Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಇಡಿ ಸಂಕಷ್ಟ ಎದುರಾಗಿದೆ. ಇದರ ಮಧ್ಯ ಅವರ ಪತ್ನಿ ಪಾರ್ವತಿಯವರು, ಮುಡಾಗೆ 14 ಸೈಟ್ ಗಳನ್ನು ವಾಪಸ್ ನೀಡಿದ್ದಾರೆ. ಆದರೆ ವಿಪಕ್ಷಗಳು ಎಷ್ಟೇ ಒತ್ತಾಯ ಮಾಡಿದರು, ನಾನು ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಈ ವಿಚಾರವಾಗಿ, ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಅವರು ಸಿಎಂ ಸಿದ್ದರಾಮಯ್ಯ ನಾನೇ ಜಡ್ಜ್ ಎನ್ನುವ ಮನಸ್ಥಿತಿಯಿಂದ ಹೊರಬರಲಿ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಆರ್ ಅಶೋಕ್ ಅವರ 11 ವರ್ಷಗಳ ಹಳೆಯ ಪ್ರಕರಣವನ್ನು ಎತ್ತಿದ್ದಾರೆ. ಇವರಿಗೆ ಸಿದ್ದರಾಮಯ್ಯ ರಾಜೀನಾಮೆ ಕೇಳುವ ತಾಕತ್ ಇಲ್ಲ. ಅಶೋಕ ರಾಜೀನಾಮೆ ಕೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಧ್ವನಿ ಎತ್ತಿದ್ದಾರೆ ಎಂದರು. ಆರ್.ಅಶೋಕ ಹೆಗಲ ಮೇಲೆ ಬಂದೂಕಿಟ್ಟು ಸಿದ್ದರಾಮಯ್ಯಗೆ ಗುರಿ ಇಟ್ಟಿದ್ದಾರೆ.ಸಿದ್ದರಾಮಯ್ಯ ಕಡೆ ಬಹಳ ಬಂದೂಕು ಇವೆ ಎಂಬುದು ಸ್ಪಷ್ಟವಾಗಿದೆ. ಸಿದ್ದರಾಮಯ್ಯ ನಾನೆ ಜಡ್ಜ್…

Read More

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಮುಡಾ ಸೈಟ್ ಹಂಚಿಕೆಯಾಗಿದೆ ಹಾಗಾಗಿ ಇದರಲ್ಲಿ ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡಬೇಕು ಎಂದು ಸ್ವಪಕ್ಷದ ವಿರುದ್ಧವೇ ಶಾಸಕ ಎಸ್ ಟಿ ಸೋಮಶೇಖರ್ ವಾಗ್ದಾಳಿ ನಡೆಸಿದರು. ಈ ವಿಚಾರವಾಗಿ ಎಂಎಲ್ಸಿ ಸಿಟಿ ರವಿ ಅವರು ಶಾಸಕ ಎಸ್ ಟಿ ಸೋಮಶೇಖರ್ ಗೆ ಆತ್ಮಸಾಕ್ಷಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ನೈತಿಕ ಮೌಲ್ಯ ಎತ್ತಿ ಹಿಡಿಯುವ ಯಾವುದೇ ರಾಜಕಾರಣಿ ತಮ್ಮ ಮೇಲೆ ಆಪಾದನೆ ಬಂದಾಗ ರಾಜೀನಾಮೆ ನೀಡುತ್ತಾರೆ. ಜಿ ಟಿ ದೇವೇಗೌಡರ ಹೇಳಿಕೆಗೆ ಉತ್ತರಿಸುವ ಕೆಲಸ ನಂದಲ್ಲ.ಎಸ್ ಟಿ ಸೋಮಶೇಖರ್ ಆತ್ಮಸಾಕ್ಷಿ ಇಲ್ಲದಿರುವ ಕಾರಣಕ್ಕೆ ತಾಂತ್ರಿಕವಾಗಿ ಮಾತ್ರ ಬಿಜೆಪಿಯಲ್ಲಿ ಇದ್ದಾರೆ ಸೋಮಶೇಖರ್ ಜಿ ಟಿ ದೇವೇಗೌಡ ಬಗ್ಗೆ ನಾನು ಮಾತನಾಡುವುದಿಲ್ಲ ನಮ್ಮ ಪಕ್ಷದ ನಿಲುವಿನಲ್ಲಿ ವ್ಯತ್ಯಾಸ ಇಲ್ಲ ಎಂದು ತಿಳಿಸಿದರು.

