Author: kannadanewsnow05

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನಪ್ಪಿದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಲಾಸ್ಟ್ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದೆ ಘಟನೆ ಕುರಿತಂತೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪ್ರಸಕ್ತ ವರ್ಷದ 5 ತಿಂಗಳಲ್ಲಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಆನೆಗಳ ಸಾವು ಹಾಗೂ ವನ್ಯ ಜೀವಿ ಹಾಗೂ ಮಾನವ ಸಂಘರ್ಷದಲ್ಲಿ ಸಾವನ್ನಪ್ಪಿದವರ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿರುವ ಅರಣ್ಯ ಇಲಾಖೆ, ಜನವರಿಯಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ 25 ಆನೆಗಳು ಹಾಗೂ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ರಾಜ್ಯದ ಅರಣ್ಯದಲ್ಲಿ ಸಾವನ್ನಪ್ಪಿರುವ 25 ಆನೆಗಳ ಪೈಕಿ 23 ಆನೆಗಳು ಸ್ವಾಭಾ ವಿಕವಾಗಿ ಸಾವನ್ನಪ್ಪಿದ್ದರೆ, 2 ಆನೆಗಳು ಬೇಟೆ ಅಥವಾ ಬೇರೆ ಕಾರಣದಿಂದ ಅಸಹಜ ಸಾವ ನ್ನಪ್ಪಿವೆ. ವನ್ಯಜೀವಿ ದಾಳಿಯಿಂದ 26 ಜನ ಸಾವನ್ನಪ್ಪಿದ್ದು, ಅದರಲ್ಲಿ ಆನೆ ದಾಳಿಯಿಂದ 22 ಜನ ಮೃತಪಟ್ಟಿದ್ದಾರೆ. ಎಷ್ಟು ಆನೆಗಳ ಸಾವು? ಜನವರಿಯಲ್ಲಿ 2, ಫೆಬ್ರುವರಿಯಲ್ಲಿ 6, ಮಾರ್ಚ್ 8 ಏಪ್ರಿನಲ್ಲಿ 3, ಮೇನಲ್ಲಿ 6, ಸೇರಿದಂತೆ ಒಟ್ಟು ಇಲ್ಲಿಯವರೆಗೆ ಅಂದರೆ ಐದು ತಿಂಗಳಿನಲ್ಲಿ 25 ಆನೆಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಬಿಡುಗಡೆ ಮಾಡಿರುವಂತಹ ಅಂಕಿ ಅಂಶಗಳಲ್ಲಿ ಬಹಿರಂಗವಾಗಿದೆ.

Read More

ಬೆಂಗಳೂರು : ಎಂಎಲ್ಸಿ ಟಿಕೆಟ್ ಆಕಾಂಕ್ಷಿ ಗಳಿಗೆ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದು, ಬಿಳಿ ಜುಬ್ಬಾ ಕಾರು ತೆಗೆದುಕೊಂಡು ಬಂದು ಸ್ಥಾನಕ್ಕೆ ಹೇಳುವುದಲ್ಲ ನಿಮ್ಮ ಬೂತ್ ನಲ್ಲಿ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ ಇಲ್ಲ ಜಾಗ ಖಾಲಿ ಮಾಡಿ ಎಂದು ಸರಿಯಾಗಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಅಧಿಕಾರಕ್ಕೆ ಬಂದಿದ್ದು ಮುಖ್ಯ ಎಂದು ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಅದು ಮುಖ್ಯ. ಇದೆ ವೇಳೆ ಎಂಎಲ್‌ಸಿ ಟಿಕೆಟ್ ಆಕಾಂಕ್ಷಿಗಳಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಾಲ್ಕು ವೋಟ್ ಕೂಡ ಹಾಕಿಸದೆ ಬಂದು ಸ್ಥಾನ ಕೇಳುತ್ತೀರಾ? ಮೊದಲು ನಿಮ್ಮ ಬೂತ್ ನಲ್ಲಿ ಸಂಘಟನೆ ಮಾಡಿ. ಬಿಳಿ ಜುಬ್ಬಾ ಕಾರು ತೆಗೆದುಕೊಂಡು ಬಂದು ಸ್ಥಾನಕ್ಕೆ ಹೇಳುವುದಲ್ಲ.ನಿಮ್ಮ ಬೂತ್ ನಲ್ಲಿ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ ಮೊದಲು ಸಂಘಟನೆ…

