Author: kannadanewsnow05

ಮೈಸೂರು : ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯನ್ನು 12 ವರ್ಷ ಮನೆಯೊಳಗೇ ಕೂಡಿಹಾಕಿ, ಬಾಗಿಲಿಗೆ ಮೂರು ಬೀಗ ಹಾಕುತ್ತಿದ್ದ ಅಮಾನವೀಯ ಘಟನೆಯೊಂದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಸಮೀಪದ ಎಚ್.ಮಟಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗೃಹ ಬಂಧನದಲ್ಲಿದ್ದ ಈ ಮಹಿಳೆಯು ಮಲ, ಮೂತ್ರ ವಿಸರ್ಜನೆಗೂ ಮನೆಯಿಂದ ಹೊರಬರ ಲಾಗದೆ ತನ್ನ ಗಂಡ ಕೊಟ್ಟು ಹೋಗುತ್ತಿದ್ದ ಡಬ್ಬಿಯನ್ನೇ ನೈಸರ್ಗಿಕ ಅವಲಂಬಿಸಬೇಕಾದಂಥ ಸ್ಥಿತಿ ಯಲ್ಲಿ ಬದುಕು ನಡೆಸುತ್ತಿದ್ದ ವಿಚಾರ ಈ ವೇಳೆ ಬಯಲಾಗಿದೆ. ಇದೀಗ ಈ ಮಹಿಳೆಯನ್ನು ರಕ್ಷಿಸಿ, ತವರು ಮನೆಗೆ ಕಳುಹಿಸಲಾಗಿದೆ. ಎಚ್.ಮಟಕೆರೆ ಗ್ರಾಮದ ಸಣ್ಣಾಲಯ್ಯ ಎಂಬಾತ ಈ ಕೃತ್ಯ ಎಸಗಿರುವ ಆರೋಪಿ. ಆತ ಪಕ್ಕದ ಡೈರಿಗೆ ಗ್ರಾಮದ ಸುಮಾ ಎಂಬುವರನ್ನು 12 12 ವರ್ಷಗಳ ಹಿಂದೆ 3ನೇ ಮದುವೆಯಾಗಿದ್ದು, 2 ಮಕ್ಕಳು ಸಹ ಇದ್ದಾರೆ. ಮದುವೆ ಆದಾಗಿನಿಂದಲೂ ಪತ್ನಿಯನ್ನು ಅನುಮಾನದಿಂದಲೇ ನೋಡುತ್ತಿದ್ದ ಸಣ್ಣಾಲಯ್ಯ ಆಕೆಯನ್ನು ಮನೆಯೊಳಗೇ ದಿಗ್ವಂಧನದಲ್ಲಿರಿಸಿದ್ದ. ಕಿಟಕಿಗಳನ್ನು ಹಗ್ಗದಿಂದ ಭದ್ರಗೊಳಿಸಿ ಮನೆ ಬಾಗಿಲಿಗೆ ಹೊರಗಿನಿಂದ ಮೂರು ಬೀಗ ಹಾಕಿ…

