Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಎಸ್.ಆರ್.ಸಿದ್ದೇಶ್ ಎಂದು ತಿಳಿದುಬಂದಿದೆ. ಸುನಿಲ್ ಕುಮಾರ್ ಎಂಬವರು ಮಹಾನಗರ ಪಾಲಿಕೆ ಆವರಣದ ಇಂಜಿನಿಯರ್ ಕಟ್ಟಡದ ಮೇಲ್ಭಾಗದಲ್ಲಿ ಶೆಡ್ ನಿರ್ಮಾಣಕ್ಕೆ ಗುತ್ತಿಗೆ ಪಡೆದಿದ್ದರು. 2024ರ ಡಿಸೆಂಬರ್ನಲ್ಲಿ ಶೆಡ್ ಪೂರ್ಣಗೊಂಡಿದ್ದು ಹಣ ಮಂಜೂರು ಮಾಡುವಂತೆ ಬಿಲ್ ಸಲ್ಲಿಸಿದ್ದರು. ಕಾಮಗಾರಿಯ ಒಟ್ಟು ಮೊತ್ತದಲ್ಲಿ 4 ಪರ್ಸೆಂಟ್ ಕಮಿಷನ್ ಹಣ ನೀಡಿದರೆ ಬಿಲ್ ಮಂಜೂರು ಮಾಡುವುದಾಗಿ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಸಿದ್ದೇಶ್ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. 11 ರೂ. ಹಣಕ್ಕೆ ಸಿದ್ದೇಶ್ ಬೇಡಿಕೆ ಇಟ್ಟಿದ್ದು, ಗುರುವಾರ 10 ಸಾವಿರ ರೂ. ಹಣ ಪಡೆಯುವ ಸಂದರ್ಭ ದಾಳಿ ನಡೆಸಿ ಬಂಧಿಸಲಾಗಿದೆ. ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಸದ್ಯ ಸಿದ್ದೇಶ್…
ಬೆಂಗಳೂರು : ಒಂದು ಕಡೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಬೇಕು ಹೇಳಿಕೆ ನೀಡಿದ್ದರೆ ಇನ್ನೊಂದು ಕಡೆ ಇಂದು ಬೆಳಗಾವಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ನಾನು ಯಾವುದೇ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ನಾನು ಯಾವುದೇ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ. ಅವರವರ ಶ್ರಮದ ಮೇಲೆ ಹುದ್ದೆಗಳು ಸಿಗುತ್ತವೆ. ನಾಯಕತ್ವ ಗುಣದ ಮೇಲೆ ಅವಕಾಶ ಸಿಗುತ್ತವೆ ಅವರ ಸಾಧನೆ, ಆಧಾರದ ಮೇಲೆ ಅವಕಾಶಗಳು ಸಿಗುತ್ತವೆ. ಎಂದು ಅವರು ತಿಳಿಸಿದರು. ಹುದ್ದೆಗಳ ಬಗ್ಗೆ ಹೊರಗೆ ಮಾತನಾಡುವುದು ಸರಿಯಲ್ಲ. ಪಕ್ಷದ ಚೌಕಟ್ಟಿನಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ. ರಾಜ್ಯದ ಎಲ್ಲಾ ವಿಚಾರಗಳ ಬಗ್ಗೆ ನಮ್ಮ ನಾಯಕರಿಗೆ ಮಾಹಿತಿ ಇದೆ. ಕರ್ನಾಟಕದವರೇ ಎಐಸಿಸಿ ಅಧ್ಯಕ್ಷರಾಗಿದ್ದಾರೆ.…
ಧಾರವಾಡ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ಪಕ್ಕದ ಮನೆಯಲ್ಲಿರುವ 120 ಅಡಿ ಆಳವಿರುವ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಾಳಮಡ್ಡಿಯಲ್ಲಿ ನಡೆದಿದೆ. ಮೃತ ವೃದ್ಧರನ್ನು ಸುರೇಶ್ ಕುಲಕರ್ಣಿ (68) ಎಂದು ತಿಳಿದುಬಂದಿದೆ.ಬೆಳಿಗ್ಗೆಯಿಂದ ಸುರೇಶ್ ಅವರು ಕಾಣೆಯಾಗಿದ್ದರು. ಈ ವೇಳೆ ಕುಟುಂಬಸ್ಥರು ಹುಡುಕಿದಾಗ ಮನೆಪಕ್ಕದ ಬಾವಿ ಬಳಿ ಚಪ್ಪಲಿ, ಮೊಬೈಲ್ ಪತ್ತೆಯಾಗಿದ್ದವು. ಇದರಿಂದ ಸಹಜವಾಗಿ ಕುಟುಂಬಸ್ಥರು ಗಾಬರಿಯಾಗಿದ್ದಾರೆ. ಈ ಹಿನ್ನಲೆ ಅಕ್ಕ-ಪಕ್ಕದ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಬಾವಿ ಬಳಿ ಬಂದ ಸುರೇಶ ಅವರು ಚಪ್ಪಲಿ, ಮೊಬೈಲ್ ಬದಿಗಿಟ್ಟು ಬಾವಿಕಟ್ಟೆಯಿಂದ ಜಿಗಿದಿದ್ದಾರೆ. ಈ ಎಲ್ಲ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಶವ ಪತ್ತೆಗಾಗಿ ಅಗ್ನಿಶಾಮಕ ದಳ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪತ್ತೆಗಾಗಿ ಇದೀಗ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದು, ಸದ್ಯ ಮುಂಬೈ ಪೊಲೀಸರು ಓರ್ವ ದಾಳಿಕೊರನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಈಗಾಗಲೇ ಮುಂಬೈ ಪೋಲಿಸರಿಂದ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದ್ದು, ಬಾಂದ್ರಾ ರೈಲು ನಿಲ್ದಾಣದ ಬಳಿ ಆರೋಪಿಯ ಕುರುಹು ಪತ್ತೆಯಾಗಿದೆ ಎನ್ನಲಾಗುತ್ತಿದೆ. ಆರೋಪಿಯ ಕೊನೆಯ ಬಾರಿಗೆ ರೈಲು ನಿಲ್ದಾಣ ಬಳಿ ಇದ್ದಂತಹ ಕುರುಹು ಇದೀಗ ಪತ್ತೆಯಾಗಿತ್ತು. ಸದ್ಯ ಪೊಲೀಸರು ಇದೀಗ ಓರ್ವ ದಾಳಿಕೋರನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.ಆತನನ್ನು ಇದೀಗ ಮುಂಬೈ ಪೊಲೀಸರು ಅರೆಸ್ಟ್ ಮಾಡಿ ಬಾಂದ್ರಾ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದು, ಪೊಲೀಸರ ಹೆಚ್ಚಿನ ವಿಚಾರಣೆ ಬಳಿಕ ಯಾವ ಕಾರಣಕ್ಕಾಗಿ ದಾಳಿ ಮಾಡಿದ್ದ ಎನ್ನುವುದು ಬಯಲಾಗಲಿದೆ.