Read More

ಕಲಬುರ್ಗಿ : ಸಂಶೋಧನಾ ವಿದ್ಯಾರ್ಥಿಯು ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಹೊರವಲಯದಲ್ಲಿರುವ ಕಡಗಂಚಿ ವಿಶ್ವವಿದ್ಯಾಲಯದ ಹತ್ತಿರ ಇರುವ ಪೆಟ್ರೋಲ್ ಬಂಕ್ ಬಳಿ ಈ ಸಂಶೋಧನಾ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಆನಂದ್ (42) ಎಂದು ಹೇಳಲಾಗುತ್ತಿದ್ದು, ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು ಎಂದು ತಿಳಿದುಬಂದಿದೆ.ವಿಶ್ವವಿದ್ಯಾಲಯದ ಪೆಟ್ರೋಲ್ ಪಂಪ್ ಬಳಿ ಅವರ ಶವ ಪತ್ತೆಯಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅವರು ಕನ್ನಡ ವಿಷಯದಲ್ಲಿ ಪಿಹೆಚ್‍ಡಿ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಸುದ್ದಿ ತಿಳಿದು ನರೋಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸನ್ನು ಸಿಐಡಿ ಗೆ ವಹಿಸಿ ಎಂದು ಕಾರ್ಮಿಕ ಸಚಿವ ಸಂತೋಷದ ಆಗ್ರಹಿಸಿದರು. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗರ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್ ಲಾಡ್, ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸುವಂತೆ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು. ನನಗೆ ಅನಾರೋಗ್ಯದ ಕಾರಣಕ್ಕೆ ಘಟನೆ ನಡೆದ ದಿನ ಅಂಜಲಿ ನಿವಾಸಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ, ಈ ವಿಷಯದಲ್ಲಿ ಬಿಜೆಪಿಯವರು ನೀಡುತ್ತಿರುವ ಹೇಳಿಕೆಗಳು ಸರಿಯಲ್ಲ. ನಾನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸುವುದಿಲ್ಲ. ಅವರ ಆರೋಪಕ್ಕೆ ನಾನು ತಕ್ಕ ಉತ್ತರ ನೀಡಿದ್ದೇನೆ ಎಂದು ತಿರುಗೇಟು ನೀಡಿದರು. ನೇಹಾ ಹಿರೇಮಠ ಕೊಲೆ ಘಟನೆ ನಂತರ ಇನ್ನೊಂದು ಅಂತಹದ್ದೆ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಸಮಾಜದಲ್ಲಿ ಶಾಂತಿ ಕದಡುವ ಹಾಗೂ ಅಹಿತಕರ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ…

Read More

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ್ದು, ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್​ ಇಂದು ಬೆಂಗಳೂರು ಸಿಟಿ ರೌಂಡ್ಸ್​ ಹಾಕಿದ್ದಾರೆ. ಅಲ್ಲದೆ ಇತ್ತೀಚಿಗೆ ಅಪಾರವಾದಂತಹ ಮಳೆ ಆಗಿರುವ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಸಿಟಿ ರೌಂಡ್ಸ್ ಹಾಕಿದರು. ಸಿಲಿಕಾನ್ ಸಿಟಿಯಲ್ಲಿ ಮಳೆ ಹಾನಿ ಪ್ರದೇಶಗಳಿಗೂ ಭೇಟಿ ನೀಡಿದ ಅವರು, ಜೊತೆಗೆ ಕೆ.ಆರ್ ಪುರ ಸಮೀಪದ ಎನ್​ಜಿಎಫ್​​ ಬಳಿ ಸ್ಕೈಡೆಕ್ ಸ್ಥಳ ವೀಕ್ಷಣೆ ಮಾಡಿದ್ದು, ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಚರಣೆ ಮಾಡುತ್ತೇವೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಲೇಔಟ್ ನಿರ್ಮಿಸಿ ಮೂಲಸೌಕರ್ಯ ಒದಗಿಸದವರಿಗೆ ನೋಟಿಸ್ ನೀಡಲಾಗಿದೆ. ಬಿಡಿಎ ಲೇಔಟ್​ಗಳ ಖಾಸಗೀಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಬಿಬಿಎಂಪಿ ಮತ್ತು ಬಿಡಿಎಗೆ ಆದಾಯ ಬೇಕಲ್ವಾ. ವಿರೋಧ ಮಾಡೋರು ಮಾಡಲಿ, ಈ ಹಿಂದೆ…

