Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : 13 ವರ್ಷದ ಹಳೆಯ ಕೇಸ್ ನಲ್ಲಿ ಪತ್ನಿ ಹಾಗೂ ಮಗುವಿನ ಕೋಲೆ ಕೇಸ್ ಪ್ರಕರಣದಲ್ಲಿ ಪತಿಯ ಕೈವಾಡವಿದೆ ಎಂದು ಶಂಕಿಸಿ ಆತನನ್ನು ಕೊಲ್ಲಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆ ಕಚೇರಿ ಬಳಿ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆ ಕಚೇರಿ ಬಳಿ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಹಮೀದ ಎನ್ನುವ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೈಯಲು ಪ್ರಯತ್ನ ನಡೆಸಲಾಗಿದೆ.2011 ರಲ್ಲಿ ಅವಳಿ ಕೊಲೆ ಕೇಸ್ ನಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. 2011 ರಲ್ಲಿ ರಜಿಯಾ ಮಗು ಫಾತಿಮಾ ರುಜಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೂರಿಯಿಂದ ಇರಿದು ರಜಿಯಾ ಮಗು ಫಾತಿಮಾ ಕೊಲೆಯಾಗಿದ್ದರು. ಕರಾವಳಿ ಭಾಗದಲ್ಲಿ ಪಂಜಿ ಮೊಗುರ್ ಪ್ರಕರಣ ಭಾರಿ ಸಂಚಲನ ಸೃಷ್ಟಿಸಿತ್ತು.ಹತ್ಯೆಯಾದ ರಜಿಯಾ ಪತಿ ಹಮೀದ್ ವಿರುದ್ಧ ಆರೋಪ ಕೇಳಿಬಂದಿತ್ತು.ಪತಿ ಹಮೀದ್ ಮನೆಯಿಂದ…
BREAKING : ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ : ಯತ್ನಾಳ್ ವಿರುದ್ಧ ದೂರು ದಾಖಲು
ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ವಿರುದ್ಧ ಇದೀಗ ದೂರು ದಾಖಲಾಗಿದೆ. ಹೌದು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಕುಟುಂಬಸ್ಥರನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವಮಾನಿಸಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಯತ್ನಾಳ್ ಅವರು ಹೀಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೊಂದು ದೇಶ ವಿರುದ್ಧ ಹೇಳಿಕೆ ಎಂದು ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಮೇಶ್ವರಂ ಕೆಫೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಇತ್ತೀಚಿಗೆ NIA ವಶಪಡಿಸಿಕೊಂಡು ವಿಚಾರಣೆ ನಡೆಸಿತ್ತು.ಈ ವಿಷಯದ ಕುರಿತಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಅವರು ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಇದೀಗ ಕಾಂಗ್ರೆಸ್ ವಿರೋಧಿಸಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಯತ್ನಾಳ್ ವಿರುದ್ಧ ದಾಖಲಿಸಿದೆ.
