Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೆ ಗೊತ್ತಿಲ್ಲ ಹಾಗಾಗಿ ನೀವೆಲ್ಲರೂ ಕಾರ್ಯಾಧ್ಯಕ್ಷರಿಗೆ ಪದಾಧಿಕಾರಿಗಳು ಕೆಲಸ ಮಾಡಬೇಕು ಎಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಸಿಟ್ ಕಾರ್ಡ್ ಇಟ್ಟುಕೊಂಡು ಓಡಾಡಿದರೆ ಆಗುವುದಿಲ್ಲ ಕೆಲಸ ಮಾಡಿಲ್ಲ ಎಂದರೆ ಚುನಾವಣೆ ಬಳಿಕ ಮಾಜಿಗಳು ಆಗುತ್ತೀರಿ. ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ನೀವೆಲ್ಲ ಕೆಲಸ ಮಾಡಬೇಕು ನಿಮಗೆ ಕಾರು ರೂಮ್ ಕೊಡುವುದಿಲ್ಲ. ನಿಮ್ಮದೇ ಕಾರು ಬಳಸಿಕೊಂಡು ಸುತ್ತಬೇಕು.ನಾವೆಲ್ಲ ವಿದ್ಯಾರ್ಥಿ ಘಟಕದಿಂದ ಬಂದಿದ್ದೇವೆ ಎಂದರು ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಸಲೀಂ ಅಹಮದ್ ಹಾಗೂ ಧ್ರುವ ನಾರಾಯಣರನ್ನು ನಾವು ನೆನಪಿಸಿಕೊಳ್ಳಬೇಕು. ಪಕ್ಷಕ್ಕೆ ಎಲ್ಲರೂ ಅವರದ್ದೇ ಆದ ಕೊಡುಗೆ ನೀಡಿದ್ದಾರೆ.ನಾವು NSUI ಘಟಕದಿಂದ ಬೆಳೆದು ಬಂದವರು. NSUI ನಲ್ಲಿ ನನಗೆ ಟಿಕೆಟ್ ಕೊಟ್ಟಿರಲಿಲ್ಲ. ಅವರು ಯಾರು ಅಂತ ಹೇಳುವುದಿಲ್ಲ. ನಾವು ಹಂಗೋ ಹಿಂಗೋ ಬೆಳೆದುಕೊಂಡು ಬಂದಿದ್ದೇವೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಲೋಕಸಭಾ ಚುನಾವಣೆ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ್ ಪೂಜಾರಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು, ಶಾಸಕ ಗುರುಮಿ ಸುರೇಶ್ ಶೆಟ್ಟಿ ಹಾಗೂ ಲಾಲಾಜಿ ಆರ್ ಮೆಂಡನ್ಗು ಕೂಡ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಸಮನ್ಸ್ ಜಾರಿ ಮಾಡಲಾಗಿದೆ. ಮೇ 27 ರಂದು ಖುದ್ದಾಗಿ ಹಾಜರಾಗುವಂತೆ ಜಾರಿಗೆ ಮಾಡಿದೆ ಎನ್ನಲಾಗುತ್ತಿದೆ. ಮಾರ್ಚ್ 30 ರಂದು ಘಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ಪ್ರಚಾರ ಸಭೆ ನಡೆಸಿದ್ದರು. ಈ ಕುರಿತಂತೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದೂರು ದಾಖಲಿಸಿದ್ದರು.ಹೀಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಕೋಟ ಶ್ರೀನಿವಾಸ ಪೂಜಾರಿಗೆ ಸಮನ್ಸ್ ಜಾರಿ ಮಾಡಿದೆ.