Read More

ದಕ್ಷಿಣಕನ್ನಡ : ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಶಾಲಾ ಕಾಂಪೌಂಡ್ ಕುಸಿದು ಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ಈ ಘಟನೆ ನಡೆದಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಈ ಶಾಲೆಯನ್ನು ಕಟ್ಟಿದ್ದಾರೆ ಎನ್ನಲಾಗುತ್ತಿದೆ.ಗ್ರಾಮದ ಸಿದ್ದಿಕ್ ಜಮೀಲಾ ಪುತ್ರಿ ಶಾಜಿಯ (7) ಸಾವನಪ್ಪಿದ್ದಾಳೆ ಎಂದು ತಿಳಿದುಬಂದಿದೆ. 3ನೇ ತರಗತಿಯಲ್ಲಿ ಮೃತ ವಿದ್ಯಾರ್ಥಿನಿ ಶಾಜಿಯ ಓದುತ್ತಿದ್ದಳು. ಶಾಲೆಯಲ್ಲಿ ಎನ್ಎಸ್ಎಸ್ ಶಿಬಿರದಲ್ಲಿ ವಿದ್ಯಾರ್ಥಿನಿ ಭಾಗಿಯಾಗಿದ್ದಳು. ಆಟವಾಡುತ್ತಿದ್ದಾಗ ಕಾಂಪೌಂಡ್ ಕುಸಿದು ಬಿದ್ದು ಶಾಜಿಯ ದಾರುಣವಾಗಿ ಸಾವನಪ್ಪಿದ್ದಾಳೆ. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು. ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿತ್ತು ಎಂದು ಸ್ಥಳೀಯರು ಮಾಹಿತಿ…

Read More

ಹುಬ್ಬಳ್ಳಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿತರಣೆಗೆ ಹಾಜರಾಗುವಂತೆ ಈಗಾಗಲೇ ಹಲವು ಬಾರಿ ನೋಟಿಸ್ ನೀಡಲಾಗಿದೆ. ಆದರೆ ಪ್ರಜ್ವಲ್ ಇದುವರೆಗೂ ಭಾರತಕ್ಕೆ ಬಂದಿಲ್ಲ ಹಾಗಾಗಿ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡಲು ಕೇಂದ್ರಕ್ಕೆ ಪತ್ರ ಬರೆಯುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೊಡಲಾಗಿದೆ. ಎರಡು ಮೂರು ನೋಟಿಸ್ ಕೊಟ್ಟಿದ್ದರು ಇದುವರೆಗೂ ಬಂದಿಲ್ಬ. ಬ್ಲೂ ಕಾರ್ನರ್ ನೋಟಿಸ್ ಗೆ ಉತ್ತರ ಬಂದಿಲ್ಲ ಪ್ರಜ್ವಲ್ ಪಾಸ್ಪೋರ್ಟ್ ರದ್ದು ಮಾಡಲು ಪತ್ರ ಬರೆಯುತ್ತೇವೆ ಒಂದು ಹುಬ್ಬಳ್ಳಿಯಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಇನ್ನು ನನ್ನ ಹಾಗೂ ನನ್ನ ಕುಟುಂಬಸ್ಥರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಅಲ್ಲದೆ ನನ್ನ ಜೊತೆಗೆ ಇರುವ 45 ಜನರ ಫೋನ್ ಕೂಡ ಟ್ಯಾಪ್ ಮಾಡುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು.…