ವಿಜಯಪುರ : ಕಳೆದ ಏಪ್ರಿಲ್ ಮೂರರಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಚ್ಯಣ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಎರಡು ವರ್ಷದ ಬಾಲಕ ಸಾತ್ವಿಕ್ ನನ್ನು ಸತತ 20 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇಂದು ಸಾತ್ವಿಕ್ ಎಲ್ಲಾ ವೈದ್ಯಕೀಯ ವರದಿಗಳು ನಾರ್ಮಲ್ ಆಗಿರುವುದರಿಂದ ಸಾತ್ವಿಕ್ನನ್ನು ಆಸ್ಪತ್ರೆಗೆ ಸಿಬ್ಬಂದಿಗಳು ಕೇಕ್ ಕತ್ತರಿಸುವ ಮೂಲಕ ಬೀಳ್ಕೊಡು ಘಟನೆ ನಡೆಯಿತು. ತೆರೆದ ಕೊಳವೆಬಾವಿಯಿಂದ ಎರಡು ವರ್ಷದ ಸಾತ್ವಿಕ್ ರಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ ಐ ಸಿ ಯು ನಲ್ಲಿ ಕೆ ಕತ್ತರಿಸಿ ಮಗುವನ್ನು ಬೀಳ್ಕೊಟ್ಟ ವೈದ್ಯ ಸಿಬ್ಬಂದಿ. ಸತತ 20 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಸಾತ್ವಿಕ್ ನನ್ನು ಕೊಳವೆಬಾವಿಯಿಂದ ರಕ್ಷಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಆಸ್ಪತ್ರೆಗೆ ಸ್ಥಳಂತರಿಸಿ ಟೆಸ್ಟ್ ಮಾಡಲಾಗಿತ್ತು. ಎಲ್ಲಾ ಟೆಸ್ಟ್ ವರದಿ ನಾರ್ಮಲ್ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಅಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಏಪ್ರಿಲ್ ಮೂರರಂದು ಇಂಡಿ ತಾಲೂಕಿನ ಲಚ್ಚಣ ಗ್ರಾಮದಲ್ಲಿ ಸಾತ್ವಿಕ್ ತೆರೆದು…
ಉತ್ತರಕನ್ನಡ : ಮೋದಿ ಅವರು ಮತ್ತೆ ಪ್ರಧಾನಿ ಆಗಲೆಂದು ಅವರ ಅಭಿಮಾನಿಗಳು ಹಲವಾರು ರೀತಿಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸುತ್ತಾರೆ.ಆದರೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಕೈ ಬೆರಳನ್ನೇ ಕತ್ತರಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಗೋಡೆಯ ಮೇಲೆ ತನ್ನ ರಕ್ತದಲ್ಲಿ ಬರೆದಿರುವಂತಹ ಘಟನೆ ನಡೆದಿದೆ. ಹೌದು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ ರಕ್ತ ಅರ್ಪಿಸಿದ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ವ್ಯಕ್ತಿಯನ್ನು ಅರುಣ್ ವರ್ಣೇಕರ್ ಎಂದು ಗುರುತಿಸಲಾಗಿದೆ. ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗ ಕೂಡ ಇದೇ ಅರುಣ್ ರಕ್ತದಲ್ಲಿ ಕಾಳಿಗೆ ಹರಕೆ ಇಟ್ಟಿದ್ದರು. ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಇದು ಕೊನೆಯಬಾರಿ ಆದ್ದರಿಂದ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಕಾಳಿಗೆ ಅರ್ಪಿಸಿದ್ದಾರೆ. ಈ ವ್ಯಕ್ತಿ ಮೋದಿಗಾಗಿ ಗುಡಿಯೊಂದನ್ನು…