Read More

ನವದೆಹಲಿ: ಹೆದ್ದಾರಿಗಳಲ್ಲಿ ವಾಹನ ಚಲಾಯಿಸುತ್ತ ಆಯಾಸಗೊಳ್ಳುವ ಚಾಲಕರಿಗಾಗಿ ಪ್ರಧಾನಿ ನರೇಂದ್ರ ಮೋದಿ ಹೊಸಸೌಲಭ್ಯ ಘೋಷಿಸಿದ್ದಾರೆ. ಶೀಘ್ರದಲ್ಲೇ ಹೆದ್ದಾರಿಗಳಲ್ಲಿ ವಾಹನ ಚಾಲಕರಿಗೆ ವಿಶ್ರಾಂತಿ ತೆಗೆದುಕೊಳ್ಳಲು 1000 ಅತ್ಯಾ ಧುನಿಕ ವಿಶ್ರಾಂತಿ ಕೊಠಡಿಗಳನ್ನು ಮೊದಲ ಹಂತದಲ್ಲಿ ನಿರ್ಮಿಸಲಾಗುವುದು ಎಂದರು. ರಸ್ತೆ ಸುರಕ್ಷತೆ ಹಾಗೂ ವಾಹನ ಕುರಿತಾದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ ಪೋದಲ್ಲಿ ಮಾತನಾಡಿದ ಅವರು, ಹೈವೇ ಬದಿ ಸ್ಥಾಪಿಸಲಾಗುವ ವಿಶ್ರಾಂತಿ ಗೃಹಗಳಲ್ಲಿ ಮಲಗುವ ಕೋಣೆ, ಶೌಚಾಲಯ, ಕುಡಿವ ನೀರಿನ ವ್ಯವಸ್ಥೆ ಇರಲಿದೆ. ಇದರಿಂದ ಹೆದ್ದಾರಿ బది ವಿಶ್ರಾಂತಿಗಾಗಿ ಪರದಾಡುವ ಚಾಲಕರಿಗೆ ಸಹಾಯವಾಗಲಿದೆ ಎಂದರು. ಇದೇ ವೇಳೆ, ಬಿಜೆಪಿ ಸರ್ಕಾರದ 3ನೇ ಅವಧಿಯಲ್ಲಿ ಭಾರತವು ಜಾಗತಿಕವಾಗಿ 3ನೇ ಅತಿದೊಡ್ಡಆರ್ಥಿಕತೆಯಾಗಲಿದೆ ಎಂದರು. ಈ ಮೂಲಕ ಮತ್ತೆ ತಾವು 3ನೇ ಬಾರಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿ ದರು. ಭಾರತದಲ್ಲಿ ಅಭಿವೃದ್ಧಿ ಪರ್ವ ಉಂಟಾಗುತ್ತಿದೆ. ನಾವು ಅಟಲ್ ಸುರಂಗದಿಂದ ಅಟಲ್ ಸೇತುವಿನವರೆಗೆ ಸಮುದ್ರ ಮತ್ತು ಪರ್ವತಗಳಿಗೇ ಸಡ್ಡು ಹೊಡೆದು ತಂತ್ರಜ್ಞಾನ ಕ್ಷೇತ್ರದಲ್ಲಿ ಅದ್ಭುತಯಶಸ್ಸನ್ನು ಸಾಧಿಸಿದ್ದೇವೆ. 2014ರ ಹಿಂದಿನ…

Read More

ಬೆಂಗಳೂರು : ಕಳೆದ ವರ್ಷ ರಾಜ್ಯದಲ್ಲಿ ಮಳೆ ಬಾರದೆ ರೈತರು ಸೇರಿದಂತೆ ಎಲ್ಲರು ತೀವ್ರ ಸಂಕಷ್ಟ ಎದುರಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕುಸಿಯುತ್ತಿರುವ ಅಂತರ್ಜಲ ಮಟ್ಟ ಸುಧಾರಣೆಗೆ ಸಂಬಂಧಿಸಿದಂತೆ ಸಮಗ್ರ ಕ್ರಿಯಾ ಯೋಜನೆಯನ್ನು ಶೀಘ್ರದಲ್ಲೇ ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರು ತೀರ್ಮಾನಿಸಿದ್ದಾರೆ. ಅಂತರ್ಜಲ ಮಟ್ಟ ಸುಧಾರಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದ ಹಿನ್ನೆಲೆಯಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಮತ್ತು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಜಲಾನಯನ ನಿರ್ವಹಣೆಯ ಉತ್ಕೃಷ್ಟ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಂತರ್ಜಲದ ಸಮರ್ಪಕ ಬಳಕೆಗಾಗಿ ಸೂಕ್ತ ನೀರಾವರಿ ತಂತ್ರಜ್ಞಾನ ಅಳವಡಿಕೆ, ರೈತರಿಗೆ ನೀರಿನ ಸದ್ಬಳಕೆ ಕುರಿತು ಶಿಕ್ಷಣ, ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಒಗ್ಗೂಡಿಸುವುದು, ಅವಶ್ಯಕತೆಗೆ ಅನುಗುಣವಾಗುವ ಮಳೆ ನೀರು ಮತ್ತು ಅಂತರ್ಜಲ ಬಳಕೆ ಮಾಡುವುದು, ರೈತರಲ್ಲಿ ಸಹಭಾಗಿತ್ವ ನೀರಿನ ನಿರ್ವಹಣೆ ಪದ್ಧತಿಯನ್ನು ಅಳವಡಿಸುವಂತೆ ಮಾಡಿ ಅವರಲ್ಲಿ ಒಡೆತನದ ಜವಾಬ್ದಾರಿ ತರುವುದು, ಚೆಕ್ ಡ್ಯಾಮ್, ಇಂಗು ಗುಂಡಿನಿರ್ಮಾಣ, ಹನಿಮತ್ತು ತುಂತುರು ನೀರಾವರಿ,…