Read More

ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ SSLC ಪರೀಕ್ಷೆಗೆ ಗ್ರೇಸ್ ಮಾಸ್ ನೀಡದಿರಲು ನಿರ್ಧರಿಸಿದ್ದು, ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯ ಎರಡನೇ ಹಾಗೂ ಮೂರನೇ ಪೂರಕ ಪರೀಕ್ಷೆಗೂ ಕೂಡ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಸ್ ಮಾರ್ಕ್ ನೀಡಿರುವುದು ಈ ವರ್ಷಕ್ಕೆ ಮಾತ್ರ. ನಾವೀಗ ಎಲ್ಲಿದ್ದೇವೆ ಅನ್ನೋದು ಅರಿವಿಗೆ ಬಂದಿದೆ.ಹಾಗಾಗಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ. ಉಡುಪಿ ದಕ್ಷಿಣ ಕನ್ನಡ ಯಾವತ್ತೂ ಟಾಪರ್ಸ್ ಆಗಿ ಇರುತ್ತಿದ್ದರು. ನಂತರ ರಿಸಲ್ಟ್ ನಲ್ಲಿ ಇಳಿಮುಖವಾಯಿತು. ಈಗ ಮತ್ತೆ ಉಡುಪಿ, ಮಂಗಳೂರು ಟಾಪರ್ಸ್ ಆಗಿದೆ ಎಂದರು. ನಾವು ಪರೀಕ್ಷೆಯ ಪವಿತ್ರತೆಯನ್ನು ಉಳಿಸಿದ್ದೇವೆ. ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು. ಗ್ರೇಸ್ ಮಾರ್ಕ್ ಪಡೆದವರು ಕೂಡ ಮತ್ತೊಮ್ಮೆ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಚಟುವಟಿಕೆಗಳು ಹೆಚ್ಚುತ್ತಲೆ ಇವೆ. ಇದೀಗ ಡ್ರಾಪ್ ಕೊಡುವ ನೆಪದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಓರ್ವ ಯುವಕ ಅತ್ಯಚಾರಕ್ಕೆ ಯತ್ನಿಸಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕು ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಬಂಧಿತತನ್ನು ಪೋಲಕುಂಟಹಳ್ಳಿ ನಿವಾಸಿ ಶ್ರೀಕಾಂತ್ ಎಂದು ತಿಳಿದುಬಂದಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಿದ್ಯಾರ್ಥಿನಿಯರು ವಾಪಸಾಗುವಾಗ ಘಟನೆ ನಡೆದಿದ್ದು, ಸದ್ಯ ಕೃತ್ಯ ಯತ್ನಿಸಿದ ಶ್ರೀಕಾಂತ್​ ನನ್ನು ಅರೆಸ್ಟ್ ಮಾಡಿದ್ದಾರೆ.​ ಜೊತೆಗೆ ಇಬ್ಬರು ವಿದ್ಯಾರ್ಥಿನಿಯರನ್ನ ಪೆರೇಸಂದ್ರ ಠಾಣೆ ಪೊಲೀಸರು ರಕ್ಷಿಸಿದ್ದಾರೆ. ತಡರಾತ್ರಿ ಪೇರಸಂದ್ರದಿಂದ ಚಿಕ್ಕಬಳ್ಳಾಪುರಕ್ಕೆ ಹೋಗುವಾಗ ಆರೋಪಿ ಶ್ರೀಕಾಂತ್ ನಿಮ್ಮಿಬ್ಬರಿಗೆ ಡ್ರಾಪ್ ಕೊಡುತ್ತೇನೆ ಎಂದು ಹೇಳಿ ಹೆದ್ದಾರಿ ಬಿಟ್ಟು ಅರಣ್ಯ ದಾರಿಯಲ್ಲಿ ಸಾಗಿದ್ದಾನೆ.ಈ ವೇಳೆ ವಿದ್ಯಾರ್ಥಿನಿಯರು ಆತನಿಂದ ತಪ್ಪಿಸಿಕೊಂಡು 112 ಪೊಲೀಸರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ತಿಳಿಸಿದ್ದಾರೆ.ತಕ್ಷಣ ಅಲರ್ಟ್ ಆದ ಪೊಲೀಸ್ ವಿದ್ಯಾರ್ಥಿನಿಯರನ್ನು ರಕ್ಷಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More