ಬೆಂಗಳೂರು : ಚುನಾವಣಾ ಕರ್ತವ್ಯದಿಂದ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ಇದೆ ಎಂದು ಹೇಳಿದ ಹೈಕೋರ್ಟ್, ಇದೀಗ ಬಿಬಿಎಂಪಿ ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಿದೆ. ಚುನಾವಣೆ ಕರ್ತವ್ಯಕ್ಕೆ ಹಾಜರಾಗುವಂತೆ ಬಿಬಿಎಂಪಿ ನೀಡಿದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ. ನಿಯಮದಲ್ಲಿ ವೈದ್ಯರು ನರಸ ಫಾರ್ಮಸಿ ಅಧಿಕಾರಿಗಳಿಗೆ ವಿನಾಯತಿ ಇದೆ. ಆದರೂ ಬಿಬಿಎಂಪಿಯಿಂದ ಕಾನೂನು ಬಾಹಿರ ಸೂಚನೆ ಎಂದು ಅರ್ಜಿದಾರರ ಪರ ವಕೀಲ ಬಿಎಮ್ ಸಂತೋಷ್ ವಾದಿಸಿದ್ದರು. ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಿ ಬಿಬಿಎಂಪಿ ಚುನಾವಣಾ ಅಧಿಕಾರಿಗಳಿಗೆ ಹೈ ಕೋರ್ಟ್ ಈ ಕುರಿತಂತೆ ಸೂಚನೆ ನೀಡಿ, ಚುನಾವಣೆ ಕರ್ತವ್ಯಕ್ಕೆ ಹಾಜರಾಗುವಂತೆ ಬಿಬಿಎಂಪಿ ನೀಡಿದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಶಿವಮೊಗ್ಗ : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ನನ್ನು ನಿನ್ನೆ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಈ ಕುರಿತಂತೆ ಮಾಜಿ ಗ್ರಹ ಸಚಿವ ಅರ್ಧ ಜ್ಞಾನ ಅಂದ್ರ ಬಿಜೆಪಿ ಕಾರ್ಯಕರ್ತರು ಇಂತಹ ಕೃತ್ಯ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. https://kannadanewsnow.com/kannada/belagavi-6-injured-as-mad-dog-attacks-court-inmates/ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ಮಾಡಿ ಕಳುಹಿಸಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಆರೋಗ್ಯ ಕೇಂದ್ರ ಹೇಳಿಕೆ ನೀಡಿದರು. https://kannadanewsnow.com/kannada/massive-120-feet-high-chariot-falls-at-fair-in-anekal/ ಬಿಜೆಪಿ ಕಾರ್ಯಕರ್ತರು ದೇಶಭಕ್ತರು ಬಿಜೆಪಿ ಕಾರ್ಯಕರ್ತರು ಇಂತಹ ಕೃತ್ಯವಶಗಳು ಸಾಧ್ಯವಿಲ್ಲ ಆದರೆ ಆರೋಗ್ಯ ಸಚಿವಾ ದಿನೇಶ್ ಗುಂಡೂರಾವ್ ಕೆಟ್ಟದ್ದಾಗಿ ಟೀಕೆ ಮಾಡಿದ್ದಾರೆ ಅವರು ಹಿಂದೆ ಮುಂದೆ ನೋಡದೆ ಹೇಳಿಕೆಯನ್ನು ನೀಡಿದ್ದಾರೆ ಸಚಿವರಾಗಿ ಈ ರೀತಿ ಹೇಳಿಕೆ ನೀಡಿದ್ದು ಬೇಸರ ತಂದಿದೆ.ಇದನ್ನು ರಾಜಕೀಯವಾಗಿ ಕಾಂಗ್ರೆಸ್ ಬಳಕೆ ಮಾಡುತ್ತಿದೆ ಬಿಜೆಪಿ ಬಗ್ಗೆ ಕಾಂಗ್ರೆಸ್…