ಚಾಮರಾಜನಗರ : ಬಟ್ಟೆ ತೊಳೆಯಲು ಜಲಾಶಯಕ್ಕೆ ತೆರಳಿದ ವೇಳೆ ತಾಯಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ತಾಯಿಯನ್ನು ರಕ್ಷಿಸಲು ಹೋದ ಇಬ್ಬರು ಮಕ್ಕಳು ಸಹ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗುಂಡಲ್ ಜಲಾಶಯದಲ್ಲಿ ಈ ದುರಂತ ಸಂಭವಿಸಿದೆ. ಹೌದು ಇಂದು ಗುಂಡಲ್ ಜಲಾಶಯದಲ್ಲಿ ಮುಳುಗಿ ತಾಯಿ ಮಗು ಸಾವನ್ನಾಪ್ಪಿದ್ದರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗುಂಡಲ ಜಲಾಶಯದಲ್ಲಿ ಈ ಅವಘಡ ಸಂಬಂಧಿಸಿದೆ. ಮೀನಾ (33) ಪವಿತ್ರ (13) ಕೀರ್ತಿ (12)ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಒಂದು ದುರಂತದಲ್ಲಿ ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ಕಾಲುಜಾರಿ ಬಿದ್ದ ತಾಯಿಯನ್ನು ರಕ್ಷಿಸಲು ಹೋಗಿ ಇಬ್ಬರು ಮಕ್ಕಳು ಸಹ ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಕೇವಲ ಬಿಜೆಪಿಯಲ್ಲೇ ಅಷ್ಟೆ ಅಲ್ಲದೆ ಇದೀಗ ಕಾಂಗ್ರೆಸ್ನಲ್ಲೂ ಬಂಡಾಯ ಎದ್ದಿರುವುದು ಎಲ್ಲರಿಗೂ ತಿಳಿದಿರುವ ವಿಷಯ ಇದೀಗ ದಾವಣಗೆರೆ ಕ್ಷೇತ್ರದಿಂದ ಯುವ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಜಿ ಬಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಕೈ ಬಂಡಾಯ ನಾಯಕ ವಿನಯ್ ಕುಮಾರ್ ಹೇಳಿಕೆ ನೀಡಿದರು. ಕಾಂಗ್ರೆಸ್ ಟಿಕೆಟ್ ಕೈತಪ್ಪಿರಬಹುದು ಆದರೆ ನಾನು ಪಕ್ಕಾ ಕಾಂಗ್ರೆಸ್ಸಿಗ. ಕಾಂಗ್ರೆಸ್ ಸೋಲಿಸುವುದು ಅಥವಾ ಬಿಜೆಪಿ ಗೆಲ್ಲಿಸುವುದು ನನ್ನ ಗುರಿ ಅಲ್ಲ ಎಂದರು. ನಾನು ಗೆಲ್ಲುವ ಕಡೆ ಪ್ರಯತ್ನ ಮಾಡುತ್ತೇನೆ.ಎಂದು ವಿನಯ್ ಕುಮಾರ್ ಹೇಳಿದರು.ನಾಮಪತ್ರ ಸಲ್ಲಿಸುತ್ತೇನೆ ಆದರೆ ಅದನ್ನು ಹಿಂದು ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಅಗ್ನಿಯಾಗಳು ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನ ಆರ್ ಟಿ ನಗರದ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಕಟ್ಟಡದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೌದು ಬೆಂಗಳೂರಿನ ಆರ್ ಟಿ ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಸುಮಾರು 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಇದೀಗ ಅಗ್ನಿ ಅವಗಡ ಸಂಭವಿಸಿದೆ. ಕಟ್ಟಡದಲ್ಲಿ ಹತ್ತಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಆರ್. ಟಿ ನಗರದ ಪೊಲೀಸ್ ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಕಾರ್ಯಪ್ರವರ್ತರಾಗಿದ್ದಾರೆ.ಪಕ್ಕದ ಕಟ್ಟಡಕ್ಕೆ ಏಣಿ ಹಾಕಿ ಕಟ್ಟಡದಲ್ಲಿರುವ ರಕ್ಷಣೆ ಕಾರ್ಯಚರಣೆ ಮುಂದುವರೆದಿದೆ.
ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಲಿಕ್ಕೆ ಆಗುತ್ತಿಲ್ಲ ಹಾಗಾಗಿ ಜಿ ಟಿ ದೇವೇಗೌಡ ಅವರು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ನಾನು ಕೂಡ ಜಿಟಿ ದೇವೇಗೌಡರ 80 ಪರ್ಸೆಂಟ್ ಕಮಿಷನ್ ಆರೋಪ ಮಾಡಬಹುದು ಮೈಸೂರಿನಲ್ಲಿ ಜಿ ಟಿ ಡಿ ಆರೋಪಕ್ಕೆ ಸಿಎಂ ಪುತ್ರ ಯತೀಂದ್ರ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವುದೇ ಸಾಕ್ಷಿಗಳಿಲ್ಲದೆ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಜಿ ಟಿ ದೇವೇಗೌಡ ಅವರು 80 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದಾರೆ ಎಂದು ನಾನು ಹೇಳಬಹುದು. ಸಹಕಾರಿ ಕ್ಷೇತ್ರದಲ್ಲಿ ಅವ್ಯವಹಾರ ಮಾಡಿದ್ದಾರೆಂದು ಜನ ಹೇಳುತ್ತಾರೆ ಇದಕ್ಕೆಲ್ಲ ಸಾಕ್ಷ್ಯಾಧಾರಬೇಕಲ್ಲ ಸುಮ್ಮನೆ ಆರೋಪ ಮಾಡುವುದಲ್ಲ ನನ್ನ ತಂದೆ ವಿರುದ್ಧ ಜಿ ಟಿ ದೇವೇಗೌಡಗೆ ನೇರವಾಗಿ ಆರೋಪ ಮಾಡಲು ಆಗುತ್ತಿಲ್ಲ ಎಂದರು. ನಾನು ರಾಜಕೀಯದಲ್ಲಿರುವ ಕಾರಣ ನನ್ನ ವಿರುದ್ಧ ಜಿ ಟಿ ದೇವೇಗೌಡ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಆರೋಪ ಮಾಡಿದರೆ ಪರೋಕ್ಷವಾಗಿ ಸಿಎಂ ವಿರುದ್ಧ ಮಾಡಿದಂತಾಗುತ್ತದೆ…
ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಬ್ಬಿಂಗ್ ಇಷ್ಟ ಸಿಕ್ಕಿದ್ದು ಕಾರ್ಯಕರ್ತನನ್ನು ಇದೀಗ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕಾರ್ಯ ಕರ್ತ ನಾಗಿರುವ ಸಾಯಿಪ್ರಸಾದನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಬಾರಿ ಅಷ್ಟೇ ಪ್ರಮುಖ ಆರೋಪಿ ಹಾಗು ಬಾಂಬು ತಯಾರಿಕ ಮುಜಾಮಿಲ್ಲನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.
ಬೆಂಗಳೂರು : ನನಗೆ ನನ್ನ ಭವಿಷ್ಯಕ್ಕಿಂತ ನನ್ನ ಮಂಡ್ಯ ಜಿಲ್ಲೆ ನಮ್ಮ ರಾಜ್ಯ ನಮ್ಮ ದೇಶದ ಭವಿಷ್ಯ ಮುಖ್ಯವಾಗಿದೆ.ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಗಳನ್ನು ಮೆಚ್ಚಿಕೊಂಡು ಇಂದು ನಾನು ಬಿಜೆಪಿ ಪಕ್ಷಕ್ಕೆ ಸೇರುತ್ತಿದ್ದೇನೆ.ಇವತ್ತು ನನಗೆ ನನ್ನ ರಾಜಕೀಯ ಜೀವನದಲ್ಲಿ ಅತ್ಯಂತ ಸುದಿನವಾದಂತ ದಿನ ಎಂದು ಬಿಜೆಪಿ ಪಕ್ಷ ಸೇರ್ಪಡೆಯಾದ ಬಳಿಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದರು. https://kannadanewsnow.com/kannada/breaking-sumalatha-ambareesh-officially-joins-bjp/ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ಇಂದು ರಾಜಕೀಯ ನನ್ನ ಜೀವನದಲ್ಲಿ ಮಹತ್ವ ಪಡೆದುಕೊಂಡಿರುವಂತಹ ಸುದಿನ ಎಂದು ಭಾವಿಸುತ್ತೇನೆ. ಐದು ವರ್ಷಗಳ ಹಿಂದೆ ಒಂದು ಐತಿಹಾಸಿಕ ಗೆಲುವು ನನ್ನ ಕ್ಷೇತ್ರವಾದ ಮಂಡ್ಯದಲ್ಲಿ ನನಗೆ ಸಿಕ್ಕಿತ್ತು ಆ ಚುನಾವಣೆ ಅದು ನಿಜಕ್ಕೂ ಎಂದು ಮರೆಯುವಂತಹದ್ದಲ್ಲ ಎಂದರು. https://kannadanewsnow.com/kannada/where-has-the-confidence-of-your-guaranteed-plans-gone-by-vijayendra-questions-cm-siddaramaiah/ ನನ್ನ ಬೆಂಬಲಿಗರು ಮಂಡ್ಯ ಅಂಬರೀಶ್ ಅಭಿಮಾನಿಗಳ ಬಳಗ ಅವತ್ತಿನ ದಿನ ನನಗೆ ಸಾಕಷ್ಟು ಬೆಂಬಲ ಸಹಕಾರ ನೀಡಿತ್ತು. ಜೊತೆಗೆ ಭಾರತೀಯ ಜನತಾ ಪಕ್ಷ…
ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಮಂಡ್ಯ ಸಂಸದೆ ಅಂಬರೀಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಹಾಗಾಗಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಸುಮಲತಾ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸುಮಲತಾ ಅಂಬರೀಶ್ ಅವರಿಗೆ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಒಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಶ್ ಹಿರಿದಂತೆ ಹಲವಾರು ಮುಖಂಡರು ಕಾರ್ಯಕರ್ತರು…
ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ, ವರುಣಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ 60,000 ಕ್ಕಿಂತ ಹೆಚ್ಚು ಲೀಡ್ ಕೊಡದೆ ಹೋದರೆ ನನಗೆ ಅವಮಾನ ಆಗುತ್ತದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿವೈ ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದ್ದು ಈ ರೀತಿ ಹೇಳುವುದಾದರೆ ನಿಮ್ಮ ಗ್ಯಾರಂಟಿ ಯೋಜನೆಗಳ ವಿಶ್ವಾಸ ಎಲ್ಲಿ ಹೋಯಿತು ಎಂದು ಪ್ರಶ್ನೆಸಿದರು. https://kannadanewsnow.com/kannada/rbi-announces-cash-deposit-facility-through-upi-no-atm-card-required-now/ ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಬಿ ವೈ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರು ಕಳೆದ ನಾಲ್ಕೈದು ದಿನಗಳಿಂದ ಮೈಸೂರಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಿಡು ಬಿಟ್ಟಿದ್ದಾರೆ. ಋಣ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ನಾನು ಸಿಎಂ ಸ್ಥಾನದಲ್ಲಿ ಇರಬೇಕು ಬೇಡ ಹಾಗಾದ್ರೆ ನನಗೆ 60,000 ಲೀಡ್ ಕೊಡಿ ಎಂದು ಹೇಳಿದ್ದಾರೆ ಹಾಗಾದರೆ ಇವರಿಗೆ ಗ್ಯಾರಂಟಿ ಯೋಜನೆಗಳ ಮೇಲೆ ಇರುವಂತಹ ವಿಶ್ವಾಸ ಹೋಯಿತಾ ಎಂದು ಪ್ರಶ್ನಿಸಿದರು. https://kannadanewsnow.com/kannada/bengaluru-two-accused-and-several-other-items-seized-for-selling-drugs-to-college-students/ ಈಗಾಗಲೇ ಕಾಂಗ್ರೆಸ್ ಈ ಯೋಜನೆಗಳಿಂದ ಜನರಿಗೂ ಕೂಡ ಅರಿವಾಗಿದ್ದು ಚುನಾವಣೆಯಲ್ಲಿ ಇವರಿಗೆ ಮತ ಹಾಕಿ…