Read More

ಬೆಂಗಳೂರು : ನಗರ ಸಂಚಾರ ಪೊಲೀಸರು ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ಸವಾರರ ವಿರುದ್ದ ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದು, ಗುರುವಾರವೂ 1,896 ಪ್ರಕರಣ ದಾಖಲಿಸಿ 9.48 ಲಕ್ಷ ದಂಡ ವಸೂಲಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಶಾಲಾ-ಕಾಲೇಜುಗಳ ಸುತ್ತ ಮುತ್ತಲ ರಸ್ತೆಗಳಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಪ್ರತಿ ಸಂಚಾರ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳ ಸುತ್ತಮುತ್ತಲ ರಸ್ತೆಗಳಲ್ಲಿ ವಿಶೇಷ ಕಾಲ್ಯಾಚರಣೆ ಕೈಗೊಂಡು ಸಂಚಾರ ನಿಯಮ ಉಲ್ಲಂಘಿಸುವ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡುತ್ತಿದ್ದಾರೆ. ಗುರುವಾರ ನಗರದಲ್ಲಿ ನಡೆದ ವಿಶೇಷ ಕಾರ್ಯಾಚರಣೆ ವೇಳೆ ಹೆಲೈಟ್ ರಹಿತ ಸವಾರಿ 1,279 ಪ್ರಕರಣ, ಟ್ರಿಪಲ್ ರೈಡಿಂಗ್ 85, ನೋ ಎಂಟ್ರಿ 455, ಪಾದಾಚಾರಿ ಮಾರ್ಗದಲ್ಲಿ ಚಾಲನೆ 77 ಸೇರಿ ಒಟ್ಟು 1,896 ಪ್ರಕರಣ ದಾಖಲಿಸಲಾಗಿದೆ. ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ…

Read More

ಬೆಂಗಳೂರು : ಕಾಂಗ್ರೆಸ್ ಸಂಸದ ಡಿಕೆ ಸುರೇಶ್​ ದೇಶ ವಿಭಜನೆ ಹೇಳಿಕೆ ಬಗ್ಗೆ ಬಿಡದಿಯಲ್ಲಿ ಜೆಡಿಎಸ್ ನಾಯಕ  ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಡವರನ್ನು ಲೂಟಿ ಮಾಡಿಕೊಂಡು ಗುಡ್ಡೆ ಹಾಕಿದ್ದಾರೆ. ಅಂಥವರನ್ನು ದೇಶ ಕಟ್ಟು ಅಂತ ಕಳುಹಿಸಿದರೆ ಅವರು ದೇಶ ಕಟ್ಟುತ್ತಾರಾ? ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರೆ ಅಷ್ಟೇ. ಇಂಥವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ದೇಶದ ಮೊದಲನೇ ಬಜೆಟ್ 174 ಕೋಟಿ ಇತ್ತು. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಹಣಕಾಸು ಆಯೋಗಗಳನ್ನು ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಎಂಬ ವರದಿ ಕೊಡುತ್ತಾರೆ ಎಂದರು. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬುದನ್ನು ನೋಡಿಕೊಂಡು ಹಣ…