ಬೆಳಗಾವಿ : ಹುಚ್ಚುನಾಯಿ ಒಂದು ನ್ಯಾಯಾಲಯ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಕಚ್ಚಿದ್ದು, ಈ ವೇಳೆ ಆರು ಜನರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನ್ಯಾಯಾಲಯ ಆವರಣದಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/sslc-exam-today-8-lakhs-of-students-attended-15402-absent/ ಗಾಯಾಳುಗಳು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ನಂತರ ಪಟ್ಟಣದ ಬಸವ ವೃತ್ತದಲ್ಲಿ ನಾಯಿ ಓಡಿಸಲು ಕೈಯಲ್ಲಿ ದೊಣ್ಣೆ ಹಿಡಿದು ಜನರು ಪ್ರಯತ್ನ ಮಾಡಿದ್ದಾರೆ. ಓರ್ವ ಸ್ಥಳೀಯ ದೊಣ್ಣೆಯಿಂದ ಹೊಡೆದು ನಾಯಿ ಕೊಲ್ಲಲು ಯತ್ನಿಸಿದರೂ ಅಲ್ಲಿಂದ ಶ್ವಾನ ಪರಾರಿಯಾಗಿದೆ. https://kannadanewsnow.com/kannada/massive-120-feet-high-chariot-falls-at-fair-in-anekal/ ಇವಳೇ ಗಾಯಗೊಂಡವರಲ್ಲಿ ಒಬ್ಬರು ವ್ಯಕ್ತಿ ಮಾತನಾಡಿ ನಾನು ನ್ಯಾಯಾಲಯ ಆವರಣದೊಳಗೆ ಹೋಗುವಾಗ ನನ್ನ ಕಾಲಿಗೆ ಕಚ್ಚಿ ನಾಯಿ ಮುಂದೆ ಹೊಡಿತು ಈ ವೇಳೆ ಹೋಗುವಾಗ ಹಲವರಿಗೆ ಕಚ್ಚಿ ಗಾಯ ಮಾಡಿ ತಪ್ಪಿಸಿಕೊಂಡಿದೆ ಆದಷ್ಟು ಬೇಗ ಆ ನಾಯಿಯನ್ನು ಹಿಡಿಯಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಇದೇ ರೀತಿ ಹಲವಾರು ಜನರಿಗೆ ತೊಂದರೆ ಕೊಡುತ್ತದೆ ಎಂದು ಅವರು…
ಧಾರವಾಡ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮುಂದೆ ಸಚಿವ ಸಂತೋಷ ಲಾರ್ಡ್ ಅವರ ಮಕ್ಕಳು ಏನಾಗುತ್ತಾರೆ ಎಂಬ ಪ್ರಶ್ನೆಗೆ ಇದೀಗ ಸಚಿವ ಸಂತೋಷಕ್ಕೆ ತಿರುಗಟ್ಟಿ ನೋಡಿದ್ದು ನನ್ನ ಮಕ್ಕಳು ಮೋದಿ ಅವರಂತೆ ಸುಳ್ಳು ಹೇಳದೆ ರಾಹುಲ್ ಗಾಂಧಿ ಅವರಂತೆ ಆಗುತ್ತಾರೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದೇನೆ ಎಂದು ತಿರುಗೇಟು ನೀಡಿದರು. https://kannadanewsnow.com/kannada/how-many-sim-cards-are-running-in-your-name-find-out-this-easy-way/ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಮಕ್ಕಳು ಏನಾಗಬೇಕೆಂಬ ಪ್ರಹ್ಲಾದ ಜೋಶಿ ಪ್ರಶ್ನೆಗೆ ಸಂತೋಷ ಲಾಡ್ ಉತ್ತರಿಸಿದ್ದು, ಪ್ರಹ್ಲಾದ ಜೋಶಿ ಹೇಳಿಕೆಗೆ ಸಂತೋಷ್ ಲಾಡ್ ಇದೀಗ ಕೌಂಟರ್ ಕೊಟ್ಟಿದ್ದಾರೆ. ನನ್ನ ಮಕ್ಕಳು ರಾಹುಲ್ ಗಾಂಧಿ ಅವರ ರೀತಿ ಆಗಬೇಕು ಇದನ್ನು ಹೆಮ್ಮೆಯಿಂದ ಹೇಳುತ್ತಿದ್ದೇನೆ ಎಂದು ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದರು. https://kannadanewsnow.com/kannada/india-exports-india-exports-rice-wheat-for-sugar-onion/ ನನ್ನ ಮಕ್ಕಳು ಮೋದಿಯಂತೆ ಸುಳ್ಳು ಹೇಳುವವರಾಗಬಾರದು. ಹಾಗಾಗಿ ರಾಹುಲ್ ಗಾಂಧಿಯವರ ತರ ಆಗಬೇಕು ಎಂದು ಹೆಮ್ಮೆಯಿಂದ ಹೇಳುತ್ತಿದ್ದೇನೆ. ಮೋದಿ ಪ್ರಭುದ್ಧರಾಗಿದ್ದರೆ ಒಂದು ಸುದ್ದಿಗೋಷ್ಠಿ ಮಾಡಲಿ. ರಾಹುಲ್ ಗಾಂಧಿ ಟಿವಿ…