Read More

ನವದೆಹಲಿ : ತಿರುಪತಿ ಲಡ್ಡು ವಿಚಾರವಾಗಿ ಕಳೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಆಂಧ್ರ ಸರ್ಕಾರಕ್ಕೆ ಛೀಮಾರಿ ಹಾಕಿತ್ತು. ರಾಜಕೀಯದಲ್ಲಿ ದೇವರನ್ನು ಎಳೆದು ತರಬೇಡಿ ಎಂದು ಹಿಗ್ಗಾ ಮುಗ್ಗ ಜಾಡಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆ ಮುಂದೂಡಲಾಯಿತು. ಹೌದು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನಾಳೆಗೆ ಭಾರತದ ಸುಪ್ರೀಂ ಕೋರ್ಟ್ ಮುಂದೂಡಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಾಳೆಗೆ ಬೆಳಿಗ್ಗೆ 10.30ಕ್ಕೆ ಮುಂದೂಡುವಂತೆ ಕೋರಿದ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈಗಾಗಲೇ ಈ ವಿಷಯದ ಕುರಿತು 4 ಅರ್ಜಿಗಳನ್ನು ವಶಪಡಿಸಿಕೊಂಡಿದೆ. ಹಿಂದಿನ ಆಡಳಿತದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ…

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಳ್ಳಾರಿ ಜಿಲ್ಲೆಗೆ ಕೊಲೆ ಆರೋಪಿ ಆಗಿರುವಂತಹ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಹಾಗೂ ನಟ ದರ್ಶನ್ ಸಹೋದರಿ, ಭಾವ ಭೇಟಿ ನೀಡಿದ್ದರು. ಈ ವೇಳೆ ವಿನೀಶ್ ದರ್ಶನ್ ಅವರನ್ನು ತಬ್ಬಿಕೊಂಡು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಕ್ಕಿ ಬಿಕ್ಕಿ ಅತ್ತಿರುವ ಪ್ರಸಂಗ ನಡೆಯಿತು. ಇಂದು ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್ ಭೇಟಿಯಾದರು. ಅಪ್ಪನ ಮುಖ ನೋಡುತ್ತಿದ್ದಂತೆ ಪುತ್ರ ವಿನೇಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವೇಳೆ ಮಗನನ್ನು ತಬ್ಬಿ ದರ್ಶನ್ ಸಂತೈಸಿದ್ದಾರೆ. ಇದೆ ಸಂದರ್ಭದಲ್ಲಿ ಸೆಂಟ್ರಲ್ ಜೈಲಿನಲ್ಲಿರುವ ಅಪ್ಪನ ಆರೋಗ್ಯವನ್ನು ವಿನೀಶ್ ವಿಚಾರಿಸಿದ. ಆದಷ್ಟು ಬೇಗ ಹೊರ ಬರುತ್ತೇನೆ ಆರಾಮಾಗಿರು ಎಂದು ದರ್ಶನ್ ಪುತ್ರನಿಗೆ ತಿಳಿಸಿದ್ದಾರೆ. ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪುತ್ರ ವಿನೀಶ್ ಕಣ್ಣೀರಿಟ್ಟಿದ್ದಾನೇ. ಮಗ ಅಳುವುದನ್ನು ಕಂಡು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಭಾವುಕರಾಗಿದ್ರು. ವಿಜಯಲಕ್ಷ್ಮಿ…

