Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹಿಂದಿ ಹೇರಿಕೆ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ ನಲ್ಲಿ ಅನ್ಯಾಯ ಆಗುವುದರ ಕುರಿತು ನಿನ್ನೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕುರಿತು ಮಾತನಾಡಿದರು.ಇದಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ ತಿರುಗೇಟು ನೀಡಿದ್ದು ನಮ್ಮ ದೇಶ ಭವ್ಯ ಭಾರತ ಹೀಗಾಗಿ ದೇಶವನ್ನು ಒಡೆಯುವಂತಹ ಮಾತುಗಳನ್ನು ಯಾರು ಆಡಬಾರದು ಎಂದು ತಿರುಗೇಟು ನೀಡಿದರು. ಈ ವಿಷಯದ ಕುರಿತಾಗಿ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಅಂತ ಡಿಕೆ ಸುರೇಶ್ ಗೆ ತಿರುಗೇಟು ಕೊಟ್ರು. ಸಂಸದ ಡಿಕೆ ಸುರೇಶ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಬೇಕಾದರೆ ಕೋಟ್ಯಾಂತರ ಜನರ ಬಲಿದಾನವಾಗಿದೆ. ನೂರಾರು ವರ್ಷ ಹೋರಾಟಗಳು ನಡೆದಿವೆ. ಗಾಂಧೀಜಿಯಿಂದ ಹಿಡಿದು ಅನೇಕ…
ಮಾಡೆಲ್ ಮತ್ತು ನಟಿ ಪೂನಂ ಪಾಂಡೆ ಫೆಬ್ರವರಿ 2 ರಂದು ಗರ್ಭಕಂಠದ ಕ್ಯಾನ್ಸರ್ನೊಂದಿಗೆ ಹೋರಾಡಿದ ನಂತರ ನಿಧನರಾದರು ಎಂದು ಅವರ ತಂಡ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಅಲ್ಲಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಈ ಬೆಳಿಗ್ಗೆ ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್ನಿಂದ ಕಳೆದುಕೊಂಡಿದ್ದೇವೆ ಎಂದು ತಿಳಿಸಲು ತುಂಬಾ ದುಃಖವಾಗುತ್ತಿದೆ. ಅವಳೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಂತ ರೂಪವು ಶುದ್ಧ ಪ್ರೀತಿ ಮತ್ತು ದಯೆಯಿಂದ ಭೇಟಿಯಾಯಿತು, ಎಂದು ಪೂನಂ ಅವರ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. “ಈ ದುಃಖದ ಸಮಯದಲ್ಲಿ, ನಾವು ಹಂಚಿಕೊಂಡ ಎಲ್ಲದಕ್ಕೂ ನಾವು ಅವಳನ್ನು ಪ್ರೀತಿಯಿಂದ ನೆನಪಿಸಿಕೊಳ್ಳುವಾಗ ನಾವು ಖಾಸಗಿತನಕ್ಕಾಗಿ ವಿನಂತಿಸುತ್ತೇವೆ” ಎಂದು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು : ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷದಿಂದ ಬಿಎಂಟಿಸಿ ಬಸ್ಗೆ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.ಘಟನೆ ನಂತರ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಮೃತ ವಿದ್ಯಾರ್ಥಿನಿಯನ್ನು ಕುಸುಮಿತ (21) ಎಂದು ಹೇಳಲಾಗುತ್ತಿದ್ದು, ಕಾಲೇಜಿಗೆಂದು ತೆರಳುತ್ತಿದ್ದಾಗ ಮೆಟ್ರೋ ನಿಲ್ದಾಣದಲ್ಲಿ ಬೈಕ್ ನಿಲ್ಲಿಸಿದ್ದಳು. ನಂತರ ಬೈಕ್ ಹಿಂತೆಗೆದುಕೊಳ್ಳುತಿದ್ದ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಹಿಂಬದಿ ಚಕ್ರಕ್ಕೆ ಬೈಕ್ ತಾಗಿ ಆಕೆ ಮೇಲೆ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡ ಆಕೆಯನ್ನ ತಕ್ಷಣ ಆಸ್ಪತ್ರೆಗೆ ರವಾನಿಸುತ್ತಿರುವಾಗ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾಳೆ. ಘಟನೆಯು ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.