ಮಂಗಳೂರು : ಇತ್ತೀಚಿಗೆ ಅಗ್ನಿಯ ಅವಘಡಗಳು ಸಾಕಷ್ಟು ಹೆಚ್ಚಾಗುತ್ತಿದ್ದು, ಇದೀಗ ಮಂಗಳೂರು ನಗರದ ಬಂದರಿನ ಜಿ ಎಂ ರಸ್ತೆಯ ಮನೆಯಲ್ಲಿ ಶನಿವಾರ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಕುರಿತಂತೆ ವರದಿಯಾಗಿದೆ. https://kannadanewsnow.com/kannada/air-india-to-hire-5700-new-employees/ ಹೌದು ಮಂಗಳೂರು ನಗರದ ಬಂದರಿನ ಜಿ ಎಂ ರಸ್ತೆಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿದ್ದ ಹಲವಾರು ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಯ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/bengaluru-mother-gives-theft-training-to-son-hands-of-two-men/ ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯವರು ಹೊರಗೆ ಬಂದು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ. ಪಾಂಡೇಶ್ವರ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವ ಸಾಧ್ಯತೆಇದೆ ಎಂದು ಅಗ್ನಿ ಶಾಮಕ ದಳದವರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು : ಮನೆಯೇ ಮೊದಲ ಪಾಠ ಶಾಲೆ ತಾಯಿಯೇ ಮೊದಲ ಗುರು ಎಂದು ಹೇಳುತ್ತಾರೆ ಆದರೆ ಬೆಂಗಳೂರಿನಲ್ಲಿ ಹೆತ್ತ ತಾಯಿಯೊಬ್ಬಳು ಮಗನಿಗೆ ಕಳ್ಳತನದ ಟ್ರೇನಿಂಗ ಕೊಡುವುದಲ್ಲದೆ ಕೈಗೆ ಮಚ್ಚು ಕೊಟ್ಟು ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಕಳ್ಳತನಕ್ಕೆ ಪ್ರೋತ್ಸಾಹ ನೀಡುತ್ತಿರುವ ಘಟನೆ ನಡೆದಿದ್ದು ಇದೀಗ ಇಬ್ಬರನ್ನು ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ಸ್ವತಃ ಹೆತ್ತಮ್ಮನೇ ತನ್ನ ಮಗನಿಗೆ ಮಚ್ಚು ಹಾಗೂ ಚಾಕು ಕೊಟ್ಟು ಒಬ್ಬಂಟಿ ಮಹಿಳೆಯರನ್ನು ಬೆದರಿಸಿ ಚಿನ್ನ, ಬೆಳ್ಳಿ ಸೇರಿ ಬೆಲೆಬಾಳುವ ವಸ್ತುಗಳನ್ನು ರಾಬರಿ ಮಾಡಿಕೊಂಡು ಬರಲು ತರಬೇತಿ ನೀಡುತ್ತಿದ್ದಳು. ಈಗ ಪೊಲೀಸರು ಮಹಿಳೆಯಿಂದ ಬರೋಬ್ಬರಿ 103 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮಗನನ್ನು ತಪ್ಪು ದಾರಿಗೆಳೆದ ತಾಯಿ ರೋಜ (32) ಎಂಬಾಕೆ ಆಗಿದ್ದಾಳೆ. ಈ ಘಟನೆಯ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತಾಯಿ ಮತ್ತು ಅಪ್ರಾಪ್ತ ಮಗನನ್ನು ಬಂಧಿಸಲಾಗಿದೆ. ಈಕೆ ಹೆತ್ತ ತಾಯಿ ಆಗಿದ್ದರೂ ತನ್ನ ಮಗನಿಗೆ ದುಡಿದು ತಿನ್ನುವುದನ್ನು ಬಿಟ್ಟು ಕಳ್ಳತನ…