Author: kannadanewsnow05

ಶಿವಮೊಗ್ಗ : ಈಗಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿದ್ದು, ಪೋಷಕರು ಸ್ವಲ್ಪ ಬೈದರು ಸಾಕು ಏನಾದರೂ ಒಂದು ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವಂತಹ ಕೆಲಸ ಮಾಡಿಕೊಳ್ಳುತ್ತಾರೆ. ಇದೀಗ ಶಿವಮೊಗ್ಗದಲ್ಲೂ ಕೂಡ ಇಂಥ ಘಟನೆ ನಡೆದಿದ್ದು, ರಿಮೋಟ್ ಗಾಗಿ ಗಲಾಟೆ ನಡೆದು, ಈ ವೇಳೆ ಅಜ್ಜಿ ಮೊಮ್ಮಕ್ಕಳಿಗೆ ಬೈದಿದ್ದರಿಂದ ಯುವತಿ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೌದು ಈ ಒಂದು ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಅವಾಚ್ಯ ಪದಗಳಿಂದ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಮೂರು ಜಿಲ್ಲೆಗಳನ್ನು ಸುತ್ತಾಡಿಸಿಕೊಂಡು ಕೊನೆಗೆ ಖಾನಾಪುರ ಠಾಣೆಗೆ ಕರೆದೋಯ್ದಿದ್ದಾರೆ.ಈ ವಿಚಾರವಾಗಿ ಸಿಟಿ ರವಿ ಅವರು ನನ್ನ ವಿರುದ್ಧ ಕೊಲೆಗೆ ಸಂತು ರೂಪಿಸಿದ್ದರು. ಆದರೆ ಅವರು ಯಾರು ಎಂಬುದನ್ನು ತಿಳಿದುಕೊಳ್ಳಲು ನ್ಯಾಯಾಂಗ ತನಿಖೆ ಆಗಬೇಕು ಎಂದು ಸಿಟಿ ರವಿ ಅವರು ಆಗ್ರಹಿಸಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಕಿಟಾಕಿ ಮೂಲಕ ಸೂಚನೆ ಬಂದರೆ ಉಳಿದೆಲ್ಲವೂ ಫೋನ್‌ ಮೂಲಕ ಸೂಚನೆ ಬರುತ್ತಿತ್ತು. ಪೊಲೀಸರ ಬಳಿ ಎರಡು, ಮೂರು ಫೋನ್‌ಗಳಿದ್ದವು. ಹಿರಿಯ ಅಧಿಕಾರಿಗಳು ಅಥವಾ ಮಂತ್ರಿಯಿಂದ ನಿರಂತರ ಫೋನ್ ಬರುತ್ತಿತ್ತು. ನಾನು ಕ್ರಿಮಿನಲ್ ಅಲ್ಲ, ಯಾಕೆ ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಅವರು ಇದೆ ವೇಳೆ ಪ್ರಶ್ನಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಡಿಕೆ ಶಿವಕುಮಾರ್ ಅಥವಾ ಯಾರು ನನ್ನ ವಿರುದ್ಧ ಸಂಚು ಮಾಡಿದ್ದಾರೆ ಎನ್ನುವುದರ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಪೊಲೀಸರ ವೈಯಕ್ತಿಕ, ಇಲಾಖೆ…

Read More

ಮಂಡ್ಯ : ಕಳೆದ ಕೆಲವು ಗಂಟೆಗಳ ಹಿಂದೆ ಲಾರಿ ಹಾಗೂ ಕಾರಿನ ಮಧ್ಯ ಭೀಕರ ಅಪಘಾತ ಸಂಭವಿಸಿ ಬೆಂಗಳೂರು ಮೂಲದ ಮೂರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ಘಟನೆ ಮಂಡ್ಯದಲ್ಲಿ ನಡೆದಿತ್ತು. ಇದೀಗ ಮತ್ತೊಂದು ಅಪಘಾತ ನಡೆದಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದ ಇಬ್ಬರೂ ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಹದೇಶ್ವರಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಮಹಿಳೆಯರನ್ನು ನೀಲನಹಳ್ಳಿ ಗ್ರಾಮದ ಶಿಲ್ಪ (35) ಸಂಧ್ಯಾ (19) ಎಂದು ತಿಳಿಬಂದಿದೆ. ಇನ್ನು ಘಟನೆಯಲ್ಲಿ ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಶಿಲ್ಪಾ ಮತ್ತು ಸಂಧ್ಯಾ ಆಂಧ್ರಪ್ರದೇಶದ ತಿರುಪತಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಬಸ್ ನಿಲ್ದಾಣದವರೆಗೆ ಗೆಳತಿ ಶೈಲಜಾ ಡ್ರಾಪ್ ನೀಡುತ್ತಿದ್ದಾಗ ಈ ಒಂದು ಘಟನೆ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕಿನಲ್ಲಿ ಚಲಿಸುತ್ತಿದ್ದ ಶಿಲ್ಪ ಹಾಗೂ ಸಂಧ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಂಭೀರವಾಗಿ ಗಾಯಕೊಂಡ ಶೈಲಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಘಟನೆ ಬಳಿಕ…