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪತ್ತೆಗಾಗಿ ಇದೀಗ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದು, ಸದ್ಯ ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಆರೋಪಿಯ ಕುರುಹು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಮುಂಬೈ ಪೋಲಿಸರಿಂದ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದ್ದು, ಬಾಂದ್ರಾ ರೈಲು ನಿಲ್ದಾಣದ ಬಳಿ ಆರೋಪಿಯ ಕುರುಹು ಪತ್ತೆಯಾಗಿದೆ ಎನ್ನಲಾಗುತ್ತಿದೆ. ಆರೋಪಿಯ ಕೊನೆಯ ಬಾರಿಗೆ ರೈಲು ನಿಲ್ದಾಣ ಬಳಿ ಇದ್ದಂತಹ ಕುರುಹು ಇದೀಗ ಪತ್ತೆಯಾಗಿದೆ. ಕೃತ್ಯದ ಬಳಿಕ ಲೋಕಲ್ ಟ್ರೈನ್ ಮೂಲಕ ವಸಾಯಿ ವಿರಾರ್ ಕಡೆ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ವಸಾಯಿ, ನಲ್ಲಸೂಪರ ವಿರಾರ್ ಪ್ರದೇಶಗಳಲ್ಲಿ ಇದೀಗ ದುಷ್ಕರ್ಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯು ರಾತ್ರಿ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ್ದಾನೆ. ಈ ವೇಳೆ ಸೈಫ್ ಅಲಿಖಾನ್ ಅವರಿಗೆ ಐದರಿಂದ ಆರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಅಲ್ಲಿಂದ ಎಕ್ಸಿಟ್ ಮೂಲಕ ಆರೋಪಿ…
ಇದು 12 ವರ್ಷಕ್ಕೊಮ್ಮೆ ನಡೆಯೋ ಕುಂಭಮೇಳವಲ್ಲ, ಮನುಷ್ಯನ ಏಳೂ ಜನ್ಮಗಳ ಪಾಪಗಳನ್ನೆಲ್ಲಾ ಒಂದೇ ಸಲಕ್ಕೆ ತೊಳೆಯಬಲ್ಲಂತಹ, ಶತಮಾನಗಳಿಗೊಮ್ಮೆ ಘಟಿಸೋ ದಿವ್ಯಾದ್ಭುತ ಪುಣ್ಯಸ್ನಾನದ ಮಹಾಕುಂಭಮೇಳ…144 ವರ್ಷಕ್ಕೆ ಒಮ್ಮೆ ನಡೆಯುವ ಮಹಾಕುಂಭಮೇಳ ಈ ಬಾರಿ ಪ್ರಯಾಗರಾಜ್.. ಇದೇ ಸಂಕ್ರಾಂತಿಯಿಂದ ಇಂತಾದ್ದೊಂದು ಮಹಾ ಅದ್ಭುತಕ್ಕೆ ತೆರೆದುಕೊಳ್ಳುತ್ತಿದೆ. ಅದ್ಯಾವ್ ಜನ್ಮದಲ್ ಅದೇನ್ ಪುಣ್ಯ ಮಾಡಿದ್ವೋ ನಾವೆಲ್ಲಾ…. ಮನುಷ್ಯನಿಗೆ ಏಳು ಜನ್ಮಕ್ಕೊಮ್ಮೆ ಮಾತ್ರ ಪ್ರಾಪ್ತಿಯಾಗೋ ಪುಣ್ಯವೆನ್ನಲಾಗುವ, ಬರೋಬ್ಬರಿ 144ವರ್ಷಕ್ಕೊಮ್ಮೆ ಘಟಿಸೋ ಮಹಾಕುಂಭಮೇಳಕ್ಕೆ ಇದೇ ಜನವರಿ 13ರ ಪುಷ್ಯ ಹುಣ್ಣಿಮೆಯಂದು ನಾವೆಲ್ಲಾ ಸಾಕ್ಷಿಯಾಗಲಿದ್ದೇವೆ… ಇದೇ ಸಂಕ್ರಾಂತಿಯಿಂದ… ಪ್ರಯಾಗರಾಜ್ ಮಹಾಕುಂಭಮೇಳವು ಫೆಬ್ರವರಿ 26ರ ಶಿವರಾತ್ರಿಯಂದು ಕೊನೆಗೊಳ್ಳಲಿದೆ. ಕುಂಭಮೇಳದ ಕೆಲವೊಂದು ವಿಶೇಷ ಸ್ನಾನಗಳು. ಜನವರಿ 13 : ಪುಷ್ಯಹುಣ್ಣಿಮೆ ಜನವರಿ 14 : ಮಕರಸಂಕ್ರಾಂತಿ. ಜನವರಿ 29 : ಮೌನಿ ಅಮವಾಸ್ಯೆ ಫೆಬ್ರವರಿ 03 : ವಸಂತಪಂಚಮಿ. ಫೆಬ್ರವರಿ 12 : ಮಾಘಹುಣ್ಣಿಮೆ. ಹಾಗೂ, ಫೆಬ್ರವರಿ 26 : ಮಹಾಶಿವರಾತ್ರಿ. ಕುಂಭಮೇಳದಲ್ಲಿ ಮೂರು ವಿಧ… 1. ಪ್ರತಿ 12 ವರ್ಷಗಳಿಗೊಮ್ಮೆ ಆಚರಿಸೋದು ಪೂರ್ಣ…
ಮಧ್ಯಪ್ರದೇಶ : ಇಂದಿನ ಯುವಜನತೆ ಮೊಬೈಲ್ ಎಂಬ ಮಾಯಾ ಲೋಕದಲ್ಲಿ ಮುಳುಗಿಬಿಟ್ಟಿದೆ. ಅದು ಎಷ್ಟೆಂದರೆ ತಮ್ಮ ಸುತ್ತಮುತ್ತಲು ಏನು ನಡೆಯುತ್ತಿದೆ ಎನ್ನುವುದನ್ನು ಅರಿಯದಷ್ಟು ತಮ್ಮ ಒಂದು ಮಾಯಾ ಲೋಕದಲ್ಲಿ ಮುಳುಗಿರುತ್ತಾರೆ. ಇದೀಗ ಇಂಥದ್ದೇ ಘಟನೆ ಯಿಂದ ಇಬ್ಬರು ಸಾವನಪ್ಪಿದ್ದು ಕಾರು ಚಾಲನೆ ಮಾಡುವಾಗ ರಿಯಲ್ಸ್ ನೋಡುತ್ತಾ ಕಾರು ಚಲಾಯಿಸಿದ ಪರಿಣಾಮ, ರಸ್ತೆ ಪಕ್ಕದಲ್ಲಿದ್ದ ನದಿಗೆ ಕಾರು ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಹೌದು ಈ ಒಂದು ಘಟನೆ ಬಹುಪಾಲ್ ನಲ್ಲಿ ನಡೆದಿದ್ದು ಕಾರು ಚಾಲನೆ ಮಾಡುವ ಕಾರು ಚಾಲಕ ಮೊಬೈಲ್ ನಲ್ಲಿ ರೂಲ್ಸ್ ನೋಡುತ್ತಾ ಕಾರು ಓಡಿಸುತ್ತಿದ್ದ.ಈ ವೇಳೆ ಕಾರು ಕೆರೆಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಬಹಳ ಕಷ್ಟಪಟ್ಟು ಜೀವವನ್ನು ಉಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.ಮೃತರನ್ನು ಪಲಾಶ್ ಗಾಯಕ್ವಾಡ್ ಮತ್ತು ಕಾರು ಚಾಲಕ ವಿನೀತ್ ದಕ್ಷಾ ಎಂದು ಗುರುತಿಸಲಾಗಿದೆ. ಇನ್ನುಳಿದಂತೆ ಪಿಯೂಷ್ ಎಂಬುವವರು ಜೀವ ಉಳಿಸಿಕೊಳ್ಳುವಲ್ಲಿ…
ವಿಜಯಪುರ : ನಿನ್ನೆ ತಡರಾತ್ರಿ ವಿಜಯಪುರ ನಗರದ ಜೈನಾಪುರ ಲೇಔಟ್ ನಲ್ಲಿ ಸಂತೋಷ್ ಎನ್ನುವವರ ಮನೆಯ ಮೇಲೆ ಮುಸುಕುಧಾರಿ ಗ್ಯಾಂಗ್ ಒಂದು ದರೋಡೆಗೆ ಆಗಮಿಸಿ, ಮನೆಯ ಮಾಲೀಕ ಸಂತೋಷ ಎನ್ನುವರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಪತ್ನಿಯ ಕೊರಳಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಗ್ಯಾಂಗ್ ಮೇಲೆ ಇದೀಗ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಹೌದು ಮುಸುಕುದಾರಿ ಗ್ಯಾಂಗ್ ಮೇಲೆ ವಿಜಯಪುರ ಪೋಲಿಸರಿಂದ ಫೈರಿಂಗ್ ನಡೆದಿದೆ. ವಿಜಯಪುರ ನಗರದ ಹೊರವಲಯದ ಟೋಲ್ ಪ್ಲಾಜಾದಲ್ಲಿ ಫೈರಿಂಗ್ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮುಸುಕುದಾರಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಗೋಲಗುಂಬಜ್ ಸಿಪಿಐ ಮಲ್ಲಯ್ಯ ಮಠಪತಿ, ಪಿಎಸ್ಐ ಘೋರಿಯಿಂದ ಈ ಒಂದು ದಾಳಿ ನಡೆಸಲಾಗಿದೆ. ದರೋಡೆಕೋರ ಮೇಲೆ ಐದು ಸುತ್ತು ಗುಂಡು ಹಾರಿಸಿದ ಪೊಲೀಸರು. ಈ ವೇಳೆ ಮಧ್ಯಪ್ರದೇಶದ ಮೂಲದ ದರೋಡೆಕೋರ ಮಹೇಶ್ ಕಾಲಿಗೆ ಗುಂಡು ತಗುಲಿದೆ. ಸದ್ಯ ಓರ್ವನನ್ನು ವಶಕ್ಕೆ ಪಡೆದು ವಿಜಯಪುರ ಪೊಲೀಸರು ವಿಚಾರಣೆ…
ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 10 ಎಕರೆಯಲ್ಲಿ ಇದ್ದಂತಹ 500 ಟನ್ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೊಸಳ್ಳಿ (ಎಚ್) ಗ್ರಾಮದಲ್ಲಿ ನಡೆದಿದೆ. ಹೌದು ನಿನ್ನೆ ಮಧ್ಯಾಹ್ನ ಗ್ರಾಮದ ಶ್ರೀದೇವಿ ಲಕ್ಷಮಯ್ಯ ಗುತ್ತೇದಾರ ಅವರ ಹೊಲದ ಕಬ್ಬಿಗೆ ಬೆಂಕಿ ಹೊತ್ತಿಕೊಂಡಿದೆ, ಇದಾದ ಬಳಿಕ ಪಕ್ಕದ ಮೋತಿಬಾಯಿ ಜೇನು, ಹಾಗೂ ಲಕ್ಷ್ಮಣ ಧನಸಿಂಗ ಅವರ ಹೊಲಕ್ಕೂ ಬೆಂಕಿ ಹರಡಿದ ಪರಿಣಾಮ ಒಟ್ಟು 10 ಎಕರೆಯಷ್ಟು ಕಬ್ಬು ಸುಟ್ಟು ಕರಕಲಾಗಿದೆ. ಪ್ರತಿ ಎಕರೆಯಲ್ಲಿ 50 ಟನ್ ಸಾಮರ್ಥ್ಯದ ಕಬ್ಬು ಬೆಳೆದಿದ್ದು, 10 ಎಕರೆಯಂತೆ ಸುಮಾರು 500 ಟನ್ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಇದರಿಂದ ರೈತರು 10 ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಳೆದ ಡಿಸೆಂಬರ್ ನಲ್ಲಿ ನಟ ದರ್ಶನ್ ಪವಿತ್ರಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಈ ಒಂದು ಮೇಲ್ಮನವಿಯ ಅರ್ಜಿಯ ವಿಚಾರಣೆ ಇದೇ ಜನವರಿ 24ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ ಹೌದು ನಟ ದರ್ಶನ್ ಮತ್ತು ಗ್ಯಾಂಗ್ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಜನವರಿ 24 ರಂದು ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಲಿದೆ. ನಟ ದರ್ಶನ್ ಪವಿತ್ರಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಮೇಲ್ಮನವಿ ಸಲ್ಲಿಸಿದೆ. ಈ ಒಂದು ಅರ್ಜಿಯ ವಿಚಾರಣೆ ಜನವರಿ 24 ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದ್ದು, ಅಂದು ಮಹತ್ವದ ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ನಟ ದರ್ಶನ್ ಅವರು ಹೈಕೋರ್ಟಿನ ರೆಗ್ಯುಲರ್…