Read More

ಮೈಸೂರು : ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಅವರು ಮೈಸೂರಿನಲ್ಲಿ ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.…

Read More

ಮೈಸೂರು : ಒಂದು ಕಡೆಗೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದರೆ, ಇನ್ನೊಂದೆಡೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿವೆ. ಇದರ ಮಧ್ಯ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಇದೀಗ ಇಂದು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ ಎಂದು ತಿಳಿಸಿದ್ದಾರೆ. ಹೌದು ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು,ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ. ಉತ್ತಮ ಕೆಲಸ ಮಾಡಲು ದೇವಿ ಇನ್ನೊಂದು ವರ್ಷವಾದರೂ ಆಶೀರ್ವದಿಸಲಿ. ಜನರ ಸೇವೆ ಮಾಡಲು ಆ ತಾಯಿ ಚಾಮುಂಡಿ ಶಕ್ತಿ ಕೊಡಲಿ ಎಂದು ಬೇಡಿಕೊಳ್ಳುವೆ ಎಂದಿದ್ದಾರೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ರೆಕ್ಕೆ ಪುಕ್ಕ ಬಂದಂತಾಗಿದೆ.ಅಧಿಕಾರದ ಹಂಚಿಕೆ ಬಗ್ಗೆಯೇ ಸಿಎಂ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಇಡಿ ಹಾಗೂ ಲೋಕಾಯುಕ್ತ ತನಿಖೆಯನ್ನು ಆರಂಭಿಸಿದ್ದು ಅಲ್ಲದೆ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ಸಹ ವಾಪಸ್ ನೀಡಿದ್ದಾರೆ. ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಮುಡಾ ಸೈಟ್ ಹಂಚಿಕೆಯಾಗಿದ್ದು ಬಿಜೆಪಿ ಕಾಲದಲ್ಲಿ ಆಗ ಅವರು ಏನು ಲಡ್ಡು ತಿನ್ನುತ್ತಿದ್ದರ? ಎಂದು ಸಚಿವ ಜಮೀರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿಲ್ಲ ಅದು ಬಿಜೆಪಿ ಕಾಲದಲ್ಲಿ ನಡೆದಿರುವಂತದ್ದು. ಸೈಡ್ ಕೊಟ್ಟಿರುವುದು ಬಿಜೆಪಿ ಕಾಲದಲ್ಲಿ ಆಗ ನಮ್ಮ ಸರ್ಕಾರ ಇರಲಿಲ್ಲ. ಆಗ ಬಿಜೆಪಿ ನಾಯಕರು ಏನು ಮಾಡುತ್ತಿದ್ದರು ಲಡ್ಡು ತಿನ್ನುತ್ತಿದ್ದಾರಾ? ಕೋರ್ಟ್ ನ ತೀರ್ಪು ಸ್ವಾಗತಿಸುವೆ. ತನಿಖೆ ಬಳಿಕ ಸತ್ಯಾಂಶ ಗೊತ್ತಾಗುತ್ತದೆ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಜಿ ಟಿ ದೇವೇಗೌಡ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿ, ಜಿ ಟಿ…

Read More

ಬೆಂಗಳೂರು : ಇತ್ತೀಚಿಗೆ ಕಲ್ಬುರ್ಗಿಯಲ್ಲಿ ಉದ್ಯಮಿಗಳ ಮೇಲೆ 2 ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಅವರನ್ನು ಹನಿಟ್ರ್ಯಾಪ್​ಗೆ ಸಿಲುಕಿಸಲು ಯತ್ನಿಸಿ, 6 ಕೋಟಿ ನೀಡುವಂತೆ ಒತ್ತಾಯಿಸಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌. ಇನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ ಮೂವರು ಆರೋಪಿಗಳನ್ನು ವಿದ್ಯಾ ಬಿರಾದರ್ ಪಾಟೀಲ್, ಗಗನ್ ಹಾಗೂ ಸೂರ್ಯನಾರಾಯಣ್ ಎಂದು ತಿಳಿದುಬಂದಿದೆ. ಕಳೆದ ಆಗಸ್ಟ್ 31ರಂದು ಸ್ಬಾಮೀಜಿಗೆ ಕರೆ ಮಾಡಿದ ಆರೋಪಿತೆ ವಿದ್ಯಾ, ತಾನು ರಾಜ್ಯ ಮಾಹಿತಿ‌ ಹಕ್ಕು ಆಯೋಗದ ಅಧ್ಯಕ್ಷೆ ಹಾಗೂ ಲೋಕಾಯುಕ್ತ ನ್ಯಾ‌.ಬಿ.ಎಸ್. ಪಾಟೀಲ್ ಅವರ ಸಹೋದರಿಯಾಗಿದ್ದೇನೆ ಎಂದು ಹೇಳಿದ್ದಾಳೆ. ಬಳಿಕ ನಿಮಗೆ ಸಂಬಂಧಿಸಿ, ಮಹಿಳೆಯೊಂದಿಗಿನ ಆಶ್ಲೀಲ ವಿಡಿಯೋ ಕಳುಹಿಸಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಹೀಗಾಗಿ, ಕೂಡಲೇ ಭೇಟಿಯಾಗುವಂತೆ ಹೇಳಿದ್ದರು.ಇದರಂತೆ ಭೇಟಿಯಾದಾಗ ಸ್ವಾಮೀಜಿಯವರಿಗೆ ಸಂಬಂಧಿಸಿದ ಆಶ್ಲೀಲ ವಿಡಿಯೊಗಳಿವೆ ಎಂದು ಆರೋಪಿಗಳು ತಿಳಿಸಿದ್ದಾರೆ. ಈ ವಿಡಿಯೋಗಳನ್ನ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಮಾಡಬಾರದು ಎಂದರೆ 6 ಕೋಟಿ ರೂ. ಹಣ…

Read More

ದಾವಣಗೆರೆ : ವಿದ್ಯುತ್ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುತ್ತಿರುವ ವೇಳೆ ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿಯ ಮಳಲಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಲೈನ್ ಮ್ಯಾನ್ ಅನ್ನು ಮುತ್ತು(32) ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಟಿಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಸಮಸ್ಯೆ ಎದುರಾಗಿತ್ತು ಹಾಗಾಗಿ ಗ್ರಾಮಸ್ಥರು ಕೆಇಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.  ಇಂದು ಲೈನ್ ಮ್ಯಾನ್ ದುರಸ್ಥಿಗೆ ಎಂದು ಆಗಮಿಸಿದ್ದ. ಈ ವೇಳೆ ಹೈ ವೋಲ್ಟೇಜ್ ವಿದ್ಯುತ್ ನಿಂದಾಗಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಲೈನ್‌ಮ್ಯಾನ್‌ಗೆ ಕೈಗವಸು, ಶೂ, ಇತರೆ ಜೀವ ರಕ್ಷಕ ಅಗತ್ಯ ಸಲಕರಣೆಗಳಿರಬೇಕು ಆದರೆ ಕೆಇಬಿ ಸಿಬ್ಬಂದಿ ಯಾವುದೇ ಕೈಗವಸು ಶೂ ಇಲ್ಲ. ಲೈನ್ ಮ್ಯಾನ್ ಸಾವಿಗೆ ಕೆಇಬಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ರಾಯಚೂರು : ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದರಿಂದ ದೇವಸ್ಥಾನದ ಮಹಿಳಾ ಅರ್ಚಕಿಯೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ (42) ಎನ್ನುವವರು ಒಂಟಿಯಾಗಿ ವಾಸಿಸುತ್ತಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತಂತೆ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More