಬೆಂಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್ ಚೊಂಬು ಜಾಹಿರಾತು ಪ್ರಕಟ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು ನಿಮ್ಮ ಯೋಗ್ಯತೆಗೆ 11 ತಿಂಗಳಲ್ಲಿ ಒಂದು ಚೊಂಬು ನೀರು ಕೊಡಲು ಆಗಲಿಲ್ಲ ಎಂದು ಕಿಡಿಕಾರಿದರು. https://kannadanewsnow.com/kannada/watch-video-3-killed-in-miscreants-firing-near-election-booth-in-manipur-video-goes-viral/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಷ್ಟು ಜನರಿಗೆ ಚೊಂಬು ಕೊಟ್ಟಿದೆ ಎಂದು ಮೋದಿ ಹೇಳಿದ್ದಾರೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿ ಕೊಡಲಿಲ್ಲ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಈ ಕುರಿತಂತೆ ಕಾಂಗ್ರೆಸ್ ವಾಗ್ದಾಳಿ ನಡೆಸಿದರು. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಕೊಡಲಿಲ್ಲ. ಅದು ಚೋಬ? ಬರಕ್ಕೆ 5000 ಕೋಟಿ ಕೊಡುತ್ತೇವೆ ಎಂದು ಕೊಡಲಿಲ್ಲ ಅದು ಚೋಬ? ಬಜೆಟ್ ನಲ್ಲಿ ಸರ್ವಜನಾಂಗದ ಶಾಂತಿಯ ತೋಟ ಅಂತ ಹೇಳಿದರು.ಈಗ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗೃಹ ಸಚಿವರು ಇದ್ದಾರೆ ಇಲ್ಲವೋ ಅಂತ ಜನರು ಹುಡುಕುತ್ತಿದ್ದಾರೆ ಎಂದರು. https://kannadanewsnow.com/kannada/fetal-abnormality-hc-allows-minor-hiv-positive-girl-to-end-28-week-pregnancy/ ಕೃಷ್ಣೆಯ ಕಣ್ಣೀರು ಅಂತ…
ಬೆಂಗಳೂರು : ಇಂದು ಹುಬ್ಬಳ್ಳಿಯ ಜನತೆ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿನಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆಯ ಸದಸ್ಯ ನಿರಂಜನ್ ಹಿರೇಮಠ್ ಎನ್ನುವರ ಮಗಳಾದ ನಿಹಾ ಹಿರೇಮಠ್ ಎನ್ನುವ ಯುವತಿಯನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಯಾಜ್ ಎನ್ನುವ ಯುವಕ ಭೀಕರವಾಗಿ ಕೊಲೆಗೈದಿದ್ದಾನೆ. ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಫಯಾಜ್ ನೇಹ ಹಿರೇಮಠ್ ಕುತ್ತಿಗೆಗೆ ಚಾಕು ಇರಿದು ಭೀಕರವಾಗಿ ಕೊಲೆಗದಿದ್ದಾನೆ ತಕ್ಷಣ ಹುಬ್ಬಳ್ಳಿಯ ವಿಧಾನಗಳ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿ ಫೈಯರ್ ನನ್ನು ಬಂಧಿಸಿದ್ದಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕವು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಟ್ವೀಟ್ ನಲ್ಲಿ ಅರಾಜಕತೆಯೇ ಆಡಳಿತದ ಧ್ಯೇಯ – ಕಾನೂನು ಸುವ್ಯವಸ್ಥೆ ಮಂಗಮಾಯ. ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ಮಂತ್ರ ಸಿಎಂ ಸಿದ್ದರಾಮಯ್ಯ ಅವರೇ, ಇದು ಅರಾಜಕತೆಯ ಹಾಗೂ ಓಲೈಕೆ ಆಡಳಿತದ ಪ್ರತಿಫಲವಾಗಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಮೇಲೆ ಫಯಾಜ್ ಚಾಕು ಇರಿದು…
ಬೆಂಗಳೂರು : ಬೆಂಗಳೂರಿನ ಯಲಹಂಕ ನ್ಯೂ ಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ನೀರಿನ ತೊಟ್ಟಿಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ನೀರಿನ ತೊಟ್ಟಿಯಲ್ಲಿ ಕವಿತಾ (40) ಮಗು ಪವನ್ (8) ಶವ ಪತ್ತೆಯಾಗಿದೆ. ತಾಯಿ ಹಾಗೂ ಮಗು ಸಾವನ್ನಪ್ಪಿರುವ ಕುರಿತಂತೆ ನಿಖರವಾದ ಮಾಹಿತಿ ಇಲ್ಲದ ಕಾರಣ ಘಟನೆ ಕುರಿತಂತೆ ಯಲಹಂಕ ನ್ಯೂಟೌನ್ ಪೊಲೀಸ್ರಿಂದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು ಘಟನೆ ಕುರಿತಂತೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ : ಪಂಚಮಸಾಲಿ 2ಎ ಮೀಸಲಾತಿ ಸಂಬಂಧಿಸಿದಂತೆ ಸಾಕಷ್ಟು ಹೋರಾಟಗಳನ್ನು ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲೇ ಪಂಚಮಸಾಲಿ ಸಮುದಾಯದ ಹಲವು ಶಾಸಕರಿದ್ದಾರೆ.