Read More

ಧಾರವಾಡ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು ಇದೀಗ ಈ ಒಂದು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಹೌದು ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರಿಂದ ಲಾಠಿ ಜಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ಸ್ಪಷ್ಟನೆ ಕೆಳಲಾಗಿದೆ. ಲಾಠಿಚಾರ್ಜ್​ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ಧಾರವಾಡ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಈ ಕುರಿತು…

Read More

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಬೆಂಗಳೂರು ಮೂಲದ ಮೂವರು IIT ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಗ್ರಾಮದ ಬಳಿ KSRTC ಬಸ್ ಒಂದನ್ನು ಓವರ್ ಟೇಕ್ ಮಾಡುವ ವೇಳೆ ಎದುರಿಗೆ ಬಂದಂತಹ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ಪ್ರಣವ್ ಆಕಾಶ್, ಆದರ್ಶ್ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಇನ್ನು ಪೃಥ್ವಿ ಎನ್ನುವ ಇನ್ನೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮಳವಳ್ಳಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಬಳಿ ಇರುವ ಕುದ್ರು ನೆಸ್ಟ್ ರೆಸಾರ್ಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಹತ್ತಿಕೊಂಡಿದೆ ಈ ವೇಳೆ ರೆಸಾರ್ಟ್ ನಲ್ಲಿದ್ದ ಪ್ರವಾಸಿಗರು ಬೆಂಕಿ ಕಾಣುತ್ತಿದ್ದಂತೆ ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಕೂಡಲೆ ಸ್ಥಳೀಯರು ಅಲ್ಲಿದ್ದ ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಹೌದು ಉಡುಪಿಯ ತಿಮ್ಮಣ್ಣ ಕುದ್ರು ದ್ವೀಪದಲ್ಲಿರುವ ಕುದ್ರು ನೆಕ್ಸ್ಟ್ ರೆಸಾರ್ಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ. ಈ ಸಂದರ್ಭದಲ್ಲಿ ಬಿದರಿನಿಂದ ನಿರ್ಮಿಸಿದ್ದ ಮಹಡಿ, ಅಲಂಕಾರಿಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿ ಹತ್ತಿದ್ದನ್ನು ಕಂಡು ಸ್ಥಳೀಯರು ಪ್ರವಾಸಿಗರನ್ನು ರಕ್ಷಿಸಿದ್ದಾರೆ. ರೆಸಾರ್ಟ್ ಪಕ್ಕದಲ್ಲಿಯೇ ನದಿಯಿದಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ನದಿಯ ನೀರನ್ನು ಬಳಸಿ ಸ್ಥಳೀಯ ನಿವಾಸಿಗಳು ರೆಸಾರ್ಟ್ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.ಈ ವೇಳೆ ಸ್ಥಳೀಯರು ರೆಸಾರ್ಟ್ ಅಲ್ಲಿ ಸುರಕ್ಷತಾ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಇದೀಗ ಈ ಒಂದು ಪ್ರಕರಣ ದಾಖಲಾಗಿದೆ.

Read More

ಧಾರವಾಡ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದೀಗ ಈ ಒಂದು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹೌದು ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರಿಂದ ಲಾಠಿ ಜಾರ್ಚ್ ವಿಚಾರಕ್ಕೆ ಸಂಬಂಧ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ವಕೀಲರ ಪರಿಷತ್ ಸೇರಿ ನಾಲ್ವರು ಧಾರವಾಡ ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸರ್ಕಾರ, ಗೃಹ ಇಲಾಖೆ, ಪೊಲೀಸ್ ಇಲಾಖೆಗೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿಯಾಗಿದೆ ಎಂದು ತಿಳಿದುಬಂದಿದೆ. ಅರ್ಜಿ ಕುರಿತಂತೆ ಧಾರವಾಡದಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಲಾಠಿ ಚಾರ್ಜ್ ಬಳಿಕ ಎಫ್‌ಐಆರ್ ಆಗಿದೆ. 12 ಜನರ ಮೇಲೆ…

Read More

ಚಾಮರಾಜನಗರ : ರಾಜ್ಯದಲ್ಲಿ ಕಳೆದ ಹಲವು ತಿಂಗಳಗಳ ಹಿಂದೆ ‘ಹುಲಿ ಉಗುರು’ ಭಾರಿ ಸದ್ದು ಮಾಡಿತ್ತು. ಇದೀಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ‌ಹನೂರು ಮುಖ್ಯರಸ್ತೆಯಲ್ಲಿನ ಲೊಕ್ಕನಹಳ್ಳಿ ಬಳಿ ನಾಲ್ಕು ಹುಲಿ ಉಗುರುಗಳನ್ನು ಬೈಕಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹರವೆ ಗ್ರಾಮದ ನವೀನ್ ಕುಮಾರ್ ಬಿನ್ ಮಂಜು, (24), ಹೆಚ್.ಡಿ ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮದ ಕುಮಾರನಾಯಕ ಬಿನ್ ಚೆಲುವನಾಯಕ, (32) ಎಂದು ತಿಳಿದುಬಂದಿದೆ. ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆಯಿಂದ ಲೊಕ್ಕನಹಳ್ಳಿ ಕಡೆಗೆ ಹೋಗುವ ರಸ್ತೆಯ ಜಂಕ್ಷನ್ ಬಳಿ ಹುಲಿಯ 04 ಉಗುರುಗಳನ್ನು ಬೈಕಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ, ಅರಣ್ಯ ಸಂಚಾರ ದಳದ ಪೊಲೀಸರು ದಾಳಿ ಮಾಡಿದ್ದಾರೆ.ಕೂಡಲೆ ಹುಲಿ ಉಗುರನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿ ವನ್ಯಜೀವಿ ಸಂರಕ್ಷಾಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ

Read More

ಬೆಂಗಳೂರು : ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಕಲಬುರಗಿ ವಿದ್ಯಾನಗರದ ಲಕ್ಷ್ಮಿಕಾಂತ ಹೊಸಮನಿ (41), ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಕುಲಪ್ಪಸಿಂಗೆ, ಉತ್ತರಹಳ್ಳಿಯ ಮುರಳಿ ಎಂದು ತಿಳಿದುಬಂದಿದೆ.ವಂಚನೆಗೊಳಗಾದ ಆಲಮೇಲದ ಹುಸೇನಪ್ಪ ಮಾಡ್ಯಾಳ ಸಿಸಿಬಿ ಠಾಣೆಗೆ ದೂರು ನೀಡಿದ್ದ ಎಂದು ಹೇಳಲಾಗುತ್ತಿದೆ. ಡಿಸೆಂಬರ್ 9 ರಂದು ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಉಳಿದ ಐವರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಸಿಬಿ ಇನ್ಸ್ಪೆಕ್ಟರ್ ದೇವೇಂದ್ರಪ್ಪ ನೇತೃತ್ವದ ತಂಡ ತನಿಖೆ ನಡೆಸಿ ತಾಂತ್ರಿಕ ಮಾಹಿತಿ ಆಧರಿಸಿ ಮೌರ್ಯ ಹೋಟೆಲ್ ಜಂಕ್ಷನ್ ಮತ್ತು ಹೊಸಕೆರೆಹಳ್ಳಿ ಬಸ್ ನಿಲ್ದಾಣದ ಸಮೀಪ ಆರೋಪಿಗಳನ್ನು ಬಂಧಿಸಿದೆ.

Read More

ಗದಗ : ದುಷ್ಕರ್ಮಿಗಳು ಮನೆಗೆ ನುಗ್ಗಿ, ರೊಟ್ಟಿ ಮಾಡುವ ಕಟ್ಟಿಗೆ ಕ್ವಾಮಣಿಗೆಯಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನವನಗರದಲ್ಲಿ ನಡೆದಿದೆ. ಇನ್ನು ಕೊಲೆಯಾದ ಮುಖ್ಯ ಶಿಕ್ಷಕಿಯನ್ನು ಅನ್ನಪೂರ್ಣ ರಾಠೋಡ್ (55) ಎಂದು ತಿಳಿದುಬಂದಿದೆ.ಇವರು ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೌದು ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಮಾಧ್ಯಮಿಕ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಅನ್ನಪೂರ್ಣ ರಾಠೋಡ್ ಗ್ರಾಮದಲ್ಲಿ ಎಸ್‌ಡಿಎಮ್ ಸಿ ಸಮಿತಿ ಕೆಲವರ ಜೊತೆಗೆ ಭಿನ್ನಾಭಿಪ್ರಾಯದ ಕಾರಣದಿಂದಾಗಿ ರೋಣ ಬಿಇಒ ಕಚೇರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದರು ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. ಕೊಲೆಗೆ ಇದು ಕೂಡ ಕಾರಣ ಎಂದು ಅವರು ಹೇಳಿದ್ದಾರೆ. ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಲಾಗಿದ್ದು, ಇದನ್ನು ಕಂಡ ಗಜೇಂದ್ರಗಡ ನಿವಾಸಿಗಳು ಆತಂಕಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು,…

Read More