ಪದೇಪದೇ ಈ ಘಟನೆಗಳು ಸಂಭವಿಸುತ್ತವೆ ಇದಕ್ಕೆ ಕಾರಣ ಏನು ಇದುವರೆಗೂ ಪತ್ತೆಯಾಗಿಲ್ಲ.ಘಟನೆಗೆ ಸಂಬಂಧಪಟ್ಟಂತೆ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ದರೋಡೆ ಕಳ್ಳತನ ಸಾಮಾನ್ಯವಾಗಿ ರಾತ್ರಿ ಹೊತ್ತು ನಡೆಯುತ್ತವೆ ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಗನ್, ಲಾಂಗ್, ಪೆಪ್ಪರ್ ಸ್ಪ್ರೇ ದಾಳಿ ನಡೆಸಿ ವ್ಯಾಪಾರಿಯೊಬ್ಬನಿಂದ 15 ಲಕ್ಷರೂ. ದರೋಡೆ ಮಾಡಿ ಪರಾರಿಯಾದ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣ ಕಳೆದುಕೊಂಡ ವ್ಯಕ್ತಿ ಸಿಗರೇಟ್ ಡಿಸ್ಟ್ರಿಬ್ಯೂಟರ್ ಗೋಪಾಲ್ ಸಿಗರೇಟ್ ಡಿಸ್ಟ್ರಿಬ್ಯೂಟರ್ ಆಗಿರುವ ಗೋಪಾಲ್ ಟಾಟಾ ಏಸ್ ವಾಹನದಲ್ಲಿ ಅಂಗಡಿಗಳಿಂದ ಸಿಗರೇಟ್ ಬಿಲ್ ಕಲೆಕ್ಟ್ ಮಾಡಿದ್ದ ವೇಳೆ ಹಿಂಬಾಲಿಸಿರುವ ಖದೀಮರು. ಕೆಂಗೇರಿಯಿಂದ ಅಂಗಡಿಗಳಲ್ಲಿ ಸಿಗರೇಟ್ ಬಿಲ್ ಕಲೆಕ್ಟ್ ಮಾಡಿಕೊಂಡು ಬರ್ತಾ ಇದ್ರು. ಈ ವೇಳೆ ಡಿಯೋ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಕ ಮೂವರು ರಾಬರ್ಸ್. ನಾಗರಭಾವಿ ಪಾಪರೆಡ್ಡಿ ಪಾಳ್ಯಕ್ಕೆ ಬಂದಿದ್ದ ಗೋಪಾಲ್. ಈ ವೇಳೆ ನಾತೂರಾಮ್ ಎಂಬುವವರ ಅಂಗಡಿ ಬಳಿ ವಾಹನ ನಿಲ್ಲಿಸಿ ಬಿಲ್ ಕಲೆಕ್ಟ್ ಮಾಡಲು ಇಳಿದಿದ್ದ ವೇಳೆ ಅಟ್ಯಾಕ್ ಮಾಡಿರುವ ಖದೀಮರು. ರಾಬರ್ಸ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಾವಿಜನ್ ಸ್ಟೋರ್ ಒಳಗೆ ಹೋಗಿರುವ ಗೋಪಾಲ್. ಆದರೆ ಖದೀಮರು ಪ್ರಾವಿಜನ್…
ಬೆಂಗಳೂರು : ಊಟ ಹಾಕಲ್ಲ ವೆಂದು ತಾಯಿಯು ಬೈದಿದ್ದಕ್ಕೆ 18 ವರ್ಷದ ಮಗನೊಬ್ಬ ಹೆತ್ತ ತಾಯಿಯನ್ನೇ ರಾಡ್ ನಿಂದ ಹೊಡೆದು ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್ ಪುರಂನ ಭೀಮಯ್ಯ ಲೇಔಟ್ ನಲ್ಲಿ ಈ ದುರಂತ ಸಂಭವಿಸಿದೆ. ತಾಯಿ ನೇತ್ರ (40) ಕೊಲೆಗೆ ಈಡಾಗಿರುವ ದುರ್ದೈವಿಯಾಗಿದ್ದಾರೆ. ನಂತರ ಕೊಲೆ ಮಾಡಿ ಠಾಣೆಗೆ ಶರಣಾದ ಮಗ, ಊಟ ಹಾಕಲ್ಲ ಅಂದಿದ್ದಕ್ಕೆ ತಾಯಿಯನ್ನು ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.ಇಂದು ಬೆಳಿಗ್ಗೆ 7 ಗಂಟೆಗೆ ಮಗನು ಕಾಲೇಜಿಗೆ ಹೋಗಲು ತಯಾರಾದಾಗ, ತನ್ನ ತಾಯಿಗೆ ಊಟ ಬಡಿಸು ಎಂದು ಕೇಳಿಕೊಂಡಾಗ ತಾಯಿ ಕೋಪದಲ್ಲಿ ನೀನು ನನ್ನ ಮಗನೆ ಅಲ್ಲ ಊಟ ಹಾಕಲ್ಲವೆಂದು ಬೈದಿದ್ದಾಳೆ . ಈ ವೇಳೆ ಕ್ರೋದಗೊಂಡ ಮಗ ಅಲ್ಲಿಯೇ ಇದ್ದ ರಾಡ್ ನಿಂದ ಬಲವಾಗಿ ತಾಯಿಗೆ ಹೊಡೆದಿದ್ದಾನೆ. ತಾಯಿ ಸಾವನಪ್ಪಿದಿರುವ ಕುರಿತು ಖಚಿತವಾದ ಮೇಲೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಕೆ ಆರ್ ಪುರಂ ಠಾಣೆ…