ನಿಮಗೆ ಧಮ್ ಇದ್ರೆ ಸಿಎಂ ಸಿದ್ದರಾಮಯ್ಯ ಕಡೆಯಿಂದ ಪಂಚಮಸಾಲಿಗೆ ತ್ರಯ ಮೀಸಲಾತಿ ಘೋಷಿಸಿ ಎಂದು ಬಾಗಲಕೋಟೆಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದರು. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಕೋಟ್ಯಾಂತರ ಹಣ ಖರ್ಚು ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟವನ್ನು ಮಾಡಿದ್ದೆವು. ಕೊನೆಗೆ 2ಡಿ ಮೀಸಲಾತಿಗೆ ತಂದು ನಿಲ್ಲಿಸುವುದಕ್ಕೆ ಯಶಸ್ವಿಯಾಗಿದ್ದೇವೆ ಎಂದರು. ಕಾಂಗ್ರೆಸ್ ನಲ್ಲಿ ಪಂಚಮಸಾಲಿ ಸಮುದಾಯದ ಕೆಲವು ಶಾಸಕರಿದ್ದಾರೆ ನಿಮಗೆ ದಮ್ಮಿದ್ರೆ ಕೊಡಿಸರಪ್ಪ ಮೀಸಲಾತಿ ನಿಮ್ಮದೇ ಸರ್ಕಾರ ಇದೆ ತಾನೇ? ನಿಮಗೆ ದಮ್ಮಿದ್ರೆ ಸಿದ್ದರಾಮಯ್ಯ ಕಡೆಯಿಂದ ಮೀಸಲಾತಿಯನ್ನು ಘೋಷಿಸಿ.ಸಿದ್ದರಾಮಯ್ಯ ಕನಿಷ್ಠ ಪಂಚಮಸಾಲಿ ಸಮುದಾಯದ ಸಭೆ ಸಹ ಕರೆಯಲಿಲ್ಲ. ಅಧಿವೇಶನದ ವೇಳೆ ಸಭೆಗೆ ಕರೆದರೆ ಸಚಿವ ಶಿವಾನಂದ್ ಪಾಟೀಲ್ ಬರಲಿಲ್ಲ ಬೆಳಗಾವಿಯಲ್ಲಿಯೇ ಇದ್ದರೂ ಕೂಡ ಸಚಿವ…
ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ ಗುತ್ತೇದಾರ್ ಅವರು ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜೀತ ಅಭ್ಯರ್ಥಿಯಾದ ಮಾಲಿಕಯ್ಯ ಗುತ್ತೇದಾರ್ ಅವರು ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಐಟಿ ಬಿಟಿ ಸಚಿವರಾದಂತಹ ಪ್ರಿಯಾಂಕರಿಗೆ ಅವರು ಕಲಬುರ್ಗಿಯಿಂದ ಬೆಂಗಳೂರಿಗೆ ಇಂದು ಪ್ರಯಾಣ ಬೆಳೆಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ. ವೈ ಪಾಟೀಲ್ ವಿರುದ್ಧ ಬಿಜೆಪಿಯಿಂದ…
ಉಡುಪಿ : ಅಲೆಗಳ ಆರ್ಭಟದ ಸುಳಿಗೆ ಮೂವರು ಪ್ರವಾಸಿಗರು ಸಿಲುಕಿದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಈ ಪೈಕಿ ಓರ್ವ ಮೃತನಾಗಿದ್ದರೆ, ಮತ್ತಿಬ್ಬರು ಚೇತರಿಸಿಕೊಂಡಿದ್ದಾರೆ ಗಿರೀಶ್(26) ಎಂಬ ಪ್ರವಾಸಿಗ ಕೊನೆಯುಸಿರೆಳೆದಿದ್ದು, ಇನ್ನುಳಿದ ಅನಂತ ಗೌಡ(42), ಸಂತೋಷ್ (27) ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್ಗೆ ಬಂದಿತ್ತು. ಈ ಪೈಕಿ ಅನಂತ ಗೌಡ, ಸಂತೋಷ್ ಹಾಗೂ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು. ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದರು. ಈ ವೇಳೆ ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿ, ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು.
ಬೆಂಗಳೂರು : ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿ 2500-3000 ಕೋಟಿ ಹಣ ಸೋನಿಯಾಗಾಂಧಿಗೆ ಕೊಟ್ಟಿದೆ.ರಾಜ್ಯವನ್ನು ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಕೊಟ್ಟಿದೆ.ರಾಜ್ಯದ ಜನರಿಗೆ ಮೋಸ ಮಾಡುವ ಸರ್ಕಾರ ಬೇಕಾ? ಸತ್ಯ ನೋಡಿದ್ದೇನೆಂದು ಕಾಂಗ್ರೆಸ್ನವರು ಹೇಳಲಿ ಎಂದು ಸವಾಲು ಹಾಕಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಎಲ್ಲಿದ್ದರೂ? ಅವರನ್ನು ರಾಜಕೀಯಕ್ಕೆ ತಂದಿದ್ದು ಯಾರು? ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಜನರಿಂದ ಲೂಟಿ ಮಾಡಿದೆ ಲೋಕಸಭಾ ಚುನಾವಣೆ ಮುಗಿದ ತಕ್ಷಣ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಭವಿಷ್ಯ ನುಡಿದರು. ಲೋಕಸಭೆ ಚುನಾವಣೆಯ ಮುಗಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಪತನವಾಗಲಿದೆ. ನಾನು ಬೇಜವಾಬ್ದಾರಿಯಿಂದ ಮಾತನಾಡುತ್ತಿಲ್ಲ. ಪ್ರಧಾನ ಮಂತ್ರಿ ಮೋದಿಗೆ ಎದುರು ನಿಲ್ಲುವ ಒಬ್ಬ ಮುಖಂಡ ಇದ್ದಾನಾ?ಮಮತಾ ಬ್ಯಾನರ್ಜಿ, ಸ್ಟಾಲಿನ್, ಡಿಕೆ ಶಿವಕುಮಾರ್ ಎದುರು ನಿಲ್ಲುತ್ತಾರಾ?