Read More

ಮೈಸೂರು: ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌–ಬಿಜೆಪಿಯವರು ಮಂಡ್ಯವನ್ನು ಮತ್ತೊಂದು ಮಂಗಳೂರು ಮಾಡುವುದಕ್ಕೆ ಬಿಡುವುದಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಗುಡುಗಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನವರು ಹಾಗೂ ಬಿಜೆಪಿಯವರು ಮಂಡ್ಯದಲ್ಲಿ ಯಾವ ಪುರುಷಾರ್ಥಕ್ಕೆ ಹೋರಾಟ ಅಥವಾ ಬಂದ್ ಮಾಡುತ್ತಿದ್ದಾರೆ. ಧ್ವಜದ ವಿಚಾರದಲ್ಲಿ ಕರೆ ಕೊಟ್ಟಿರುವ ಮಂಡ್ಯ ಬಂದ್‌ಗೆ ಜನರೇ ತಿರುಗಿ ಬಿದ್ದಿದ್ದಾರೆ ನಾನೇನು ಕುಮಾರಸ್ವಾಮಿ ಮನೆಯ ಋಣದಲ್ಲಿದ್ದೇನೆಯೇ, ಅವರ ಆಸ್ತಿ ತಿಂದಿದ್ದೇನೆಯೇ?’ ಎಂದು ಕೇಳಿದ ಅವರು, ಅವರೇನು ನನ್ನ ಹಣೆಬರಹ ಬರೆಯಲಾಗುತ್ತದೆಯೇ? ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್, ಭೈರೇಗೌಡ ಅವರನ್ನು ಜೆಡಿಎಸ್‌ನಿಂದ ಹೊರ ಕಳುಹಿಸಿದ್ದು ಯಾರೆಂದು ಕುಮಾರಸ್ವಾಮಿ ಹೇಳಲಿ ಎಂದು ಸವಾಲೆಸೆದರು. ಕುಮಾರಸ್ವಾಮಿ ವಿರುದ್ಧ ಕೆಂಡಮಂಡಲವಾದ ಸಚಿವರು, ವಿನಯದ ಬಗ್ಗೆ ನಾನು ಅವರಿಂದ ಕಲಿಯಬೇಕಿಲ್ಲ. ಅವರಿಂದ ನಾಯಕನಾದವನಲ್ಲ ನಾನು. ಎಚ್‌.ಡಿ. ದೇವೇಗೌಡರ ಮೇಲಿನ ಗೌರವದಿಂದಾಗಿ ಸುಮ್ಮನಿದ್ದೇನೆ. ಇಲ್ಲದಿದ್ದರೆ ದೊಡ್ಡ ಪ್ರಮಾಣದಲ್ಲೇ ಉತ್ತರ ಕೊಡುತ್ತಿದ್ದೆ. ಗೌರವ ಬೇಡ ಎಂದಾದರೆ,…

Read More

ನವದೆಹಲಿ : ಹಿಂದಿ ಹೇರಿಕೆ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ ನಲ್ಲಿ ಅನ್ಯಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಷ್ಟ್ರದ ಹೇಳಿಕೆಯನ್ನು ನೀಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಹೇಳಿಕೆಗೆ ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದು ದೇಶ ಒಡೆಯುವ ಕುರಿತು ಯಾರೇ ಮಾತನಾಡಿದರು ಸಹಿಸುವುದಿಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರು ಸಹಿಸುವುದಿಲ್ಲ ಯಾವುದೇ ಪಕ್ಷದವರಾಗಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರಿಗೆ ನಾವೆಲ್ಲರೂ ಒಂದೇ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಸದ ಡಿಕೆ ಸುರೇಶ್ ಹೇಳಿಕೆಗೆ ಇದೀಗ ವಿರೋಧ ವ್ಯಕ್ತಪಡಿಸಿದ್ದಾರೆ

Read More

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲೆಗೆ ಬಾಂಬ ಬೆದರಿಕೆ ಬಂದಿದ್ದು, ಆರ್ ಕೆ ಪುರಂನಲ್ಲಿರುವ ಡಿಪಿಎಸ್ ಶಾಲೆಗೆ ಇದೀಗ ಬೆದರಿಕೆ ಸಂದೇಶ ಬಂದಿದೆ. ಶಾಲೆಯ ಪ್ರಾಂಶುಪಾಲರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಕ್ಕಳನ್ನು ತಕ್ಷಣ ಸಿಬ್ಬಂದಿ ಶಾಲೆಯಿಂದ ಹೊರಗಡೆ ಕಳುಹಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಆರ್‌ಕೆ ಪುರಂ ಪ್ರದೇಶದ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಶುಕ್ರವಾರ ಬಾಂಬ್ ಬೆದರಿಕೆ ಕರೆ ಬಂದಿದೆ. ಸುಮಾರು 10 ಗಂಟೆಗೆ ಕರೆ ಸ್ವೀಕರಿಸಿದ ನಂತರ ಶಾಲೆಯ ಆವರಣದಲಿರುವ ಮಕ್ಕಳನ್ನು ಸ್ಥಳಾಂತರಿಸಲಾಯಿತು.ಬಾಂಬ್‌ನಿಂದ ಶಾಲೆಯನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಕರೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಬಾಂಬ್ ಬೆದರಿಕೆ ಸಂದೇಶ ಬಂದ ತಕ್ಷಣ ಇದೀಗ ಪೊಲೀಸರು ಶಾಲೆಗೆ ಧಾವಿಸಿ ಶಾಲಾ ಆವರಣದಲ್ಲಿರುವ ಎಲ್ಲ ಮಕ್ಕಳನ್ನು ಹಾಗೂ ಎಲ್ಲಾ ಸಿಬ್ಬಂದಿಗಳನ್ನು ತಕ್ಷಣ ಹೊರಗಡೆ ಕಳುಹಿಸಲಾಗಿದೆ. ಮೇಲ್ ಎಲ್ಲಿಂದ ಬಂತು ಯಾರು ಕಳಿಸಿದ್ದು ಎಂಬುದರ ಕುರಿತು ಇದೀಗ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ…

Read More

ಬೆಂಗಳೂರು : ಸಿಬಿಐ, ಐಟಿ, ಇಡಿಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ. ಅವು ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ (ಜಾರಿ ನಿರ್ದೇಶನಾಲಯ) ದಾಳಿಯೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣ X ಅಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಭಾರತೀಯ ಜನತಾ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಕಿಡಿ ಕಾರಿದ್ದಾರೆ. https://twitter.com/siddaramaiah/status/1753276191824597500?t=qtCmYxC6rrIE_oRkbpLZjQ&s=19

Read More

ಬೆಂಗಳೂರು : ಹಿಂದಿ ಹೇರಿಕೆ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ ನಲ್ಲಿ ಅನ್ಯಾಯ ಆಗುವುದರ ಕುರಿತು ನಿನ್ನೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕುರಿತು ಮಾತನಾಡಿದರು.ಇದಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ ತಿರುಗೇಟು ನೀಡಿದ್ದು ನಮ್ಮ ದೇಶ ಭವ್ಯ ಭಾರತ ಹೀಗಾಗಿ ದೇಶವನ್ನು ಒಡೆಯುವಂತಹ ಮಾತುಗಳನ್ನು ಯಾರು ಆಡಬಾರದು ಎಂದು ತಿರುಗೇಟು ನೀಡಿದರು. ಈ ವಿಷಯದ ಕುರಿತಾಗಿ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಅಂತ ಡಿಕೆ ಸುರೇಶ್ ಗೆ ತಿರುಗೇಟು ಕೊಟ್ರು. ಸಂಸದ ಡಿಕೆ ಸುರೇಶ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಬೇಕಾದರೆ ಕೋಟ್ಯಾಂತರ ಜನರ ಬಲಿದಾನವಾಗಿದೆ. ನೂರಾರು ವರ್ಷ ಹೋರಾಟ‌ಗಳು ನಡೆದಿವೆ. ಗಾಂಧೀಜಿಯಿಂದ ಹಿಡಿದು ಅನೇಕ…

Read More