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಯಾಕೋ ನಿಲ್ಲುವಂತೆ ಕಾಣುತ್ತಿಲ್ಲ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗೌಡಹಳ್ಳಿ ಎಂಬಲ್ಲಿ ಇದೀಗ ಕಾಡಾನೆ ದಾಳಿಗೆ ರಾಜು (48) ಎನ್ನುವ ವ್ಯಕ್ತಿ ಬಲಿಯಾಗಿದ್ದಾರೆ. ಇದುವರೆಗೆ ಕಾಡಾನೆಗಳ ದಾಳಿಗೆ 10 ಜನರು ಬಲಿಯಾಗಿದ್ದಾರೆ. ಗುರುವಾರ ಮಧ್ಯಾಹ್ನ ರಾಜು ಸೇರಿದಂತೆ ಇನ್ನೂ ಕೆಲವರು ಗೌಡಹಳ್ಳಿ ಸಮೀಪದ ಸಂಗಮಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಮೂರು ಜನ ಪೈಕಿ ರಾಜು ದಾರಿ ತಪ್ಪಿದ್ದಾನೆ. ಎಷ್ಟೇ ಹುಡುಕಿದರೂ ರಾಜು ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಕಾಡಿನಲ್ಲಿ ರಾಜು ಮೃತದೇಹ ಪತ್ತೆಯಾಗಿದೆ. ಅಭಿಮನ್ಯು ತಂಡದ ಮೇಲೆ ‘ಬೀಟಮ್ಮ’ ಗ್ಯಾಂಗ್ ದಾಳಿ ಚಿಕ್ಕಮಗಳೂರಿನಲ್ಲಿ ಭೀಮ ಆನೆ ಸೇರಿದಂತೆ 30 ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಕಾಡಾನೆ ಸೆರೆ ಕಾರ್ಯಾಚರಣೆ ಸಂಬಂಧ ಅಭಿಮನ್ಯೂ ಮತ್ತು ಆತನ ತಂಡ ಚಿಕ್ಕಮಗಳೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿರುವ ಅರಣ್ಯ ಇಲಾಖೆಯ ವಸತಿ ಗೃಹದ ಬಳಿ ಕ್ಯಾಂಪ್ ಹಾಕಲಾಗಿದೆ. ಈ ಕ್ಯಾಂಪ್ಗೆ ಬೀಟಮ್ಮ ಗ್ಯಾಂಗ್ ರಾತ್ರೋರಾತ್ರಿ ದಾಳಿ ಮಾಡಲು ಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅರಣ್ಯ…
ಹಣದ ಮಳೆ ಬೀಳುವ ರಾಶಿಚಕ್ರದ ಚಿಹ್ನೆಗಳ ಜ್ಯೋತಿಷ್ಯಕ್ಕೆ ಸಂಬಂಧಿಸಿದಂತೆ, ಒಂದು ಗ್ರಹದ ಬದಲಾವಣೆಯು ಖಂಡಿತವಾಗಿಯೂ ಎಲ್ಲಾ 12 ರಾಶಿಗಳಲ್ಲಿ ವಿವಿಧ ಬದಲಾವಣೆಗಳನ್ನು ತರುತ್ತದೆ, ಇದು ಸಾಮಾನ್ಯವಾಗಿದೆ. ಅದೇ ರೀತಿ 12 ವರ್ಷಗಳ ನಂತರ ಶುಕ್ರ ರಾಹು ಮತ್ತು ಎರಡು ಗ್ರಹಗಳು ಒಟ್ಟಿಗೆ ಸೇರುತ್ತವೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ರಾಹು ಈಗಾಗಲೇ ಮೀನ ರಾಶಿಯಲ್ಲಿದ್ದಾನೆ.…
ಉತ್ತರಕನ್ನಡ : ರಾಜ್ಯದಲ್ಲಿ ಮತ್ತೆ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕೆಸ್ ಹೆಚ್ಚಳವಾಗುತ್ತಿದ್ದೂ, ಹತ್ತು ದಿನಗಳಲ್ಲಿ 21 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಸಿದ್ದಾಪುರ ತಾಲೂಕಿನಲ್ಲಿ ಪ್ರಕರಣಗಳು ಇದೀಗ ಹೆಚ್ಚಾಗುತ್ತಿವೆ. ಒಟ್ಟು 21 ಸೋಂಕಿತರ ಪೈಕಿ ಎಂಟು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಇಬ್ಬರು ಮಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾದರೆ, ಉಳಿದ 6 ಜನರಿಗೆ ಸಿದ್ದಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನುಳಿದ 13 ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪಸರಿಸುತ್ತಿದೆ. ಕೆಲವು ವರ್ಷಗಳಿಂದ ಮಂಗನ ಕಾಯಿಲೆ ಪತ್ತೆ ಆಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಬೇಕಿರುವ ಲಸಿಕೆ ಬಗ್ಗೆಯೂ ಇಲಾಖೆ ಯೋಚನೆ ಮಾಡದೆ ಸುಮ್ಮನಾಗಿತ್ತು. ಹೀಗಾಗಿ ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದ್ದು, ಇದು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಪರದಾಡುತ್ತಿದೆ. ಅದರಲ್ಲೂ ಚಳಿಗಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರಿಗೆ…
ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನ ಮೂರು ಮಕ್ಕಳಾದ ತನುಶ್ರೀ (8) ಭೂಮಿಕ (6) ಯೋಗಿತಾ (4) ಜೊತೆ ವಸಂತ ಕುಮಾರಿ (25) ಎನ್ನುವ ತಾಯಿ ನಾಪತ್ತೆಯಾಗಿದ್ದಾಳೆ. ಜನವರಿ 16ರಂದು ತಾಯಿ ಹಾಗೂ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ.ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸುವವರ ವಶಕ್ಕೆ ಪಡೆದ ಪೊಲೀಸ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿಗೆ ಭೇಟಿ ನೀಡಲಿದ್ದು, ಈ ವೇಳೆ ಡಿಎಸ್ಎಸ್ ಮುಖಂಡರು ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿರುವ ಮಾಹಿತಿ ತಿಳಿದು ಕೂಡಲೇ ಪೊಲೀಸರು ಇದೀಗ ಡಿಎಸ್ಎಸ್ ಮುಖಂಡರನ್ನು ವಶಪಡಿಸಿಕೊಂಡಿದ್ದಾರೆ. ಮುದ್ದೇಬಿಹಾಳ ಠಾಣೆ ಪೊಲೀಸ್ರಿಂದ ಡಿಎಸ್ಎಸ್ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.ನಾಲತವಾಡ ಅಂಬೇಡ್ಕರ್ ಮೂರ್ತಿ ನಿರ್ಮಾಣ ಕಾಮಗಾರಿ ಅಪೂರ್ಣ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿ…
ಮುಂಬೈ : ಮುಂಬೈ ಟ್ರಾಫಿಕ್ ಪೊಲೀಸರಿಗೆ ಪಠ್ಯದ ಮೂಲಕ ಸಂದೇಶದ ಮೇಲೆ ‘ಬಾಂಬ್ ಬೆದರಿಕೆ’ ಬಂದಿದೆ, ಶುಕ್ರವಾರ ಬೆಳಗ್ಗೆ ಮುಂಬೈ ಸಂಚಾರಿ ನಿಯಂತ್ರಣ ಕಚೇರಿಗೆ ಶುಕ್ರವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ಕಂಟ್ರೋಲ್ ರೂಮ್ಗೆ ಅಪರಿಚಿತ ವ್ಯಕ್ತಿಯಿಂದ ಸಂದೇಶ ಬಂದಿದ್ದು, “ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಉಲ್ಲೇಖಸಲಾಗಿದೆ. ಶುಕ್ರವಾರ ಬೆಳಗ್ಗೆ ಮುಂಬೈ ಸಂಚಾರ ನಿಯಂತ್ರಣ ಕೊಠಡಿಗೆ ಶುಕ್ರವಾರ ಬೆಳಗ್ಗೆ ಈ ಬಾಂಬ್ ಬೆದರಿಕೆ ಬಂದಿತ್ತು. ಕಂಟ್ರೋಲ್ ರೂಮ್ಗೆ ಅಪರಿಚಿತ ವ್ಯಕ್ತಿಯಿಂದ “ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ” ಎಂಬ ಪಠ್ಯ ಸಂದೇಶವನ್ನು ಸ್ವೀಕರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಸಂದೇಶದ ನಂತರ ಮುಂಬೈ ಪೊಲೀಸರು ಮತ್ತು ಇತರ ಏಜೆನ್ಸಿಗಳು ಅಲರ್ಟ್ ಆಗಿವೆ. ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ.ಮಾಹಿತಿ ಪಡೆದ ಮುಂಬೈ ಪೊಲೀಸರು ಸಂದೇಶ ಕಳುಹಿಸುವವರ ಬಗ್ಗೆ ಪತ್ತೆ ಹಚ್ಚಲು ಆರಂಭಿಸಿದ್ದಾರೆ. ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ…